ಒಟ್ಟು 91 ಕಡೆಗಳಲ್ಲಿ , 31 ದಾಸರು , 60 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಿದ್ಧಬಸವ ಪ್ರಸಿದ್ಧನ ಮಹಿಮೆಯ ಕೇಳಿರಿ ನೀವಿನ್ನು |ವಿದ್ಯಾ ಬುದ್ಧಿ ಧನ ಧಾನ್ಯವನು ಸಿದ್ಧಿಸುವವಿನ್ನೂ ಪ ಶಿವನ ಅಪ್ಪಣೆ ತೆಗೆದುಕೊಂಡು ಶಿವಕಂಚಿಯೊಳಗೆ |ಪಾವನ ಚರಿತ ಬ್ರಾಹ್ಮಣನಲ್ಲಿ ಪುಟ್ಟಿದನು ಬೇಗ ||ದಿವಸ ದಿವಸಕೆ ಬೆಳೆದನು ಬಿದಗಿ ಚಂದ್ರಮನ ಹಾಗೆ |ಜಾವ ಜಾವಕೆ ಶಿವನ ಧ್ಯಾನವ ಮಾಡುವ ಮನದೊಳಗೆ 1 ಮುಂಜಿ ಮಾಡಿಸಿಕೊಂಡನು ಸಿದ್ಧನು ಮದುವೆಯಾಗಲಿಲ್ಲ |ರಂಜಿಸುತಿಹನು ಸೂರ್ಯನಂತೆ ತೋರುವ ಜಗಕೆಲ್ಲ ||ಬಂಜೆ ಒಬ್ಬಳು ಇದ್ದಳು ಆಕೆಗೆ ಮಗನ ಕೊಟ್ಟನಲ್ಲ |ಸಂಜೆ ಹಗಲು ಕಾಣದ ಕುರುಡಗ ಕೊಟ್ಟನು ಕಣ್ಣುಗಳ 2 ತಂದೆ ತಾಯಿಗೆ ಹೇಳಿದನಾಗ ಪೋಗುವೆ ನಾನೆಂದು |ಕಂದ ನಮ್ಮನು ಬಿಟ್ಟು ಪೋಗುವದುಚಿತವೆ ನಿನಗೆಂದು ||ಅಂದ ತಾಯಿಗೆ ವಂದಿಸಿ ಹೇಳಿದ ಮಗನಾಗುವೆನೆಂದು |ಸಂದೇಹವು ಬೇಡೆಂದು ಪೇಳುತ ತೆರಳಿದ ದಯಾಸಿಂಧು 3 ಮಹಾಶಿವಾಲಯ ಕಂಡನು ಸಿದ್ಧನು ದೇಶ ತಿರುಗುತಲಿ |ಆ ಸೀಮೆಯಲಿ ಹಳ್ಳದ ನೀರು ನಿರ್ಮಲ ನೋಡುತಲಿ ||ಆಸನ ಹಾಕಿ ಕುಳಿತನು ಶಿವನ ಧ್ಯಾನವ ಮಾಡುತಲಿ |ಆ ಸಮಯದಿ ಬಂದನು ಕರಣಿಕ ಹೊಲಗಳ ನೋಡುತಲಿ 4 ಉದ್ದಂಡ ಸಂತತಿ ಆಗಲಿ ಇನ್ನು 5 ನಿನ್ನಯ ಪೂಜೆಯ ಮಾಡುವದ್ಹೇಗೆ ಹೇಳೋ ನಮಗೀಗ |ಮನ್ನಿಸಿ ಅವಗೆ ಪೇಳಿದ ಸಿದ್ಧ ಪುರುಷನು ತಾ ಬೇಗ ||ಸಣ್ಣ ಬಿಂದಿಗೆಯನಿಟ್ಟು ದ್ವಿಜರ ಪಾದೋದಕವೀಗ |ಸಂಖ್ಯೆಯಿಲ್ಲದ ಕೊಡಗಳ ಹಾಕಲು ತುಂಬದು ಎಂದೀಗೆ 6 ಅಂದಿಗೆ ಉಂಟು ಇಂದಿಗೆ ಇಲ್ಲ ಎನಲಾಗದು ನೀನು |ಸಂದೇಹವಿಲ್ಲ ಆಶ್ವೀನ ವದ್ಯ ದ್ವಿತೀಯದ ದಿನವು ||ಇಂದಿಗೆ ಕರಣಿಕ ವಂಶದವರು ಮಾಡುತಾರೆ ಇನ್ನೂ |ಮುಂದಕೆ ತೆರಳಿ ಕೊಳಕೂರಕೆ ಬಂದ ಸಿದ್ಧ ತಾನು 7 ಗಾಣಿಗರ ಮನೆಯೊಳಗಿದ್ದು ಗಾಣಾ ಹೂಡಿದನು |ಪ್ರಾಣ ತೊಲಗಿದ ಹೆಣ್ಣುಮಗಳಿಗೆ ಪ್ರಾಣವನಿತ್ತಾನು ||ಗೋಣಿಯೊಳಗೆ ಹೊಲಿದು ನದಿಯಲಿ ಪಾಚ್ಛಾ ಹಾಕಿದನು |ಕಾಣಿಸದಂತೆ ಬೇಗನೆ ಹೊರಗೆ ಹೊರಟು ಬಂದಾನು 8 ಹೆಸರು ನಿನ್ನದು ಏನು ಎಂದು ಪಾಚ್ಛಾ ಕೇಳಿದನು |ಹೆಸರು ನನಗೆ ಬಸವನೆಂದು ಕರೆತಾರೆ ಇನ್ನು ||ಪಶು ನೀನಾದರೆ ಸೊಪ್ಪಿಯ ಬೇಗ ತಿನಬಾ ಎಂದನು |ನಸು ನಗುತಲಿ ಸೊಪ್ಪಿಯ ತಿಂದು ಡುರಕಿ ಹೊಡೆದಾನು 9 ಗೊಂಬಿಗೆ ವಸ್ತಾ ಸೀರೆಯನುಡಿಸಿ ಸಿಂಗಾರ ಮಾಡಿದನು |ರಂಭೆಗೆ ಸರಿ ಈ ಹೆಣ್ಣು ಮಗಳಿಗೆ ಮದುವ್ಯಾಗೋ ನೀನು ||ಅಂಬುಜ ಮುಖಿ ಬಾರೆಂದು ಕರೆದನು ಸಿದ್ಧ ಮುನೀಶ್ವರನು |ತುಂಬಿದ ಬಸುರೊಳು ಮಗನ ಪಡೆದಳು ವಂಶಾದೆ ಇನ್ನು 10|| ನೇಮವ ಮಾಡಿ ಕೊಳಕೂರದಿ ಇರುವೆನು ನಾನೆನುತ |ಈ ಮಹಿಮೆಯೊಳಗೆ ಭೀಮಾ ದಕ್ಷಿಣವಾಹಿನಿ ಮಹಾಕ್ಷೇತ್ರ ||ಗ್ರಾಮಸ್ಥರನು ಕರೆದು ಹೇಳಿದನು ಅಡಗುವೆ ನಾನೆನುತ |ನೀವು ಮಾತ್ರ ನಾವಿದ್ದ ಸ್ಥಳವನು ನೋಡಬೇಡೆನುತ 11 ಕಲಿಕಾಲವನು ಕಂಡು ಸಿದ್ಧನು ಅದೃಶ್ಯನಾದನು |ತಿಳಿದು ಭಕ್ತಿ ಮಾಡಿದವರಿಗೆ ವರಗಳ ಕೊಡುತಿಹನು ||ಸುಳಿವನು ಕಣ್ಣಿಗೆ ಸತ್ಪುರುಷರಿಗೆ ಸಿದ್ಧ ಬಸವ ತಾನು |ಹಲವು ಹಂಬಲ ಮಾಡಲು ಬೇಡರಿ ಇರುವೆ ನಾನಿನ್ನೂ 12 ಹನ್ನೆರಡು ನುಡಿ ಸಿದ್ಧನ ಸ್ತೋತ್ರವ ಕೇಳಿದವರಿಗೆ |ಮುನ್ನ ಮಾಡಿದ ಪಾಪವು ನಾಶಾಗಿ ಹೋಗುವದು ಬೇಗ ||ಧನ್ಯನಾಗುವ ಕೀರ್ತಿ ಪಡೆಯುವ ಲೋಕದ ಒಳಗ |ಚನ್ನಾಗಿ ಶ್ರೀಪತಿ ಗುರುವಿಠ್ಠಲನು ಒಲಿವನು ತಾ ಬೇಗ 13
--------------
ಶ್ರೀಪತಿ
* ಎಂಥಾದ್ದೊ ಶ್ರೀ ತಿರುಪತಿ | ಎಂಥಾದ್ದೊ ಪ. ಎಂಥಾದ್ದೊ ತಿರುಪತಿ ಕ್ಷೇತ್ರ | ಸ ತ್ಪಾಂಥರಿಗಿಲ್ಲಿ ಸುಗಾತ್ರ | ಆಹ ಕಂತುಪಿತನು ಇಲ್ಲಿ ನಿಂತು ಭಕ್ತರಿಗೆಲ್ಲ ಸಂತಸಪಡಿಸುವನಂತಾದ್ರಿನಿಲಯ ನಿನ್ನೆಂದಾದ್ದೊ ಅ.ಪ. ನಾಗಾದ್ರಿಗಿರಿಯ ಮೆಟ್ಟುಗಳು | ಅ ಯೊಗ್ಯರಿಗಿದು ದುರ್ಲಭಗಳು | ಅಲ್ಲಿ ಭಾಗವತರ ಸಮ್ಮೇಳಗಳು | ಶಿರ ಬಾಗಿ ವಂದಿಪರು ಜನರುಗಳು | ಆಹ ಪೋಗುತ ಗಾಳಿಗೋಪುರವ ಕಂಡೆರಗಿ ಮುಂ ದ್ಯಾಗುತ ಸಜ್ಜನ ನೀಗುವರು ದುಃಖ1 ಹರಿಮಂದಿರ ಮಹಾದ್ವಾರ | ಬಹು ಜ ನರು ಕೂಡಿಹರು ವಿಸ್ತಾರ | ಬೀದಿ ನಡೆದು ಪದ್ರಕ್ಷಿಣಾಕಾರ | ಭೂ ವರಹನ ಸ್ವಾಮಿ ಕಾಸಾರ | ಆಹ ಹರುಷದಿಂದಶ್ವತ್ಥ ತರುವ ಕಂಡೆರಗಿ ಹರಿ ದರುಶನಕಾಗಿ ಹಾರೈಸುವ ಜನತತಿ 2 ಸ್ವಾಮಿಪುಷ್ಕರಣಿಯ ಸ್ನಾನ | ಮನ ಕಾನಂದಪ್ರದ ಸುಜ್ಞಾನ | ಭಾನು ತಾನುದಿಸುವನು ಮುಂದಿನ | ಸುಖ ಕೇನೆಂಬೆ ಹರಿಯ ದರ್ಶನ | ಆಹ ನೀನೆ ಗತಿಯೆಂದು ನಂಬಿದವರ ಪೊರೆವ ಭಾನುಪ್ರಕಾಶ ಹಣ ಕಾಣೀಕೆ ಕೈಕೊಂಬ 3 ಗರುಡ ಸ್ಥಂಭವನೆ ಕಾಣುತ್ತ | ಬಾಗಿ ಕರಮುಗಿದು ಒಳದ್ವಾರ ಪೊಗುತ | ವಿಮಾನ ಗಿರಿ ಶ್ರೀನಿವಾಸಗೆರಗುತ್ತ | ಬಂದು ವರ ತೊಟ್ಟಿ ತೀರ್ಥ ಕೊಳ್ಳುತ್ತ | ಆಹಾ ತರತರದ ಕಾಣಿಕೆ ಕೊಪ್ಪರಿಗೆಗೆ ಸುರಿಯುತ್ತ ನಿರುತ ನೀ ಸಲಹೆಂದು ಮೊರೆಯಿಡೆ ಭಕ್ತರು 4 ಗರುಡನ ಎದುರೊಳು ನಿಂದು | ಸ್ವಾಮಿ ಗರುವ ರಹಿತ ತಾ ಬಂದು | ಬಂದ ವರಭಕ್ತರನೆ ಕಾಯ್ವ ಬಿರುದು | ಇಂಥ ಹರಿಗೆ ಅಮೃತೋದಕವೆರೆದು | ಆಹಾ ಜರಿಯ ಪೀತಾಂಬರ ಉಡಿಸಿ ಸರ್ವಾಭರಣ ಹರಿಗೆ ಶೃಂಗರಿಸಿಪ್ಪ ಪರಿಯ ವರ್ಣಿಸಲಳವೆ 5 ಶಿರದಲಿ ಪೊಳೆವ ಕಿರೀಟ | ಕ ಸ್ತೂರಿ ತಿಲಕವು ಸುಲಲಾಟ | ಸುರ ನರರ ಪಾಲಿಪ ವಾರೆ ನೋಟ | ಕರ್ಣದಿ ಕುಂಡಲ ಮಾಟ | ಆಹ ವರ ಸಂಪಿಗೆಯ ಪೋಲ್ವ ನಾಸಿಕದ ಕದಪುಗಳ್ ಮೆರೆಯೆ ಕನ್ನಡಿಯಂತೆ ಮುಗುಳು ನಗೆಯ ಚೆಲ್ವ 6 ಸಿರಿವತ್ಸ ಕೌಸ್ತುಭಹಾರ | ಕಂಠ ಕರಶಂಖ ಚಕ್ರವಪಾರ | ಸುರ ನರರಿಗಭಯ ತೋರ್ಪಧೀರ | ಕರ ದ್ವರವ ಕೊಡುವಂಥ ಉದಾರ | ಆಹ ತರತರದ ಪುಷ್ಪಗಳ್ ನವರತ್ನ ತುಳಸಿಯ ಮೆರೆವೊ ಹಾರಗಳನು ಧರಿಸಿರ್ಪ ಗಂಭೀರ 7 ವಕ್ಷಸ್ಥಳದಲ್ಲಿ ಲಕುಮಿ | ಹರಿ ಅವನಿ | ಜಗ ರಕ್ಷಿಪ ಮಮಕುಲಸ್ವಾಮಿ | ಸರ್ವ ಸಾಕ್ಷಿಯಾಗಿದ್ದು ತಾ ಪ್ರೇಮಿ | ಆಹ ಪಕ್ಷಿವಾಹನ ಸುರಾಧ್ಯಕ್ಷ ಖಳ ಶಿಕ್ಷ ಪಕ್ಷವಹಿಸಿ ಸುರರ ರಕ್ಷಿಪ ಸರ್ವದ 8 ನಡುವಿನ ನಾಭಿ ವಡ್ಯಾಣ | ಮೇಲೆ ಕುಂದಣ | ನೆರೆ ಪಿಡಿದುಟ್ಟ ಪೀತಾಂಬ್ರವರ್ಣ | ಕಾ ಲ್ಕಡಗ ರುಳಿಯು ಗೆಜ್ಜೆ ಪೂರ್ಣ | ಆಹ ಮಡದಿಯರುಭಯದಿ ಪರಿಶೋಭಿಸುತಿರೆ ಪಾದ ದೃಢಭಕ್ತರನೆ ಪೊರೆವ 9 ನೋಟಕತಿ ಚಲುವ ಗಂಭೀರ | ಭಕ್ತ ಕೂಟದಿ ಮೆರೆಯುತಪಾರ | ಉತ್ಸ ಸಾರ | ಭೋಕ್ತ ಸಾಟಿರಹಿತ ಬರುವ ಧೀರ | ಆಹ ಕೋಟಿದೇವತೆಗಳ ನೋಟದಿಂ ಪೊರೆಯುವ ದಾಟಿಸುವ ಭವನಾಟಕಧರದೇವ 10 ಮಚ್ಛಾದ್ಯನೇಕ ಅವತಾರ | ಬಹು ಇಚ್ಛೆಯಿಂದಲಿ ಭಜಿಸುವರ | ಕಾಯ್ವ ಮೆಚ್ಚುತ ಮನದಲಿ ನಾರ | ಸಿಂಹ ಸ್ವೇಚ್ಛೆÉ್ಛಯಿಂ ಮೆರೆವ ಜಗತ್ಸಾರ | ಆಹ ತುಚ್ಛಕರು ವಸನ ಬಿಚ್ಚಿ ಸೆಳೆಯುತಿರೆ ಇಚ್ಛೆಯರಿತು ಲಲನೆ ರಕ್ಷಿಸೆನಲು ಪೊರೆದ 11 ಎಲ್ಲೆಲ್ಲಿ ನೋಡಲು ಭಕ್ತ | ಜನ ರಲ್ಲಲ್ಲಿ ನೆರೆಯುತ ಮುಕ್ತಾ | ಧೀಶ ನಲ್ಲದಿನ್ನಿಲ್ಲೆಂದು ಸ್ತುತಿಸುತ್ತ | ಶ್ರೀಶ ಇಲ್ಲೆ ಬಾರೆಂದು ಕರೆಯುತ್ತ | ಆಹ ಸೊಲ್ಲು ಲಾಲಿಸೊ ಎನಲು ಬಲ್ಲಿದ ಭಕ್ತರ ಸೊಲ್ಲಿಗೆ ಒಲಿಯುವ 12 ಬುತ್ತಿ ಪೊಂಗಲು ಮಾರುವರು | ಜನ ರರ್ಥಿಯಿಂದದನು ಕೊಂಬುವರು | ಗೀತ ನೃತ್ಯ ವಾದ್ಯಗಳಿಂ ಕುಣಿಯುವರು | ಅನ್ನ ಅರ್ಥಿಯಿಂ ದಾನ ಮಾಡುವರು | ಆಹ ಎತ್ತ ನೋಡಲು ಮನಕತ್ಯಂತ ಆನಂದ ನಿತ್ಯ ಉತ್ಸವಗಳು ಸತ್ಯಾತ್ಮ ಕೈಗೊಂಬ 13 ಇಂತು ಮೆರೆವೊ ಕ್ಷೇತ್ರ ಘನವು | ನೋಡಿ ನಿಂತು ವರ್ಣಿಸಲಸದಲವು | ಜಗ ದಂತರಾತ್ಮಕನ ವೈಭವವು | ಗುರು ಅಂತರ್ಯಾಮಿ ಶ್ರೀನಿಧಿಯು | ಆಹ ಇಂತು ಬ್ರಹ್ಮೋತ್ಸವ ನಿಂತು ರಥದಿ ಬರುವ ಕಂತುಪಿತ ಶ್ರೀ ಭೂಮಿಕಾಂತೇರ ಒಡಗೂಡಿ14 ಶ್ರೀಪತಿ ಜಲದೊಳಾಡೀದ | ಕೂರ್ಮ ರೂಪದಿಂ ಗಿರಿಯನೆತ್ತಿದ | ಬಹು ಪಾಪಿ ಕನಕಾಕ್ಷನ ಕೊಂದ | ನೃಹರಿ ರೂಪ ವಾಮನ ಭೃಗುಜನಾದ | ಆಹ ಚಾಪಖಂಡನ ಕೃಷ್ಣಚರಿಸಿ ಬತ್ತಲೆ ಕಲ್ಕಿ ಗೋಪಾಲಕೃಷ್ಣವಿಠ್ಠಲನ ಮಹಾಕ್ಷೇತ್ರ15
--------------
ಅಂಬಾಬಾಯಿ
(ಅಕ್ರೂರನ ಒಸಗೆ) ರಥವೋಗದಾ ಮುನ್ನ ಗೋಕುಲಕೆ ಮನ್ಮನೋ- ರಥ ಹೋಗಿರುವುದೇನೆಂಬೇ ಪ ಅತಿ ಕೌತುಕವದಾಯ್ತು ಖಳರಾಯನೊಲಿದು ಯದು- ಪತಿಯ ಕರೆತರುವುದೆಂದೆನಗೆ ಪೇಳಿರಲಿಕ್ಕೆ ಅ.ಪ. ಪತಿತರ್ಗೆ ನಾಮ ದುರ್ಲಭವಲಾ ಎನಗೆ ಶ್ರೀ- ಪತಿ ಸೇವೆ ತಾನಾಗಿ ದೊರೆತೂ ಶತಸಹಸ್ರಾನಂತ ಜನುಮಗಳ ಸು- ಕೃತಕೆ ಫಲವಾಯಿತೆಂದರಿತೂ ಗತ ಕಿಲ್ಬಿಷನಾದೆನೆಂಬುದಕಿದೇ ಸಾಕ್ಷಿ ಪಥದೊಳಗೆ ತಾವೆ ಮುಂದುವರಿದೂ ಮಿತಿಯಿಲ್ಲದಲೆ ಮಹಾ ಶಕುನಂಗಳಾಗುತಿವೆ ಪ್ರತಿ ಇಲ್ಲವೀ ಶುಭೋದಯಕೆ ಸೂರ್ಯೋದಯಕೆ 1 ಶ್ರೀ ಪದ್ಮಜಾದಿಗಳು ಸೇವಿಸುವ ಚರಣ ಯಮು- ನಾಪುಳಿನದಲಿ ಮೆರೆವ ಚರಣಾ ಗೋಪೀಯರ ಪೀನ ಕುಚಕುಂಕುಮಾಂಕಿತ ಚರಣಾ ತಾಪತ್ರಯಾವಳಿವ ಚರಣಾ ಗೋಪುರದ ಶಿಲತೃಣಾಂಕುರುಹ ತೋರುವ ಚರಣಾ ಆಪದ್ಬಾಂಧವನ ಚರಣಾ ಣಾ ಪೂರ್ಣಾ ಎನಗಭಯಕೊಡುವಾ ಪಿಡಿಲಾ 2 ನೋಡುವೆನು ನೀರದಶ್ಯಾಮಸುಂದರನ ಕೊಂ- ಡಾಡುವೆನು ಕವಿಗೇಯನೆಂದೂ ಮಾಡುವೆನು ಸಾಷ್ಟಾಂಗದಂಡ ಪ್ರಣಾಮ ಕೊಂ- ಡಾಡುವೆನು ಕೈ ಮುಗಿದು ನಿಂದೂ ಬೇಡುವೆನು ಭುವನೈಕದಾತನೆಂದಲ್ಲಿ ಕೊಂ ಡಾಡುವೆನು ದಾಸ್ಯ ಬೇಕೆಂದೂ ಈಡಿಲ್ಲದಿಂದಿನಾ ಮನಕೆನ್ನ ಬಯಕೆ ಕೈ- ಗೂಡುವುದು ನಿಸ್ಸಂದೇಹ ದೈವ ಸಹಾಯ 3 ಇರುವನೋ ಏಕಾಂತದೊಳಗಿರುವ ಕೇಳದಿರು ಬರುವನೋ ಬಂದವನ ಕಂಡೂ ಕರೆವನೋ ಕಿರಿಯಯ್ಯ ಬಾರೆಂದು ಬಿಗಿದಪ್ಪಿ ಬೆರೆವನೋ ಬೆರಸಿಯದನುಂಡೂ ಒರೆವನೋ ಒಡಲ ಧರ್ಮವನೆಲ್ಲ ವರಗಿನೇ ಜರಿಯನೋ ಜಗದೀಶ ಹಗೆಯವನೆನುತ ಬಗೆಯ 4 ಗೋಧೂಳಿಲಗ್ನಕೆ ಗೋಕುಲಕೆ ಬಂದು ಬೆರ- ಗಾಗಿ ಹೆಜ್ಜೆಗಳ ನೋಡಿ ಭೂದೇವಿಗಾಭರಣವೆನುತ ತೇರಿಳಿದು ಶ್ರೀ ಪಾದರಜದೊಳಗೆ ಪೊರಳಾಡೀ ಗೋದೋಹನದೊಳಿದ್ದ ರಾಮಕೃಷ್ಣರ ಕಂಡು ನಾ ಧನ್ಯ ಧನ್ಯನೆಂದಾಡೀ ಶ್ರೀದವಿಠಲ ಎರಗುವನಿತರೊಳು ಬಿಗಿದಪ್ಪಿ ಸಾದರಿಸಿದನು ಇದೆ ಸದನದಲಿ ಸ್ವಪ್ನದಲಿ 5
--------------
ಶ್ರೀದವಿಠಲರು
5. ವಿಶಿಷ್ಟ ಗೀತೆಗಳು ಭ್ರಮರಗೀತೆ 92 ಭೃಂಗಾ ನಿನ್ನಟ್ಟಿದನೇ ಶ್ರೀರಂಗ ಮಧುರೆಲಿ ನಿಂದುಅಂಗಜಲುಬ್ಧಕ ಪೂಗೋಲಂಗಳ ತಡೆಯನಿಕ್ಕಿಅಂಗನೇರೆಂಬೋ ಹುಲ್ಲೆ ಮೃಗಂಗಳಿಗೆ ಗುರಿಯೆಚ್ಚುಹಿಂಗಿಸುತೈಧಾನೆ ಅಸುವ ಹೇ ಕಿತವಾ ಪ ನಿನ್ನ ನೋಡೆ ನಮ್ಮ ಅಚ್ಯುತನ್ನ ಕಂಡಂತಾಯಿತಯ್ಯಚನ್ನಿಗರರಸ ಕುಶಲೋನ್ನತಿಯೊಳಹನೇನೋಚಿಣ್ಣತನ ಮೊದಲಾಗವನ್ನ ಕಿತವ ಬಲ್ಲೆವೋಗನ್ನಗಾರ ಚಿತ್ತ ಚೋರನ್ನ ಶ್ರೀ ಹರಿಯಾಮನ್ನಣೆಗೆ ಮೆಚ್ಚಿ ತನುವನ್ನೊಪ್ಪಿಸಿದ ಮುಗುದೆವೆಣ್ಣುಗಳ ವಿರಹಾಬ್ಧಿಯನ್ನೆ ದಾಟಿಸುವೆನೆಂದುತನ್ನ ನೇಹವೆಂಬೋ ನಾವೆಯನ್ನೇರಿಸಿ ಮೋಸದಿನಡುನೀರೊಳು ತೊರೆದ್ಹೋದನೆ ಹೇ ಕಿತವಾ 1 ತಮ್ಮ ನಂದಗೋಪ ಯಶೋದಮ್ಮನ ಕಂಡುಬಾರೆಂದುರಮ್ಮ್ಮೆಯ ರಮಣ ನಿನ್ನನೊಮ್ಮೆ ಕಳುಹಿದನೈಸೆಹಮ್ಮುಗೆಟ್ಟಾರಮ್ಮಣೇರಿಂದುಮ್ಮಳಿಸುವೆವೊ ವೃಥಾನಮ್ಮ ಹಂಬಲಿನ್ನೇನವಗೆ ಶ್ರೀ ಹರಿಗೆಹೊಮ್ಮೇಲಟ್ಟದಲಂಚೆಯಗಮ್ಮನೇರ ಕುಚದ ಕುಂ-ಕುಮ್ಮ ಕಸ್ತೂರಿಯ ಕರದಿಮ್ಮನದಿ ಸಿಲುಕಿದಂಗೆಕಮ್ಮಗೋಲನ ಬಾಣಂಗಳುಮ್ಮಳಿ ನೋಯಿಸುತಿವೆಸುಮ್ಮನೆ ಬಾಹೋದು ಸುಲಭವೆ ಹೇ ಕಿತವಾ2 ಮಧುವೈರಿ ಮೇದಿನಿ ನಿಟ್ಟಿಸಲಾಗಮೃದುವಾಕ್ಯದೊಳೆಮ್ಮಪ್ಪಿ ಅಧರಾಮೃತ ಭೋಜನಕ್ಕೊದಗುವ ಸತತ ಸನ್ನದ್ಧ ನಮ್ಮನಗಲಿ ಕಲ್ಲೆದೆಯಾದನೆಂತೋ ಕೃಪಾಳು ಹೇ ಕಿತವಾ 3 ಮಜ್ಜನ ಸಾಯುಜ್ಯ ಸುಖವತ್ತಲಿಪ್ಪುದೂ ಶ್ರೀ ಹರಿಯಅಬ್ಜಭವ ಮುನಿಜನ ಪೂಜ್ಯನಗಲಿದ ಮ್ಯಾಲೆನಿರ್ಜೀವಿಗಳಾಗಿ ಕಣ್ಣ ಕಜ್ಜಲ ಕಲಕಿಕೊಂಡುಲಜ್ಜೆಗೆಟ್ಟು ತನುಲತೆ ಜರ್ಝರಿತದಿ ಜೀವಿಸೆವಜ್ಜರೆದೆಯಲ್ಲವೆ ನಮ್ಮದು ಹೇ ಕಿತವಾ 4 ಕೌಸ್ತುಭ ವೈಜಯಂತಿ ಮಾಲೆಶ್ರೀ ತುಲಸಿ ಘಮಘಮಿಸುತ್ತಲಿಹ ವನಮಾಲೆರತುನ ಕಂಕಣ ಭುಜಕೀರ್ತಿಯಿಂದೊಪ್ಪುವ ಪುರುಷೋತ್ತಮನ್ನ ಬಣ್ಣಿಪರುಂಟೇ ಹೇ ಕಿತವಾ 5 ಉತ್ಪಲ ಶ್ಯಾಮಲ ಮುದವೆತ್ತ ಬಾವನ್ನವದೀಡಿಅತ್ಯಮಲ ಪೊನ್ನಂಬರ ಸುತ್ತಿದಮತ್ತಾ ನೂಪುರ ಝಣತ್ಕಾರದಿ ಮಿಂಚಿಯೆಮ್ಮಚಿತ್ತಶಿಖಿಗೆ ಪೀಯೂಷಸಿಕ್ತ ಮೇಘದಂತೆ ಒಪ್ಪುವ ಶ್ರೀಹರಿಯಹೆತ್ತ ತಾಯಿ ಆಪ್ತ ಬಂಧು ಗೋತ್ರ ಗತಿ ನೀನೆ ನಮ್ಮ ಚಿತ್ತವೆಂದು ನಂಬಿ ತನ್ನ ಹತ್ತಿಲಿ ಸಾರಿದವರಒತ್ತಿ ತಾಂ ರಥವನೇರಿ ಸತ್ವರ ಬರುವೆನೆಂದುಮತ್ತಕ್ರೂರನೊಡನೈದಿದ ಹೇ ಕಿತವಾ 6 ಲಕ್ಷುಮಿರಮಣನವ ಸೂಕ್ಷುಮ ಗೊಲ್ಲತೇರಾವುಕುಕ್ಷಿಯೊಳು ಬೊಮ್ಮಾಂಡವವಗೆ ಮಕ್ಷಿಕಗಳಂತಿಪ್ಪೆವುಮೋಕ್ಷದರಸನು ಅವ ಗೋಕ್ಷೀರದಿ ತೃಪ್ತರಾವುಲಕ್ಷಿಸುವದೆಂತೋ ಎಮ್ಮನು ಶ್ರೀ ಹರಿಯುರಕ್ಷಿಸಲುದಿಸಿ ಜನರಕ್ಷಣೆಗೆ ಪಾಲÉ್ಬಣ್ಣೆಯಭಕ್ಷಿಸಿ ನಿರುತ ನಮ್ಮ ಅಕ್ಷಿಗೆ ಹಬ್ಬವನುಣಿಸಿಈ ಕ್ಷೋಣಿ ಚರಾಚರ ದೀಕ್ಷಿಗೆ ನರರ ಸಾಮ್ಯವಕ್ಷ(ಮ)ಣರಾದೆವೊ ಮೂರ್ಖರೋ ಹೇ ಕಿತವಾ 7 ಸಿರಿ ಮಂದರೋದ್ಧರನಂಘ್ರಿಯಪೊಂದುವ ಭಾಗ್ಯಕ್ಕೆಣೆ ಉಂಟೆ ಶ್ರೀಹರಿಯಅಂದೆಮ್ಮೊಳು ರಾಸಕ್ರೀಡೆಯಿಂದ ಬಂದಪರಾಧವ-ನೊಂದನೆಣಿಸದೆ ಸಲಹೆಂದು ಬಿನ್ನೈಸಿ ಸಾಷ್ಟಾಂಗದಿಂದವಂದಿಪೆವೋ ಭಕ್ತ ಬಂಧುವಿಗೆ ನಮ್ಮ ಹೃದಯ ಮಂದಿರದೊಳೆಂದೆಂದಿರೆಂದು ಹೇ ಕಿತವಾ 8 ಹೆಂಗಳೇರೊಂದಾಗಿ ಅಂತರಂಗದರಸನಾಡಿದಮಂಗಳಚರಿತೆಯನ್ನು ಸಂಗೀತದಿಂ ಪೊಗಳುತ್ತಕಂಗಳಶ್ರುಗಳೆವುತ್ತ ಇಂಗಿತಜ್ಞ ದೇವ-ನಂಗಸಂಗದ ಸುಖವ ನೆನೆದು ಶ್ರೀಹರಿಯಮಂಗಳ ವೇದಸ್ತೇಯಾರಿ ಶೃಂಗಾರ ಕೂರವ ನಮ್ಮಪೊಂಗಣ್ಣನ ಸೀಳ್ದ ನರಸಿಂಗ ವಟು ಭಾರ್ಗವನೆಅಂಗದ ಪಾರ್ಥ ಕಂಬುತುರಂಗಪ ರಂಗವಿಠಲತುಂಗ ಮಹಿಮ ನಮೋ ಎಂಬೆವೋ ಹೇ ಕಿತವಾ 9
--------------
ಶ್ರೀಪಾದರಾಜರು
ಅಂಬಾ ಮೈದೋರು ಶಾರದಾಂಬಾನಂಬಿದೆ ನಿನ್ನ ಅಂಬಾ ಮೈದೋರು ಶಾರದಾಂಬಾಪತಾಯೆ ಕಮಲಾಸನಜಾಯೆ ನ'ುಸಿದೆ ನಿನ್ನತಾಯೆ ಬಿಡದೆನ್ನನಸೂಯೆ ರಾಗಾದಿಗಳಿಂನೋಯೆ ನೋಡದಿಹರೆ ಮಾಯೆ ಬೇಡಿದವರ'ೀಯೆ ಪಾಪಕರ್ಮಗಳು ಬೇಯೆ ದಾರಿದ್ರವುಸೀಯೆ ಸರ್ವಲೋಕಪ್ರಿಯೆ ಕೃಪಾಲಯೆ 1ಮರತು ನಿನ್ನ ಧ್ಯಾನವ ಬೆರತು ಸತಿಸುತರೊಳು ಕರ್ಮಕಾಮ್ಯವ ಮಾಡಿ ಮರೆತು ಪೋಗಿ ಸುಖವುನರತು ಮೈಯೆಲ್ಲ ಮೋಹತೊರದ ನೊಂದೆನಿದಕೆಹೊರತು ನಾನಿನಿಸು ಪಾಪ ಬರತು ಪೋಗಲಿದರಿತು ಭಕ್ತಿಯ ಭಕ್ತ ಸರಿತೂಕದವನೆ ನೀನು2ಬಂದು ಚಿಕನಾಗಪುರದಿ ನಿಂದು ವರವೆಂಕಟಗಿರಿಚಿಬಂಧು ವಾಸುದೇವಾರ್ಯನೆಂದು ಜನರ ದುರಿತದಂದುಗವಳಿದು ಬಾರೆಂದು ಕರೆದು ಜ್ಞಾನಸಿಂಧು'ನೊಳು ಗೀತಾರ್ಥ'ದೊಂದು ನಿನಗೆ ಸಾಕೆಂದು ಧನ್ಯತೆಯನು ಹೊಂದುಯೆನಿಸಲೆಂದೆಂದೂ 3
--------------
ತಿಮ್ಮಪ್ಪದಾಸರು
ಇನಿಯಗೆನ್ನೊಡನೆ ಮುನಿಸೋ ಪ್ರೀತಿಯೋ ಪೇಳೆವನಜಾಕ್ಷಿಯವನೆಸಗಿದುದಾ ಪೇಳ್ವೆನೆ ಪ ಮೃಗಮದ ತಿಲಕವ ಪಣೆಗೆ ತಾನಿಡಲಿಲ್ಲಅಗಿಲುಗಂಧವ ಮೈಗೆ ತೀಡಲಿಲ್ಲ ಸೊಗಸು ಸಂಪಿಗೆ ಸರವಮುಡಿಸಿ ಝಗಝಗಿಪ ಮುತ್ತಿನ ಸರವಹಾಕದೆ ಎನ್ನ ಮುಗುಳು ಮೊಲೆಗೆಸೆಳ್ಳುಗುರಿಕ್ಕದಿದ್ದ ಮೇಲೆ1 ಗುರುಕುಚರ್ಚಿತ ಮೃಗಮದ ಪತ್ರವ ಸೆರಗಿನಿಂದೊರಸಿದನೆಕುಂಕುಮಗಂಧವ ಭರದಿ ಲೇಪಿಸಿದನೆ ತಾನೆತಾಂಬೂಲವ ಹರುಷದಿ ಕರದಿತ್ತನೆಆಲಿಂಗಿಸಿ ಪರಮ ಸಂತೋಷದಿ ತಿರುಗಿ ನೋಡಿದನೆ 2 ಧರಿಸಿದ ಮಿಸುನಿಯ ಆಭರಣಂಗಳ ಭರದಿಂದ ತೆಗೆದ ತಾನೆಚಿನ್ನದುಂಗುರವ ಬೆರಳಿಗೆ ನಲಿದಿಟ್ಟನೆತರುಣಿ ಬಾರೆಂದು ನಂಬುಗೆಗೊಟ್ಟನೆಶ್ರೀ ಕೆಳದಿಯ ಪುರದ ರಾಮೇಶ ಎನ್ನನೆರೆದು ಮನ್ನಿಸಿದನೆ3
--------------
ಕೆಳದಿ ವೆಂಕಣ್ಣ ಕವಿ
ಈ ಧರಣಿಯೊಳ್ ಹದಿನಾರು ಸಾವಿರ ಮಂದಿ ಆಳುತ ದ್ವಾರಕೆಯಲ್ಲಿ ವಿನೋದದಿ ಕುಳಿತಿದ್ದ ಹರಿಯು 1 ಅಂಬುಜೋದ್ಭವನ ಅಂಕದಲುದಿಸಿದ ಸುತ ಚೆಂದ ಚೆಂದ ವೀಣೆ ಪಿಡಿದು ಕಂದರ್ಪಪಿತ (ನಲ್ಲಿಗೆ) ನಲಿನಲಿದಾಡುತ ಬಂದ ನಾರಂದ ಹರುಷದಲಿ2 ಬಂದ ನಾರಂದನ ಕಂಡು ಕಮಲನಾಭ ಚೆಂದದಿಂದಲಿ ಅಘ್ರ್ಯ ಪಾದಪೂಜೆಯ ಮಾಡಿ ನಾ- ರಂದಗೆ ಎರಗಿದನಾಗ3 ದೇವಾಧಿದೇವನೆ ದೇವಲೋಕದಿ ಸುತ್ತಿ ಈ ಪಾರಿಜಾತವ ತಂದೆ ದೇವಿ ರುಕ್ಮಿಣಿಗೀಗ ಮುಡಿಸೆಂದು ನಾರಂದ ಸ್ವಾಮಿಯ ಚರಣಕ್ಕರ್ಪಿಸಿದ 4 ತಕ್ಷಣದಿ ಜಗನ್ಮಾತೆ ಮಾಲಕ್ಷುಮಿ ಸಾಕ್ಷಾತ ಶ್ರೀನಾರಾಯಣನು ವಕ್ಷಸ್ಥಳದಲಿ ಹೊಂದಿರುವ ರುಕ್ಮಿಣಿಯನು ಸ್ತೋತ್ರ ಮಾಡಿದನು ನಾರದನು 5 ಕಡಲಶಯನ ಕಡೆಗಣ್ಣ ನೋಟಗಳಿಂದ ಕಡುಮುದ್ದು ಸುರಿವೊ ರುಕ್ಮಿಣಿಯ ಬಡನಡುವಿನ ಭಾಮಿನಿರನ್ನೆ ಬಾರೆಂದು ತೊಡೆಯ ಮ್ಯಾಲಿಟ್ಟ ಶ್ರೀಕೃಷ್ಣ 6 ದುಂಡುಮಲ್ಲಿಗೆ ಗೊಂಡ್ಯ ಚೌರಿ ರಾಗಟೆ ಜಡೆ- ಅಂಗನೆ ರುಗ್ಮಿಯಾಲಿಂಗನೆ ಮಾಡುತ ರಂಗ ತಾ ಮುಡಿಸಿದ ಸತಿಗೆ 7 ಸರಿಸವತೇರ ಬಿಟ್ಟು ಸುರಪಾರಿಜಾತವ ಗರುವಿಕೆಯಿಂದ ನೀ ಮುಡಿದೆ ಹರದಿ ಸತ್ಯಭಾಮೆ ಕೇಳಿ ಮುನಿದರಿನ್ನು ಅರಿಯೆನು ನಾ ಇದಕೆ ಉಪಾಯ 8 ಗಾಡಿಕಾರನು ಕೃಷ್ಣ ಆಡುವೊ ಮಾತನು ಕೇಳಿ ರುಕ್ಮಿಣಿ ನಗುತಿರಲು ಓಡುತ ಬಂದು ನಾರದ ಸತ್ಯಭಾಮೆ- ಗಲ್ಲದ ವಾರ್ತೆಗಳರುಹಿದನು 9 ಅಲ್ಲಿಂದ ದೇವಲೋಕವ ಸುತ್ತಿ ತಂದೇನೆ ಚೆಲ್ವೆನಗೆ ತಕ್ಕ ಕುಸುಮ ಗೊಲ್ಲ ಕೃಷ್ಣನ ಕೈಯಲ್ಲಿ ಕೊಟ್ಟರೆ ತನ್ನ ನಲ್ಲೆ ರುಕ್ಮಿಣಿಗೆ ಮುಡಿಸಿದನು 10 ಕೇಳುತ ಭಾಮೆ ತಲ್ಲಣಿಸಿ ಕೋಪಗಳಿಂದ ಹೇಮಮಾಣಿಕ್ಯದ್ವಜ್ರಾಭರಣ ಹಾರ ಪದಕ ಕಠಾಣಿಮುತ್ತನೆ ಚೆಲ್ಲಿ ಭೂಮಿಲಿ ಬಿದ್ದೊ ್ಹರಳಿದಳು 11 ಮಲ್ಲಿಗೆ ದವನ ಕ್ಯಾದಿಗೆ ಶಾವಂತಿಗೆ ಬಿಟ್ಟು ಒಲ್ಲೆನೆಂದೊರೆಸಿ ಕಸ್ತೂರಿಯ ವಲ್ಲಭನೊಲ್ಲದೀ ಸೊಗಸ್ಯಾತಕೆನುತಲಿ ಗಲ್ಲದ್ವಿಳ್ಯವನುಗುಳಿದಳು 12 ಸರ್ಪನಂದದಿ ಉಸುರ್ಹಾಕುತ ಭಾಮೆ ತಾ ನೇತ್ರದಿ ಜಲವ ಸುರಿಸುತಲಿ ಸರ್ಪಶಯನನೊಲ್ಲದೀ ದೇಹವ್ಯಾಕೆಂದು ಪಟ್ಟೆ ಮಂಚದಲೊರಗಿದಳು 13 ನಿಂತು ನೋಡುತ ಸತ್ಯಭಾಮೆ ಮಾಡುವೊದು ಇ- ನ್ನೆಂತು ಮಾಡಲಿಯಿದಕೆಂದು ಅಂತರಂಗದಲಿ ಯೋಚನೆ ಮಾಡಿ ನಾರಂದ ಶ್ರೀ- ಕಾಂತನ ಮನೆಮಾರ್ಗ ಹಿಡಿದ 14 ತಿರುಗಿ ಬಂದ್ಹರಿಯ ಮುಂದರುಹಿದ ನಾರಂದ ತೊರೆವೋಳು ತನ್ನ ಪ್ರಾಣವನು ಮರುಗುತ ಸೊರಗಿ ಬಿದ್ದಿರುವೊ ಭಾಮೆಯ ನೋಡಿ ಕರುಣವಿಲ್ಲೇನೊ ಶ್ರೀ ಕೃಷ್ಣ 15 ಮುನಿಯ ಮಾತನು ಕೇಳಿ ಮುಗುಳು ನಗೆಯ ನಕ್ಕು ಪರಿ ಬವಣೆಗೆ ಒಳಗಾದೆ ಧರೆಯ ಒಳಗೆ ಇಬ್ಬರ್ಹೆಂಡರಾಳುವೋರಿನ್ನು ಪರಮ ಮೂರ್ಖರು ಅವರೆಂದ 16 ಹೊದ್ದ ಪೀತಾಂಬರ ಅಲೆಯುತ ಶ್ರೀಕೃಷ್ಣ ಹದ್ದನೇರದೆ ನಡೆಯುತಲಿ ಮುದ್ದು ರುಕ್ಮಿಣಿಯ ಮುಂದಕೆ ಕರೆದ್ಹೇಳದೆ ಎದ್ದು ಬಂದನು ಭಾಮೆಮನೆಗೆ 17 ಅರ್ಕನಂತ್ಹೊಳೆಯುತ ಹೊಕ್ಕ ತನ್ನರಮನೆ ಕಕ್ಕಬಿಕ್ಕ್ಯಾಗಿ ನೋಡುತಲಿ ದಿಕ್ಕು ದಿಕ್ಕಿಗೆ ಬಿದ್ದಾಭರಣವಾರಿಸಿ ರತ್ನ ದೆಕ್ಕಿಲೇ(?) ಬಂದು ತಾ ಕುಳಿತ 18 ಮಿಂಚು ಸೂರ್ಯಗೆ ಮಿಗಿಲಾಗಿದ್ದ ಮುಖ ಬಾಡಿ ಸಂಪಿಗೆ ಸರವ ಈಡ್ಯಾಡಿ ಚಿಂತೆಮಾಡುವರೆ ಚಿನ್ನದ ಗೊಂಬೆ ಏಳೆಂದು ಮಂಚದ ಮ್ಯಾಲೆ ತಾ ಕುಳಿತ 19 ಬೆವರಿದ್ದ ಮುಖವ ಮುಂಜೆರಗಿಲಿಂದೊರೆಸುತ ಹ- ರವಿದ ಹಾರ ಹಾಕುತಲಿ ಪರಮ ಪ್ರೀತಿಲಿ ತನ್ನ ಕರಗಳಿಂದ್ಹಿಡಿದೆತ್ತೆ- ನ್ನರಗಿಳಿ ಏಳೆಂದೆಬ್ಬಿಸಿದ 20 ಸಿಟ್ಟಿಲಿಂದೆದ್ದು ಶ್ರೀ ಕೃಷ್ಣನ ಒಳೆಯಿಕ್ಕೆ ಬಿಟ್ಟವರಾರು ಈಗೆನುತ ದೃಷ್ಟಿ ತೆಗೆದು ಕೋಟಿಸೂರ್ಯ ಪ್ರಕಾಶನ ಇ- ಕ್ಕದ್ಹಾಗೆವೆಯ ನೋಡಿದಳು 21 ಇಷ್ಟು ಕ್ರೋಧಗಳ್ಯಾತಕೀ ಚಾಡಿ ನಾರಂದ ಹಚ್ಚಿ ಹೋದನೆ ಕದನವನು <ಈಔಓಖಿ size=
--------------
ಹರಪನಹಳ್ಳಿಭೀಮವ್ವ
ಈ ಸಿರಿಯ ನಂಬಿ ಹಿಗ್ಗಲು ಬೇಡ ಮನವೆ ಪ ವಾಸುದೇವನ ಭಜಿಸೊ ಒರಟು ಜೀವನವೆ ಅ ನೆಂಟರೂರಿಗೆ ಹೋಗಿ ನಾಲ್ಕು ದಿವಸವಿದ್ದರೆಎಂಟು ದಿನದಾಯಾಸ ಅಟ್ಟಬಹುದೊಉಂಟು ಸೌಭಾಗ್ಯವೆಂಬ ಧೈರ್ಯವ ಬಿಟ್ಟು ವೈ-ಕುಂಠವಾಸಿಯ ಭಜಿಸೊ ತುಂಟ ಜೀವನವೆ1 ಮಾಯಾ ಸಂಸಾರಕ್ಕೆಸಡಗರವಗೊಂಡು ಬರಿದೆ ಭ್ರಮಿಸಲೇಕೆಬಿಡದೆ ಯಮನಾಳುಗಳು ಬಾರೆಂದು ಎಳೆವಾಗಮಡದಿ ಮಕ್ಕಳು ಬಹರೆ ಭಂಡ ಜೀವನವೆ2 ಇಷ್ಟ ಸಂಪತ್ತನ್ನು ಬಡವರಾ ಕರೆತಂದುಕೊಟ್ಟು ಮಾಡಿದ ಪುಣ್ಯಫಲ ತನ್ನದೊಸೃಷ್ಟಿಯೊಳು ಕಾಗಿನೆಲೆಯಾದಿಕೇಶವನಂಘ್ರಿಮುಟ್ಟಿ ಮನದಲಿ ಭಜಿಸೊ ಭ್ರಷ್ಟಜೀವನವೆ3
--------------
ಕನಕದಾಸ
ಈ) ರುದ್ರದೇವರು ವೃಷಭನೇರಿದ ವಿಷಧರನ್ಯಾರೆ ಪೇಳಮ್ಮಯ್ಯ ಪ ಹಸುಳೆ ಪಾರ್ವತಿಯ ತಪಸಿಗೆ ಮೆಚ್ಚಿದಜಟಾಮಂಡಲಧಾರಿ ಕಾಣಮ್ಮ ಅ.ಪ. ಕೈಲಾಸಗಿರಿಯ ದೊರೆಯಿವನಮ್ಮ-ಅದು ಅಲ್ಲದೆ ಕೇಳೆಬೈಲು ಸ್ಮಶಾನದಿ ಮನೆಯಿವಗಮ್ಮ-ಸಂಕರ್ಷಣನೆಂದುಕೇಳೆ ಮಹಿಯೊಳು ಜನ ಪೊಗಳುವರಮ್ಮ-ಇದು ನಿಜವಮ್ಮನಾಲಿಗೆ ಸಾಸಿರ ಫಣಿಭೂಷಣ ನಮ್ಮರಮೆಯರಸಗೆ ಇವ ಮೊಮ್ಮಗನಮ್ಮ 1 ಪತಿ ಇವನಮ್ಮ-ಮಾವನ ಯಾಗದಲಿಬ್ಹಾಳ ಕೃತ್ಯಗಳನು ನಡೆಸಿದನಮ್ಮ-ಸಾಗರದಲಿ ಹುಟ್ಟಿದಕಾಳಕೂಟವ ಭಕ್ಷಿಸಿದನಮ್ಮ-ರಾಮನ ದಯವಮ್ಮಮೇಲೆ ಉಳಿಯಲು ಶೇಷಗರಳವುನೀಲಕಂಠನೆಂದೆನಿಸಿದನಮ್ಮ2 ಹರನೊಂದಿಗೆ ವೈಕುಂಠಕೆ ಬರಲು-ತಾತಗೆ ವಂದಿಸುತತರುಣೀರೂಪವ ನೋಡ್ವೆನೆನಲು-ಹರಿ ತಾ ನಸುನಗುತಕರೆದು ಸೈರಿಸಲಾರೆ ನೀ ಎನಲು-ಹಠದಿ ಕುಳ್ಳಿರಲುಕರುಣೆಗಳರಸನು ಹರನ ಮೊಗವ ನೋಡಿಅರುಣೋದಯಕೆ ಬಾರೆಂದು ಕಳುಹಿದ 3 ಅರುಣೋದಯಕೆ ಗಂಗಾಧರ ಬರಲು-ಹದಿನಾರು ವರುಷದ ತರುಣೀರೂಪದಿ ಹರಿ ವನದೊಳಗಿರಲು-ಚರಣನಖಾಗ್ರದಿಧರಣೀ ಬರೆಯುತ್ತ ನಿಂತಿರಲು-ಸೆರಗ ಪಿಡಿಯೆ ಬರಲುಕರದಿ ಶಂಖ ಗದೆ ಚಕ್ರವ ತೋರಲುಹರನು ನಾಚಿ ತಲೆತಗ್ಗಿಸಿ ನಿಂತ4 ಮಂಗಳಾಂಗನೆ ಮಾರಜನಕ-ನಾ ಮಾಡಿದ ತಪ್ಪಹಿಂಗದೆ ಕ್ಷಮಿಸೊ ಯದುಕುಲ ತಿಲಕ-ವಕ್ಷದಲೊಪ್ಪುವ ನಿನ್ನಂಗನೆ ಅರಿಯಳು ನಖಮಹಿಮಾಂಕ-ಹೀಗೆನುತಲಿ ತವಕರಂಗವಿಠಲನ ಪದಂಗಳ ಪಿಡಿದು ಸಾಷ್ಟಾಂಗವೆರಗಿ ಕೈಲಾಸಕೆ ನಡೆದ 5
--------------
ಶ್ರೀಪಾದರಾಜರು
ಏಕೆ ಪೋಗುವೆ ರಂಗಾ, ರಂಗಯ್ಯ ರಂಗ ಪ ಏಕಾಂತದೊಳು ಪೇಳ್ವ ವಾಕ್ಕುಗಳನು ಕೇಳಿ ಅ.ಪ ಮುನಿಸತಿ ಶಿಲೆಯಾಗಿ ವನಜನಾಭಾಯೆಂದು ನೆನೆಯುತಲಿಲ್ಲವೋ ಮನ ಮೋಹನಾ ತನಯ ಪ್ರಹ್ಲಾದ ತಾ ಜನಕಾ ಬಾರೆನಲಿಲ್ಲ 1 ದುರುಳ ಮಕರಿಯಿಂದೆ ಪರಿತಾಪವಾಂತಿಲ್ಲ ಸ್ಮರಿಸಲಿಲ್ಲ ದುರುಳ ಕದ್ದೊಯ್ಯಲಿಲ್ಲ ಸರಸಿಜಾನನನೀಗ ಚರಣಕೆರಗಲಿಲ್ಲ 2 ಹದಿನಾರು ಸಾವಿರ ಸುದತೀ ಮಣಿಯರೆಲ್ಲ ಮದನಾಂಗ ಬಾರೆಂದು ಕರೆಯಲಿಲ್ಲ ಉದಧಿ ನಿನ್ನರಸಲಿಲ್ಲ ಪದುಳದೆ ಬಲಿ ನಿನ್ನ ಚದುರ ಬಾರೆನಲಿಲ್ಲ 3 ಕರದೆ ಕೊಡಲಿಯ ಪಿಡಿದು ಮರದೆ ನಿ[ಲ್ಲೆನುತಲಿ] ನೂರಾರು ಕೈಯವ ಕರೆಯಲಿಲ್ಲ ಹರನೀಗ ತ್ರಿಪುರರ ತರಿಯೆ ಬಾರೆನಲಿಲ್ಲ ವರತುರುಗವೇರಿ ಧುರಕೆ ಬಾರೆಂಬರಿಲ್ಲ4 ಕಾಮಿತವೀಯೆಂದು ಪ್ರೇಮದಿ ಭಜಿಸುವ ಪಾಮರರಿಲ್ಲಿಗೇ ಬರುತಿರ್ಪರೋ ಶಾಮನೆ ಮಾಂಗಿರಿಗಾಮಿಯಾಗಿಹೆಯೇಕೆ ಕಾಮಹರನೆ ಬಾರೊ ರಾಮದಾಸಜೀವ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಏನಿದು ಚಂದ ಹರಿಯೆ ಮುಕುಂದ ಪ ಒದಗಿದ ಬಾಧೆಯ ಬಿಡಿಸಲು ಬೇಡಲುತುದಿಕೆಳಸುವ ತನಕ ಹಾನಿಯ ಕಾಯ್ವುದು 1 ಕುರು ಸಭೆಯೊಳು ಮಾನವನುಳಿಸೆಂದುತರುಣಿ ಬಾಯ್ದೆರೆ ಬೇಗ ಬಾರೆಂದು 2 ಮಕರಿಯ ಹಿಡಿತವ ಬಿಡಿಸಲು ಕರಿನೃಪಮುಖವೆತ್ತಿ ಮೊರೆಯುತೆ ಜವದಿ ಪೊರೆಯುವುದು 3 ತಡಮಾಡದೆ ಶರಣರ ರಕ್ಷಿಸದೆಚಡಪಡಿಸುವುದನು ನೋಡುತಲಿರುವುದು 4 ಮೊರೆಯಿಡೆ ಭಕುತರ ಪೊರೆಯಯ್ಯ ಜವದಲಿಕರುಣಿಸು ಗದುಗಿನ ವೀರನಾರಾಯಣ 5
--------------
ವೀರನಾರಾಯಣ
ಏನೆಂದು ಕೊಂಡಾಡಿ ಸುತ್ತಿಸೆಲೊ ನಿನ್ನಾ ಪ ದಾನವಾಂತಕ ಕೃಷ್ಣ ಆನಂದ ಗುಣ ಪೂರ್ಣ ಅ.ಪ. ಮತ್ಸರೂಪಿಯೆ ನಿನ್ನ ಉತ್ಸಹದಿ ಕರೆಯಲಾಕುತ್ಸಿತನ ಸೊಲ್ಲ ನೀನೆತ್ತ ಕೇಳುವಿಯೋ |ಮತ್ಸ್ಯಕೇತನ ಜನಕ | ಮತ್ಸರವ ಕಳೆಯಯ್ಯಸಚ್ಚಿದಾನಂದಾತ್ಮ | ಚಿತ್ಸುಖಪದನೇ 1 ಕೂರ್ಮರೂಪಿಯೆಂದು | ಪೇರ್ಮೆಯಲಿ ಕರೆಯಲಾಭರ್ಮ ಗರ್ಭನ ಪಿತನೆ | ಗಿರಿಯ ಧರಿಸಿರುವೇ |ನಿರ್ಮಲಾತ್ಮಕನೆ ಯೆನಗೆ | ನಿರ್ಮಮತೆ ನೀಡಯ್ಯಾ ಊರ್ಮಿಳಾಪತಿ ಭ್ರಾತೃ | ಪರಮ ಮಂಗಳನೇ 2 ವರಹ ರೂಪಿಯೆ ನಿನ್ನ | ಕರೆಯುವುದು ಹೇಗಯ್ಯಾ ಕೋರೆ ದಾಡಿಯ ಮೇಲೆ | ಧರೆಯೆ ಧರಿಸಿರುವೇ | ವಾರೆ ನೋಟದಿ ಯೆನ್ನ | ಪರಿಕಿಸೀ ಪೊರೆಯಯ್ಯಾಧೀರ ಭೂವರಹ ವರ | ಧರಣಿ ಪರಿಪಾಲಾ 3 ನಾರಸಿಂಹನೆ ನಾನು | ಕರೆಯಲಾಪನೆ ನಿನ್ನಘೋರರೂಪವ ನೋಡಿ | ದೂರ ಸಾರುವರೋವಾರಿಜಾಕ್ಷಿಯು ಬಂದು | ಘೋರ ಪ್ರಹ್ಲಾದನ್ನಚಾರು ತವ ಚರಣದಲಿ | ಇರಿಸಬೇಕಾಯ್ತು 4 ದಧಿ | ವಾಮನನೆ ಬಾರೆಂದುಸಾಮಸನ್ಮುತ ನಿನ್ನ | ನಾಮಗಳ ನೆನೆಯೆಲಾ |ಭೂಮಿ ಬೇಡುವ ನೆವದಿ | ಬಲಿಯ ಭೂಮಿಗೆ ತುಳಿದೆಸೀಮೆ ಮೀರಿದ ಮಹಿಮ | ಮರ್ಮವಿನ್ನೆಷ್ಟೋ | 5 ಪರಶುರಾಮನೆ ನಿನ್ನ | ಕರೆಯಲಾರೆನು ನಾನುದುರುಳ ಕ್ಷತ್ರಿಯರ | ಶಿರಗಳನೆ ತರಿದೂ |ಭಾರಿ ಪರಶುವಿನಿಂದ | ವರಮಾತೆ ಶಿರ ತರಿದಿಸರಿ ಕಾಣೋ ಇದು ನಿನಗೆ | ಪರಮ ಪಾವನ್ನಾ 6 ರಾಮ ರೂಪಿಯೆ ನಿನ್ನ | ಆ ಮಹಾ ಮಹಿಮೆಗಳಸೀಮೆಗಾಣಳು ಲಕುಮಿ | ಪಾಮರನಿಗಳವೇ |ಆ ಮರಾ ಈ ಮರಾನೆಂದ ಆ | ಪಾಮರನ ಪೊರೆದುಆ ಮಹಾತ್ಮನ ಗೈದ | ಪರಿಯೆನ್ನ ಮಾಡೋ 7 ಕೃಷ್ಣ ಕೃಷ್ಣಾ ಎಂದು ಕರೆಯುವೆನೆ ನಾ ನಿನ್ನಕಷ್ಟದೊಳು ಸಿಲುಕಿರುವೆ | ಗಿರಿಯನ್ನೆ ಪೊತ್ತು |ವೃಷ್ಟಿಕುಲ ಸಂಪನ್ನ | ಕೃಷ್ಣ ಮೂರುತಿ ನೀನುಇಷ್ಟ ಭಕುತರ ಮನೋ | ಭೀಷ್ಟ ಸಲಿಸುವಿಯಾ 8 ಬುದ್ಧ ದೇವನೆ ಎನಗೆ ಸ | ದ್ಭುದ್ಧಿ ಕೊಡು ಎಂದುಬುದ್ಧಿ ಪೂರ್ವಕವಾಗಿ ನಿನ್ನ ಕರೆಯಲಾ |ಬುದ್ಧಿಯಿಂದಲಿ ನೀ | ಭೋಧಿಸಿದೆ ದುಶ್ಯಾಸ್ತ್ರಬೌದ್ಧ ನಿನ್ನನು ಪೊದ್ದು | ಬುಧರ ಪಾಡೇನೊ 9 ಕಲ್ಕಿ ಕಲ್ಕೀ ಎಂದೇ ಕರೆಯಲಾಪೆನೆ ದೇವಾಶುಲ್ಕ ಮೇಲಾಗಿಹುದು ಕಲಿಯುಗದೊಳು |ಉಲ್ಕ ಮುಖ ಮೊದಲಾದ | ಕಲ್ಕಿರಾಜರು ನಿನ್ನಕಲ್ಕ್ಯಾತ್ಮ ಸತ್ಯ ತವ | ವ್ರತವ ಮಾಳ್ಪರು ಬಿಡದೆ 10 ಸರ್ವರೂಪಾತ್ಮಕನೆ | ಸರ್ವ ವ್ಯಾಪಕ ಸ್ವಾಮಿಸರ್ವಜಿತು ಸರ್ವಾತ್ಮ ಸರ್ವೇಶನೇ |ಶರ್ವಾರಿ ವಂದ್ಯ ಗುರು | ಗೋವಿಂದ ವಿಠಲನೇಗುರು ಹೃದಂಬರದಲ್ಲಿ | ತೋರಿ ಪೊರೆಯನ್ನ 11
--------------
ಗುರುಗೋವಿಂದವಿಠಲರು
ಕರೆದಳು ತನ್ನ ಮಗನ ಯಶೋದೆ ಕರೆದಳು ತನ್ನ ಮಗನ ಪ. ಪರಮಪುರುಷ ಹರಿ ಶರಣರ ಸುರತರು ತುರು ತುರುಯೆಂಬ ಕೊಳಲನೂದುತ ಬಾರೆಂದು ಅ.ಪ. ಅಂದುಗೆ ಕಿರುಗೆಜ್ಜೆ ಘಲುಘಲುಕೆನುತಲಿ ಚಂದದಿ ಕುಣಿವ ಮುಕುಂದನೆ ಬಾರೆಂದು 1 ಹೊನ್ನುಂಗುರುಡಿದಾರ ರನ್ನ ಕಾಂಚಿಯದಾಮ ಚೆನ್ನಾಗಿ ಹೊಳೆವ ಮೋಹನನೆ ಬಾರೆಂದು 2 ಸಾಮಗಾನವಿಲೋಲ ಜಾಲವ ಮಾಡದೆ ಸ್ವಾಮಿ ಹೆಳವನಕಟ್ಟೆ ರಂಗ ನೀ ಬಾರೆಂದು 3
--------------
ಹೆಳವನಕಟ್ಟೆ ಗಿರಿಯಮ್ಮ
ಕರೆವರು ನಿನ್ನ ಹಸೆಗೆ ಪರಮ ಪುರುಷ ನೀನೆಂದು ಪ ಸರಸದಿಂದ ಸಿರಿಸಹಿತ ಬರಬೇಕು ನೀಂ ತ್ವರಿತದಲಿ ಅ.ಪ ನಾದದಶವಾದ್ಯಗಳು ಮೋದದಿಂದ ಮೊರೆಯಲು ವೇದಾಂತರಹಸ್ಯವೆಂಬ ವಿವಿಧ ಗೀತೆಗಳ ಪಾಡಿ 1 ತತ್ವಭಿಮಾನಿಗಳೆಂಬ ಮುತ್ತೈದೆಯರೆಲ್ಲ ಕೂಡಿ ಸೂರಿ ಜನಪ್ರಿಯನೆಂದು 2 ಎಂಟುದಳ ಪದ್ಮದೊಳು ನೆಂಟರಿಷ್ಟರೆಲ್ಲುರು ನೂ- ರೆಂಟು ಚಿತ್ರಗಳ ಬರೆದು ರಚಿಸಿ ರತ್ನ ಪೀಠವನ್ನು 3 ಧೀರ ಸಭೆಯಲ್ಲಿ ಹದಿನಾರು ನಿನ್ನಾಧೀನಗೈದು 4 ಯಾಮ ಯಾಮದಿ ಬಿಡದೆ ಕಾಮಿನೀ ಮಣಿಯರು ನಿ- ಷ್ಕಾಮ ಸುಖವೀವ ಗುರುರಾಮವಿಠಲ ಬಾರೆಂದು 5
--------------
ಗುರುರಾಮವಿಠಲ
ಕೊಡಲಾಗದಿದ್ದರೆ ನುಡಿಯುವರೇನಣ್ಣ ಕಡೆಯಿಂದ ಬಾರೆಂದು ಜಡಿದಿಂದು ಪ. ದುಡುಕಿದೆವೆನ್ನುತ ಮಿಡುಕದಿರಣ್ಣಯ್ಯ ಕಡುಮುದದಿಂದಾವು ನಡೆದೇವು ಕೋಲೇಕೋಲೆ ಮುತ್ತಿನ ಕೋಲೆ ಅ.ಪ ಗುಣಯುತರೆನಿಸುವ ಹಿರಿಯ ವಂದಿಸ ಲೆನಂತಲೈ ತಂದೆವು ಮಣಿದೆವು ಹಣಗಾರರರೆಂದಲ್ಲಿ ಮಣಿಯಲು ಬರಲಿಲ್ಲ ಹಣದಾಸೆ ನಮಗಿಲ್ಲ ಕೇಳೀಸೊಲ್ಲ ||ಕೋಲೇ|| 1 ಅಣ್ಣಯ್ಯ ನಿಮಗೀ ಘನತೆಯು ಸಲ್ವುದು ಗಣ್ಯರಾದಿರಿ ನೀವು ಜಗದೊಳು ಪುಣ್ಯವಂತೆಯು ನಿಮ್ಮ ಪಡೆದಾಮಾತೆಯು ಧನ್ಯರಾದಿರಿ ನಿಮ್ಮೀಗುಣದಿಂದ ಕೋಲೆ 2 ದೋಷರಹಿತ ಶ್ರೀಶೇಷಗಿರೀಶನಾ ಕೇಶವನೊಲವೊಂದೆಮಗಿರಲಿ ಭಾಷೆಯ ಕೊಡುವೆವು ದೇಶಸೇವಕರಾವು ಲೇಸಾಗಲಿಳೆಗೆಂದು ಮನದಂದು ||ಕೋಲೆ||3
--------------
ನಂಜನಗೂಡು ತಿರುಮಲಾಂಬಾ