ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಈ ನೀಚಮನಸಿಗೆ ಮಾಡಲಿನ್ನೇನು ಥೂ ನಾಚಿಕಿಲ್ಲದಕೆ ಉಪಾಯವೇನು ಪ ಹರಿಚರಣ ಸ್ಮರಿಸುವುದು ಹರಿದಾಟ ಮರಿವಲ್ಲದು ಪಿರಿದುನುಡಿಯಾಡುವುದು ಕಿರಿಗುಣವ ಬಿಡದು ಪರಲೋಕ ಬಯಸುವುದು ನಿರುತದಿಂ ನಡಿವಲ್ಲದು ಶರಣರೊಡನೆನದಿಹ್ಯದು ಪರನಿಂದೆ ಬಿಡದು 1 ಜ್ಞಾನನುಡಿ ಪೇಳುವುದು ನಾನೆಂಬುದಳಿವಲ್ಲದು ಧ್ಯಾನದೊಳಗಿರುತಿಹ್ಯದು ಶ್ವಾನಕಲ್ಪನ್ಹಿಂಗದು ದಾನಗುಣ ಬೋಧಿಪುದು ಜೀನತ್ವ ತೊರಿವಲ್ಲದು ಆನಂದ ಬೇಡುವುದು ಹೀನಭ್ರ್ರಾಂತಿ ಬಿಡದು 2 ಸಾದುಪಥದಾಡುವುದು ಭೇದ ಕಡಿವಲ್ಲದು ವೇದಾಂತ ಕೇಳುವುದು ಸಾಧನಕೆ ಒಲ್ಲದು ಪಾದಭಕ್ತಿ ಬೇಡುವುದು ಕ್ರೋಧ ತೊಡಿವಲ್ಲದು 3 ನಾಮಭಜನೆ ಮಾಡುವುದು ತಾಮಸವ ತುಳಿವಲ್ಲದು ಸ್ವಾಮಿಯೊಲುಮೆ ಕೋರುವುದು ಪಾರತ್ವ ಬಿಡದು ಕಾಮಿತೊಲ್ಲೆನೆನ್ನುವುದು ಭಾಮೆ ಭೂಮಿಪ್ರೇಮ ಬಿಡದು ಕ್ಷೇಮ ಸದಾ ಬೇಡುವುದು ನೇಮನಿತ್ಯ ಒಲ್ಲದು 4 ಶಾಸನವ ಪೇಳುವುದು ತಾಸು ಸ್ಥಿರ ನಿಲ್ಲದು ನಾಶಜಗವೆನುತಿಹ್ಯದು ಕಾಸು ಒಲ್ಲೆನ್ನದು ದೋಷನಾಶನ ಜಗದೀಶ ಶ್ರೀರಾಮನಡಿ ದಾಸನಾನೆಂಬುವುದು ವಾಸನೆಯ ಬಿಡದು 5
--------------
ರಾಮದಾಸರು
ಸ್ವಾಗತವು ಸ್ವಾಗತವು ಯೋಗಿವರ್ಯರಿಗೆ ||ವಿಶ್ವೇಶ ತೀರ್ಥ ಶ್ರೀ ವಿದ್ಯ ಮಾನ್ಯರಿಗೇ ಪ ಪ್ರೊದಟೂರು ಜನನಿಮ್ಮ | ಮೋದಮಯ ಆಗಮಕೆಆದರದಿ ಕಾದಿಹರು | ವೇದ ಘೋಷಿಸುತ |ಹೇದಯಾ ಪರಿಪೂರ್ಣ | ಸಾದುಗಳೆ ನಮಿಸುವೆವುಮೋದ ಪ್ರಮೋದ ಗುಣ | ಬೋಧಿಪುದು ನಮಗೇ 1 ಸಿರಿ ಮೂರ್ತಿ | ಗುರುರಾಘವೇಂದ್ರಾ |ವರಸು ಬೃಂದಾವನವ | ಸ್ಥಿರ ಪಡಿಸಿ ನಿಮ್ಮಾಮೃತಕರದಿಂದಲಿಂದೀಗ | ವರ ಮಹೂರ್ತದಲೀ 2 ವತ್ಸರವು ಆನಂದ | ವೈಶಾಖ ಸ್ಥಿತ ದಶಮಿವಾತ್ಸಲ್ಯ ಯತಿಗಳು | ಸುಸ್ಥಿರವು ಆಗೀ |ವತ್ಸಾರಿ ಹರಿಭೃತ್ಯ | ವತ್ಸಲತಯಿಂನಿಂದುಸುಸ್ಥಿರವು ಆಗಿಹುದು | ಭೃತ್ಯರಿಗೆ ವರದಾ 3 ಪತಿ ಮಹಿಮೆ | ಈಂಟಿ ಮುದ ಹೊಂದೇ 4 ಪಾದ | ಪಾಂಸುಗಳ ಧರಿಸೀಕೇವಲಾನಂದಮಯ | ಭಾವದೊಳು ಇಹೆವುಗುರುಗೋವಿಂದ ವಿಠಲ ಪವ ತಾವರ್ಯಾ ಶ್ರೀತರೇ 5
--------------
ಗುರುಗೋವಿಂದವಿಠಲರು