ಒಟ್ಟು 1582 ಕಡೆಗಳಲ್ಲಿ , 100 ದಾಸರು , 1035 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಕ್ಷರ ಮಾಲಾ ಅದ್ವೈತ ಅಗಣಿತಆದ್ಯಂತ ರಹಿತಇಹ ಪರಕೆ ವರ್ಜಿತಈಶ್ವರಯ್ಯ |ಉದಯಾಸ್ತಗಳಿಲ್ಲಊ(ಉ)ಚ್ಚ ನೀಚಗಳಿಲ್ಲಋಷಿಯ ಮೂಲವ ಬಲ್ಲವರಾರಿಲ್ಲಲೃ ಚೇಕಗಳಿಲ್ಲಲñ ಗಳಿಲ್ಲಏಕಮೇವ ತಾನೆಲ್ಲಐಕ್ಯ ಮೊದಲಿಗಿಲ್ಲ ಸೌಖ್ಯಾನಂದಓದಲಿಕೆ ಅಳವಲ್ಲಔದಾಸೀನ ಶೀಲಅಂತ ತಿಳಿಯದು ಬಹಳಅ:(ಹ)ರ್ನಿಶಿಯಲಿ || ಹರ ಹರಾ ಮಹಾದೇವ ಶಿವ ಶಿವ ಮಹಾದೇವ ಶಂಕರಾ ಮಹಾದೇವ ದೇವ ದೇವಾ 1 ಕರುಣ ಸಾಗರ ಗುರುವೆಕಾರುಣ್ಯ ಮೂರ್ತಿ ನೀಕಿರಣ ಕೋಟಿ ಪ್ರಕಾಶ ಮಹಿಮ ಕೀರ್ತಿ ನಿಮ್ಮದು ಬಹಳಕುಳಿತಲ್ಲಿ ನಿಂತಲ್ಲಿಕೂ(ಖೂ)ನ ನಾ ತಿದ್ದದೆ ಕಾಲಿಲೊದ್ದುಕೇಳಿ ಬಂದೆನು ಮಹಿಮೆಕೈ ಮುಗಿದು ಶರಣೆಂಬೆಕೋಟಾಳ (ಕೋಟಲೆ) ನಮ್ಮದು ಬಿಡಿಸು ದೇವಾಕೌ (ಕವಿ)ದು ಕೊಂಡಿದೆ ಮಾಯೆಕಂಬನಿಯ ತೆರೆ ಗುಡಿದುಕಃ(ಷ)ಷ್ಟ ಕಷ್ಟ ಜನ್ಮ ಬಹಳ ಕಷ್ಟ || ಹರಹರಾ 2 ಖಳರ ಸಂಗತಿಯಿಂದಖಾತಿಗೆ ನಾ ಬಿದ್ದೆಖಿನ್ನನಾದೆ ಅಳುಕಿ ಭಿನ್ನನಾದೆ ಖೀ(ಕೀ) ಸುತಿದೆ ಬಲು ಬಯಕೆಖುರ ಖುರಿ ಗುಟ್ಟುತಲಿಖೂನ ತೋರಿಸಿ ನಮ್ಮ ಕಡೆದಾಟಿಸು ಖೇದವನು ಬಡಲಾರೆಖೈರದ ಮನೆಯಲಿಖೋಡಿತನ ನಮ್ಮದು ಬಿಡಿಸು ದೇವ ಖೌ(ಖವ)ಟ ಮನವನು ಬಿಡಿಸಿಖಂ ಮಗೆ (ಖಮಂಗ) ಮಾಡಯ್ಯಖಃಖಃ ಎನುತಲಿ ಕೆಮ್ಮಲಾರೆ || ಹರಹರಾ 3 ಗದ್ದಲ ಮನದಿಂದ ತಿದ್ದಲಾರದೆ ಹೋದೆಗಾವಿಲ ನಾನಾದೆ ಕರುಳನಾದೆಗಿರಿಜೇಶ ನೀ ಕೇಳು ಪ್ರಳಯಕ್ಕೆ ಒಳಗಾದೆ ಉಳಿದುಕೊಂಡರೆ ನಿಮ್ಮ ಮರೆಯೆನೆಂದು |ಗೀತ ಹಾಡಿದರೇನು ನಾಥನನು ಕೊಳಲಿಲ್ಲ ಪ್ರೀತಿಗಳು ನಡಲಿಲ್ಲ ಗುರುವಿನಲ್ಲಿ | ಗುಣಕರ್ಮಕಾಡುತಿದೆ ಗೂಳಿಯನೆ ಮಾಡುತಿದೆ ಗೆಲವ ಹಾದಿ ಬಯಲ ಜ್ಞಾನವಿಲ್ಲ |ಗೈಯಾಳ ತನದಿಂದ ಹೈಯಾಲಿಕೆಗೆ (ಹುಯಿಲಿಕೆಗೆ) ಬಿದ್ದು ಗೊಡ್ಡತನ ಎಷ್ಟೆಂತು ಹೇಳಲಯ್ಯಗೌಪ್ಯದ ಮನೆಯೊಳಗೆಗಂಭೀರತನ ಬಿಟ್ಟುಗಃ(ಗಾಹ)ಳ ಹರಿಸೊ ಬಹಳ ಕೃಪೆಯಿಂದಲಿ || ಹರಹರಾ 4 ಘ(ಗ)ಳಿಸಲಾರೆನು ಪರವುಘಾ(ಗಾ)ಳಿಯಾಗಿದೆ ಮನಸುಘಿಲಕೆಂದರೆ ಬೆದರಿಘೀರಿಡುತಲಿಘುಮ್ಮರಿ ಸಿಕ್ಕುತದಘೂ(ಗೂ)ಳಿ ಸೊಕ್ಕಿದ ಹಾಗೆ ಘುರಘೂರಿಯ ತಪ್ಪಿಸಿಹರವ ಮಾಡು ||ಘೇರಿ ಬಂದೆರಗಿತುಘೃರಿಸುವರಿನ್ನಾರುಘೋರದಲಿ ಮುಳುಗಿದೆ ತಾರಿಸಯ್ಯಘೌ(ಗೌ)ರವನು ಮಾಡೆನಗೆಘಂಮನೆ ವರವಿತ್ತುಘಃ(ಘಾ)ಸಿಯಾಗಿಸಬೇಡ ಯಮನ ಬಾಧೆಯಲಿ || ಹರಹರಾ 5 ಜ್ಞಾನದ ಹಾದಿಯಿಲ್ಲ ಅ-ಜ್ಞಾನಿ ನಾನಾದೆ ಸ್ವಾನುಭವವೆಂದರೆ ಏನೋ ಎಂತೋಜ್ಞಾನವೆಂದರೆ ದೀಪ ಬೆಳಕಿಲಿ ನೋಡಿಪ್ಪಜ್ಞಾನದ ಸ್ವರೂಪ ಸಾರ ಗುಹ್ಯ ಜ್ಞಾನಿ ಸಂಗದ ಗೋಷ್ಟಿಜ್ಞಾನಿಗೇ ಪರಿಪಾಟಿಜ್ಞಾನಿಯೆಂದರೆ ಕೋಟಿ ಕೋಟಿ ಪುಣ್ಯ ಜ್ಞಾನಕ್ಕೆ ಸರಿಯಿಲ್ಲಜ್ಞಾನಿಯಾದವ ಬಲ್ಲಜ್ಞಾನಿಯೆಂದರೆ ಕಲ್ಲು ಹಾಕುತಾರೆ || ಹರಹರಾ 6 ಚರಣವನು ಪಿಡಿಯಾದೆಚಾರ್ವಾಕ ನಾನಾದೆಚಿರಕಾಲ ಬದುಕುವಚೀ(ಚಿ)ಹ್ನ ವಿಲ್ಲ ಚುಲಕ ಬುದ್ಧಿಯ ಹಿಡಿದುಚೂಕ (ಚುಕಾ)ರಾದೆನು ಬಹಳಚೇರಿಗೇಡಿತನವನು ಬಿಡಿಸು ದೇವಾ |ಚೈತನ್ಯನೆಂಬವನು ಒಳ ಹೊರಗೆ ಐದಾನೆಚೋರತನವನು ಮಾಡಿ ಕದ್ದನನ್ನಚೌಖಂಡಿ ಒಡೆದನೊಚಂನಾಗಿ ಹಗಲವೆಚಃ(ಚಾ)ಡಿ ನೋಡುತಲಿದ್ದೆ ಉಲವಿಲ್ಲವು ಹರಹರಾ 7 ಛಲದ ಬುದ್ದಿಯ ಹಿಡಿದುಛಾನಸ ನಾನಾದೆಛಿಛೀ ಎಂದರು ಸಾಧು ಜನರುಛುಲಕತನಕೆಲ್ಲಛೂರಿಯನೆ ಹಾತುತಲಿಛೇದಿಸಲು ತಡವಿಲ್ಲಛೈ ತಾಳಿಸಿಛೋದವನು ಬಡುವರು ಭಕ್ತರಾದವರೆಲ್ಲಛೌಕಂಠ ನಮ್ಮಯ್ಯ ಕೂಡಿಕೊಂಡಛಂದಾಗಿ ಸಲಹಯ್ಯ ಆನಂದ ಪದವಿಯ ಕೊಟ್ಟುಛತ್ರವನು ಮೇಲಿಟ್ಟು ಛಃ(ಛಾ)ಯ ವಾಗೋ ಹರಹರಾ 8 ಜಪ ತಪಗಳ ನಾ ಮಾಡಿಜಾಗ್ರತ ನಾನಾದೆಜಿತೇಂದ್ರಿಯಾದೆನೊಜೀವದಿಂದ ಜುಗಳನೆಲ್ಲವನುಜೂಜನಾಡಿ ಗೆದ್ದೆಜೇನವನಿಕ್ಕಿದೆ ನೆಲಕಬ್ಬಿಗೆಜೈ ಜಯಾಕಾರವನು ಜಗವೆಲ್ಲ ಮಾಡುವರುಜೋಗುಳ ಹಾಡುವರು ಪ್ರೇಮದಿಂದಜೌನಾಗಳೆ (ಯೌವನಾಗಲೆ) ಹೋಗಿಜಂಬುಲಿಂಗನ ಕೂಡಿ ಜಃ(ಹ)ಜ ನಾಡಿ ಹರಹರಾ 9 ಝ(ಜ)ಳಕವನು ಮಾಡಿದೆಝಾರಿ ಬ್ರಹ್ಮನ ಕೈಯ ಉದಕವೇ ಉಷ್ಣವನು ಬಿಡಿಸಿತಲ್ಲಝಿಂಜ ಬೀಜ ಮಲ ತೊಳೆದುಝೀ ಎಂಬ ಖಣಿಯೊಳಗೆಝುಣಿಝೂಣಿಸುವನಾದಝೇಲಿಸಿಕೊಂಡಝೈಯ ರಾಗದ ಯೋಗಝೋತಿ ಮಾಡಲಿ ಬೇಕುಝೌಗರದ ಒಳ ಮೊಲಿಯ ಭಾರಿಡುತಲಿ ಝಂಮನೊದಗಿತು ಮೇಘ ಝಳಮಳ ಮಿಂಚೇರಿಝಃಗ ಝಗಿಸುವ ದಿವಾ ರಾತ್ರಿಯಲಿ ಹರಹರಾ 10 ಟಕಮಕನೆ ನೋಡ್ಯಾಡಿಟಾಳಿ ಬಲಿತು ಕೊಂಡ ಹೊತ್ತರು ಆತ್ಮಜ್ಞಾನಿಗಳು ಟೀಕು ಆಯಿತು ಹೀಗೆಟುಕಿಲಿ ತಿಳಕೊಳ್ಳಿಟೂಕ ಮಾಡಲಿ ದೇಹ ಮೋಕ್ಷವಿಲ್ಲ ಟೇಕದ ಮೇಲೇರಿ ಜಾರಿ ಬಿದ್ದರೆ ಕೇಡುಟೈಳತನದಲಿಟೊಂಕ ಮುರಿದುಕೊಂಡಟೌಕರಕ ಗತಿಗಾಣಟಂಮನೆ ಕೆಲಸಕ್ಕೆಟಃ(ಟಾ)ಹ ಬಡೆವವರಿಲ್ಲ ಹುಟ್ಟಮೂಕಗೆ ಹರಹರಾ 11 ಠಮಕದಲಿ ದಂಭಕಗಠಾವಿಕ್ಯಾಗಲು ಶಿವನುಠಿಸಳ ಮನದವನುಠೀವಿ ಹೊಕ್ಕ ಠುಮಠೂಮಿಗುಟ್ಟುತಲಿಠೇವೇನೆ ಕಳಕೊಂಡಠೈ(ತೈ)ಳ ಬುದ್ಧಿಯ ಲಂಡ ಸಾಕುಸಾಕುಠೊಂಬಿಯ ಮತದವನುಠೌಳಿಕಾವನು ಬದ್ಧಠಂಮೆಂದರೆ ನಮ್ಮರಸು ಸಿಕ್ಕಠಃ (ಠಾ)ವು ಬಲ್ಲಿದವನಲ್ಲ ಠಾಣೇ ಕುಳಿತವನಲ್ಲ ಠಾಕುರಾಯಿಕಾದು ಗೋವ ನಾದ ಹರಹರಾ 12 ಡಗಳ ಮುದ್ರಿಯ ಹಾಕಿಡಾಗಿನ ಪಶುವಾಗಿಡಿವರಿ ಎಂದರೆ ಖೋ ಎನುತಲಿ ಡೀಂಗರಿಗಲ್ಲದೆಡುರುಕು ಹಾಕುತಲಿದೆಡೂ(ಡು)ಳಿಕಿಸುತಲಿಹ ಸೊಕ್ಕಿನಲ್ಲಿ ಡೇಗಣಿ ಕಟ್ಟದೆಡೈಳತನ ಹೋಗದುಡೊಂಗ ತಟ್ಟಿದ ಬಳಿಕ ನೋಡು ಅಳುಕಡೌಲಿಸಿದ ಮಡವಿನಲಿ ನೀರ ಕುಡಿಯಲು ಹೋಗಿಡಂಕ ಮೊಸಳಿಯ ಕಂಡುಡಃ(ಡ)ಳಮಳಿಸಿತು ಹರಹರಾ 13 ಢಣಿಢಣಿಸುವ ಜ್ಯೋತಿಢಾಳಾಗಿ ತೋರುತದೆಢಿಳಿಗ್ಯಾತಕ ಹೋದಿ ಇಲ್ಲಿ ನೋಡು ಢೀಗು ಬಿದ್ದ ಮುನ್ನೆಢುಮಿಢೂಮಿಗುಟ್ಟುತಲಿಢೇಕರವ ಕೊಟ್ಟುಂಡು ತೃಪ್ತನಾಗೊ ಢೈಯಾಳಿತನದಿಂದಢೋಗರ ಬೀಳಲಿ ಬೇಡಢೌಳಿ (ಡೌಲು) ಮಾಡಲಿ ಬೇಡ ಸಾಧುರೊಳಗೆ ಢಂಮನಾಗಿರ ಬೇಡ ಅಹಂಕಾರ ತಲೆಗೇರಿಡಃ(ಢಾ)ಣಕ ನೀಗವಲ್ಲದೆ ಬಳಲುವಿ ಹರಹರಾ 14 ತವನಿಧಿಗಳ ನೋಡುತಾರಕ ಬ್ರಹ್ಮನ ಕೂಡುತಿಳಿದವನು ನೀ ನೋಡುತೀಂ(ತಿ)ತಿಣಿಯನು ತುಂಬಿ ಕೊಂಡಿದೆ ನೋಡುತೂ (ತು)ಳಕುವ ತೆರೆ ನೋಡುತೇಲಿ ಬರುತದೆ ನೋಡುತೈ ಧಾಂಗೆ (ತೆಯ್ಧಾಂಗೆ)ತೊಳೆದ ಮುತ್ತನು ನೋಡುತೌರಮನೆಯನು (ತವರಮನೆಯನು) ಕೂಡುತಂದೆ ಶಿವರಾಯನ ಆನಂದ ನೋಡುತಃ(ತಾಹ) ಕುಡುತದೆ ನೋಡು ಬಹಳ ಅಭ್ಯಾಸ ಮಾಡುದೇಹವಳಿದು ಆತ್ಮನೊಡಗೂಡು ಹರಹರಾ 15 ಥರ ಗೊಳಿಸುವ ಜ್ಞಾನಸ್ಥಾ(ಸ್ಥ)ಳವ ಶುದ್ಧ ಮಾಡುಸ್ಥಿರವಾದ ಮನಸಿನ ಸೂತ್ರವಿಡಿದುಸ್ಥೀ(ಸ್ಥಿ)ತಿ ಉತ್ಪತ್ತಿ ಪ್ರಲಯ ಮೀರಿದ ಮುಹೂರ್ತದಲಿಕೇಸರಗಳ ಹಾಕಿದರು ಯೋಗಿಗಳು ಉಪ್ಪಾರ ಈಶ್ವರಣ್ಣ ಬಡಿಗೇರಬೊಮ್ಮಣ್ಣ ಕಟ್ಟಲೀ ಜಾಣರು ಸೃಷ್ಟಿರಚನಾ ಮುಟ್ಟಿತು ಮುಗಿಲಿಗೆ ದಟ್ಟಿಸಿತು ಭೂಮಿಗೆಪಟ್ಟದರಸನು ನಮ್ಮ ಗುರುರಾಯನು ಹರಹರಾ 16 ದಗಿಯ ಬೀಳಲಿ ಬೇಡದಾ(ದ)ಯದ ಮನೆಯನು ಗಳಿಸುದಿನ ದಿನಕ ಭಕ್ತಿಯಿಂದೀರ್ಘವಾಗಿದುಗುಣಿಸಿದ ಪ್ರೇಮಗಳುದೂರ ಬೀಳದ ಹಾಗೆದೇವರಿಗೆ ಅರ್ಪಿಸಿದೈವ ಪಡೆಯೊ ದೊರಕೊಂಬ ತಡವೇನುದೌಲಿತನ ಹೋದರೆದಂಭವೆಂಬುದು ಎಲ್ಲದಃ(ಹ)ನವಾಗಿ ದಾವ ದರಶನದೊಳಗೆ ದೇವದರ್ಶನ ಮೇಲು ನೀನ್ಯಾಕ ಕೊಳವಲ್ಲಿ ಏನು ಬಂತೋ ಹರಹರಾ... 17 ಧನಕೆ ಹೆಣಗಲಿ ಬೇಡಧಾರುಣಿಗಂಜ ಬೇಡಧಿಗಿ ಧಿಗಿಗೊಳ ಬೇಡಧೀರನಾಗೊಧುಗಿ ಧುಗಿಸಲಿ ಬೇಡಧೂಳಿ ಕೂಡಲಿ ಬೇಡಧೇನು ಕರೆವುತಲಿದೆ ಸಂತರಲ್ಲಿಧೈರ್ಯವನು ಬಿಡಬೇಡ ಧೊ(ದೊ)ರೆಗೆ ಶರಣೋಗ ಬೇಡಧೌತ ರಂಗದ ಬಿರುದುಧಂಮ ಧಂಮಿಸುತಧಾ(ಧಃ)ಹಕಿಲ್ಲ ಮೃತ್ಯುವಿನ ಸೋಂಕಿಲ್ಲ ಜನ್ಮದ ಏಕಾಂತದಲಿರುತಿಹ ಶಿವಶರಣನು ಹರಹರಾ 18 ನರದೇಹಿ ಆದುದಕೆನಾಗಭೂಷಣನ ಭಜಿಸು ನಮ್ಮನಿª6Éಲ್ಲರಿಗೆ ಮೋಕ್ಷ ನೀರ ಮುಣುಗಲಿ ಯಾಕೆನುಡಿಯ ಬಂಧನವ್ಯಾಕೆನೂರಾರ ಶರಣ್ಯಾಕೆ ಬೆಂಡಾಗುತನೇಮ ಕೊಳಬೇಕ್ಯಾಕೆನೈಷ್ಠಿಯ ಕಟ್ಟಲ್ಯಾಕೆನೊಗನ ಹೊತ್ತಾನಂತ ನೆನಿಸಲ್ಯಾಕೆನೌಸರದ (ನವಸಿಗರ) ಪರಿಯಾಕೆನಂಮಯ್ಯನಗಲಲ್ಯಾಕೆನಃ(ನಾ)ನಾತ್ವವನಳಿದರೆ ಅಷ್ಟೇ ಸಾಕು ಹರಹರಾ 19 ಪರಮ ಗುರುವಿಗೆ ಶರಣುಪಾಪನಾಶನೆ ಶರಣುಪಿರಿದು ಪರಿಣಾಮದ ದೊರೆಗೆ ಶರಣು ಪೀಠದರಸನೆ ಶರಣುಪುಣ್ಯ ಪುರುಷನೆ ಶರಣುಪೂತ ಪಾವನ ಮೂರ್ತಿ ಶರಣು ಶರಣು ಪೇತು ಪತಿಗೆ ಶರಣುಪೈಜ ಗೆದ್ದವಗೆ ಶರಣುಪೊಡವಿ ಕೈಲಾಸದ ನಿಧಿಗೆ ಶರಣುಪೌರೋಹಿತನೆ ಶರಣುಪಂಥ ದುರಿತನೆ ಶರಣುಪಃ(ಪಾ)ರ್ವತಿ ಕಾಂತನ ಪಾದಕ್ಕೆ ಶರಣು ಹರಹರಾ 20 ಫಲವ ಬಯಸಲಿ ಬೇಡಫಾಸಿ (ಪಾಶದಿ) ಬೀಳಲಿ ಬೇಡಫಿರ್ಯಾದಿಗಳ ಹಳಿತಲ ಬೇಡಫೀ (ಫಿ)ತವಿ ಮಾಡಲಿ ಬೇಡಫುಗಸಾಟಿ ಕೆಡಲಿ ಬೇಡಫೂರಸೊತ್ತಿತೆನಬೇಡ ಶಿವ ಶಿವಗೆ ಫೇಡಿ ಮಾಡಲಿ ಬೇಡಫೈಣ್ಯ ಹೂಡಲಿ ಬೇಡಫೋಡಣಿ ಕೊಡಬೇಡ ಸಮುದ್ರಕೆಫೌಗೊಂಡ ಹೂವಿನಫಂಗಡಿಯನೆ ತಂದುಪಃ(ಫಾ)ರ ಪರಮಾತ್ಮಂಗೆ ಅರ್ಪಿಸಯ್ಯ ಹರಹರಾ 21 ಭರವಸವು ನಿನಗೇನುಭಾಗ್ಯ ಬಂದೀತೆಂದುಭಿಕ್ಷೆ ಬೇಡುವಗಿನ್ನುಭೀತಿಯಿಲ್ಲ ಭುವನದೊಳಗಿದಿರಿಲ್ಲಭೂತಾಳ ಕೆಳಗಿರಲಿಭೇದವಿಲ್ಲದೆಭೈರವನು ಕಾವ ಭೋಜನಂಗಿರುತಿಹನುಭೌತ್ಯ ವ್ಯಾಳೆ ಬಂದದಕೆಭಂಗ ಬಡಿಸಿಲಕಿಲ್ಲ ಸಂಗ ಸಿಲುಕಿ ಭಃ(ಭಾ)ಲ ಲೋಚನ ಚಂದ್ರಶೇಖರನ ಸ್ಮರಣೆಗೆ ಭಾರನಿಳುಹಿ ಭೂಮಿಯ ಹೊರಗಾಗಿ ಹರಹರಾ 22 ಮರಣ ಬರುತದೆ ಕೊಮಾರಗಳ ಹಾಕುತಲಿಮಿ (ಮೀ)ರಲಿಕ್ಕಲಿದುಮೀ(ಮಿ)ಥ್ಯಾವಲ್ಲ ಮುನಿಯು ಆದರೆ ಏನುಮೂರು ಕಣ್ಣಿರಲೇನುಮೇರು ಸಹಿತಾಗಿದು ನುಂಗುತದೆ ಮೈಯ ತಾಳಿದ ಬಳಿಕಮೋಕ್ಷ ಪಡೆಯಲು ಬೇಕುಮೌನವ ಹಿಡಿದಂಗೆ ದೇಶ ಭಂಗಮಃ(ಮ)ಹಾ ಪ್ರಲಯಕೆ ಹೊಂದದ ಮಹಾತ್ಮಂಗೆ ಭಯವೇನುಮಹಾದೇವನ ಮೈಯ ಕೂಡಿಕೊಂಡ ಹರಹರಾ 23 ಯದಿಯ (ಎದೆಯ) ಬಲ್ಲಿದನಾಗುಯಾತ್ಯಾತಕಂಜದೆಯಿ(ಈ) ತನೆಯೀ(ಈ)ಶ್ವರನು ಈಶ ಗುಣದಿ ಯುವತಿ ಇದ್ದರು ಏ£4ಯೂ(ಯು)ಗದ ಅಂಜಿಕೆ ಏನುಯೇ(ಏ)ಸೊಂದು ಗ್ರಹಗಳು ಬಂದರೇನುಯೈ(ಐ)ದಿಸಿ ಸಾಯೋಜ್ಯಯೋಗಿಯಾದ ಬಳಿಕಯೌವನಾಗಿರುತಿರಲಿ ಬಹು ವೃದ್ಧನುಯಂ(ಎಂ)ಮ ಬಸವನ ತಮ್ಮನಾಗಲಿಕೆ ಪರಬೊಮ್ಮಯಃಕಾಕಸಾರೆ ನಿಮ್ಮಯೇಕಾಕನಂದ ಹರಹರಾ 24 ರಮಣ ನಾಯಕತೆಯರುರಾಗವನೆ ಮಾಡುವರು ಸ-ರಿಗದಲಿ (ಸರಿಗಮದಲಿ) ಹಾಡುವರುರೀತಿಯಿಂದರುಣಿ ಝಣಿಸುವ ತಂತಿರೂಪದ ಮೃದಂಗರೇಖ್ಯಕೊಳಗಾಗದೆರೈಷಕೂಡಿರೋಮಾಂಚ ಗುಡಿಗಟ್ಟಿರೌದ್ರಾವತಾರದಲಿರಂಗ ದಾರಿಗೆ ಸಿಲುಕಿರಃ(ರಾ)ಹಣ ಒದಗಿ ರಾಯಪಂಚಾಕ್ಷರವ ಪರಶಿವನ ಕೊಂಡಾಡಿವರವ ಪಡೆದರು ಪ್ರತ್ಯಕ್ಷವಾಗಿ ಹರಹರಾ 25 ಲವಲವಿಕೆ ನನಗೆ ಹುಟ್ಟಿಲಾವಕೆ ಹೆಣಗಿದೆಲಿಂಗವನು ಗಳಿಸಿದೆಲೀಲೆ ಗಮನೆಲುಪ್ತವಾದೀತೆಂದುಲೂಟನೆ ಮಾಡಿದೆಲೇಸು ಲೇಸೆಂದರು ಭಕ್ತರೆಲ್ಲ ಲೈಕ್ಯದ ಹೆಸರೇನುಲೋಕದಂತಾಗದೆಲೌಸಡಿಯಿಲ್ಲದೆಲಂಭತನವೇ ಶಂಭುಶಂಕರ ನಿಮ್ಮಲಃ(ಲಾ)ಹಣೆವು ನರಗುಂಟು ಲೋಹ ಪರಿಸಕೆ ತಾಸೋಂಕಿದಂತೆ ಹರಹರಾ 26 ವಶವಾದ ಪರಬ್ರಹ್ಮವಾಸವಾಗಿರಲಿಕ್ಕೆವಿಷಯ ತಪ್ಪಿಸಿದೆನುವೀ(ವಿ)ಪರೀತ ಕೇಳಾ ವು(ಉ)ದಾಸವಿಲ್ಲದೆವೂ(ಉ)ಪರತಿಯ ಹೊಂದದೆವೇದವನು ಫುಂದದೆವೈದಿಕನೆ ಓದಿದ ಫಲವೇನುವೌಂ(ವಂ)ಶಿತ ನಾಗದೆವಂಮನವ ಬೀರದೆ ದೊಡ್ಡತನವೇ ವಃ(ವೋಹ)ಳ ಸೋಹಳವುಂಟು ತಾಮಕರ ದಾಮ ನಂಟುವಾಸುದೇವನ ಗಂಟು ಕಟ್ಟಿಕೊಳ್ಳಿ ಹರಹರಾ 27 ಶಮದಮಗಳಿಂದಶಾಶ್ವತ ಪದಕೇರಿಶಿವನ ಒಲಿಸಿಕೊಂಡಶೀಲಶುಂಡಶೂರ ನಿರ್ಧಾರ ಬಹು ಮೇಲುಳ್ಳವನುದಾರಶೇರಿ ಬಂದನುಶೈವ ಮಾರ್ಗ ಹೊಂದಿಶೋಭನದ ಮನೆಯಿಂದಶೌ(ಸೌ)ಭಾಗ್ಯವಾಯಿತುಶಂಭು ಶಂಕರ ಶರಣು ಸಹಸ್ರ ಶರಣುಶಃ(ಶ)ರಚಾಪವಿಲ್ಲದೆ ಕಾದಿ ಶರಣನು ಗೆದ್ದ ತಿಮಿರನಿದ್ರಿ ಕಣ್ಣು ತೆರೆದ ಹರಹರಾ 28 ಸಕಲ ಶಾಸ್ತ್ರವನೋದಿಸಾಕಾರ ತಿಳಿಯದು ನಿರಾಕಾರ ಎಂಬುದು ಬಹಳ ದೂರಸಿದ್ಧವಾಗಿದ್ದದ್ದುಸೀ(ಸಿ)ಕ್ಕದು ಕೈಯೊಳಗೆಸುಳವಿಲ್ಲ ಕಳವಿಲ್ಲಸೂಕ್ಷ ಘನವು ಸೇರಿ ಬಾರದ ನುಡಿಗೆಸೈರಾವೈರಾವೆಲ್ಲಸೊನೆ ಸೊನೆ........ಸನ್ನಿಹಿತನುಸೌರಸಾ(ಸುರಸ)ವಾದನುಸಂಮ್ಯಗ್ ಜ್ಞಾನವು ಬಲ್ಲಸಃ(ಸಹ)ಜಾನಂದ ತುಂಬನು ಲೌಕಿಕಕ್ಕೆ ಹರಹರಾ 29 ಹರ ಹರಾ ಎನುತಲಿ ಶಿವನಹಾಡಿಕೊಂಡೆಹಿತವು ತೋರಿತು ಘನಾಹೀ(ಹಿ)ತಕಾರಿಗೆಹುಗವರಿ ಕೇಳೊಲ್ಲಹೂ(ಹು)ಸಿಯ ತೀರ್ಥ3ಮಿಂದುಹೇತುವರ್ಜಿತನೆಂದು ಫಲವು ಕೊಂಡಹೈಯೆಂದು ನಿಂತಿತುಹೊಂಗಲ್ಲವಾ ಹಾಡುಗಳುಹಂಸ ಅರಿತುದಿಲ್ಲ ಬಲ್ಲ ತನವೇ ಹಮ್ಮು ನಡಿಯದು ಇಲ್ಲಿಹಃ(ಹಾಹಾ)ಕಾರ ಮಾಡಿದರೆ ಹಸಿದವನು ಉಣಬೇಕು ಬ್ರಹ್ಮರಸವ ಹರಹರಾ 30 ಕ್ಷಣ ಕ್ಷಣಕೆ ಶಿವನಿನ್ನಕ್ಷಾ (ಖ್ಯಾ)ತಿ ಕೊಂಡಾಡಿದಕ್ಷಿತಿಯ ಮೇಲಿಹುದುಕ್ಷೀರ ಉದಧಿಕ್ಷುದ್ರ ಕರ್ಮಿಗಳುಕ್ಷೂ(ಕ್ಷು)ದ್ರನೆ ಎನಿಸುವರುಕ್ಷೇಮ ಕಲ್ಯಾಣವ ಪಡೆಯರೆಂದೂಕ್ಷೈ(ಕ್ಷಯ) ವ್ಯಾಧಿ ಹೊಡೆದವನುಕ್ಷೋಭೆಯನು ಬಡುವನುಕ್ಷೌತಿಯನು ಕೂಡುತಿಹ ಜನ್ಮ ಜನ್ಮಕ್ಷಂ(ಕ್ಷೇ)ಮ ಸಾಯೋಜ್ಯಕ್ಕೆಕ್ಷಃ(ಕ್ಷಾ)ಳ ಸಕಲಪಾಪ ಪರಮಾತ್ಮ ಗತಿಗೆ ಕೋಪಪರಮ ಸಾಧು ಹರಹರಾ 31 ಗುರು ತ್ರಿಪುರಾಂತಕನಅರುವಿನ ಪದವಿದುಅರಿತವಗೆ ಅರಿದು ಅಕ್ಷರ ಮಾಲೆಕೊರತೆ ಆದ ಮಾತಿಗೆಹೊರತಾದ ಮಾತುಗಳಮುರುತಾದ ವೇದಗಳು ಗುರು ಗಮ್ಯವುಹಿರಿಯರಿಗೆ ಸಂಬಂಧಪರಕೆ ಪರಮಾನಂದಕರದ ಅಮೃತ ಬಿಂದು ಪ್ರಕಾಶ ತಾನು ಶರಣರಿಗೆ ಇದು ಬೇಕು ಚರಣ ಸಾರಿದ ಟೀಕುಪರಬ್ರಹ್ಮದಾ ತೂರು ತೂಗಿಕೊಳ್ಳಿ 32 ಹರಹರಾ ಮಹಾದೇವ ಶಿವ ಶಿವಾ ಮಹಾದೇವಶಂಕರಾ ಮಹಾದೇವ ದೇವ ದೇವಾ ||
--------------
ಸಿದ್ಧಗುರುತ್ರಿಪುರಾಂತಕ
ನನ್ನದೇನಿದೆಯೊ ದೇವ ನಿನ್ನದೆ ಎಲ್ಲವೂ ಪ ಪನ್ನಗಾಸನ ಧೊರೆಯೆ ಸನ್ನುತಾಂಘ್ರಿಯ ಹರಿಯೆ ಅ.ಪ. ಅವನಿಯೊಳು ಪುಟ್ಟಿಸುವ ಭವದೊಳಗೆ ನೂಕುವವಕಿವಿ ಮೂಗು ಕಣ್ಣಿವದನವ ತ್ವಚೇಂದ್ರಿಯದಿ ಅವಿತು ವ್ಯಾಪ್ತತನಾಗಿ ವ್ಯವಹರಿಸುವವ ನೀನೇಅವಸರದಿ ಕಾಯುವ ದೇವ ನೀನೆಯೊ 1 ತಿಳಿಯುವವ ನೀನೆಯೊ ತಿಳಿಸುವವ ನೀನೆಯೊಗಳಿಸುವವ ನೀನೆಯೊ ಬಳಸುವವ ನೀನೆಯೊಬೆಳಿಸುವವ ನೀನೆಯೊ ಕಳೆಯುವವ ನೀನೆಯೊಕೊಳುವವನು ನೀನೆಯೊ ಕಸಿಯುವವ ನೀನೆಯೊ 2 ಅಂತರಂಗದಿ ಅಡಗಿನಿಂತು ಪ್ರೇರಿಸುವನಂತದ್ವಂದ್ವದ ನಟನೆ ಸ್ವಂತತನವೆನಗೆಲ್ಲಿಸಂತರನು ಉದ್ಧರಿಸಲಿಂತು ಭೂಮಿಗೆ ಬಂದುನಿಂತ ಗದುಗಿನ ವೀರನಾರಾಯಣನು ನೀನೆ 3
--------------
ವೀರನಾರಾಯಣ
ಆರತಿಗಾರತಿ ಬೆಳಗಿತು ತನ್ನಿಂದ ತಾನೆ |ಮಹಗುರುವಿಗೆ | ತನ್ನಿ | ಅರವೂ ಮರವೂ ಎರಡಾದರುವಿಗೆ ಬೆಳಗುವ ತಾನೇ ಪ ಸಹಸ್ರ ಸೂರ್ಯರ ಪ್ರಭೆಗಳ ಕಲೆತು ಕೋಟಿ ಶಶಿಕಿರಣಾ ಮಹತೇಜ ಫಾಕಿಸಿ ಮುಟ್ಟಿತು ಅಡಗಿತು ಗಗನಾ 1 ನಿರಂಜನ ನಿಃಶಬ್ದ ಮೂಲಕ ಬೆಳಗುವ ತಾನೇ 2 ಪರಮ ಪ್ರಕಾಶ ಪರತರ ಪರಂಜ್ಯೋತಿ ಗುರುನಾಥಾ |ತೆರವಿಲ್ಲದಾರುತಿ ಭೀಮಾಶಂಕರ ಬೆಳಗುತ 3
--------------
ಭೀಮಾಶಂಕರ
ಎಂಥಾ ದಯಾಕರನು ನೋಡೆ ಸದ್ಗುರುರಾಯಎಂಥಾ ದಯಾಕರನು ನೋಡೆ ಅಂತರಂಗದ ತಾಪವ ಹರಿಸಿ ಅಂತರಾತ್ಮನ ತೋರಿದ ಪ ಹಸಿವು ತೃಷೆ ಪರಿಹರಿಸಿ ನಾನಾಬಗೆವಿಷಯವೆಲ್ಲವ ತೊರೆಸಿಮುಸುಕ ನುಗಿದು ಮಾಯೆಯಪರಂಜ್ಯೋತಿಯ ಬೆಳಗಿಸಿದನು ನೋಡೆ 1 ಸಂಸಾರದ ಬಹು ದುಃಖವ ಹರಿಸಿಶಿಂಶುಮಾರ ಚಕ್ರವ ಹಂಸೋಹಂಸೋಹಮೆಂದೆನ್ನನೇರಿಸಿಸಂಶಯ ಹರಿಸಿದನೆ2 ನಿರುಪಮ ನೀನೆ ಎಂದು ನಿರ್ಗುಣಪರಮ ಪುರುಷನೆ ಬಂದುಗುರು ಚಿದಾನಂದ ಸಾಕ್ಷಾತ್ಕಾರ ನೀನೆಂದುಗುರು ನೀನೆ ನಿಜವೆಂದನೆ 3
--------------
ಚಿದಾನಂದ ಅವಧೂತರು
ಎಲ್ಲ ತಾಪತ್ರಯದ ಚಿಂತೆ ಬಗಳಗೆ ಹತ್ತಿಹುದುಸೊಲ್ಲು ಸೊಲ್ಲಿಗೆ ನೆನೆವ ಚಿಂತೆ ಎನಗೆ ಹತ್ತಿಹುದು ಪ ಮಡದಿ ಸುತರು ಮನೆಯ ಪಶುವು ಬಗಳೆಗೆ ಹತ್ತಿಹುದುಷಡು ಚಕ್ರಂಗಳ ಭೇದಿಪುದೆಲ್ಲಾ ಎನಗೆ ಹತ್ತಿಹುದುಕೊಡು ಕೊಳ್ಳುವುದು ಹಾಕುವುದೆಲ್ಲಾ ಬಗಳೆಗೆ ಹತ್ತಿಹುದುಎಡೆದೆರಪಿಲ್ಲದೆ ನಾದವ ಕೇಳುವುದೆನಗೆ ಹತ್ತಿಹುದು 1 ನಿತ್ಯ ನಿತ್ಯದ ಪರಾಮರಿಕೆಯು ಬಗಳೆಗೆ ಹತ್ತಿಹುದುಮತ್ತೆ ಭ್ರೂಮಧ್ಯದ ಅರಿವೆಯ ಹುಚ್ಚು ಎನಗೆ ಹತ್ತಿಹುದುಬಿತ್ತಿ ಬೆಳೆಯುವುದು ಮಳೆಯಿಲ್ಲೆಂಬುದು ಬಗಳೆಗೆ ಹತ್ತಿಹುದುಎತ್ತೆತ್ತಲು ತಾ ಬೆಳಕ ನೋಡುವುದು ಎನಗೆ ಹತ್ತಿಹುದು 2 ಭಕುತರ ಬದುಕನು ಹಸನು ಮಾಡುವುದು ಬಗಳೆಗೆ ಹತ್ತಿಹುದುಭಕುತಿಯ ಶರಧಿಲಿ ಮುಳುಗಾಡುವುದು ಎನಗೆ ಹತ್ತಿಹುದುಸದಾ ಕಾಲವು ಕಾದಿರುತಿಹುದು ಬಗಳೆಗೆ ಹತ್ತಿಹುದುಚಿದಾನಂದ ಶ್ರೀ ಬಗಳೆಯ ಭಜಿಪುದು ಎನಗೆ ಹತ್ತಿಹುದು 3
--------------
ಚಿದಾನಂದ ಅವಧೂತರು
ಕನಸ ಕಂಡೆ ನಿನ್ನಿನಿರುಳೊಳು ಕೇಳುಕನಸಿನ ಸೊಗಸನು ತರಳೆಚಿನುಮಯಾತ್ಮಕ ಚಿದಾನಂದ ಅವಧೂತದಿನಕರ ಪ್ರಭಾತೀತ ಗುರುನಾಥ ಬಂದಿಹ ಪ ಕಾಶ ಕೌಪೀನವನುಟ್ಟು ಚೆಲ್ವಬಾಸುರ ಕುಂಡಲವಿಟ್ಟುಕೇಶದ ಜಡೆಗಳು ಥಳಥಳಿಸಲು ಸರ್ವಭೂಷಿತನಾಗಿ ತನ್ನೆದುರಿಗೆ ನಿಂತಿಹ 1 ನೆಟ್ಟನೆ ನಡುಮನೆಯೊಳು ತಾನುನೆಟ್ಟನೆ ಬಂದು ಕುಳಿತಿಹನುಶಿಷ್ಟ ಮೂರುತಿ ತನ್ನ ಕಾಯಬೇಕು ಎಂದುಮುಟ್ಟಿ ಪಾದವ ನಾನು ಶರಣು ಮಾಡಲಿದ್ದೆ2 ಸುಂದರ ಕಳೆಯುಳ್ಳ ಸ್ವಾಮಿತಾನು ಸಿಂಧು ಕೃಪಾಕರನಾಮಿ ಎಂದಡಿಗಡಿಗೆ ಸಾಷ್ಟಾಂಗವೆರಗಿನಿಂದು ಪೂಜಿಸಿ ಕಣ್ತುಂಬ ನೋಡಿನಲಿವ 3 ನಾನಾ ಪೂಜೆಯನೆಲ್ಲವ ಮಾಡಿ ಗುರುಧ್ಯಾನದಿನಾನೋಲಾಡಿ ಮಾನವನಾಗಿನಾನು ನಿಂದಿರಲೆನ್ನ ಕಿವಿಯೊಳುನಾನು ನೀಗಿತ್ತೆಂದು ಉಪದೇಶ ನೀಡುವ4 ಈಪರಿ ಕನಸನು ಕಂಡು ಎಲ್ಲತಾಪವು ಪರಿಹಾರಗೊಂಡುಭೂಪ ಚಿದಾನಂದ ಅವಧೂತ ತಾನಾದರೂಪಾಗಿ ಬೆಳಗಿರೆ ಬೆಳಗಿರೆ ಬೆಳ್ಳನೆ ಬೆಳಕಿತ್ತು5
--------------
ಚಿದಾನಂದ ಅವಧೂತರು
ದೃಷ್ಟ ಅದೃಷ್ಟದ ಬಲವು ನೊಡಿ ವಿಸ್ತಾರ ಸೃಷ್ಟಿಯಲಿ ಮುಟ್ಟಿ ಮುದ್ರಿಸಿದ ವಾಕ್ಯಂಗಳು ಕೇಳಿ ಆತ್ಮನಿಷ್ಠ ಜನರು 1 ದೃಷ್ಟಿ ಪುರುಷನ ಸೈನ್ಯಗಳು ಕೇಳಿ ಚಿತ್ತದಲಿ ಮಾನವರು ಅಜ್ಞಾನವೆಂಬಾಶ ಗತಿಯು ಮಾಯಾಮೋಹಕವೆಂಬ ಸುತರು 2 ಬಂಟ ಜನರು ಪ್ರಪಂಚ ಸೈನ್ಯಾಧಿಪತಿ ಸುಖ ದು:ಖದಳ ಭಾರಗಳು3 ಚಂಚಲವಂಚಲಶ್ವಗಳು ಅಹಂ ಮಮತಾ ಗಜಗಳು ಅವಸ್ಥೆಗಳು ಕಾಲಾಳುಗಳು ಮನ್ನೆವಾರರು ಕರಣಗಳು4 ಮೆರೆಯುತಿಹರು ಪಂಚೇಂದ್ರಿಯಗಳು ಸೂಸುತಲಿಹ ಬೇಹಿನವರು ಮೊದಲಾದ ದಶವಾಯುಗಳು 5 ಸುತ್ತಲಿಹ ಪರಿವಾರಗಳು ಸಪ್ತವ್ಯಸನ ಭೂಷಣಂಗಳು ಪಂಚಾಗ್ನಿಗಳು ಪಂಜಿನವರು ಅಷ್ಟಮದವು ಕಾವಲಿಗಳು 6 ಮೂರು ಪರಿಯ ತ್ರಿಗುಣಗಳು ಸೈನ್ಯದ ಪಾರುಪತ್ಯದವರು ಜಾಗ್ರಸ್ವಪ್ನ ಸುಷುಪ್ತಿಗಳು ಛತ್ರ ಚಾಮರ ಭೂಷಣಗಳು 7 ಸಪ್ತಧಾತುದ ಸುಖಾಸನವು ಪಂಚಾತ್ಮಗಳು ನಿಶ್ಯಾನಿಗಳು ತಾಮಸವೆಂಬ ಭೇರಿಗಳು ಅಹಂಕಾರವು ಕಹಳೆಗಳು 8 ಪರಿ ಚಂದ ಚಂದದಲಿ ಇಳಿದಿಹ ಸೈನ್ಯ ಭಾರಗಳು 9 ಜನನ ಮರಣದ ಮಂಟಪವು ಕಟ್ಟಿಹರು ವಿಸ್ತಾರದಲಿ ಚಿಂತಿ ಮುಪ್ಪಳಿಯು ಭ್ರಾಂತಿಗಳಲಿ ಸ್ಥಿತಿ ಸ್ಥಳಲಿಹ ದ್ವಾರಗಳು 10 ದುರ್ಮೋಹ ಬಲದಲಿ ತನುವೆಂಬ ದುರ್ಗಬಲದಲಿ ಕದನ ಮಾಡುವರನುದಿನದಲಿ 11 ಇನ್ನು ಅದೃಷ್ಟದ ಬಲವು ಕೇಳಿ ಚೆನ್ನಾಗಿ ಮನದಲಿ ಸಮ್ಯಜ್ಞಾನೆಂಬಾಶಗತಿಯ ಜ್ಞಾನ ವೈರಾಗ್ಯಸುತರು 12 ಬಂಟ ಜನರು ಬೋಧ ಸೈನ್ಯಾಧಿಪತಿಯ ದೃಢ ನಿಶ್ಚಯ ದಳ ಭಾರಗಳು 13 ನಿರ್ಮಳ ನಿಶ್ಚಳಶ್ವಗಳು ವಿವೇಕವೆಂಬ ಗಜಗಳು ಮಗುಟ ವರ್ಧನರು 14 ಶೂರತನದ ಪ್ರರಾಕ್ರಮರು ಸ್ಮರಣೆ ಚಿಂತನೆ ಧ್ಯಾನಗಳು ಸೂಸುತಲಿಹ ಬೇಹಿನವರು ಯೋಚನೆ ಅವಲೋಕನೆಗಳು 15 ಸುತ್ತಲಿಹ ಪರಿವಾರಗಳು ರತಿಪ್ರೇಮ ಸದ್ಭಾವನೆಗಳು ಲಯ ಲಕ್ಷ್ಯಗಳು ಪಂಜಿನವರು ಮೌನ್ಯ ಮೋನವೆ ಕಾವಲಿಗಳು 16 ನಾದ ಬಿಂದು ಕಳೆಯಗಳು ಸೈನ್ಯದ ಪಾರುಪತ್ಯವರು ಅನಿಮಿಷ ಛತ್ರ ಚಾಮರವು ಏಕಾಕಾರವೆ ನಿಶ್ಯಾನಿಗಳು 17 ಅನುಭವ ಸುಖಾಸನಗಳು ತೂರ್ಯಾವಸ್ಥೆಯ ಭೂಷಣಗಳು ಆನಂದಮಯವೆ ಭೇರಿಗಳು ನಿಶ್ಚಿಂತವೆ ಕಹಳೆಗಳು 18 ಸುಜ್ಞಾನದ ಮೊದಲಾದ ಅಂಗಡಿಯು ಇಳಿದಿಹ ಸಾಲವರಿಯಲಿ ಚಂದ ಚಂದ ಶೃಂಗಾರದಲಿ ಇಳಿದಿಹ ಸೈನ್ಯ ಭಾರಗಳು 19 ಸದ್ಗತಿ ಮುಕ್ತಿ ಮಂಟಪವು ಹೊಳೆಯುತಿಹದು ಸ್ಯೆನ್ಯದೊಳಲಿ ಶೋಭಿಸುವದು ಶೃಂಗಾರದಲಿ 20 ನಿರಾಶವೆಂಬ ಪ್ಯಾಟಿಯಲಿ ಇಳಿದಿಹದು ಸಂತೋಷದಲಿ ದೃಷ್ಟಿ ಪುರುಷನ ಅಟ್ಟಲೆಯ ಕೇಳಿ ನಡೆಯಿತು ಮಾರ್ಬಲವು 21 ಧಿಮಿ ಧಿಮಿಗುಡುತ ನಾದ ಮಾಡಿದರಾನಂದಲ ಗ್ಹೇಳೆನಿಸುತ್ತ ಕಹಳೆಗಳು ಭೋರ್ಗರೆಯುತಲಿ ನಡೆದರು 22 ನಡೆವರು ಅತಿಶಯ ಶೀಘ್ರದಲಿ ಬಾಣ ಬಾಣಗಳು ಮಾಡುತಲಿ ದಣಿದಣಿಸುತಲಿ ನಡೆದರು 23 ತುಂಬಿದ ಸೈನ್ಯ ಭಾರಗಳು ಉಬ್ಬು ಕೊಬ್ಬಿ ನಡೆದವು ನಗುತ ಗೆಲವಿಂದಶ್ವಗಳು ಏರಿ ಹಾರಿಸುತ ನಡೆದರು 24 ಮಗುಟ ವರ್ಧನರು ನಡೆದರು ಅತಿ ಹರುಷದಲಿ ಕಾಲಾಳುಗಳು ಮುಂದೆ ಮಾಡಿ ನಡೆಯಿತು ದಳ ಭಾರಗಳು 25 ಶೂರತನದ ಪರಾಕ್ರಮರು ಮುಂದಾಗಿ ಬ್ಯಾಗೆ ನಡೆದರು ಅಬ್ಬರಿಸುತಲಿ ಮಾರ್ಬಲವು ನಡೆಯಿತವರ ಸೈನ್ಯ ಮ್ಯಾಲೆ 26 ವಿವೇಕವೆಂಬ ಗಜಗಳು ವಾಲ್ಯಾಡುತಲಿ ನಡೆದರು ರಗಡಿಸುತ ಡೋಲಿಸುತಲಿ ನಡೆದರು ಪರಚಕ್ರ ಮ್ಯಾಲೆ 27 ನಡೆವ ಮಾರ್ಬಲದ ಧೂಳಿಗಳು ಮುಸುಕಿತು ಸುವಾಸನೆಗಳು ಗರ್ಜಿಸುವ ಧ್ವನಿಗೇಳಿ ಹೆದರಿತು ಶತ್ರು ಮಾರ್ಬಲವು 28 ಕಂಡು ದೃಷ್ಟರ ಸೈನ್ಯದವರು ಸಿದ್ದವಾದರು ಸಮಸ್ತದಲಿ ತಮ್ಮ ತಮ್ಮೊಳು ಹಾಕ್ಯಾಡುತಲಿ ನಡೆದುಬಂದರು ಸನ್ಮುಖಕೆ 29 ಚಿಂತಿಸುತಲಿ ಪರಾಕ್ರಮರು ಬಂದರು ವೀರ ಕಾಳಗಕೆ ಕಾಳಿ ಭೇರಿಗಳು ಬಾರಿಸುತ ಬಂದರು ಮಹಾಜನರು 30 ಕೂಗಿ ಚೀರುತ ಒದರುತಲಿ ಬಂದು ನಿಂದರು ಪರಾಕ್ರಮರು ಅಹಂ ಮಮತಾ ಗಜಗಳು ನಡೆದು ಬಂದವು ಎದುರಾಗ 31 ಕಾಲಾಳು ಸಹ ಕೂಡಿಕೊಂಡು ರಚಿಸಿ ಬಂದರಶ್ವಗಳು ಕೂಡಿತು ಉಭಯ ದಳವು 32 ಸುವಾಸನೆ ಧೂಳಿಯೊಳಗೆ ಅಡಗಿತು ದುರ್ವಾಸನೆಯು ಅಹಂ ಮಮತಾ ಗಜಗಳು ಕಂಡು ಓಡಿದವು ಹಿಂದಾಗಿ33 ಬೆನ್ನಟ್ಟಿ ವಿವೇಕ ಗಜವು ಹೊಡೆದು ಕೆಡವಿದವು ಧರೆಗೆ ಅವಸ್ಥೆಗಳು ಕಾಲಾಳುಗಳು ಜಗಳ ಮಾಡಿದವು ನಿಮಿಷವು 34 ವಿಚಾರ ಕಾಲಾಳು ಮುಂದೆ ಓಡಿದರು ದೆಸೆದೆಸೆಗೆ ಚಂಚಳವೆಂಚಳಶ್ವಗಳು ಏರಿ ಬಂದರು ರಾವುತರು 35 ಯುದ್ದಮಾಡಿದರರಗಳಿಗೆಯು ಶುದ್ಧಿ ಇಲ್ಲದೆ ಓಡಿದರು ನಿರ್ಮಳ ನಿಶ್ಚಳಶ್ವಗಳು ಏರಿ ಬೆನ್ನಟ್ಟಿ ನಡೆದರು 36 ಚಂಚಳ ವೆಂಚಳಶ್ವಗಳ್ಹರಿಗಡೆದರು ಕಾಲು ಬಲ ರಾಹುತರ ಸಹವಾಗಿ ಕಡೆದೊಟ್ಟಿದರು ಶಿರಸವನು 37 ವೀರರು ಕಾಮಕ್ರೋಧಗಳು ಬಂದರು ಅತಿಶಯಉಗ್ರದಲಿ ಶಮೆ ದಮೆ ವೀರಗಳೊಡನೆ ಕಾದಿ ಮಡಿದರು ಆ ಕ್ಷಣದಲಿ 38 ಬಂಟ ಜನರು ಬಂದರು ಸಿಟ್ಟು ಕೋಪದಲಿ ಭಾವ ಭಕ್ತಿಯ ಬಂಟರೊಡನೆ ಕಾದಿ ಕಾಲಾಳು ಮಡಿದರು 39 ಪ್ರಪಂಚ ಸೈನ್ಯಾಧಿಪತಿಯ ಕೈಸೆರೆಯಲಿ ಹಿಡಿದರು ಬೋಧ ಸೈನ್ಯಾಧಿಪತಿಯು ನಾದಘೋಷವು ಮಾಡಿಸಿದನು 40 ಉಲ್ಹಾಸವೆಂಬ ಸರವರಿಯು ಹಚ್ಚಿಸಿದರು ಸೈನ್ಯದೊಳಲ್ಲಿ ದಯ ಕರುಣ ಭಾಂಡಾರಗಳು ಒಡೆದು ಧರ್ಮ ಮಾಡಿದರು 41 ಪಂಚೇಂದ್ರಿಯಗಳ ಪರಾಕ್ರಮರ ಹಿಡಿದು ಕಟ್ಟಿದರು ಪಾಶದಲಿ ಸ್ಮರಣಿ ಚಿಂತನೆ ಪರಾಕ್ರಮರು ಉಬ್ಬಿದರು ಹರುಷದಲಿ 42 ದಶವಾಯುಗಳ ಬೇಹಿನವರ ಹಿಡಿದು ಬಂಧನವ ಮಾಡಿದರು ಅವಲೋಕನೆ ಬೇಹಿನವರ ಸದ್ಬ್ರಹ್ಮದಲಿ ಸುಖಿಸಿದರು 43 ಸಪ್ತವ್ಯಸನ ಪರಿವಾರಗಳು ರತಿಪ್ರೇಮರೊಡನೆ ಕೂಡಿದರು ಪಂಚಾಗ್ನಿಗಳು ಪಂಜಿನವರು ಪಂಚ ಪಾಲದಿ ಅಡಗಿದರು 44 ಲಯ ಲಕ್ಷಗಳು ಪಂಜಿನವರು ಸಂಜೀವದಂತೆ ಹೊಳೆವರು ಅಷ್ಟಮದವು ಕಾವಲಿಗಳು ಅಡಗಿದವು ಸ್ಥಳ ಸ್ಥಳಲಿ 45 ಮೌನ್ಯ ಮೋನವೆ ಕಾವಲೆಗಳು ತಾವೆ ತಾವಾಗಿ ದೋರಿದರು ತ್ರಿಗುಣರ ಪಾರುಪತ್ಯದವರು ಒಂದು ಸ್ಥಳದಲಿರಿಸಿದರು 46 ನಾದ ಬಿಂದು ಕಳೆಯಗಳು ಮುಟ್ಟಿ ಪಾರುಪತ್ಯ ಮಾಡುವರು ಶತ್ರುರಾಘನ ಭೂಷಣಗಳು ಸೆಳೆದುಕೊಂಡರು ಗಳಿಗೆಯೊಳು 47 ಅವಿದ್ಯ ಮೊದಲಾದಾಗದರಿಂದ ಚೋಳಿಯು ಮಾಡಿದರು ಜನನ ಮರಣದ ಮಂಪಟವು ಸುಟ್ಟು ಸಂಹಾರ ಮಾಡಿದರು 48 ಚಿಂತೆ ಭ್ರಾಂತಿಯ ದ್ವಾರಗಳು ಕಿತ್ತಿ ಬೀಸಾಟಿದರು ಆಶಾಪ್ಯಾಟಿಗೆ ಧಾಳಿನಿಕ್ಕಿ ಲೂಟಿಸಿದರು ನಿಮಿಷದಲಿ 49 ತನು ದುರ್ಗ ವಶಮಾಡಿಕೊಂಡು ಇಳಿಯಿತು ಸೈನ್ಯ ಸುಖದಲಿ ಸದ್ಗತಿ ಮುಕ್ತಿ ಮಂಟಪವು ಕೊಟ್ಟರು ಅಚಲದಲಿ 50 ಯೋಗ ಭೋಗದ ದ್ವಾರದಿಂದ ನಡೆದರು ಮಹಾ ಭಕ್ತಜನರು ಮನ್ನೆವಾರರು ಕರಣಗಳು ಅಭಯವ ಕೊಂಡು ನಡೆದರು 51 ಅಜ್ಞಾನವೆಂಬಾಶಾಗತಿಯು ಮುಕ್ತವಾದಳು ಸುಜ್ಞಾನz ಮಾಯವಾದರು ವೈರಾಗ್ಯದಲಿ52 ದೃಷ್ಟ ಪುರುಷನ ತಂದಿನ್ನು ಇಟ್ಟುಕೊಂಡರು ತಮ್ಮೊಳಲಿ ತನು ದುರ್ಗ ವಶಮಾಡಿಕೊಂಡು ಮುಂದೆನಡೆದರಾನಂದದಲಿ 53 ಅಧಾರ ಪುರ ಬೆನ್ನಮಾಡಿ ನಡೆದರು ಬ್ರಹ್ಮಾಂಡಪುರಕೆ ವಿಘ್ನಹರನ ಬಲಗೊಂಡು ಮ್ಯಾಲೆ ಮಣಿಪುರಕೆ ನಡೆದರು 54 ಅನಾಹತಪುರ ದಾಟಿ ಮುಂದೆ ನಡೆದರು ವಿಶುದ್ಧ ಪುರಕೆ ಸ್ಥಳ ಸ್ಥಳ ಹರುಷ ನೋಡುತಲಿ ನಡೆದರಗ್ನಿ ಚಕ್ರಪುರಕೆ 55 ಮ್ಯಾಲಿಹ ಬ್ರಹ್ಮಾಂಡ ಪುರವು ಹೊಳೆಯುತಿಹದು ಪರಿಪರಿಲಿ ಸಹಸ್ರದಳ ಕಮಲಗಲು ಥಳಥಳಿಸುವದದರೊಳು 56 ಘನ ಬೆಳಗಿನ ಪ್ರಭೆಯುಗಳು ಹೊಳಯುತಿಹುದು ಕಿರಣಗಳು ಹರಿ ಬ್ರಹ್ಮಾದಿಗಳು ವಂದಿಸುವ ಸ್ಥಳ ನೋಡಿ ಗುರು ಕರುಣದಲಿ 57 ಪಿಂಡ ಬ್ರಹ್ಮಾಂಡೈಕ್ಯಪುರದಿ ಒಳಗಿಹ ಹಂಸಾತ್ಮಗತಿಯು ಸಹಸ್ರ ರವಿಕೋಟಿ ತೇಜ ಭಾಸುವಾ ವಸ್ತುಗತಿಯು 58 ವಿಶ್ವ ವ್ಯಾಪಕನೆಂಬ ಸ್ಥಿತಿಯು ಮಹಿಮಾನಂದ ಸ್ಫೂರ್ತಿಯು 59 ದೃಷ್ಟಾದೃಷ್ಟಗತಿಯು ದೋರಿದ ಗುರು ಸದೃಷ್ಟದಲಿ ಗುರು ಕರುಣದ ಕಟಾಕ್ಷದಲಿ ಬೆರೆಯಿತು ಮನ ಹರುಷದಲಿ 60 ಕಂಡು ಮಹಿಪತಿಯ ಜೀವನವು ಧನ್ಯವಾಯಿತು ದೃಷ್ಟದಲಿ ಪರಮಾನಂದ ಸುಪಥದಲಿ ಜೀವನ ಮುಕ್ತ್ಯದರಲ್ಲಿ 61
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೋಡಿರಿ ರಾಘವೇಂದ್ರರ ಮಾಡಿರಿ ನಮಸ್ಕಾರ ಬೇಡಿದ ಇಷ್ಟ ವರ ನೀಡುವರು ನಮ್ಮ ಯತಿವರ ಪ ಮಂತ್ರಾಲಯದಿ ನಿಂತಿಹ ಚಿಂತೆಗಳ ಪರಿಹರಿಸುವ ಕಂತುಪಿತನನಂತಗುಣ ತನ್ನಂತರಂಗದಿ ಸ್ತುತಿಸುವ ಇಂಥ ಯತಿಗಳ ಕಾಣೆ ಹರಿಯೇಕಾಂತ ಭಕ್ತರೆನಿಸಿಕೊಂಡು ಮಂತ್ರಾಕ್ಷತೆ ಫಲ ನೀಡಿ ತಾ ಸಂತಾನ ಸಂಪತ್ತು ಕೊಡುವರ 1 ವಾತ ಪಿತ್ತ ವ್ಯಾಧಿಗಳ ಸೇತು (ಶ್ವೇತ?) ಕುಷ್ಠರೋಗಗಳ ಪಾತಕಿಯರ ಪಾಪಗಳ ಪ್ರೀತಿಲಿಂದ ಕಳೆವರೊ ಪ್ರಖ್ಯಾತರಾಗಿ ಬೆಳೆವರೊ ಭೂತಳದಿ ಸನ್ನೀತ (ಸನ್ನಿಹಿತ?) ರಾದ ಸೀತಾಪತಿ ನಿಜದೂತರೆನಿಸೋರು 2 ಭಜಸÉ ಭಕ್ತರ ನೋಡುವ ಸದನಕೆ ಬಂದುಕೂಡುವ ಒದಗಿದಾಪತ್ತು ದೂಡುವ ಬಂದು ಮುದದಿ ತಾ ದಯಮಾಡುವ ಅಜನಯ್ಯನ ಕೊಂಡಾಡುತ ತುಂಗಾನದಿಯ ತೀರ ವಾಸವಾಗಿ ಹೃದಯದೊಳು ಭೀಮೇಶ ಕೃಷ್ಣನ ಪದವ ಭಜಿಸಿ ಪಡೆವರಾನಂದವ3
--------------
ಹರಪನಹಳ್ಳಿಭೀಮವ್ವ
ಪಾಹಿ ಕೃಷ್ಣ ಮಹಿಪತಿ ಮಧುರೆಗೆ ಪೋಗೋದೇನೊ ಕಾರಣ ಯದುಕುಲನಾಥ ಪಾಹಿ ಕೃಷ್ಣ ಮಹಿಪತಿ ಪ ಮಧುವೈರಿ ತಾ ಬ್ಯಾಗ ಮಧುರಾಪಟ್ಟಣದಾರಿ ಹಿಡಿದಿರೆ1 ದಧಿ ಮಥನವ ಮಾಡಿ ಕದವ ತೆಗೆದು ಕಂಡರು ಬ್ಯಾಗ 2 ಮಿಂಚಿನಂತ್ಹೊಳೆವೊ ವಿರಿಂಚನಯ್ಯನ ರಥ ಚಂಚಲಾಕ್ಷಿಯರು ನೋಡುತಲಾಗ 3 ಬನ್ನಿರೆ ಬನ್ನಿರೇ ಪನ್ನಂಗಶಯನನ ಬೆನ್ನ್ಹತ್ತಿ ನಾವು ಹೋಗುವೊಣೀಗ 4 ಫುಲ್ಲನಾಭನೆ ಮತ್ತೆಲ್ಲಿಗೆ ಪಯಣವೊ ಎಲ್ಲ ವಾರ್ತೆಗಳ್ಹೇಳೊ ನಮಮುಂದೆ 5 ನಂದಗೋಪನ ಬುದ್ಧಿ ಮಂದವಾಯಿತೇನೊ ವೃಂದಾವನವ ಬಿಟ್ಟು ಕಳಿಸುವ 6 ಕೂಸೆಂದು ನಿನ್ನ ಮುದ್ದಿಸುವೊ ಮೋಹಗಳೆಲ್ಲ ಬ್ಯಾಸರಿಕ್ಯಾಯ್ತೇನೆಶೋದೆಗೆ 7 ಸಾಧುಗೋವ್ಗಳನೆಲ್ಲ ಕಾದುಕೊಂಡಿರುವೋದು ಶ್ರೀಧರ ನೀದಾರಿಗ್ಹೇಳಿದ್ಯೊ 8 ವತ್ಸಕಾಯ್ದುದು ಮನಕಿಚ್ಛಿಲ್ಲದಿರಲು ಶ್ರೀ- ವತ್ಸಧರನೆ ಸುಮ್ಮನಿರೊ ನೀನು 9 ನಮ್ಮನೆಯಲಿ ಪಾಲ್ ಬೆಣ್ಣೆ ಕದ್ದನೆಂದು ನಿಮ್ಮಮ್ಮನಲ್ಲಿ ದೂರಿದೆವೇನೊ 10 ಕ್ಷೀರಗಡಿಗೆ ಒಡೆದೋಡಿ ಪೋದನೆಂದು ದೂರಿಕೊಂಡವರಲ್ಲೋ ನಿನ್ನನು 11 ಊರೊಳಗೊಬ್ಬಳು ದೂರಿಕೊಂಡರೆ ನಾವು ಭಾರಿ ಶಿಕ್ಷೆಯ ಮಾಡಿ ಬಂದೆವೊ 12 ಎಂದಾದರೊಂ(ದು) ದಿನ ಅಂದ ಮಾತುಗಳೆಲ್ಲ ಇಂದೆ ತಪ್ಪಿ ್ಹಡಿಯದೆ ಕ್ಷಮಿಸಯ್ಯ 13 ಕದವ ತೆಗೆಯದ ಮುಂಚೆ ಸದನದ್ವಾರದಿ ಬಂದು ಯದುನಾಥ ಎದುರೆ ನಿಂತಿರುವ್ಯಲ್ಲೊ 14 ಕಂಗಳಿಂದಲಿ ನೋಡ್ಯಾಲಿಂಗನೆ ಮಾಡುತ ಸಂಗಸುಖದಿ ಬೆಳೆದಿದ್ದೇವೊ 15 ನಿನ್ನ ನೋಡದ ಕಂಗಳಿನ್ನ್ಯಾತಕಿರಲು ಕೇ(ಗೇ?) ರೆಣ್ಣೆಯ ತೀಡಿಕೊಂಬುವೋಣೇನೊ 16 ಮಾರನಾಟಕೆ ಮನಸೋತು ನಿನ್ನನೆ ನಾವು ಜಾರಪುರುಷನೆಂದು ತಿಳಿಯದೆ 17 ಇರುಳೇಯೆ ಮನೆಯಲ್ಲಿ ಕೊಳಲೂದೋ ಕಾಲಕ್ಕೆ ನಳಿನಾಕ್ಷ ನಾವ್ಹ್ಯಾಗೆ ಬಂದೆವೊ 18 ಕಾಲಿಗಿಡುವ ವಸ್ತು ಕರದಲಿಟ್ಟುಕೊಂಡು ವಾಲೆ ಮೂಗುತಿ ಹೆರಳಿಗೆ ಚುಚ್ಚಿ 19 ಹರಡಿ ಕಂಕಣ ಪಾದದ್ಹರಡಿನ ಮ್ಯಾಲಿಟ್ಟು ಮುಡಿವ ಮಲ್ಲಿಗೆ ಕಿವಿಯಲಿ ಸುತ್ತಿ 20 ಹಾರ ಪದಕವ ಟೊಂಕಕೆ ಕಟ್ಟಿ ನಾವು ಉಟ್ಟ ಸೀರೆ ಕುಪ್ಪುಸ ಪಾರವಿ(ಪರಿವೆಯಿ?)ಲ್ಲದೆ 21 ಗಂಡಮಕ್ಕಳಿಗುಣಬಡಿಸಿ ಮಂಡಿಯ ಮ್ಯಾಲೆ ಸಂಡಿಗ್ಹುಳಿಯನ್ಹಾಕಿ ಬಂದೆವೊ 22 ಎಲೆಯ ಮ್ಯಾಲ್ಹಾಕೋ ಪದಾರ್ಥವೆಚ್ಚರವಿಲ್ಲ ತಲೆಯ ಮ್ಯಾಲ್ಹಾಕಿ ಬಂದೆವು ನೋಡೊ 23 ಬೆಣ್ಣೆ ಚೆಟ್ಟಿಗೆಯ ಬೆಕ್ಕಿನ ಮುಂದೆ ಸರಿಸೇವೊ ಸಣ್ಣ ಕೂಸಿನ ನೆಲವಿನೊಳಿಟ್ಟು 24 ಅಳುವೊ ಮಕ್ಕಳನೆ ಆಕಳ ಕಣ್ಣಿಗೆ ಕಟ್ಟಿ ಕರು- ಗಳ ತೊಟ್ಟಿಲೊಳಗೆ ಇಟ್ಟು 25 ಬಂಗಾರದ್ಹಾರ ಪದಕನ್ಹಾಕಿ 26 ಅಚ್ಛದಿಂದೆತ್ತಿ ಮುದ್ದಿಡುತಿರೆ ನಮ ಗಲ್ಲ ಕಿ- ತ್ತಿ ಚಿವರಿಕೊಂಡ್ಹೋಯಿತು 27 ಬಂಗಾರ ಕಳಕೊಂಡು ಮಂಗನಂತಾದೆವೊ ಮಂಗಳಾಂಗನೆ ಇಷ್ಟು ಮರುಳಾಗಿ 28 ವ್ಯತ್ಯಾಸದಿಂದ್ವಸ್ತ್ರ ಇಟ್ಟು ಬಂದೆವೊ ನಾವು ಬಿಟ್ಟೊ ್ಹೀದನೆಂಬೊ ಸಿಟ್ಟಿಲ್ಲವೊ 29 ಅಡಅಡವಿಲಿ ನಿನ್ನ ಹುಡುಕುತ ತಿರುಗೇವೊ ಕಡಲಶಯನ ಕರುಣದಿ ಬಂದ್ಯೊ 30 ರಾಸಕ್ರೀಡೆ ಜಲಕ್ರೀಡೆನಾಡಿದ ವಾರ್ತೆ ರಾ(ರಹ?)ಸ್ಯ ಒಬ್ಬರಿಗೆ ನಾವ್ ತಿಳಿಸದೆ31 ಅತ್ತೆಮಾವಂದಿರೀ ವರ್ತಮಾನವ ಕೇಳಿ ನೆತ್ತಿಮ್ಯಾಲ್ಹೊಡದ್ಹೊರಗ್ಹಾಕೋರೊ 32 ಪತಿಗಳು ನಮ್ಮನ್ನು ಬಿಟ್ಟರೂ ಬಿಡಲೊ ಶ್ರೀ- ಪತಿ ನಿನ್ನ ಬಿಟ್ಟು ಪೋಗುವರಲ್ಲ 33 ಮನೆ ಧನ ಧಾನ್ಯ ಮಕ್ಕಳು ಪತಿಗಳು ಬ್ಯಾ- ಡ ನಮಗೊಂದು ಸ್ಥಾನ ತೋರಿಸೊ ನೀನು 34 ಕುಸುಮ ಮಲ್ಲಿಗೆ ಒಣಗಿದ ದಾರ ಮತ್ಯಾವ ಕೆಲಸಕ್ಕೆ ಬರುವುದೊ 35 ಎಲ್ಲಿ ಬಿಲ್ಲ ್ಹಬ್ಬ ಮತ್ತೆಲ್ಲಿ ಸೋದರಮಾವ ಎಲ್ಲಿಂದ ಕರೆಯ ಬಂದನು ಈತ 36 ಕ್ರೂರನೆನ್ನದಲೆ ಅಕ್ರೂರನೆಂಬುವೋ ಹೆ- ಸರ್ಯಾರಿಟ್ಟರ್ಹೇಳೊ ಈ ಪುರುಷಗೆ 37 ನಮ್ಮ ನಿಮ್ಮನು ಅಗಲಿಸುವೋನು ನಮ್ಮಂಥ ಹೆ- ಣ್ಣು ಮಕ್ಕುಳು ಇವಗಿಲ್ಲವೆ 38 ಇಳಿಯಿಳಿ ಇಳೆಯಲ್ಲೀಳಿಗೆಯ ಕೊಟ್ಟೇವೊ ನಮ್ಮ ಕೊ- ರಳ ಕೊಯ್ದು ಮುಂದಕ್ಹೋಗೋ ನೀ 39 ವಾಸುದೇವನೆ ನಿನ್ನ ರಥದ ಗಾಲಿಗೆ ನಾವು ಹಾಸಿಕ್ಯಾಗಿ ಅಡ್ಡಬಿದ್ದೆವೊ 40 ಮಧುರಾಪಟ್ಟಣದಲ್ಲಿ ಇದ್ದ ಸತಿಯರೆಲ್ಲ ಮದನಮೋಹನ ನಿನ್ನ ಬಿಡುವೋರೆ 41
--------------
ಹರಪನಹಳ್ಳಿಭೀಮವ್ವ
ಯಾದವ ನಿನ್ನೆಲ್ಲ ವರ್ಮಕರ್ಮಂಗಳ ಸಾಧಿಸಿ ಜನರ ಮುಂದ್ಹೇಳಲ್ಯಾ ರಂಗ ಸಾಧಿಸಿ ಜನರ ಮುಂದ್ಹೇಳಲ್ಯಾ ಭೇದವಿಲ್ಲದೆ ಕರುಣವನಿಟ್ಟು ಮರೆ- ಯದೆ ನೀ ದಯ ಸುಮ್ಮನೆ ಮಾಡುವ್ಯಾ ಪ ಮಡುವಿನೊಳಗೆ ಪೊಕ್ಕು ಬಿಡುತ ನೀ ಕಣ್ಣ ದುಡುಕು ಮಾಡಿದ್ದೆಲ್ಲ ಹೇಳಲ್ಯಾ ರಂಗ ದುಡುಕು ಮಾಡಿದ್ದೆಲ್ಲ ಹೇಳಲ್ಯಾ ಮಡುಹಿದ ಸೋಮಕಾಸುರನೆಂಬ ಸುದ್ದಿಯ ಬಿಡದೆ ಜನರ ಮುಂದ್ಹೇಳಲ್ಯಾ 1 ಕಡÀಗೋಲನ್ಹೊತ್ತು ಮಂಡಿಯಂತೆ (?) ಕೈಕಾಲು ಮು- ದುಡಿಕೊಂಡದ್ದೆಲ್ಲ ಹೇಳಲ್ಯಾ ರಂಗ ಮು- ದುಡಿಕೊಂಡದ್ದೆಲ್ಲ ಹೇಳಲ್ಯಾ ಹಿಡಿದು ಸುಧೆಯ ವಂಚನಿಂದ ಸುರರಿಗೆ ನೀ- ಭಂಗ ನಾ ಹೇಳಲ್ಯಾ 2 ಊರುಮನೆಗಳಿಲ್ಲ ನೀ ಗಿರಿಗಂಹ್ವರ ಸೇರಿಕೊಂಡದ್ದೆಲ್ಲ ಹೇಳಲ್ಯಾ ರಂಗ ಸೇರಿಕೊಂಡದ್ದೆಲ್ಲ ಹೇಳಲ್ಯಾ ಕೋರೆ ಹಲ್ಲುಗಳಿಂದ ಬೇರನು ಸವಿದುಂಡ ದಾರಿದ್ರ್ಯವೆಲ್ಲ ನಾ ಹೇಳಲ್ಯಾ3 ಮುಖವ ನೋಡಲು ಮೃಗದಂತೆ ಬಾಯ್‍ತೆರೆದ ನಿನ್ವಿಪರೀತ ಕೋಪಂಗಳ್ಹೇಳಲ್ಯಾ ರಂಗ ನಿನ್ವಿಪರೀತ ಕೋಪಂಗಳ್ಹೇಳಲ್ಯಾ ನಖದಿಂದ ಹಿರಣ್ಯಕನ ಕರುಳ ನೀ ಬಗೆದಂಥ ಸಕಲ ವ್ಯಾಪಾರ ನಾ ಹೇಳಲ್ಯಾ 4 ಪಾದ ಭೂಮಿ ಮುದ್ದು ರೂಪಗಳಿಂದ ಬೇಡಿಕೊಂಡದ್ದೆಲ್ಲ ಹೇಳಲ್ಯಾ ರಂಗ ಬೇಡಿಕೊಂಡದ್ದೆಲ್ಲ ಹೇಳಲ್ಯಾ ಮೂರು ಲೋಕವು ಸಾಲದಂತೆ ನೀ ಬೆಳೆದ ಅನ್ಯಾಯ ಮಾಯಗಳ ನಾ ಹೇಳಲ್ಯಾ 5 ಜಮದಗ್ನಿಯಲ್ಹುಟ್ಟಿ ಜನಭಯಕಂಜದೆ ಜನನಿ ಹತವ ಮಾಡಿದ್ಹೇಳಲ್ಯಾ ರಂಗ ಜನನಿ ಹತವ ಮಾಡಿದ್ಹೇಳಲ್ಯಾ ಅನುಮಾನವಿಲ್ಲದೀತನು ನಿಮ್ಮ ಕುಲಕೆ ಛೇದಕನೆಂದು ಕ್ಷತ್ರೇರಿಗ್ಹೇಳಲ್ಯಾ 6 ದೊರೆತನಾಳುವ ತಂದೆ ಪುರವಬಿಟ್ಹೊರಗ್ಹಾಕೆ ವನವನತಿರುಗಿದ್ದು ಹೇಳಲ್ಯಾ ರಂಗ ವನವನತಿರುಗಿದ್ದು ಹೇಳಲ್ಯಾ ಸಿರಿಯನಗಲಿ ಹತ್ತು ಶಿರ(ನ)ನುಜೆಯ ಮೂಗು ಮುಂದಲೆಯ ಕೊಯ್ದ(ಯ್ಸಿದ?) ನೆಂದ್ಹೇಳಲ್ಯಾ 7 ಎಳೆದು ಗೋಪ್ಯಮ್ಮ ನಿನ್ನೊ ್ವರಳಿಗೆ ಕಟ್ಟಿದ್ದು ಕಳವು ಜನರ ಮುಂದ್ಹೇಳಲ್ಯಾ ರಂಗ ಕಳವು ಜನರ ಮುಂದ್ಹೇಳಲ್ಯಾ ಸೆಳೆದು ಗೋಪ್ಯೇರ ಸೀರೆಕಟ್ಟಿ (ಕಡಹಾ) ಲಕ್ಕೆ ಆ- ಕಳಕಾಯ್ದನೆಂದು ನಾ ಹೇಳಲ್ಯಾ 8 ಬಟ್ಟೆರಹಿತನಾಗಿ ಹೊಕ್ಕು ತ್ರಿಪುರದಲ್ಲಿ ಬತ್ತಲೆ ತಿರುಗಿದ್ದು ಹೇಳಲ್ಯಾ ರಂಗ ಬತ್ತಲೆ ತಿರುಗಿದ್ದು ಹೇಳಲ್ಯಾ ದುಷ್ಟ ಕಲಿಯ ಶಿರಕಡಿದು ಹಾಕುವ ನೀ ದುಷ್ಟ ಗುಣಗಳ ನಾ ಹೇಳಲ್ಯಾ 9 ಭಕ್ತ ಜನರು ಕಂಡು ಕಟ್ಟಿ ಹಾಕುವರೆಂ- ದಿಷ್ಟು ಅಂಜಿಕೆ ನಿನ್ನದ್ಹೇಳಲ್ಯಾ ರಂಗ ಇಷ್ಟು ಅಂಜಿಕೆ ನಿನ್ನದ್ಹೇಳಲ್ಯಾ ನಿತ್ಯ ಈ ಹೃದಯಮಂದಿರದಲ್ಲಿ ಭೀಮೇಶ- ಕೃಷ್ಣ ನೀನಡಗಿದ್ದು ಹೇಳಲ್ಯಾ 10
--------------
ಹರಪನಹಳ್ಳಿಭೀಮವ್ವ
ರಕ್ಷಿಸೊ ಎನ್ನ ರಕ್ಷಿಸೋ ಪ ರಕ್ಷಿಸು ಎನ್ನನು ಅಕ್ಷಯಗುಣಪೂರ್ಣ ಲಕ್ಷುಮಿರಮಣನೆ ಪಕ್ಷಿವಾಹನನೇ ಅ.ಪ ಪಾದವಿಲ್ಲದೆ ಜಲದೊಳು ಮುಳುಗಾಡಿ ವೇದಚೋರಕನನ್ನು ಸೀಳಿ ಬೀಸಾಡಿ ವೇದಾಚಲದೊಳು ನಿಂತು ಕೈ ನೀಡಿ ಸಾಧು ಸಜ್ಜನಪಾಲ ನೀ ದಯಮಾಡಿ 1 ವಾರಿಧಿ ಮಥನದಿ ಸುರರಿಗೆ ಒಲಿದು ಮೇರು ಮಂದರವನ್ನು ನೀ ಹೊತ್ತೆ ಒಲಿದು ವಾರಿಜಾಕ್ಷನೆ ವೈಕುಂಠದಿಂದಿಳಿದು ಊರಿದೆ ಚರಣವ ಗಿರಿಯೊಳು ನಲಿದು 2 ಧರಣಿಯ ಒಯ್ದ ದಾನವಗಾಗಿ ನೀನು ಹರಣದ ಸೂಕರನಂತಾದುದೇನು ಚರಣ ಸೇವಕರಿಗೆ ನೀ ಕಾಮಧೇನು ಕರುಣದಿ ಸಲಹೆನ್ನ ನಂಬಿದೆ ನಾನು 3 ತರಳನು ಕರೆಯೆ ಕಂಬದೊಳುದಿಸಿದೆಯೊ ದುರುಳ ದಾನವರ ಪ್ರಾಣವ ವಧಿಸಿದೆಯೊ ಕರಳಮಾಲೆಯ ಕೊರಳೊಳು ಧರಿಸಿದೆಯೊ ಮರಳಿ ಬಂದವ ಫಣಿಗಿರಿಯನೇರಿದೆಯೊ 4 ಕೋಮಲ ರೂಪದಿ ಭೂಮಿಯನಳೆದೆ ಆ ಮಹಾಬಲಿಯ ಪಾತಾಳಕ್ಕೆ ತುಳಿದೆ ಸ್ವಾಮಿ ಪುಷ್ಕರಣಿಯ ತೀರದಿ ಬೆಳೆದೆ ಪ್ರೇಮದಿ ಭಕ್ತರ ಕಾಮಿಸಿ ಪೊರೆದೆ 5 ತಾತನಪ್ಪಣೆಯಿಂದ ಮಾತೆಗೆ ಮುನಿದೆ ಜಾತಿಕ್ಷತ್ರಿಯರ ವಿಘಾತಿಸಿ ತರಿದೆ ನೂತನವಾಗಿಹ ನಾಮದಿ ಮೆರೆದೆ ಧಾತುಗೆಟ್ಟೆನು ಸ್ವಧೈರ್ಯಗಳಿರದೆ 6 ದಶರಥನುದರದಿ ಶಿಶುವಾಗಿ ಬಂದೆ ವಸುಮತಿ ತನುಜೆಯ ಕುಶಲದಿ ತಂದೆ ಅಸುರರ ಹೆಸರನುಳಿಸದೆ ನೀ ಕೊಂದೆ ಕುಸುಮನಾಭನೆ ಶೇಷಗಿರಿಯಲ್ಲಿ ನಿಂದೆ 7 ಮಧುರೆಯೊಳುದಿಸಿ ಗೋಕುಲದಲ್ಲಿ ಬೆಳೆದೆ ಉದಧಿಯ ಮಧ್ಯದಿ ದುರ್ಗವ ಬಲಿದೆ ಹದಿನಾರು ಸಾವಿರ ಸತಿಯರ ನೆರೆದೆ ಉದಯವಾದೆಯೊ ವೇದಗಿರಿಯೊಳು ನಲಿದೆ 8 ಶಶಿಮುಖಿಯರನು ಮೋಹಿಸುವಂಥ ಬಗೆಗೆ ವ್ಯಸನವ ಬಿಡುವುದುಚಿತವೇನೊ ನಿನಗೆ ವಸುಧೆಗುತ್ತಮವಾಗಿ ಎಸೆವಂಥ ಗಿರಿಯೊಳು ಹಸನಾಗಿ ನಿಂತಿಹ ಚರಣ ಸನ್ನಿಧಿಯೊಳು 9 ವಾಜಿಯನೇರಿಯೆ ನೇಜಿಯ ಪಿಡಿದೆ ಮಾಜುವ ಕಲಿಯನ್ನು ಕಡೆಯೊಳು ಕಡಿದೆ ಮೂಜಗದೊಡೆಯನ ಮನದೊಳು ಇಡುವೆ ಮಾಜ ಬೇಡೆಲೊ ವೇಂಕಟೇಶ ಎನ್ನೊಡವೆ 10 ಹತ್ತವತಾರದ ವಿಸ್ತಾರದಿಂದ ಕರ್ತು ವರಾಹತಿಮ್ಮಪ್ಪನು ನಿಂದ ಭೃತ್ಯವತ್ಸಲನಾಗಿ ಭೂಮಿಗೆ ಬಂದ ಅರ್ಥಿಯೋಳ್ಭಕ್ತರ ಸಲಹುವೆನೆಂದ 11
--------------
ವರಹತಿಮ್ಮಪ್ಪ
ವಸುದೇವಸುತನಿಗೆ ನಮೋ ನಮೋ ನಮ್ಮ ವಸುಧೆ ಪಾಲಕನಿಗೆ ನಮೋ ನಮೋ ಪ ಮಚ್ಚಾವತಾರಗೆ ಮೊದಲೆ ಮಂಗಳವೆಂದು ಸಾಕ್ಷಾತ ಕೂರ್ಮಗೆ ನಮೋ ನಮೋ ಸುತ್ತಿ ಸುರುಳಿ ಭೂಮಿ ಒಯ್ದಿ ್ಹರಣ್ಯಾಕ್ಷಕನ ವರಾಹ ನಮೋ ನಮೋ1 ಕೂಸು ಕರೆಯೆ ಕಂಬದಿಂದ ಬಂದ್ಹಿರಣ್ಯ- ಕಶ್ಯಪನ ಕೊಂದ್ಹರಿಗೆ ನಮೋ ನಮೋ ಆಕಾಶವ್ಹಿಡಿಯದೆ ಬೆಳದು ಬಲಿಯ ಭಾಗ್ಯ ಆಕ್ರಮಿಸಿದಾತಗೆ ನಮೋ ನಮೋ 2 ಪೊತ್ತು ಕೊಡಲಿ ಕ್ಷತ್ರಿಯರ ಕಡಿದ ಸ- ಮರ್ಥ ಭಾರ್ಗವ ನಮೋ ನಮೋ ಹತ್ತು ಶಿರಗಳ ಕೊಂದು ಸೀತಾಸಮೇತನಾದ ಪೃಥಿವಿ ಪಾಲಕ ರಾಮ ನಮೋ ನಮೋ 3 ಬೆರಳಲಿ ಗೋವರ್ಧನ ಎತ್ತ್ಯಾಕಳಕಾಯ್ದ ಕೊಳಲನೂದುವ ಕೃಷ್ಣ ನಮೋ ನಮೋ ತರಳರೂಪದಿ ತ್ರಿಪುರದ ದುರುಳರನೆಲ್ಲ ಮರುಳು ಮಾಡಿದ ಬೌದ್ಧ ನಮೋ ನಮೋ 4 ಮುದ್ದು ತೇಜಿಯನೇರಿ ಕಲಿಗಳ ಕಡಿದಂಥ ಕಲ್ಕ್ಯಾವತಾರಗೆ ನಮೋ ನಮೋ ಶುದ್ಧ ವೈಷ್ಣವರಿಗೆ ಸುಲಭದಿಂದೊಲಿದು ಮುಕ್ತಿ ಕೊಡುವೊ ಭೀಮೇಶ ಕೃಷ್ಣಗೆ ನಮೋ ನಮೋ 5
--------------
ಹರಪನಹಳ್ಳಿಭೀಮವ್ವ
ವಾರಿಜನಾಭನ ವನಜಾಂಘ್ರಿಗಳಿಗೆ ಕರವ ಕೊಂಡಾಡುವೆ ಪದವ 1 ದೇವದೈತ್ಯರು ಕೂಡಿ ಪಾಲಾಂಬುಧಿಯಲ್ಲಿ ಮೇರು ಮಂದರವ ಕಡೆಗೋಲು ಮಾಡಿದರು2 ವಾಸುಕಿ ಶರಧಿ ಮಧ್ಯದಲಿ ಹರಿ ಕೂರುಮನಾಗಿ ಮಂದರವನೆತ್ತಿದನು3 ಕಾಲಕೂಟ ವಿಷವಾಯು ಪಾನಮಾಡುತಲಿ ಮಹದೇವ ಕೋಪದಿ ನುಂಗಿ ನೀಲಕಂಠೆನಿಸೆ 4 ಕೌಸ್ತುಭ ಕಾಮಧೇನು ಸುರತರುವು ಹಸ್ತಿ ತೇಜಿಯು ಕಲ್ಪವೃಕ್ಷ ಸುಧೆ ಉದಿಸೆ 5 ಸಿಂಧು ಮಥನವ ಮಾಡಲು ಶ್ರೀದೇವಿ ಜನಿಸೆ ಮಂದಾರಮಾಲೆ ಕೈಯಿಂದಲಿ ಪಿಡಿದು 6 ಅರ್ಕಚಂದ್ರರ ಕಾಂತಿಗಧಿಕಾದ ಮುಖವು ದಿಕ್ಕು ದಿಕ್ಕಿಗೆ ಮಿಂಚಿನಂತೆ ಹೊಳೆಯುತಲಿ 7 ವಜ್ರಾಭರಣವು ಕಾಲಗೆಜ್ಜೆ ಸರಪಳಿಯು ಮಲ್ಲಿಗೆ ಕುಸುಮಗಳೊಂದೊಂದ್ಹೆಜ್ಜೆಗುದುರುತಲಿ 8 ಕುಡಿಹುಬ್ಬು ಕಡೆಗಣ್ಣ ನೋಡುತಲಿ ನಡೆದು ಬಂದಳು ತಾ ಬಡನಡುವಿನ ಒಯ್ಯಾರಿ 9 ಅತಿಹಾಸ್ಯಗಳಿಂದ ದೇವತೆಗಳ ಮಧ್ಯೆ ಈ ಪತಿ ಎಲ್ಲಿಹನೋ ತಾ 10 ಅರ್ಕನ್ವಲ್ಲೆನೆ ಅಗ್ನಿಯಂತೆ ಸುಡುತಿರುವನ ಶಕ್ರನ ಒಲ್ಲೆ ಮೈಯೆಲ್ಲ ಕಣ್ಣವಗೆ 11 ಸೋಮನ ಒಲ್ಲೆ ಕಳೆಗುಂದಿ ತಿರುಗುವನ ಪಾವನ ನಮ್ಮ ಗಾಳಿರೂಪದವನ12 ರುದ್ರನ್ವಲ್ಲೆನೆ ರುಂಡಮಾಲೆ ಹಾಕುವನ ಮುದಿಹದ್ದಿನಂದದಲಿ ಗರುಡ ಹಾರ್ಯಾಡುವನಲ್ಲೆ 13 ಶೇಷನ ಒಲ್ಲೆ ವಿಷದ ದೇಹದವನ ಗ- ಣೇಶನ್ವಲ್ಲೆನೆ ಡೊಳ್ಳು ಹೊಟ್ಟೆ ಗಜಮುಖನ 14 ಬ್ರಹ್ಮ ನಾಲಕು ಮೋರೆಗುಮ್ಮನಂತಿರುವ ಯಮ- ಧರ್ಮನ ಒಲ್ಲೆ ನಿಷ್ಕರುಣ ಘಾತಕನ 15 ಸುರಜನರ ನೋಡಿ ಗಾಬರ್ಯಾಗುವೆನು 16 ಮಂದ ಹಾಸ್ಯಗಳಿಂದ ಮಾತನಾಡುತಲಿ ಇಂದಿರೆಪತಿ ಪಾದಾರವಿಂದ ನೋಡುತಲಿ 17 ಗುಣದಲಿ ಗಂಭೀರ ಮಣಿಕೋಟಿತೇಜ ಎಣಿಕಿಲ್ಲದ ಚೆಲುವ ನೋಡೆನ್ನ ಪ್ರಾಣನಾಥ 18 ಹದಿನಾಲ್ಕು ಲೋಕ ತನ್ನುದರದಲ್ಲಿರುವ ಪದುಮಾಕ್ಷಗ್ವನಮಾಲೆ ಮುದದಿಂದ್ಹಾಕುವೆನು 19 ಕರ ವೈಜಯಂತಿ ಸರ ಮಣಿ ನಾ ಇರುತಿರೆ ವಕ್ಷಸ್ಥಳವು 20 ಶ್ಯಾಮವರ್ಣನ ಮುದ್ದು ಕಾಮನಜನಕ ಪ್ರೇಮದಿಂದ್ವೊಲಿವೆ ನಾ ಕಾಮಿಸಿ ಹರಿಯ 21 ಕಮಲಮುಖಿ ಬ್ಯಾಗ ಕಮಲಾಕ್ಷನ್ನ ನೋಡಿ ಕಮಲಮಾಲೆಯ ತಾ ಕಂದರದಲ್ಹಾಕಿದಳು 22 ಅಂಗನೆ ರಚಿಸಿ ತಾ ನಿಂತಳು ನಗುತ 23 ರತ್ನ ಮಂಟಪ ಚಿನ್ನ ಚಿತ್ರ ಪೀಠದಲಿ ಲಕ್ಷ್ಮೀನಾರಾಯಣರು ಒಪ್ಪಿ ಕುಳಿತಿರಲು 24 ಸಾಗರರಾಜ ತನ್ನ ಭಾಗೀರಥಿ ಕೂಡಿ ಸಿರಿ ಧಾರೆಯನೆರೆದ 25 ಅಚ್ಚುತ ಲಕುಮಿಗೆ ಕಟ್ಟಿದ ನಗುತ 26 ಮೇಲು ಕರಿಮಣಿ ಮಂಗಳ ಸೂತ್ರವ ಪಿಡಿದು ಶ್ರೀ ಲೋಲ ಲಕುಮಿಗೆ ತಾ ಕಟ್ಟಿದ ನಗುತ 27 ವಂಕಿ ಕಂಕಣ ಮುತ್ತಿನ ಪಂಚಾಳಿಪದಕ ಪಂಕಜಮುಖಿಗೆ ಅಲಂಕರಿಸಿದರು 28 ಸರಿಗೆ ಸರಗಳು ನಾಗಮುರಿಗೆ ಕಟ್ಟಾಣಿ ವರಮಾಲಕ್ಷುಮಿಯ ಸಿರಿಮುಡಿಗೆ ಮಲ್ಲಿಗೆಯ 29 ನಡುವಿನ್ವೊಡ್ಯಾಣ ಹೊಸ ಬಿಡಿಮುತ್ತಿನ ದಂಡೆ ಸಿರಿ ಪರಮಾತ್ಮನ ತೊಡೆಯಲ್ಲೊಪ್ಪಿರಲು 30 ಇಂದಿರೆ ಮುಖವ ಆ- ನಂದ ಬಾಷ್ಪಗಳು ಕಣ್ಣಿಂದಲುದುರಿದವು 31 ರಂಗನ ಕಂಗಳ ಬಿಂದು ಮಾತ್ರದಲಿ ಅಂಗನೆ ತುಳಸಿ ತಾನವತರಿಸಿದಳು32 ಪಚ್ಚದಂತ್ಹೊಳೆವೊ ಶ್ರೀ ತುಳಸಿ ದೇವಿಯರ ಅಚ್ಚುತ ತನ್ನಂಕದಲ್ಲಿ ಧರಿಸಿದನು 33 ಮಂಗಳಾಷ್ಟಕ ಹೇಳುತ ಇಂದ್ರಾದಿ ಸುರರು ರಂಗ ಲಕ್ಷುಮಿಗೆ ಲಗ್ನವ ಮಾಡಿಸಿದರು 34 ಅಂತರಿಕ್ಷದಿ ಭೇರಿನಾದ ಸುರತರುವು ನಿಂತು ಕರೆದಿತು ದಿವ್ಯ ಸಂಪಿಗೆ ಮಳೆಯ 35 ಲಾಜಾಹೋಮವ ಮಾಡಿ ಭೂಮವನುಂಡು ನಾಗಶಯನಗೆ ನಾಗೋಲಿ ಮಾಡಿದರು 36 ಸಿಂಧುರಾಜನ ರಾಣಿಗೆ ಸಿಂಧೂಪವನಿತ್ತು ಗಜ ಚೆಂದದಿ ಬರೆದು 37 ಚೆಲುವೆ ನೀ ಬೇಕಾದರೆ ಹಿಡಿಯೆಂದನು ರಂಗ 38 ಅಚ್ಚುತ ಎನ್ನಾನೆ ಲೆಕ್ಕಿಲ್ಲದ್ಹಣವ ಕೊಟ್ಟರೆ ಕೊಡುವೆನೆಂದಳು ಲಕ್ಷುಮಿ ನಗುತ 39 ತುಂಬಿ ಮರದ ಬಾಗಿನವ ಸಿರಿ ತಾ ಋಷಿಪತ್ನೇರನೆ ಕರೆದು40 ತುಂಬಿ ಮರದ ಬಾಗಿನವ ಹರದಿ ಕೊಟ್ಟಳು ತಾ ಋಷಿಪತ್ನೇರನೆ ಕರೆದು 41 ಕುಂದಣದ್ಹೊನ್ನಕೂಸಿನ ತೊಟ್ಟಿಲೊಳಿಟ್ಟು ಕಂದನಾಡಿಸಿ ಜೋಜೋ ಎಂದು ಪಾಡಿದರು42 ಕರಿ ಎಂದನು ರಂಗ 43 ಸುರದೇವತೆಗಳಿಗೆ ಸುಧೆ ಎರೆಯಬೇಕಿನ್ನು ಕರಿ ಎಂದಳು ಲಕ್ಷ್ಮಿ 44 ಹೆಣ್ಣನೊಪ್ಪಿಸಿಕೊಟ್ಟು ಚಿನ್ನದಾರತಿಯ ಕರ್ನೆ(ನ್ಯ?) ಸರಸ್ವತಿ ಭಾರತಿ ಬೆಳಗಿದರಾಗ 45 ಈರೇಳು ಲೋಕದೊಡೆಯನು ನೀನಾಗೆಂದು ಬಹುಜನರ್ಹರಸ್ಯೆರೆದರು ಮಂತ್ರಾಕ್ಷತೆಯ 46 ಪೀತಾಂಬರಧಾರಿ ತನ್ನ ಪ್ರೀತ್ಯುಳ್ಳಜನಕೆ ಮಾತುಳಾಂತಕ ಮಾಮನೆ ಪ್ರಸ್ತ ಮಾಡಿದನು 47 ಸಾಲು ಕುಡಿಎಲೆ ಹಾಕಿ ಮೇಲು ಮಂಡಿಗೆಯ ಹಾಲು ಸಕ್ಕರೆ ಶಾಖ ಪಾಕ ಬಡಿಸಿದರು 48 ಎಣ್ಣೋರಿಗೆ ಫೇಣಿ ಪರಮಾನ್ನ ಶಾಲ್ಯಾನ್ನ ಸಣ್ಣಶ್ಯಾವಿಗೆ ತುಪ್ಪವನ್ನು ಬಡಿಸಿದರು 49 ಏಕಾಪೋಶನ ಹಾಕಿದ ಶೀಕಾಂತಾಮೃತವ ಆ ಕಾಲದಿ ಸುರರುಂಡು ತೃಪ್ತರಾಗಿಹರು 50 ಅಮೃತ ಮಥನವ ಕೇಳಿದ ಜನಕೆ
--------------
ಹರಪನಹಳ್ಳಿಭೀಮವ್ವ
ಸಕಲವೆಲ್ಲವು ಶಿವನ ಲಿಂಗದೊಳಗಡಗಿದುದು ಲಿಂಗವೆ ಮಾಲಿಂಗವಾಗಿ ತೋರುವುದು ಪ ಭಕುತಿಕರು ಮಮತೆಯೊಳು ಸ್ಥಾಪಿಸಿಯೆ ಅರ್ಚಿಸಲು ಸುಕೃತಫಲವನು ಅಳೆವ ಕೊಳಗವನು ಕಾಣೆ ಅ.ಪ ಆ ಮಹಾ ಸಹಸ್ರನಾಮದೊಳಗತ್ಯದಿಕ ಸೊಮೇಶನೆಂದೆಂಬ ಸ್ವಾಮಿಯನು ಕಂಡು ಸೋಮವಾರದ ದಿವಸ ಸಾಮರುದ್ರವ ಜಪಿಸಿ ನೇಮದಿಂ ಪೂಜಿಸಲು ಕಾಮಿತದ ಫಲವು 1 ಇನ್ನೇನ ವರ್ಣಿಸುವೆ ಈಶ ನಿನ್ನಯ ಮಹಿಮೆ ಉನ್ನಂತವಾಗಿ ಜಗದೊಳು ಚರಿಸಿತು ಪನ್ನಗೇಶನ ಬಲದ ಪಶ್ಚಿಮದ ದೆಸೆಯೊಳ್ ಪ್ರ- ಸನ್ನವಾದನು ಸೋಮನಾಥನೆಂದೆನುತ2 ಪಾದ ಪ್ರತ್ಯಕ್ಷವಾಗಿಯೆ ಸೋಮೇಶನೆಂದೀಗ ತಾ ಮೆರೆದುದು ಭುಕ್ತಿ ಮುಕ್ತಿಯನಿತ್ತು ಪ್ರೇಮದಿಂ ಸಲಹುತ್ತ ಕಾಮಿತಾರ್ಥವನೀವ 3 ಲೋಕೋಪಕಾರಕ್ಕೆ ಸೋಮೇಶ ನೀ ಬಂದೆ ಗೋಕರ್ಣ ಶ್ರೀಶೈಲ ಕಾಶಿ ರಾಮೇಶ್ವರವು ಬೇಕೆಂಬುದಿಲ್ಲಿನ್ನು ಎನ್ನ ಭೀತಿಯ ಗಿರಿಯ ಕುಲಿಶ ನೀನು ಜಗದೀಶ 4 ಜೋಕೆಯೊಳು ಮನದೊಳಗೆ ಅಡಗಿಸಿಯೆ ಭಜಿಸಿದರೆ ಯಾಕೆ ಮನದೊಳು ಬಿಡುವೆ ಶಿವನಾಮವನು ನೀನು ಏಕೆ ಕಡೆಯಲಿ ಕೆಡುವೆ ಮರುಳು ಜೀವನವೆ 5 ಸಡಗರದಿ ಸರ್ವವೂ ನಿನ್ನಲ್ಲಿ ಅಡಗಿದುದು ಜಡೆಯೊಳಗೆ ಅಡಗಿದುದು ಪೊಡವಿಗುತ್ತಮ ನದಿಯು ಉಡುಪತಿಯು ಅಡಗಿದನು ಊಧ್ರ್ವ ಫಣೆಯೊಳಗೆ ಪಿಡಿಯೊಳಗೆ ಅಡಗಿದುದು ವೇದ ಮೃಗರೂಪಾಗಿ 6 ಕಿಚ್ಚು ಅಡಗಿತು ಅವನ ಅಚ್ಚ ಹಣೆಗಣ್ಣಿನೊಳು ಮುಚ್ಚಿ ತೆರೆವಕ್ಷಿಯೊಳು ಮೂಜಗದ ಬೆಳಕು ಬಿಚ್ಚಿಟ್ಟಿ ವಿಷಕಂಠದೊಳು ಲೋಕವನು ಎಚ್ಚರಿಪ ಮಂತ್ರಗಳು ಬಾಯೊಳಗಡಗಿದುದು 7 ಶುದ್ಧ ಸ್ಫಟಿಕ ಥರದ ಕಾಯಕಾಂತಿಗಳುಳ್ಳ ಬದ್ಧುಗೆಯ ದಾರದಂದದಿ ಉರಗನೊಪ್ಪುಗಳು ಉದ್ದಿಶ್ಯವಾಗಿ ಭಜಿಸಿದ ಭಕ್ತರುಂಡಗಳು ತಿದ್ದಿಟ್ಟಿ ಆಭರಣ ತಿರಿಶೂಲಧರಣ 8 ಪುಲಿಕರಿಯ ಪೊಳವುಗಳು ನಳನಳಿಪ ವಸನಗಳು ಹೊಳೆವ ಮುಖತೇಜಗಳು ನಳಿನನೇತ್ರಗಳು ನಲಿವಗಣ ಕೋಟಿಗಳ ಮಧ್ಯದೊಳು ಕೈಲಾಸ ಇಳಿದು ಬಂದನು ನಮ್ಮ ಬಳಿಗೆ ಸೋಮೇಶ 9 ನಾಸಿಕದಿ ಕೌಮಾರಿಗವಧಿಯಾಗಿಹ ಸ್ಥಳ ವಿ- ಶೇಷವಾಗಿಹ ಶುದ್ಧ ರೌಪ್ಯಪುರದೊಳಗೆ ಭೂಸುರೋತ್ತಮಗೊಲಿದು ಭೂರಿಭಾಗ್ಯವನಳೆದು ವಾಸವಾದೆಯೊ ಜಗದೀಶ ಸೋಮೇಶ 10 ಭಾಳನೇತ್ರನೆ ನೀಲಕಂಠ ಶೂಲಾಸ್ಥಿಧರ ಕಾಲರುದ್ರ ವ್ಯಾಳಭೂಷ ಸರ್ವೇಶ ಲಾಲಿಸೈ ಬಿನ್ನಪವ ಪಾಲಿಸೆನ್ನನು ಬೇಗ ಬಾಲಕನು ಅಲ್ಲವೇ ಭಕ್ತಸುರಧೇನು 11 ಸಾರಿ ನೋಡಿರೊ ಮೂರು ಲಿಂಗವನು ನೀವೀಗ ಧಾರುಣಿಯಳೊಂದು ಶಿವಲಿಂಗವನು ಬೇಗ ಮೇರುವಿಗೆ ಸಮವಾದ ಹೇಮವನು ವಿಪ್ರರಿಗೆ ಧಾರೆಪೂರ್ವಕವಾಗಿ ಇತ್ತ ಫಲ ಒದಗುವುದು 12 ಶಿವನ ಪೂಜೆಯೆ ಭಕ್ತಿ ಶಿವನ ಪೂಜೆಯೆ ಮುಕ್ತಿ ಶಿವಮಂತ್ರವೆ ಶಕ್ತಿ ಶಿವನೆ ಪರಶಕ್ತಿ ಶಿವನಾಮವನು ಭಜಿಸಿ ಸಿರಿಯ ಪಡೆದನು ಹರಿಯು ಶಿವನ ಮರೆಯದೆ ಭಜಿಸು ಇಹಪರವ ಸೃಜಿಸು13 ನಿನ್ನನೇ ನಂಬಿದೆನು ಉನ್ನತಾನಂತೇಶ ಮನ್ನಿಸಿ ದಯದೋರು ಚಂದ್ರಮೌಳೀಶ ಇನ್ನು ಭಯವಿಲ್ಲೆನೆಗೆ ಹರಸೆನ್ನ ಸೋಮೇಶ ಎನ್ನೊಡೆಯ ಶ್ರೀಕೃಷ್ಣ ವರಾಹತಿಮ್ಮಪ್ಪ 14
--------------
ವರಹತಿಮ್ಮಪ್ಪ
ಸಿದ್ಧಬಸವ ಪ್ರಸಿದ್ಧನ ಮಹಿಮೆಯ ಕೇಳಿರಿ ನೀವಿನ್ನು |ವಿದ್ಯಾ ಬುದ್ಧಿ ಧನ ಧಾನ್ಯವನು ಸಿದ್ಧಿಸುವವಿನ್ನೂ ಪ ಶಿವನ ಅಪ್ಪಣೆ ತೆಗೆದುಕೊಂಡು ಶಿವಕಂಚಿಯೊಳಗೆ |ಪಾವನ ಚರಿತ ಬ್ರಾಹ್ಮಣನಲ್ಲಿ ಪುಟ್ಟಿದನು ಬೇಗ ||ದಿವಸ ದಿವಸಕೆ ಬೆಳೆದನು ಬಿದಗಿ ಚಂದ್ರಮನ ಹಾಗೆ |ಜಾವ ಜಾವಕೆ ಶಿವನ ಧ್ಯಾನವ ಮಾಡುವ ಮನದೊಳಗೆ 1 ಮುಂಜಿ ಮಾಡಿಸಿಕೊಂಡನು ಸಿದ್ಧನು ಮದುವೆಯಾಗಲಿಲ್ಲ |ರಂಜಿಸುತಿಹನು ಸೂರ್ಯನಂತೆ ತೋರುವ ಜಗಕೆಲ್ಲ ||ಬಂಜೆ ಒಬ್ಬಳು ಇದ್ದಳು ಆಕೆಗೆ ಮಗನ ಕೊಟ್ಟನಲ್ಲ |ಸಂಜೆ ಹಗಲು ಕಾಣದ ಕುರುಡಗ ಕೊಟ್ಟನು ಕಣ್ಣುಗಳ 2 ತಂದೆ ತಾಯಿಗೆ ಹೇಳಿದನಾಗ ಪೋಗುವೆ ನಾನೆಂದು |ಕಂದ ನಮ್ಮನು ಬಿಟ್ಟು ಪೋಗುವದುಚಿತವೆ ನಿನಗೆಂದು ||ಅಂದ ತಾಯಿಗೆ ವಂದಿಸಿ ಹೇಳಿದ ಮಗನಾಗುವೆನೆಂದು |ಸಂದೇಹವು ಬೇಡೆಂದು ಪೇಳುತ ತೆರಳಿದ ದಯಾಸಿಂಧು 3 ಮಹಾಶಿವಾಲಯ ಕಂಡನು ಸಿದ್ಧನು ದೇಶ ತಿರುಗುತಲಿ |ಆ ಸೀಮೆಯಲಿ ಹಳ್ಳದ ನೀರು ನಿರ್ಮಲ ನೋಡುತಲಿ ||ಆಸನ ಹಾಕಿ ಕುಳಿತನು ಶಿವನ ಧ್ಯಾನವ ಮಾಡುತಲಿ |ಆ ಸಮಯದಿ ಬಂದನು ಕರಣಿಕ ಹೊಲಗಳ ನೋಡುತಲಿ 4 ಉದ್ದಂಡ ಸಂತತಿ ಆಗಲಿ ಇನ್ನು 5 ನಿನ್ನಯ ಪೂಜೆಯ ಮಾಡುವದ್ಹೇಗೆ ಹೇಳೋ ನಮಗೀಗ |ಮನ್ನಿಸಿ ಅವಗೆ ಪೇಳಿದ ಸಿದ್ಧ ಪುರುಷನು ತಾ ಬೇಗ ||ಸಣ್ಣ ಬಿಂದಿಗೆಯನಿಟ್ಟು ದ್ವಿಜರ ಪಾದೋದಕವೀಗ |ಸಂಖ್ಯೆಯಿಲ್ಲದ ಕೊಡಗಳ ಹಾಕಲು ತುಂಬದು ಎಂದೀಗೆ 6 ಅಂದಿಗೆ ಉಂಟು ಇಂದಿಗೆ ಇಲ್ಲ ಎನಲಾಗದು ನೀನು |ಸಂದೇಹವಿಲ್ಲ ಆಶ್ವೀನ ವದ್ಯ ದ್ವಿತೀಯದ ದಿನವು ||ಇಂದಿಗೆ ಕರಣಿಕ ವಂಶದವರು ಮಾಡುತಾರೆ ಇನ್ನೂ |ಮುಂದಕೆ ತೆರಳಿ ಕೊಳಕೂರಕೆ ಬಂದ ಸಿದ್ಧ ತಾನು 7 ಗಾಣಿಗರ ಮನೆಯೊಳಗಿದ್ದು ಗಾಣಾ ಹೂಡಿದನು |ಪ್ರಾಣ ತೊಲಗಿದ ಹೆಣ್ಣುಮಗಳಿಗೆ ಪ್ರಾಣವನಿತ್ತಾನು ||ಗೋಣಿಯೊಳಗೆ ಹೊಲಿದು ನದಿಯಲಿ ಪಾಚ್ಛಾ ಹಾಕಿದನು |ಕಾಣಿಸದಂತೆ ಬೇಗನೆ ಹೊರಗೆ ಹೊರಟು ಬಂದಾನು 8 ಹೆಸರು ನಿನ್ನದು ಏನು ಎಂದು ಪಾಚ್ಛಾ ಕೇಳಿದನು |ಹೆಸರು ನನಗೆ ಬಸವನೆಂದು ಕರೆತಾರೆ ಇನ್ನು ||ಪಶು ನೀನಾದರೆ ಸೊಪ್ಪಿಯ ಬೇಗ ತಿನಬಾ ಎಂದನು |ನಸು ನಗುತಲಿ ಸೊಪ್ಪಿಯ ತಿಂದು ಡುರಕಿ ಹೊಡೆದಾನು 9 ಗೊಂಬಿಗೆ ವಸ್ತಾ ಸೀರೆಯನುಡಿಸಿ ಸಿಂಗಾರ ಮಾಡಿದನು |ರಂಭೆಗೆ ಸರಿ ಈ ಹೆಣ್ಣು ಮಗಳಿಗೆ ಮದುವ್ಯಾಗೋ ನೀನು ||ಅಂಬುಜ ಮುಖಿ ಬಾರೆಂದು ಕರೆದನು ಸಿದ್ಧ ಮುನೀಶ್ವರನು |ತುಂಬಿದ ಬಸುರೊಳು ಮಗನ ಪಡೆದಳು ವಂಶಾದೆ ಇನ್ನು 10|| ನೇಮವ ಮಾಡಿ ಕೊಳಕೂರದಿ ಇರುವೆನು ನಾನೆನುತ |ಈ ಮಹಿಮೆಯೊಳಗೆ ಭೀಮಾ ದಕ್ಷಿಣವಾಹಿನಿ ಮಹಾಕ್ಷೇತ್ರ ||ಗ್ರಾಮಸ್ಥರನು ಕರೆದು ಹೇಳಿದನು ಅಡಗುವೆ ನಾನೆನುತ |ನೀವು ಮಾತ್ರ ನಾವಿದ್ದ ಸ್ಥಳವನು ನೋಡಬೇಡೆನುತ 11 ಕಲಿಕಾಲವನು ಕಂಡು ಸಿದ್ಧನು ಅದೃಶ್ಯನಾದನು |ತಿಳಿದು ಭಕ್ತಿ ಮಾಡಿದವರಿಗೆ ವರಗಳ ಕೊಡುತಿಹನು ||ಸುಳಿವನು ಕಣ್ಣಿಗೆ ಸತ್ಪುರುಷರಿಗೆ ಸಿದ್ಧ ಬಸವ ತಾನು |ಹಲವು ಹಂಬಲ ಮಾಡಲು ಬೇಡರಿ ಇರುವೆ ನಾನಿನ್ನೂ 12 ಹನ್ನೆರಡು ನುಡಿ ಸಿದ್ಧನ ಸ್ತೋತ್ರವ ಕೇಳಿದವರಿಗೆ |ಮುನ್ನ ಮಾಡಿದ ಪಾಪವು ನಾಶಾಗಿ ಹೋಗುವದು ಬೇಗ ||ಧನ್ಯನಾಗುವ ಕೀರ್ತಿ ಪಡೆಯುವ ಲೋಕದ ಒಳಗ |ಚನ್ನಾಗಿ ಶ್ರೀಪತಿ ಗುರುವಿಠ್ಠಲನು ಒಲಿವನು ತಾ ಬೇಗ 13
--------------
ಶ್ರೀಪತಿ