ಒಟ್ಟು 8 ಕಡೆಗಳಲ್ಲಿ , 6 ದಾಸರು , 8 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರಿರಾಜ ವರದ ಗುರುರಾಜ ವರದ ಸುರಾಜ ನಿನ್ನ ನಾಮ ಕೇಳು ಪೇಳುವೆ ಗುಣಮಿತಿ ಮೀರಿ ದನುಜರ ವೈರಿ ಗುಣಿಜ£ಕಾಧಾರಿ ನಿನ್ನ ನಾಮ ಕೇಳು ಪೇಳುವೆ ಪ ಶಣಸೀದ ಸೋಮ ಕನ್ನರಿದಿ ಮೀನನಾಗಿ ವೇದವಾ ತಂದಿ ಗುಣತಪ್ಪಿದ ಚಲವನು ಬಿಡದೆ ಮುಣಿಗ್ಯೊಳಗೆ ಕೂರ್ಮನಾಪಿಡಿದಿ ನೊಣಶಣತಾಕ್ಷನ ಬಿಡದಳಿದಿ ಗುಣಿವರಹನಾ ಗಿಳಿಯ ತಂದಿ ಪ್ರಲ್ಹಾದನ ಪೊರೀದಿ 1 ವಟುರೂಪಿಲಿ ಬಲಯನು ತುಳಿದಿ ನಟಿಸುವ ವಾಮನನಾದಿ ಕಟಹಾರದಿ ಕ್ಷತ್ರಿಯರಳಿದಿ ಹಟದಿಂದ ಪರಶುರಾಮಾದಿ ಭಟ ರಾವಣನಸುವಾನಳಿದಿ ದಿಟರಾಮನೆಂದು ಪೆಸರಾದಿ ಜಟಿಯ ಪಿಡಿದು ಭೂತಹಟಕೆ ಘಟ್ಟಿಸಿ ಕೃಷ್ಣನೆನಿಸಿದಿ 2 ಯುವತೀಯರ ವ್ರತವನ್ನಳಿದಿ ಭುವನದಿ ಬೌದ್ಧನಾಗಿ ನಿಂದಿ ದಿವ್ಯ ಹಯವನೇರಿ ನೀ ಬಂದಿ ಭುವಿ ದುಷ್ಟರಾಂತಕ ಕಲ್ಕ್ಯನೀಡಿ ತವ ಶರಣರ ಪೊರೆಯುವ ನೆವದಿ ವಿಧವಿಧ ರೂಪ ನೀ ತಾಳ್ದಿ ಭವದಿಂದೆನ್ನನು ಉದ್ಧರಿಸೊ 3
--------------
ನರಸಿಂಹವಿಠಲರು
ತುಂಗೆ ಬಂದಳು ದೇವೋತ್ತುಂಗ ವರಹನಾ ಮುಂಗೋರಿಯಲ್ಲಿ ಪುಟ್ಟಿ ಭಕ್ತ ನಿಕರನಾ ಹಿಂಗದೆ ಪೊರೆದು ಸುಖಂಗಳನೀವು ತಾ ಮಂಗಳಾಂಗೆ ಮಾತಂಗೆ ಸುಗಮನೆ ಪ ಕಾಳ ಪನ್ನಗವೇಣಿ ಕೋಕಿಲವಾಣಿ ಫಾಲ ಕಸ್ತುರಿ ಜಾಣೆ ಪಲ್ಲವಪಾಣಿ ವಾಲೆ ಮೂಗುತಿ ಅಣಿ ಮುತ್ತು ಕಠಾಣಿ ತೋಳು ಮಂದಾರಮಣಿ ಅರಿಗುಣಶ್ರೇಣಿ ಮೌಳಿಯಾ ಮೇಲಿನ ಜಾಳಿಗೆ ಸೂಸುಕಾ ವಾಲಲು ಕದಿಪಿನ ನೀಲಗೂದಲು ಭ್ರಮ ರಾಳಿಗಳಂತಿರೆ ಬಾಲ ಸುಧಾಕರ ಪೋಲುವ ವದನೇ1 ಕುಡುತೆಗಂಗಳ ನೀರೆ ಕಂಬುಕಂಧರೆ ಕಡಗ ಕಂಕಣದ್ವಾರೆ ಕೈಯ ಶೃಂಗಾರೇ ಜಡಿವ ಪದಕಹಾರೆ ಕಂಚಕಸೀರೆ ಮುಡಿದ ಪುಷ್ಪಂಗಳು ಮರೆ ಕುಚಗಳು ಅದರೆ ಬಡನಡುವಿನ ಕಡು ಉಡುವಿನ ಕಿಂಕಣಿ ಒಡನುಡಿಸುವ ಗೆಜ್ಜೆ ಕಾಲಂದಿಗೆ ಪೆಂಡೇ ಅ ಡಿಗಡಿಗೊಪ್ಪಲು ಕಡಲನ ಮಡದಿ 2 ತೀಡಿದ ಪರಿಮಳ ಗಂಧದ ಭೋಗಿ ಕೂಡಲಿಪುರದಲಿ ಭದ್ರಿವಂದಾಗಿ ಕೂಡಿ ಸೂಸಿದಳಂದು ಮುಂದಕ್ಕೆ ಸಾಗಿ ಆಡುತ ಪಾಡುತ ಬಲು ಲೇಸಾಗಿ ಬೇಡಿದ ಜನರಿಗೆ ಈಡಿಲ್ಲದ ವರವ ನೀಡುತ ನಿರುತರ ಮಾಡುತ ದಯವನು ನೋಡುತ ತಡವಿಲ್ಲದಲೆ 3 ಶೃಂಗಾರ ಮಾರ್ತಾಂಡೆ ಹರಿಹರ ಮಾತಾ ಅಂಗಾಧಿ ಪರ್ವತ ಪಂಚ ಪ್ರಖ್ಯಾತ ಹಿಂಗದೆ ಬಲಗೊಂಡು ಕೊಡ್ಲೀಗೆ ಬರುತ ಸಂಗೀತ ಗಾಯನದಿಂದ ವಾಲಗಗೊಳುತ ಸಂಗಮೆಯಾಗಿ ತಂಗಿಯ ಬೆರತೀಗ ಮಂಗಳ ಕ್ರೀಡೆಯಲ್ಲಿ ಪ್ರವೇಶಿಸಿ ಗಂಗೆ ಎನಿಸಿಳ್ಯಮನನಾದೇಳಗೆ 4 ಲೋಕದೊಳಗೆ ಪ್ರತಿರಹಿತ ಪೆಸರಾದ ಚೀಕನ ಬರವಿಯ ಅಶ್ವಥಮರದ ನೃಕಂಠೀರವನ ಪಾದದಿ ವ್ಯಾಧಿಷ್ಟರಾದ ಸೋಕಿ ಮೈಮರೆದಂಥ ನಮಿತರು ಕರದಾ ಪಾಕ ಪದಾರ್ಥಕೆ ಒಲಿದೊಲಿದಾಡುತ ಶ್ರೀಕರ ವಿಜಯವಿಠ್ಠಲಗೆರಗುತ ನಾಕಕನ್ನಿಕೆಯಂತೆ ಹೊಳೆದಳುಯಿಂದು5
--------------
ವಿಜಯದಾಸ
ನಂಬಿದೆನು ಚರಣಗಳ ಪಾಲಿಸೈ ಹರಿಯೇ ನಂಬಿದೆನು ಶ್ರೀ ಚನ್ನಕೇಶವನೆ ದೊರಿಯೇ ಪ ಸರಳೆ ದ್ರೌಪದಿಯಂತೆ ಕರಿರಾಜ ಧೃವರಂತೆ ದುರುಳ ಕನಕಾಸುರನ ನಿಜತನುಜನಂತೇ ಖಗರಾಜ ಕಪಿಯಂತೆ ವರತತ್ತ್ವ ಭೋಧಿಸಿದ ಯತಿಗಣಗಳಂತೇ 1 ಗೌತುಮನ ಸತಿಯಂತೆ ಯಾದವರ ಪಡೆಯಂತೆ ಭೂತಳದಿ ಪೆಸರಾದ ಹರಿದಾಸರಂತೇ ಕೋತಿ ಜಾಂಬವನಂತೆ ಅಮರೇಶ ಸುತನಂತೆ ಆತುರದಿ ನಂಬಿರುವ ಶ್ರೀ ಲಕ್ಷ್ಮೀಯಂತೆ 2 ನಾನಿತ್ತ ಪೂಜೆಯಿಂ ನಾಗೈದ ಭಜನೆಯಿಂ ನಾನಿಂದು ಮಾಡಿದಾ ಹರಿಸ್ಮರಣೆಯಿಂದ ನೀನೊಲಿದೆಯಿಂತೆಂದು ದೃಢವಾಗಿ ನಂಬಿದೆನು ಹೀನನನು ಸಲಹಯ್ಯ ಸ್ವಾಮಿ ಕೇಶವನೇ 3
--------------
ಕರ್ಕಿ ಕೇಶವದಾಸ
ಪದ್ಯ ಅಥಃ ಪ್ರಥÀಮೋಧ್ಯಾಯ ಪಾದ ವಾರಿಜಕೆರಗುತ ನೀರಜ ಮುಖಿ ಸರಸ್ವತಿಯಾ || ಸಾರ ಭಕ್ತಿಲಿ ಸ್ತುತಿಸಿ ಪೇಳುವೆ ಸತ್ಯ ಚಾರು ಕಥೆಯಾ ಪ ಸುರಮುಖಿವಂದಿತ ಸರಸಿಜ ಭವಪಿತ ಶರಧಿ ಕರಿವರದಾ | ಹರುಷದಿಂದಲಿ ನಿನ್ನ ಚರಿತೆ ಕೊಂಡಾಡಲು ವರವ ಪಾಲಿಸು ದಯದಿಂದ 1 ಶರನಿಧಿ ಸಂಭೂತೆ ಸುರಜೇಷ್ಟ ಸ್ಮರಮಾತೆ ಪುರಹರ ವಂದಿತೆ ಖ್ಯಾತೆ || ಸ್ಮರಿಸಿ ಬೇಡುವೆ ನಿನ್ನ ಧೊರಿಯ ವರ್ಣಿಸಲೀಗ ಗರಿಯೆ ವರವ ಸುಖದಾತೆ 2 ಹರಿಕುಲೋತ್ತುಮ ನಿನ್ನ ಸರಸಿಜ ಪದಯುಗ ನೆರೆನಂಬಿದೆನು ಮುದಿಂದ || ಹರಿಸುಚರಿತ್ರವು ಅರುಹಲು ಎನ್ನಗೆ ಸ್ಥಿರ ಬುದ್ಧಿಕೊಡು ವಾಯುಕಂದ 3 ಗಿರಿಜೇಶ ಶಚಿಪತಿ ಸುರತತಿಗೆರಗುವೆ ಪರಮ ಸುಭಕ್ತಿ ಪೂರ್ವಕದಿ || ಹರಿದಾಸ ವರ್ಗಕೆ ಶುಭನೀಡಲೆನಗೆಂದು ಶಿರಬಾಗಿ ಬೇಡುವೆ ಮನದಿ 4 ಘನತರ ನೈಮಿಷವನದೊಳು ವಾಸಿಪ ಮುನಿ ಸೂತನಲ್ಲಿಗೆ ಬಂದು | ವಿನಯದಲಿ ವಿಜ್ಞಾಪನ ಮಾಡಿಕೊಂಡರು ಶೌನಕಾದಿಗಳೆಲ್ಲ ನಿಂದು 5 ಕ್ಷಿತಿಯೊಳು ಮನದಾಸೆ ಹಿತದಿಂದ ನೀಡುವ | ವ್ರತದಾವದ್ಹೇಳಿರೆನುತ || ಅತಿ ಭಕ್ತಿಯಿಂದ ಕೇಳುವ ಮುನಿಗಳ ಕಂಡು ಕಥಿಸಿದನಾಗೆತಿ ಸೂತಾ 6 ಛಂದದಿ ಕೇಳಿರಿ ಒಂದೆ ಮನದಿ ಈಗಾ | ನಂದದಿ ನಾರದ ತಾನೂ || ಹಿಂದಕ್ಕೆ ಈತೆರ ನಂದನ ಗೋ ವಿಂದನ ಪ್ರಶ್ನೆ ಮಾಡಿದನೂ 7 ಕಾರುಣ್ಯದಿಂದಲಿ ಸಾರಸೋದ್ಭವಕು | ಮಾರ ನಾರದ ಮುನಿವರಗೆ || ಶೌರಿ ಪೇಳಿದ ಕಥೆ ಸಾಧುವೆ ಮೋದದಿ ನಿಮಗೆ 8 ವರಸುರ ಲೋಕಾದಿ ಚರಿಸುತ್ತನಾರದ | ಹರುಷದಿ ಭೂಮಿಗೆ ಬರಲು || ನರರತಿ ಕಷ್ಟದಿ ಮರುಗುವದಂ ನೋಡಿ | ಪೊರೆಟರು ಹರಿಗ್ಹೇಳಿ ಕೊಳಲು 9 ಪದುಮಜ ಸುತ ನಾರದ ಮುನಿ ವೇಗದಿ | ವಿದುಧರ ವಂದಿತನಾದ || ಯದುಪನಲ್ಲಿಗೆ ಬಂದು ಮುದಮನದಿಂದಲಿ | ವಿಧ ವಿಧದಲಿ ಸ್ತುತಿಗೈದಾ 10 ಅಗಣಿತ ಮಹಿಮನೆ ತ್ರಿಗೂಣ ವರ್ಜಿತ ತ್ರಿವಿಕ್ರಮನೆ || ಪೊಗಳುವ ತವ ಪದಯುಗಕೆರಗುತ ನಾನು ಜಗದುತ್ವತ್ತಿ ಕಾರಣನೆ 11 ಮಗಳಲ್ಲಿ ಪುಟ್ಟದಿ ಮಗನನ್ನು ಕುಟ್ಟದಿ | ಮಗನ ಮಗಳ ಮದುವ್ಯಾದಿ || ಮಗನ ಮಗನ ವರಪಡೆದಾತನ ಜೈಸಿ ಮಗನ ಮಗನ ನೀನು ತಂದಿ 12 ಸಿಂಧುಜರಿಪ್ರಸಖ ನಂದನ ಕೊಂದನ | ತಂದೆಯ ತಂದೆಯಾ ಸುತೆಯಾ || ನಂದಿನಿಯಳಿಗಾಗಿ ನೊಂದಿದಿ ನೀ ನರ ರಂದದಿ ಕವಿಗಣಗೇಯಾ 13 ಘನ್ನ ಮಹಿಮ ನಿನ್ನ ಅನಂತ ಚರಿಯವ ಬಣ್ಣಿಸ ಬಲ್ಲೆನೆ ದೇವಾ || ಪನ್ನಗರಾಜಗಾಗಣ್ಯವಾಗಿಪ್ಪುದು ಮನ್ನಿಸು ಎನ್ನ ಬಿನ್ನಪವಾ 14 ಬಾ ಮುದ್ದು ನಾರದನೆ ಬಾ ಮುನಿವರ್ಯನೆ ಬಾ ಮೂರು ಭುವನ ಸಂಚಾರಿ ನೇಮದಿಂದಲಿ ನಿನ್ನ ಕಾಮಿತ ಪೇಳೀಗ ಪ್ರೇಂದಿಂದಲಿ ವೀಣಾಧಾರಿ 15 ಮುರಹರ ನಿನ್ನಗೆ ಅರಿಯದ ವಾರ್ತೆಯು | ಧರಣಿ ತ್ರಯದಿ ಉಂಟೇನೋ || ನರರತಿ ಕಷ್ಟದಿ ಮರುಗುತಲಿಪ್ಪರು ಹರಿಪೇಳಿದಕುಪಾಯವನು 16 ಸತ್ಯಲೋಕೇಶನ ಪುತ್ರನೆ ನಿನ್ನಯ | ಉತ್ತಮ ಪ್ರಶ್ನೆಗೆ ನಾನು || ಚಿತ್ತೈಸು ಮುನಿವರ ನೀನು 17 ನಾರದ ಶ್ರೀ ಸತ್ಯನಾರಾಯಣ ವ್ರತ ಧಾರುಣಿಯೊಳಗಿನ ಜನರು ಆರು ತಮ್ಮ ಪರಿವಾರದಿಂದಲಿ ಗೈಯ್ಯೆ ಭೂರಿ ಸೌಖ್ಯದಿ ಮೆರೆವರೋ 18 ದೇವನೆ ಈ ನಿನ್ನ ಸೇವಕನಿಗೆ ಸತ್ಯ || ದೇವನೆ ವ್ರತದ ವಿಧಾನ || ಸಾವಧಾನದಿ ಪೇಳು ಭಾವ ಜಪಿತ ಏಕೋ ಭಾವದಿ ಕೇಳುವೆ ಮುನ್ನ 19 ಬುಧನುತ ನಾರದ ಘೃತಕ್ಷೀರ ಶರ್ಕರ | ಕದಳಿ ಗೋಧೂ ಮಾದಿಗಳನು || ಪದುಳದಿಂದಲಿ ಸುಪಾಕಗೈದು ಮೇಣ್ ವಿಧ ವಿಧ ಪಕ್ವಾದಿಗಳನು 20 ಪರಮ ಭಕ್ತಿಯಲಿಂದ ಪರಿವಾರ ಸಹಿತದಿ ಧರುಣಿಸುರನ ಪರಿಮುಖದಿ ತುರಧೂಳಿಕಾಲದಿ ಪರಿಪರಿ ಪೂಜಿಸಿ ಹರಿಗರ್ಪಿಸಲಿ ಬೇಕು ಮುದದಿ 21 ಈರೀತಿಗೈವರ ಕೋರಿಕೆಯನು ದಯ | ವಾರಿಧಿ ಶಾಮಸುಂದರನೂ || ನಿತ್ಯ ವಾರಿಜಸಹಿತದಿ ಸೇರಿ ತಾ ನಲಿದಾಡುತಿಹನೂ 22 ಇತಿ ಪ್ರಥಮೋಧ್ಯಾಯ ಸಂಪೂರ್ಣಂ ಅಥಃ ದ್ವಿತೀಯೋಧ್ಯಾಯಃ ಅತಿ ಮೋದದಿಂದಲಿ ಮತಿಯುತರೆ ಈಗ ಪೃಥವಿಯೊಳಗೆ | ಪೂರ್ವದಲಿ || ವ್ರತಗೈದ ಸುಗುಣರ ಇತಿಹಾಸ ನಿಮ್ಮಗೆ ಕಥಿಸುವೆ ಹಿತದಿಂದ ಕೇಳಿ 1 ಕಾಶಿಯೊಳಗೆ ಒಬ್ಬ ಭೂಸುರ ಬಡತನ ಕ್ಲೇಶದಿ ವಾಸಿಸುವದನು || ಶ್ರೀಶ ಅವನ ನೋಡಿ ಪೋಷಿಸಲು ವೃದ್ಧ ವೇಷದಿ ಮಾತನಾಡಿಸಿದನು 2 ಭೂತವಕದಿ ವಿಪ್ರನಾಥನೆ ತವ ಮುಖ ಪಾಥೋಜ ಬಾಡಿದ ಬಗೆಯಾ ಈ ತೆರ ದುಃಖದಿ ನೀ ತಿರಗುವಂಥ ಮಾತು ಪ್ರೀತಿಲಿ ಪೇಳಯ್ಯಾ 3 ಕಥಿಸುವೆ ಹೇವಿಪ್ರ ಹಿತದಿಂದ ನೀಯನ್ನ | ಸ್ಥಿತಿಯಾ ಲಾಲಿಸು ಮನದಿಂದಾ || ಗತಿಗೆಟ್ಟು ಚರಿಸುವೆ ಪೃಥಿವಿಯೊಳಗೆ ಈಗ ಅತಿ ಬಡತನ ದೆಶೆಯಿಂದಾ 4 ಶ್ರೇಷ್ಟನೆ ದಾರಿದ್ರ್ಯ ಕಷ್ಟ ತೊಲಗುವಂಥ | ಥಟ್ಟನೆ ನೀ ಪೇಳುಪಾಯಾ || ಘಟ್ಪ್ಯಾಗಿ ನಿನ್ನ ಉತ್ಕøಷ್ಟ ಪಾದಾಂಬುಜ ಮುಟ್ಟಿ ಸೇವಿಪೆ ಮಹರಾಯಾ 5 ಮಿಡುಕುತ್ತ ವಿಪ್ರನು ನುಡಿದ ಮಾತನುಕೇಳಿ | ಕಡಲಜಪತಿ ಕವಿಗೇಯಾ || ಕಡುದಯದಲಿ ಪೇಳ್ದ ಬಡತನ ಕಳೆಯುವ ಪೊಡೆವಿಯೊಳಿದ್ದ ಉಪಾಯಾ 6 ಸಾರುವೆ ಕೇಳಯ್ಯ ಮಾರಜನಕ ನಿಜ | ನಾರಾಯಣನ ಸು ವ್ರತವಾ ಆರು ಜಗದಿ ಭಕ್ತಿ ಪೂರ್ವಕ ಮಾಳ್ವರು ದಾರಿದ್ರ್ಯ ಹರಿ ದೂರಗೈವಾ 7 ಮುದುಕನ ನುಡಿಕೇಳಿ ಮುದಮನದಿಂದಲಿ ಸದನಕ್ಕೆ ದ್ವಿಜ ಬಂದು ತಾನೂ ಸುದತಿ ಸಹಿತನಾಗಿ ಸತ್ಯನಾಥಾನ ಪೂಜೆ ವಿಧ ವಿಧದಲಿ ಮಾಡಿದನೂ 8 ಹರುಷದಿ ಈ ರೀತಿ ಧರಣಿ ದೇವನು ಮಾಡೆ | ಶಿರಿಸತಿ ಸುತರಿಂದ ತಾನೂ || ಧರೆಯೊಳು ಸುಖಬಿಟ್ಟು ಪರಮ ದುರ್ಲಭವಾದ ಪಥ ಹಿಡಿದನೂ 9 ಸೂತರೆ ಅತ್ಯಂತ ಕೌತುಕವಾಗಿಹ ಧಾತ ಪಿತನ ಈ ವ್ರತವು ಭೂತಳದೊಳಗೆಂತು ಖ್ಯಾತಿಯ ಪೊಂದಿತು ಪ್ರೀತಿಲಿ ಪೇಳಿರಿ ನೀವು 10 ಸತಿಸುತ ಪರಿವಾರ ಸಹಿತಾ ಅತಿ ಹಿತದಲಿ ಮನೋರಥ ಪೂರೈಸುವ ಈ ವ್ರತ ಮಾಡುತಿರಲಾಗತ್ವರಿತಾ 11 ಚರಣನೋರ್ವನು ಶಿರದಿ ಕಾಷ್ಟಭಾರವ ಧರಿಸಿ ಮಾರಲು ಬೀದಿಗಳಲಿ ಬರುತಿರೆ ಮಾರ್ಗದಿ ಧರಣಿದೇವನೆ ಮಂ ದಿರ ಕಂಡ ಪರಮ ಮೋದದಲಿ 12 ಶ್ರೀನಿವಾಸನ ಘನಧ್ಯಾನದಿಂರ್ಚಿಪ ಕ್ಷೋಣಿ ಸುರನ ನೋಡಿ ಜವದಿ ಮಾನವ ಕೇಳಿದ ಏನಿದೆಂದೆನು ತಲಾಕ್ಷಣದಿ 13 ಶೂದ್ರನ ನುಡಿ ಕೇಳಿ ಆ ದ್ವಿಜ ಪೇಳ್ದನು ಶುದ್ಧ ಮನದಿ ಚರಣೋಧ್ಭವ ಗೈದನಿ ಶುದ್ಧನ ಪಾದಾರ್ಚನವಾ 14 ಹರುಷದಿಂದಲಿ ಸತ್ಯ ಹರಿ ಪೂಜಿಸಿದ ಶೂದ್ರ ಪರಮ ಸೌಜನ್ಯದಿ ಇದ್ದು ಕೊನೆಗೆ ಪರಿವಾರಯುತನಾಗಿ ತೆರಳಿದ ಸ್ಥಿರ ಉಳ್ಳ ಶಿರಿಶಾಮಸುಂದರನ ಪುರಿಗೆ 15 ಇತಿ ದ್ವಿತೀಯೋಧ್ಯಾಯ ಸಂಪೂರ್ಣಂ ಅಥಾಃತೃತೀಯೋಧ್ಯಾಯ ಋಷಿ ಜನಗಳೆ ಕೇಳಿ ವಸುಧಿ ತ್ರಯದಿ ಘನ ಪೆಸರಾದ ಇನ್ನೊಂದು ಕಥೆಯಾ ಉಸುರುವೆ ಕೇಳ್ವರ ವ್ಯಸನವು ಪರಿಹಾರ ಪುಸಿಯಲ್ಲಿ ಈ ನುಡಿ ಖರಿಯಾ 1 ವರ ಉಲ್ಕಮುಖನೆಂಬ ಧರಣೀಶನೋರ್ವನು ಹರುಚದಿಂದಲಿ ತನ್ನ ಹಿತದಾ ಶರಧಿ ತೀರದಿ ನಿಜ ಹರಿಯನ್ನು ಪೂಜಿಸುತಿರ್ದ 2 ಕ್ಷೋಣಿಪಾಲಕನಿದ್ದ ಆ ನದಿತೀರದಿ | ವಾಣಿಜ್ಯ ಮಧುನಾಯಕನೂ || ಸಾನುರಾಗದಿ ಬಂದು ಶ್ರೀನಿಧಿ ವ್ರತದ ವಿ ಧಾನವೇನೆಂದು ಕೇಳಿದ 3 ಭೂಮಿಪಾಲಕ ಮಧುನಾಮಕ ವೈಶ್ಯನ ಆ ಮೃದು ನುಡಿಕೇಳಿ ಜವದಿ ಕಾಮಿತದ ಸತ್ಯ ಸ್ವಾಮಿಯ ವ್ರತ್ತದಾ ನೇಮವ ಪೇಳ್ವ ಸಮ್ಮುದದಿ 4 ರಕ್ಕಸಾರಿಯ ಕಥಾ ಭಕ್ತಿಲಿ ಕೇಳುತ ಲಕ್ಕುಮಿಯುತ ಮುದದಿಂದ ಮಕ್ಕಳೆನಗಾಗಲು ಚಕ್ರಿಯ ಸುವೃತ ಅಕ್ಕರದಲಿ ಮಾಳ್ಪೆನೆಂದ 5 ಈ ರೀತಿ ಧೃಡ ಬ್ಯಾಪಾರಿಯು ತಾಗೈದು ಶೌರಿ ಪ್ರಸಾದ ಸ್ವೀಕರಿಸಿ || ಸಾರಿ ಪೇಳಿದ ತನ್ನಾಗಾರಕ್ಕೆ ಬಂದು ತಾ ನಾರಿಯ ಮುಂದೆ ವಿಸ್ತರಿಸಿ 6 ಸತಿ ಶಿರೋಮಣಿ ಲೀಲಾ ವತಿಯು ತನ್ನ ಮಂದಿರದಿ || ಪತಿ ಕರುಣದಿ ಗರ್ಭ ವತಿ ತಾನಾದಳಾಕ್ಷಣದಿ 7 ಹತ್ತನೆ ಮಾಸದ ಉತ್ತಮ ಪುತ್ರಿಯ ಪೆತ್ತಳು ಆ ನಾರಿ ತಾನೂ || ಅತ್ಯಂತ ಸನ್ಮುದ ಚಿತ್ತನಾಗಿ ಸಾಧು ಮರ್ತನು ಹರಿವ್ರತವನ್ನು 8 ಸತಿ ಲೀಲಾವತಿ ತನ್ನ ಪತಿಗಭಿವಂದಿಸಿ ನಿಂದು || ಅತಿ ಭಕ್ತಿಯಿಂದಲಿ ಕಥಿಸಿಕೊಂಡಳಲ ಯದು ಪತಿ ವ್ರತ ಮಾಡಬೇಕೆಂದು 9 ಸುದತಿಯ ನುಡಿಕೇಳಿ ಮಧುನಾಮಕ ಸಾಧು ವಿಧಿಸಿದ ಸುತೆ ಕಲಾವತಿಯಾ || ಮದುವೆಯ ಕಾಲದಿ ಉದುಪನರ್ಚಿಪೆನೆಂದು ಮುದದಿಂದ ಪೇಳ್ದನುಪಾಯಾ 10 ಪರಿಪರಿ ಸೌಖ್ಯದಿಂದಿರುತಿರೆ ವೈಶನ ತರುಳೆಗೆ ಪೂರ್ಣಯೌವನವು | ಬರಲು ಮಾಡಿದ ತಕ್ಕವರ ತಂದು ಲಗ್ನವ ಮರೆತು ಬಿಟ್ಟನು ಹರಿವ್ರತವಾ 11 ಶ್ರೀಮಂತವೈಶ್ಯನು ಪ್ರೇಮದಿಂದಲಿ ತನ್ನ ಜಾಮಾತನೊಡನೆ ವ್ಯಾಪಾರಾ ನೇಮದಿ ಗೈಯಲು ಗ್ರಾಮ ತ್ಯಜಿಸಿ ಪೋದಾ ಆ ಮಹಾಪುರ ರತ್ನಸಾರಾ&ಟಿbs
--------------
ಶಾಮಸುಂದರ ವಿಠಲ
ಮಲಗಲೇತಕೆ ಹರಿಯೆ | ಚಲುವ ಚನ್ನಿಗ ದೊರೆಯೆ ಪ ಎಲರುಣೀವರ ಶಯ್ಯ | ಬಳಲಿಕೇಕಯ್ಯಾ ಅ.ಪ. ವೇದ ಕದ್ದನ ಹರನೆ | ಭೂಧಾರಿ ಗಿರಿಧರನೆಭೂದರಿಸಿ ಭೊಮ್ಮನಿಗೆ | ಆದರದಿ ಕೊಟ್ಟವನೇ |ಭಾದಿಸೇ ಭಕ್ತ ಪ್ರ | ಹ್ಲಾದನನ ಕಾಯ್ದವನೆಮೋದದಿಂದಲಿ ಬಲಿಯ | ಪಾದವಾ ಮೆಟ್ಟಿದನೆ 1 ಗಂಡು ಗೊಡಲಿಯ ಪಿಡಿದು | ಭಂಡ ಭೂಭುಜ ತರಿದುಲಂಡ ರಾವಣ ಶಿರ | ಚೆಂಡಾಡಿದ ಧೊರೆಯೇಕಂಡ ಕಂಡವರ ಮನೆ | ಗಂಡಲೆದು ಪಾಲ್ಮೊಸರಉಂಡುಂಡು ಚೆಲ್ಲಾಡಿ | ಭಂಡು ಮಾಡಿದೆ ಕೃಷ್ಣ 2 ಮುಪ್ಪೊರರ ಸತಿಯರನು | ಅಪ್ಪಿ ವ್ರತ ಭಂಗವನುತಪ್ಪದೇ ಮಾಡಿ ಹಯ | ವಪ್ಪಿ ಏರ್ದವನೇಇಪ್ಪರಿಯ ಚರ್ಯ ದಿಂ | ಸೊಪ್ಪಾಗಿ ಮಲಗಿದೆಯೋಗುಪ್ತ ಮಹಿಮನೆ ದೇವ | ಅವ್ವ ಶ್ರೀರಂಗ ಪುರಗ 3 ಕ್ಲೇಶ 4 ಪೂರ್ವ ವಾಹಿನಿ ಎನಿಪ | ಕಾವೇರಿ ತೀರಗನೆಪೂರ್ವದಿವಿಜರ ಹರನೆ | ಸಾರ್ವಭೌಮಾಊರ್ವಿ ಯೊಳ್ಪೆಸರಾದ | ಪಾರ್ವ ಗೌತಮ ವರದಕೋರ್ವೆ ತವ ಚರಣ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಶ್ರೀ ಶ್ರೀಪಾದರಾಜರು ಕಾಪಾಡು - ಕಾಪಾಡು ಶ್ರೀ ಪಾದರಾಯ ಪ ಪಾಪೌಘಗಳನಳಿದು ಶ್ರೀಪತಿಯ ತೋರೀ ಅ.ಪ. ನಾಡಿನೊಳು ಪೆಸರಾದ ಮೂಡಲಾದ್ರಿಗೆ ಪೋಪಮೂಡಬಾಗಿಲ ಕಾಯ್ವ ಪ್ರಾಣನಾಶ್ರಯಿಸೀ |ಮೂಡಬಾಗಿಲ ಪುರದಿ ನರಸಿಂಹ ಕ್ಷೇತ್ರದಲಿ |ಈಡು ಇಲ್ಲದೆ ಮೆರೆವ ಯತಿ _ ಸಾರ್ವಭೌಮಾ 1 ಹತ್ತಾರು ನಾಲ್ಕಾದ ಶಾಕಪ್ರತಿ ದಿನದಲ್ಲಿಉತ್ತಮೋತ್ತಮಗಿತ್ತು ಉಂಬ ಮಹಿಮಾ |ಕೃತ್ರಿಮ ಸ್ವಭಾವ ನೃಪ ಪರಿಕಿಸಲು ಪೋಗೆ ಹರಿಮತ್ತೊದಗಿಸಿದ ವ್ಯಾಳ್ಯಕ್ಕೆ ಹರಿಕೃಪಾ ಪಾತ್ರ 2 ವಿಪ್ರ ಬ್ರಹ್ಮತ್ಯವನು ಶಂಖದುದಕದಿ ಕಳೆಯೆಅಪ್ರಬುದ್ಧರು ನಗಲು ಗೆರೇಣ್ಣೆ ವಸನಾ |ಕ್ಷಿಪ್ರ ಶುದ್ದಿಯಗೈದೆ ಪ್ರೋಕ್ಷಿಸುತ ಶಂಖದಲಿಅಪ್ರಮೇಯನ ಕರುಣ ನಿನ್ನೊಳೆಂತುಂಟೋ 3 | ಅಹವು ರಾತ್ರಿಗಳಭಿಧ ಆದಿತ್ಯ ಸಂಸ್ಥಿತನುಅಹರ್ನಿಶೀ ನರನಾಡಿ ಸ್ಥಿತನಾಗಿಹಾ |ಬೃಹತಿ ನಾಮಕಗನ್ನ ಋಗ್ರಹಸ್ಯವನರುಪಿಬೃಹತಿ ಸಾಸಿರಗಳಿಪ ಸಂಧಾನವಿತ್ತೂ 4 ವಾದಿಗಳ ಎದೆಶೂಲ ವಾದ ಗ್ರಂಥದಿ ಪೂರ್ಣಬೋಧ ಶಿಷ್ಯರ ಹಿತವ ಕಾದು ಜಗದೀ |ವೇದ ವೇದ್ಯನು ಗುರು ಗೋವಿಂದ ವಿಠ್ಠಲನಪಾದ ಧೃವ ಧ್ಯಾನದಲಿ ಮೆರೆಯುತಿಹ ಗುರುವೇ 5
--------------
ಗುರುಗೋವಿಂದವಿಠಲರು
ಸುವ್ವಿ ಸುವ್ವಾಲಿ |ಸುವ್ವಿ ಸಾಧ್ವಿಯರು ರಾಘವೇಂದ್ರರ ಪಾಡಿ ಪಅಂದಿನ ಕಾಲದ ಮಧ್ವಶಾಸ್ತ್ರವ ಮನಕೆ ತಂದು |ಅಂದದಿ ಟಿಪ್ಪಣಿ ಮಾಡಿದ ದೇವರಾರು | ಸುವ್ವಿ ||ಅಂದು ವಾದಿಸುವ ಜನರನ್ನು ಬಾಯಿ ಮುಚ್ಚಿಸಿದ |ಚಂದಿರ ವದನೆ ಈತನಮ್ಮ ಗುರುವು | ಸುವ್ವಿ 1ಇವರ ಚರಿತೆಯನ್ನು ತೋರಿದಷ್ಟು ತುತಿಸುವೆ |ಕಿವಿಗೊಟ್ಟು ಕೇಳುವದುಬುಧಜನರು | ಸುವ್ವಿ ||ಪವನಾಂಶರಿವರು ಕವಲಿಲ್ಲ ಖ್ಯಾತರಾಗಿ |ಅವನಿಯ ಸುರರಿಂದರ್ಚನೆಗೊಂಗುವರು | ಸುವ್ವಿ 2ಅಷ್ಟಾಕ್ಷರ ಮಂತ್ರವನು ತಪ್ಪದಲೆ ನಿತ್ಯವಾಗಿ |ನಿಷ್ಠೆಯಿಂದ ಭಜಿಸಲು ಭೂತ ಭಯವು | ಸುವ್ವಿ ||ಕುಷ್ಠರೋಗ ಕ್ಷಯ ಪಾಂಡು ಜ್ವರ ಸನ್ನಿ ಮೊದಲಾದ |ಅಷ್ಟುಪದ್ರವಾಕ್ಷಣ ಬಿಟ್ಟು ಓಡುವುದು | ಸುವ್ವಿ 3ಮೃತ್ತಿಕೆಮಾಲೆಅಂಗಾರದಿವ್ಯ ಮಂತ್ರಾಕ್ಷತೆಯು |ಹತ್ತಿರವಿರಲು ಕ್ಲೇಶವ ಲೇಶ ಕಾಣರು | ಸುವ್ವಿ ||ಎತ್ತ ಹೋದರು ಜನರಿಗೆ ಜಯಪ್ರದ ತೋರುವದು |ಕತ್ತಲಿಲ್ಲ ಶತಸಿದ್ಧ ಮತ್ತೇನುಕೇಳಿ| ಸುವ್ವಿ 4ಪಂಡಿತರು ಮೊದಲಾಗಿಹಸ್ತಿಉಷ್ಟ್ರ ಕುದುರೆಯ |ಹಿಂಡುಗಳು ತೃಷೆಯಿಂದ ಬಳಲುತಿರೆ | ಸುವ್ವಿ ||ದಂಡ ಜಗತಿಗೂರಿ ತೋಯ ತೆಗಿಸಿಯವನೀ |ಮಂಡಲದೊಳಗೆ ಪೆಸರಾದರಿವರು | ಸುವ್ವಿ 5ಕಟ್ಟಲಿಯ ಭತ್ತದೊಳು ಭೂಪದಳಯುಕ್ತ ಬರ |ಲಿಟ್ಟುಕೊಂಡು ಉಣಿಸಿ ಉತ್ತಮ ವರವ | ಸುವ್ವಿ ||ಕೊಟ್ಟು ಕಳಿಸಿದ ಮೇಲೆ ಆವು ಕೊಂಚಿಯಾಗಲಿಲ್ಲ |ಗಟ್ಟಿ ಸಂಕಲ್ಪರಿವರು ಮುನಿವರರು | ಸುವ್ವಿ 6ವಿಪ್ರರೆಲ್ಲರು ಹೇಳಿಸಿ ಕಟ್ಟಿಸಿದ ಸದನವ |ಥಟ್ಟನೆ ಕೆಡಿಸಿ ಭೂಪ ಮೆಚ್ಚುವಂದದಿ | ಸುವ್ವಿ ||ನೆಪ್ಪು ಧರೆಗಾಗಲೆಂದುಗುರುಸುಧೀಂದ್ರ ಕುಮಾರ |ಸರ್ಪನ ತೋರಿಸಿ ಸುಪ್ರಖ್ಯಾತರಾದರು | ಸುವ್ವಿ 7ದ್ವಿಜರ ಸ್ತೋಮವು ಬಾಯಿ ಬಿಡುತಿರೆ ದಯದಿಂದ |ನಿಜಕಾಷ್ಟವಿಳೆಗೆ ನಿಲ್ಲಿಸಿ ಮರವ | ಸುವ್ವಿ ||ಸೃಜಿಸಿ ಪಲ್ಲವ ಫಲಯುಕ್ತವಾಗಿ ತೋರಿಸಿದ |ಭಜಿಸಿರಿವರನ್ನು ಮಕ್ಕಳು ಬೇಡುವವರು | ಸುವ್ವಿ 8ಮುತ್ತಿನ ಮಾಲಿಕೆನೃಪಭಕ್ತಿಯಿಂದ ಕೊಡಲಾಗಿ |ಸಪ್ತಜಿಹ್ವಗುಣಿಸಿದ ಸರ್ವರು ನೋಡಿ | ಸುವ್ವಿ ||ಮತ್ತೆ ಬೇಡಲು ಪಾವಕನಿಗೆ ಪ್ರಾರ್ಥನೆಯ ಮಾಡಿ |ಮತ್ರ್ಯಪಗೆ ಇತ್ತರು ಮೊದಲಂತೆಯೆ ತಂದು | ಸುವ್ವಿ 9ಹಿಂದೆ ಮಾಡಿದ ದುಷ್ಕರ್ಮ ತೀರ ಬಂದದನು ನೋಡಿ |ಬಂದಾಕ್ಷಣದಲ್ಲಿ ಅವನ ವಿಚಾರಿಸಿ | ಸುವ್ವಿ ||ಇಂದಿರೇಶನ ಕಾರುಣ್ಯ ಬಲದಿಂದ ಜನನೋಡೆ |ಸಂದೇಹವಿಲ್ಲದೆ ಸುಲೋಕವನಿತ್ತರು | ಸುವ್ವಿ 10ತುಂಗಾತೀರ ಮಂತ್ರಾಲಯದಲ್ಲಿಶ್ರಾವಣಬಹುಳ |ಮಂಗಳ ಬಿದಿಗಿಯಲ್ಲಿ ನಿವಾಸವಾದರು | ಸುವ್ವಿ ||ಶೃಂಗಾರ ವೃಂದಾವನ ದ್ವಾದಶನಾಮ ಶ್ರೀ ಮುದ್ರೆಯು |ಕಂಗಳುಸಾಲವು ನೋಡ ಹೊದ್ದ ಶಾಠಿಯ | ಸುವ್ವಿ 11ಅಂಧಕಬಧಿರಕುಂಟ ನಾನಾ ರೋಗಿಗಳು ಮತ್ತೆ |ಕಂದ ವಜ್ರ್ಯ ಮೊದಲಾದವರಿಗೆಕಾಮ್ಯ| ಸುವ್ವಿ ||ತಂದುಕೊಡುವರು ಬೇಗ ಇತರ ಸಂಶಯವಿಲ್ಲ |ಮಂದಭಾಗ್ಯರಿಗೆ ಇವರ ಸೇವೆ ದೊರೆಯದೇ || ಸುವ್ವಿ 12ಕೌತುಕವೇನೆನ್ನಲಿ ಮುಂಜಿ ವಿವಾಹ ಮಾಡಿಸುವರು |ಚಾತುರ್ಮಾಸದೊಳಗೆ ಗ್ರಹಗಳಸ್ತವಾಗೆ | ಸುವ್ವಿ ||ಧಾತಾ ಪಿತ ನಿಲಯವಿದೇನೋಯೆಂದು ತೋರುವದು |ಪ್ರೀತಿಯುಳ್ಳ ಭಕ್ತರಿಗೆ ಅಧಮರಿಗಲ್ಲ | ಸುವ್ವಿ 13ಪಾಡ್ಯ ಪೂರ್ವಾರಾಧನೆ ಉತ್ತರಾರಾಧನೆಗೆ |ಒಡ್ಡಿಬರುವುದು ಎಂಟು ದಿಕ್ಕುಗಳಿಂದ ಜನವು | ಸುವ್ವಿ ||ಕಡ್ಡಿಹಿಡಿಯದಂಥ ಸಂದಣಿಯೊಳು ಸನ್ಮುಹೂರ್ತದಿ |ದೊಡ್ಡ ರಥವೇರಿ ಮಠವ ಸುತ್ತುವರು | ಸುವ್ವಿ 14ಇಷ್ಟೇಯೆನ್ನಲು ವಶವಲ್ಲ ಮಹಿಮೆಗಳಿನ್ನೂ ಉಂಟು |ನಷ್ಟ ಮಾಡುವರು ದುರ್ಮತ ದಾರಿದ್ರ್ಯವ | ಸುವ್ವಿ ||ಸೃಷ್ಟಿಗೊಡೆಯ ಪ್ರಾಣೇಶ ವಿಠ್ಠಲನೆಂದು ಪೇಳ್ವರು |ಎಷ್ಟು ಪೇಳಿದರೂ ಎನ್ನಿಂದಲಿ ತೀರದು | ಸುವ್ವಿ 15
--------------
ಪ್ರಾಣೇಶದಾಸರು
ಸ್ವಾಮಿತ್ವದವರಿಗೆ ಅಯುಕ್ತವೇ ಯುಕ್ತ |ಶ್ರೀಮನೋರಮನೆ ಪೇಳುವೆ ಕೇಳು ಶಕ್ತ ಪಮಾವನಿಗೇ ಮಾವನಾದೆಯಲೊ ಜನ್ಮಾರಭ್ಯ |ನೀವೊಡಲ ಹೊರದೆ ಚೋರತನ ಮಾಡಿ ||ಕೋವಿದಂಗತಿ ಮೆಚ್ಚು ಜಾರತನ ಮಾಡಿದುದು |ಆ ವನಿತೆ ಮೆದ್ದ ಫಲ ಮೆದ್ದಿ ನಿರ್ದೋಷಿ 1ನರಸೇವೆಯ ಮಾಡಿ ಪೆಸರಾದಿ ಮಾತೆಯ ಕೊಂದೆ |ಧರೆಯೊಳಗೆ ಮಾತುಲನ ಕೊಲ್ಲಬಹುದೇ ||ತಿರುಕಿ ಬೇಡಿಸುವಳರಸರನ ನಿನ್ನಯ ರಾಣಿ |ಪರಿಮಿತಿಯಿಲ್ಲದ ದುರಾಚಾರಿ ನಿನ್ನಯ ಮಗನು 2ಮೈದುನನು ಗುರುದ್ರೋಹಿ ಮೊಮ್ಮಗನು ಬಹು ಚಾಡಿ |ಮೇದಿನಿಯೊಳಗೆ ಹೇಳುತಲೆ ತಿರುಗುವ ||ಶ್ರೀದ ಪ್ರಾಣೇಶ ವಿಠ್ಠಲನೇ ನೀನೇ ದೊರೆ |ಯಾದ ಕಾರಣ ದಕ್ಕಿತಿದು ಇಲ್ಲದರೆ ಸಲ್ಲ 3
--------------
ಪ್ರಾಣೇಶದಾಸರು