ಒಟ್ಟು 13 ಕಡೆಗಳಲ್ಲಿ , 7 ದಾಸರು , 13 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆವುದೊಳ್ಳೆಯದೊ ನಿನ್ನಂಗ - ಚೆಲುವದೇವ ಬಂಕಾಪುರದ ಲಕುಮಿ ನರಸಿಂಗ ಪ ಜಗದೊಳಗೆ ತಾನು ತಂದೆಯ ಮಾತು ಕೇಳದಾಮಗನು ಇಹ ಪರಕೆ ಸಲುವ ಪ್ರಾಜ್ಞನೆ ?ಬಗೆಗೊಳಿಸಿ ಪ್ರಹ್ಲಾದ ಪಿತನೊಡಲ ನಿನ್ನ ಕೂ-ರುಗುರಿನಿಂ ಬಗೆಸಿದಾತಂಗೆ ಮುಕುತಿಯನೀವೆ 1 ಪೊಡವಿಯೊಳು ಅಣ್ಣನಾಜ್ಞೆಯ ಮೀರಿ ನಡೆಯುತಿಹಒಡಹುಟ್ಟಿದವಗೆ ಕೈವಲ್ಯವುಂಟೆ ?ದೃಢದಲಿ ವಿಭೀಷಣಾಗ್ರಜನನ್ನು ಬಾಣದಲಿಕೆಡಹಿಸಿದ ಬಳಿಕವಗೆ ಸ್ಥಿರಪಟ್ಟ ಕಟ್ಟಿದೆ2 ರೂಢಿಯಲಿ ಗುರುದ್ರೋಹವನು ಮಾಡಿದವನ ಮೊಗನೋಡಿದಾಗಲೆ ಪ್ರಾಯಶ್ಚಿತ್ತವುಂಟುನೋಡಿದಾಗಲೆ ಬೃಹಸ್ಪತಿಸತಿಗೆ ಅಳುಪಿದನಸೂಡಿದಾತನ ಸ್ನೇಹವನು ಮಾಡಿಕೊಂಡಿರ್ಪೆ 3 ದೇಶದೊಳು ವಂಶಕಂಟಕರೆನಿಸಿದವರೊಳಗೆಭಾಷಣವ ಮಾಡಬಪ್ಪುದೆ ಪ್ರಾಜ್ಞರು ?ಬೇಸರಿಸದೆ ಕೌರವರ ಕೊಂದ ಪಾಂಡವರ ಸಂ-ತೋಷದಲಿ ಪಕ್ಷಿಕರ ಮಾಡಿಕೊಂಡಿರ್ಪೆ 4 ಪೊಡವಿಪತಿ ಕೇಳು ಶ್ರೀ ಆದಿಕೇಶವನೆ ಹಿಂ-ಗಡೆಯಲ್ಲಿ ಮನೆಯ ಕಟ್ಟಿಸಬಾರದೆ ?ಬಿಡೆಯವಿಲ್ಲದೆ ಸಭಾಮಧ್ಯದಲಿ ಹೆಂಡತಿಯತೊಡೆಯ ಮೇಲ್ಕುಳ್ಳಿರಿಸಿಕೊಂಡಿರ್ಪ ಹಿರಿಯತನ 5
--------------
ಕನಕದಾಸ
ದಾಸನು ನಾ ನಿನ್ನಯ ಬೇಸರಿಸದ ಸೇವಾ ವಾಸುದೇವನೆ ಮಾಡುವ ಮನವಾ ವಾಸುಕಿಶಯನ ನೀ ನೀಡು ದೃಢವಾ ಪ ಭಾಸುರಾಂಗಿಯ ಶ್ರೀಶನೆ ಬಡ ದಾಸನ ಸೇವೆಯು ಮನಕ್ಹ್ಯಾಂಗೆ ಬಂತು ಶ್ರೀಶನ ಕೌಸ್ತುಭಕೆ ಆಶೆ ತಂತು ಅ. ಪ. ಅನುಗಾಲದ ನಿನ್ನ ನಾಮದ ಸ್ಮರಣೆಯಾ ಮನಸಿಜ ಪಿತಗೆ ಮೆಚ್ಚು ಬಾ ಧ್ಯಾನ ಕೇಳಲು ಕಿವಿ ನಿಮಿರಿಸಿದಾ ಘನ ಪ್ರಲ್ಹಾದನ ಸ್ಮರಣೆಗೆ ನಿಂತಿರ್ದಾ- ಘನ ಸಂಪ್ರೀತನ ಎನ್ನೊಳ್ಯಾಂಗ ಕರುಣಿಸಿದಾ ಮೇಣ್ ಕರಣದಿಂದ ಗಾಯನ ಎನ್ನಯ ಕಾಯಜ ಪಿತಾ ನಿನಗೆ ಶ್ರಾವ್ಯವಾದುದು ಅರಿಯೆನು ನಾ 1 ಮೇಣ್ ಪ್ರೀಯವಾದುದು ಹರಿಯೇ ಸುರ ಮಾನಿಯೆ ಮಾಯೆಯ ಹರಿದು ರಕ್ಷಿಸೇಯಾ ನಿನ್ನ ಮನಕಾನಂದವಾಗುವುದಯ್ಯಾ 2 ಮತಿವಂತನೆ ನೀ ಮಾಡುವ ಹರಿಪೂಜೆ ಚಿತ್ತಜಪಿತ ಹರಿಗಾಯ್ತು ಕೇಳ್ ಮುದದಿ ಹೃದಯ ತುಂಬೀತು ಅತಿ ಮಾನಿನಿಯೆ ವಿಧಿಪೂಜಿತನಿಗೆ ಸರಿ ಪಾತೆನ್ನ ಪೂಜೆಯಾಯ್ತು ಶ್ರೀ- ಪತಿ ಶ್ರೀಹರಿಯ ಮನಕೆ ಬಂದೀತು 3 ಮಾನವ ನಿನ್ನಯ ಹರಿಧ್ಯಾನವ ರಮಾಧ- ವನು ತಾ ಕೈಕೊಂಡಾ ತನ್ನ ಹೃದಯಾರವಿಂದದೆಡೆಗೆ ಸೆಳೆಕೊಂಡಾ ಮುನಿಶುಕ ಮುಖ್ಯರ ಧ್ರುವಾದಿ ಭಕ್ತರಾ ಮನಗೊಂಡ ಹರಿಯೆನ್ನ ಧ್ಯಾನಕಿಂಬುಗೊಂಡಾ ಮನದೊಳಗೆಂತು ಆತುಕೊಂಡಾ 4 ಪುರುಷೋತ್ತಮ ಹರಿ ಪರಮ ದಯಾರ್ಣವ ಕರುಣದಿ ನಿನ್ನ ಕೈಪಿಡಿದಾ ನಿಜದಾಸನೆಂದೊಡಬಡಿದಾ ವರಮಹಾಲಕುಮಿಯೆ ಸಿರಿಹರಿಸತಿಯೆ ಅನುದಿನ ಎನ್ನ ಮನದಿ ನೆಲೆಸೆ 5
--------------
ನರಸಿಂಹವಿಠಲರು
ಪಾದ ನಿತ್ಯ 1 ವಾಸುದೇವ ನಿನಗೆ ಒಲಿವ ತಾ ಭಾಸುರ ಕೀರ್ತಿ ತರುವ ಬೇಸರಿಸದೆ ಭಾಸಿ ಪಂಥದಿ ವಾಸುದೇವದಾಸರ ಸೇವಿಸು 2 ಕರುಣ ತೋರಿ ಸಲಹುವಂಥ ಗರುಡಗಮನನಿರಲು ನೀನು ಅರಿಯದಂತೆ ಇರಲು ನಿನ್ನ ಮರುಳು ಮನವೆ ಕಾರಣಿದಕೆ 3 ಕೂಡು ಸಜ್ಜನ ಸಂಗ ತವಕದಿ ಜಾಡುಕೋರ್ವ ಹರಿಭಕ್ತರ ನೋಡು ನಿನ್ನಕ್ಷಿ ತೆರೆದು ಮನುಜ 4 ಜಗಜನ್ಮಾದಿ ಕಾರಣ ಅಘಟನಘಟನಾದ ಹರಿಯ ಮಿಗೆ ಧ್ಯಾನವಿಟ್ಟು ಮನವೆ 5 ಸಲ್ಲ ದುರ್ಜನರಾಸಂಗವು ಸಜ್ಜನರಿಗೆ ಅಲ್ಲ ತಿಂದ ತಿಮ್ಮನಂದದಿ ಬೆಲ್ಲ ಬೇವಿನಂತೀ ಸಂಸಾರದಲ್ಲಿ ಸಿಲುಕಬೇಡ ಮನವೆ 6 ಹರುಷದಿಂದ ಜಡದೇಹದೊಳಗಿಹ ಶ್ರೀ ಹರಿ ಎಂದರಿದು ಪರರ ವಾರ್ತೆ ಆಡದೆ ಪರಮಪುರುಷ ಹರಿಯ ನೆನೆ ಮನುಜ 7 ಹದಿನಾಲ್ಕು ಲೋಕದೊಡೆಯ ಒದಗಿರಲು ನಿನ್ನ ಸಾಕೆ ಬರಿದೆ ಚಿಂತೆ ಮಾಡಬೇಡ ಸ್ಮರಿಸು ಹರಿಯ ಚರಣವನ್ನು8 ಸ್ವಕಾರ್ಯ ಸ್ವಾಮಿಕಾರ್ಯ ನಿನ್ನ ಅಖಿಲ ಕಾರ್ಯಾಂಗತನು ಹರಿಯು ಸಖನಂತೆ ಸಲಹುತಿರಲು ಸುಖಿಸು ಅವನ ದಾಸನೆಂದು 9 ಪಾದ ನಿತ್ಯ ಸಂಗ 10 ಸಕಲರಲ್ಲು ಅವನೇ ನಿಂತು ಸಲಹುವನೆಂದರಿತು ನೀ 11 ನಿತ್ಯ ಅಜ್ಞಾನವನ್ನು ಪರಿಹರಿಸುತ ನಿತ್ಯ ವಂದಿಸು ಮನದಿ 12 ಪಾದ ಧ್ಯಾಸದಿಂದ ಅರಿತೆನಲದೆ ಎಂದರಿತು 13 ಪ್ರಾಣನಾಥನೊ ಹರಿ ಶ್ರೀ ರಾಮಚಂದ್ರನೆಂದು ಅರುಹಿಕೊಟ್ಟು ಸಲಹುವರ 14 ತ್ರಿವಿಧ ಜೀವರಿಗೆ ಹರಿಪರದೈವನೆಂದರುಹಿದ ಪರಮಗುರು ಮತವ ಬಿಟ್ಟು 15
--------------
ಸರಸ್ವತಿ ಬಾಯಿ
ಪಾಲಿಸೈಯಪಾರ ಮಹಿಮ ಪತಿತ ಪಾವನ ಪ. ನೀಲ ಎನ್ನ ಅ.ಪ. ಇಂದಿರಾ ಮನೋಹರ ಆನಂದ ಮೂರುತಿಯೆ ನಿನ್ನ ವಂದಿಸಿ ಬೇಡುವ ಎನಗೆ ಸಂದರುಶನವೀಯ ರಾಯ ತಂದೆ ಮುಕುಂದ ಮನ್ನಿಸೆಲೊ ಕಂದನಾದೆನ್ನ ಮರೆಯದೆ ಬಂದು ನಿಂದು ಮುಖವ ತೋರೊ ಸುಂದರ ಅರವಿಂದನಯನ 1 ತಾತನಾಗಿ ಎನ್ನೊಳೊಂದ ಮಾತನಾಡದಿರುವರೇನೊ ನಾಥ ನೀನೇ ಕಾಯದಿರಲು ಖ್ಯಾತಿವಂತರನ್ನು ಕಾಣೆ ಪರಾಕು 2 ವಾಸುದೇವ ಕೈಯ ಬರದೆ ದೋಷವ ನಾಶಮಾಡಿ ನಿನ್ನ ದಾಸನೆಂದೆನಿಸೊ ನಿನ್ನ ಬೇಸರಿಸದೆ ಶೇಷಗಿರಿವಾಸ ವೆಂಕಟೇಶ ಪೊರೆಯೊ 3
--------------
ಸರಸ್ವತಿ ಬಾಯಿ
ಪ್ರಾಚೀನ ಕರ್ಮವಿದು ಬಿಡಲರಿಯದುಯೋಚನೆಯ ಮಾಡಿ ಬಳಲುವುದೇಕೆ ಮನುಜ ಪ ಕೌಪೀನ ಬಿಡಿಸಲಿಲ್ಲ ಹರಿಯು 1 ಲೋಕಾದಿಲೋಕಗಳ ಚರಿಸುವ ರವಿರಥಕೆಏಕಗಾಲಿಯು ಏಳುಕುದುರೆಗಳ ಕಟ್ಟಿಲೋಕಲೋಕಗಳನೆಲ್ಲ ಚರಿಸುವ ಅರುಣನಿಗೆಬೇಕೆಂದು ಚರಣಗಳ ಕೊಡಲಿಲ್ಲ ಹರಿಯು 2 ಸಾಸಿರ ನಾಮದ ಒಡೆಯಾದಿಕೇಶವನಬೇಸರಿಸದೆ ಹೆಗಲ ಮೇಲಿರಿಸಿಕೊಂಡುಆಕಾಶ ಮಾರ್ಗದಲಿ ಚರಿಸುವ ಗರುಡನಿಗೆನಾಸಿಕದ ಕೊನೆಡೊಂಕು ತಿದ್ದಲಿಲ್ಲ ಹರಿಯು 3
--------------
ಕನಕದಾಸ
ಭಯಕೃದ್ಭಯನಾಶನ ಮಾಯಾರಮಣ ಭವಭಯಹರಣ ಪ ಜೀಯ ಕಾಯುವುದಯ್ಯ ಪರಿಹರಿಸಯ್ಯ ತಾಪ- ತ್ರಯ ದಯೆತೋರಯ್ಯ ಎನ್ನೊಡೆಯಾ ಅ.ಪ ನಾನರಿಯೆ ನಿನ್ನಯ ಗುಣಗಣಾದಿಗಳ ಅನುದಿನದಿನಾ ಅನುಭವಿಸಿ ಭವಚಕ್ರದಾಟಗಳ ಜನುಮ ಜನುಮಾಂತರದಿ ಬಂದ ವಾಸನಾದಿಗಳ ದೀನವತ್ಸಲ ದೂರ ನೋಡುವೆಯ ನೀನರಿಯ ಎನ್ನನು ಉಳುಹುವ ಪರಿಯ ಎನಗ್ಯಾರಿಹರೊ ನಿನ್ಹೊರತು ಪೂರೆವರಯ್ಯ ವನಜಸಂಭವನಯ್ಯ ಜೀಯ 1 ಕರಿ ಮಕರಿ ಪಿಡಿಯಲು ಬಂದ ಪರಿಯೇನು ನಿಖಿಳಖಳಕುಲವೈರಿ ಶ್ರೀಹರಿ ಸಿರಿಗೆ ಹೇಳದ್ದೇನು ಭಕುತನಾರ್ತಧ್ವನಿಯ ಕೇಳಿ ಬಂದೆಯಾ ಏನು ನಾನು ಆಸಾಧನವನರಿಯೇನು ಘನ್ನಮಹಿಮ ನಿನ್ನಯ ಕೀರ್ತಿಯನು ಕೇಳಿ ಬಂದೆನು ಇನ್ನೇನು ನಿನಗೆ ಏನು ತೋರಿದಂತೆ ಮಾಡಿನ್ನು ಎನ್ನೊಡೆಯ ನೀನೆಂದಡಿಗೆ ಬಿದ್ದಿಹೆನೊ ಇನ್ನು 2 ಈಸಲಾರೆನು ಸಾರಿ ಈ ಭವಸಾಗರದೊಳಗೆ ಶ್ರೀಶ ನಿನಗತಿಶಯವೆ ಕರುಣವಿಲಾಸ ತೋರೆನಗೆ ದಾಸದಾಸದಾಸರದಾಸ್ಯ ಕೊಡಿಸೆನಗೆ ಶ್ರೀಶ ಎನ್ನಯ ಮನದ ಕ್ಲೇಶವನೂ ನಾಶವಗೈಸು-ನಿರಾಶ್ರಯನಾಗಿಹೆನು ಏಸುಬಲ್ಲೆನು ಕಾಸಿನವನು ಬೇಸರಿಸದಿರು ಇನ್ನೂ-ಮುನ್ನೂ 3 ತಾಪತ್ರಯಗಳಿಂದನುದಿನದಿ ನಾ ನೊಂದೆ ಶ್ರೀಪತಿಯೆ ಹೃತ್ತಾಪಕಳೆದು ಪೊರೆಯಬೇಕೆಂದೆ ಗೋಪನಿನ್ನಯ ಶ್ರೀಪಾದದೊಳು ಮನವ ನೀಡೆಂದೆ ಕುಪಿತವೇ ನಿನ್ನವನು ನಾನೆಂದೆ ಭೂಪ ಆಪತ್ತೋದ್ಧಾರಕನೆಂದೆ ಪಾಪಿಮಾನವಜನುಮದಲಿ ಬಂದೆ ಕಾಪಾಡುವುದು ಎಂದೇ-ತಂದೇ 4 ಭೂಸ್ಥಳದಿ ನಿಂತ ಶ್ರೀ ವೇಂಕಟೇಶ ಹರೇ ತ್ರಿಸ್ಥಳದೊಳು ಈ ಸ್ಥಳವೆ ವೈಕುಂಠ ದೊರೆಯೆ ವಿಸ್ತರದಿ ಮಹಿಮೆಯ ಪಾಡಿ ಪೊಗಳಲು ನಾವು ಶಕ್ತರೆ ಸ್ವಸ್ಥಚಿತ್ತವಿಲ್ಲ ಶ್ರೀಹರೇ ಈ ಸ್ಥಿತಿಯಲ್ಲಿ ಎನ್ನ ನೋಡುವರೆ ದುಸ್ಥಿತಿಯಬಡವನಕೈಯ ಬಿಡುವರೆ-ಶೌರೆ5
--------------
ಉರಗಾದ್ರಿವಾಸವಿಠಲದಾಸರು
ಮುಟ್ಟಬೇಡ ಮುಟ್ಟಬೇಡ ಮುರಹರನ ದಾಸರನು ಪ ಕಟ್ಟು ಮಾಡಿದ ಯಮನು ತನ್ನ ದೂತರಿಗೆಅ ತಿರುಮಣಿ ತಿರುಚೂರ್ಣ ಶೃಂಗಾರ ಧರಿಸುವರಸಿರಿತುಳಸಿ ವನಮಾಲೆಯಿಂದೊಪ್ಪುವವರತಿರುಮಂತ್ರ ತೀರ್ಥಪ್ರಸಾದಕೊಳಗಾದವರತಿರುಪತಿ ಯಾತ್ರೆಯನು ಮಾಡುವ ಮಹಾತ್ಮರ 1 ಬಡವರಾಗಲಿ ಭಾಗ್ಯವಂತರಾಗಲಿ ಅವರುಕಡು ಕರ್ಮಿ ಘೋರಪಾತಕರಾಗಲಿನಡೆನುಡಿಗೆ ಮಾಧವನ ಬಿಡದೆ ಕೊಂಡಾಡುವರಗೊಡವೆ ಬೇಡೆಂದು ಯಮಧರ್ಮ ಸಾರಿದನು 2 ವಾಸುದೇವನ ವಾಸರವನಾಚರಿಸುವವರಬೇಸರಿಸದೆ ಹರಿಪ್ರಸಂಗ ಮಾಳ್ಪವರಶೇಷಶಯನ ಕಾಗಿನೆಲೆಯಾದಿಕೇಶವನದಾಸಾನುದಾಸರಿಗೆ ದಾಸರಾದವರ3
--------------
ಕನಕದಾಸ
ಮೊರೆಹೊಕ್ಕೆ ಹರಿ ನಿಮ್ಮ ಚರಣಕಮಲವ ನಾನುಮರೆಯದೆ ಸಲಹೆನ್ನ ವರದಾ ಪಕರಿ ಧ್ರುವ ಪ್ರಹ್ಲಾದ ವಿಭೀಷಣರ ರಕ್ಷಿಸಿದೆಪರಂದೇವಿ ವಲ್ಲಭನೆ ವರದಾ ಅ ಎಂಬತ್ತು ನಾಲ್ಕು ಲಕ್ಷ ಜೀವರಾಶಿ ಯೋನಿಯೊಳುಹಂಬಲಿಸಿ ನಾ ಬಂದೆ ವರದಾಅಂಬುಜೋದ್ಭವನ ಬರೆಹವ ಮೀರಲಾರದೆ ನರಬೊಂಬೆ ಗರ್ಭದೊಳಿದ್ದೆ ವರದಾ 1 ತುಂಬಿದ್ದ ಕೀವು ಮಲಮೂತ್ರ ರಕ್ತದಿಂ ಹೊರಳುವಸಂಭ್ರಮದೊಳಿದ್ದೆ ನಾ ವರದಾಒಂಬತ್ತು ಮಾಸವು ಕಳೆದು ಗುಂಡಿಯೊಳಿಳಿದು ಈಕುಂಭಿನಿಗೆ ನಾ ಬಂದೆ ವರದಾ 2 ನಸುನುಡಿಯನು ಕಲಿತು ನಸುನಗೆಗಳ ನಕ್ಕು ಈ ಕುಶಲದಾಟವ ಕಲಿತೆ ವರದಾಎಸೆವ ಯೌವನ ಬಂದು ಶಶಿಮುಖಿಯರೊಳು ಕಾಮತೃಷೆಗೆ ನಾನೊಳಗಾದೆ ವರದಾ 3 ನುಸುಳಿಸುವ ಚಾಂಡಾಲ ಗುಣವನೆಣಿಸದೆ ಕಾಮವಶನಾಗಿ ನಾನಿದ್ದೆ ವರದಾಉಸುರಲೆನ್ನಳವಲ್ಲ ಬೆಸನಿತ್ತು ಸಲಹೆನ್ನಬಿಸರುಹಾಕ್ಷನೆ ಕಂಚಿ ವರದಾ 4 ಗುರು ಹಿರಿಯರ ಕಂಡು ಸರಿಸಮಾನದಿ ನಾನುಬೆರೆದುಕೊಂಡಿದ್ದೆನೋ ವರದಾನರರ ಕೊಂಡಾಡಿ ನಾಲಗೆಯೊಣಗಿ ಅತಿಯಾಗಿನರನರಳಿ ಬೆಂಡಾದೆ ವರದಾ 5 ಕಾಸಿಗಾಸೆಯ ಪಟ್ಟು ಸಹಸ್ರ ಲಕ್ಷದ ಪುಸಿಯಬೇಸರಿಸದೆ ಬೊಗಳಿದೆ ವರದಾವಿಶೇಷ ನಿಮ್ಮಂಘ್ರಿಯ ನಂಬಲಾರದೆ ಕೆಟ್ಟದೋಷಕನು ನಾನಾದೆ ವರದಾ 6 ಪಂಚೇಂದ್ರಿಯಗಳೊಳಗೆ ಸಂಚರಿಸುವೀ ಮನವುಕೊಂಚ ಗುಣಕೆಳೆಯುತಿದೆ ವರದಾಪಂಚತ್ರಿಂಶತ್ಕೋಟಿ ಭೂಮಂಡಲದೊಳೆನ್ನಂಥಪಂಚಪಾತಕನುಂಟೆ ವರದಾ 7 ಮುಂಚೆ ಶ್ರೀ ಹರಿಯೆ ನಿಮ್ಮ ವರಧ್ಯಾನ ಮಾಡುವರಪಂಚೆಯಲ್ಲಿರಿಸೆನ್ನ ವರದಾಪಂಚಬಾಣನ ಪಡೆದ ನೆಲೆಯಾದಿ ಕೇಶವ ಈ ಪ್ರಪಂಚವನು ಬಿಡಿಸೆನ್ನ ವರದಾ 8
--------------
ಕನಕದಾಸ
ಶೇಷಶಯನ ನಿನ್ನ ಪರಮ ಭಾಗವತರ ಸಹವಾಸದೊಳಿರಿಸು ಕಂಡ್ಯ ಎನ್ನನು ಪ ಬೇಸರಿಸದೆ ನಿನ್ನ ಹೃದಯಾಬ್ಜದೊಳಗಿರುವದಾಸರೊಳಿರಿಸು ಕಂಡ್ಯ ಎನ್ನನುಅ ತಂದೆಯೊಡಲನು ಸೀಳಿಸಿದವರೊಳು, ದೇ-ವೇಂದ್ರನ ತಲೆಗೆ ತಂದವರೊಳು, ದು-ರ್ಗಂಧ ಪೆಣ್ಣಿಗೆ ಚಂದನದ ಕಂಪನಿತ್ತಂಥಬಾಂಧವರೊಳಗಿರಿಸು ಕಂಡ್ಯ ಎನ್ನನು 1 ತೋಯಜವೆಂಬ ಪುಷ್ಪದ ಪೆಸರವರೊಳುತಾಯ ಸೊಸೆಗೆ ಮಕ್ಕಳಿತ್ತವರೊಳುಆಯದಿ ದ್ವಾದಶಿ ವ್ರತವ ಸಾಧಿಸಿದಂಥರಾಯರೊಳಿರಿಸು ಕಂಡ್ಯ ಎನ್ನನು2 ಗಿಳಿನಾಯಿ ಪೆಸರಿನವರೊಳು, ಮುಗಿಲಹೊಳೆಯ ಹೊಟ್ಟೆಲಿ ಹುಟ್ಟಿದವರೊಳುಕೆಳದಿಯ ಜರಿದು ಶ್ರೀಹರಿದಿನ ಗೆದ್ದಂಥಹಳಬರೊಳಿರಿಸು ಕಂಡ್ಯ ಎನ್ನನು3 ಅನುದಿನ ಸ್ಥಿರರಾಜ್ಯವಾಳಿದಕಿಂಕರರೊಳಿರಿಸು ಕಂಡ್ಯ ಎನ್ನನು 4 ಕಾಟಿಗೆ ಕಾಸಿಲ್ಲದವರು ರಾಯರ ಪಂಕ್ತಿಊಟವ ಬಯಸಿದಂತೆ ನಾ ಬೇಡಿದೆನಾಟಕಧರ ನೆಲೆಯಾದಿಕೇಶವ, ನಿ-ನ್ನಾಟದೊಳಿರಿಸು ಕಂಡ್ಯ ಎನ್ನನು 5
--------------
ಕನಕದಾಸ
ಶ್ರೀ ಗುರುವರನೆ ನಮಃ ಪ ಸಾಗರ ಮಹಿಮ ಸದಾನಂದ ಮೂರುತಿ ಅ.ಪ ವಿಘ್ನನಿವಾರಣ ಕಾರಣ | ನಿಗ- ಸಗುಣ ನಿರ್ಗುಣ ತ್ರೈಜಗದುದ್ಧರಣ1 ನಂದದಿಂದ ದಯದೋರಿಂದೆನಗೆ 2 ಬೇಸರಿಸದೆ ಶ್ರೀನಿವಾಸನೆ ಪಾಲಿಸೊ 3
--------------
ಸದಾನಂದರು
ಹರಿದಾಸಮಹತಿ ಕ್ಷಮಿಸುವುದೆಮ್ಮ ತಪ್ಪುಗಳ ಸ್ವಾಮಿಕ್ಷಮಶೀಲವೆಂಬ ದಾಸೋಹ ಬಿರುದಿನೊಳು ಪ ಸುರರು ಸಾಧುಸಮರಲ್ಲವೆಂಬ ಶ್ರುತಿ ಸರಿಬಂತು ಸ್ವಾಮಿ ಅ ಶರಧಿಯೊಳಿರುತಿರ್ಪ ಚರಜೀವಿಗಳ ಗುಣಾ-ಕರಿಸಿ ಇಷ್ಟೆಂದು ಪೇಳಲುಬಹುದುಸಿರಿವರದನ ಅಂತಃಕರಣಕೊಪ್ಪಿದ ನಿಮ್ಮಇರವ ತಿಳಿಯಲು ನರರ ವಶವೆ ಸ್ವಾಮಿ1 ಆಢಕದೊಳಗಂಬರವನೆ ಅಳೆದು ಲೆಕ್ಕಕೂಡಿದ ಮಿತಿಯ ಪೇಳಲು ಬಹುದುರೂಢಿಗೀಶನ ಸೇವೆ ಮಾಡಿದ ಮುಕ್ತರಈಡಿಲ್ಲವೆಂಬುದನಿತರರರಿವರೆ ಸ್ವಾಮಿ 2 ಈ ಶರೀರದೊಳಗಿಪ್ಪ ಕೇಶಗಳೆಲ್ಲವನುಬೇಸರಿಸದೆಣಿಸಿ ಹೇಳಲು ಬಹುದುಶೇಷಶಯನ ಕಾಗಿನೆಲೆಯಾದಿಕೇಶವದಾಸರ ಮಹಿಮೆ ಕಾಣಲಿಕಾಗದು ಸ್ವಾಮಿ 3
--------------
ಕನಕದಾಸ
ನಾರಾಯಣ ನಿನ್ನ ನಾಮದ ಸ್ಮರಣೆಯ |ಸಾರಮೃತವೆನ್ನ ನಾಲಗೆಗೆ ಬರಲಿ ಪಕೂಡುವಾಗಲು ನಿಂತಾಡುವಾಗಲು ಮತ್ತೆ |ಹಾಡುವಾಗಲು ಹರಿದಾಡುವಾಗ ||ಖೋಡಿವಿನೋದದಿ ನೋಡದೆ ನಾ ಬಲು |ಮಾಡಿದ ಪಾಪ ಬಿಟ್ಟೋಡಿ ಹೋಗುವ ಹಾಗೆ 1ಊರಿಗೆ ಹೋಗಲಿ ಊರೊಳಗಿರಲಿ-|ಕಾರಾಣಾರ್ಥಗಳೆಲ್ಲ ಕಾದಿರಲಿ ||ವಾರಿಜನಾಭನರಸಾರಥಿಸನ್ನುತ|ಸಾರಿಸಾರಿಗೆ ನಾ ಬೇಸರಿಸದ ಹಾಗೆ 2ಹಸಿವು ಇದ್ದಾಗಲಿ ಹಸಿವಿಲ್ಲದಾಗಲಿ |ರಸ-ಕಸವಿರಲಿ ಹರುಷವಿರಲಿ ||ವಸುದೇವಾತ್ಮಜ ಶಿಶುಪಾಲಕ್ಷಯ ||ಅಸುರಾಂತಕ ನಿನ್ನ ಹೆಸರು ಮರೆಯದಂತೆ 3ಕಷ್ಟದಲ್ಲಿರಲಿ ಉತ್ಕøಷ್ಟದಲ್ಲಿರಲಿ-|ಎಷ್ಟಾದರು ಮತಿಗೆಟ್ಟಿರಲಿ ||ಕೃಷ್ಣ ಕೃಷ್ಣ ಎಂದು ಶಿಷ್ಟರು ಪೇಳುವ |ಅಷ್ಟಾಕ್ಷರ ಮಹಾಮಂತ್ರದ ನಾಮದ 4ಕನಸಿನೊಳಾಗಲಿ ಕಳವಳಿಕಾಗಲಿ |ಮನಸುಗೊಟ್ಟಿರಲಿ ಮುನಿದಿರಲಿ ||ಜನಕಜಾಪತಿ ನಿನ್ನ ಚರಣಕಮಲವನು |ಮನಸಿನೊಳಗೆ ಒಮ್ಮೆ ನೆನೆಸಿಕೊಳ್ಳುವ ಹಾಗೆ 5ಜ್ವರ ಬಂದಾಗಲು ಚಳಿ ಬಂದಾಗಲು |ಮರಳಿ ಮರಳಿ ಮತ್ತೆ ನಡೆವಾಗಲು ||ಹರಿನಾರಾಯಣದುರಿತನಿವಾರಣ |ಇರುಳು ಹಗಲು ನಿನ್ನ ಸ್ಮರಣೆ ಮರೆಯದಂತೆ 6ಸಂತತಹರಿನಿನ್ನ ಸಾಸಿರನಾಮವ |ಅಂತರಂಗದಾ ಒಳಗಿರಿಸಿ ||ಎಂತೋ ಪುರಂದರವಿಠಲರಾಯನೆ |ಅಂತ್ಯಕಾಲದಲಿ ಚಿಂತಿಸುವಂತೆ 7
--------------
ಪುರಂದರದಾಸರು
ಶ್ರವಣಮನನ ನಿಧಿ ಧ್ಯಾನವು ಯೋಗಕ್ಕೆಸಮನಿಸೆ ಸಾಧಕಂಗೇತಕೆ ಈ ಮೂರುಪನಿತ್ಯಗುರುಮುಖದಿಂದ ನಿಜವೇದಾಂತ ಸಾರವ-ನಿತ್ಯಕಾಲದಲ್ಲಿ ಕೇಳುತಲಿ ಇದ್ದುನಿತ್ಯಜೀವರಪರಮನಿಲುಗಡೆಗಳ ತಿಳಿದುಸತ್ಯತಾನೆಂದು ಕಂಡು ನಿಶ್ಚೈಸಿದುದೆ ಶ್ರವಣ1ವಾಸನೆಹರವಾಗಿ ಬಲಿದು ಆತ್ಮಾನಂದಕೆಸೂಸದೆ ಮನವನು ನಿಲ್ಲಿಸುತದೇಶಿಕೋತ್ತಮನಿಂದ ತನಗಾವ ಉಪದೇಶಬೇಸರಿಸದೆ ಮತ್ತೆ ಮತ್ತೆ ನೆನೆವುದೆ ಮನನ2ದಧಿಮಥನವ ಮಾಡೆನವನೀತತೇಲುವೊಲುಉದಧಿಮಥಿಸೆ ಅಮೃತ ತಾ ಬಂದಂತೆಮಥಿಸೆ ಕಾಷ್ಟಕ್ಕೆಕಾಷ್ಠಅಗ್ನಿ ತಾ ಪುಟಿದಂತೆವಿಧಿಸೆ ಈ ತೆರದಲಿ ತಾನದುವೆ ನಿಧಿಧ್ಯಾಸ3ಈ ಮೂರು ಸಾಧನಗಳಿರಬೇಕು ಯೋಗಕ್ಕೆಈ ಮೂರು ಸಾಧಿಸಲು ರಾಜಯೋಗಿ ತಾನುಇವರೊಳು ಒಂದು ಕಡಿಮೆಯಾದರು ಯೋಗಿಯಾಗನುಇಂತಿಲ್ಲದಿರೆ ನಿಜಮುಕ್ತಿ ದೊರಕದು4ಶ್ರವಣವೆಂಬುದು ಅದು ಸರ್ವಸಾಧನವಯ್ಯಶ್ರವಣ ಮನನವಾಗೆ ಶ್ರಮ ಪರಿಹಾರವುಶ್ರವಣ ಮನನ ನಿಧಿಧ್ಯಾಸ ಮೂರಾಗೆಶಿವನೆ ಆತನು ಚಿದಾನಂದ ದೇವನವನು5
--------------
ಚಿದಾನಂದ ಅವಧೂತರು