ಒಟ್ಟು 2 ಕಡೆಗಳಲ್ಲಿ , 1 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಷ್ಟಗಳ ಪರಿಹರಿಸೊ ಶ್ರೇಷ್ಠ ಮಾರುತಿಯೇ ಭ್ರಷ್ಟನಾದೆನು ಭಂಡ ಸಂಸಾರದಲ್ಲೀ ಪ ಸ್ವಾರ್ಥವೆನ್ನುವ ದುಃಖ ಸಾಗರದಿ ಮುಳುಗಿದ್ದು ಸ್ವಾರ್ಥಕೋಸುಗ ಹೀನ ಕೃತ್ಯಗಳ ಗÉೈದೂ ಅರ್ಥವನು ಗಳಿಸುತ್ತ ತುಂಬಿದೆನು ಈ ವಡಲ ವ್ಯರ್ಥವಾಯಿತು ಜನ್ಮ ಸಾರ್ಥವನು ಮಾಡೋ1 ನಿರುತದೀ ಧರ್ಮ ಕರ್ಮಗಳ ತೊಲಗಿದೆನು ಭವದಿ ಸುಖವೆಲ್ಲವೂ ಮಾಯವಾಯಿತು ದೇವಾ ಶರಣರಿಗೆ ತಂದೆ ನೀನೆಂದು ಮೊರೆಹೊಕ್ಕೇ 2 ಪರಹಿತವ ಬಯಸದಲೆ ಕೇಡು ಬಗೆದೆನು ನಿತ್ಯ ಪರಸತಿಯಪೇಕ್ಷಿಯಲಿ ನಿರುತನಾಗಿದ್ದೇ ಅರಿತೆನೀಗಲೆ ನಾನು ಸರ್ವ ನಶ್ವರವೆಂದು ನರಹರಿಯ ನೀರೆರೆಯೊ ಈ ಬಾಡು ಶಶಿಗೇ 3 ಭಕ್ತವತ್ಸಲನೆಂಬ ಬಿರುದ ಪೊತ್ತಿಹೆ ನೀನು ಭಕ್ತಿಯಲಿ ನಾ ನಿಂನ ಸೇವೆ ಮಾಡುವೆನು ಭಕ್ತದಾಯಕಯಂನ ಹಸಿವೆ ತೃಷೆಗಳ ನೀಗಿ ಮುಕ್ತಿಯನು ನೀಡೆನಗೆ ಚನ್ನಕೇಶವನೇ 4
--------------
ಕರ್ಕಿ ಕೇಶವದಾಸ
ಚನ್ನಕೇಶವ ಚನ್ನಕೇಶವ ಚನ್ನಕೇಶವ ತ್ರಾಹಿಮಾಂ ಪ ಮನ್ನಿಸೆನ್ನನು ರಕ್ಷಿಸೆನ್ನನು ಸನ್ನುತಾಂಗನೆ ಪಾಹಿಮಾಂ ಅ.ಪ. ಭವದಿ ನೊಂದೆನು ಸವೆದು ಬೆಂದೆನು ಜವದಿ ಬಂದೆನು ತ್ರಾಹಿಮಾಂ ಭವಣೆಯನು ಪರಿಹರಿಸಿ ದೇವನೆ ಭವ ವಿದೂರನೆ ಪಾಹಿಮಾಂ1 ನಾನು ಏನನು ನಿನ್ನ ಮರತೆನು ನಾನು ಬಡವನು ತ್ರಾಹಿಮಾಂ ಗಾನ ಲೋಲನೆ ಬಿಡದೆ ಭಜಿಸುವೆ ದೀನ ವತ್ಸಲ ಪಾಹಿಮಾಂ 2 ಭಕ್ತವತ್ಸಲ ಭಕ್ತದಾಯಕ ಭಕ್ತಿಯರಿಯೆನು ತ್ರಾಹಿಮಾಂ ಮುಕ್ತಿದಾಯಕ ಶಕ್ತಿ ಮೂರುತಿ ಮುಕ್ತಿ ಪಾಲಿಸಿ ಪಾಹಿಮಾಂ3
--------------
ಕರ್ಕಿ ಕೇಶವದಾಸ