ಒಟ್ಟು 8 ಕಡೆಗಳಲ್ಲಿ , 3 ದಾಸರು , 8 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇದೇ ನೋಡು ನಿನ್ನ ನಿಜವಾದ ಸ್ವರೂಪ ಜೀವ ಇದೇ ಸಕಲ ಜಗದ ಕಾರಣಾ ಬ್ರಹ್ಮ ಪೂರಣ ಪ ಅನಿಸುವಿಕೆಯು ಇಲ್ಲದಿರುವಾ ತೋರಿಕಿಲ್ಲದಾ ಬರಿ ಇರವಿದೇ ಮನಸಿಲ್ಲದೆ ಬೆಳಗುತಿರುವ ನಿದ್ರೆಹೊದ್ದದಾ ಬರಿ ಅರಿವಿದೆ ಘನ ನಿರಾಕಾರವೇ 1 ವಿಷಯಜನಿತ ದುಃಖಸುಖದ ಸುಳಿವು ತೋರದ ಘನಾನಂದವೇ ಶೇಷ ಮಾತ್ರನಾಗಿ ಸದಾ ಶಾಂತಿರೂಪದ ನಿರ್ವಿಕಾರ ನೀ ಹಸನಾಗಿ ತಿಳಿದುಕೊಳ್ಳು ಬೋಧವಾ ನೀನದೆ ಎಂಬುದ ಈ ಸತ್ಯಸ್ವರೂಪವೇ 2 ಸ್ವರೂಪಾತ್ಮ ಮಾತ್ರ ಪರಮಸತ್ಯನಾಗಿಹ ನಿತ್ಯನಾಗಿಹ ಬರೀ ತೋರಿ ಅಡಗುತಿರುವ ಜಗವು ಭ್ರಾಮಕಾ ಮಿಥ್ಯಾಭಾಸಕ ಗುರುವರ್ಯ ಶಂಕರಾತ್ಮಬೋಧನಾವೇದಾಂತಸಾರವಾ ಪರಮಾತ್ಮ ಜ್ಞಾನವಾ 3
--------------
ಶಂಕರಭಟ್ಟ ಅಗ್ನಿಹೋತ್ರಿ
ಇದೇ ಪೂರ್ಣಪದಾ ತಿಳಿ ಜೀವಾ ಆತ್ಮಸ್ವರೂಪಾ ನೋಡು ನೀ ಈ ಜಗಕೆಲ್ಲ ಆಧಾರಾ ಪರಮಪದವದೇ ನೊಡು ನೀ ಪ ತೋರುವೀ ಜೀವರಾಧಾರ ತೋರದಾ ಪೂರ್ಣಾಜ್ಞಾನರೂಪ ಅದೇ ಕಲ್ಪನೆರಹಿತ ಅದ್ವೈತ ಪರಮಪದವದೇ ನೋಡು ನೀ 1 ಮನವಾಣಿಗೆ ಸಿಗದ ಆ ಸ್ಥಿತಿ ಪೂರ್ಣಾ ಪರಮಾತ್ಮನೈ ಅದೇ ನೀನಿಹೆ ಜೀವಾ ತಿಳಿಯಿದನಾ ಗುರು ಶಂಕರನಾ ಬೋಧನಾ 2
--------------
ಶಂಕರಭಟ್ಟ ಅಗ್ನಿಹೋತ್ರಿ
ಗುರುಭಕ್ತನೆವೆ ಧನ್ಯನು ಬಲು ಮಾನ್ಯನು ಪ ಗುರುದಯ ಸಂಗಡಿಯನು ಹಿಡಿದಿಹನು | ತರಣೋಪಾಯವ ಕೂಡಿದಾ ನಲಿದಾಡಿದಾ 1 ಅನ್ಯ ಮಾರ್ಗವ ನೋಡನು ತಾ ಕೂಡನು | ತನ್ನ ನಿಷ್ಠೆಯೊಳಾಡುವಾ ಗತಿ ಬೇಡುವಾ 2 ಗುರು ಮಾತೇ ಮಂತ್ರ ವೆಂಬನು | ಸವಿ ದುಂಬನು | ಗುರು ಸೇವೆಯಲಿ ಬಾಳುವಾ ಅದೇ ಕೇಳುವಾ 3 ಪುಂಡಲೀಕನ ಭಕ್ತಿಯಾ | ಆಸಕ್ತಿಯಾ | ಕಂಡು ತಾನೆವೆ ಬಂದನು ಮುಕುಂದನು 4 ಸಾರಥಿ | ನೆರೆ ಭಕ್ತಿ ಕೀಲ ಬೋಧನಾ ಹೇಳಿದನು 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಛೀ ಯಾತರ ಜನ್ಮಾ | ನಾಯಿಗಿಂದತ್ತಾಧಮ ಪ ಛೀ ಯಾತರ ಜನ್ಮಾ ನಾಯಿ ಹಿಂದತ್ತಾಧಮ ಬಾಯಿ ಬಡಕನಾಗಿ ಮಯ್ಯ ಮರೆವರೇ ನಿಮ್ಮಾ ಅ.ಪ ಸಾಧುರಾನುಸರಿಸಿ | ಬೋಧನಾಮೃತ ಸೇವಿಸಿ | ಹಾದಿವಿಡಿದು ಗತಿ ಸಾಧಿಸಿ | ಘಾಸಿ 1 ಬುದ್ಧಿ ತನಗ ಇಲ್ಲಾ | ತಿದ್ದಿದರ ಕೇಳಲಿಲ್ಲಾ | ಇದ್ದೆರಡಾದಿನದೊಳು | ಸದ್ಯ ಸೌಖ್ಯ ಕಳೆದೆಲ್ಲಾ | 2 ಕಲ್ಲು ಕಟೆಯ ಬಹುದು | ಬಿಲ್ಲು ಮಣಿಸಬಹುದು | ನಿಲ್ಲದೇ ವನಕಿ ತುಂಡಾ | ಸಲ್ಲದಂತೆ ನೀನಾಗುದು 3 ಮರಹುಟ್ಟಿ ಮರ ಬಿದ್ದಾ | ತೆರನಾದೋ ಅಪ್ರಬುದ್ಧಾ | ತಿರುಗಿ ನೋಡಿನ್ನಾರೆ | ಚ್ಚರಿತು ನೀ ಮದದಿಂದ 4 ಗುರು ಮಹೀಪತಿಜನಾ ಧರಿಸಿರೋ ಸದ್ವಚನಾ ಸರಿಕರ ಕಂಡು ಹ್ಯಾವಾ ವರಿಸದೆ ಇಹುದೇನಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯದೇವ ಜಯದೇವ ಜಯದೀನದಯಾಳಾ ಜಯಜಯ ಶ್ರೀಗುರು ಮಹಿಪತಿ ಭವತಾರಕ ಲೀಲಾ ಪ ಮರವಿನ ಕತ್ತಲಿಯೊಳಗೆ ಮುಂದುಗಾಣದಲಿರಲಿ ಅರವಿನದೀಪವ ಹೆಚ್ಚಿ ದೋರುತಲೀ ಸ್ಥಿರವನು ಗೊಳ್ಳದ ಚಿತ್ತವ ಭಜನಿಗೆಲಿಸುತಲಿ ಹರಿಸಿದ ವಿದ್ಯದಗೃಂಥಿಯ ಸಂಶಯ ಬಿಡಿಸುತಲಿ 1 ಪರಿಪರಿಯಿಂದಲಿಗರದು ಬೋಧನಾಮೃತನುಡಿಯಾ ಅರಹಿಸಿಯೋಗದ ಮಾರ್ಗವ ಸಾಂಖ್ಯದನಿಲ್ಲ ಕಡಿಯಾ ಕರಣೀಂದ್ರಿಯಗಳ ವಡದಾಸ್ವಾನಂದದಯಡಿಯಾ ಕರುಣಿಸಿ ವಿಶ್ವಂಭರಿತದ ತೋರಿದೆ ಇತ್ಥಡಿಯಾ 2 ನಿನಗುತ್ತೀರ್ಣವಕಾಣದೇ ತನುವಾರತಿ ಮಾಡೀ ಮನವೇದೀಪವು ಸದ್ಭಾವನೆ ಆಜ್ಯನೀಡಿ ಅನುದಿನ ಬೆಳಗುವ ನಂದನುಮಹಿಮೆಯ ಕೊಂಡಾಡಿ ಚಿನುಮಯಸುಖದೊಳು ಬೆರೆದಾಹಂಭ್ರಮ ಈಡಾಡಿ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಪರಸುಖಕರಾ ಗುರುಬೋಧಸಾರಾ ಮರಣಾ ಜರಾ ದುರಿತಾದಿ ದೂರಾ ಪ ಜೀವಭಾವವಾ ಸಟೆಯಾಗಿ ಗೈವ ದೇವಭಾವನಾ ಬಗೆಸಿನಿಲಿಸುವಾ ಸಾವಿನಂಜಿಕೆ ದೂರಾಗಿ ಮಾಳ್ಪ ಜೀವಂತಮುಕುತಿ ಕರದೀಯುವಾ 1 ದೃಶ್ಯವೆಂದು ತೋರ್ಪ ವಿಶ್ವತ್ಯಾಗ ಮಾಡಿ ದೃಶ್ಯವಸ್ತುವಿಂದ ಬೇರೆನಿಸುವಾ ಶಾಶ್ವತಾದ ಆ ಪದ ತೋರಿ ಮನದ ಕಶ್ಮಲವನು ಕಳೆವ ಭವತಾರಕಾ 2 ಭೇದಭಾವವಾ ಛೇದಿಸುತ ಮನದಿ ಬೋಧನಾರಾಯಣನ ಕೃಪೆ ಪೊಂದಿದಾ ಬೋಧರೂಪ ಗುರುವು ಪೇಳಿರ್ದ ಬೋಧ ಸಾಧು ಶಂಕರಾರ್ಯ ತಾನೆನ್ನುವಾ 3
--------------
ಶಂಕರಭಟ್ಟ ಅಗ್ನಿಹೋತ್ರಿ
ಮಂಗಳಂ ಶ್ರೀರಂಗಗ ಮಂಗಳಂ ಇಂಗಿತ ಭಕ್ತರ ಅಂಗಸಂಗಾದವಗ ಪ ಸಿರಿತಳಕ ಮಂಗಳ ಕಾಲಿಯ ವರದನಾ ವರನಖಮಂಗಳ ಗಂಗೆ ಪಡಿದನಾ ಚರಣ ಕಮಂಗಳ ಅಹಿಲ್ಯ ಉದ್ಧಾರಗ ನೆರೆಜಂಘಗೆ ಮಂಗಳೆ ಶೊದಾನಂದನಾ 1 ತೊಡೆಗಳಿಗೆ ಮಂಗಳ ಗರುಡ ವಾಹನನಾ ನಡುವಿಗೆ ಮಂಗಳ ಧೃವ ಗೊಲಿದನ ಒಡಲ ಕಮಂಗಳ ಜಗವಳ ಕೊಂಬನಾ ಧೃಡ ನಾಭಿಗೆ ಮಂಗಳ ಬ್ರಹ್ಮ ಪಿತನಾ 2 ಉರ ಸಕ ಮಂಗಳ ಉಪಮನ್ಯು ಪ್ರೀಯನಾ ಸಿರಿವಕ್ಷಕ ಮಂಗಳ ಭೃಗು ರಕ್ಷನಾ ಕರಗಳಿಗೆ ಮಂಗಳ ಕರಿರಾಜ ವರದನಾ ಕೊರಳಿಗೆ ಮಂಗಳ ತುಳಸಿ ಧರನಾ 3 ಇದು ಶೃತಿಗೆ ಮಂಗಳ ಹನುಮನೇ ಕಾಂತನಾ ವದನಕ ಮಂಗಳ ವಿದುರ ಗೊಲಿದನಾ ಅದೇ ಫ್ರಾಣಕೆ ಮಂಗಳ ಪ್ರಲ್ಹಾದ ವತ್ಸಲನಾ ಮದನ ಮೋಹನನಾ 4 ಸಿರಸಕ ಮಂಗಳ ಫಣಿರಾಜಶಯನನಾ ದೊರೆತನಕ ಮಂಗಳ ಶ್ರೀ ಭೂರಮಣನಾ ಗುರುತನಕ ಮಂಗಳ ಉದ್ಬವತಾರಕನಾ ಕರುಣಿಗೆ ಮಂಗಳಾರ್ಜುನ ಬೋಧನಾ 5 ಪ್ರಭುಗೆ ಮಂಗಳ ಬಲಿ ವಿಭೀಷಣರ ಸ್ಥಾಪನಾ ಅಭಯಕ ಮಂಗಳಾಜಮೀಳ ಪಾಲನಾ ಅಭಿಮಾನಿಗೆ ಮಂಗಳಾ ಪಾಂಚಾಲಿಕಾಯಿದನಾ ಪ್ರಭೆಗೆ ಮಂಗಳಾ ರವಿ ಸೋಮಾತ್ಮಕನಾ 6 ಸಿರಿನಾಮಕ ಮಂಗಳ ನಾರದ ಪ್ರೀಯನಾ ಕ ಮಂಗಲ ಶಿವ ವಂದ್ಯನಾ ಗುರುವರ ಮಹಿಪತಿ ನಂದನಸಾರಥಿ ಬಿರದಿಗೆ ಮಂಗಳಾಂಬರೀಷ ನೊಡಿಯನಾ 7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮಲಗು ಮಲಗಯ್ಯ ಹನುಮ ಕಲಿಭಂಜನ ಭೀಮ ಜಲಧಿ ಅಲವಬೋಧನಾಮಾ ಜೋ ಜೋ ಪ ತ್ರೇತೆಯಲಿ ರಾಮದೂತನಾಗಿ ನೀ ಬಂದು ಭೀತಿಯಿಲ್ಲದೆ ಲಂಕೆಯ ದಹಿಸಿದೆಯೊ ಅಂದು ಸೀತೆಯಿತ್ತಂಥ ಚೂಡಾಮಣಿಯನು ತಂದು ಪ್ರೀತಿಪಡಿಸಿದೆ ರಾಮನ ನೀ ದಯಾಸಿಂಧು 1 ದ್ವಾಪರಾಂತದಲಿ ಭೀಮನಾಗಿ ನೀ ಬಂದೆ ಪಾಪಿ ಕೀಚಕ ದುಶ್ಶಾಸನಾದ್ಯರ ಕೊಂದೆ ಸಿರಿ ಕೃಷ್ಣನ ಪಾದಕೆರಗಿ ನಿಂದೆ ಭಾಪು ಭಾಪುರೆಂದೆನಿಸಿಕೊಂಡೆ ಅವನಿಂದೆ 2 ನಾನೆ ದೇವರೆಂಬ ಮತವನು ಹೆಮ್ಮೆಯಿಂದ ದಾನವರೀ ಕಲಿಯುಗದಲಿ ಪೊಗಳೆ ಮುದದಿಂದ ನೀನವತರಿಸಿ ಮಧ್ವಮುನಿ ಪೆಸರಿನಿಂದ ಹೀನ ಮತವ ಮುರಿದೆಯೊ ವಾಗ್ಭಾಣಗಳಿಂದ 3 ಏಕಾದ್ಯಶ ಕರ್ಮಗಳ ಶ್ರೀ ಹರಿಗರ್ಪಿಸಿ ಆತನನು ನೀ ಬಹು ಸಂತೋಷವನುಪಡಿಸಿ ಜಾತರಹಿತನಾಗೆನುತ ಆಶಿಷವ ವಹಿಸಿ ವಾತಸುತ ಕುಳಿತಿಹೆ ಯಂತ್ರೋದ್ಧಾರನೆನಿಸಿ 4 ಕಂಗಳನು ಮುಚ್ಚಿ ಜಪಮಾಲೆಯನು ತಿರುಗಿಸುತ ರಂಗೇಶವಿಠಲನ ತಾನದೊಳು ಸ್ಮರಿಸುತ ಹಿಂಗೇಕೆ ಕುಳಿತಿಹೆ ಮಲಗೇಳಯ್ಯ ದಾತ ತುಂಗ ವಿಕ್ರಮ ನೀನು ತ್ರಿಭುವನದಿ ಪ್ರಖ್ಯಾತ 5
--------------
ರಂಗೇಶವಿಠಲದಾಸರು