ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಲಿರಾಯ ಬಂದಿಹನು ಕಾಣಿಕೆಯ ಪಿಡಿದು ಚೆಲುವಿನಿಂದನುಸರಿಸಿ ಕುಲವನುದ್ಧರಿಸಿ ಪ ಮೂರು ಯುಗದೊಳು ತಾನು ಸೇರಿಕೊಂಡನು ವನವ ಚೋರರಾಯರ ಸಂಗ ಬೇಡವೆನುತ ವೀರನಾಗಿಯೆ ಬಂದ ನಾಲ್ಕನೆಯ ಯುಗದೊಳಗೆ ಸಾರಿ ಬನ್ನಿರೊ ನಮ್ಮ ದೊರೆಯ ಮನ್ನಿಸಲು 1 ಮದಮುಖರ ಕಾಣುತಲೆ ಮುದದಿಂದ ಮನ್ನಿಸುತ ಕದನಕರ್ಕಶರನ್ನು ಕಾಮಿಸುವನು ಒದಗಿದನ್ಯಾಯಗಳನೊಲಿಸಿಕೊಂಬನು ತಾನು ಬೆದರಿಕೆಯು ಬೇಡ ನೀವಿದಿರುಗೊಳ ಬನ್ನಿ 2 ಸತ್ಯವೆಂಬುದನೆಲ್ಲ ಹತ್ತಿಸಿದ ಬೆಟ್ಟವನು ಮಿಥ್ಯ ನಿರ್ಮಳಕೆಲ್ಲ ಕುತ್ತಿಗೆಗೆ ಬಂತು ಒತ್ತಿಯಾಳುವ ಧರ್ಮ ಸತ್ತು ಹೋದನು ಹಿಂದೆ ಮೃತ್ಯು ಭಯ ನಮಗಿಲ್ಲ ಹತ್ತಿರಕೆ ಬನ್ನಿ 3 ತಪ್ಪಿ ಹೋಯಿತು ಶಾಸ್ತ್ರ ತಪ್ಪಾಯ್ತು ಪೌರಾಣ ಮುಪ್ಪು ಬಂದುದು ವೇದ ಕಪ್ಪಾದನಗ್ನಿ ತುಪ್ಪನ್ನ ಬೇಡವಗೆ ಇಪ್ಪ ಭಯಗಳು ಹೋಯ್ತು ಒಪ್ಪಿ ಕಾಣಿಸಿಕೊಂಡು ಸುಖಿಯಪ್ಪ ಬನ್ನಿ 4 ಸ್ನಾನವೆಂಬುದು ಯೆಲ್ಲ ಮಾನಿನಿಯ ಅಡಿಗೆಯೊಳು ಮೌನ ಜಪಗಳನೆಲ್ಲ ಕೃಷಿಕೊಂಡನು ಹಾನಿಯಾದರು ಯಜ್ಞಹೀನರಾದರು ಪಿತೃಗ ಳೇನ ಮಾಡುವರಿವರು ಅನುಮಾನ ಬೇಡೆನುತ 5 ದಯಯೆನಿಪವನು ಹೋಗಿ ಕೊಯ್ಸಿಕೊಂಡನು ಕೊರಳ ಭಯವಿಲ್ಲ ಹಿರಿಯರೂ ವ್ಯಯವ ಸೇರಿದರು ನಯನೀತಿ ಹೇಳುತಿಹ ಗುರುವಿನೊಳು ಕಣ್ಣಿಲ ್ಲ ಜಯವಾಯ್ತು ದೇಶದೊಳು ಹೊಯ್ಸಿ ಡಂಗುರುವ 6 ಶಿವನು ದುರ್ಗವ ಬಲಿದ ಜವನು ದಂಡವನಿಟ್ಟ ಬವಣೆಬಡುವನು ಕಮಲಭವನು ತನ್ನೊಳಗೆ ಹವಣನರಿಯದೆ ವಿಷ್ಣು ತವಕಿಸುವ ಮನದೊಳಗೆ ಕವಲು ಮನ ಬೇಡಿರಲು ಬಹುದು ಇವನೊಳಗೆ 7 ಪತಿಯ ಮರೆತಳು ಸತಿಯು ಸುತ ಮತಿಯ ತಪ್ಪಿದನು ಯತಿ ಸತತ ಮನದೊಳಗೆ ಖತಿಗೊಂಬನು ಚತುರವರ್ಣಾಶ್ರಮವ ಜೊತೆಯಾಗಿ ನಡೆಸುತಿಹ ಮತಿಯುತನು ದೃಢವೆಂದು ಕಾಯವನುಸರಿಸಿ8 ತಾಯಿ ತಂದೆಯ ಕೊಂದು ಜೀವ ಹಾನಿಯ ಮಾಡಿ ಬಾಯ ಹೊಯ್ದರು ಕೇಳ ಬಡವರನ್ನು ಮಾಯವಾದಿಯ ಮಾತು ಕೂಡಿಸುವ ಜೀವವನು ರಾಯರಾಯರ ಮುಂದೆ ನಡೆಸುತ್ತಲಿಹರು 9 ಆಡಿಗಾರರ ತಂದು ನಾಡ ಊಳಿಗಕಿಡುವ ನೋಡಿದನ್ಯಾಯ ಮಾತುಗಳ ಹಿಡಿತರುವನು ಕೂಡಿಸುವ ಜೀವವನು ಎಳೆನೀರು ಸಕ್ಕರೆಯು ಬೇಡಿದಿಷ್ಟಾರ್ಥದೊಳು ನೋಡಿ ನಡೆಸುವನು 10 ಕೆಟ್ಟನೀತಿಯ ಒಳಗೆಯಿಟ್ಟುಕೊಂಡರೆ ನಿಮ್ಮ ಗಟ್ಟಿಬಡಿಸುವ ದೊರೆಯು ದೃಷ್ಟಿಯಲಿ ನೋಡ ಕಷ್ಟವಿಲ್ಲದೆ ಸುಖದಿ ಹೊಟ್ಟೆಯನು ಹೊರಕೊಂಡು ಸೃಷ್ಟಿಯೊಳು ವರಪತಿಯ ಮುಟ್ಟಿ ಸೇವಿಪುದು 11 ಕಾಲದರಸಿನ ನೋಡಿ ಮೂಲ ಪಡಕೊಂಬುವರು ಆಲಸ್ಯವನು ಬಿಟ್ಟು ಸೇವಿಸುವುದು ಶಾಲು ಸಕಲಾಭರಣ ತೋಲಾಗಿ ಬರುತಿಹುದು ಜಾಲರೂಪವದಾಗಿ ಮನಕೆ ತೋರುವುದು 12 ತಾಯಿ ತಂಗಿಯರನ್ನು ಮೋಹಿಸಲು ದೊರೆರಾಯ ಬಾಯಹೊಯಿಯೆಂದೆನುತ ನೋಯನುಡಿ ಪೇಳ ಆಯವಾಗಿಹ ಪುರುಷ ಸಾಯಲಾಕ್ಷಣ ಬಂದು ಕಾಯವನು ಬಳಸುವನು ಮೋಹವನು ತೋರಿ13 ಹೀಗೆಂದು ಚರನೋರ್ವ ಕೂಗಿ ಕರೆಯಲು ಬಂದು ಅಗಲೇ ಎದ್ದು ಇದಿರಾಗಿ ಪರಿಜನವು ಬೇಗದೊಳಗನುಸರಿಸಿ ಭೋಗವನು ಕೈಕೊಂಡು ರಾಗದೊಳಗಿದ್ದರಾ ಭವಜಲದ ನಡುವೆ 14 ಹೇಡಿಗಳು ಬರಬೇಡಿ ಮೂಡ ಗುಡ್ಡೆಯ ಸೇರಿ ಕಾಡಫಲವನು ಮೆದ್ದು ಕೋಡಗಲ್ಲಿನೊಳು ಆಡುತಿಹ ವರಾಹತಿಮ್ಮಪ್ಪನ್ಹತ್ತಿರದಿ ಬೇಡಿಕೊಳ್ಳಿರೊ ಎನುತ ನೋಡಿ ನಗುತಿಹರು 15
--------------
ವರಹತಿಮ್ಮಪ್ಪ
ಪೊರೆಯೊ ಶ್ರೀಶನೆ ಸರುವ ಲೋಕ ಪೊರೆವನೆ ಪ ಅರಿತು ಅರಿಯದಂತೆ ನಾನು ಗರುವದಿಂದ ಮೆರೆದನಯ್ಯ ಅ.ಪ ಅರುಣ ಉದಯದಲ್ಲಿ ಎದ್ದು ಹರಿಯೆ ನಿನ್ನ ಸ್ಮರಣೆ ಬಿಟ್ಟು ಗೊರಿಕೆ ಹೊಡಿದು ನಿದೆÀ್ರಮಾಡಿ ದುರಿತದಲ್ಲಿ ಪೊರಳುವವನ 1 ಕುತುಬ ಕಾಲದಲ್ಲಿ ಬಂದ ಅತಿಥಿಗಳನು ಜರೆದು ನೂಕಿ ಮಿತಿಯ ಮೀರಿ ಸವಿಯುತ ಪರ- ಗತಿಯ ದಾರಿ ಕಾಣದವನ 2 ದಾನಧರ್ಮ ಕೇಳಬಂದ ಮಾನವಂತ ಜನರ ಬಹಳ ಹೀನ ಮಾತಿನಿಂದ ಬೈದ ಜ್ಞಾನರಹಿತನಾದ ನರನ 3 ರೊಕ್ಕವಿರುವದೆಂದು ಬಹಳ ಸೊಕ್ಕಿನಿಂದ ಬಡವರನ್ನು ಲೆಕ್ಕಿಸದೆ ಮಾತನಾಡಿ ಧಿಕ್ಕರಿಸಿದ ಅಧಮ ನರನ 4 ಪಟ್ಟದರಸಿಯಿರಲು ಅವಳ ಬಿಟ್ಟು ಪರರ ಸತಿಯ ಬಯಸಿ ಅಟ್ಟಹಾಸದಿಂದ ನಗುತ ಕೆಟ್ಟು ಹೋದ ಭ್ರಷ್ಟ ನರನ 5 ಎಷ್ಟು ಮಾಡಲೇನು ಎಳ್ಳಿ ನಷ್ಟು ಸುಖವ ಕಾಣಲಿಲ್ಲ ಇಷ್ಟ ಮಿತ್ರ ನೀನೆಯೆಂದು ಗಟ್ಟಿಯಾಗಿ ತಿಳಿದುಕೊಂಡೆ 6 ಶ್ರಿಷ್ಟಿಗೊಡೆಯನು ರಂಗೇಶ- ವಿಠಲನೆಂಬ ಮತಿಯ ಎನಗೆ ಎಷ್ಟು ಮಾತ್ರ ಕೊಟ್ಟು ಸಲಹೊ ಕೆಟ್ಟ ಮೇಲೆ ಬುದ್ಧಿ ಬಂತು 7
--------------
ರಂಗೇಶವಿಠಲದಾಸರು