ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಾಧವ ರಕ್ಷಿಸು ಮಧುಸೂದನ ವೃಥಾ ಕ್ರೋಧವ್ಯಾಕೊ ಸುರ ಸೌಖ್ಯ ಸಾಧನ ಪ. ದೇಹದಲ್ಲಿ ಬಲ ಕುಂದುತಲಳುವೆ ಮುಂದ- ಕ್ಕಾಹ ರೀತಿ ತಿಳಿಯದೆ ಬಳಲುವೆ ಮೋಹ ಪಾಶದಲಿ ಸಿಕ್ಕಿ ನರಳುವೆ ಚಿತ್ಸಂ- ದೋಹ ಎಂದು ತವಪಾದ ನೆಳಲೀವೆ 1 ಯಾತಕಿಂತು ಸಾವಕಾಶ ಮಾಡುವಿ ದೀನ ನಾಥ ಬಹು ಪರಿಕಿಸಿ ನೋಡುವಿ ಪಾತಕಾಂಶವಿರಲು ನೀಡಾಡುವಿ ಎನ್ನ ಮಾತನ್ಯಾಕೆ ಮರೆತು ಮುಂದೋಡುವಿ 2 ನಿತ್ಯವಾದ ನಿನ್ನ ಸೇವೆ ನಡೆಸಲು ತಕ್ಕ ಶಕ್ತಿಯಿಲ್ಲ ಸ್ವರವನ್ನೆತ್ತರಿಸಲು ಒತ್ತಿ ಬಹ ವಿಧ ವಿಧ ಕೊರೆತವು ಗಂಡ ಕ್ಲೇಶ ಭರಿತವು 3 ಸಿರಿನಲ್ಲ ಹೀಗೆ ಭೃತ್ಯನನ್ನು ಬಿಡುವುದು ಥರವಲ್ಲ ದತ್ತ ಸ್ವಾತಂತ್ರ್ಯವರಿಯದ ಕ್ರಮವೆಲ್ಲ ತೀರಿ ಕತ್ತಲೆ ಮುಸುಕಿದಂತಿರುವುದಲ್ಲ 4 ಮಾಯಕ ಮೋಹದಿ ಸಿಕ್ಕಿ ನೊಂದೆನು ತಿಮ್ಮ ರಾಯ ಶೇಷ ಗಿರೀಶ ಕೇಳ್ಮುಂದೇನು ಬಾಯ ಬಿಟ್ಟು ಬಿರಿನುಡಿಯಂದೆನು ಲಕ್ಷ್ಮೀ ಪ್ರೀಯನೆಣಿಸದಿರದ ನೊಂದೆನು 5
--------------
ತುಪಾಕಿ ವೆಂಕಟರಮಣಾಚಾರ್ಯ