ಏಕಾದಶಿ ನಿರ್ಣಯ ಅನಲು [ಸಮನೆ] ಮನೆಗೆ
ಪೇಳಬಂದ ಅನಾಥಬಂಧು ಹಯವದನ ಗೋವಿಂದ ಪ.
ತನ್ನ ನಂಬಿದವರ ತಾಪತ್ರಯವಳಿದು
ಉನ್ನಂತ ಪದವೀವ ದಿನತ್ರಯವನ್ನು 1
ವೃದ್ಧಿಮಾತ್ರ ಅರುಣೋದಯದ ಕೆಳಗೆ
[ಶುದ್ಧಿದಂ] ಘಳಿಗೆ ಸಾಕುಯೆಂದು 2
ಅತಿವೃದ್ಧಿ ಒಂದುಘಳಿಗೆಯ ಕೆಳಗೆ ವಿಂ
ಶತಿ [ಫಣಫಲ] ದೊಳಗೆ [ಶುದ್ಧಿ] ಬೇಕೆಂದು 3
ತಿಥಿ ವೃದ್ಧಿಆದಾಗೆ ಹತ್ತು [ಫಣಪಲ]
ತಿಥಿಕ್ಷಯದಲ್ಲಿ ಅದರೊಳು [ಶುದ್ಧಿ] ಬೇಕೆಂದು 4
ಇಂದು ದಶಮಿ ಶಾಖವ್ರತವ ಮಾಡಿ ನೀವು
ಒಂದು ಬಾರಿ ಭೋಜನ ಮಾಡಿರೊಯೆಂದು 5
ತಾಂಬೂಲಚರ್ವಣ ಸಲ್ಲ ಸ್ತ್ರೀಸಂಗ
ಹಂಬಲವನ್ನು ನೀವು ಬಿಡಿರಿಯೆಂದು 6
ನಾಳೆ ಏಕಾದಶೀ ಉಪವಾಸ ಜಾಗರ
ಆಲಸ್ಯ ಮಾಡದೆ ಆಯತಾಕ್ಷಗೆಯೆಂದು 7
ಫಲಹಾರವು ಸಲ್ಲ ಭೋಜನವು ಸಲ್ಲದು
ಜಲಪಾನ ಸಲ್ಲ ಮೆಲಸಲ್ಲದೆಂದು 8
ನಾಲ್ಕುಹೊತ್ತಿನ ಆಹಾರವ ಬಿಡುವುದು ಹದಿ
ಜಾಗರ ಮಾಡಿರೊಯೆಂದು 9
ಪೇಳ ಅರ್ಧದ್ವಾದಶಿಬಂದಾಗ ನೀವೆಲ್ಲ
ಒಲುಮೆಯಿಂದ ಪಾರಣೆಯ ಮಾಡಿರೊಯೆಂದು10
ಇಂತು ತಿಥಿತ್ರಯ ಮಾಡುವ ಜನರನ್ನು
ಸಂತತ ಪೊರೆವ ಶ್ರೀಕಾಂತ ಹಯವದನ 11