ಒಟ್ಟು 7 ಕಡೆಗಳಲ್ಲಿ , 3 ದಾಸರು , 7 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಂದ ಭೀಮಗೆ ಸರಿಯಿಲ್ಲ ಎಂದೆಂದಿಗೆ ಬಿಡದೆ ಬಂದಾ ಪ್ರತಿಬಂಧಕಗಳ ನಿತ್ಯ ಅರಿತುಳಿವಾ ಸತ್ಕೀರ್ತಿ ಪೊಳವ ಪ ಪ್ರಳಯಾಂತದಲ್ಲಿ ತಾನು ತಿಳಿದು ಸತ್ವ ಜೀವರ ನೆಲೆ ಗೊಳಿಸುವೆನೆಂದು ಬಲುಹರುಷದಲಿ ಜಲಜನಾಭನ ಚರಣಾಬ್ಜಕರಿಗೆ ಹಸ್ತ ಮುಗಿದು ಶ್ರುತಿವಿನುತ ಇದೇ ಕಾಯವನಿತ್ತ 1 ಮಂಡೆ ಮೇಲೆ ಭಾರವ ಕೊಂಡಾ ಸಹಸ್ರ ಫಣ ಕುಂಡಲಿಯ ಪೊತ್ತಾ ಗಂಡುಗಲಿ ಕೂರ್ಮನಾ ಕೊಂಡಾಡಲು ನಮಗೆ ಸಗುಣಾಖ್ಯಾ ಗುರುವೀತನೇ ಮುಖ್ಯಾ 2 ಭೀಮನೆ ಭೀಮಸೇನಾ ಭೀಮರಾಯನೆಂದು ನೇಮದಿಂದಲಿ ನಾಮವ ನೆನೆದಡೆ ಪಾಮರ ಬುಧ್ಧಿಯನ್ನು ನಿತ್ಯ ಸತ್ಪುಣ್ಯ ಅನುಗಣ್ಯ ಬಲು ಗುಣ್ಯಮಾಡಿಸುವನನ್ಯ 3 ಹಿಂದೆ ರಘುನಾಥನ ಛಂದದ ದೂತನಾಗಿ ಇಂದು ವಂಶದಲಿಂದು ಮಂದಹಾಸದಲುದಿಸಿ ನಂದದಿಂದಲಿ ಕುರುಬಲವ ಗೆದ್ದ ಚಲುವ ಭಕ್ತಗೊಲಿವ ಮೂಲೋಕವ ಗೆಲುವ 4 ಜ್ಞಾನ ಭಕ್ತಿ ವೈರಾಗ್ಯ ನಾನಾ ಪ್ರಕಾರ ಭೀಷ್ಟೆ ಮಾಣದೆ ಕೊಡುವನು ಅನಂತ ಕಾಲಕೂ ಆನಂದತೀರ್ಥನೀತಾ ಪ್ರಾಣಾದಿ ಪಂಚರೂಪ ಶ್ರೀನಾಥ ವಿಜಯ ವಿಠ್ಠಲಾ ಸಿರಿನಲ್ಲಾ ಪೊರೆವೆಲ್ಲಾ ಒಂದೆಂಬದಲ್ಲಾ 5
--------------
ವಿಜಯದಾಸ
ನಿನ್ನೊಳು ನೀ ತಿಳಿಯೋ ಮನುಜ ಪ ಪರಮಾತ್ಮನೆ ನೀನಿರುವಿಯೊ ಮನುಜಾ ಅರಿತು ನೋಡು ನಿನ್ನಯ ನಿಜವಾ ಮರೆತಿರುವಿಯೊ ನೀ ನಿನ್ನಿರುವಿಕೆಯಾ ತೋರುವ ದೇಹವು ನಾನಲ್ಲೆಂದು 1 ನನಸಿನ ದೇಹವು ಕನಸಿನೊಳುಂಟೆ ನೆನಸಿ ನೋಡು ನಿನ್ನಿರುವಿಕೆ ಸಮವು ನನಸಿನ ದೇಹವು ನಾನಲ್ಲೆಂದು 2 ಗಾಢನಿದ್ರೆಯಲಿ ಅಡಗಿತು ಬುಧ್ಧಿಯು ಗಡನೆ ನೋಡು ನಿನ್ನಿರುವಿಕೆಯಾ ಜಡದೇಹವು ಮನಬುದ್ಧ್ಯಾದಿಗಳಿಂ ಬಿಡಿಯಾದಿರುವಿಕೆಯುಳಿವುದು ನೀನೇ 3 ಮೂರು ಜಾಗೆಯಲಿ ನಿರುತದೊಳಿರುತಿಹ ಇರವರಿವಾನಂದವೆ ನೀನೈ ಮರೆತು ಇದನು ನೀ ಬರಿದೇ ಮಿಡುಕುವಿ ದೊರಕುವದೇ ಸುಖ ಹೊರಗೆ ಹುಡುಕಲು 4 ತೋರಿಕೆ ಅನಿಸಿಕೆಗಳು ಕ್ಷಣಭಂಗುರ ಮರಣರಹಿತ ಪರವಸ್ತುವು ನೀನೆ ಅರಿವೇ ಪರಬ್ರಹ್ಮವು ತಾನೆಂದು ವರಶ್ರುತಿ ಸಾರಿತು ಬ್ರಹ್ಮನೆ ನೀನೈ 5 ಗರುವಿನ ಕರುಣದಿ ತಿಳಿಯೇ ವಿಷಯವ ಮರುಳಾಗದಿರೈ ಮಾಯಾಕಾರ್ಯಕೆ ಗುರುಶಂಕರನಾ ಪದವಿಯ ಪಡೆಯುವಿ6
--------------
ಶಂಕರಭಟ್ಟ ಅಗ್ನಿಹೋತ್ರಿ
ಇದು ಭಾಗ್ಯ ಇದು ಭಾಗ್ಯ ಇದು ಭಾಗ್ಯವಯ್ಯಪದುಮನಾಭನಪಾದಭಜನೆ ಸುಖವಯ್ಯಪ.ಕಲ್ಲಾಗಿ ಇರಬೇಕು ಕಠಿಣ ಭವತೊರೆಯೊಳಗೆಬಿಲ್ಲಾಗಬೇಕು ಬಲ್ಲವರ ಒಳಗೆ ||ಮೆಲ್ಲನೇ ಮಾಧವನ ಮನದಿ ಮೆಚ್ಚಿಸಬೇಕುಬೆಲ್ಲವಾಗಿರಬೇಕು ಭಕುತಜನರೊಳಗೆ 1ಬುಧ್ಧಿಯಲಿ ತನ್ನ ಮನ ತಿದ್ದುತ್ತಲಿರಬೇಕುಮುದ್ದಾಗಬೇಕು ಮುನಿಯೋಗಿಗಳಿಗೆ ||ಮಧ್ವಮತದಬ್ಧಿಯೊಳು ಮೀನಾಗಿ ಇರಬೇಕುಶುದ್ಧ ಭಕುತಿಯಸುಕೃತಉಣಲುಬೇಕು2ವಿಷಯ ಭೋಗದ ತೃಣಕೆ ಉರಿಯಾಗಿ ಇರಬೇಕುಕುಶಲದಲಿ ಶ್ರೀ ಹರಿಯ ನೆನೆಯಬೇಕು ||ವಸುಧೆಯೊಳು ನಮ್ಮ ಪುರಂದರವಿಠಲನಹಸನಾಗಿ ನೆನೆನೆನೆದು ಸುಖಿಯಾಗಬೇಕು 3
--------------
ಪುರಂದರದಾಸರು
ಕಷ್ಟಪಟ್ಟರೂ ಇಲ್ಲ ಕಳವಳಿಸಿದರಿಲ್ಲಭ್ರಷ್ಟಮಾನವ ಹಣೆಯ ಬರಹವನ್ನದೆ ಇಲ್ಲ ಪಸಿರಿವಂತನ ಸ್ನೇಹಮಾಡಿ ನಡೆದರಿಲ್ಲಪರಿಪರಿಯಲಿ ವಿದ್ಯ ಕಲಿತರಿಲ್ಲನರಿಯ ಬುಧ್ಧಿಯಲಿ ನಡೆದುಕೊಂಡರು ಇಲ್ಲಅರಿಯದೆ ಹಲವ ಹಂಬಲಿಸಿದರಿಲ್ಲ 1ಕೊಂಡೆಗಾರಿಕೆಯನ್ನು ಹೇಳಿ ನಡೆದರಿಲ್ಲಕಂಡಕಂಡವರಿಗೆ ಕೈ ಮುಗಿದರಿಲ್ಲಗಂಡುಗತ್ತರಿಯನ್ನು ಕೊರಳಿಗಿಟ್ಟರು ಇಲ್ಲಚಂಡನಾದರೂ ಇಲ್ಲ ಪರಿಹಾಸ್ಯವಲ್ಲ 2ಕಟ್ಟಾಳು ಕಂಡು ಜಾಣನಾಗಿ ಪುಟ್ಟಿದರಿಲ್ಲಬೆಟ್ಟಗಳನು ಕಿತ್ತಟ್ಟರಿಲ್ಲಸೃಷ್ಟಿಯೊಳು ಪುರಂದರವಿಠಲರಾಯ
--------------
ಪುರಂದರದಾಸರು
ನೆಚ್ಚಿದಿರೋ ಪ್ರಾಣಿ ಸಂಸಾರ ಸ್ಥಿರವೆಂದುಹುಚ್ಚು ಬುದ್ದಿಯಲಿ ನೀ ಕೆಡಬೇಡ ಪ.ಎಚ್ಚರಿತುಕೊಂಡು ಧರ್ಮದಿ ನಡೆ ಕಣ್ಣನುಮುಚ್ಚಿದ ಮೇಲುಂಟೆ - ನರಜನ್ಮ ಸ್ಥಿರವಲ್ಲ ಅಪಅಷ್ಟಕಂಬವನಿಕ್ಕಿ ತಾಕದುಪ್ಪರಿಗೆಯಕಟ್ಟಿದ ಮನೆ ಇದ್ದಂತಿಹುದುಹೊಟ್ಟೆತುಂಬ ಉಣದೆ ಧನವ ಗಳಿಸಿ - ಬಚ್ಚಿಟ್ಟಲ್ಲಿರದೆ ಸಂಗಡ ಬಾಹೋದಲ್ಲ 1ಅತಿ ಪ್ರೀತಿಯಿಂದ ಮದುವೆಯಾದ ಮೋಹದಸತಿ ತನ್ನ ಮರಣದ ಕಾಲಕ್ಕೆಗತಿಯಾವುದೆನುತಲೆ ಮರುಗಿದಪ್ಪಳಲ್ಲದೆಜತೆಯಾಗಿ ನಿನ್ನ ಸಂಗಡ ಬಾಹಳಲ್ಲ 2ಒಂದೊಂದು ಪರಿಯ ಬುಧ್ಧಿಯ ಪೇಳಿ ಸಲುಹಿದಕಂದ ನಿನ್ನಾವಸಾನ ಕಾಲಕೆಮುಂದೇನು ಸಂಸಾರ ನಡೆಸಲುಪಾಯವೇನೆಂದು ಚಿಂತಿಸುವ ಸಂಗಡ ಬಾಹನಲ್ಲ 3ನಾಟರಿಷ್ಟರು ಬಂಧು - ಬಳಗವುಹರಿ ಕೊಟ್ಟುದುಂಟಾದರೆ ಬಂದು ಉಣ್ಣುವರುಕಂತಕ ಬಂದರೆ ಹೊತ್ತು ಕಾಷ್ಠದೊಳಿಟ್ಟುಕಂತಿಯ ತಂದೊಟ್ಟಿ ಸುಡುವರು ಕಾಣೊ 4ಇಂತಿದು ಒಂದು ಪ್ರಯೋಜನ ನಿನಗಿಲ್ಲಅಂತ್ಯಕಾಲಕ್ಕೆ ಸಂಗಡ ಬಾಹುದುಕಂತುಜನಕ ನಮ್ಮ ಪುರಂದರವಿಠಲನಸಂತತ ಧ್ಯಾನದೊಳಿರು ಕಾಣೋ ಮನುಜಾ 5
--------------
ಪುರಂದರದಾಸರು
ಮರುಳಾಟವೇಕೊ - ಮನುಜಾ |ಮರುಳಾಟವೇಕೊ? ಪ.ಊಧ್ರ್ವ ಪುಂಢ್ರವಿಲ್ಲದ ಮುಖವ ತಿದ್ದಿ ನೋಡಲೇಕೊ |ಶುದ್ದ ಸಾತ್ತ್ವಿಕವಿಲ್ಲದನ ಬುಧ್ಧಿ ಏತಕೊ ||ಕದ್ದು ಹೊಟ್ಟೆಹೊರಕೊಂಬುವಗೆ ಶುದ್ಧ ಶೀಲವೇಕೊ |ಮಧ್ವಶಾಸ್ತ್ರ ಓದದವನವಿದ್ಯೆಏತಕೊ - ಮನುಜಾ1ಮೃತ್ತಿಕೆ ಶೌಚವಿಲ್ಲದವಗೆ ಮತ್ತೆ ಸ್ನಾನ - ಜಪವೇಕೊ |ಹಸ್ತಕಟ್ಟಲರಿಯದವಗೆ ಅಗ್ನಿಹೋತ್ರವೇತಕೊ ||ತೊತ್ತು ಹೋಗುವವಗೆ ಪರತತ್ತ್ವವಿಚಾರವೇಕೋ |ಕರ್ತೃ ಕೃಷ್ಣನ ನೆನೆಯದವನ ಉತ್ತಮತನವೇಕೊ 2ಹಸಿವೆ ತೃಷೆಯ ತಾಳದವನ ಹುಸಿಯ ವೈರಾಗ್ಯವೇಕೊ |ವಿಷಯ ಮೆಚ್ಚಿದವಗೆ ಪರದ ಕುಶಲವೇತಕೊ ||ಹುಸಿಜಪಗಳ ಮಾಡುವವಗೆ ಮುಸುಕಿನ ಡಂಬಕವೇಕೊ |ಕುಸುಮನಾಭಗರ್ಪಿಸದ ಅಶನವೇತಕೊ - ಮನುಜಾ 3ಸೂಳೆಗಾರನಿಗೆ ತುಳಸಿ ಮಾಲೆಯ ಶೃಂಗಾರವೇಕೊ ||ಶ್ರೀಲೋಲನ ನೆನೆಯದವನ ಬಾಳುವೆಯೇತಕೊ |ಮೂಲಮಂತ್ರವರಿಯದವಗೆ ಮೇಲೆ ದೇವತಾರ್ಚನೆ ಏಕೊ |ಸಾಲಗ್ರಾಮದಭಿಷೇಕವಿಲ್ಲದ ತೀರ್ಥವೇತಕೊ ಮನುಜಾ 4ಕಂಡ ನಾರಿಯೀಕ್ಷಿಸುವ ಲಂಡಗೆ ಪುರಾಣವೇತಕೋ |ಭಂಡ ಮಾತನಾಡುವನ ಪಾಂಡಿತ್ಯವೇತಕೊ |ಪುಂಡರೀಕವರದ ಶ್ರೀ ಪುರಂದರವಿಠಲನ |ಕಂಡು ಭಜಿಸಲರಿಯದವನವಿತಂಡಬುಧ್ಧಿಯೇತಕೋ5
--------------
ಪುರಂದರದಾಸರು
ಹರಿಯ ನೆನೆಯದ - ನರಜನ್ಮವೇಕೆ ? ಶ್ರೀಹರಿಯ ಕೊಂಡಾಡದ ನಾಲಿಗೆಯಿನ್ನೇಕೆ ಪ.ಸತ್ಯ - ಶೌಚವಿಲ್ಲದ ಆಚಾರವೇಕೆ ?ಚಿತ್ತ ಶುದ್ಧಿಯಿಲ್ಲದ ಜ್ಞಾನವೇಕೆ ?ಭಕ್ತಿ - ಭಾನವಿಲ್ಲದ ದೇವಪೂಜೆ ಏಕೆ ?ಉತ್ತಮರಿಲ್ಲದ ಸಭೆಯು ಇನ್ನೇಕೆ ? 1ಕ್ರೋಧವ ಬಿಡದಿಹ ಸಂನ್ಯಾಸವೇಕೆ ?ಆದರವಿಲ್ಲದ ಅಮೃತಾನ್ನವೇಕೆ ?||ವೇದ - ಶಾಸ್ತ್ರವಿಲ್ಲದ ವಿಪ್ರತನವೇಕೆಕಾದಲಂಜುವನಿಗೆ ಕ್ಷಾತ್ರ ತಾನೇಕೆ ? 2ಸಾಲದಟ್ಟುಳಿಯೆಂಬ ಸಂಸಾರವೇಕೆ ?ಬಾಲಕರಿಲ್ಲದ ಭಾಗ್ಯವಿನ್ನೇಕೆ ?ವೇಳೆಗೆ ಒದಗದ ನೆಂಟರಿನ್ನೇಕೆ ? ಅನುಕೂಲವಿಲ್ಲದ - ಸತಿಯ ಸಂಗವೇಕೆ 3ಮಾತೆ - ಪಿತರ ತೊರೆದ ಮಕ್ಕಳಿನ್ನೇಕೆ ?ಮಾತು ಕೇಳದ ಮಗನಗೊಡವೆ ಇನ್ನೇಕೆ ||ನೀತಿ ತಪ್ಪಿದ ದೊರೆಯ ಸೇವೆ ಇನ್ನೇಕೆ ? ಅನಾಥನಾಗಿರುವಗೆ ಕೋಪವಿನ್ನೇಕೆ ? 4ಅಳಿದುಳಿದಿಹ ಮಕ್ಕಳುಗಳಿನ್ನೇಕೆ ?ತಿಳಿದು ಬುಧ್ಧಿಯ ಹೇಳಿದ ಗುರುತನವೇಕೆ ?ನಳಿನನಾಭ ಶ್ರೀ ಪುರಂದರವಿಠಲನಚೆಲುವ ಮೂರುತಿಯ ಕಾಣದ ಕಂಗಳೇಕೆ 5
--------------
ಪುರಂದರದಾಸರು