ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಮೋ ನಮೋ ಜಯ ತುಂಗಭದ್ರೆ ನಮಿತರನು ಪಾಲಿಸುವ ಸದ್ಗುಣ ಸಮುದ್ರೆ ಪ ವೈರಾಚ ನಗರಿಯಲಿ ವಿಧಾರುಣಿಯ ರೋಚಕನು ಮೀರಿ ದೇವಾದಿಗಳಿಗಂಜದಿರಲು ಘೋರ ರೂಪವ ತಾಳಿ ಅವನ ಕೊಲ್ಲಲು ಹರಿಯ ಮೋರೆ ಕರಿಬೆವರಿಡಲು ಅತಿ ಹರುಷದಿಂದ 1 ರೂಢಿಯೊಳಗೆಲ್ಲ ಸಮಸ್ತ ನದಿ ಉದಕಗಳು ನೋಡಿದರು ರುಚಿಕರವಿಲ್ಲವೆಂದೂ ಸುರರು ಕೊಂಡಾಡುತಿರೆ ಈಡ್ಯಾರು ನಿನ್ನ ಮಹಿಮೆಗೆ ವರಹತನಯೇ 2 ಸಲಿಲವೇ ಹರಿಯಾದ ಶಿವ ನಿನಗೆ ಶಿಲೆಯಾದ ಬಲು ಮುನಿಗಳು ಮಳಲವಳಗಾದರೂ ಜಲಜ ಸಂಭವನು ತೃಣನಾದ ಬಳಿಕ ವಿಷ್ಣು ಕೆಲವುಕಾಲ ನಿನ್ನೊಳಗೆ ನಿಲಿಸಿದನು ತುಂಗೆ ಗಂಗೆ3 ವೇದಾದ್ರಿಯಲಿ ಜನಿಸಿ ನರಸಿಂಹ ಕ್ಷೇತ್ರದಲಿ ಭೇದವಿಲ್ಲದಲೆ ಸಂಗಮವು ಎನಿಸೀ ಆದರದಿಂದ ಹರಹರ ಪೊಂಪ ಬಲಗೊಂಡು ಮೊದಲು ಶ್ರೀ ಕೃಷ್ಣ ಬೆರದೆ ಕೂಡಲಿಯೊಳು 4 ತುಂಗೆ ತುಂಗೆ ಎಂದು ಸ್ಮರಿಸುವಾ ಜನರಿಗು ತ್ತಂಗ ಗತಿಯಾಗುವುದು ಪಾಪವಳಿದು ಮಂಗಳ ಮೂರುತಿ ವಿಜಯವಿಠ್ಠಲನ ಚರಣಂಗಳಲಿ ಇದ್ದವರ ಸತತ ಪೊರೆವುದು ದೇವಿ 5
--------------
ವಿಜಯದಾಸ
ಸರಿಯಾರು ನಿನಗೆ ಸರಸಿಜಾಮುಖಿ ಪ ಕರಮುಗಿವೆನು ಗಾರುಮಾಡದೆ ಎನ್ನ ಪೊರೆಯಬೇಕಿನ್ನು ಧರೆಯೊಳಗೆ ಅ.ಪ. ಕರೆಕರೆಬಡುತಿಹ ಪೋರನ ಅಂಕೆಗಳನು ಅರಿತು ವಿಚಾರಿಸದಿಪ್ಪುದು ಥರವೇ 1 ಸುತನಾಗೀಪರಿ ಪರರನು ಸ್ತುತಿಸುತ ಮೆರೆವುದು ಸರಿಯಾ ಮ್ಯಾಲ್ ಧರಿಯಾ 2 ಆರಿಂದರಿಯದೆ ನಾನರಿಗಳ ಬೆರದೆ ಮೆರೆಯದೆ ತಂದೆವರದಗೋಪಾಲವಿಠ್ಠಲನ ತೋರುಶ್ರೀಶಾರದಾದೇವಿ 3
--------------
ತಂದೆವರದಗೋಪಾಲವಿಠಲರು
ಹೇಳೆಕಾಮಿನಿರಂಗಗೆ ಬುದ್ಧಿಯಹೇಳೆಕಾಮಿನಿರಂಗಗೆಪ.ಹೇಳಿದಂದದಿಕೇಳಿಕಾಲಿಗೆರಗುವಳಮ್ಯಾಲೆ ಕೋಪಿಸಿಕೊಂಡು ಬಾಲೇರ ನೆರೆವಂಗೆ ಅ.ಪ.ತನ್ನ ಮೈಗಂಪು ಕಸ್ತೂರಿಗಿಂದಧಿಕ ಕಂಡೆತನ್ನಧರದ ರಸಾಮೃತಗಿಂತ ಸವಿದುಂಡೆತನ್ನ ದಂತದ ಘಾಯಕೆ ಅಂಜದೆಕರಜನ್ನಟ್ಟಿಸಲು ಕುಚಕ್ಕೆ ಸುಂದರಿಯರನ್ನು ಮೆಚ್ಚಿದ ದಾನಕ್ಕೆ ಇನಿಯಳಿರೆಅನ್ಯರ ಮೋಹಿಪಗೆ ಕಲಿಮಾನವಗೆ 1ಸ್ನೇಹ ನೋಟಕೆ ಮೆಚ್ಚಿ ಸುಖಭಾರ ತನಗಿತ್ತೆಬಾ ಹೆಣ್ಣೆ ಎನಲು ಭಾಗ್ಯಾಂಬುಧಿಗೊಶವಾದೆತಾ ಹೊನ್ನಾಸೆಗೆ ಮಂಚದಿ ಘಾತಿಸಿದರೆನೇಹಿಯ ಬೆರದೆಕೆಲದಿಕರಾಳ ಚೇಷ್ಟೆಗೆನೇಹದಾರದಲೊಪ್ಪಿದೆ ಎನ್ನನು ಬಿಟ್ಟುಬಾಹು ಜೋರಿನಬುದ್ಧವಾಜಿಯಲ್ಲೇರ2ಚಪಲತೆಯಲ್ಲಿಕಪಟವಿದ್ಯದಲಿ ಭೂಪಕುಪಿತಾಶಾಯಿಲ್ಲ ಹೆಜ್ಜೆ ಹೆಜ್ಜೆಗೆ ಕಥೆಯಿಲ್ಲನೃಪಕೃಷ್ಣ ಸಲಹೆಂದರೆ ಎನ್ನಿಂದಾದಅಪರಾಧ ಕ್ಷಮಿಸೆಂದರೆ ಪ್ರಸನ್ವೆಂಕಟಕೃಪಿ ಧರ್ಮಿಯೆಂದರೆ ಇದಕೆ ತಾವಿಪರೀತ ತಿಳುಹನಂತೆ ಹಾಗಲ್ಲಂತೆ 3
--------------
ಪ್ರಸನ್ನವೆಂಕಟದಾಸರು