ಒಟ್ಟು 10 ಕಡೆಗಳಲ್ಲಿ , 8 ದಾಸರು , 10 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಬಪ್ಪನಾಡಿನ ಪಂಚದುರ್ಗೆ) ಮಂಗಲಂ ಶ್ರೀಪಂಚದುರ್ಗೆಗೆ ಜಯ ಮಂಗಲಾರತಿಯೆತ್ತಿ ಶ್ರೀಮಹೇಶ್ವರಿಗೆಪ. ಶಂಕರನಂಕಾಲಂಕಾರಿಗೆ ಕುಂಕುಮಬೊಟ್ಟಕಸ್ತೂರಿ ಲಲಾಟೆಗೆ ಪಂಕಜಗಂಧಿ ಶ್ರೀಪಾರ್ವತಿಗೆ1 ಕೋಕಿಲಗಾನೆಗೆ ಕೋಕಪಯೋಜೆಗೆ ಶ್ರೀಕಂಠನರ್ಧಾಂಗಿ ಶ್ರೀಗೌರಿಗೆ ಏಕದಂತನ ಜನನಿಗೆ ಜಗದಂಬೆಗೆ ಲೋಕನಾಯಕಿ ಶ್ರೀಮಹಾಕಾಳಿಗೆ2 ಕಂಜದಳಾಕ್ಷಿಗೆ ಕಲಧೌತಗಾತ್ರೆಗೆ ಕುಂಜರಗಮನೆ ಕಂಧರಜಾತೆಗೆ ಮಂಜೀರನೂಪುರರಣಿತಪದಾಬ್ಜೆಗೆ ನಂಜುಂಡನ ಮನಮಂಜುಳೆಗೆ3 ಅಂಗಜರೂಪೆಗೆ ಮಂಗಲದಾತೆಗೆ ಭೃಂಗಕುಂತಳೆ ಸರ್ವಮಂಗಲೆಗೆ ಬಂಗಾರಮಕುಟೋತ್ತಮಾಂಗದಿ ಧರಿಸಿದ ಸಂಗೀತಲೋಲೆಗೆ ಶರ್ವಾಣಿಗೆ4 ರೂಢಿಗಧಿಕ ಬಪ್ಪನಾಡಿಗೊಡತಿಯಾಗಿ ಮೂಡಿತೋರಿದ ಶ್ರೀಮುಕಾಂಬಿಕೆಗೆ ಕ್ರೋಡಾವತಾರ ಲಕ್ಷ್ಮೀನಾರಾಯಣ ಸೊಸೆ ಬೇಡಿದಿಷ್ಟವನೀವ ಸರ್ವೇಶೆಗೆ5
--------------
ತುಪಾಕಿ ವೆಂಕಟರಮಣಾಚಾರ್ಯ
ಇಂಥಾ ಪ್ರಭುವ ಕಾಣೆನೋ ಈಜಗದೊಳ- ಗಿಂಥಾ ಪ್ರಭುವ ಕಾಣೆನೋ ಪ ಇಂಥಾ ಪ್ರಭುವ ಕಾಣೆ ಶಾಂತ ಮೂರುತಿ ಜಗ- ದಂತರಂಗನು ಲಕ್ಷ್ಮೀಕಾಂತ ಸರ್ವಾಂತರ್ಯಾಮಿ ಅ.ಪ. ಬೇಡಿದಿಷ್ಟವ ಕೊಡುವ-ಭಕ್ತರ ತಪ್ಪು ನೋಡದೆ ಬಂದು ಪೊರೆವ ಗಾಡಿಕಾರನು ಗರುಡಾ - ರೂಢ್ಯ ಗುಣವಂತ ಮಹಾ ಪ್ರೌಢ ಪ್ರತಾಪಿ ಜಗದಿ ಪಾಡಿ ಪೊಗಳಿ ಕೊಂಡಾಡುವವರ ಮುಂ- ಕೇಡಿಗನೇ ನಾಡಾಡಿಗಳಂದದಿ ಈಡುಂಟೇನೋ ಈ ವೆಂಕಟಗೆ-ಇಂಥಾ 1 ನಿಗಮ ತತಿಗಳರಿಯದ- ನೀರಜಭವಾ- ಸುರರು ಕಾಣದ ಜಗದೊಡೆಯನು ಭಕ್ತ- ರುಗಳಿಗೊಲಿದು ತ್ರಿಸ್ಥಾ- ನಗಳತ್ಯಜಿಸಿ ಕಲಿ ಅಗಣಿತ ಸುಗುಣಾರ್ಣವ- ಶ್ರೀ ಹರಿಯೇ ಜಗದೊಳು ಸೇವಾದಿಗಳನು ಕೊಳುತಿಹ ಅಘಹರ ಮೋಕ್ಷಾದಿಗಳನೆ ನೀಡುತ ನಗೆಮೊಗದಲಿ ಚನ್ನಿಗನಿಂತಹನೊ - ಇಂಥಾ 2 ಭಾರ್ಗವಿ ಭೂಮಿವಲ್ಲಭ - ಭವದೂರ ಭಕ್ತ ವರ್ಗಕೆ ಇವಸುಲಭ ನಿರ್ಗುಣ ನಿರ್ವಿಕಾರ- ಸ್ವರ್ಗದೈಶ್ವರ್ಯದಿಂದಾ- ನಘ್ರ್ಯದ ಪದವನೀವ ದೀರ್ಘಾಯುವಂತನೀತ ಭಾರ್ಗವರಾಮ ನೃಪರ್ಗಳನೆಲ್ಲರ - ಣಾಗ್ರದಿ ಜಯಿಸಿದ ಉಗ್ರಪ್ರತಾಪಿ ಅಗ್ರಗಣ್ಯ ಸದ್ವಿಗ್ರಹ ಶ್ರೀಮದ - ನುಗ್ರಹ ಮಾಡುತ ದುರ್ಗುಣ ಕಳೆವ 3 ನಿರ್ದುಃಖಾನಂದ ಭರಿತಾ - ನಿರ್ವಾಣ ಸುಖಕೆ ಆದ್ರ್ರಹೃದಯ ತೋರುತ ನಿದ್ರೆಯೊಳಿದ್ದವಗು - ಪದ್ರಬಡಿಸಿ ದೈತ್ಯ ಕ್ಷುದ್ರನಂಕೊಲಿಸಿ ಸು ಭದ್ರ ಜಗಕೆ ಇತ್ತ ನಿರ್ದಯನಲ್ಲ ಸಮುದ್ರಶಯನ ಗೋ- ವರ್ಧನ ಗಿರಿಯನು ಉದ್ಧರಿಸಿದ ಯದು ವರ್ಧನ ದನುಜ ವಿಮರ್ದನ ಲಕ್ಷ್ಮೀ ಜ - ನಾರ್ದನ ವರ ಶೇಷಾದ್ರಿ ನಿವಾಸ - ಇಂಥಾ 4 ವಾರಿಜಾಸನ ಮನೋಜಾ ಈರ್ವರು ಸುತರು ಸುರತರಂಗಿಣಿ ತನುಜಾ ಪುರವೇ ವೈಕುಂಠ ಇಂದ್ರಾದ್ಯ ಮರರು ಕಿಂಕರರು ಗರುಡವಾಹನ ಉರಗ ಪರಿಯಂಕ ನಿಷ್ಕಳಂಕ ಸರಿದೊರೆಗಳ ನಾನರಿಯೆನು ವೆಂಕಟ ಗಿರಿಯಲಿ ಇರುತಿಹ ಕರುಣೆಗಳರಸನೆ ಮರೆಯದೆ ಸಲಹೋ ಶರಣಾಗತರನು ಸಿರಿ ವಿಜಯವಿಠ್ಠಲಾ - ಇಂಥಾ 5
--------------
ವಿಜಯದಾಸ
ತ್ರಾಹಿತ್ರಾಹಿ ಮಂತ್ರಾಲಯನಿಲಯ ಪ ತ್ರಾಹಿತ್ರಾಹಿ ಮಂತ್ರಾಲಯ ಗುರುವೆ ಸೂತ್ರನಪಿತಕೃಪಾಪಾತ್ರ ನೀನಹುದೊ1 ಧ್ಯಾನ ಮೌನ ಸುಜ್ಞಾನವಿಲ್ಲದಿಹ ದೀನ ಜನರುದ್ಧಾರ ಗಂಭೀರ 2 ವಸುಧೆಯೊಳಗೆ ದಶಪ್ರಮತಿ ಸುಶಾಸ್ತ್ರವ ಪ್ರಸರಿಸಿ ತೋರಿದ ಅಸಮಮಹಿಮನೆ3 ಮೂಕ ಬಧಿರ ಅಂಧಾದಿಗಳ ಕುಂದುಗಳ ವ್ಯಾಕುಲ ಹರಿಪ ಕೃಪಾಕರ ಮೂರ್ತೇ 4 ಕರುಣಶರಧಿ ಸಿರಿರಮಣನ ಭಕುತಾಗ್ರಣಿ ಸುಗುಣಗಣಾಭರಣಕೆಣೆಯೆ 5 ಬೇಡಿದಿಷ್ಟವ ನೀಡಿ ಕಾಪಾಡುವೆ ಈಡುಗಾಣೆ ನಿನಗೀ ನಾಡೊಳು ಇನ್ನು 6 ಇಂದು ಮುಂದು ಎನ್ನ ಕುಂದುಗಳೆಣಿಸದೆ ಕಂದನೆಂದು ಎನ್ನ ಮುಂದಕೆ ಕರೆಯೊ 7 ಕ್ಷೋಣಿಯೊಳಗೆ ನಿನಗಾರೆಣೆಕಾಣೆನೊ ವೀಣೆವೆಂಕಟ ನೀ ಸಂಕಟ ಹರಿಸೊ 8 ಪಾಲಿಸಯ್ಯ ಪ್ರಹ್ಲಾದ ವ್ಯಾಸ ಭೂ ನಲ್ಲ ನೀನಹುದೋ ಬಾಹ್ಲೀಕ ಪ್ರಭುವೇ 9 ಬಗೆ ಬಗೆ ಪಾಪೌಘಗಳನು ಕಳೆಯುವ ರಘುಪತಿಕಿಂಕರ ಶ್ರೀ ರಾಘವೇಂದ್ರ 10 ಪವನಾಂತರಾತ್ಮ ಶ್ರೀ ವೇಂಕಟೇಶ ಪದ ಕುವಲಯಕೆ ನೀ ಕುಮುದಬಾಂಧವ 11 ಶಂಕುಕರ್ಣ ಲಂಕೇಶನನುಜ ಶ್ರೀರಾಮ- ಕಿಂಕರನಕಳಂಕಮೂರುತೇ12 ಮರುತಮತಾಬ್ಧಿಯ ಸಾರಸುಧೆಯನಿತ್ತೆ ಉರಗಾದ್ರಿವಾಸವಿಠಲನ ದೂತ13
--------------
ಉರಗಾದ್ರಿವಾಸವಿಠಲದಾಸರು
ದೇಹಿಯೆಂಬವನೊಡನೆ ನಾಸ್ತಿಯೆನಬೇಡ ಕಾಯೊ ವೆಂಕಟಪತಿಯೆ ಕಾರುಣ್ಯವಾರಿಧಿಯೆ ಪ ಮಾಡಿದಪರಾಧಗಳ ನೋಡಿ ಕ್ಷಮಿಸಿಯೆ ಯೆನಗೆ ರೂಢಿಯೊಳು ಬೆಳೆಸಿರಿಯ ಕೈಗೂಡಿಸಿ ಆಡಿ ತಪ್ಪಿದ ನುಡಿಯ ಕೂಡಿ ನಡೆಸುತ ಮುಂದೆ ಬೇಡಿದಿಷ್ಟವನಿತ್ತು ಮಾತಾಡಬೇಕೆನುತ 1 ನರನಾದ ಕುರಿಯಿದನು ಸಲಹಬೇಕೆಂದೆನುತ ಮೊರೆಯಿಟ್ಟು ನಿನ್ನಡಿಗೆ ಶರಣಾದೆನು ಕರುಣವಾರಿಧಿ ನಿನ್ನ ಚರಣದಾಭರಣನಿಗೆ ಹರಣವನು ಮರೆವಾಗೆ ಸ್ಮರಣೆ ನೀಡೆನುತ 2 ಗುಣವಾದ ಪತ್ರಿಕೆಯ ಕ್ಷಣದೊಳಗೆ ಹರಿದೆನ್ನ ಕಣುಮನಕೆ ದೃಢವಾದ ಗುಣವ ತೋರೆನುತ ಫಣಿಶಯನ ನಿನ್ನಡಿಗೆ ಮಣಿದು ಬೇಡುವೆ ನಾನು ಉಣಲಾಗದೋಗರವ ಉಣಿಸಬೇಡೆನುತ 3 ಕೆಟ್ಟ ಕೆಲಸವನಿದಿರು ದೃಷ್ಟಿಗಿಕ್ಕದೆÀಯೆನ್ನ ಬಿಟ್ಟು ಕಳೆಯಲು ಬೇಡ ಸೃಷ್ಟಿಪಾಲಕನೆ ಇಟ್ಟಡಿಯ ಕಮಲವನು ಮುಟ್ಟಿ ಭಜಿಸುವೆ ನಾನು ಹುಟ್ಟಿದೀ ಬವರದೊಳು ಕಷ್ಟ ಬೇಡೆನುತ 4 ಶುದ್ಧ ಸ್ನಾನವ ತೊರೆದು ಇದ್ದ ಜಪಗಳ ಮರೆದು ಕರ್ಮ ಒದ್ದು ಕಳೆದು ಉದ್ದಂಡವಾಗಿ ನಡೆದಿರ್ದ ಪಾಪಂಗಳನು ತಿದ್ದಿಟ್ಟು ಎನ್ನನುರೆ ಉದ್ಧರಿಸಬೇಕಯ್ಯ 5 ಪೊಡೆವಿಯೊಳಗೆನ್ನಂಥ ಕಡುಮೂರ್ಖರನು ಕಾಣೆ ಮಡದಿಯೆಂಬಡವಿಯೊಳು ಕೈದುಡುಕಿದು ಪಡೆದ ಮಕ್ಕಳ ಮುಂದೆ ಕಡೆ ಹಾಯುವವರಿಲ್ಲ ಒಡೆಯನಾಗಿಯೆ ಯೆನ್ನ ಬಿಡದೆ ಸಲಹೆನುತ 6 ನಾರಿ ಮಕ್ಕಳಿಗೆಲ್ಲ ಮೀರಿದಾಪತ್ತಿನಲಿ ತೋರಿಸುವೆ ನಿನ್ನ ಚರಣಂಗಳೆನುತ ಹಾರೈಸಿದ್ಹರಕೆಯಿದು ಭಾರವಾಗಿಯೆ ಶಿರದಿ ಏರಿದುದನಿಳುಹುವರೆ ದಾರಿ ತೋರೆನುತ 7 ತ್ರಾಹಿ ವೆಂಕಟರಾಯ ಕಾಯೊ ನಿನ್ನಯ ಮಾಯೆ ಮೋಹಿಸುತ ಜಗವೆಲ್ಲ ಬಾಯ ಬಿಡುತಿಹುದು ದೇಹಿಯೆನುತಿಹ ಜನಸಹಾಯನಲ್ಲವೆ ನೀನು ಮಾಯವಾಗದೆ ಮುಂದೆ ಆಯತನ ತೋರೆನುತ 8 ಸುರವಂದ್ಯ ಮುರಮಥನ ಗುರುದೈವ ಪರಮಾತ್ಮ ವರಲಕ್ಷ್ಮಿಕರವೆನಿಪ ಹರಿವೆಂಕಟೇಶ ಮರೆವಾಗದಿರು ಯೆನ್ನ ಕರೆದು ನೆರೆ ಸೌಖ್ಯವನು ಸ್ಥಿರವಾಗು ಎನ್ನೊಡನೆ ವರಾಹತಿಮ್ಮಪ್ಪ 9
--------------
ವರಹತಿಮ್ಮಪ್ಪ
ಪನ್ನಗಾಶಯನ ಹರಿ ವೆಂಕಟರಮಣ ಪ ವರ ಧ್ರುವನ ಪೊರೆದಂತೆ ಪ್ರಹ್ಲಾದಗೊಲಿದಂತೆ ಕರಿಯ ಸಲಹಿದಂತೆ ಕರುಣವಿರಲಂತೆ 1 ತರಳೆ ದ್ರೌಪದಿಯ ಅಭಿಮಾನ ಕಾಯ್ದಂತೆ ಧುರದೊಳು ನರನ ಶಿರವ ಉಳುಹಿದಂತೆ 2 ಶೇಷಾದ್ರಿವಾಸ ಜಗದೀಶ ಲಕ್ಷ್ಮೀಶ ಕ್ಲೇಶಪಾಶ ವಿನಾಶ ಜನಪೋಷ ವೇಂಕಟೇಶ 3 ಪರಮ ಮಂಗಳಮೂರ್ತಿ ಪಾವನ ಕೀರ್ತಿ ಧರೆಯ ರಕ್ಷಿಪ ಅರ್ತಿ ದಯವಾಗು ಪೂರ್ತಿ 4 ಮಕರ ಕುಂಡಲಧರ ಮಕುಟ ಕೇಯೂರ ಸಕಲಾಭರಣ ಹಾರ ಸ್ವಾಮಿ ಉದಾರ 5 ತಾಳಲಾರೆನು ನಾನು ಬಹಳ ದಾರಿದ್ರ್ಯ ಕೇಳುವರಿಲ್ಲ ಬಹು ಭವಭಯ ಕ್ಷುದ್ರ 6 ನೋಡಬೇಡೆನ್ನವಗುಣವ ದಮ್ಮಯ್ಯ ಬೇಡಿದಿಷ್ಟವನಿತ್ತು ಒಡಗೂಡಿ ಸಲಹಯ್ಯ 7 ಭಕ್ತಜನ ಸಂಸಾರಿ ಬಹುದುರಿತ ಹಾರಿ ಮುಕ್ತಿದಾಯಕ ದಾರಿ ಮುಂದೆ ನೀ ತೋರಿ8 ವರಾಹತಿಮ್ಮಪ್ಪ ಒಲವಾಗೆನ್ನಪ್ಪ ಸಾರಿದವರ ತಪ್ಪ ಸಲಹೊ ನೀನಪ್ಪ 9
--------------
ವರಹತಿಮ್ಮಪ್ಪ
ಶ್ರೀ ಸತ್ಯಪರಾಯಣರು ನೋಡು ಮನವೆ ಸತ್ಯಪರಾಯಣರ ಪದಗಳ ಬೇಡು ಬೇಡು ಬೇಡಿದಿಷ್ಟವೀವ ಯತಿಗಳ ಪ ಮಾರುತಿಯ ಬಲದಿ ದಕ್ಷಿಣ ದೇಶವ ಜೈಸಿದಾ ಸಾರಸಚ್ಛಾಸ್ತ್ರವನ್ನು ಸ್ಥಿರವಗೊಳಿಸಿದಾ ನಾರಾಯಣನ ಜಗತ್ಕಾರಣನೆನಿಸಿದಾ ಧೀರ ಸತ್ಯಸಂತುಷ್ಟ ಕುವರನೆನಿಸಿದಾ 1 ಭೀಮಸೇನ ಸನ್ಮತ ಸರಿಯಾಗಿ ನಡಿಸಿದಾ ಪ್ರೇಮದಿಂದ ರಘುಜಿಗೆ ವನಮಾಲೆ ಮುಡಿಸಿದಾ ತಾಮಸ ಮತದವರ ಮತವ ಮುರಿದು ಹಾಕಿದಾ ರಾಮನ್ನಾಮ ನುಡಿಸಿ ನುಡಿಸಿ ಹರುಷಬಡಿಸಿದಾ2 ವರ ಕದರುಂಡಲಗೀಶನ್ನೊಡೆಯ ರಾಮನ್ನ ನಿರುಪಮಾನಂದ ತೀರ್ಥ ಸುಪ್ರೇಮನ್ನ ಕರುಣದಿಂದ ಶಿಷ್ಯನಾಗಿ ಸಂದೋಹಪಾಲನ್ನ ಸ್ಮರನ ಜನಕಾ ಪಾಂಡುರಂಗನ ಸ್ಮರಿಪ ಲೋಲನ್ನ 3
--------------
ಕದರುಂಡಲಗೀಶರು
ಶ್ರೀಹರಿ ಮೂಜಗದೊಳು ನೀನು ತೇಜವುಳ್ಳವನಾಗಿ ಪ ಕಾಲದಿ ನಿನ್ನಯ ಮೇಲಿಹ ನಿರ್ಮಾಲ್ಯ ಮಾಲೆಯನೆಲ್ಲ ವಿಸರ್ಜಿಸಿ ತೊಳೆದು ನೀಲಮಾಣಿಕ ವಜ್ರಮಯವಾದ ಪೀಠದ ಮೇಲೆ ವಾಲಗವಾಗಿ ಲೀಲೆಯ ತೋರುತ1 ಮೊದಲು ಸಂಕಲ್ಪಿಸಿ ತುಳಸಿ ಶ್ರೀಗಂಧದಿ ಉದಕ ಶುದ್ಧವ ಮಾಡಿ ಅದರೊಳು ಬಳಿಕ ವಿಧಿಸಿಯೆ ಮತ್ತೇಳು ನದಿಯನುಚ್ಚರಿಸಲು ಒದಗಿ ಬಾರೆಲೊ ಕರಚರಣ ಮಜ್ಜನಕೀಗ 2 ಮಾನಸದಘ್ರ್ಯವು ಆಚಮನಗಳು ನಾನಾ ಪಂಚಾಮೃತ ಫಲವಭಿಷೇಕವು ಗಾನ ಸೂಕ್ತಗಳಿಂದ ಮಧುಪರ್ಕಾದಿಗಳು 3 ವಸ್ತ್ರವಾಭರಣವು ಯಜ್ಞಸೂತ್ರವ ತೊಡಿಸಿ ಚಿತ್ರವಾಗಿಹ ಗಂಧ ಅಕ್ಷತೆವಿಡಿಸಿ ಪತ್ರಪುಷ್ಪವು ಶ್ರೀತುಳಸಿ ಮಾಲೆಗಳಿಂದ ಸ್ತೋತ್ರವು ಸಾಹಸ್ರನಾಮಗಳಾಯಿತು 4 ಧೂಪಮಾಧ್ರೂಪಯ ದೀಪದ ದರುಶನವು ಆದಷ್ಟು ಸರ್ವೋಪಚಾರಗಳು ಕದಳಿ ನಾರಿಕೇಳÀವು ಪರಿ ನೈವೇದ್ಯ ದಯಾಪರಮೂರ್ತಿ 5 ಆಗರದೊಳು ಬೆಳೆದ ನಾಗವಲ್ಲಿಯ ದಳ ಪೂಗಿಯಫಲ ಸಹ ನಾಗಶಯನಗಿಟ್ಟು ಬೇಗದಿ ಮಂಗಳ ಪದಗಳ ಹೇಳಿ ಲೇ ಸಾಗಿ ಎತ್ತುವ ಅಮೋಘದಾರತಿಗಳ 6 ಮಾಡಿದ ಪೂಜೆಯ ನೋಡಿ ಕರುಣದಿಂದ ಬೇಡಿದಿಷ್ಟವನೀಯೊ ರೂಢಿಯ ಒಡೆಯ ಪಾಡಿ ಪೊಗಳುವೆ ನಿನ್ನ ಪಂಥ ಬೇಡೆನ್ನೊಳು ಅನುದಿನ ವರಾಹ ತಿಮ್ಮಪ್ಪ 7
--------------
ವರಹತಿಮ್ಮಪ್ಪ
ಸುಳಾದಿ ತಾಳ-ಝಂಪೆ ನೋಡುವರೆ ನೀರದಶ್ಯಾಮಸುಂದರ ಮೂರ್ತಿ ಪಾಡುವರ ಪರಮಪಾವನ್ನ ಕೀರ್ತಿ ಕೂಡುವರೆ ಕೇವಲಾನಂದ ಚಿನ್ಮಯಗಾತ್ರ ನೀಡುವರೆ ನಿಖಿಳಲೋಕೈಕಪಾತ್ರ ನೋಡಿ ನಮಿಸುವರುಂಟು ಪಾಡಿಹಿಗ್ಗುವರೂಟ ಕೂಡಿ ಸುಖಿಸುವರುಂಟು ನೀಡಿ ನಲಿವವರುಂಟು ನೋಡಿಸುತ ಪಾಡಿಸುತ ಕೂಡಿಸುತ ಬೇಡಿಸುತ ನಾಡದೈವಂಗಳ ಕೊಂಡಾಡಿಸದಲೆ ಬೇಡಿದಿಷ್ಟವ ಕೊಡುತ ಶ್ರೀದವಿಠಲ ದಯ - ಮಾಡಿ ನಮ್ಮನು ಪೊರೆವ ರೂಢಿಗೊಡೆಯ ನಾಡದೈವಂಗಳ ಕೊಂಡಾಡಿಸದಲೆ 1 ತಾಳ-ಮಟ್ಟ ಸಕಲ ಶ್ರುತಿನಿಕರಸಾರಹೋ ಶುಕಮಹಾಮುನೀಂದ್ರ ಸನ್ನುತ ಪ್ರಕಟ ಮಾಡಲ್ಯಾಕೆ ನಿನ್ನನು ಪರಮಪುರುಷ ಪ್ರಕಟಮಾಡಲ್ಯಾಕೆ ನಿನ್ನನು ಭಕ್ತವತ್ಸಲನೆಂಬೆನಲ್ಲದೆ ಮುಕುತವಂದ್ಯ ಶ್ರೀದವಿಠಲ ಯುಕುತಾಯುಕುತವೊಂದನರಿಯದೆ ಪ್ರಕಟಮಾಡಲ್ಯಾಕೆ ನಿನ್ನನು 2 ತಾಳ-ತ್ರಿವಿಡಿ ಆಯನುಭವ ಭಯ ಲಯವರ್ಜಿತ ನಯನೋತ್ಸಹಕಾರಕ ತಾರಕ ಜಯಮಂಗಳ ಮಂಗಳ ಮಂಗಳ ಮಾಯಾ ಮಾಮರ ದೇವರಾÀಟ ಸಯವೇ ಸೈ ಶ್ರೀದವಿಠಲ ನಿ ನ್ನಯ ಚರಣಕೆ ನಮಿಸುವೆ ನಮಿಸುವೆ ಜಯ ಮಂಗಳ ಮಂಗಳ ಮಂಗಳ ಮಾಯಾ ಮಾಮರ ದೇವರಾಟ 3 ತಾಳ-ಅಟ ಬಾರೋ ಬಾರೋ ಭವದೂರ ದೀನಜನ ಭಾರ ನಿನ್ನದಯ್ಯಾ ಅಯ್ಯಯ್ಯಾ ಸಾರಿದೆನೊ ನಾ ನಿನ್ನ ಸಾರಿದೆನೊ ನಿನ್ನ 4 ತಾಳ-ಆದಿ ಶ್ರೀರಮಣ ಶ್ರೀದವಿಠಲ ಸಂ - ಚಾರು ಚರಣಗಳ ಸಾರಿದೆನೊ ನಿನ್ನ ಶಿರಿಗುರವಿತ್ತೆ ಪರಮನ ಪೆತ್ತೆ ಗಿರಿಜೇಶಗೆ ನಿನ್ನ ಮೈ ಇತ್ತೆ ಶರಣಾಗತವತ್ಸಲ ಕರುಣಾಕರ ಶ್ರೀದವಿಠಲ ಸರಿಬಂದರೆ ಸಾಕುವದೆಮ್ಮನು ಶರಣಾಗತವತ್ಸಲ 5 ಜತೆ ಸೋಲು ಶ್ರೀದವಿಠಲ ಸೋಲು ಗೆಲುವು ನಿನ್ನ
--------------
ಶ್ರೀದವಿಠಲರು
(ಬಪ್ಪನಾಡಿನ ಪಂಚದುರ್ಗೆ)ಮಂಗಲಂ ಶ್ರೀಪಂಚದುರ್ಗೆಗೆ ಜಯಮಂಗಲಾರತಿಯೆತ್ತಿ ಶ್ರೀಮಹೇಶ್ವರಿಗೆ ಪ.ಶಂಖಚಕ್ರಶೂಲಾಂಕುಶಪಾಣಿಗೆಶಂಕರನಂಕಾಲಂಕಾರಿಗೆಕುಂಕುಮಬೊಟ್ಟಕಸ್ತೂರಿ ಲಲಾಟೆಗೆಪಂಕಜಗಂಧಿ ಶ್ರೀಪಾರ್ವತಿಗೆ 1ಕೋಕಿಲಗಾನೆಗೆ ಕೋಕಪಯೋಜೆಗೆಶ್ರೀಕಂಠನರ್ಧಾಂಗಿ ಶ್ರೀಗೌರಿಗೆಏಕದಂತನ ಜನನಿಗೆ ಜಗದಂಬೆಗೆಲೋಕನಾಯಕಿ ಶ್ರೀಮಹಾಕಾಳಿಗೆ 2ಕಂಜದಳಾಕ್ಷಿಗೆ ಕಲಧೌತಗಾತ್ರೆಗೆಕುಂಜರಗಮನೆಕಂಧರಜಾತೆಗೆಮಂಜೀರನೂಪುರರಣಿತಪದಾಬ್ಜೆಗೆನಂಜುಂಡನ ಮನಮಂಜುಳೆಗೆ 3ಅಂಗಜರೂಪೆಗೆ ಮಂಗಲದಾತೆಗೆಭೃಂಗಕುಂತಳೆ ಸರ್ವಮಂಗಲೆಗೆಬಂಗಾರಮಕುಟೋತ್ತಮಾಂಗದಿ ಧರಿಸಿದಸಂಗೀತಲೋಲೆಗೆ ಶರ್ವಾಣಿಗೆ 4ರೂಢಿಗಧಿಕ ಬಪ್ಪನಾಡಿಗೊಡತಿಯಾಗಿಮೂಡಿತೋರಿದ ಶ್ರೀಮುಕಾಂಬಿಕೆಗೆಕ್ರೋಡಾವತಾರ ಲಕ್ಷ್ಮೀನಾರಾಯಣ ಸೊಸೆಬೇಡಿದಿಷ್ಟವನೀವ ಸರ್ವೇಶೆಗೆ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ತಿಂಗಳಿಗೆ ತಿಂಗಳಿಗೆ ಬರುತಿಹ | ಪಿಂಗಳರ ನಾಮವನು ಬರೆವೆನು |ಇಂಗಿತಜÕರು ಕೇಳ್ವುದು ಉದಾಶನವ ಮಾಡದಲೆ ಪಧಾತ ಚೈತ್ರಕೆ ಆರ್ಯಮಾಯೆಂಬಾತ ವೈಶಾಖಕೆ ಸುಜೇಷ್ಠಕೆ |ನಾಥನೆನಿಸುವಮಿತ್ರಆಷಾಢಕ್ಕೆ ಬಹ ವರುಣ ||ಖ್ಯಾತನಾಗಿಹ ಶ್ರಾವಣಕೆಪುರುಹೂತಭಾದ್ರಪದಕೆ ವಿವಸ್ವಾನೆ |ಭೂತಿಯುತನಾಗಿರುವ ತ್ವಷ್ಟ್ರಾಶ್ವೀನ ಮಾಸದಲಿ 1ಹರಿದಿನಪ ಕಾರ್ತೀಕ ಮಾಸದಿ |ಇರುತಿಹನು ಮಾರ್ಗಶಿರದಿಸವಿತೃ|ವರದ ಭಗ ಪುಷ್ಯದಲಿ ಪೂಷಾ ಮಾಘಮಾಸದಲಿ ||ಸುರನದಿಯೆ ಮೊದಲಾಗಿಹ ಐ |ವರಿಗೆ ಸಮಪರ್ಜನ್ಯ ಫಾಲ್ಗುಣ |ಕರಿತು ಇಂತು ಯಥಾವಿಧಿಯೊಳಘ್ರ್ಯವನು ಕೊಟ್ಟು ಜಪವ 2ಮಾಡುತಿಹ ಧನ್ಯರಿಗೆ ಪಾಪಗ |ಳೋಡಿ ಸುತ ದಯದಿಂದ ಯೇನೇನೆ |ಬೇಡಿದಿಷ್ಟವ ಕೊಟ್ಟು ಕರ್ಮಕೆ ಸಾಕ್ಷಿ ತಾನಾಗಿ ||ಮಾಡುವನು ಸಂರಕ್ಷಣೆಯ ಒಡ | ನಾಡುವನುಬಿಡನೊಂದರೆಕ್ಷಣ |ಈಡುಇಲ್ಲದ ಮಹಿಮಶ್ರೀ ಪ್ರಾಣೇಶ ವಿಠಲನು 3
--------------
ಪ್ರಾಣೇಶದಾಸರು