ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಂಗಿ ಕೇಳೆ ಅತಿಕೌತುಕ ಒಂದು ಸುದ್ಧಿಯ ಸಿಂಗನ ಮೋರೆ ಮಗುವು ಪುಟ್ಟಿ ಮಾಡಿದಾ ಚರ್ಯ ಪ. ತಂದೆ ತಾಯಿಗಳಿಲ್ಲಾದ್ಹಾಂಗೆ ಕಂದ ಪುಟ್ಟಿತು ಬಂಧು ಎತ್ತು ಕೊಂಬೇನೆಂದರೆ ಗುಡು ಗುಡುಗುಟ್ಟಿತೂ ಅಂದ ಛಂದವ ನೋಡೇನೆಂದರೆ ಘೊರಾಕೃತಿಯಾಯ್ತು ತಂದ ತೊಟ್ಟಿಲೊಳಿಟ್ಟೀನೆಂದರೆ ಹೊಸಲೊಳ್ ಕೂತೀತು 1 ತೊಡೆಯಲ್ಲಿಟ್ಟು ತಟ್ಟೀನೆಂದರೆ ಕಿಡಿ ಕಿಡಿ ಉಗುಳೀತು ಕಡುಪಾಪಿ ರಕ್ಕಸನ ತನ್ನ ತೊಡೆಯಲ್ಲಿಟ್ಟಿತೂ ಕಡು ಕೋಪದಿಂದಾಲಿ ಅವನ ಒಡಲ ಬಗೆದಿತು. ಎಡಬಲಕೊಬ್ಬರು ಬರದಂತೆ ಆರ್ಭಟಿಸುತಲಿದ್ದಿತು 2 ರುಧಿರ ಪಾನವ ಮಾಡಿತು ಮಾಲೆ ಹಾಕಿ ಮುದ್ದಿಪನೆನೆ ಕರುಳ್ಮಾಲೆ ಹಾಕೀತು ಮೇಲೆ ಕೇಶ ಕಟ್ಟೀನೆಂದರೆ ಕೆದರಿಕೊಂಡೀತೂ ಬಾಲಲೀಲೆ ನೋಡೇನೆಂದರೆ ಜಗವ ಬೆದರಿಸಿತು 3 ಸಿರಿಕಂಡೂ ಬೆರಗಾಗೆ ಮನವು ಕರಗದೆ ಕಲ್ಲಾಯ್ತು ತರಳನೊಬ್ಬನ ಕೂಡೆ ತಾನೂ ಆಟವನಾಡಿತು ಉರಿಮುಖ ಹುಬ್ಬೂ ಗಂಟೂ ಬಿಟ್ಟು ಕಿರುನಗೆ ನಕ್ಕೀತು 4 ಶ್ರೀಪತಿ ಎಂದು ತರಳನು ಪೊಗಳೇ ಸಿರಿಯ ಬೆರತೀತು ಆಪತ್ತನು ಪರಿಹರಿಪ ಲಕ್ಷ್ಮೀನರಹರಿ ಎನಿಸೀತು ದ್ವಾಪರದಲ್ಲಿ ಮತ್ತೆ ಪುಟ್ಟಿ ಮುದುವ ಬೇಡೀತು ಗೋಪಾಲಕೃಷ್ಣವಿಠ್ಠಲನೆನಿಸಿ ಗೋಪಿಯ ಮಗುವಾಯ್ತು 5
--------------
ಅಂಬಾಬಾಯಿ
ತಿಳಿಸುವ ಮಾತಲ್ಲಾ | ತಿಳಿಸದೆ ತಿಳಿಯುವ ಮಾತಲ್ಲಾ | ತಿಳಿಸದೆ ತಿಳಿಯದು | ತಿಳಿಯದು ನಿನಗದು | ತಿಳಿಸದೆ ತಿಳಿಯದು | ತಿಳಿಯದೆ ಹೊಳೆಯದು ಪ ಎಚ್ಚರ ನೀ ಮರೆತಿ ಮದ ಮತ್ಸರದಲೀ ಬೆರತೀ | ಅಚ್ಚ ಹೇಸಿಕೀ ದೇಹ ಮುಚ್ಚಿದ ಚರ್ಮಕ್ಕೆ | ನಿಶ್ಚಯವೆಂದರಿವೆ ಛೇಕರವೇ 1 ಭೇದವಳಿಯಲು ಬೇಕೊ ಮನದ ವಿವಾದ ಕಳೆಯಲು ಬೇಕೊ | ಸಾಧುಸಂತರ ಸಂಗ ಸೇವಿಸಿ ತತ್ತ್ವದ್ಹಾದಿ ಹಿಡಿಯ ಬೇಕೊ |ನೀನೆ ಹೀಗ್ಯಾಕೊ 2 ಬೋಧ ಮುಕ್ತಿ |ಆದಿಮೂರ್ತಿ ಭವತಾರಕ ದೇವ ಪಾದವಪೂಜಿಸಿ ನೀವ್ | ತಿಳಿದೆ ಭಜಿಸದಲೇ 3
--------------
ಭಾವತರಕರು
ತುಂಗೆ ಬಂದಳು ದೇವೋತ್ತುಂಗ ವರಹನಾ ಮುಂಗೋರಿಯಲ್ಲಿ ಪುಟ್ಟಿ ಭಕ್ತ ನಿಕರನಾ ಹಿಂಗದೆ ಪೊರೆದು ಸುಖಂಗಳನೀವು ತಾ ಮಂಗಳಾಂಗೆ ಮಾತಂಗೆ ಸುಗಮನೆ ಪ ಕಾಳ ಪನ್ನಗವೇಣಿ ಕೋಕಿಲವಾಣಿ ಫಾಲ ಕಸ್ತುರಿ ಜಾಣೆ ಪಲ್ಲವಪಾಣಿ ವಾಲೆ ಮೂಗುತಿ ಅಣಿ ಮುತ್ತು ಕಠಾಣಿ ತೋಳು ಮಂದಾರಮಣಿ ಅರಿಗುಣಶ್ರೇಣಿ ಮೌಳಿಯಾ ಮೇಲಿನ ಜಾಳಿಗೆ ಸೂಸುಕಾ ವಾಲಲು ಕದಿಪಿನ ನೀಲಗೂದಲು ಭ್ರಮ ರಾಳಿಗಳಂತಿರೆ ಬಾಲ ಸುಧಾಕರ ಪೋಲುವ ವದನೇ1 ಕುಡುತೆಗಂಗಳ ನೀರೆ ಕಂಬುಕಂಧರೆ ಕಡಗ ಕಂಕಣದ್ವಾರೆ ಕೈಯ ಶೃಂಗಾರೇ ಜಡಿವ ಪದಕಹಾರೆ ಕಂಚಕಸೀರೆ ಮುಡಿದ ಪುಷ್ಪಂಗಳು ಮರೆ ಕುಚಗಳು ಅದರೆ ಬಡನಡುವಿನ ಕಡು ಉಡುವಿನ ಕಿಂಕಣಿ ಒಡನುಡಿಸುವ ಗೆಜ್ಜೆ ಕಾಲಂದಿಗೆ ಪೆಂಡೇ ಅ ಡಿಗಡಿಗೊಪ್ಪಲು ಕಡಲನ ಮಡದಿ 2 ತೀಡಿದ ಪರಿಮಳ ಗಂಧದ ಭೋಗಿ ಕೂಡಲಿಪುರದಲಿ ಭದ್ರಿವಂದಾಗಿ ಕೂಡಿ ಸೂಸಿದಳಂದು ಮುಂದಕ್ಕೆ ಸಾಗಿ ಆಡುತ ಪಾಡುತ ಬಲು ಲೇಸಾಗಿ ಬೇಡಿದ ಜನರಿಗೆ ಈಡಿಲ್ಲದ ವರವ ನೀಡುತ ನಿರುತರ ಮಾಡುತ ದಯವನು ನೋಡುತ ತಡವಿಲ್ಲದಲೆ 3 ಶೃಂಗಾರ ಮಾರ್ತಾಂಡೆ ಹರಿಹರ ಮಾತಾ ಅಂಗಾಧಿ ಪರ್ವತ ಪಂಚ ಪ್ರಖ್ಯಾತ ಹಿಂಗದೆ ಬಲಗೊಂಡು ಕೊಡ್ಲೀಗೆ ಬರುತ ಸಂಗೀತ ಗಾಯನದಿಂದ ವಾಲಗಗೊಳುತ ಸಂಗಮೆಯಾಗಿ ತಂಗಿಯ ಬೆರತೀಗ ಮಂಗಳ ಕ್ರೀಡೆಯಲ್ಲಿ ಪ್ರವೇಶಿಸಿ ಗಂಗೆ ಎನಿಸಿಳ್ಯಮನನಾದೇಳಗೆ 4 ಲೋಕದೊಳಗೆ ಪ್ರತಿರಹಿತ ಪೆಸರಾದ ಚೀಕನ ಬರವಿಯ ಅಶ್ವಥಮರದ ನೃಕಂಠೀರವನ ಪಾದದಿ ವ್ಯಾಧಿಷ್ಟರಾದ ಸೋಕಿ ಮೈಮರೆದಂಥ ನಮಿತರು ಕರದಾ ಪಾಕ ಪದಾರ್ಥಕೆ ಒಲಿದೊಲಿದಾಡುತ ಶ್ರೀಕರ ವಿಜಯವಿಠ್ಠಲಗೆರಗುತ ನಾಕಕನ್ನಿಕೆಯಂತೆ ಹೊಳೆದಳುಯಿಂದು5
--------------
ವಿಜಯದಾಸ