ಶ್ರೀ ಚಂದ್ರಿಕಾಚಾರ್ಯ ಗುರುವೇ ಪ
ಯಾಚಿಪೆ ನಿನ್ನ ಶ್ರೀ ಚರಣ ಸೇವೆ ಅ.ಪ
ಜಲಧಿ ಚಂದ್ರ ಯತೀಂದ್ರ
ಭೂಪೂರ್ವ ಪ್ರಹ್ಲಾದ ಸಜ್ಜನಾಹ್ಲಾದ
ಗೋಪಾಲಕೃಷ್ಣ ಚರಣಾಂಬುರುಹ ಲೋಲ
ಶ್ರೀಪಾದರಾಜಪ್ರಿಯ ಬಾಲಸುಶೀಲ 1
ಸಮೀರನ ರಾಶಿಯನು ರಚಿಸಿ ಸನ್ಮಾನ್ಯರೆನಿಸಿ
ದಾಸಕೂಟಕೆ ನೆಲೆಯಿತÀ್ತು ಪುರಂದರ
ದಾಸರನು ಕರುಣಿಸಿದೆ ಧೀರ ಉದಾರ 2
ಕುಹುಯೋಗ ಪರಿಹಾರಗೈದ ಮಹಾಯೋಗಿವರ
ಕುಹಕ ವರ್ಜಿತ ಚಿತ್ತ ಶೋಭಿತ ಸುಖಾಂತ
ಪಾದ ಧ್ಯಾನಿಪರ
ಸಹವಾಸವೆನಗಿತ್ತು ಸಲಹುವುದು ಸತತ 3