ಒಟ್ಟು 25 ಕಡೆಗಳಲ್ಲಿ , 19 ದಾಸರು , 25 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ನಾರದ ಪ್ರಾರ್ಥನೆ) ನಾರದ ಮುನಿಯ ನಂಬಿರೋ ಸಜ್ಜನರೆಲ್ಲ ಪ. ನಾರದ ಮುನಿಯ ನಂಬಿ ಸೇರಿ ರಮೇಶನ ಘೋರದುರಿತ ಪರಿಹಾರಗೊಳಿಸುವಂಥ ಅ.ಪ. ಫಾಲದಿ ತಿಲಕ ನಾಮವು ಕಂಠದ ಮೇಲೆ ಜೋಲುವ ತುಳಸಿ ಮಾಲೆಯು ತಾಳ ವೀಣೆಗಳಿಂದ ಕಾಲಾನುಗುಣಸ್ವರ ಮಾಲೆ ತೋರುತ ಲಕ್ಷ್ಮೀಲೋಲನ ವಲಿಸಿದ 1 ವೇದೋಪನಿಷತ್ತುಗಳಗಾಂಧರ್ವ ವಿದ್ಯ ಹಾದಿಲಿ ತರಲು ಬಲ್ಲ ಬೋಧಿಪ ಪರತತ್ವ ವಾದವ ಸುರಕಾರ್ಯ ಸಾಧಿಸಿ ಹರಿಯ ಪ್ರಸಾದಕೆ ಪಾತ್ರನಾದ 2 ಪ್ರಲ್ಹಾದ ಧ್ರುವ ದ್ರೌಪದಿ ಮುಖ್ಯ ವೈಷ್ಣವ ರೆಲ್ಲರೀತನ ದಯದಿ ಎಲ್ಲ ಠಾವಲಿ ಲಕ್ಷ್ಮೀವಲ್ಲಭನಿಹನೆಂಬ ಸೊಲ್ಲ ತಿಳಿದು ಪರಮೋಲ್ಲಾಸ ಪಡೆದರು 3 ದೇವಾಸುರರ ಬಳಿಗೆ ಪೋಗುವ ತನ್ನ ಭಾವಾ ತೋರನು ಕಡೆಗೆ ಆವಾವ ಜನಕನುವೀವ ಮಾತುಗಳಾಡಿ ಪಾವನಾತ್ಮಕ ಹರಿ ಸೇವಾಫಲವ ಕೊಂಬ 4 ಬಂದನು ಕಲಿಯುಗದಿ ದಾಸರೊಳು ಪುರಂದರ ನಾಮದಲೀ ಮಂದಮತಿಯ ಕಳೆವಂದದಿ ಪ್ರಾಕೃತ ದಿಂದ ವೆಂಕಟಪತಿಯಂದವ ತಿಳಿಸಿದ 5
--------------
ತುಪಾಕಿ ವೆಂಕಟರಮಣಾಚಾರ್ಯ
3ಕಾಯೇ ಕಮಲಾಲಯೇ ಮಧು ಮಥನ ಸತಿಯೆ ಪ ಕಾಯಜಾತನ ತಾಯೆನಮಿಸುವೆ ಕಾಯೆ ತ್ರಿಜಗಕೆ ತೋಯ ಜಾಂಬಕಿ ಅ.ಪ ತೋಯಜಾಸನ ಮುಖ್ಯ ತ್ರಿದಶ ನಿ ಕಾಯ ಸಂಶೇವಿತಳೆ ಬೇಡುವೆ ಹೇಯ ವಿಷಯವ ಮರಸಿ ಹರಿಪದ ತೋಯಜಕೆ ಮನವೆರಗುವಂದದಿ 1 ಘೋರತರ ಸಂಸಾರ ಶ್ರಮ ಪರಿ ಹಾರ ಮಾಳ್ಪ ಸಮೀರ ಸಮಯದಿ ಸಾರವನು ಸುಜನರಿಗೆ ಬೋಧಿಪ ಸೂರಿಗಳ ಸಹವಾಸ ಪಾಲಿಸಿ 2 ಭಾರ್ಗವಿಯೆ ಕಾಮಾದಿ ಷಡ್ರಿಪು ವರ್ಗವನು ಗೆಲುವದಕೆ ಗುರುಗಳ- ನು ಗ್ರಹಿಸಿ ಸುಜ್ಞಾನ ಭಕುತಿ ವೈ ರಾಗ್ಯ ವೆಂಬುವ ಭಾಗ್ಯ ಒದಗಿಸಿ 3 ರಾಮನರಸಿಯೆ ನಿಮ್ಮ ಶುಭಪದ ತಾಮರಸವನು ಬಿಡದೆ ಪೂಜಿಪ ಕಾಮಿನೀ ಜನ ಸ್ತೋಮಕನುದಿನ ಕಾಮಿತಾರ್ಥಗಳಿತ್ತು ಕರುಣದಿ 4 ಮಂಗಳಪ್ರದ ಕೃಷ್ಣವೇಣಿ ತ- ರಂಗ ಶೋಭಿತ ಕಾರ್ಪರಾಲಯ ವಿಹಂಗ ರಾಜ ತು ರಂಗ ಶ್ರೀ ನರಸಿಂಗ ನರಸಿಯೆ5
--------------
ಕಾರ್ಪರ ನರಹರಿದಾಸರು
ಈ ನೀಚಮನಸಿಗೆ ಮಾಡಲಿನ್ನೇನು ಥೂ ನಾಚಿಕಿಲ್ಲದಕೆ ಉಪಾಯವೇನು ಪ ಹರಿಚರಣ ಸ್ಮರಿಸುವುದು ಹರಿದಾಟ ಮರಿವಲ್ಲದು ಪಿರಿದುನುಡಿಯಾಡುವುದು ಕಿರಿಗುಣವ ಬಿಡದು ಪರಲೋಕ ಬಯಸುವುದು ನಿರುತದಿಂ ನಡಿವಲ್ಲದು ಶರಣರೊಡನೆನದಿಹ್ಯದು ಪರನಿಂದೆ ಬಿಡದು 1 ಜ್ಞಾನನುಡಿ ಪೇಳುವುದು ನಾನೆಂಬುದಳಿವಲ್ಲದು ಧ್ಯಾನದೊಳಗಿರುತಿಹ್ಯದು ಶ್ವಾನಕಲ್ಪನ್ಹಿಂಗದು ದಾನಗುಣ ಬೋಧಿಪುದು ಜೀನತ್ವ ತೊರಿವಲ್ಲದು ಆನಂದ ಬೇಡುವುದು ಹೀನಭ್ರ್ರಾಂತಿ ಬಿಡದು 2 ಸಾದುಪಥದಾಡುವುದು ಭೇದ ಕಡಿವಲ್ಲದು ವೇದಾಂತ ಕೇಳುವುದು ಸಾಧನಕೆ ಒಲ್ಲದು ಪಾದಭಕ್ತಿ ಬೇಡುವುದು ಕ್ರೋಧ ತೊಡಿವಲ್ಲದು 3 ನಾಮಭಜನೆ ಮಾಡುವುದು ತಾಮಸವ ತುಳಿವಲ್ಲದು ಸ್ವಾಮಿಯೊಲುಮೆ ಕೋರುವುದು ಪಾರತ್ವ ಬಿಡದು ಕಾಮಿತೊಲ್ಲೆನೆನ್ನುವುದು ಭಾಮೆ ಭೂಮಿಪ್ರೇಮ ಬಿಡದು ಕ್ಷೇಮ ಸದಾ ಬೇಡುವುದು ನೇಮನಿತ್ಯ ಒಲ್ಲದು 4 ಶಾಸನವ ಪೇಳುವುದು ತಾಸು ಸ್ಥಿರ ನಿಲ್ಲದು ನಾಶಜಗವೆನುತಿಹ್ಯದು ಕಾಸು ಒಲ್ಲೆನ್ನದು ದೋಷನಾಶನ ಜಗದೀಶ ಶ್ರೀರಾಮನಡಿ ದಾಸನಾನೆಂಬುವುದು ವಾಸನೆಯ ಬಿಡದು 5
--------------
ರಾಮದಾಸರು
ಏನೆಂದ್ಹೇಳಲಿ ತಂಗಿ _ ಏನೆಂದ್ಹೇಳಲಿ ತಂಗಿ _ ಏನೆಂದ್ಹೇಳಲಿ ರಂಗನ ಮಹಿಮೆಯ ಏನೆಂದ್ಹೇಳಲಿ ಪ ಘನ್ನಸಿರಿವಿಧಿ ಧ್ಯಾನಕೆ ನಿಲುಕದ ಅಗಣಿತ ಮಹಿಮೆಯ ಅ ಎಲ್ಲವ ಬಲ್ಲನು ಎಲ್ಲವ ಮಾಡುವ ಎಲ್ಲರ ಒಡೆಯನು ಇಲ್ಲದ ಸ್ಥಳವಿಲ್ಲ ಬಲ್ಲವರಿಲ್ಲವೆ ಫುಲ್ಲನಾಭನ ನಲ್ಲನು ಲಕ್ಷ್ಮಿಗೆ ಗೊಲ್ಲನು ಆದನೆ 1 ಅಂಗನೆ ಲಕ್ಷ್ಮಿಯ ಸೊಗಸಿಗೆ ನಿಲುಕದ ಅಂಗನೆ ಇಲ್ಲದೆ ಮಗನನು ಪಡೆದವ ಹಿಂಗದ ತಾನೆ ಅಂಗನೆ ಯಾದವ ರಂಗನ ಗೋಕುಲ ಹೆಂಗಳ ಕೂಡಿದನೆ2 ತಂದೆಯ ಕೊಂದನು ಕಂದನ ಸಲಹಿದ ಕಂದನ ಕೊಂದನು ತಂದೆಯ ಸಲಹಿದ ಬಂಧುಗಳೆನ್ನದೆ ಕೊಂದನು ವಂಶವ ತಂದೆಯು ಇಲ್ಲದೆ ಕಂದನು ಆಗುವನೇ 3 ದಾನವ ನೀಡಿದ ದಾನಿಯ ತುಳಿದನು ಮಾನವ ತೆಗೆದಾ ಹೀನನ ಸಲಹಿದ ದೀನರ ಸಲಹುವ ದಾನವರಳಿವನು ಜ್ಞಾನಿಗಮ್ಯನು ಮಾನಸ ಹಂಸನ 4 ಹಸಿವೆಯ ಅರಿಯದ ಅಸಮದೇವನು ಸೊಸಿಯು ನೀಡಿದ ಶಾಖವ ತಿಂದನೆ ಪಶುಪತಿ ಋಷಿಯನು ವಶವಾಗಿ ಮಾಡಿದ ಮಾಸದಮಹಿಮನು 5 ನಾಲ್ಮೊಗನಯ್ಯನು ಸುಳ್ಳನು ಹೇಳುತ ಕಳ್ಳನು ಆದನು ಗೊಲ್ಲರ ಭಕ್ತರಿಗೆ ಮೆಲ್ಲನೆ ಕುರುಕುಲ ಎಲ್ಲವ ಸವರಿದ ಬಲ್ಲಿದ ಕೃಷ್ಣಗÉ ಇಲ್ಲವೆ ಸಮರಧಿಕ 6 ಜಗವನು ಮಾಡುವ ಜಗವನು ಪಾಲಿಪ ಜಗವನು ಅಳಿಸುವ ಮಗುವಾಗಿ ಬಂದನೆ ಜಗಜೀವ ಭಿನ್ನನು ಜಗದೊಳು ವ್ಯಾಪ್ತನು ನಗುತಲಿ ಬಾಯಲಿ ಜಗವನು ತೋರಿದನೆ7 ಯಾಗವ ನಡೆಸಿದ ಯಾಗವ ಕೆಡಿಸಿದ ಯೋಗವ ಚರಿಸುತ ಯೋಗವ ಬೋಧಿಪನೆ ಬಾಗುವ ಭಕ್ತರ ನೀಗುವ ಕಲುಷವ ಆಗಮವಂದಿತ ಸಾಗರಶಯನನೆ8 ಹತ್ತವತಾರವ ನೆತ್ತಿದ ಮಹಿಮನು ಉತ್ತಮ ಭಕುತರ ತೆತ್ತಿಗನಾದನೆ ಬತ್ತಲೆ ಶಿಶುವಾಗಿ ಬಿತ್ತಿದ ಮೋಹವ ಬೆಸ್ತರಕುವರಿಗೆ ಆತ್ಮಜನಾದವನೆ9 ಚಕ್ರವಪಿಡಿದವ ನಕ್ರನ ತರಿದವ ಶಕ್ರನಕಾಯ್ದವ ವಕ್ರೆಯ ಕೂಡಿದನೆ ರಕ್ಕಸಯವನನ ಠಕ್ಕಿಲಿ ಅಳಿಸುತ ಭಕ್ತನಪೊರೆದಾ ಯುಕ್ತಗಳೊಡೆಯನೆ 10 ನಾರೆಂದೊದರಿದ ಉರುತರ ಪಾಪಿಯ ಭರದಿಂಪೊರೆಯೊ ಕರುಣಾಸಾಗರನೆ ನರಹರಿದೇವನು ಪರಿಪರಿರೂಪನು ಪರಿಪರಿಲೀಲೆಗೆ ಮೇರೆಯೆ ಇಲ್ಲಾವೇ 11 ವಾರಿಯಲಾಡುವ ಭಾರವ ಹೊರುವಾ ಕೋರೆಯ ತೀಡುವ ಘೋರವ ತೋರುವನೇ ವೀರರತರಿಯುವ ಕ್ರೂರರಸವರುವ ಜಾರನು ಆಗುವ ವೈರಿಗಳ್ವಂಚಿಪ ಏರುವ ತೇಜಿಯನೆ 12 ಅದ್ಬುತ ರೂಪವ ಕದನದಿ ತೋರಿದ ಬದರಿಯನಿಲಯಗೆ ತುದಿಮೊದಲಿಲ್ಲಾವೆ ಉದರದಿ ಮಗುವನು ಮುದದಿಂಸಲಹಿದ ಮುದಮುನಿ ಪ್ರಿಯನು ಹೃದಯದಿ ವಾಸಿಪನೆ 13 ವಿಷವನು ಕುಡಿದಾ ವೃಷಭವಾಹನ ಅಸುರನ ಭಯದಿಂ ಘಾಸಿಲಿ ಓಡುತಿರೇ ಮೋಸದಿ ಯುವತಿಯ ವೇಷವ ಧರಿಸುತ ಪಶುಪತಿ ಸಲಹಿದನೇ 14 ಭರದಿಂ ರಥವೆತ್ತಿ ನರನಂ ಕಾಯ್ದನು ಧರಣಿಯ ಒತ್ತುತ ಕುರುಪನ ಕೆಡಹಿದನೇ ಮರೆಸುತ ರವಿಯನು ಪೊರೆದನು ಚೇಲನ ಸುರವರಪೋಷಕ ಸಿರಿಪತಿ ಚದುರನ 15 ಗಂಗೆಯಪಡೆದ ಮಂಗಳ ಮಹಿಮನು ಹಿಂಗದೆ ಗೋಪರ ಸಂಗಡ ಆಡಿದನೇ ತಿಂಗಳ ಬೆಳಕಲಿ ಶೃಂಗರ ಸೊಬಗನು ಹೆಂಗಳ ಕೂಡುತ ಸಂಗೀತ ಪಾಡಿದನೆ 16 ಕಾಳಿಯ ಫಣೆಯಲಿ ಕಾಳಿಂದೀಶನು ತಾಳಕೆ ಕುಣಿಯುತ ಕೊಳಲನ್ನೂದಿದನೆ ಘೂಳಿಗಳಳಿಯುತ ನೀಲಳತಂದವ ಊಳಿಗ ಮಾಡಿದನೇ 17 ನಾರಿಯು ಮೊರೆಯಿಡೆ ಸೀರೆಯನೀಡಿದ ವಾರಿಜಾಕ್ಷನು ಸೀರೆಯ ಚೋರನೆ ನೀರೊಳು ಮುಳುಗಿದ ಪೋರರಿಗೆಲ್ಲ ತೋರಿದ ಜಗವನು ಸೂರಿಗಳೊಡೆಯನೆ 18 ಗರುಡನ ಏರುವ ಧರಣಿಯ ರಮಣನು ಏರುತಹುಡುಗರ ತುರುಗಳ ಕಾಯ್ದನೆ ಮಾರನಪಡೆದ ಮುರಹರಕೃಷ್ಣನು ಗಿರಿಯನು ಎತ್ತುತ ಹರುಷವ ಬೀರಿದನೇ 19 ಶೃತಿಗಳು ಪೊಗಳುವ ವ್ಯಾಪ್ತನ ನಿತ್ಯನ ಪಾತಕ ಹೋಗುವುದೇ ಅಂತಕ ಗತಿ ಮತಿ ಪ್ರೇರಕ ದಾತನು ಎಂತೆನೆ ಪ್ರೀತಿಲಿ ಸಲಹುವನೆ 20 ಮಜ್ಜಿಗೆ ಕಡೆಯುವ ರಜ್ಜುವಿನಿಂದಲಿ ಮೂರ್ಜಗನಯ್ಯನು ಕಟ್ಟಿಸಿಕೊಂಡಾನೆ ಲಜ್ಜೆಯ ಬಿಡುತಲಿ ಗೆಜ್ಜೆಯ ಕಟ್ಟುತ ಘರ್ಜಿಸಿ ಪಾಡಲು ಹೆಜ್ಜೆಯ ತೋರುವನೆ 21 ದಾಸರ ಪೋಷಿಪ ಶೇಷಗಿರೀಶನ ವಿಶೇಷವೆ ಬಣ್ಣಿಸೆ ಶೇಷಗೆ ಆಗದೆ ದೋಷವು ಇಲ್ಲದ ವಾಸುದೇವನೆ ತೋಷವ ನೀಡುವ ಸಾಸಿರ ನಾಮಕನೆ22 ಜಯಮುನಿ ಅಂತರ ವಾಯುವಿನಲ್ಲಿಹ ಜಯಕೃಷ್ಣವಿಠಲನು ಜೀಯನೆ ಜಗಕೆಲ್ಲ ನಯಭಯದಿಂದಲಿ ಹಯಮುಖನೊಲಿಸಲು ಭಯವನು ಹರಿಸುತ ನ್ಯಾಯದಿ ಪಾಲಿಪನೇ 23
--------------
ಕೃಷ್ಣವಿಠಲದಾಸರು
ಗುರು ಪ್ರಜ್ಞಾನಿಧಿ ತೀರ್ಥ ಚರಣಾಬ್ಜ ಸೇವೆಯ ನಿರುತ ನೀಡಯ್ಯ ಯತಿವರ್ಯ ಯತಿವರ್ಯ ಪೂರ್ಣಪ್ರಜ್ಞಾರ್ಯರ ತತ್ತ್ವವರುಹಯ್ಯ ಅರುಹಯ್ಯ 1 ಕರುಣಾನಿಧಿಯೆ ನಿನ್ನ ಕಾರುಣ್ಯಕೆಣೆಯೆ ಶ್ರೀ ಕಾರುಣ್ಯ ವಿಠಲನಾ ದಯಾಪಾತ್ರ ದಯಾಪಾತ್ರ ಎನ್ನ ತಾಪತ್ರಯವ ಎನ್ನ ತಾಪತ್ರಯವ ಹರಿಸಿ ಸಲಹಯ್ಯ 2 ಶರಧಿ ದಾಟಿದ ಧೀರಾ ಗುರುತೂರ್ಯ ಶ್ರಮವಹಿಸಿ ಮೆರೆಯುವೆ ಮೆರೆಯುವೆ 3 ಮಾರ್ಗದೊಳು ಬರುತಿಹ ದುರ್ಮಾರ್ಗವನು ಜರಿದು ಸ ಯತಿವರ್ಯ ಎನ್ನ ಭವ ದುರ್ಗವನೆ ಹರಿಸಿ ಸಲಹಯ್ಯ ಸಲಹಯ್ಯ 4 ಗುರುವೆ ನಿನ್ನಯ ಕರುಣ ಕವಚವನೆ ತೊಡಿಸಯ್ಯ ಕಾರುಣ್ಯ ವಿಠಲನ ಅರ್ಚಿಪೆ ಅರ್ಚಿಪಾ ನಿನ್ನೊಳು ಕರುಣಾರಸಕೆ ಕುಂದುಂಟೆ ಕುಂದುಂಟೆ 5 ಹಿಂದಿಲ್ಲ ಮುಂದಿಲ್ಲ ಒಂದು ಬೋಧಿಪೋರಿಲ್ಲ ಮುಂದೆ ಬಾ ಎನ್ನುವರು ಮೊದಲಿಲ್ಲ ಮೊದಲಿಲ್ಲ ಇಂದು ನಾ ಮಂದನಾಗಿಹೆ ಎನ್ನ ಕರುಣಿಸೋ ಕರುಣಿಸೋ 6 ಬಂದುದಾಯಿತು ಜನ್ಮ ಸಂದು ಹೋಯಿತು ಆಯು ಕುಂದಿತೆನ್ನಯ ಕರಣ ಇಂದಿನಾ ಇಂದಿನಾ ಪರಿ ಪಥವೆನಗೆ ತೋರಯ್ಯ ತೋರಯ್ಯ7 ಮಂಕು ಮಾನವನ ಮನ ಡೊಂಕವನೆ ತಿದ್ದಿ ಶ್ರೀ ವೇಂಕಟೇಶನ ಭಕ್ತನೆನಿಸಯ್ಯ ಎನಿಸಯ್ಯ ನಿನ್ನಾ ಕಿಂಕರೊಳಗೆ ಕಿಂಕರನೆನಿಸಯ್ಯ 8 ಕಾರುಣ್ಯವಿಠಲಾಭಿನ್ನ ಶ್ರೀ ಉರಗಾದ್ರಿವಾಸವಿಠಲನ ನಿಜದಾಸ ನಿಜದಾಸ ನೀ ಪರಮೋದಾರ ಗುರುವರ್ಯ ಯತಿವರ್ಯ 9
--------------
ಉರಗಾದ್ರಿವಾಸವಿಠಲದಾಸರು
ತೊರೆದು ಜೀವಿಸಬಹುದೆ ಗುರು ನಿಮ್ಮ ಚರಣವ ಪ. ಬರಿಯ ಮಾತಲ್ಲವಿದು ಜರಿದು ನುಡಿವೆ ಕರಕರೆಗೊಳಿಸದೆ ಕಾಯಬೇಕಿನ್ನು ಗುರು ಅ.ಪ. ಅತಿಶಯ ಮಹಿಮೆಯ ಹಿತದಿಂದ ತೋರಿದ ಪಿತನಂತೆ ಪೊರೆಯುವಚ್ಯುತ ದೂರ ಪದವೀವ ಮತಿವಂತರೆ ನಿಮ್ಮ ಕ್ಷಿತಿಯೊಳಗಲಲಾರೆ1 ನೀತಿಯ ಬೋಧಿಪ ಖ್ಯಾತಿ ಶ್ರೀ ಗುರುಗಳೆ ದೂತರಾದವರನು ಈ ತೆರ ಮಾಳ್ಪರೆ ಪಾತಕರಹಿತರೆ ಪ್ರೀತಿಯ ತೋರಿರಿ2 ಬಂದಿರಿ ಮಮತೆಲಿ ಕಂದರಂದದಿ ತಿಳಿದು ಇಂದಿರೇಶನ ತತ್ವಾವೃಂದಗಳರುಹುತ ಮಂದಿಗಳಿಗೆ ಆನಂದವನೆ ತೋರ್ದಿರಿ 3 ಎಲ್ಲಿ ಭಕ್ತರು ಕರಿಯೆ ಅಲ್ಲಿಗೆ ಬರುವ ಗುರುವೆ ಇಲ್ಲಿ ನಿಮ್ಮ ಹೊರತು ಇಲ್ಲವು ಇನ್ನೊಂದು ಒಲ್ಲೆನು ಈ ಜಗದ ನಿಲ್ಲದ ವಸ್ತುಗಳು 4 ಗೋಪಾಲಕೃಷ್ಣವಿಠ್ಠಲ ತಾ ಪರಿಪರಿ ಲೀಲ ವ್ಯಾಪ್ತ ಶ್ರೀ ಗುರು ಸಹ ಶ್ರೀಪತಿ ಹೃದಯದಿ ತೋರ್ಪಂತೆ ಕೃಪೆ ಮಾಡಿ ಕಾಪಾಡಬೇಕೊ ದೊರಿ 5
--------------
ಅಂಬಾಬಾಯಿ
ತ್ವರದಿ ಭಜಿಪೆ ನಮ್ಮ ಗುರುಪಾದಾಂಬುಜ ಕೆರಗುತಲನುದಿನ ಭಕುತಿಯಲಿ ಪ ನೆರೆನಂಬಿದವರ ಬಿಡದೆ ಪೊರೆವರೆಂಬ ಉರುತರ ಕೀರ್ತಿಯ ಸ್ಮರಿಸುತಲಿ ಅ.ಪ ಭವ ಬಂಧನದಿ ಬಳಲುವ ಮಂದಿಗಳನು ಉದ್ಧರಿಸುವರ ಮಂದಮತಿಗಳಾದರು ನಿಂದಿಸದಲೆ ಮುಂದಕೆ ಕರೆದಾದರಿಸುವರ ಬಂಧು ಬಳಗ ಸರ್ವಬಾಂಧವರಿವರೆಂದು ಒಂದೆ ಮನದಿ ಸ್ಮರಿಸುವ ಜನರ ಕುಂದುಗಳೆಣಿಸದೆ ಕಂದನ ತೆರದೊಳು ಮುಂದಕೆ ಕರೆದಾದರಿಸುವರ 1 ಗುಪ್ತದಿಂದ ಶ್ರೀಹರಿನಾಮಾಮೃತ ತೃಪ್ತಿಲಿ ಪಾನವ ಮಾಡಿಹರ ನೃತ್ಯಗಾಯನ ಕಲಾನರ್ತನದಿಂ ಪುರು- ಷೋತ್ತಮನನು ಮೆಚ್ಚಿಸುತಿಹರ ಸರ್ಪಶಯನ ಸರ್ವೋತ್ತಮನನು ಸರ್ವತ್ರದಲಿ ಧ್ಯಾನಿಸುತಿಹರ ಮತ್ತರಾದ ಮನುಜರ ಮನವರಿತು ಉ- ನ್ಮತ್ತತೆಯನು ಪರಿಹರಿಸುವರ2 ಕಮಲನಾಭ ವಿಠ್ಠಲನು ಪೂಜಿಸಿ ವಿಮಲಸುಕೀರ್ತಿಯ ಪಡೆದವರ ಶ್ರಮಜೀವಿಗಳಿಗೆ ದಣಿಸದೆ ಮುಂ- ದಣಘನ ಸನ್ಮಾರ್ಗವ ಬೋಧಿಪರ ನವನವ ಲೀಲೆಗಳಿಂದೊಪ್ಪುವ ಹರಿ ಗುಣಗಳನ್ನು ಕೊಂಡಾಡುವರ ನಮಿಸಿಬೇಡುವೆ ಉರುಗಾದ್ರಿವಾಸ ವಿ-ಠ್ಠಲದಾಸರು ಎಂದೆನಿಸುವರ 3
--------------
ನಿಡಗುರುಕಿ ಜೀವೂಬಾಯಿ
ನಡತೆಯನೆಣಿಸಿದರೆ ಗುಣವೇನು ತೃಣಕುಕಡೆಯಾಗುವಲ್ಲಿ ಸಂದೇಹವಿಲ್ಲ ಪನೀನು ಹಿಂದೆಗೆಯೆ ಕಣ್ಣು ಕಾಣದೆಂಬೆಯಲ್ಲೋ ುೀಗಕಾಣು ಕಿಮಿಂದ ರೂಪ ಜಾಣೆಯ ಮಗನೆ 1ಕೇಳು ಮೂಗಿನಿಂದಾ ನುಡಿಯ ತಾಳು ಗಂಧವ ಬಾುಂದಾಹೇಳು ಮಾತ ಕಣ್ಣಿನಿಂದಾ ಕೂಳುಗೊಂಬೆ 2ನಡೆಯೊ ಕೈುಂದ ಕಾಲಿಂ ಪಿಡಿಯೊಗುದದಲುಣ್ಣೋ ಪಡೆಯೊ ನೀನುಪಸ್ಥೆಯ ಬಿಟ್ಟಾನಂದವಾ 3ವಾಕಿನಿಂ ವಿಸರ್ಗವನ್ನು ಸೋಕಿಸೊ ಸ್ಪರ್ಶವ ನೀನುತಾಕದೊಲ್ ತ್ವಗಿಂದ್ರಿಯವ ಕಾಕಿ ಮನವೆ 4ಜೀವನು ಕುರುಡನೇನೊ ಪ್ರಾಣಗಳ್ [ಕೊ]ರಡುಗಳೇನೊಯಾವಗವು ನೀನೊರ್ವ ಬಾಳುವೆಯೇನೊ 5ಕಾದಿ ಮನೆಗೆ ಕೇಡು ತಾ ದರಿದ್ರತೆಗೆ ಬೀಡುಸಾಧುವಾಗಿ ನಮ್ಮೊಳಾಡು ಕೆಡಬೇಡ ನೋಡು 6ಹತ್ತು ದಾರಿಯೊಳಾಡುವೆ ಗೊತ್ತಿಗೆ ನೀನಿಲ್ಲದಿರೊಮತ್ತನಾಹೆ ಕೆಣಕಲು ಸತ್ತವನಂತೆ 7ನಿನ್ನ ಹತ್ತಿರೆ ದೈವವು ಬನ್ನ ಬಡಿಸಲೆಮ್ಮನುಕಣ್ಣುಗಾಣದೆ ಸೇರಿಸಿತು ಕಾಲಗತಿುಂದಾ 8ತಿರುಪತೀಶನೊಲವನು ಸರಸದಿಂ ಸಾಧಿಪ ನೀನುತೊರೆಯಲೆಮ್ಮ ತಿಳಿದುದು ಜಾಣುಮೆ ತಾನು 9ಕಂ||ಕರಣಗಳಾಡಿದ ಮಾತನು ಹರುಷದಿ ಕೇಳುತ್ತ ಜೀವ ತನು ಸಹ ಮನಮಂ ಪರಿಪರಿ ವಿಧದಲಿ ಬೋಧಿಪ ಪರಿುಂ ದೂಸಿದನಾಗ ನಾಚುವ ತೆರದಿಂ
--------------
ತಿಮ್ಮಪ್ಪದಾಸರು
ನೀಚಮತಿ ಎಲೆ ನೀಚಮತಿ ಊಚನೆನಿಸಿಕೊಂಬ ಯೋಚನೆ ಬಿಡುಕಂಡ್ಯ ಪ ತರಿಯದೆ ಕುಟಿಲತ್ವ ಮರೆಯದೆ ದುಶ್ಚಟ ಧರೆಯ ಭೋಗವ ನೆಚ್ಚಿ ಶರಣರ್ವೇಷÀವÀ ತಾಳಿ ಮರವೆ ಮಾಯದಿ ಬಿದ್ದು ಒರಲುವ ನರರಿಗೆ ಬರಿದೆ ಬೋಧಿಪೆನೆಂಬ ಭ್ರಮೆಯಿಂದ ಫಲವೆ 1 ಮಾಯಮೋಹಿಗಳ ಉಪಾಯದಿ ಕೂಡಿಸಿ ಸೇವಿಸದಾಹಾರ ಸೇವಿಸುತನುದಿನ ಕಾಯಬಲಿಸಿ ಕುಣಿವ ಮಾಯಮೋಹಿಯ ಬರಿ ಬಾಯ ಬ್ರಹ್ಮತ್ಯಬಂಧ ಬಯಲಪ್ಪುದೇನೆಲೆ 2 ಧರಿಸಿದ ಲಾಂಛನ ಅರಿಯದೆ ಮೇಲೆ ನೀ ಬರಿದೆ ಕಾವಿಯನ್ಹೊದ್ದು ಕರದಿ ಕಮಂಡಲ ಧರಿಸಿ ಮರುಳರಿಗೆಲ್ಲ ಪರತತ್ತ್ವವರಿಯಲು ಜರೆಮರಣದು:ಖವು ಪರಹಾರಮೆಂತೆಲೆ 3 ಭವಭವದಲಿ ಬಟ್ಟಬವಣೆಯ ಸ್ಮರಿಸಿದೆ ಭವಗೆಲಿಸುವ ಅನುಭವ ತಿಳಿಯದೆ ಸ ದ್ಭವಿಗಳ ನೆರೆಯಿಸಿ ಕವಿತೆ ಬಿಡಿಸಿ ಬಹು ಸವಿಮಾತ್ಹೇಳಲು ಮೂಲಭವಭೀಜಳಿಯುವುದೆ 4 ತನ್ನ ತನ್ನದುಯೆಂಬ ಭಿನ್ನವಿಲ್ಲದೆಸದಾ ತನ್ನ ಸ್ವರೂಪ ಪರರನ್ನು ಬಗೆದು ನಿತ್ಯ ಸನ್ನುತ ಶ್ರೀರಾಮನುನ್ನತಂಘ್ರಿಗೆ ಪೊಂದಿ ಧನ್ಯರಾಗದೆ ನರಕುನ್ನಿಯೆನಿಸುವರೇನೋ5
--------------
ರಾಮದಾಸರು
ನೋಡಿದ್ಯಾ ಈ ದೇಹಕೆ ಬಂದು | ನೋಡಿದ್ಯಾ ನೋಡಿದ್ಯಾ |ನೋಡದವನ ನೀ ನೋಡುವೆ ಎಂದರೆ | ನೋಡುವಿ ಎಂದಿಗೆ ನೋಡಿದ್ಯಾ ಪ ಒಬ್ಬವರ್ಯಾರೂ ತೋರುವದಲ್ಲ | ತೋರಿಸಿಕೊಂಡರದು ತಾನಲ್ಲ | ತೋರಡಗುವದಕೆ ಮೀರಿರುವದು ಎಂದು | ಸಾರುತಿಹುದು ಶ್ರುತಿಸಾರವೆಂದು 1 ರೂಪವನ್ನು ಕಲ್ಪಿಸಲಿಲ್ಲಾ | ಚಿದ್ರೂಪವನು ಸರ್ವರೊಳೆಲ್ಲಾ | ಪಾಪ ಪುಣ್ಯಕೆ ವ್ಯಾಪಕನಾದ | ದೀಪ ಪ್ರಕಾಶನ ಬೋಧಿಪ ಬಲ್ಲಾ 2 ಕರೆದರೆ ಎತ್ತೆತ್ತ ಬಾರ ಮತ್ತೆ | ಮರೆದರೆ ಎತ್ತೆತ್ತ ಹೋಗನು ದೂರ | ಗುರು ಭವತಾರಕ ಶಿರದೊಳು ಕರವಿಟ್ಟು | ವರದ್ಹೇಳಿದ ವಸ್ತು ಪರಿಪೂರ್ಣವಾಗೆ 3
--------------
ಭಾವತರಕರು
ಬಿಡಲಾರೇ ಬಿಡಲಾರೇ ಪ ಕಡಲೊಳು ಪವಡಿಪ ಮೃಡನುತನಾಮನ ಅ.ಪ ಕಾಶಿಯೊಳಗೆ ವಿಶ್ವೇಶನು ಬೋಧಿಪ ದಾಶರಥಿಯ ವರ ಸಾಸಿರ ನಾಮವ 1 ಗೌರವದಿಂದಲಿ ಗೌರಿಯು ಜಪಿಸುವ ಗೌರನೆನಿಪದುರಿತಾರಿಯ ನಾಮವ 2 ಭಕ್ತರು ಸಕಲ ವಿರಕ್ತರು ನಿತ್ಯದಿ ರಕ್ತಿಪಡುವ ಗುಣಯುಕ್ತನ ನಾಮನ 3 ಇಷ್ಟದಿ ನೆನೆವರ ಕಷ್ಟವಳಿದು ಮನ ದಿಷ್ಟ ಕೊಡುವ ಪರಮೇಷ್ಟಿಯ ನಾಮವ 4 ಚರಣವ ನಂಬಿದ ಶರಣರ ಪೊರೆಯುವ ವರದವಿಠಲ ದೊರೆ ವರದನ ನಾಮವ 5
--------------
ವೆಂಕಟವರದಾರ್ಯರು
ಮಾನವ ಮೂಢಾ | ಕೇಳದೆ ನೀ ಕೆಡಬ್ಯಾಡಾ | ಶೀಲವರಿತುಕೋ ದೃಢಾ | ಹೇಳುವೆ ನಿಜ ಹಿತ ನೋಡಾ ಪ ಹಾದ್ಯರಿಯದೆ ಪ್ರಚಂಡಾ ಓದಿಕೆ ಯಾಕ ಉದಂಡಾ | ಸಾಧಿಸೋ ಸಾಧನ ಕಾಂಡದ ಬೋಧಿಪ ಮಾರ್ತಾಂಡ | ವಾದ ವಿತ್ತಂಡ ಬಿಡು ಪಾಷಂಡಾ 1 ಹರಿಗುಣ ಕೊಂಡಾಡು ನೀ ಅಖಂಡಾ ಕೇಳು ಕೇಳು ಪ್ರಾಣಿ | ಕರಣ ತ್ರಯಂಗಳ ಬೆರಿಸಿ ಮೊರೆಹೋಗಾಭಾವನೆ ಬಲಿಸಿ | ಗುರುವಿಗೆ ಭಾರೊಪ್ಪಿಸಿ ಇರು ಸಂಶಯವಾ ತ್ಯಜಿಸಿ | ನೆರೆ ಜೌಭಾಗಿಸಿ ತನ ಬಿಡು ಹೇಸಿ ಕುಜನ ದುರಾಶೀ ನದಿಯೊಳು ಸೋಸಿ 2 ಗರುವ ಮುರಿದು ನಿದ್ರ್ವಂದಾ ಚರಿಸಿ ಹಿರಿಯರ ವೃಂದಾ | ಪರಿಯಲಿ ನಡಿನೀ ನೆಂದಾ ಗುರುವರ ಮಹಿಪತಿ ಕಂದಾ | ಪಡದರ ಬಂದಾ | ಜನ್ಮಕ ಛಂದಾ ನೋಡಿದರಿಂದಾ ಕೇಳು ಪ್ರಾಣಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಯತಿವರೇಣ್ಯರ ಮನುಜ ಸತತ ಭಜಿಸೆಲೊ ಪ ಸತತ ವಿಮಲ ಚರಿತ ಸತ್ಯವತಿಯ ಸುತರ ಮನವರಿತ ಅ.ಪ ಅಜಜನಕನ ಮಹಿಮೆ ಮರೆತು ಸುಜನರೆಲ್ಲ ಬಳಲುತಲಿರೆ ಭುಜಗಶಯನನಾಜ್ಞೆಯಿಂದ ರಜತಪುರದೊಳವತರಿಸಿದ 1 ವಾಸುದೇವ ನಾಮದಿಂದ ಶೈಶವವನು ಕಳೆದು ತುರಿಯ ಆಶ್ರಮವನು ಸ್ವೀಕರಿಸಿದ 2 ಜೀರ್ಣವಾದ ನಿಗಮಾರ್ಥಗಳ ನಿರ್ಣಯಿಸಿದ ಜ್ಞಾನಾನಂದ ಪೂರ್ಣವ್ಯಾಸರೊಳ್ ಶ್ರವಣಮಾಡಿ ಪೂರ್ಣಪ್ರಜ್ಞರಾಗಿ ಮೆರೆದ3 ನರಿಯುತಕುತಿಗಳಿಂದ ಬೋಧಿಪ ದುರುಳವಾದಗಳನು ಮುರಿದು ಹರಿಸರ್ವೋತ್ತಮನೆಂದರುಹಿದ4 ಶುಕ್ತಿರಜತ ಜ್ಞಾನದಂತೆ ವಿಶ್ವವೆಲ್ಲ ಮಿಥ್ಯಾವೆಂಬೊ ಯುಕ್ತಿಗಳನೆ ಖಂಡಿಸಿ ಜಗತ್ ಸತ್ಯವೆಂದು ದೃಢದಿ ತೋರಿದ 5 ಬ್ರಹ್ಮನು ಗುಣಶೂನ್ಯನೆಂದು ದುರ್ಮತಗಳ ಹರಡುವವರ ಹಮ್ಮು ಮುರಿದು ಜಗದಿ ಶಾಸ್ತ್ರ ಮರ್ಮಗಳನು ವಿವರಿಸಿದ 6 ದೂಷ್ಯವಾದ ಇಪ್ಪತ್ತೊಂದು ಭಾಷ್ಯಗಳನು ಮುರಿದು ಶುದ್ಧ ಸಾರ ಪೇಳಿದ 7 ಶ್ರವಣ ಮನನ ಧ್ಯಾನಗಳಿಂ ಸಿರಿರಮಣನ ಜ್ಞಾನ ಪೊಂದಿ ವರ ಕರುಣವ ಪಡೆಯುವುದೇ ನಿರತ ಸುಖಕೆ ಪಥವೆಂದರುಹಿದ 8 ಹನುಮ ಭೀಮ ಮಧ್ವ ರೂಪದಿ ರಾಮ ಕೃಷ್ಣ ವೇದವ್ಯಾಸರ ನಿರತ ಸೇವೆ ಮಾಡಿ ಶ್ರೀಹರಿಯೊಲಿಮೆಯಿಂದ ಪ್ರಸನ್ನರಾದ 9
--------------
ವಿದ್ಯಾಪ್ರಸನ್ನತೀರ್ಥರು
ಲೇಸಾಗಿ ಭಜಿಸುವೆ ಗೋಪಾಲದಾಸರ ರಾಶಿ ದುರಿತಂಗಳಾ ಪ ವಾಸವಾ ಪಿಡಿದ ವಜ್ರವೀಗಿರಿಯಂತೆ ನಿಶ್ಶೇಷದಿ ಭೇದಿಪರೊಇವರು ಅ.ಪ. ಸತಿ ಗಿರಿವಾಸ ನಾಮಕಳಾ ಸುರುಚಿರೋದರವೆಂಬೊ ಶರನಿಧಿಯಲ್ಲಿ ಚಂದಿರನಂತೆ ಉದಿಸಿಹರೋ ಇವರು 1 ಸದಮಲಮನದಲ್ಲಿ ಪದುಮನಾಭನ ನಾಮ ಪದೋಪದಿಯಲ್ಲಿ ಬಿಡದೇ ಪದರೂಪದಲ್ಲಿ ಪೊಗಳುವೊ ಸುಜನರಿಗೆ ಮೋಹವನುಣಿಸುತಿಹರೊ ಇವರು 2 ವಿಜಯದಾಸರೇ ತಮ್ಮ ನಿಜಗುರುಗಳೂ ಎಂದು ಭಜಿಪರೋ ಭಕುತಿಯಲ್ಲಿ ದ್ವಿಜವರ್ಯ ಜನಕಿಷ್ಟ ಸೃಜಿಸೋರು ಕಲ್ಪ ಭುಜದಂತೆ ನಿರುತದಲ್ಲಿ ಇಲ್ಲಿ 3 ತೊಂಡ ಪ್ರಹ್ಲಾದ ಪ್ರಿಯನ ಮಂಡಲ ಯತಿಗಳ ಬೆಳೆಪ ಯಾತ್ರೆಗಳ ಕೈಕೊಂಡು ಸೇವಿಸುತಿಹರೊ ಇವರು 4 ಭಕುತಿ ಪ್ರಾಚುರವಾಗೆ... ಹರಿನಾಮಪ್ರಕಟಿಸಿ ಕವನದಿಂದಾ ನಿಖಿಳಾಭೀಷ್ಟವನೀವ ಲಕುಮೀಪತಿಯೇ ಎಂದು ಭಕುತಗೆ ಬೋಧಿಪರೊ ಇವರು 5 ಆವಾವ ಕ್ರಿಯೆಗಳಲ್ಲಾವಾವ ಕಾಲದಿ ತಾವದಗಿನ್ನು ಹರಿಕಾವ ಸುಜೀವರ ಈ ವಿಧವೆಂದು ತನ್ನವರಿಗುಪದೇಶಿಪಾ6 ಭವ ತೋಯದಿ ಕಡೆಗೆತ್ತುವಾ . 7 ಸುಜನ ಜನರ ಕಾಯಕ್ಲೇಶವ ಕಳೆದು ಮಾಯಾರಮಣನ ವಲಿಸುವಂಥ ದಿವ್ಯ ಉಪಾಯವ ತೋರಿಪರೊ ಇವರು 8 ಮಂದ ಮನುಜ ನಾನು ಒಂದೊಂದಿವರ ಗುಣವೃಂದ ಪೊಗಳಲೊಶವೇ ತಂದೆ-ವರದಗೋಪಾಲವಿಠ್ಠಲನ ಹೊಂದಿ ಸೇವಿಪ ಗುರುವೇ 9
--------------
ತಂದೆವರದಗೋಪಾಲವಿಠಲರು
ಶಿಖರಪುರ ದಾಸಾರ್ಯ ವಂಶದಿ ಶಶಿಯಂತೆ ಉದಿಸಿದ ಶ್ರೀನಿವಾಸಾರ್ಯರೆಂಬ ಪ್ರಚಲಿತ ನಾಮದ ದಾಸಾರ್ಯರ ಚರಿತೆ ಗುರುಗಳ ದಯದಿಂದ ಅರಿತಷ್ಟು ಪೇಳುವೆ ಬುಧ ಜನರು ನಿಷ್ಕಪಟ ಭಾವದಿಂದಲಿ ಕೇಳಿ ಸಿರಿಗುರುತಂದೆವರದಗೋಪಾಲವಿಠ್ಠಲನ ಭಕ್ತರೊಳಗಿವರೊಬ್ಬರು ಕಾಣಿರೊ 1 ಶ್ರೀ ರಮೇಶಕೃಷ್ಣನು ತನ್ನ ಪರಿವಾರ ಸಹಿತಾಗಿ ಓಲಗದಿ ಕುಳಿತಿರಲು ಸಾವಧಾನದಿ ತಾನು ಶ್ರೀದೇವಿ ಋಷಿಯಾಜ್ಞೆಯಿಂದಲಿ ಬಂದು ಶಿರಬಾಗಿ ಧರಣಿಯೊಳು ಭಾಗವತರ ಮಹಿಮೆತಿಳಿದು ಸಾಧನೆಗೈಯ್ಯಬೇಕೆಂಬ ಕುತೂಹಲದಿಂದ ದೇವಾಂಶರ ಬಿಡದೆ ಅವತಾರ ಮಾಡಿದ ಪವಿತ್ರವಂಶದಿ ಬಹುಕಾಲ ಪುತ್ರಾಪೇಕ್ಷೆಯಿಂದಲಿ ಶ್ರೀನಿವಾಸನ ಸೇವೆಗೈದ ಮಾತೆ ಶ್ರೀ ರುಕ್ಮಿಣೀದೇವಿ ಪಿತ ರಾಘವೇಂದ್ರರ ಉದರದಿಂದಲಿ ಜನಿಸಿ ಬಾಲತ್ವ ಕೆಲಕಾಲ ಕಳೆದು ತದನಂತರದಿ ಭೂವೈಕುಂಠಪುರದಲ್ಲಿ ದ್ವಿಜತ್ವವನೆ ಪಡೆದು ಲೌಕಿಕ ವಿದ್ಯೆಗಳನೆಲ್ಲ ಕಲಿಸಿ ಬಳಿಕ ಸಂಗೀತ ವಿದ್ಯೆಯ ಸಾಧನಕೆ ಮಿಗಿಲೆಂದು ಸಾಧಿಸಿ ಬಿಡದೆಲೆ ಪ್ರಾವೀಣ್ಯತೆಯ ಪಡೆದು ಅತಿ ಗೌಪ್ಯದಿಂದಲಿ ಶಿರಿಗುರು ತಂದೆವರದಗೋಪಾಲವಿಠ್ಠಲನ ಸ್ತುತಿಸಿ ಮನದಿ ಅತಿ ಹಿಗ್ಗುತಲಿರ್ದ ಬಗೆ ಕೇಳಿ 2 ಗುರು ಕಾಳಿಮರ್ದನ ಕೃಷ್ಣಾಖ್ಯದಾಸರ ಸಹವಾಸದಿಂದಲಿ ಲೌಕಿಕದಿ ಹುರುಳಿಲ್ಲವೆಂಬ ಮರ್ಮವ ತಿಳಿದು ಮನದಿ ವಿಚಾರಿಸುತಿರಲು ಕಾಲವಶದ ಸೋತ್ತುಮ ರಾಜ್ಯದಿ ಸ್ವರೂಪ ಕ್ರಿಯೆಗಳಾಚರಣೆಗೆ ಮನಮಾಡುತಲಿಹ ಓರ್ವ ದ್ವಿಜನ ಮರ್ಮವ ತಿಳಿಯದೆ ನಿಂದಿಸುವ ಮನವ ಮಾಡೆ ಶ್ರೀವದ್ವಿಜಯರಾಯರುತಮ್ಮ ವಂಶಜನಿವನೆಂದು ಶ್ರೀಮತ್ ರಾಘವೇಂದ್ರ ಮುನಿಗೆ ಬಹು ವಿಧ ಪ್ರಾರ್ಥಿಸಿ ಫಲ ಮಂತ್ರಾಕ್ಷತೆಯನಿತ್ತು ಧ್ಯಾನಕ್ಕೆ ತೊಡಗಿಸಿ ಶ್ರೀಮದ್ ಭಾವಿ ಸಮೀರ ಪದರಜವೇ ಬಹು ಭಾಗ್ಯವೆಂದು ಧೇನಿಪ ಭಕ್ತವರ್ಯರಾದ ತಂದೆವರದಗೋಪಾಲ ವಿಠಲದಾಸರಾಯರ ಪದಪದ್ಮಂಗಳಿಗೊಪ್ಪಿಸಿ ಅಪರಾಧಗಳನ್ನೆಲ್ಲ ದೃಷ್ಟಿ ಮಾತ್ರದಿ ದಹಿಸಿ ಫಣಿಗೆ ಮೃತ್ತಿಕೆ ತಡೆದು ಗುರುಗಳನೆ ಅರುಹಿ ನಿಜ ಮಾರ್ಗದಿಂದ ಶಿರಿಗುರುತಂದೆವರದಗೋಪಾಲವಿಠ್ಠಲನ ಕರುಣಿ ಪಡೆವ ಮಾರ್ಗವನೆ ಪಿಡಿದರು ಜವದಿ 3 ಭವದೊಳು ಬಳಲುವ ಭೌತಿಕ ಜೀವಿಗಳ ಬಹು ಬೇಗದಿಂದಲಿ ಉದ್ಧರಿಸಲೋಸುಗ ಬೋಧಮುನಿ ಕೃತ ಗ್ರಂಥಸಾರವ ಬೋಧಿಪ ಮುನಿಗಳ ದರ್ಶನಗೋಸುಗ ಪೊರಟ ಸಮಯದಲಿ ಶ್ರೀಗುರು ವಾದಿರಾಜ ಮುನಿವರ್ಯ ತನ್ನಯ ಪುತ್ರನ ಮೊರೆಕೇಳಿ ಶ್ರೀಲಕ್ಷ್ಮೀಹಯವದನನ ಮೂರ್ತಿಯ ಪ್ರಾರ್ಥಿಸೆ ರೌಪ್ಯಪೀಠ ಪುರವಾಸಿ ಶ್ರೀಕೃಷ್ಣನ ಕರದಿ ಶೋಭಿಪ ವಸ್ತುವಿನ ಪುರದಿ ಸ್ವಪ್ನದಿ ಬಂದು ತಂದೆವರದವಿಠ್ಠಲನೆಂಬ ಅಂಕಿತವನಿತ್ತು ಅದೇ ಸುಂದರ ರೂಪವ ತೋರಿ ನೈಜಗುರುಗಳ ದ್ವಾರಾ ಭಜಿಸೆಂದು ಬೋಧಿಸಿದ ನಂತರದಿ ಬಹು ಸಂಭ್ರಮದಿಂದಲಿ ಉಬ್ಬುಬ್ಬಿ ತನ್ನ ತನುಮನಧನ ಮನೆ ಮಕ್ಕಳನೆಲ್ಲ ನಿನ್ನ ಚರಣಾಲಯಕೆ ಅರ್ಪಿತವೆಂದು ಅರ್ಪಿಸಿ ಗುರುಗಳ ದ್ವಾರಾ ಸಿರಿಗುರು ತಂದೆವರದಗೋಪಾಲಗೆ ಸದಾ ಧೇನಿಸುತ ಮೈಮರೆತಿರ್ದನೀ ದಾಸವರ್ಯ 4 ಪಾದ ಕರವ ಮುಗಿದು ಸ್ವಾಮಿ ಶ್ರೀಗುರುರಾಜಾತ್ವದ್ದಾಸವರ್ಗಕೆಸೇರಿದ ಬಾಲಕ ದಾಸನೀತಾ ಕರುಣದಿಂದಲಿ ಜವದಿ ಕರುಣ ಕಟಾಕ್ಷದಿ ಈಕ್ಷಿಸಿ ಉದ್ಧರಿಸಬೇಕೆಂದು ಬಹುವಿಧ ಪ್ರಾರ್ಥಿಸಲು ಪರಮ ಕರುಣಾನಿಧಿ ಋಜುವರ್ಯ ಶ್ರೀ ವಾದಿರಾಜಾರ್ಯ ತನ್ನ ಹಂಸರೂಪಿಣಿ ಶ್ರೀ ಭಾವೀ ಭಾರತಿಯಿಂದೊಡಗೂಡಿ ಬಹು ಆನಂದದಿಂದಲಿ ಪಂಚ ಬೃಂದಾವನ ರೂಪದಿ ಮೆರೆವ ತನ್ನಯ ರೂಪವ ತೋರಿ ತುತಿಸಿಕೊಂಡು ಬಹು ಆನಂದಭರಿತರಾಗಿ ಬಹು ಬೇಗ ಸಾಧಿಸುವ ಗೈಸಲೋಸುಗ ಶಿರಿಗುರು ತಂದೆವರದಗೋಪಲವಿಠಲನ ಪ್ರಾರ್ಥಿಸಿ ಸಕಲ ಉತ್ಸವಗಳ ತೋರಿ ಶ್ರೀಮದ್ವಿಶ್ವೇಂದ್ರರ ದ್ವಾರಾ ತವ ಪಾದರೇಣು ಫಲ ಮಂತ್ರಾಕ್ಷತೆಯನಿತ್ತು ಬಗೆಯನೆಂತು ವರ್ಣಿಸಲಿ ಪಾಮರ ನರಾಧಮನು ನಾನು 5 ಕೇವಲ ಲೌಕಿಕ ಜನರಂತೆ ಆಧುನಿಕ ಪದ್ಧತಿಗನುಸರಿಸಿ ದಿನಚರ್ಯವನೆ ತೋರುತಲಿ ಭಾರತೀಶನ ಪ್ರಿಯವಾಗಿಹ ಕರ್ಮಗಳನೊಂದನೂ ಬಿಡದೆ ತಿಳಿದು ಮನದಿ ಮಾಡುತಲಿ ಮಂಕುಗಳಿಗೆ ಮೋಹಗೊಳಿಸಿ ಮಮಕಾರ ರಹಿತನಾಗಿ ದಿನಾಚರಣೆಗೈದು ಶ್ರೀ ಶುಕಮುನಿ ಆವೇಶಯುತರಾದ ಸದ್ವಂಶಜಾತ ಶ್ರೀಕೃಷ್ಣನ ಸೇವೆಗೋಸುಗ ಅವತರಿಸಿದ ವಾಯುದೇವ ಪೆಸರಿನಿಂದಲಿ ಶೋಭಿಪ ಕುಲಪುರೋಹಿತರ ಬಳಿಯಲಿ ಬಹು ವಿನಯದಿಂದಲಿ ಶ್ರೀ ನಿಜತತ್ವಗಳ ಮರ್ಮಗಳ ಕೇಳಿಕೊಂಡು ಮನದಿ ವಿಚಾರಿಸಿ ದೃಢೀಕರಣ ಪೂರ್ವಕ ಪಕ್ವವಾದ ಮನದಿಂದಲಿ ಶ್ರೀಶಶ್ರೀ ಮಧ್ವಮುನಿ ಶ್ರೀಗುರುಗಳ ಕರಣವನೆ ಕ್ಷಣಕ್ಷಣಕೆ ಬಿಡದೆ ಸ್ಮರಿಸುತಾನಂದ ಭಾಷ್ಯೆಗಳ ಸುರಿಸುತ ಭಾಗವತರ ಸಮ್ಮೇಳನದಿ ತತ್ವಗಳ ವಿಚಾರಿಸುತ ಶ್ರೀ ದಾಸಾರ್ಯರಾ ಉಕ್ತಿಗಳ ಆಧಾರವನೆ ಪೇಳುತಲಿ ಮನದಿ ಗುರುಗಳ ಸನ್ನಿಧಿಗೆ ಅರ್ಪಿಸಿ ತತ್ವದ್ವಾರ ತಿಳಿದುಪೂರ್ಣ ಸಾಧನವಗೈದು ಶ್ರೀ ಪ್ರಲ್ಹಾದ ಬಲಿ ಮಾಂಧಾತ ಕರಿರಾಜ ಶಿಬಿಮೊದಲಾದ ಚಕ್ರವರ್ತಿಗಳಲಿ ಬಹುಬೇಗ ಸಾಧನವ ಗೈದರು ಇವರಾರೊ ನಾ ಕಾಣೆ ಶಿರಿ ಗುರುತಂದೆವರದ-ಗೋಪಾಲವಿಠಲನ ಆಣೆ 6 ಸತಿ ವತ್ಸರ ವತ್ಸರ ಸತಿ ಮಾಯಾ ಶುಭ ದಿನದಿ ಸಂಖ್ಯಾ ಕಾಲದಿ ಪ್ರಥಮ ಯಾಮವೆಮಿಗಿಲೆಂದು ಮನದಿ ಲಯ ಚಿಂತನೆಯ ಬಿಡದೆ ಮಾಡುತದೇವತೆಗಳ ದುಂದುಭಿ ವಾದ್ಯಗಾಯನಗಳ ರಭಸದಿಶ್ರೀ ಲಕುಮಿ ದೇವಿಯ ಸೌಮ್ಯ ದುರ್ಗಾ ರೂಪಕೆನಮೋ ನಮೋ ಎಂದು ಶಿರಿಗುರುತಂದೆವರದಗೋಪಾಲ ವಿಠಲನಪುರಕೆ ಪುಷ್ಪಕ ವಿಮಾನ ರೋಹಿಣಿಯನೆ ಮಾಡಿನಲಿನಲಿದಾಡುವ ತೆರಳಿ ಪೋದಾರಿವರು 7 ಜತೆ :ಸತಿದೇವಿ ರಮಣನ ಭಕ್ತನೇ ನಿನ್ನಯಸುಖತನವೆಂದಿಗೂ ಕೊಡಲೆಂದು ಬೇಡಿಕೊಂಬೆಸಿರಿಗುರುತಂದೆವರದಗೋಪಾಲ ವಿಠಲನಿಗೆ 8
--------------
ಸಿರಿಗುರುತಂದೆವರದವಿಠಲರು