ಉಗಾಭೋಗ
ಮಾಡಿದೆ ಯಾಕೆ
ಫಲಗಳ ಮೆದ್ದೆಯಾಕೆ
ಒಕ್ಕುಡಿತೆ ಪಾಲ ಕುಡಿದೆಯಾಕೆ
ಅವಲ ಮೆದ್ದೆಯಾಕೆ
ಕುರೂಪಿ ಕುಬುಜೆಗೆ ಮನಸೋತೆಯಾಕೆ
ಅಖಿಲಾಂಡಕೋಟಿ ಬ್ರಹ್ಮಾಂಡನಾಯಕನಾದವ
ಪಾಂಡವರೋಲೆಕಾರನಾದೆಯಾಕೆ
ನಿನಗಾಗಿ ನೀನು ಬವಣೆಪಡಲಿಲ್ಲವೊ ದೇವ
ನಿನ್ನ ಭಕುತರ ಪೊರೆಯಲೋಸುಗವೆಂಬುದ ನಾ ಬಲ್ಲೆ
ನಿನ್ನ ದಯಕೆಣೆಯುಂಟೆ ಎನ್ನಪ್ಪ ರಂಗೇಶವಿಠಲ