ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗÀಣೇಶ ಪ್ರಾರ್ಥನೆ ಗಜಮುಖ ವಂದಿಸುವೆ ಕರುಣಿಸಿ ಕಾಯೊ ಪ.ಗಜಮುಖ ವಂದಿಪೆ ಗಜಗೌರಿಯ ಪುತ್ರಅಜನ ಪಿತನ ಮೊಮ್ಮಗನ ಮೋಹದ ಬಾಲಅ.ಪ.ನೀಲಕಂಠನ ಸುತ ಬಾಲಗಣೇಶನೆಬಾರಿ ಬಾರಿಗೆ ನಿನ್ನ ಭಜನೆ ಮಾಡುವೆನಯ್ಯ 1 ಪರುವತನ ಪುತ್ರಿ ಪಾರ್ವತಿಯ ಕುಮಾರಗರುವಿಯಾ ಚಂದ್ರಗೆ ಸ್ಥಿರಶಾಪ ಕೊಟ್ಟನೆ 2 ಹರಿಹರರು ನಿನ್ನ ಚರಣ ಪೂಜೆಯ ಮಾಡಿದುರುಳ ಕಂಟಕರನು ತರಿದು ಬಿಸುಡಿದರಯ್ಯ 3 ಮತಿಗೆಟ್ಟ ರಾವಣ ಪೂಜಿಸದೆಸೀತಾಪತಿ ಕರದಿಂದಲಿ ಹತವಾಗಿ ಪೋದನು 4 ವಾರಿಜನಾಭ ಶ್ರೀ ಹಯವದನನ ಪದಸೇರುವ ಮಾರ್ಗದ ದಾರಿಯ ತೋರಿಸೊ5
--------------
ವಾದಿರಾಜ
ಬಾರೆ ವೆಂಕಟರಮಣಿ ಶ್ರೀದೇವಿ ನೀ ಬಾರೆ ವೆಂಕಟರಮಣಿ ಪ ನಿತ್ಯ ಅ.ಪ. ಏನು ಪುಣ್ಯವೆ ನಂದು ಪಾರಾಯಣನೀನು ಕೇಳುವಿ ಬಂದುಹೀನ ಮಾನವನಿಗೆ ನೀನು ಬರುವಿ ಎಂಬೊಜ್ಞಾನವಿಲ್ಲದೆ ಉಚ್ಚ ಸ್ಥಾನದೊಳಗೆ ಬಾರೆ 1 ಸ್ವಪ್ನದೊಳಗೆ ಬರುವಿ ಶ್ರೀದೇವಿ ನೀಕ್ಷಿಪ್ರದಿಂದಲಿ ಪೋಗುವಿಸರ್ಪಶಯನ ನಮ್ಮಪ್ಪ ಗೋಕುಲ ಬಾಲಅಪ್ಪಿಕೊಳ್ಳುವ ಸುಖ ಒಪ್ಪಿಸಬೇಕಮ್ಮ 2 ಸಿರಿ ರಂಗನಂಕದಿ ಕೂತುಭೃಂಗಕುಂತಳೆ ಹೃದಯಂಗಳದೊಳಗಾಡೆ 3 ಎಲ್ಲ ದೇವತೆಗಳನೆ ತಪಾದಿಯೆಪುಲ್ಲ ವಾರಿಜನಯನೆಗೊಲ್ಲ ಬಾಲನಪಾದ ಪಲ್ಲವ ನೋಡದೆನಿಲ್ಲಲೊಲ್ಲದು ಮನಸೊಲ್ಲು ಲಾಲಿಸೆ ತಾಯೆ4 ಇಂದಿರೇಶನ ರಾಣಿ ಎನ್ನಯ ಮನೋ-ಮಂದಿರದೊಳು ಬಾ ನೀನಂದಗೋಕುಲ ಬಾಲಾನಿಂದು ಕರದೊಳೆತ್ತಿತಂದು ತೋರಿಸೆ ಅರವಿಂದನಿಲಯೆ ಲಕ್ಷ್ಮಿ 5
--------------
ಇಂದಿರೇಶರು