ಒಟ್ಟು 114 ಕಡೆಗಳಲ್ಲಿ , 44 ದಾಸರು , 107 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿಖಿಳ ಗುಣಗಣ ಪೂರ್ಣ ಪ ಅಂಬುಜಾಸನ ಜನಕ ನರಹರಿ ಅಂಭ್ರಣೀ ಜಗನ್ನಾಥ ನಾಯಕ ಬಿಂಬ ವಿಷ್ಣುವೆ ನಿಖಿಳವಿಶ್ವಕೆ ತುಂಬಿ ಭಕ್ತಿಯ ಕಾಯೋ ಕರುಣಿ ಯೇ ಅ.ಪ. ತಂದೆಕಾರಣ ಭವದೀ- ನೀ ಎನ್ನ ಬಂದೆನಲ್ಲದೆ ನಿಜದೀ- ಸುಖಪೂರ್ಣ ನಿಂದು ನಡೆಸದೆ ಭವದೀ- ದಾಟಿನ್ನ ಎಂದಿಗಾದರು ಗೆಲ್ಲುವೆನೆ ಘನ್ನ ಬಂಧನಪ್ರದ ನೀ ಬಂಧಮೋಚಕ ತಂದ ವಿಷ್ಣುವೆ ಮೂಲಕಾರಣ ವೆಂದು ಶೃತಿಗಳವೃಂದ ನುಡಿವುವು ಬಂದು ನಿನಗಿಂತಧಿಕರಾರೈ ನಿಂದು ಹೃದಯದಿ ಸರ್ವಕಾಲದಿ ತಂದು ಉಣಿಸುವೆ ಸಕಲ ವಿಷಯವ ಬಂಧಿ ನಾನಿಹೆ ಜಡವೆ ನೀ ಬಿಡೆ ಮುಂದಿನಾಗತಿ ಬೇಗ ತೋರೈ ಇಂದಿರೇಶ ಮಹೇಂದ್ರ ಸುಖಮಯ ಕಂದರಾಶ್ರಯ ಬ್ರಹ್ಮಮಂದಿರ ನಂದಿವಾಹನ ತಾತ ವಿಭುವರ ಚಂದಗೋಚರ ಸಾರ್ವಭೌಮನೆ ಕೂಂದುನಕ್ರನ ಗಜವ ಸಲಹಿದೆ ನಂದನೀಡಿದೆ ಪಾರ್ಥಮಡದಿಗೆ ತಿಂದು ಎಂಜಲ ಕಾಯ್ದೆ ಶಬರಿಯ ಗಂಧ ಕೊಳ್ಳುತ ಕಾಯ್ದೆ ಕುಬ್ಜೆಯ ಕಂದ ಕೂಗಲ್ ಬಂದೆ ಕಂಭದಿ ಇಂದ್ರ ಗೋಸುಗ ಬಲಿಯ ಬೇಡದೆ ಮಂದರಾದ್ರಿಯ ಪೊತ್ತೆ ಸುರರಡೆ ಸುಂದರಾಂಗಿಯುಆದೆ ಹಾಗೆಯೆ ಹಿಂದೆ ಈತೆರ ನಿತ್ಯತೃಪ್ತನೆ ಬಂದು ಸಲಹಿದ ಭಕ್ತವೃಂದವ ಮಂದನಾದರು ಶರಣುಬಿದ್ದವ ನೆಂದು ಸಲಹೈ ಪೂರ್ಣಕರುಣಿಯೇ1 ಕೂಡಿಸುತ ಮನ ವಿಷಯ ಬಲೆಯಲ್ಲೀ ಮಾಡಿಸುವೆ ಮಾಡಿದ್ದ ದಿನದಿನದೀ ಗೂಢ ನಿನ್ನಯ ಭಕ್ತಿ ಕೊಡಲೊಲ್ಲೀ ಕೇಡುಮೋಹ ಸಜಾಡ್ಯ ಹರಿಸಿಲ್ಲೀ ಓಡಿಓಡಿಸೆ ಜಗವು ನಡೆವುದು ನೋಡಿನೋಡಿಸೆ ನಾವು ನೋಳ್ಪೆವು ಮಾಡಿಮಾಡಿಸೆ ಕರ್ಮವಾಹುದು ಪ್ರೌಢ ನಿನ್ನಯ ಬಲದ ವಿಶ್ವಕೆ ಕಾಡಿಕಾಡಿಪ ವಿಷಯ ಬಿಡಿಸುತ ಹಾಡಿಹಾಡಿಸಿ ನಿಮ್ಮ ಕೀರ್ತನೆ ಆಡಿಆಡಿಸಿ ಸಾಧುಸಂಗದ ಜಾಡುತೋರಿಸೊ ಭಕ್ತಿ ಮಾರ್ಗದ ಕ್ರೋಢನರಹರಿ ಮತ್ಸ್ಯವಾಮನ ಪ್ರೌಢ ಭಾರ್ಗವ ರಾಮಕೃಷ್ಣನೆ ಗಾಡಿಕಾರ ಪರೇಶ ಬುದ್ಧನೆ ದೂಡು ಕಲಿಯನು ಕಲ್ಕಿದೇವನೆ ಕೂಡು ಮನದಲಿ ಬಾದರಾಯಣ ನೀಡು ಜ್ಞಾನವ ಜೀಯ ಹಯಮುಖ ಮಾಡು ದತ್ತಾತ್ರೇಯ ಕೃಪೆಯನು ಈಡುಕಾಣದು ಕಪಿಲಮೂರ್ತಿಯೆ ಬೀಡುಗೈದಿಹ ಬೀಜ ನಿದ್ರೆಯು ನೋಡಗೊಡದೈ ನಿನ್ನತುರ್ಯನೆ ನಾಡುದೈವಗಳನ್ನು ಭಜಿಸಲು ಓಡದದು ಎಂದೆಂದು ಸತ್ಯವು ಮಾಡುತಲಿ ಸಾಷ್ಟಾಂಗ ನತಿಗಳ ಜೋಡಿಸಿಹೆ ಶಿರ ಪಾದಪದ್ಮದಿ ಗಾಢಪ್ರೇಮದಿ ಸಲಹು ಭೂಮನೆ ಮೂಡಿಸುತನಿಜ ಭಕ್ತಿ ಜ್ಞಾನವ 2 ಎನ್ನ ಯೋಗ್ಯತೆ ನೋಡೆ ಫಲವಿಲ್ಲ ನಿನ್ನಕೃಪೆ ತೋರದಿರೆ ಗತಿಯಿಲ್ಲ ಅನ್ಯ ಹಾದಿಯು ಯಾವುದೆನಗಿಲ್ಲ ಘನ್ನಚಿತ್ತಕೆ ಬರಲು ತಡಿಯಿಲ್ಲ _ ಹೇನಲ್ಲ ಪೂರ್ಣಜ್ಞಾನಾನಂದ ಶಾಶ್ವತ ಪೂರ್ಣ ಚಿನ್ಮಯ ಪೂರ್ಣ ಮೂಲದಿ ಪೂರ್ಣ ನಂದದಿ ಪೂರ್ಣ ಅವಯವಿ ಪೂರ್ಣಶಕ್ತನೆ ಪೂರ್ಣಬೋಧ ಮುನೀಂದ್ರ ವಂದಿತ ಶರಧಿ ದೇವನೆ ಪೂರ್ಣನಿತ್ಯಾನಂದ ದಾಯಕ ಪೂರ್ಣಮಾಡೈ ಬಯಕೆ ತೂರ್ಣದಿ ನೀನೆ ಸರ್ವಾಧಾರ ಪ್ರೇರಕ ನೀನೆ ರಕ್ಷಕ ಸರ್ವಶಿಕ್ಷಕ ನೀನೆ ಸೀಮಾಶೂನ್ಯ ನಿಶ್ಚಯ ನೀನೆಪೊಗಳಿತನಿಖಿಳವೇದದಿ ನೀನೆ ವಾಚ್ಯನು ಸರ್ವಶಬ್ದದಿ ನೀನೆ ಮುಕ್ತಾಯಕ್ತ ಸೇವಿತ ನೀನೆ ದೋಷವಿದೂರ ಸ್ಥಾಣುವು ನೀನೆ ಸೃಷ್ಟಾ ದ್ಯಷ್ಟಕರ್ತೃವು ನಿನ್ನಸಮ ಉತ್ಕøಷ್ಟರಿಲ್ಲವು ನಿನ್ನ ದಾಸರು ಸರ್ವಜೀವರು ಭಿನ್ನರೈ ಸರ್ವತ್ರ ಸರ್ವರು ನಿನ್ನ ದಾಸರ ಭಾಗ್ಯಬೇಡುವೆ ಜನ್ಮಜನ್ಮಕು ಇದನೆ ಬಯಸುವೆ ನಿನ್ನ ನಂಬಿಹೆ ನಿನ್ನನಂಬಿಹೆ ಸಿರಿಪತಿ ಕೃಷ್ಣವಿಠಲನೇ 3
--------------
ಕೃಷ್ಣವಿಠಲದಾಸರು
ಶ್ರೀ ಸತ್ಯಬೋಧರು ನೋಡಿ ಧನ್ಯನಾದೆ ಸತ್ಯಬೋಧರಾಯಾ ಬೇಡಿದೊರುವ [ಬೇಡಿದ ವರವ] ನೀಡುವ ಪರಮದಯಾಕರನಾ ಪ ರಘುರಾಮನ ಸೇವೆಯನ್ನು ಮಾಡ್ದ ಮಹಿಮನಾ ಪೊಗಳಿ ಪಾಡುವರಿಗೆ ಮುಕ್ತಿ ಪಥವ ತೋರ್ವನಾ 1 ವಿಷವ ಮೆದ್ದು ಹರಿಕೃಪೆಯಿಂ ಜೀರ್ಣಿಸಿದವನಾ ಆಶೀರ್ವದಿಸಿ ಖಂಡೆರಾಯನುದ್ಧರಿಸಿದವನಾ 2 ವರಭೂಸುರರಾಡಿದ ನಿಂದೆಯನು ನುಡಿಯನಾ ತ್ವರದಿ ಕೇಳಿ ತೋರಿದನು ಇವನು ಸೂರ್ಯನಾ 3 ಕೊಡು ಭಕುತಿಯನು ನಿನ್ನೊಳು ಗುರುಸತ್ಯಬೋಧನೆ ಬಿಡಿಸೊ ನಿನ್ನ ಅಡಿಗೆ ಕಟ್ಟಿಕೊಳೈ ಕೊರಳನೆ 4 ಹರಿವಾಯುಗಳಲಿ ಕೊಡು ನೀ ನಿಜ ಭಕುತಿಯನೆ ವರದ ಶ್ರೀ ಹನುಮೇಶವಿಠಲನಡಿ ಸೇವಕನೇ 5
--------------
ಹನುಮೇಶವಿಠಲ
(ಏ) ಮಧ್ವಾಚಾರ್ಯ ಇದು ನಿನಗೆ ಬಲು ಚಂದವಾಗಿದೇನೋ | ಬಾದರಾಯಣನ ಮೆಚ್ಚಿಸಿ ಸೇವೆ ಮಾಡಬೇ | ಕಾದರೂ ಮತ್ತಾವ ಪರಿಯಿಲ್ಲವೇ | ಭೋದವಾಗದಂತೆ ಇದ್ದದ್ದೇನು ಬಗೆ 1 ಸಂಪುಟಾಕಾರವನು ಧರಿಸಿ ಅಲಂಕಾರ | ಸಂಪತ್ತಿನಿಂದ ಯತಿಗಳ ಕೈಯ್ಯಲಿ | ಸೊಂಪಾಗಿ ಮಿಗೆ ಪೂಜೆ ಕೊಳುತ ಪೊಗಳಿದ ಜನಕೆ | ತಂಪಾಗಿ ಗುರು ಶ್ರೀ ಮದಾಚಾಯರ್ಸ 2 ಪೆಟ್ಟಿಗೆಯಂದದಲಿ ಒಪ್ಪುವನೆಂದದಕೆ | ದಿಟ್ಟವಾಯಿತು ದಾಸರು ನುಡಿದುದು | ವಿಷ್ಣುತೀರ್ಥರಿಂದ ಆರಿಸಿ ಬಂದ | ವಿಜಯವಿಠ್ಠಲ ವೇದ | ವ್ಯಾಸನಂಘ್ರಿವಾರಿಜ ಮಧುಪಾ3
--------------
ವಿಜಯದಾಸ
ಅತ್ಯಾಸೆಪಡಬೇಡ ಅಸ್ಥಿರ ಸಂಸಾರ ಮತ್ತನಾಗದಿರೆಲವೊ ಪ ವೆತ್ಯಸ್ತ ಸ್ಥಿತಿಯಿಂದಾನಿತ್ಯಾ ಶರೀರವಿದು ಅ.ಪ ಜನರಾಡುವುದು ಕೇಳಿ ಮನಕೆ ಬಂದುದ ಕೋರಿ ಅನುಮಾನ ಚಿತ್ತನಾಗಿ ವನಿತೆಯರ ಬಲೆಯೊಳು ಸಿಲುಕಿ ಮೋಹಭ್ರಾಂತಿ ವಶನಾಗಿ ಧರ್ಮಾಧರ್ಮಗಳ ತಿಳಿಯದೆ 1 ಹೇಯ ಸುಖವ ಬಯಸಿ ಆಯಾಸ ಪಡುತಲಿ ಬಾಯ ಬಿಡುತ ಸತತ ನೋಯುತಾ ನುಡಿಯುತ ಕ್ರೋಧ ಲೋಭದಿ ಮುಳುಗಿ ನಾಯಿಯಂದದಿ ತಿರಿಗಿ ನಾನಾ ವಿಧದಲಿ 2 ದಾನಧರ್ಮಗಳಿಲ್ಲ ಜ್ಞಾನಸತ್ಯಗಳಿಲ್ಲ ಧ್ಯಾನವು ಮೊದಲೇ ಇಲ್ಲ ಮಾನಾಭಿಮಾನ ಅಜ್ಞಾನದಿ ಮುಳುಗಿ 3 ಪರರೊಡೆವೆಯ ತಂದು ಒಡಲ ಹೊರೆಯುತಲ- ನೆರೆಹೊರೆ ನೋಡಿ ಅವರಂತೆ ನಾನಿರಬೇಕೆಂದ 4 ಕರ್ಮ ಭಿನ್ನಇವರಿಗೆಲ್ಲ ಮುನ್ನಿನ ಕರ್ಮದಿ ಫಲ ಬೆನ್ನಬಿಡದು ಎಂದು ಪೇಳುವ ಶಾಸ್ತ್ರಗ- ಳನ್ನು ನಂಬದಲೆ ನಿನ್ನನ್ನೆ ನೀ ಪೊಗಳಿ ಕೊಂಡು 5 ನ್ಯಾಯಾರ್ಜಿತ ದ್ರವ್ಯದಿಂದ ಕಾರ್ಯಗಳವು- ಪಾಯದಂದಲಿ ನಡೆಸಿ ತಾಯಿ ಮಕ್ಕಳ ನೋಡುವಂತೆ ದೀನರಿಗೆ ಸ- ಹಾಯ ಮಾಡುತ ಜ್ಞಾನಿಗಳ ಸೇವಿಸುತಿಹರು 6 ಪೊರೆವೊ ಭಾರಕರ್ತ ಗುರುರಾಮವಿಠಲ ತಾ ಶರಣಾದವರಿಗೆ ಭಯವೇನು ಸ್ವಾಮಿ ಸರ್ವರ ಪಾಲಿಸುವನು ನಿನ್ನನು ಮಾತ್ರ ಬಿಡುವನೆ 7
--------------
ಗುರುರಾಮವಿಠಲ
ಅನುದಿನ ಚರಣಕಮಲವ ತೋರಮ್ಮ ನಮ್ಮಮ್ಮಾ ಪ. ಮನೋಭಿಮಾನಿಯೇ ಎನ್ನವಗುಣಗಳೆಣಿಸದೆ ತ್ವರಿತದಿ ಬಂದು ಮುತ್ತಿನ ಗದ್ದಿಗೆಯನೇರಮ್ಮ ನಮ್ಮಮ್ಮಾ ಅ.ಪ. ದಕ್ಷಕುವರಿ ದಾಕ್ಷಾಯಿಣಿ ಗೌರಿ ಪಕ್ಷಿವಾಹನನ ಸೋದರಿ ಈಕ್ಷಿಸುತಿರುವೆನು ಉಪೇಕ್ಷಿಸದೆ ಎನ್ನ ರಕ್ಷಿಸಿ ಕಾಯೆ ಪಾರ್ವತಿ ತಾಯೆ 1 ಶಂಭುದೇವನ ರಾಣಿ ಹೃದಯಾಂಬರದೊಳು ನಿಂದು ಅಂಬರ ಪೂಜಿತೆ ನಂಬಿದ ಭಕ್ತರ ಪೊರೆವ ಸದ್ಗುಣ ಚರಿತೆ 2 ಗೆಜ್ಜೆ ಪಾದಗಳಿಂದ ಘಲ್ ಘಲ್ ಎನುತ ಬಾರಮ್ಮ ಹೆಜ್ಜೆಯನಿಡುತ ಮುಗುಳ್ನಗೆ ನಗುತ ಬಾರಮ್ಮ ಸುಜ್ಞಾನ ಮತಿಯಿತ್ತು ಕಾಯುವ ತಾಯಿ ಬಾರಮ್ಮ 3 ಕಂಚುಕ ಪಟ್ಟೆಯ ಪದಕ ಕಟ್ಟಿದ ಕಠಾಣೆ ಮುತ್ತಿನಮೂಗುತಿ ಪಚ್ಚೆಯ ಓಲೆ ಇಟ್ಟ ಕಸ್ತೂರಿತಿಲಕ ಕೆತ್ತಿದ ಕಿರೀಟ ಹೊಳೆಯುತ 4 ಬೇಡಿಕೊಂಬೆವೆ ತಾಯೆ ನೀ ಎನ್ನ ಆಪತ್ತು ಪರಿಹರಿಸಿ ಪಾಡಿ ಪೊಗಳಿ ಕೊಂಡಾಡುವೆ ಕಾಯೆ ತಾಯೆ ಬೇಡಿದ ವರಗಳ ರುಕ್ಮಿಣೀಶವಿಠಲನ ಕರುಣದೆ ನೀಡೆ ತಾಯೆ 5
--------------
ಗುಂಡಮ್ಮ
ಅನುಭಾವದ ನಿಗೂಢ ಮುಂಡಿಗೆಗಳು ಎರಡು ಸಾವಿರದ ಜಿಹ್ವೆಯುರಗ ಪೊಗಳಿದ ಹರಿಯೆ ಪ ಪರಂಜ್ಯೋತಿ ಪರಬ್ರಹ್ಮ ಪರಮಪುರುಷ ಓಂ ಎಂದುಅ ಹುಟ್ಟು ಬಣ್ಣ ಒಂದರೊಳಗೆ ಕಟ್ಟು ಬಣ್ಣ ಒಂದು ಮಾಡಿಕಟ್ಟಿ ಕುಟ್ಟಿ ಕಾಸಿ ಕರಗಿ ಮೂರು ಬಣ್ಣವಮುಟ್ಟಿ ಮಾಡಿ ನಾಲ್ಕು ಬಣ್ಣ ಒಪ್ಪವಿಕ್ಕಿ ಅದರ ಮೇಲೆಗಟ್ಟಿಯಾಗಿ ನೆಲೆಗೆ ನಿಂತವೈದು ಬಣ್ಣವುಸೃಷ್ಟಿಯಾರೇಳು ಬಣ್ಣ ಎಂಟು ಒಂಬತ್ತರೊಳಗೆ ನೆಟ್ಟನೆ ಹತ್ತು ಹನ್ನೊಂದು ಹನ್ನೆರಡು ತೋರುವಘಟ್ಟಿ ಹದಿಮೂರು ಹದಿನಾಲ್ಕು ಹದಿನೈದರಿಂದಕಟ್ಟಕಡೆಗೆ ನಿಂದ ಹದಿನಾರು ಬಣ್ಣ ಓಂ ಎಂದು 1 ಭದ್ರಕಂಬ ಒಂದರೊಳಗೆ ಉದ್ದವಾದ ಕೊನೆಯ ಮೇಲೆಸಿದ್ಧಿಯಾದ ಚಿಗುರು ಹೂವು ಕಾಯಿ ಹಣ್ಣನುಮೆದ್ದು ಹೋದ ಪಕ್ಷಿ ಬಂದು ಹದ್ದು ಹಿಡಿದು ಉದ್ದಕೆತ್ತಿಬುದ್ಧೀ ಹೀನನಾಗಿ ಬೆಳೆದು ಧರೆಗೆ ಬಿದ್ದುದಕದ್ದು ಮತ್ತೊಬ್ದ ತರುತಿದ್ದ ದಾರಿಯನ್ನು ಕಟ್ಟಿಒದ್ದು ಹಿಡಿದು ಗುದ್ದಿ ನೂಕಿ ಸೆಳೆದುಕೊಂಡುದ ಸಾಧ್ಯವಾಯಿತೆಂದು ತನ್ನ ಮನೆಗೆ ತಂದು ಸತಿಗೆ ಕೊಡಲುಶುದ್ಧವಾಗಿ ಸುಟ್ಟು ಮಡಗಲೆದ್ದು ಹಾರಿ ಹೋಯಿತೆಂದು 2 ತಿಳಿಯುತಿಹುದು ತಿಳಿಯದಿಹುದು ಬೆಳೆಯುತಿಹುದು ಬೆಳೆಯದಿಹುದುಹೊಳೆಯುತಿಹುದು ಹೊಳೆಯದಿಹುದು ಸುಳಿಯದಿಹುದುತಿಳಿದು ನಾಲ್ಕು ದಿಕ್ಕಿನಲ್ಲಿ ಹೊಳೆದು ಎಂಟು ದಿಕ್ಕ ತೋರಿಬಳಸಿ ಸುತ್ತ ತಿರುಗುತಿಹುದು ಬಳಲಿ ಬಳಲದೆಒಳಗೆ ಹೊರಗೆ ತೋರುತಿಹುದು ಅಳಿದ ವಸ್ತು ಮುಟ್ಟದಿಹುದುಕಳವಳಂಗೆ ಎರಡು ಗುಣವ ತೋರಿ ಮೆರೆವುದುತಿಳಿದು ನೋಡೆ ಕೈಗೆ ಸಿಕ್ಕಿ ಒಳಗೆ ಬಯಲ ತೋರುತಿಹುದುಪ್ರಣವ ಒಂದು ಕೋಟಿ ನುಂಗಿ ಉಗುಳಿತಿಪ್ಪುದೋಂ ಎಂದು 3 ತತ್ತಿಯಾದ ಬ್ರಹ್ಮನೀಗೆ ದಿಕ್ಕು ಅಖಿಲಾಂಡವೆಲ್ಲಹೆತ್ತ ತಂದೆಗಾದವನೆ ನಿತ್ಯವುಳ್ಳವ ಸತ್ತು ಹುಟ್ಟಲಿಲ್ಲವೆಂದು ಅತ್ತ ನೋಡಿ ಇತ್ತ ತಿರುಗೆ ತತ್ತಿಯೊಳಗೆ ಬೆಳೆದವೆಲ್ಲ ಸತ್ತವೆನ್ನುತಸತ್ತು ಹೋದ ದೀಪದಂತೆ ಉತ್ಪತ್ತಿಯಾದವಗೆಸತ್ತು ಸತ್ತು ಹುಟ್ಟುವುದು ತಪ್ಪದೆನ್ನುತಎತ್ತಿ ಜಗವ ನುಂಗಿ ತನ್ನ ಹೊಟ್ಟೆಯೊಳಿಂಬಿಟ್ಠುಕೊಂಡುಕತ್ತಲೆಗೆ ಕರ್ತೃವೆಂಬ ಜಗವಸತ್ಯ ಕೇಳಿರೋ ಎಂದು | 4 ಪಂಕಜನ ತಾಯಿ ಸುತನ ಅಂಕದಲ್ಲಿ ಹುಟ್ಟಿ ಜಗವಮಂಕು ಮಾಡುತಿಪ್ಪ ಮಾಯೆ ಹತ್ತು ಶಂಕೆಯಶಂಕೆಕಾರ ಶತ್ರುಮಿತ್ರರಿಬ್ಬರಿಗಾಧಾರವೆಂದುಕುಂಕರದಿಪ್ಪತ್ತೊಂದು ಕೋಟಿ ಪಾಶವುಓಂಕಾರದೊಳಗೆ ಪುಟ್ಟಿ ಓಂಕಾರದೊಳಗೆ ಬೆಳೆದುಓಂಕಾರದೀ ಜಗವ ಎತ್ತಿ ಮೆರೆವುದೋ ಎಂದು 5 ಪ್ರಣವ ಒಂದರೊಳಗೆ ಒಂದು ಕೋಟಿಯನ್ನು ತೋರಿ ಪಡೆಯ (ಕಡೆಯ ?)ಕುಣಿಕೆಯೊಳಗೆ ಎಂಟು ಕೋಟಿಯನ್ನು ತೋರುತತೃಣವ ಹಿಡಿದು ಬರೆಯುತಿಪ್ಪ ಒಂದು ರೋಮ ಕೂಪದಲ್ಲಿಕುಣಿಕೆಯೊಳಗೆ ಜಗದ ಜೀವರಾಶಿ ಎಲ್ಲವಸುಳಿದ ವಿಷ್ಣು ಬ್ರಹ್ಮನೆಂಬ ಹಣೆಯ ಕಣ್ಣ ರುದ್ರನೆಂಬ ಮಣೆಯಗಾರರೆಪ್ಪತ್ತೇಳು ಕೋಟಿ ಸಂಖ್ಯೆಯುಹಣೆಯ ಕಾಣದವರ ಕೀಲಿನೆಣಿಕೆಯಲ್ಲಿ ಹೊಲಬುದಪ್ಪಿಪ್ರಣವ ಒಂದು ಕೇಳುತಿಪ್ಪ ಪರಬ್ರಹ್ಮ ಓಂ ಎಂದು 6 ಸುಳಿ ಕಮಲ ಪಾದ ಮೇಲೆ ಮಸ್ತಕವುತೊಳಲಿ ಕಾಣೆ ವೇದವೆಂದು ಬಳಲಿ ಬಳಲದೆಪ್ರಳಯ ಕೋಟಿ ಪ್ರಾಣಿಗಳಿಗೆ ಹೊಳವುಗಾಣಲೀಸದಂತೆಬೆಳೆದು ಹೋಗುವ ಗತಿಯೆಂಬುದಿತ್ತಲರಿಸುತಕಳವಿನವರು ಬಂದು ಇಳೆಯ ಮೇಲೆ ನಿಂದುಬಿಳಿಗಿರಿವಾಸ ತಿರುಮಲೇಶ ಆದಿಕೇಶವ ತಾನೆಯೆಂದು 7
--------------
ಕನಕದಾಸ
ಆತನ ಪಾಡುವೆ ಅನವರತಪ್ರೀತಿಯಿಂದ ಭಾಗವತರ ಸಲಹುವ ದೇವನೆಂದು ಪ ಆವಾತನ ಕೀರ್ತಿಯ ಕಳೆ ಪೆರೆಯು..........ಯಿಂದ ಶುಕನಾರ ಪೊಗಳಿದನು ?ಆವಗೆ ಬಲೀಂದ್ರನು ಆರ......................................ವಿದನಯ್ಯಾ ? 1 ಕಲು ತರುಣಿಯ ಮಾಡಿದ ಪಾದವಾರದುಜಲಜ ಸಂಭವನ ಪೆತ್ತವನಾರು ?ಕಲಿಯುಗದ ಜನರಿಗೆ ಆರ ನಾಮವು ಗತಿಇಳೆಯ ಭಾರವನುಳುಹಿದನಾರಯ್ಯ2 ದ್ರುಪದನ ಮಗಳ ಅಭಿಮಾನ ರಕ್ಷಕನಾರುನೃಪ ಧರ್ಮನೆನೆಸಿಕೊಂಡವನಾರು ?ಕೃಪೆಯೊಳು ವಿದುರನ ಮನೆಯಲುಂಡವನಾರುಆಪತ್ಕಾಲದಿ ಗಜೇಂದ್ರನ ಸಲಹಿದರಾರು ? 3 ಅತಿ ಸ್ನೇಹದಿಂದ ಅರ್ಜುನಗೆ ಸಾರಥಿಯಾಗಿರಥವ ನಡೆಸಿದವನಾರು ?ಪೃಥಿವಿಯಲಿ....................................................................................................4
--------------
ಕನಕದಾಸ
ಇಂಥಾ ಪ್ರಭುವ ಕಾಣೆನೋ ಈಜಗದೊಳ- ಗಿಂಥಾ ಪ್ರಭುವ ಕಾಣೆನೋ ಪ ಇಂಥಾ ಪ್ರಭುವ ಕಾಣೆ ಶಾಂತ ಮೂರುತಿ ಜಗ- ದಂತರಂಗನು ಲಕ್ಷ್ಮೀಕಾಂತ ಸರ್ವಾಂತರ್ಯಾಮಿ ಅ.ಪ. ಬೇಡಿದಿಷ್ಟವ ಕೊಡುವ-ಭಕ್ತರ ತಪ್ಪು ನೋಡದೆ ಬಂದು ಪೊರೆವ ಗಾಡಿಕಾರನು ಗರುಡಾ - ರೂಢ್ಯ ಗುಣವಂತ ಮಹಾ ಪ್ರೌಢ ಪ್ರತಾಪಿ ಜಗದಿ ಪಾಡಿ ಪೊಗಳಿ ಕೊಂಡಾಡುವವರ ಮುಂ- ಕೇಡಿಗನೇ ನಾಡಾಡಿಗಳಂದದಿ ಈಡುಂಟೇನೋ ಈ ವೆಂಕಟಗೆ-ಇಂಥಾ 1 ನಿಗಮ ತತಿಗಳರಿಯದ- ನೀರಜಭವಾ- ಸುರರು ಕಾಣದ ಜಗದೊಡೆಯನು ಭಕ್ತ- ರುಗಳಿಗೊಲಿದು ತ್ರಿಸ್ಥಾ- ನಗಳತ್ಯಜಿಸಿ ಕಲಿ ಅಗಣಿತ ಸುಗುಣಾರ್ಣವ- ಶ್ರೀ ಹರಿಯೇ ಜಗದೊಳು ಸೇವಾದಿಗಳನು ಕೊಳುತಿಹ ಅಘಹರ ಮೋಕ್ಷಾದಿಗಳನೆ ನೀಡುತ ನಗೆಮೊಗದಲಿ ಚನ್ನಿಗನಿಂತಹನೊ - ಇಂಥಾ 2 ಭಾರ್ಗವಿ ಭೂಮಿವಲ್ಲಭ - ಭವದೂರ ಭಕ್ತ ವರ್ಗಕೆ ಇವಸುಲಭ ನಿರ್ಗುಣ ನಿರ್ವಿಕಾರ- ಸ್ವರ್ಗದೈಶ್ವರ್ಯದಿಂದಾ- ನಘ್ರ್ಯದ ಪದವನೀವ ದೀರ್ಘಾಯುವಂತನೀತ ಭಾರ್ಗವರಾಮ ನೃಪರ್ಗಳನೆಲ್ಲರ - ಣಾಗ್ರದಿ ಜಯಿಸಿದ ಉಗ್ರಪ್ರತಾಪಿ ಅಗ್ರಗಣ್ಯ ಸದ್ವಿಗ್ರಹ ಶ್ರೀಮದ - ನುಗ್ರಹ ಮಾಡುತ ದುರ್ಗುಣ ಕಳೆವ 3 ನಿರ್ದುಃಖಾನಂದ ಭರಿತಾ - ನಿರ್ವಾಣ ಸುಖಕೆ ಆದ್ರ್ರಹೃದಯ ತೋರುತ ನಿದ್ರೆಯೊಳಿದ್ದವಗು - ಪದ್ರಬಡಿಸಿ ದೈತ್ಯ ಕ್ಷುದ್ರನಂಕೊಲಿಸಿ ಸು ಭದ್ರ ಜಗಕೆ ಇತ್ತ ನಿರ್ದಯನಲ್ಲ ಸಮುದ್ರಶಯನ ಗೋ- ವರ್ಧನ ಗಿರಿಯನು ಉದ್ಧರಿಸಿದ ಯದು ವರ್ಧನ ದನುಜ ವಿಮರ್ದನ ಲಕ್ಷ್ಮೀ ಜ - ನಾರ್ದನ ವರ ಶೇಷಾದ್ರಿ ನಿವಾಸ - ಇಂಥಾ 4 ವಾರಿಜಾಸನ ಮನೋಜಾ ಈರ್ವರು ಸುತರು ಸುರತರಂಗಿಣಿ ತನುಜಾ ಪುರವೇ ವೈಕುಂಠ ಇಂದ್ರಾದ್ಯ ಮರರು ಕಿಂಕರರು ಗರುಡವಾಹನ ಉರಗ ಪರಿಯಂಕ ನಿಷ್ಕಳಂಕ ಸರಿದೊರೆಗಳ ನಾನರಿಯೆನು ವೆಂಕಟ ಗಿರಿಯಲಿ ಇರುತಿಹ ಕರುಣೆಗಳರಸನೆ ಮರೆಯದೆ ಸಲಹೋ ಶರಣಾಗತರನು ಸಿರಿ ವಿಜಯವಿಠ್ಠಲಾ - ಇಂಥಾ 5
--------------
ವಿಜಯದಾಸ
ಉದೋ ಉದೋ ಉದೋ ಉದೋ ಉದೋ ಯನ್ನಲು ಉದ ಮುದೋ ಪ ತಮ್ಮನು ಪೊಗಳಿ ಪಾಲೆನೆ ಅಮ್ಮೊಮ್ಮಾ | ಮೊಮ್ಮನ ಪಡೆದಿಹ ಜಗದಯ್ಯಾ | ಸುಮ್ಮನ ಹೊಂದಿಹ ಬಾಲಕ ನಿಮ್ಮಾ | ಝಮ್ಮನೆ ಸ್ಮರಣೆಗೆ ಬಾನಮ್ಮಾ 1 ಛಂದ ವಿವೇಕದ ಚೌಡಕಿ ಹಿಡಿದು | ಒಂದೇ ನಿಷ್ಠೆಯ ತಂತಿಯ ಬಿಗಿದು | ಸುಂದರ ಭಕ್ತಿಯ ರಂಗಕ ಬಂದು | ಗೊಂದಳ ಹಾಕುವೆ ನಾನಿಂದು 2 ನಾಮಾವಳಿ ಕವಡೆಯ ಸರಥರಿಸಿ | ಪ್ರೇಮದ ಬಂಡಾರವ ಸುರಿಸಿ | ಆಮಹಾಜ್ಞಾನದ ಹೊತ್ತ ಪ್ರಜ್ವಲಿಸಿ | ನಾಮಗೆಜ್ಜಿಲಿ ಕುಣಿವೆನು ಘಲಿಸಿ 3 ಆವನಿಯ ಸುಜನರ ಮೊರೆಯನು ಕೇಳಿ | ಪರಿ ತಾಳಿ | ಭವ ಮಹಿಷಾಸುರ ನಸುವನು ಹೋಳಿ | ಜವದಲಿ ಮಾಡಿದೆ ತುನುಶೀಳಿ 4 ಮುನಿ ಮಾನಸ ತುಳಜಾಪೂರ ಗೇಹಿ | ಖೂನದೊರಿಸೀ ನಿಜ ಸೋಹೀ | ಏನೇ ನರಿಯದವನೆಂದರಿತು ಕಾಯೀ | ಘನಗುರು ಮಹಿಪತಿ ವರದಾಯಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಂತಹದೋ ನಿನ್ನ ಸಂದುರಶನಾ | ಕಂತುವಿನ ಜನಕ ಉಡಪಿ ಕೃಷ್ಣರಾಯಾ ಪ ಓದನ ತಿಂದೆ | ಪರರ ದ್ರವ್ಯದ ತಂದೆ | ಪರ ಸತಿಯರಿಗೆ ನೊಂದೆ | ಗುರು ಹಿರಿಯರ ನಿಂದೆ | ಹಿರದಾಗಾಡಿದೆ ಮುಂದೆ | ಬರುತಿಪ್ಪ ಪಾಪದಿಂದೆ | ಪರಿಯಾಗಿ ಈ ಬಂದೆ | ಅರುಹು ತೊರದೆ ಬಂದೆ | ಕರುಣಿಸು ಜಗದ ತಂದೆ 1 ಸುಜನರ ಗುಣವ ಹಳಿದೆ | ಕುಜನರ ಸಂಗದಲಿ ಬೆಳಿದೆ | ಭಜನೆಗೆÀಟ್ಟು ಸುಳಿದೆ | ಪ್ರಜರನು ಪೊಗಳಿದೆ | ವೃಜ ಪುಣ್ಯಕೋಶ ಕಳಿದೆ | ಋಜುಮಾರ್ಗವ ತೊರದುಳಿದೆ | ರಜನಿಚರ ಮತಿಗಳಿದೆ | ವಿಜಯ ವಾರ್ತೆಗೆ ಮುಳಿದೆ | ತ್ರಿಜಗಪತಿ ಕೇಳಿದೆ 2 ಹರಿವಾಸರವ ಬಿಟ್ಟೆ | ದುರುಳರಿಗೆ ಧನ ಕೊಟ್ಟೆ | ಹರಿಭಕ್ತರ ತೊರೆದು ಕೆಟ್ಟೆ | ಹರಿಶ್ರವಣ ಬಚ್ಚಿಟ್ಟೆ | ಪರಮ ವ್ರತವ ಮೆಟ್ಟೆ | ಹರುಷದಲ್ಲಿಗೆ ಮನಮುಟ್ಟಿ | ಬಟ್ಟೆ | ವಿರಕುತಿಯನು ಬಿಟ್ಟೆ | ದುರಿತಕ್ಕೆ ಗುರುತಿಟ್ಟೆ | ಬಟ್ಟೆ 3 ಜ್ಞಾನವೆಂಬೋದೇ ಇಲ್ಲಾ | ಏನು ಪೇಳಲಿ ಸೊಲ್ಲಾ | ನೀನೆಂಬೋದಿಲ್ಲವಲ್ಲಾ | ಹಾನಿ ವೃದ್ದಿಗಳೆಲ್ಲಾ | ನಾನುಂಟೆ ಎಲ್ಲ ಸಲ್ಲಾ | ದಾನಾದೆ ಸತತ ಖುಲ್ಲಾ | ತಾ ನುಡಿಗೆ ಸೋತು ಚಿಲ್ಲಿ | ರಾನಡತಿ ಸಿರಿನಲ್ಲಾ | ನಾ ನಡದೆ ನೀ ಬಲ್ಲಾ | ದೇ ನೋಡು ಪ್ರತಿ ಮಲ್ಲಾ 4 ಅಪರಾಧಿ ನಾನಯ್ಯ | ಅಪವಾದದವನಯ್ಯ | ಕೃಪಣದಿಂದೆನ್ನ ಕಾಯಾ | ಉಪಜಯವಾಯಿತು ಪ್ರೀಯಾ | ಸ್ವಪನದಿ ಪುಣ್ಯ ಸಹಾಯಾ | ಲಪಮಾಡಲಿಲ್ಲ ಜೀಯಾ | ಕೃಪೆಯಲ್ಲಿ ಪಿಡಿ ಕೈಯಾ | ವಿಜಯವಿಠ್ಠಲರೇಯಾ | ಗುಪುತವಾದುದುಪಾಯಾ | ತಪಸಿಗಳ ಮನೋಜಯಾ 5
--------------
ವಿಜಯದಾಸ
ಎಂದಿಗೆ ನೀ ಕರುಣಿಸುವಿ ಸುಂದರಾಂಗ ಎನ್ನೊಳು ಕುಂದಿ ಪೋದೆನಲ್ಲೊ ಬೇಗ ಬಂದು ಕಾಯೊ ಕರುಣಾಳು ಪ. ಧರ್ಮ ಕರ್ಮಗಳು ಮಾಳ್ಪ ಮರ್ಮವರಿಯದಿದ್ದರು ಭರ್ಮದಾಶೆಗಾಗಿ ಹೀನ ಕರ್ಮದೊಳಗೆ ಬಿದ್ದರು ದುರ್ಮದಾಂಧರನು ಗೆಲುವ ನಿರ್ಮಲ ಚಿದಾತ್ಮ ನಿನ್ನ ಹಮ್ರ್ಯದ ಮುಂದೊದರಿ ಸರ್ವಶರ್ಮಪೊಂದಿಚ್ಛಿಸುವೆನು 1 ಜೀಯ ನಿನ್ನ ಪೊಗಳಿ ಪಾಡುವಾಯವಿರಲು ಸಾಕಯ್ಯ ರಾಯರೊಲವು ತನ್ನಂತೆ ನಿರಾಯಾಸದಿಂದಹುದೈಯ್ಯ ವಾಯುವೀಯ ಜನರ ಕೂಡಿ ಮಾಯ ಗೆಲಲು ಮಾನವೀಯ ಕಾಯವನ್ನು ನೋಯದಂತೆ ಕಾಯೊ ಸಕಲದಾಯಕಾರಿ 2 ನಿತ್ಯಾನಂದ ನಿನ್ನ ಪಾಡಿ ಹೊತ್ತ ಕಳೆವ ಕಾರ್ಯಕ್ಕೆ ಒತ್ತಿ ಬರುವ ವಿಘ್ನಬಾಧೆ ಹತ್ತದಂತೆ ಓಡಿಸು ಸತ್ಯರಮಣ ಶರಣ ಪುರುಷೋತ್ತಮ ಶ್ರೀ ವೆಂಕಟೇಶ ಚಿತ್ತದಲ್ಲಿ ನಿನ್ನ ದಿವ್ಯ ಮೂರ್ತಿದೋರೊ ಮರಿಯದಿರು 3
--------------
ತುಪಾಕಿ ವೆಂಕಟರಮಣಾಚಾರ್ಯ
ಎಂದು ಕಾಂಬೆನು ಎನ್ನ ಸಲಹುವಬಂಧುಬಳಗ ನಮ್ಮಪ್ಪನ ತಿರುಪತಿಲಿಪ್ಪನವರಾಹ ತಿಮ್ಮಪ್ಪನ ಪ. ದಂಡಿಗೆಯ ಬಾರಿಸುತ ಶ್ರುತಿಗೂಡಿ-ಕೊಂಡು ಪಾಡುತ ಮನದಿ ಲೋಲ್ಯಾಡುತಕುಣಿಕುಣಿದಾಡುತ 1 ಬೆಟ್ಟದೊಡೆಯನ ಚರಣಕಮಲಕೆ ಶಿರ-ವಿಟ್ಟು ಕರಗಳ ಮುಗಿವೆ ನಾ ಕವಕವನಗುವೆ ನಾಎನ್ನೊಡೆಯನ ಪೊಗಳಿ ನಾ2 ಸ್ವಾಮಿಪುಷ್ಕರಿಣಿಯಲ್ಲಿ ಸ್ನಾನ ನೇಮ-ವ ಮಾಡುವೆ ಪುಣ್ಯಕ್ಷೇತ್ರವ ನೋಡುವೆಹಯವದನನ ಕೊಂಡಾಡುವೆ 3
--------------
ವಾದಿರಾಜ
ಎಷ್ಟು ಪೊಗಳಿದರೇನೀ ಭ್ರಷ್ಟಮಾನವರು ಪಾದ ಪ ಸ್ವಾಭಿಮಾನ ನೀಗಿ ದೇಹಾಭಿಮಾನ ತೊರೆಯದೆ ಪ್ರಭುನಿನ್ನ ನಿಜಲೀಲೆ ಸೊಬಗು ತಿಳಿಯುವುದೆ 1 ಭ್ರಷ್ಟ ಭ್ರಾಂತಿಗಳಳಿದು ದುಷ್ಟನಡೆ ನೀಗದೆ ಶಿಷ್ಟರೊಡೆಯ ನಿನ್ನ ನಿಜಗುಟ್ಟು ತಿಳಿಯುವುದೆ 2 ವಿಷಯವಾಸನೆ ನೀಗಿ ಹಸನುಮಾಡದೆ ಮನವ ಶ್ರೀಶ ಶ್ರೀರಾಮ ನಿನ್ನ ದಾಸತ್ವಬಹುದೆ3
--------------
ರಾಮದಾಸರು
ಏನು ಪುಣ್ಯವೋ ಯಶೋದೆಯ ಪರೀಕ್ಷಿತರಾಯ ಯಾವ ಪುಣ್ಯವೋ ಯಶೋದೆಯ ಪ. ಚೆನ್ನಕೇಶವನ್ನ ತನ್ನ ಚಿಣ್ಣನೆಂದು ಮುದ್ದಿಸಿ ಬಣ್ಣಿಸಿ ಮೊಲೆಯನುಣ್ಣಿಸಿ ಚಿನ್ನದ ತೊಟ್ಟಿಲೊಳಿಟ್ಟು ತೂಗುವ 1 ಅಗಣಿತ ಬ್ರಹ್ಮಾಂಡಗಳ ತ- ನ್ನುದರದೊಳಡಗಿಸಿದನ ಮುಗುಳುನಗೆಯ ಮೊಗವ ನೋಡಿ ಮಗನೆಂದಾಡಿ ಪೊಗಳಿ ಪಾಡುವ 2 ಲಕ್ಷ್ಮೀನಾರಾಯಣನ ಪ್ರ- ತ್ಯಕ್ಷ ಬಾಲಲೀಲೆಯ ಚಕ್ಷುದಣಿಯೆ ನೋಡುತನ್ಯ- ಪೇಕ್ಷೆಯಿಲ್ಲದಿಹಳೊ ಅಹೋ3
--------------
ತುಪಾಕಿ ವೆಂಕಟರಮಣಾಚಾರ್ಯ
ಏನು ಪುಣ್ಯವೋ ಯಶೋದೆಯ ಪರೀಕ್ಷಿತರಾಯ ಯಾವ ಪುಣ್ಯವೋ ಯಶೋದೆಯ ಪ. ಚೆನ್ನಕೇಶವನ್ನ ತನ್ನ ಚಿಣ್ಣನೆಂದು ಮುದ್ದಿಸಿ ಬಣ್ಣಿಸಿ ಮೊಲೆಯನುಣ್ಣಿಸಿ ಚಿನ್ನದ ತೊಟ್ಟಿಲೊಳಿಟ್ಟು ತೂಗುವ1 ಅಗಣಿತ ಬ್ರಹ್ಮಾಂಡಗಳ ತ- ನ್ನುದರದೊಳಡಗಿಸಿದನ ಮುಗುಳುನಗೆಯ ಮೊಗವ ನೋಡಿ ಮಗನೆಂದಾಡಿ ಪೊಗಳಿ ಪಾಡುವ2 ಲಕ್ಷ್ಮೀನಾರಾಯಣನ ಪ್ರ- ತ್ಯಕ್ಷ ಬಾಲಲೀಲೆಯ ಚಕ್ಷುದಣಿಯೆ ನೋಡುತನ್ಯ- ಪೇಕ್ಷೆಯಿಲ್ಲದಿಹಳೊ ಅಹೋ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ