ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬೇಟೆಯ ನಾಡಿದನೇ | ಶ್ರೀ ಗುರು | ಬೇಟೆಯ ನಾಡಿದನೇ | ಭವದ ಮ | ಮಹಾಟವಿಯೊಳಗಿದ್ದ ಮನವೆಂಬ ಮೃಗದಾ ಪ ಬೋಧ ಕೊಳಲವ | ಸ್ವಾನಂದದಲಿ ಸುಸ್ವರದಲಿ | ತಾನೂದಿ ನಾದವ ಕಿವಿಯೊಳೂಡಿಸಿ ಸು | ಮ್ಮಾನದೀ ನಿಲುವಂತೆ ಮರುಳು ಮಾಡಿದ ಗುರು 1 ಪರಿ ಸಾಧನದಿಂದಲಿ ನವವಿಧ | ಪರಿಯಾದ ಭಕ್ತಿಯ ಪಾಶವನು | ಕೊರಳಿಗೆ ಸಂದಿಸಿ ದೃಢದಿಂದ ಪುನರಪಿ | ಹರಿದಾಡದಂದದಿ ನೆಲೆಗೊಳಿಸಿ ಗುರು 2 ಭಯದಿಂದ ಬೆದರಿ ಭಜ್ಜರಿಕೆಯ ಹಿಡಿದಿರೆ | ಶ್ರಯ ಸುಖದಾಯಕ ನಿಜ ಕರದೀ | ದಯದಿಂದ ಅಭಯವನಿತ್ತು ಬೋಳೈಸಿ ನಿ| ರ್ಭಯ ಮಾಡಿ ಭ್ರಾಂತಿಯ ಚಿಂತಿ ಹರಿಸಿ ಗುರು3 ಸವಿ ಸವಿ ನಾಮಾಮೃತ ಆಹಾರವನಿಕ್ಕಿ | ಜವದಿಂದ ಹೃದಯ ಭೂ ವನದೊಳಗೆ | ತವಕದಿ ವಿಶ್ರಾಂತಿ ಸ್ಥಳದಲಿ ನಿಲ್ಲಿಸಿ | ಅವನಿಲಿ ಸತ್ವ ಚರನ ಬಳಿಯಲ್ಲಿಟ್ಟು ಗುರು4 ಜನವನ ವಿಜನದೊಳಗ ತಾನೇ ತಾನಾಗಿ | ಅನುಮಾನ ಕಳೆಸಿದಾ ಅಂಜುವನಾ | ಅನುದಿನ ಸುಖದೊಳಿಪ್ಪಂತೆ ಮಾಡಿ | ದನು ನಂದನ ನಿಜ ಸಹಕಾರಿ ಮಹಿಪತಿ ಘನಗುರು5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಯಾದವರಾಯ ಬೃಂದಾವನದೊಳು ವೇಣುನಾದವ ಮಾಡುತಿರೆ ಪ ರಾಧೆ ಮುಂತಾದ ಗೋಪಿಯರೆಲ್ಲಮಧುಸೂದನ ನಿಮ್ಮನು ಸೇವಿಸುತ್ತಿರೆ ಅ ಸುರರು ಅಂಬರದಿ ಸಂದಣಿಸಿರೆ ಅ-ಪ್ಸರ ಸ್ತ್ರೀಯರು ಮೈಮರೆದಿರೆಕರದಲಿ ಕೊಳಲನೂದುತ ಪಾಡುತಸರಿಗಮ ಪದನಿ ಸ್ವರಗಳ ನುಡಿಸುತ 1 ಹರಬ್ರಹ್ಮರು ನಲಿದಾಡುತಿರೆ ತುಂ-ಬುರು ನಾರದರು ಪಾಡುತಿರೆಪರಿಪರಿ ವಿಧದಲಿ ರಾಗವ ನುಡಿಸುತತುರು ಹಿಂಡುಗಳ ಕೂಡುತ ಪಾಡುತ2 ತುರು ಹಿಂಡುಗಳ ತರತರದಲಿ ತನ್ನಕರದಿಂ ಬೋಳೈಸಿ ಸಂತೈಸುತಅರವಿಂದ ನಯನ ಆದಿಕೇಶವರಾಯಕರುಗಳ ಸಹಿತ ಗೋವ್ಗಳ ತಿರುಹುತ3
--------------
ಕನಕದಾಸ