ಒಟ್ಟು 5 ಕಡೆಗಳಲ್ಲಿ , 5 ದಾಸರು , 5 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಾತುಮಾತಿಗೆ ಮರೆಯಬೇಡ ಸೀತಾರಾಮನ ಪ ಮಾತರಿಶ್ವನಾಥನು ಪ್ರೀತನಾಗುವ ಅ.ಪ. ಹನುಮ ತಾನು ಭಕ್ತಿಯಿಂದ ನೆನೆದು ಸುಖಿಸುತ ವನಜ ಸಂಭವ ಪದವಿ ಪೊಂದಿದ ಘನತರನ ಮಾತ 1 ಅಬಲೆಯನ್ನು ಕುಲಕೆ ತಂದ ಪ್ರಬಲನ ಮಾತ ಶಬರಿಯೆಂಬ ಭಕ್ತಳಿಗೆ ಅಭಯವಿತ್ತನ ಮಾತ 2 ಅಂಗಜವೈರಿ ಶ್ರೀ ಶಿವನು ಹಿಂಗದೆ ಭಜಿಪ ರಂಗೇಶವಿಠಲನೆಂಬುವ ಮಂಗಳನ ಮಾತ 3
--------------
ರಂಗೇಶವಿಠಲದಾಸರು
ಚಿತ್ತಜನೈಯ ಮಿತ್ರೆರಾಡಿದ ಉತ್ರಮನಸಿಗೆ ತಂದನು ಅವರ ಉತ್ರ ಮನಸಿಗೆ ತಂದನು ಮಿತ್ರೆ ದ್ರೌಪತಿ ಸುಭದ್ರೆ ಮುಯ್ಯವಇವತ್ತೆ ತಿರುಗಿಸಿರೆಂದನು ಪ. ಧನ್ಯ ಭಕ್ತರ ಮನೆಗ್ಹೋಗುವ ಎನ್ನ ಸನ್ಮತವೆಂದನುಮುನ್ನ ಆಲಶ್ಯವÀ ಮಾಡದೆಹೊನ್ನ ರಥ ಹೊರಗಿನ್ನು ಇಡಿಸೆಂದ1 ಕುಂತಿ ಮಕ್ಕಳು ಸಂತೋಷಿಸುವುದು ಎಂಥ ಹರುಷವಿದೆಂದನು ಎನಗ ಕಾಂತೆಯರೇರುವ ಕುದುರೆ ರಥಗಳು ಚಿಂತಾಮಣಿ ತಾ ಪಂಥವ ಗೆಲಿಸೆಂದ2 ಕಾತಿಲೆ ಐವರು ನೀತಿ ನೋಡಲು ಪ್ರೀತನಾಗುವೆÉನೆಂದನು ಭೂತಳದಿ ಕುಂತಿ ಜಾತರನ ನೋಡೋ ಆತುರದಿಒಂದೂ ಮಾತು ಸೊಗಸದು 3 ಮಾನಿನಿ 4 ಮೋದ ಸೂಸುತ 5
--------------
ಗಲಗಲಿಅವ್ವನವರು
ಧನ್ಯರಾದರು ಗುರುಗಳನು ಪೂಜಿಸುತ ಇನ್ನಿವರ ಪಾತಕವು ತೊಲಗಿತು ಜಗದಿ ಪ. ತಂದೆ ಮುದ್ದುಮೋಹನದಾಸ ರಾಯರನು ಚಂದದಿಂ ಸತಿಸಹಿತ ಕರೆತಂದು ಮನೆಗೆ ಮಂದರೋದ್ಧರನ ಪದಸೇವೆ ಇದು ಎಂದರಿತು ಮಂದಹಾಸದಲಿ ನಸುನಗುತ ಸದ್ಭಕ್ತರು 1 ಮಂಗಳೋದಕದಿಂದ ಮಜ್ಜನವಗೈಸುತಲಿ ಅಂಗಗಳನೊರೆಸುತಲಿ ನಾಮಗಳನ್ಹಚ್ಚಿ ರಂಗನಾಥನಿಗರ್ಪಿಸುತ ಪುಷ್ಪಹಾರವನ್ಹಾಕಿ ಶೃಂಗಾರವನೆಗೈದು ಶ್ರೀ ಗುರುಗಳನ್ನು 2 ಪಚ್ಚೆಕರ್ಪೂರ ಕೇಸರಿಯಿಂದ ಕೂಡಿದ ಅಚ್ಚ ಗಂಧವನ್ಹಚ್ಚಿ ಅಕ್ಷತೆಯನಿಟ್ಟು ಮಚ್ಛರೂಪಿಯ ನೆನೆದು ಪಾದಕಮಲವ ತೊಳೆದು ನಿಚ್ಚಳದ ಭಕ್ತಿಯಲಿ ನಿಜ ಭಕ್ತರೆಲ್ಲ 3 ಸತಿಸಹಿತ ಕುಳ್ಳಿರಿಸಿ ಗುರುಗಳನು ಪೀಠದಲ್ಲಿ ಅತಿಶಯದಿ ಕುಡಿಬಾಳೆ ಎಲೆಗಳನೆ ಹಾಕಿ ಮತಿಯಿಂದ ರಂಗೋಲೆಗಳನ್ಹಾಕಿ ಲವಣ ಸ- ಪರಿಯಂತ ಬಡಿಸುತಲಿ 4 ಅನ್ನಾದಿ ಸಕಲ ಷಡ್ರಸಗಳನೆ ಬಡಿಸುತ್ತ ಘನ್ನ ಮಹಿಮರಿಗೆ ಭಕ್ಷಾದಿಗಳ ಬಡಿಸಿ ಸನ್ನುತಿಸುತಲಿ ತೀರ್ಥ ಆಪೋಷನವನ್ಹಾಕಿ ಪನ್ನಗಶಯನನಿಗೆ ಅರ್ಪಿಸುತ ಮುದದಿ 5 ಘೃತಶರ್ಕರಾದಿಗಳನಡಿಗಡಿಗೆ ಬಡಿಸುತಲಿ ನುತಿಸಿ ಗಾನಗಳಿಂದ ಗುರುಮಹಿಮೆಯ ದಧಿ ಕ್ಷೀರದನ್ನಗಳನುಣಿಸುತಲಿ ಘೃತ ಕ್ಷೀರದಿಂದ ಕೈ ತೊಳೆದು ಸಂಭ್ರಮದಿ 6 ಯಾಲಕ್ಕಿ ಕರ್ಪೂರ ಮಿಳಿತ ವೀಳೆಯವನಿತ್ತು ವೇಳೆವೇಳೆಗೆ ತಪ್ಪು ಕ್ಷಮೆಯ ಬೇಡುತಲಿ ವ್ಯಾಳಶಯನಗರ್ಪಿಸುತ ಉಡಿಗೆ ತೊಡಿಗೆಗಳನಿತ್ತು ಮಾಲೆಹಾಕುತ ಆರತಿಯನೆತ್ತಿ ಮುದದಿ 7 ಹರಿಪ್ರೀತನಾಗುವನು ಗುರು ಹೃದಯದಲಿ ನಿಂತು ಕರ್ಮ ತೊಡಕುಗಳು ಸರಸಿಜಾಕ್ಷನು ತಾನು ಹರುಷಪಡುವನು ದಯದಿ ಕರಕರೆಯ ಸಂಸಾರ ಕಡಿದು ಗತಿ ಈವ 8 ಗುರುದ್ವಾರ ಒಲಿಯುವನು ಹರಿಯು ಮೋಕ್ಷಾರ್ಥಿಗಳ ಅರಘಳಿಗೆಯಗಲದಲೆ ಕಾಯುವನು ಸತತ ಗುರು ಅಂತರ್ಯಾಮಿ ಶ್ರೀ ಗೋಪಾಲಕೃಷ್ಣವಿಠ್ಠಲ ತ್ವರಿತದಿಂ ಹೃದಯದಲಿ ತೋರ್ವನು ತನ್ನ9
--------------
ಅಂಬಾಬಾಯಿ
ನಿನ್ನ ದಾಸನಿವನೇ ಅನನ್ಯ ರಕ್ಷಕÀನೇ ಪ ಅನ್ಯರಿಗಾಲ್ಪರಿಯದಂತೆ ಮನ್ನಿಸಿ ಪೊರಿ ಧ್ವರಿಯೇ ಅ.ಪ ಅನ್ಯನಲ್ಲವೊ ಸ್ವಾಮಿ ಮನ್ನಿಸೀ ಪೊರಿ ಪ್ರೇಮೀ ಘನ್ನವಿಪತ್ತಿವಗೆ ಬಹುಬನ್ನಬಡಿಸುತಿಹುದೋ 1 ಬಂದ ವಿಪತ್ತನ್ನು ಈಗ ಛಿಂದಿಸಿಬಿಡು ವೇಗ ಬಂದಾದುರಿತಗಳೆಲ್ಲ ನೀ ನಿಂದ್ರಾದಂತೆ ಮಾಳ್ಪದೋ 2 ಅನ್ಯರಿUಸಾಧ್ಯವಿದು ಎನ್ನ ಮನಕೆ ತೋರುತಿಹದು ನಿನ್ನನುಳಿದು ಕಾಯ್ವೊರಾರಾಪಾನ್ನ ಜನಪಾಲಾ 3 ಇನ್ನು ಸಂದೇಹವ್ಯಾಕೆ ಘನ್ನ ಮಹಿಮಬೇಡಿಕೊಂಬೆ ನಿನ್ನ ಸೇವಾ ನಿರುತವಿತ್ತು ಎನ್ನವಚನ ಲಾಲಿಸಯ್ಯಾ 4 ಭುವನದೊಳಗೆ ಬಪ್ಪೊದಯ್ಯ ತಾನೆ ಪ್ರೀತನಾಗುವನು 5
--------------
ಗುರುಜಗನ್ನಾಥದಾಸರು
ಮಾತುಮಾತಿಗೆ ಕೇಶವ ನಾರಾಯಣ ಮಾಧವÀ ಎನಬಾರದೆಪ. ಪ್ರಾತಃಕಾಲದಲೆದ್ದು ಪಾರ್ಥಸಾರಥಿಯನುಪ್ರೀತಿಲಿ ನೆನೆದರೆ ಪ್ರೀತನಾಗುವ ಹರಿಅ.ಪ. ಜಿಹ್ವೆ 1 ಜಿಹ್ವೆ 2 ಹೇಮಕಶ್ಯಪಸಂಭವ ಈ ಜಗಕೆಲ್ಲ ನಾಮವೆ ಗತಿಯೆನಲುವಾಮನ ನೀನೆಂದು ವಂದಿಸಿದವರಿಗೆ ಶ್ರೀಮದನಂತಸ್ವಾಮಿ ಹಯವದನನುಕಾಮಿತಫಲವೀವನು ಹೇ ಜಿಹ್ವೆ3
--------------
ವಾದಿರಾಜ