ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಈತನೀಗ ಕೃಷ್ಣನಾಥನು ಶ್ರೀನಾಥನು ಶ್ರೀನಾಥನಮ್ಮಾ ಧ್ರುವ ನಂದಕುಮಾರನೀತ ನಂದಮಹಿಮನೀತ ಕಂದರ್ಪಜನಕನೀತ ಸುಂದರವದನನೀತ 1 ಇಂದಿರೇಶನು ಈತ ವಂದಿತ ತ್ರೈಲೋಕ್ಯನಾಥ ಚಂದವಾಗಿ ಸುಳಿದ ಬಾಲ ಮುಕುಂದನೀತ 2 ಗಿರಿಯ ಬೆರಳಲೆತ್ತಿದಾತ ಕರಿಯ ಸೆರೆಯ ಬಿಡಿಸಿದಾತ ಮೊರೆಯ ಕೇಳಿ ದ್ರೌಪದಿಯ ಕರುಣಿಸಿದಾತ 3 ಅಸುವ ಪೂತನಿ ಹೀರಿದಾತ ಕಂಸನ ಮಡುಹಿದಾತ ವಂಶ ಕೌರವರ ತಾನು ಸಂಹರಿಸಿದಾತ 4 ಬಾಲಕನಹುದೀತ ಮೂಲೋಕ ಪಾಲಕ ನೀತ ಸಲಹುತಿಹ ಮಹಿಪತಿ ಮೂಲಾಗ್ರಜನೀತ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು