ಒಟ್ಟು 6 ಕಡೆಗಳಲ್ಲಿ , 5 ದಾಸರು , 5 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಉಡುಪಿಯ ಪ್ರಾಣದೇವರು) ಏನೆಂದು ಸ್ತುತಿಸಲಿ ಪ್ರಾಣನಾಯಕನಾ ಕಾಣುವಂದದಿ ಮಹಾ ಮಹಿಮೆ ತೋರುವನಾ ಪ. ಕಡು ಪಾಪಿ ಕಲಿಯನ್ನು ಕಾಲಿಂದ ಮೆಟ್ಟಿ ಬಡಜನರಲ್ಲಿಟ್ಟು ಕರುಣಾದೃಷ್ಟಿ ಉಡುಪಿ ಕೃಷ್ಣನ ಮುಂದೆ ವಿಪ್ಪ ಸಂತುಷ್ಟಿಯ ಬಡಿಸುತ ನಿಂತಿರುವನು ಜಗಜಟ್ಟಿ 1 ಪ್ರಥಮ ರೂಪನಾಗಿ ಪರಿಜನರಲ್ಲಿ ದ್ವಿತೀಯ ರೂಪದಿಂದ ಪಾಕಕರ್ತರಲಿ ರತಿಪತಿಪಿತನ ಪೂಜಾವಿಧಿ ನಡೆಸಲು ಯತಿ ಜನರೊಳು ಪೂರ್ಣಮತಿಯಾಗಿ ನಿಲುವನ 2 ಮೂರೊಂದು ಪುರುಷಾರ್ಥ ದಯೆಮಾಳ್ಪೆನೆಂದು ದ್ವಾರಾವತಿಯಿಂದ ತಾನಿಲ್ಲಿ ಬಂದು ಸೇರಿದ ಸಿರಿವರ ವೆಂಕಟನಾಥನ ಕಾರುಣ್ಯಂಸ ಪಾತ್ರ ಕರುಣಾಳು ರಾಜನ 3
--------------
ತುಪಾಕಿ ವೆಂಕಟರಮಣಾಚಾರ್ಯ
ಆಸೆ ತೋರಿಸಿ ಈಶ ನಿರಾಸೆಮಾಳ್ಪರೆ ಲೇಸೋ ನಿನಗೆ ಶೇಷಶಾಯಿ ಶ್ರೀಶ ಅಭಿಲಾಷಿಗಳಿಗೆ ಪ ಬಡಜನರ ಪರ್ವತ ಒಡಲ ಆಸೆಯ ಕೊಡುವೆನೆಂದು ನುಡಿಯಲವರು ಎಡೆಬಿಡದೆ ಬೇಡಿ ಬೇಡಿ ಕಾಡಿ ಕಾಡಿ ಕಡೆಗೆ ನೋಯ್ವರು 1 ಆಡಿದ್ಯಾತಕೊ ವಾಕ್ಯ ಸುಳ್ಳು ಮಾಡಿದ್ಯಾತಕೊ ಖೋಡಿದೈವಿನಾ ಬೇಡುವಂತೆ ನಿನ್ನ ಬೇಡಿಕೊಂಬೆ ಗಾಢಮಹಿಮ ನೋಡದಿರೊಳಿತಿತ್ತಾಡಿದ್ಯಾಕ 2 ರೂಢಿಗಧಿಕನೆ ದಯವ ಮಾಡು ಎನ್ನೊಳು ಮೂಢತನದಿ ನಾ ಮಾಡಿದಂಥ ಕೇಡುಗುಣಗಳೆಣೆಸದೆನ್ನೊ ಳಾಡಿದ್ವಾಕ್ಯ ನೀಡು ಶ್ರೀರಾಮ 3
--------------
ರಾಮದಾಸರು
ನಡೆದು ಬಾರಯ್ಯ ಪ್ರಾಣರಾಯ ಪಿಡಿ ಎನ್ನ ಕೈಯಾ ಪ ಕಡುಬಡಜನರಿಗೆ ಒಡೆಯನಾಗಿ ನೀ ಕರ ಪಿಡಿದು ಪೊರೆವುದಕೆ 1 ಭಾಗ್ಯಪುರಿಯೊಳಗೆ ಭಾಗವತರಿಗೆಲ್ಲ ಯೋಗ್ಯಮಾರ್ಗವನು ಬೇಗನೆ ತೋರಲು 2 ಅನಾಥನಾಥ ಪ್ರಾಣನಾಥ ವಿಠ್ಠಲನ ದೂತನೀ ನೆನೆಸಿ ಭಕ್ತಜನರ ಸಂತೋಷಪಡಿಪುದಕೆ 3
--------------
ಬಾಗೇಪಲ್ಲಿ ಶೇಷದಾಸರು
ಬಂದನು ರಘುವೀರ ರಣಧೀರ ಪ ತಡೆ ಭರತನೆ ಮುಂದಡಿಯಿಡಬೇಡ ದುಡುಕಿ ಬೀಳದಿರು ಬಡಜನ ಮುಖಕೆ 1 ಸೀತಾನಾಥನ ದೂತನಾದೆನ್ನ ಮಾತನು ಕೇಳು ಆತುರಪಡದೆ 2 ಭ್ರಾತನ ನೋಡಲು ಕಾತರನಾಗಿ ವಾತವೇಗದೊಳು ಆತನು ಬರುತಿಹ 3 ಅದೊ ನೋಡದೊ ನೋಡದರ ದೆಶೆಯಲಿ ವಿದುಶತಕಿಲ್ಲದಗದಿರದದ್ಯುತಿಯ 4 ಅದೊ ಪುಷ್ಪಕವು ಅದರ ಪ್ರಭೆ ನೋಡು ಅದರಿರವ ನೋಡು ಒದಗಿ ಬರುತಿದೆ 5 ಧಾಮ ಮಧ್ಯೆ ನಿ ಸ್ಸೀಮ ನಿಮ್ಮಣ್ಣ ರಾಮನ ನೋಡು 6 ವಾಮದಿ ಸೀತಾಭಾಮೆ ಕುಳ್ಳಿಹಳು ಪ್ರೇಮದಿ ಲಕ್ಷ್ಮಣ ಚಾಮರ ಬೀಸುವ 7 ಬಲದಿ ಸುಗ್ರೀವ ನೆಲೆಸಿಹ ನೋಡು ಕೆಲದಿ ವಿಭೀಷಣ ನಲಿಯುತ ನಿಂತಿಹ8 ಅಂಗದ ತನ್ನಯ ಜಂಘೆಲಿ ದೇವನ ಮಂಗಳ ಚರಣವ ಹಿಂಗದೆ ಸೇವಿಪ 9 ವೃದ್ಧ ಜಾಂಬವ ಗದ್ದುಗೆ ಮುಂದಿಹ ಯುದ್ಧ ಪ್ರವೀಣರು ಸಿದ್ಧರಾಗಿಹರು 10 ಉಳಿದ ಕಪಿ ದನುಜ ದಳಗಳು ಹಿಂದೆ ಕಲಕಲ ಮಾಡುತ ಉಲಿಯುತಲಿಹವು 11 ಅರರೆ ವಿಮಾನವು ತಿರುಗಿತು ನೋಡು ಧರಣಿಗೆರಗುತಿದೆ ಭರದೊಳು ನೋಡು 12 ಭಳಿರೇ ರಾಮನು ಇಳಿದನು ನೋಡು ಕಳವಳವೆಲ್ಲವ ಕಳೆಯುತ ನೋಡು 13 ಬಂದನು ಅದಕೊ ಬಂದೇ ಬಂದನು ಇಂದುಮುಖಿಯ ತಾ ಹಿಂದಿಟ್ಟುಕೊಂಡು14 ಮುಂದೆ ಬರುವ ಕಪಿಯನು ಉಳಿದು ಸುಂದರ ಮುಖವು ಕುಂದಿದೆ ನೋಡು 15 ನಡೆದು ಬರುತಿಹ ಮಡದಿಯೊಡಗೂಡಿ ತಡಮಾಡದಿರು ಪೊಡಮಡು ಪೋಗು 16 ಇಂತು ನುಡಿದು ಧೀಮಂತನಾದ ಹನು- ಮಂತ ಚಿಗಿದು ಖಗನಂತೆ ಬಂದಿಳಿದ17 ವಾತಸುತನ ಸವಿಮಾತಲಿ ಭರತನು ಪ್ರೀತಿಲಿ ತಿರುಗಿದನಾತುರದಿಂದ 18 ನೋಡುತ ರಾಮನ ಓಡುತ ಬಂದೀ ಡಾಡಿದ ತನುವ ಬಾಡಿದ ಮುಖದಿ 19 ಅನುಜನ ನೋಡಿ ದನುಜಾರಿಯಾಗ ಮನ ಮರುಗಿದ ಬಲು ಕನಿಕರದಿಂದ 20 ರಂಗೇಶವಿಠಲ ಕಂಗಳ ಜಲದೊಳು ಮಂಗಳಯುತನಾಲಿಂಗನಗೈದ 21
--------------
ರಂಗೇಶವಿಠಲದಾಸರು
ಬಲುಕಷ್ಟ ಬರಗಾಲ ಬಂದಿತಯ್ಯ ವೈರಿ ಜನಕೆ ಬರಬಾರದಯ್ಯ ಪ ಶಿಶುಗಳಿಗೆ ಹಾಲಿಲ್ಲ ಪಶುಗಳಿಗೆ ಮೇವಿಲ್ಲ ಉಸರಲು ಬಾಯಿಲ್ಲ ವೃದ್ಧ ಜನಕೇ ಅಶನ ವಸನಕ್ಕಾಗಿ ವ್ಯಸನ ಪೂರಿತರಾಗಿ ನಿಶಿ ಹಗಲು ಜನರೆಲ್ಲ ಉಸುರು ಹಾಕುತಲಿಹರು 1 ಧÀವಸಧ್ಯಾನ್ಯದ ಬೆಲೆಯು ದಿವಸ ದಿವಸಕೆ ಮಹಾ ಪ್ರವಾಹದಂದದಿ ವೃಧ್ಧಿಯಾಗುತಲಿಹುದು ಅವಸರಕೆ ಬೇಡಿದರೆ ಲವಣದೊರೆಯದು ಮೇಲೆ ಶಿವಶಿವಾಯೆಂದು ಭವಣಿಯನನುಭವಿಸುವರು 2 ಶಾರೆ ಕಾಳು ಭಿಕ್ಷೆಕೆರೆಯುವದಕೆ ಗತಿಯಿಲ್ಲಾ ಶರಗೊಡ್ಡಿ ಕರೆದರೂ ಕೊಂಡರೊಬ್ಬರುಯಿಲ್ಲಾ ಅರೆಹೊಟ್ಟಿಯುಂಡು ಹರಕು ಬಟ್ಟಯನುಟ್ಟ ಮರಮರನೆ ಮನದೊಳಗೆ ಮರುಗುವರು ಬಡಜನರೂ 3 ಜೋಳನವಣಿ ಸಜ್ಜಿ ಕಾಳಿಗೇರಿದ ಬೆಲೆಗೆ ತಾಳಿ ಮನದಲಿ ವ್ಯಥಿಯ ಕೂಲಿ ಜನರು ಕೂಳಿಗಾಗದು ಎಂದು ಬಾಳುವೆಯ ಗೈಯುವಂಥ ಕೂಲಿವಲ್ಲೆವು ಎನುತ ಗೋಳಿಡುತಲಿಹರು 4 ಕಡಲೆ ಕಾಣದ ಹರಿಯು | ಕಡಲೊಳಡಗಿದ ಮೃಡನು ಸೊಡರೆಣ್ಣೆಸಿಗದೆಂದು ಸುಡುಗಾಡು ಸೇರಿದಾ ಅಡಕಿ ಸಕ್ಕರೆ ಗೋಧಿ ಕೊಡುವ ಬೆಲೆಯನು ಕೇಳಿ ಮಿಡುಕಿ ಮನದೊಳು ಕಣ್ಣ ಬಿಡುತಿಹರು ಸುಮನಸರು 5 ಮಳೆರಾಯ ಮುನಿದುದಕೆ ಹೊಲ ಬೆಳೆಯದಿದ್ದುದಕೆ ಬಳುತಿಹವು ಬಡಜನರ ಕಣ್ಣಿಂದ ನೀರು ಜಲಹರಿಸುವದು ನೋಡಿ ನಲಿದಾಡಿ ನಗುತಿಹಳುಕ್ಷಾಮದೇವಿ 6 ಕ್ಷಾಮದೇವಿಗೆ ತನ್ನ | ಧಾಮಸೇರುವಂತೆ ನೀಡಿ ಮಾಡಿ ಸಾಕು ನಮ್ಮ ಸಕಲ ಜನಕೇ | ಕ್ಷೆಮ ಸೌಖ್ಯವಗರೆದು | ಪ್ರೇಮದಲಿ ಪೊರೆ ಕರವ ನಾ | ಮುಗಿದು ಪ್ರಾರ್ಥಿಸುವೆ ಶಾಮಸುಂದರ ಸ್ವಾಮಿ 7
--------------
ಶಾಮಸುಂದರ ವಿಠಲ