ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯಾರಂದರೇನು ಫಲವದೆ ನಮ್ಮ ದೃಷ್ಟ ಈ ರೀತಿ ಕಾಡಲು ಬರಿದೆ ಪ ಯಕ್ಷ ಕಿನ್ನರಾದಿವಂದಿತ ಪರಮಾತ್ಮ ಜಲ- ಜಾಕ್ಷ ಕೃಷ್ಣ ಮಾಧವಾಚ್ಯುತ ಪಕ್ಷಿವಾಹನ ಪಾಲಿಸು ಕರಿವರದ ಬೇಗನೆ ನೀನು ಪೇಕ್ಷಿಸದೆ ರಕ್ಷಿಸೆನ್ನ 1 ಇನ ಶಶಿ ಕುಜರಾಹು ಗುರುಬಲ ಇದರ ಮೇಲೆ ಶನಿ ಸೌಮ್ಯ ಕೇತು ಶುಕ್ರ ಗ್ರಹಗಳ ಘನದಿ ಸುಫಲ ಲೇಶಕಾಣದೆ ಬಳಲುವ ವೇಳೆ ಅನಿಮಿಷರೊಡೆಯನ ಮೊರೆ ಹೋಗದೆ 2 ಪರಮ ಪುರುಷ ಪತಿತ ಪಾವನ ಬಿರುದುಳ್ಳ ಹೆನ್ನೆಪುರನಿಲಯ ನರಹರಿ ಚರಣ ಸ್ಮರಣೆ ಹರುಷದಿಂದ ನಿರುತ ಮನದೊಳಾವಾಗ ಪರರ ನಿಂದೆಗೊಳಗಾಗಿ ವೃಥಾ 3
--------------
ಹೆನ್ನೆರಂಗದಾಸರು