ಒಟ್ಟು 74 ಕಡೆಗಳಲ್ಲಿ , 31 ದಾಸರು , 69 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾಲಿಸೈ ತಿಮ್ಮಪ್ಪ ಪರಮ ಪಾವನನಪ್ಪ ಪ್ರಾಣದಾಸೆಗಳಿಂದ ಕಾಣ ಬರುವೆವೆಂದ ಆಣೆ ಭಾಷೆಯನೊಂದ ಮಾಣೆನೊ ಗೋವಿಂದ ಕಾಣಿಕೆಯ ಕರದಿಂದ ತ್ರಾಣ ಮೀರಿಯೆ ಬಂದ ಜಾಣರಾಯನೆ ಚಂದಗಾಣಿಸೊ ಶುಭದಿಂದ 1 ಸ್ವಾಮಿ ನೀನೇ ಹೊಣೆ ಭೂಮಿಯೊಳು ರಕ್ಷಣೆ ಕಾಮಿತ ಸೈರಣೆ ನಾಮಕಲ್ಪನೆಯು ಪ್ರೇಮವಾಗಿಹ (ಹಣೆ)1 ನಾಮದ ಮನ್ನಣೆ ಸೌಮನಸ್ಯದ ಮಾಣೆ ತಾಮಸಕ್ಕಿಡಿಗಾಣೆ 2 ಸೇವಕ ಸಂಕಲ್ಪ ಕಾವನಾಯಕನಿಪ್ಪ ಠಾವಿಗಾಗಿಯೇ ಪೋಪ ಭಾವದಿಯಿರುತಿಪ್ಪ ಜೀವನ ತಾನಪ್ಪ ದೇವ ಕಾಣು ಈ ಕಪ್ಪ ಈವೆನೆನುತ ಬಪ್ಪ ಭೂವರಾಹತಿಮ್ಮಪ್ಪ 3
--------------
ವರಹತಿಮ್ಮಪ್ಪ
ಅ ಸಾಗಿ ಬಾರೋ ಗುರುರಾಘವೇಂದ್ರರಾಯ | ವರ ಸತ್ಕಲುಗೇಯ ಪ ಕೂಗುತ ಕರೆಯುವ ಭಾಗವತರ ಮೊರೆಯ ಲಾಲಿಸೋ ಮುನಿವರ್ಯ ಅ.ಪ ಪಾವನಘನ ವೃಂದಾವನ ಮಂದಿರನೆ ಸದ್ಗುಣ ಬಂಧುರನೇ ಪಾವಮಾನಿಮತಶರಧಿ ಚಂದಿರನೇ ಧರಸಮ ಕಂದರನೇ ಛಾವಣಿಪುರ ಸುಜನಾವಳಿ ಕೋರಿಕೆಯ ಗರೆಯಲು ಶುಭಕಾಯ 1 ಶರಣಜನರು ಮೈಮರೆದು ಕರೆಯಲಾಗಿ ನಿಲ್ಲದೆ ವರಯೋಗಿ | ಭರದಿ ಬಂದು ಕರಪಿಡಿಯುವ ಧೊರೆ ನೀನು ಎಂದರೀತೆವು ಸುರಧೇನು ಗತಿದಾಯಕ ನೀನೆಂದು ಭಜಿಪೆವು ದಯಾಸಿಂಧು 2 ಶಾಮಸುಂದರನ ಪ್ರೇಮವ ಪಡೆದಾತ ಜಗದೊಳು ಪ್ರಖ್ಯಾತ ನೇಮದಿ ಭಜಿಪರ ಕಾಮಿತ ಕೊಡುವಾತ ದೈಶಿಕ ಕುಲನಾಥ ಹೇಮಶಯ್ಯ ಸುಕುಮಾರ ಮಮತೆಯಿಂದ ಮಂತ್ರಾಲಯದಿಂದ 3
--------------
ಶಾಮಸುಂದರ ವಿಠಲ
ದುರ್ಗಾಪರಮೇಶ್ವರಿ ಇಡುಪ್ರೇಮವೆನ್ನೊಳತಿ ಪ ಅಡಿಗೆರಗುವೆ ತಾಯೆ | ಉಡುರಾಜವದನೆಯೆ || ಜಡರುಹದಳ ನೇತ್ರೆ | ಉಡುಪತಿಧರಜಾಯೆ ಅ.ಪ ಸಿರಿಯರಸನ ಸಹೋ | ದರಿ ನಿನ್ನ ನಂಬಿದೆ || ಪರಮಪಾವನೆ ಗೌರಿ | ಪರಮೇಶ್ವರಿ ದೇವಿ 1 ಆದಿಶಕ್ತಿಯು ನೀನೆ | ಆದಿ ಮಾಯೆಯು ನೀನೆ || ಮೋದದಾಯಕಿ ಜಗ | ದಾದಿ ನಾರಾಯಣಿ 2 ಪಾದ ಸೇವೆಗೆ || ವಿನಯದಿಂದರ್ಪಣೆ | ಯನುದಿನ ಗೈವಂತೆ3
--------------
ವೆಂಕಟ್‍ರಾವ್
(ಇ) ಆತ್ಮನಿವೇದನೆ ಏನು ಮಾಡಲಿ ವೆಂಕಟೇಶ ಈ ಬೆಳೆಯು ಸೋನೆಯಿಲ್ಲದೆ ಉರಿದುದು ಪ ನಾನಾ ಪ್ರಕಾರದೊಳು ಹಾನಿಯಾಯಿತು ಇರವು ಹೀನರಾದೆವು ನಾವು ಶ್ರೀನಿವಾಸನೆ ಕೇಳು ಅ.ಪ ಮೂಡದೆಸೆಯಳು ಬಂದುದು, ಆ ಮಳೆಯು ಬಡಗದೆಸೆಯಳು ಸುರಿದುದು ಎಡಬಿಡದೆ ತೆಂಕ ಕಡೆಯಲಿ ಹೊಡೆದ ಮಳೆಯು ತಾ ನಡುವೆ ಬಿಡುವುದು ಯಾತಕೆ 1 ಕಟ್ಟುಕಡು ಮದಗ ಸಹಿತ, ಈ ಊರ ತಲೆ ಗಟ್ಟಿನೊಳು ನಾ ಕಾಣೆನು ಕೆಟ್ಟು ಹೋಯಿತು ಮಳೆಯು ಹೊಟ್ಟೆಯನು ಉರಿಸುತ್ತ ದೃಷ್ಟಿಯಲಿ ನೋಡು ನೀನು 2 ಮಳೆಯಿಲ್ಲದಿಳೆಯಾರಿತು, ನಟ್ಟಿರ್ದ ಫಲವೆಲ್ಲ ಬೆಳೆ ಕೆಟ್ಟಿತು ಸ್ಥಳದ ತೆರಿಗೆಯ ಬಿಟ್ಟು ಕಳುಹುವನೆ ದೊರೆ ತಾನು ಎಳೆದೆಳೆದು ಕೊಲುವನಲ್ಲ 3 ಕಷ್ಟ ಬಂದುದು ನಮ್ಮ ಕಡೆಗೆ, ಈ ವೃಷ್ಟಿ ಬಿಟ್ಟು ಪೋದುದು ಇಳೆಯನು ಸುಟ್ಟ ಊರೆಲ್ಲವನು ತಟ್ಟಿನಾರಿದ ಮೇಲೆ ಮುಟ್ಟಿ ನೋಡುವರಿಲ್ಲವೊ 4 ಹದಿನಾಲ್ಕು ಲೋಕವನು ನೀ ನಿನ್ನ ಉದರದೊಳಗಳವಟ್ಟಿಹೆ ಬೆದರುತಿದೆ ಈ ಲೋಕ ಒದರುವುದು ಜನರೆಲ್ಲ ಉದುರದೇತಕೆ ಇಳೆಗೆ ಮಳೆಯು 5 ಎಲ್ಲ ಬೇಡಿಯೆ ಕೊಂಬರು, ಈ ಹರಕೆ ಯಲ್ಲಿ ಅಂತರಬಾರದು ಹಲ್ಲು ಬಾಯಾರಿರ್ದ ಮಕ್ಕಳಿಗೆ ಎಳೆನೀರು ಬೆಲ್ಲವಾಗಿಹ ಮಳೆಯನೆರೆಯೊ 6 ನೀಲಮೇಘಶಾಮ ವರ್ಣ, ಕಾಣಲಾ ಮೂಲೋಕದೊಡೆಯಾ ನಿನ್ನ ಕಾಲಮೇಘವು ನಿನಗೆ ದೂರವಾಗುವುದುಂಟೆ ಆಲಸ್ಯ ಮಾಡಬೇಡ 7 ಬಡವರೆಲ್ಲರು ಕೂಡಿಯೇ, ಒಪ್ಪು ಕೈ ವಿಡಿದು ಬೇಡಿಯೇ ಕೊಂಡೆವು ಸಿಡಿಲು ಮಳೆ ಮಿಂಚುಗಳು ಹೊಡಕರಿಸಿ ಬರುವಂತೆ ಒಡೆಯ ದಯದೋರೊ ನೀನು 8 ಸ್ವಾಮಿ ನಿನ್ನಯ ನಾಮವು, ಜನರಿಂಗೆ ಕಾಮಿತಾರ್ಥವನೀವುದು ಪ್ರೇಮವಾಗಿಹ ಮಳೆಯ ಭೂಮಿಯಲಿ ಇಳಿಬಿಟ್ಟು ನಾಮವಾಗೆವು ಸ್ವಾಮಿ ವರಾಹತಿಮ್ಮಪ್ಪ 9
--------------
ವರಹತಿಮ್ಮಪ್ಪ
(ಭೀಮಸೇನ ಪ್ರಾರ್ಥನೆ) ಭೀಮಸೇನ ಸಕಲಸತ್ವಧಾಮ ರಕ್ಷಿಸೆನ್ನ ಬೇಗ ಸಾಮಗಾನ ಲೋಲ ಕೃಷ್ಣ ಪ್ರೇಮರಸಕೆ ಪಾತ್ರನಾದ ಪ. ಮಂಗಲಾಚರಿತ್ರ ನಿನ್ನ ಅಂಗಸಂಗದಿಂದ ಬಹು ತುಂಗ ಗಿರಿಯು ಒಡೆದು ಶತಶೃಂಗವೆನಿಸಿತು ಅಂಗುಲಿ ಪ್ರಹಾರದಿಂದ ಶಿಂಗತತಿಗಳನ್ನು ಬಹಳ ಭಂಗಬಡಿಸಿ ಬಾಲಲೀಲ ರಂಗದಲ್ಲಿ ಬಲುಹ ತೋರ್ಪ 1 ಹಸಿದ ವೇಳೆಯಲ್ಲಿ ಮೆದ್ದ ವಿಷದ ಭಕ್ಷ್ಯ ಜೀರ್ಣಗೊಳಿಸಿ ಉಶನ ಮಂತ್ರದಿಂದ ಹಲ್ಲ ಮಸೆಯುತಾ ಬಂದ ಅಸುರ ವೇಶದಷ್ಟಾಕ್ಷಿಗಳ ಮಶಕದಂತೆ ಬಡಿದು ಕೆಡಹಿ ಕುಶಲದಿಂದ ನಿದ್ರೆಗೈದ ಅಸಮಶಕ್ತಿ ಪೂರ್ಣಮೂರ್ತಿ 2 ನಗಗಳ ಮೇಲೇರುತ್ತ ಹಣ್ಣುಗಳನೊಂದೊಂದಾಗಿ ಕರದಿ ತೆಗೆದು ತಿಂಬ ಕೌರವರನು ನಗುತ ನೋಡುತಾ ನೆಗೆದು ಬೀಳ್ವ ತೆರದಿ ತರುಮೂಲಗಳಾ ತುಳಿದು ಕೆಡಹಿ ದೇವಾ- ಕೊಂಡ 3 ಗೂಗೆಯಂತೆ ನಿನ್ನ ಬಳಿಗೆ ಸಾಗಿ ಬಂದು ಶಕುನಿಮುಖರು ಯೋಗನಿದ್ರೆ ತಿಳಿಯದೆ ಚೆನ್ನಾಗಿ ಬಂಧಿಸಿ ಭಾಗೀರಥಿಯ ಜಲದಿ ದೂಡೆ ವೇಗದಿ ಪಾತಾಳವೈದಿ ನಾಗಕನ್ಯೆರಿತ್ತ ರಸವ ಬೇಗ ಸವಿದು ತಿರುಗಿ ಬಂದ 4 ದುರುಳರಿಂದ ರಚಿತವಾದ ಅರಗಿನ ಮನೆಗೆ ಹೋಗಿ ಕಾಲ ನಿರುತಕಿನಿಸಿಲಿ ಇರುಳಿನಲ್ಲಿ ತಾನೆ ಅಗ್ನಿ ಇರಿಸಿ ಬೇಗಲೆದ್ದು ಸಹೋ ದರರನೆತ್ತಿ ಬಹು ಯೋಜನಕೆ ಸರಿದು ಪೋದ ಶಕ್ತರರಸ 5 ಡೊಂಬಿಮಾಳ್ಪನೆಂದು ಬಹಳ ಡಂಬರದಿಂದಿದಿರಾ ಹಿ- ಕದಂಬ ವೈರಿಯ ಅಂಬರದೊಳಗೈದಿ ವಜ್ರಕಂಬದಂತೆ ಹೊಳವ ಬಹು ಸ್ತಂಭದಿಂದ ಕೆಡಹುತ ಹೈಡಿಂಬನೆಂಬ ಮಗುವ ಪಡೆದ 6 ನಗರ ದೊಳ್ವೈದಿಕರಂತೆ ವಾಸವಾಗಿ ಪೋಕ ಬಕನ ಬಾಧೆಯಿಂದ ಶೋಕಗೊಳುವರ ಸಾಕುವೆನೆಂದೆದ್ದು ನಾನಾ ಶಾಖ ಭಕ್ಷಾನ್ನಗಳ ತಾನೆ ಸ್ವೀಕರಗೊಂಡಸುರನನ್ನು ಸೋಕಿ ಸೀಳಿ ಬಿಸುಟ ದೊರೆಯೆ 7 ವಿಪ್ರ ವೇಷದಿಂದ ದ್ರುಪದಸುತೆಯನೊಲಿಸಿ ಕೃದ್ಧ ನೃಪರ ಗೆದ್ದು ರುಕ್ಮಿಣೀಶ ಕೃಪೆಯಾ ಬಲಕೊಂಡು ಅಪರಿಗಣ್ಯ ಪೌರುಷಕಿಂನುಪಮೆಯಿಲ್ಲವೆಂದು ಸರ್ವ ಖಪತಿವರರು ಪೊಗಳುತಿರಲು ತ್ರಿಪುರವೈರಿಯಂತೆ ಮೆರೆದ 8 ಅಂಧ ನೃಪನ ಮಾತ ಕೇಳಿ ಇಂದ್ರಪ್ರಸ್ಥ ಪುರಕೆ ರಾಜ ನೆಂದು ನಿಂದು ಮಗಧಾದಿಗಳ ನೊಂದೆ ನಿಮಿಷದಿ ಕೊಂದು ರಾಜಸೂಯಮೇಧದಿಂದ ಸಕಲಯಜ್ಞೇಶಗೋ- ಕೊಂಡ 9 ದ್ಯೂತ ನೆವದಿ ಸಕಲ ರಾಜ್ಯ ಸೋತು ವನಕೆ ಪೋಗಿ ಲಕ್ಷ್ಮೀ- ನಾಥ ಕರುಣ ಬಲದಿಂದ ಸುರವ್ರಾತವಡಗಿಸಿ ಭೂತನಾಥನೋರದಿ ಬಹಳ ಖ್ಯಾತ ಕೀಚಕಾದಿಗಳನು ಘಾತಿಸಿ ಗಂಧರ್ವನೆಂದಜ್ಞಾತವಾಸ ಕಳದ ಧೀರ 10 ದುರುಳ ಕೌರವರನು ಗದೆಯ ತಿರುಹಿ ಕೆಡಹಿ ಧರಣಿಭರವ ಸುರಪಸೂನು ಸಹಿತಲ್ಲಿಳುಹಿ ಪರಮ ಹರುಷದಿ ಹರಿಯ ನೇಮದಿಂದ ನಾಗಪುರವನಾಳಿ ವಿಷ್ಣುಭಕ್ತಿ ಸುಜನ ತತಿಯ ಪೊರೆದು ಪದ್ಮಜಾತನಾಹ11 ದುಷ್ಟವೈರಿ ಜನರ ಗೆದ್ದು ಅಷ್ಟ ಭಾಗ್ಯ ಸಹಿತ ದೇಹ ಪುಷ್ಟಿ ಜ್ಞಾನ ದೃಷ್ಟಿಗಳನು ಕೊಟ್ಟು ಕರುಣಿಪಾ ಸೃಷ್ಟಿಗೊಡೆಯ ಸರ್ಪರಾಜ ಬೆಟ್ಟದಲ್ಲಿ ನಿಂದು ಭಕ್ತ- ಭೀಷ್ಟವರದನೊಲಿಪ ತೆರದಿ ಸುಷ್ಠುಪ್ರೇಮವಿಟ್ಟು ಕಾಯೊ 12
--------------
ತುಪಾಕಿ ವೆಂಕಟರಮಣಾಚಾರ್ಯ
ಆತ್ಮನಿವೇದನೆ ಕರುಣದಿಂದಲಿ ಪೊರೆಯೊ ನೀ ಎನ್ನ| ನರಹರಿಯೆ ಮುನ್ನ | ಚರಣಕಮಲವ ಸ್ಮರಿಸುವೆನು ನಿನ್ನ ಪ ಪೊರೆಯಬಾರದೆ ಶರಣು ಶ್ರೀಹರಿಅ.ಪ ಗೋಪಾಲಕೃಷ್ಣ| ಗೋಪಸ್ತ್ರೀಯರ ಹರುಷಗೊಳಿಸಿದೆ|| ವೃಂದದಿ ನಲಿದು ಮೆರೆದೆ| ದ್ರುಪದ ಸುತೆಯಳಿಗಿತ್ತ ಶ್ರೀಹರಿ 1 ಗೋವೃಂದ ಸಲಹಿ| ಗೋವಿಂದಾಭಿಧಾನವನು ಪಡೆದೆ|| ರವನು ಹೀರಿದ ಕರುಣಿ ಶ್ರೀಹರಿ 2 ಇಂದೀವರಾಭನೆ| ಬಂಧುಬಾಂಧವರಾರು ಹಿತರಲ್ಲ|| ಇಂದಿರೇಶನೆ ನಿನ್ನ ಚರಣ| ದ್ವಂದ್ವದೊಳು ಮನವಿತ್ತೆನಾಪ | ದ್ಬಂಧುವಾದರೆ ಪ್ರೇಮವಿರಿಸುತ || ಬಂಧಗಳ ಪರಿಹರಿಸುತೆನ್ನನು 3 ಪತಿತಪಾವನ ಈಶ ಸರ್ವೇಶ| ಮಹಶೇಷಶಯನ | ಹಿತವಿಧಾಯಕ ಸರ್ವಭೂತೇಶ|| ದೊರಕುವ ತೆರದೊಳನುದಿನ 4 ಶ್ರೀಕಾಂತ ಸಲಹೈ| ಲೋಕಭರಿತನೆ ಸುಖವಿಧಾಯಕನೆ|| ಲೋಕವಂದಿತ ಲೋಕನಾಥಾ | ನಾಕಿವಂದಿತ ಭಕ್ತವತ್ಸಲ 5 ನಿನ್ನ ಪಾದವ ನಂಬಿ ನಾನಿಹೆನು| ದೇವಾದಿದೇವಾ| ನಿನ್ನ ನಾಮಾವಲಿಯ ಸ್ಮರಿಸುವೆನು|| ಮುನ್ನ ಮಾಡಿದ ಪಾಪವೆಲ್ಲವ| ನಿನ್ನ ನಾಮ ಸ್ಮರಣದಲಿ ಸಂ| ಪೂರ್ಣ ಪರಿಹರಗೊಳಿಸಿ ನಿನ್ನಯ| ಸನ್ನುತಾಂಘ್ರಿಯ ಸೇವೆಗಿರಿಸುತ 6
--------------
ವೆಂಕಟ್‍ರಾವ್
ಇಂದಿರೆ ನಿನ್ನೊಳ್ ದೇವ ಶ್ರೀಹರಿಗಿಪ್ಪ ಪ್ರೇಮವ ಬಣ್ಣಿಸಲಸದಳ ಕಂಡ್ಯ ಪ ಜಕ್ಕ ಜವ್ವನ ಪೋಗಬಾರದೆಂದೆನುತಲಿ ಮಕ್ಕಳ ನಿನ್ನೊಳು ಜನಿಸನು ಕಂಡ್ಯ ಅಕ್ಕರೆಯನು ಶ್ರೀದೇವಿ ನೀ ಕಂಡ್ಯ 1 ಉರದೊಳು ತೊಡೆಯೊಳು ಕೊಳಲೊಳಾಭರಣದೊಳು ಕರಗಳಿಂದಲಿ ಪಾಶ್ರ್ವದೊಳಗಾಲಿಂಗಿಸಿದಾ ನೀರೊಳಕ್ರೂರಗೆ ಒಲಿಯುವಾಗಲು, ಮಹಾ ನೀರೊಳು ಪ್ರಳಯದಿ ನಿನ್ನನು ಬಿಡನು 2 ರಾಜಾಧೀರಾಜರು ಬಹುದಾರರೆಂಬರು ರಾಜೀವಾಕ್ಷನಿಗೆ ನೀನೊಬ್ಬಳೆ ಕಂಡ್ಯ ರಾಜೇಶಹಯಮುಖನಂಥ ಪ್ರೇಮಿಗಳುಂಟೆ ರಾಜೇಶ ಶ್ರೀರಾಮನರಸಿಯೊಬ್ಬಳೆ ಕಂಡ್ಯ 3
--------------
ವಿಶ್ವೇಂದ್ರತೀರ್ಥ
ಇಂದಿರೆ ಪತಿ ಭಂಗಬಡುವ ವಿಷಯಂಗಳಿಗೆರಗದೇ ರಂಗ ನಿನ್ನಯ ಮಂಗಳಂಗುಟರ್ಚಿಸುವಂತೆ 1 ಉದರ ಪೋಷಣೆಗಾಗಿ ಸದೆಬಡಿಗನಾಗದೇ ಸದಮಲ ನಿನ್ನೂಳಿಗದವನಾಗುಳಿವಂತೆ 2 ಶರೀರ ಸಂಬಂಧಿಗಳಲ್ಲಿರುವ ಪ್ರೇಮವ ತಂದು ಗುರು ಮಹಿಪತಿ ಪ್ರಭು ಸ್ಮರಣೆಯೊಳಿರುವಂತೆ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇಂದಿರೇಶನೆ ಸುಂದರಾಂಗನೆ ಮಂದಹಾಸದಿಂದ ಬೇಗ ಬಂದು ರಕ್ಷಿಸೈ 1 ಮರೆಯಬೇಡವೊ ಸಿರಿಯ ಅರಸನೆ ಪೊರೆಯದಂತೆ ಮರೆಯಬಹುದೆ ಸಿರಿಯನಾಥನೆ 2 ರಂಗ ರಮಣನೆ ಭುಜಂಗಶಯನನೆ ಮಂಗಳಾಂಗ ನಿನ್ನ ಕರುಣಾಪಾಂಗ ಬೇಡುವೆ 3 ಮಾರಜನಕನೆ ಉದಾರಚರಿತನೆ ಭಾರವೇನೊ ದೀನಜನರುದ್ಧಾರ ಮಾಡುವುದು 4 ನಾಮಗಿರೀಶನೆ ನಿಸ್ಸೀಮ ಮಹಿಮನೆ ಪ್ರೇಮವಿಟ್ಟು ಪಾಲಿಸೆನ್ನ ಸ್ವಾಮಿ ನರಹರೆ 5
--------------
ವಿದ್ಯಾರತ್ನಾಕರತೀರ್ಥರು
ಏನೆಂದು ಬಣ್ಣಿಸುವೆನೊ ನಾನು | ಶ್ರೀನಾಥ ಪ್ರಿಯಳಾದ ಶ್ರೀ ತುಳಸಿ ಮಹಿಮೆಯನು ಪ ಅಮೃತ ಕಲಶ ಬರೆಕಂಡು ಅತಿ | ಜಲಜಾಂಬಕನ ಪ್ರೇಮಾಂಜಲ ಉದರಲು | ಇಳಯೊಳದಿರಿಂದುದಿಸಿ ಬೆಳೆದು ನಿಂದಿರೆ ನೋಡಿ | ಒಲಿದು ಕೋಮಲ ಮುಗುಳು ತಳೆದ ಶ್ರೀಹರಿ ತಾನು 1 ಹರಿಯು ಧರಿಸಿದ ಕಂಡು ಸುರರೆಲ್ಲ ವಂದಿಸುತ | ಶಿರದಲಾಂತರು ಪರಮ ಹರುಷದಿಂದ | ಸಿರಿಸರಸ್ವತಿ ಗಿರಜೆ ನಿರುತ ನಿನ್ನಯ ವ್ರತದಿ | ಧರೆಯೊಳಗೆ ತಮ್ಮ ತಮ್ಮ ಅರಸರೊಲಿಸಿದರೆಂದು 2 ದುರಿತ ಕುಲ ಓಡುವವು ತನುವ ನೀ ಡಾಡಿ ಜಲನೀಡಿ ಕೊಂಡಾಡಿ ನಿಂದು | ಕೂಡೆ ಮೃತ್ತಿಕೆ ಫಣಿಗೆ ತೀಡಿದರೆ ಭಕುತಿಯಲಿ | ಬೇಡಿದಿಷ್ಟಾರ್ಥ ಕೈಗೂಡಬಹುದಿಳೆಯೊಳಗೆ 3 ತುಲಸಿ ಭಕುತಿಲ್ಲದವ ಕಲಿವಂಶದನುಜನವ | ತುಲಸಿ ಧರಿಸಿದ ತನುವು ಸಲೆಮುಕ್ತಿ ಮಂಟಪವು | ತುಲಸಿ ಬೆಳೆಹದಿ ಮನೆಯು ಬಲಿದ ಪುಣ್ಯದ ಖಣಿಯು | ತುಲಸಿ ಇಲ್ಲದ ಗೇಹ ಕಲುಷಾಲಯ 4 ಮೂಲದಲಿ ಬ್ರಹ್ಮ ತಾ ನೀಲಕಂಠನು ನಡುವೆ | ಮೇಲುತುದಿಯಲಿ ವಿಷ್ಣು ಲೋಲಾಡುವಾ | ಸಾಲಕೊಂಬೆಗಳಲಿ ವಿಶಾಲದೇವತೆಗಳಿಹರು | ತಾಳಿ ಪ್ರೇಮವನು ಮಹೀಪತಿ ನಂದನಾಜ್ಞೆಯಲಿ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಾಮಾನ ಜನನಿಯೆ ಸೋಮಾನ ಸೋದರಿ ಸಾಮಾಜ ವರದನ ಪ್ರೇಮವ ಕೊಡಿಸಮ್ಮ ಪ ನೇಮಾದಿಂದಲಿ ಹರಿ ನಾಮಾವ ನುಡಿಸುತ ತಾಮಾಸ ಓಡುವಂತೆ ನೀಮಾಡಬೇಕಮ್ಮ ಅ.ಪ ನಿತ್ಯ ತೃಪ್ತಳೆನಿನ್ನ ನಿತ್ಯದಿ ಬೇಡಿಕೊಂಬೆ ಭೃತ್ಯರೊಳಗೆ ಎನ್ನ ಎತ್ತಿ ಸೇರಿಸೆ ತಾಯೆ || ಮತ್ತನಾಗದೆ ಭವದಿ ಉತ್ತುಮನೆನಿಸುತ ಆತ್ಮದಿ ಹರಿ ತೋರಿ ಕೃತಕೃತ್ಯನೆನಿಸಮ್ಮ 1 ದೇಶಕಾಲದಿನೀನು ಶ್ರೀಶಗೆ ಸಮಳಮ್ಮ ನಾಶಮಾಡುತ ದೋಷ ದಾಸಾನು ಎನಿಸಮ್ಮ || ಶ್ವಾಸಾಶೇಷರನೆಲ್ಲ ಲೇಸಾಗಿ ಆಳುವಳೆ ವಾಸುದೇವನಲ್ಲಿ ಆಸೇಯ ನೀಡಮ್ಮ 2 ಶೃತಿಯಲ್ಲಿ ನೀನಿದ್ದು ಸ್ತುತಿಸೀ ಶ್ರೀಹರಿಯನ್ನ ಮತ್ತೆಸೃಜಿಸುವಂತೆ ಎತ್ತಿಗಾನವ ಮಾಳ್ವೆ || ಎತ್ತ ನೋಡಲು ಬಲು ಕತ್ತಲೆಕಣಿ ತಾಯೆ ಸತ್ಯವ ಬಿಡದಂತೆ ಹತ್ತೀಸೆ ಹರಿದಾರಿ3 ಹರಿಯಂತೆ ಅವತಾರ ನಿರುತನೀ ಮಾಡುತ ಪರಿ ರೂಪದಿಂದ ಪರಿಚರಿಯ ನೀಮಾಳ್ವೆ || ಸರ್ವೇಶ ಹರಿಯಿಂದ ಸರ್ವಕಾಲದಿ ಕೂಡಿ ಸರ್ವಕಾರ್ಯವ ಮಾಳ್ವೆ ಸರಿಯಾರೆ ನಿನಗಮ್ಮಾ 4 ಅಕ್ಷರ ರೂಪಳೆ ಈಕ್ಷಿಸುಕರುಣದಿಂದ ತ್ರ್ಯಕ್ಷೇಶ ವಿಧಿಮಾತೆ ಅಕ್ಷರನರ್ಧಾಂಗಿ || ಕುಕ್ಷೀಲಿ ಬ್ರಹ್ಮಾಂಡ ಲಕ್ಷ್ಯವಿಲ್ಲದೆ ಪಡೆದಿ ಅಕ್ಷಯ ಮಾಡಿ ಜ್ಞಾನ ಮೋಕ್ಷಾವ ಕೊಡಿಸಮ್ಮಾ5 ವಿಕಾರ ಶೂನ್ಯಳೆ ಪ್ರಕೃತಿಗೆ ಮಾನಿಯೆ ನೀಕಾರ್ಯ ಕಾರಣಕ್ಕೆ ಮುಖ್ಯ ಹೇತುವೆ ತಾಯೆ || ಪ್ರಕೃತಿ ಬಂಧವ ಬಿಡಿಸಿ ಸಾಕಾರ ಮೂರುತಿ ಲೋಕನಾಯಕ ಹರಿಯ ಏಕಾಂತದಲಿ ತೋರೆ6 ತ್ರಿಗುಣ ಕಾರ್ಯಗಳೆಲ್ಲ ಸುಗುಣಿ ನೀ ಮಾಡುತ ನಿತ್ಯ ಪೊಗಳಿ ಹಿಗ್ಗುವೆ ಮಾತೆ || ಜಗವೆಲ್ಲ ಕುಣಿಸುತ ನಗುತಲೀಲೆಯಿಂದ ನಿಗಮಾದಿಗಳ ಮೀರಿ ಬಗೆ ಬಗೆ ಲೀಲೆ ಕಾಂಬೆ 7 ನಿತ್ಯಾ ಮುಕ್ತಳು ನೀನು ಪ್ರೀತಿಲಿ ನಮಿಪೆನೆ ಮಾತುಲಾಲಿಸಿ ಎನ್ನ ನಿತ್ಯದಿ ಸಲಹೆಮ್ಮ || ಹೆತ್ತ ತಾಯಿಯು ನೀನು ಎತ್ತಿ ಪೊರೆಯದಿರೆ ಎತ್ತ ಪೋಗಲಿ ನಾನು ಉತ್ತುಮರಮೆ ಹೇಳೆ 8 ಸಾಗರನ ಮಗಳೆ ಆಗಮರೂಪಳೆ ಹೋಗೀಸುಲಿಂಗವ ಸಾಗಿಸಿಗುಣಕಾರ್ಯ || ಭಾಗ್ಯ ಸ್ವರೂಪಳೆ ಬಾಗಿ ನಮಿಸುವೆ ಆಗು ಮಾಡಿಸು ಹರಿ ಗೀತೆಗಳೆನ್ನಿಂದ 9 ಮರುತ ದೇವನ ಪಿತನ ಉರದಲಿ ವಾಸಿಪಳೆ ಹರಿಗುರು ಚರಣದಿ ನಿರುತ ಭಕ್ತಿಯ ಕೊಟ್ಟು || ವಾರಿಜನಾಭನಲ್ಲಿ ಧಾರೆ ಧಾರೆಯ ಭಕ್ತಿ ಸಾರಸ ದಳನಯನೇ 10 ಮಾತು ಮಾತಿಗೆ ನಮ್ಮ ಖ್ಯಾತಾಜಯತೀರ್ಥ ನವನೀತ ಧರಿಸೀಹ || ಶ್ರೀ ತಾಂಡವ ಕೃಷ್ಣ ವಿಠಲರಾಯನ ಸ್ಮರಣೆ ಆತ್ಮಾದೊಳಗೆ ನಿಂತು ಖ್ಯಾತೀಲಿನಡಿಸಮ್ಮಾ 11
--------------
ಕೃಷ್ಣವಿಠಲದಾಸರು
ಕೂಸನು ಕಂಡೀರ್ಯಾ ಸುಪ್ರ-ಹ್ಲಾದನ ಕಂಡೀರ್ಯಾ ನಮ್ಮಕೂಸನು ಕಂಡೀರ್ಯಾ ಪ ರಾಕ್ಷಸ ಕುಲದಲಿ ಜನಿಸಿತು ಕೂಸುರಾಧಾಕೃಷ್ಣನ ಭಜಿಸಿತು ಕೂಸುರಾಗ ದ್ವೇಷಗಳ ಬಿಟ್ಟಿತು ಕೂಸುರಾಮ ಪಾದವ ನೆನೆಯುವ ಕೂಸು 1 ಘನ ಹರಿ ಕಂಬದಿ ತೋರಿತು ಕೂಸುಗಳಿಸಿತು ಕೃಷ್ಣನ ಪ್ರೇಮವ ಕೂಸುಘನ ಪಂಪಾಲಯದಿ ವಾಸಿಪ ಕೂಸುಗಣೆ ಗೋಪಾಲನ ಪ್ರೀತಿಯ ಕೂಸು2 ಪ್ರಸಿದ್ಧ ವ್ಯಾಸರಾಯರೆಂಬ ಕೂಸುಪ್ರವೀಣ ವಿದ್ಯೆಯೊಳೆನಿಸಿದ ಕೂಸುಪ್ರಹ್ಲಾದನೆಂಬುವ ಆಹ್ಲಾದ ಕೂಸುಪ್ರಸನ್ನ ಕಾಗಿನೆಲೆಯಾದಿಕೇಶವನ ಕೂಸು3
--------------
ಕನಕದಾಸ
ಕೃಷ್ಣ ಕಲಿಯ ಕಾಯ್ದ ಕರುಣಿ ಜಿಷ್ಣುಸಖನೆ ಕೃಷ್ಣನೆ ಪ. ಕೃಷ್ಣ ಪೊರೆಯೊ ಎನ್ನ ವಿಷಯತೃಷ್ಣೆಯಿಂ ಸಾಯಲೆ ದಮ್ಮಯ್ಯ ಅ.ಪ. ಹಿಂದೆ ಮಾಡಿದ ಕರ್ಮದಡವಿಯೊಂದಿಗೆ ಸವರುವೆನೊ ಗೋ-ವಿಂದ ನಿನ್ನ ಕರುಣಸುಧೆ ಇನ್ನೆಂದು ಪಡೆದು ಸುಖಿಪೆನೊಇಂದು ಮಾಡಿದ ಅಘಗಳು ಬಲು ದಂದುಗಕೊಳಗಾದೆ ನೀನುಕುಂದು ಕುಜನದೂರ ನಿನ್ನ ಕಂದನೆಂದು ಸಲಹೊ ತಂದೆ1 ಕಾಮವೆನ್ನ ಕಮಲನಾಭ ಸೀಮೆಗಾಣಲಿಯ್ಯದೊ ನಿ-ಸ್ಸೀಮಮಹಿಮ ಕ್ರೋಧ ಎನ್ನ ಸಾಮವ ನಡುಗಿಸುತಿದೆಭ್ರಮಿತನಾದೆ ಬಲುಪ್ರೇಮವ ತಪ್ಪಿಸಿ ಸುರಕ್ತಾನು ಹೆ ದೈವ ಎನ್ನಆ ಮಹಾಭಯವ ನಿವಾರಿಸೊ2 ಅನುದಿನ 3
--------------
ವಾದಿರಾಜ
ಕೆರೆಯನು ದಾಟಲು ಅರಿಯದ ಜನ ಭವ ಶರಧಿಯ ದಾಟುವರೇ ಶ್ರೀ ನರಹರೆ ಪ ಕರವ ಪಿಡಿಯದಿರೆ ತೊರೆಯ ಸೇರಲಳವೆ ಈ ಧರೆಯೊಳು ಅ.ಪ ಹಲವು ಜನ್ಮಗಳಲಿ ಗಳಿಸಿದ ಅಘಗಳ ಅಲೆಗಳೊಳಗೆ ಸಿಲುಕಿ ಸಂತತ ಮುಳುಗಿ ಮುಳುಗುತ ಕಟುಜಲಗಳ ಕುಡಿಯುತ ನಳಿನನಾಭ ನಿನ್ನೊಲಮೆಯಿಂದಲ್ಲದೆ1 ಕಾಮ ಕ್ರೋಧ ಮದ ಲೋಭ ಮೋಹ ಮತ್ಸರಗಳೆಂಬ ವಿವಿಧ ಜಲಚರ ನಕ್ರ ತಿಮಿಂಗಿಲವಿರಲಾಗಿ ಕಾಮಜನಕ ನಿನ್ನ ಪ್ರೇಮವÀ ಪೊಂದದೆ 2 ಚೂರ್ಣಗಳಾದುವು ವಿವಿಧ ನಾವೆಗಳೀ ಅರ್ಣವದಲಿ ಸಿಲುಕಿ ಸುಲಭದಿ ಪೂರ್ಣ ಪ್ರಮತಿಗಳ ಮತವನರಿತು ಇನ್ನ ಪೂರ್ಣ ಪ್ರಸನ್ನತೆ ನಾವೆಯಿಂದಲ್ಲವೆ 3
--------------
ವಿದ್ಯಾಪ್ರಸನ್ನತೀರ್ಥರು
ಕೈಲಾಸನಾಥ ಮಹೇಶ ಈಶ ಶೈಲೇಶ ತನಯೇಶ ಬಾಲಾರ್ಕ ಸಮಭಾಸ ಪ ಶೂಲಾಕ್ಷ ಡಮರುಗಳಿಂದ ಶೋಭಿಪ ಹಸ್ತ ತಾಲಾಂಕನನುಜನೊಳ್ಸಮರಗೈದೀರ್ಪ ಫಾಲಾಕ್ಷದಿಂದಲಿ ಕಾಮನ ದಹಿಸಿರ್ಪ ಶೂಲಿಯ ಮಹಿಮೆಯನೇನು ಬಣ್ಣಿಸಲಿ 1 ವಿಷ್ಣುಭಕ್ತರೊಳಗತಿ ಪ್ರೇಮವಿರುವ ಕೃಷ್ಣ ದ್ವೈಪಾಯನರ ಸುತರಾಗಿ ಶೋಭಿಪ ಸನಕಾದಿಗಳ ಶಿಷ್ಯ ದುರ್ವಾಸರೆನಿಪ 2 ನಂಜುಂಡನೆನಿಸಿರ್ಪ ಪ್ರಖ್ಯಾತ ಮಹಾದೇವ ಕಂಜಜಾತನ ಸುತನೆನಿಸಿರ್ದ ದೇವ ರಾಜೇಶ ಹಯಮುಖ ಭಕ್ತಪುಂಗವ ನೀನು ಅಂಜಲಿ ಬಂಧದಿಂ ನಮಿಪೆ ನಿನ್ನಡಿಗೆ 3
--------------
ವಿಶ್ವೇಂದ್ರತೀರ್ಥ