ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಯಬೇಕೆನ್ನ ಕರುಣದಲಿ ಧನ್ವಂತ್ರಿ ಶ್ರೀಯರಸ ನರಹರಿಯೆ ಪ್ರಾರ್ಥಿಸುವೆ ನಿನ್ನ ಪ. ಸುರರಿಗೆ ಮರಣ ಕಾಲವು ಪ್ರಾಪ್ತವಾಗಲು ಗಿರಿಯಿಂದ ಶರಧಿಯನು ಮಥಿಸೆ ಪೇಳಿ ಕರುಣದಿಂದಮೃತ ಕರದಿಂದ ಸುರರಿಗೆ ಎರೆದು ಜರೆ ಮೃತ್ಯು ಬಿಡಿಸಿದಗೆ ಇದು ಒಂದು ಘನವೆ 1 ಸಕಲ ನಾಡಿಗಳಲ್ಲಿ ಚೇಷ್ಟಪ್ರದ ನೀನಾಗಿ ಸಕಲ ವ್ಯಾಪಾರಗಳ ನಡೆಸುತಿರಲು ಯುಕುತಿಯಿಂದಲಿ ನಾಡಿ ನೋಡಿ ತಿಳಿಯುವನ್ಯಾರೊ ಮುಕುತಿದಾಯಕ ನಿನಗೆ ಇದು ಒಂದು ಘನವೆ 2 ಅನಾದಿಯಿಂದ ಅಪಥ್ಯದಲಿ ನರಳುವೆನೊ ಈಗ ಪಥ್ಯವ ಮಾಳ್ಪ ಬಗೆ ಯಾವುದೊ ಶ್ರೀನಿವಾಸನೆ ನಿನ್ನ ಧ್ಯಾನವೆ ಔಷಧವೊ ಶ್ರೀ ಗುರುಗಳಾಜ್ಞೆಯೆ ಪಥ್ಯವೆನಗಿನ್ನು 3 ಭಕ್ತಪ್ರಹ್ಲಾದನನು ಯುಕ್ತಿ ಶಕ್ತಿಗಳಿಂದ ಮುಕ್ತಿಮಾರ್ಗವ ತೋರಿ ಸಲಹಲಿಲ್ಲೇ ಭಕ್ತಿಹೀನರನೆ ಕಂಡು ಎನ್ನ ರಕ್ಷಿಸದಿರಲು ಯುಕ್ತವೇ ನಿನಗಿನ್ನು ಭಕ್ತಪಾಲಕನೆ 4 ನಿನ್ನ ದಾಸತ್ವದಲಿ ನೆಲಸಬೇಕಾದರೆ ಬಿನ್ನಣದ ರೋಗಗಳ ಪರಿಹರಿಸಿ ಸಲಹೊ ನಿನ್ನವರಾದ ಮೇಲಿನ್ನು ಕಾಯದೆ ಇಹರೆ ಘನ್ನ ಶ್ರೀ ಗೋಪಾಲಕೃಷ್ಣವಿಠ್ಠಲನೆ 5
--------------
ಅಂಬಾಬಾಯಿ
ನೀನೆ ದಯಾನಿಧಿಯು ಶ್ರೀ ಗುರುರಾಯ ನೀನೆ ದಯಾನಿಧಿಯು ಧ್ರುವ ಕರುಣದಿ ಕುಂತಿಯ ಪುತ್ರರಿಗೆ ಒಲಿದು ಕಾಳ ನಿರ್ಮಿಸಿ ಕೌರವರಳಿದು ಉಳಿಯದೆ ಇಳೆಯೊಳು ವಂಶವ ಸವರಿದ ಶೇಷಶಯನ ಶ್ರೀ ಕೇಶವ ನೀನೆ 1 ನರಗೊಲಿದು ನರಕಾಸುರನ ಮರ್ದಿಸಿ ನಾರಗನೆಂದಜಮಿಳನ ನೀ ತಾರಿಸಿ ನಾರದಗೊಲಿದು ನಾಟ್ಯವನಾಡಿದ ನರಹರಿಯು ನಾರಾಯಣ ನೀನೆ 2 ವೇದವ ಕದ್ದೊಯಿದಸುರನ ಸೀಳಿ ಮಚ್ಛವತಾರದ ರೂಪವ ತಾಳಿ ಮಾವನ ಕೊಂದ ಮಾನ್ಯರ ಮಡುಹಿದ ಮಾಧವ ನೀನೆ 3 ಗೋಕುಲದಲಿ ಪುಟ್ಟಿ ಧರೆಯೊಳು ಬೆರಳಲಿ ಗೋವರ್ಧನ ಗಿರಿಯನೆತ್ತಿ ಗೋಕುಲ ಕಾಯ್ದಿ ಗೋಪಿಯರಿಗೊಲಿದ ಗೋಪಾಲಕೃಷ್ಣ ಗೋವಿಂದನು ನೀನೆ4 ಸೃಷ್ಟಿನೆಲ್ಲ ಬೆನ್ನಿಲಿ ತಾಳಿದ ಶೇಷನ ಸಂ ಕಷ್ಟವ ಪರಿಹರಿಸಿದ ಶಿಷ್ಟ ವಿಭೀಷಣಗೊಲಿದು ಪಟ್ಟವಗಟ್ಟವು ವಿಷ್ಣವು ನೀನೆ 5 ಮದನನೊಲಿದು ಕಾಳಿಂಗನ ತುಳಿದು ಕದನದಲಿ ಬಾಣಾಸುರನಳಿದು ಮೇದಿನಿಯೊಳು ಮರೆ ಇಲ್ಲದೆ ದೈತ್ಯರ ಮರ್ದಿಸಿದ ಮಧುಸೂದನನು ನೀನೆ 6 ತ್ರಿಪುರವನಳಿದು ತ್ರಿಗುಣವ ತಾಳಿದ ತೆತ್ತೀಸ ಕೋಟಿ ದೇವರುಗಳಿಗಾಳಿದ ಅಕ್ರೂರಗೊಲಿದು ಚರಿತ್ರವದೋರಿದ ತ್ರಿಜಗಪತಿ ತ್ರಿವಿಕ್ರಮ ನೀನೆ7 ವಾಲಿಯನಳಿದು ವಾಲ್ಮೀಕಿಗೊಲಿದು ಬಲಿಚಕ್ರನ ಮುನಿಮುಂದಲಿ ಸುಳಿದು ಬ್ರಾಹ್ಮಣನಾಗಿ ದಾನವ ಬೇಡಿದ ಮಾನ್ನವಗೊಲಿದ ಶ್ರೀ ವಾಮನ ನೀನೆ 8 ಸೃಷ್ಟಿನೆಲ್ಲ ನಿರ್ಮಿಸಿ ವಕ್ಷ ಸ್ಥಳದಲಿ ಶ್ರೀ ಮಹಾಲಕ್ಷ್ಮಿಯ ಧರಿಸಿದ ಶ್ರೀನಿಧಿ ಶ್ರೀಪತಿ ಶ್ರೀಗುರುಮೂರುತಿ ಶ್ರೀದೇವಿಗೊಲಿದಿಹ ಶ್ರೀಧರ ನೀನೆ 9 ದಾಸರ ಕ್ಲೇಶಕಿಲ್ಮಿಷಗಳ ತೊಳೆದು ಅಂಬರಿಷ ರುಕ್ಮಾಂಗದಗೊಲಿದು ಶುಕ ಶೌನಕ ಪರಾಶರ ಮುನಿಗಳಿಗೆ ಹರುಷನಿತ್ತ ಹೃಷಿಕೇಶನು ನೀನೆ 10 ಕ್ಷಿತಿಯೊಳು ದೃಢ ಪತಿವ್ರತೆಗೊಲಿದು ಯತಿ ಮುನಿಗಳಿಗಿನ್ನು ಗತಿಗಳನಿತ್ತು ಪತಿತರ ತಾರಿಸಿ ಪಾವನಗೈಸಿದ ಪರಂಜ್ಯೋತಿ ಪದ್ಮನಾಭನು ನೀನೆ 11 ದೇವಕಿಗೊಲಿದು ಸ್ಥಾಪಿಸಿ ಧರೆಯೊಳು ದ್ವಾರಕಿಯಲಿ ನಿಜ ಲೀಲೆಯು ತೋರಿದ ದುರಿತ ವಿಧ್ವಂಸನ ದೇವಕಿ ಪುತ್ರ ದಾಮೋದರ ನೀನೆ 12 ಸಿದ್ದ ಶರಣರಿಗೊಲಿದ ಸದ್ಗತಿ ಸುಖಸಾಧನ ಸಹದೇವಗದೋರಿದ ಸಂಭ್ರಮದಿ ಸುಧಾಮಗ ಒಲಿದು ಸಂತೋಷವನಿತ್ತ ಸಂಕರುಷಣ ನೀನೆ 13 ವಸುಧಿಯೊಳು ಭಸ್ಮಾಸುರನ ಮರ್ದಿಸಿ ಭಾಷೆಯನಿತ್ತು ಭಕ್ತರ ಪಾಲಿಸಿ ಋಷಿ ವೇದವ್ಯಾಸಗೊಲಿದಾತನು ವಸುದೇವಸುತ ವಾಸುದೇವನು ನೀನೆ 14 ವಿದುರುದ್ಧವ ಗರುಡಗೊಲಿದು ಭೃಗುಮುನಿ ಕಪಿಲ ಯೋಗೇಂದ್ರನ ಸಲಹಿದ ಸ್ಥಿರಪದವಿತ್ತರೊಂದು ಮಂದಿಗೆ ಪ್ರಸನ್ನವಾದ ಪ್ರದ್ಯುಮ್ನನು ನೀನೆ 15 ಸೀತಾ ಸುದ್ದಿಯ ತಂದವಗೊಲಿದು ಹತ್ತು ತಲೆಗಳ ಇದ್ದವನಳಿದು ಕದ್ದುಬೆಣ್ಣೆಯ ಮುದ್ದೆಯ ಮೆದ್ದು ಉದ್ದವಗೊಲಿದ ಅನಿರುದ್ಧನು ನೀನೆ 16 ಸೋಕಿಸಿ ಪೂತಣಿಯ ಕಾಯವು ಹೀರಿದ ಭಕ್ತ ಪುಂಡಲೀಕನ ಸಲಹಿದ ಭಕ್ತಿಗೆ ಒಲಿದು ಮುಕ್ತಿಯನಿತ್ತ ಪರಮ ಪರುಷ ಪುರುಷೋತ್ತಮನು ನೀನೆ 17 ಅಕ್ಷಯವೆಂದು ರಕ್ಷಿಸಿ ಸಭೆಯೊಳು ದ್ರೌಪದಿ ಕರುಣಕಟಾಕ್ಷದಿ ಸಲಹಿದ ಭಕ್ತವತ್ಸಲನಾಗಿ ಗಜೇಂದ್ರಗೆ ಅಧೋಕ್ಷಜ ನೀನೆ 18 ನರನಾರಿಯು ನಾಂಟೀಶರನಾಗಿ ನಖಮುಖದಲಿ ಹಿರಣ್ಯಕನ ಸೀಳಿ ಭಕ್ತಪ್ರಹ್ಲಾದಗ ಒಲಿದು ಸ್ತಂಭದಿ ಪ್ರಕಟಿಸಿದ ನರಸಿಂಹನು ನೀನೆ 19 ಅನಿಳ ಸ್ನೇಹಿತ ಅಜಗ್ನಾನಗ ಒಲಿದು ಅಹಲ್ಯಾ ಶಾಪ ವಿಮೋಚನ ಮಾಡಿದ ನೆಚ್ಚಿದ ಧ್ರುವನ ನಿಜ ಭಕ್ತಿಗೆ ಒಲಿದು ಅಚಲ ಪದವಿತ್ತುಚ್ಯುತ ನೀನೆ 20 ಜಗದೊಳು ಭಕ್ತಜನರಿಗೆ ಒಲಿದು ಜಾಹ್ನವಿ ನಿರ್ಮಿಸಿ ಜನಕನ ಸಲಹಿದ ಸಾಧು ಸಜ್ಜನ ಮುನಿ ಸಂಜೀವನ ಜಾನಕೀಪತಿ ಜನಾರ್ಧನನು ನೀನೆ 21 ಅಂಗದಗೊಲಿದಾನಂದವನಿತ್ತು ಕುಂದದೆ ಕರೆದುಪಮನ್ಯುನ ಸಲಹಿದ ದಿನಕರ ಚಂದ್ರ ಕಳಿಯಗಳಿತ್ತು ಇಂದ್ರಗೆ ಒಲಿದ ಉಪೇಂದ್ರನು ನೀನೆ 22 ಧರೆಯೊಳು ಭಕ್ತನ ಜನ್ಮವು ಹರಿಸಿ ಹರಿಶ್ಚಂದ್ರನ ಕ್ಲೇಶವು ಪರಿಹರಿಸಿದ ಸುರಮುನಿಗೊಲಿದ ಶ್ರೀ ಹರಿಯು ನೀನೆ 23 ಕಾಳಿ ಮಥನವು ಮಾಡಿ ಕರುಣದಿ ಸುರರಿಗೆ ಅಮೃತವನಿತ್ತು ಸಲಹಿದ ಕಲ್ಕ್ಯಾವತಾರದ ಲೀಲೆಯ ತೋರಿದ ಕಪಟ ನಾಟಕ ಶ್ರೀ ಕೃಷ್ಣನು ನೀನೆ 24 ಸಂಧ್ಯಾನದ ಸಾಹಾಯವನಿತ್ತು ಕಾಯದಿ ಸದ್ಗತಿ ಸಾಧನದೋರಿದ ನರಕೀಟಕ ಮಹಿಪತಿ ತಾರಕ ಗುರುಮೂರ್ತಿಯ ಪರಮ ದಯಾನಿಧಿಯು ನೀನೆ 25
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬಹುತೀರ್ಥ ಸಂಗಮದ ಭಾಗವತಗಂಗೆಯಲಿಬಹುಸ್ನಾನ ದೊರಕಿ ಜೀವನ್ಮುಕ್ತನಾದೆ ಪಶುಭ್ರವರ್ಣದ ಗಂಗೆ ತಾನೆ ನಾರದನಾಗೆಅಭ್ರವರ್ಣದ ಯಮುನೆ ವ್ಯಾಸನಾಗೆಇಬ್ಬರೊಂದಾಗಿ ಪ್ರವ'ಸಿ ಬಂದು ದೋಷಗಳದಬ್ಬುತಿಹ ಪುಣ್ಯ ಪ್ರಯಾಗಿಯಾಗಿರುತಿರುವ 1ಪೂರ್ವಪಶ್ಚಿಮವಾಗಿ ದಕ್ಷಿಣೋತ್ತರವಾಗಿಶರ್ವಾಗ್ನಿ ನೈಋತ್ಯವಾಯು ಮುಖದಿಪರ್ವಕಾಲಗಳೆಂದು ಪ್ರವ'ಸುವ ನದಿಯಲ್ಲಸರ್ವವ್ಯಾಪಕವಾಗಿ ತುಂಬಿ ಸೂಸುತಲಿರುವ 2ನಾರಾಯಣಾದ್ರಿಯಲಿ ಪುಟ್ಟ ಬ್ರಹ್ಮಾಂಡವನುಪೂರೈಸಿ ಪರಮಪಾವನ ಗಂಗೆಯೂಸೇರುವರೆ ತನಗೊಂದು ತೀರ್ಥಬೇಕೆಂದೆನುತಧೀರಶುಕ ಕಾವೇರಿಯಲಿ ಕೂಡಿ ನೆಲಸಿರುವ 3ಕಮಲಸಂಭವನೆಂಬ ಗೋದಾವರಿಯದೆನಿಸಿ'ಮಲಮತಿ ಸೂತ ಶೌನಕ ಸಂಗದಿಭ್ರಮನಿವಾರಣ ತುಂಗಭದ್ರೆಯೆಂದೆನಿಸುವದುರಮೆಯ ರಸನೊಲಿದವರಿಗದು ದೊರಕುತಿಹುದು 4ಈ ನದಿಯ ಕೂಡಿರುವ ತೀರ್ಥಗಳನೆಣಿಸುವರೆನಾನೆಂಬ ಕ' ಯಾರು ಶೇಷ ತೊಡಗಿಸ್ವಾನುಭವ ಸಂಸಿದ್ಧ ನಿಜಭಕ್ತರೆಂದೆನಿಪಜ್ಞಾನಿಗಳ ಮ'ಮೆಗಳ ನದಿಗಳೊಡೆ ಬೆರೆದಿರುವ 5ಶೀತಬಾಧೆಯು ಲೇಶಮಾತ್ರ'ದರೊಳಗಿಲ್ಲವಾತಾದಿ ವ್ಯಾಧಿಗಳ ಕೊಡುವುದಲ್ಲನೂತನದ ಕಾಲದೇಶಗಳ ಬಯಕೆಯದಲ್ಲಆತುಕೊಳದಿದ್ದರೂ ಪಾತಕವ ಪರಿಹರಿಪ 6ಉತ್ತಮ ಪರೀಕ್ಷಿತನೇನು ಮೈತ್ರೇಯ 'ದುರರುಸತ್ಯಸಂಧನು ಕಪಿಲ ದೇವಹೂತಿಮತ್ತೆ ಉತ್ತಾನಪಾದನು ಧ್ರುವನು ಪೃಥು ಚಕ್ರವರ್ತಿಯೆಂಬೀ ತೀರ್ಥವ ತರಿಸಿಕೊಂಡಿರುವ 7ಪುಣ್ಯಾತ್ಮ ಪ್ರಾಚೀನ ಬರ್'ಯಾತ್ಮಜರಾದಸನ್ಮನದ ಮ'ಮರವರೀರೈವರುಇನ್ನಿವಳ ಗರ್ಭದಲಿ ಬಂದ ದಕ್ಷನು ತಾನುಕನ್ನೆಯರನರುವತ್ತ ಪಡೆದ ತೀರ್ಥಗಳಿರುವ 8ಅಪರ ಸೂರ್ಯನ ತೆರದ ಪ್ರಿಯವ್ರತನ ಸಂತತಿಯುತಪದಲನುಪಮ ವೃಷಭದೇವನುದಿಸೀಗುಪಿತ ತೇಜೋಮೂರ್ತಿ ಭರತನವತರಿಸಿರಲುಉಪಮಾನ'ಲ್ಲದೀ ತೀರ್ಥಗಳು ಬೆರೆದಿರುವ 9ದ್ವೀಪವೇಳರ ಸುತ್ತ ವ್ಯಾಪಿಸಿದ ವನಧಿಗಳುದೀಪಿಸುವ ಸೂರ್ಯಾದಿ ಚಕ್ರಗತಿಯೂಈ ಪರಿಯ ತೀರ್ಥಗಳು ಭೂ'ು ಸ್ವರ್ಗಾದಿಗಳವ್ಯಾಪಿಸಿಹ ಮ'ಮ ನದಿಗಳು ಒಂದುಕೂಡಿರುವ 10ನದಿಗಳಿಗೆ ನಿಜರೂಪವಾದ ನಾಮದ ಮ'ಮೆಒದಗಿಯಜ'ುಳನಘವನೊದೆದು ನಿಜದೀಹುದುಗಿಸಿದ ವರ್ಣನೆಯ ತಂಪು ಬಹುರುಚಿಕರವುಸದಮಲಾನಂದ ನಿಧಿಯಾಗಿ ಹುದುಗಿರುತಿರುವ 11ವೃತ್ರ ಚಾರಿತ್ರ ನದಿ ಮತ್ತೀತನಾರೆನಲು ಚಿತ್ರಕೇತುವು ಚಕ್ರವರ್ತಿಯಾಗಿಪುತ್ರ ಸಂತತಿುಂದ ಪ್ರಖ್ಯಾತ 'ಮಗಿರಿಯಪುತ್ರಿಶಾಪವು ಬಂದ ಸಿದ್ಧ ನದಿ ಬೆರೆದಿರುವ 12ನರಹರಿಯ ಚರಣಾರ'ಂದ ಮಕರಂದದಲಿಎರಗಿ ತುಂಬಿಯ ತೆರದಿ ಭಜಿಸುತಿರುವನೆರೆ ಭಕ್ತಪ್ರಹ್ಲಾದ ಗಜರಾಜ ಮನುಚರಿತಪರಮ ಪುಣ್ಯೋದಯದ ನದಿಗಳೊಂದಾಗಿರುವ 13ಕ್ಷೀರಸಾಗರ ಮಥನ ಕೂರ್ಮನಾದನು ಹರಿಯುಶ್ರೀರಮಣಿ ಸುಧೆಯುದಿಸಿದತಿ ಮ'ಮೆಯೂಶ್ರೀರಮಣ ವಟುವಾಗಿ ಬಲಿಯ ಸಲ'ದ ಬಗೆಯುಸಾರತರ ನದಿಗಳಿವು ಸೇರಿಕೊಂಡಿಹವಾಗಿ 14ಉಷ್ಣ 'ಮಕರರಂಶಸಂಭವ ಮಹಾತ್ಮರನುವ್ಣೃ ಸಂತತ್ಯುದ್ಧವಾದಿಗಳನೂ'ಷ್ಣುವಾದರು ಗಣಿಸಲಾರನೀ ತೀರ್ಥಗಳುಕೃಷ್ಣಸಾಗರದಲ್ಲಿ ಸೇರಿ ಪೂರೈಸಿರುವ 15ಯದುಕುಲಾಂಬುಧಿಯಲ್ಲಿ ಮದನಪಿತ ತಾ ಜನಿಸಿಮುದದಿಂದ ಗೋಕುಲದಿ ಬೆಳೆದು ನಲಿದುಚದುರಿಂದ ಗೋವು ಗೋವತ್ಸಪರನೊಡಗೂಡಿಸದದು ದೈತ್ಯರ ನಂದಗಾನಂದ'ತ್ತಾ 16ಬಾಲಕರ ಭೋಜನದ ನೆವದಿ ಬ್ರಹ್ಮನಿಗೊಲಿದುಕಾಳೀಯ ಫಣಗಣಾಗ್ರದಿ ನರ್ತಿಸಿಜ್ವಾಲೆಯನು ನೆರೆನುಂಗಿ ಗೋಕುಲದವರ ಸಲ'ಬಾಲಲೀಲೆಯ ಬಹಳ ಪುಣ್ಯತೀರ್ಥಗಳಿರುವ17ಗೋವಕ್ಕಳೊಡಗೂಡಿ ವನಮಧ್ಯದಲಿ ಚರಿಸಿದೇವತಾ ಯಜ್ಞ ಪತ್ನಿಯರಿಗೊಲಿದೂಗೋವರ್ಧನೋದ್ಧರಣ ಗೋಪಾಂಗನಾ ಜನದಭಾವನೆಯ ಪೂರ್ತಿಗೊಳಿಸಿದ ತೀರ್ಥ'ರುವಾ 18ವರಧನು'ನುದಯ ದರ್ಶನನೆವದಿ ಮಧುರೆಯನುನೆರೆಪೊಕ್ಕು ಕುಬ್ಜೆಗತಿಶಯದ ರೂಪಕರೆದಿತ್ತು ಕುಸುಮವನು ಕೊಟ್ಟವನಿಗೊಲಿದಾಗಪಿರಿದಾಗಿ ಕಂಸನಿಗೆ ತಾನೆ ಮುಕ್ತಿಯ ಕೊಟ್ಟು 19ದ್ವಾರಕಾ ನಿರ್ಮಾಣ ದುರುಳ ಜನಸಂಹರಣನಾರಿಯರ ನೆಂಟನೊಡಗೂಡಿ ಬಳಿಕಾಪಾರಿಜಾತವ ಕಂಡು ಈರೆಂಟು ಸಾಸಿರದನೀರೆಯರ ಸಂಸಾರ ಸಂಪತ್ತಿನತಿಶಯದ20ಮಾಸಿದರುವೆಯ ಭಕ್ತನವಲಕ್ಕಿಯನು ಮೆದ್ದುಲೇಸಾದ ಸಂಪತ್ತನೊಳಗೆ ಕೊಟ್ಟೂ'ುೀಸಲಳಿಯದ ಮ'ಮ ಭಕ್ತಜನಸಂಸಾರಿವಾಸುದೇವನ ಮ'ಮೆ ಜಲನಿಧಿಯ ಕೂಡಿರುವ 21ತತ್ವಸಾರವನು ನವಯೋಗಿಗಳು ನಿ'ುಗೊರೆದುಮತ್ತೆ ನಾರದನು ವಸುದೇವನೆಡೆಗೆಚಿತ್ತಜನ ಜನಕನಭಿಮತದಿಂದವತರಿಸಿಚಿತ್ತವನು ವಸ್ತು'ನೊಳೈಕ್ಯವನು ಮಾಡಿಸಿದ 22ವೇದಾಂತ ನಿಧಿಯಾದ ಉದ್ಧವಗೆ ತತ್ವವನುಮಾಧವನೆ ತಾನೊರೆದು ಧರಣಿಯೊಳಗೆವೇದಾಂತ 'ಸ್ತರಕೆ ನಿಲಿಸಿ ನಿಜಪಾದುಕೆಯವೇದವೇದ್ಯನು ಕೊಟ್ಟು ನಿಜಜನಕೆ ನಿಧಿಯಾದ23ಕಾಲಗತಿಗಳನೊರೆದು ಮತ್ತೆ ಭೂಲೋಕವನುಪಾಲಿಸುವ ದೊರೆಗಳಭಿಮತದ ಗತಿಯೂಮೇಲಾಗಿ ಕಲಿಯುಗದ ಗತಿ'ಸ್ತರವನೆಲ್ಲಲೋಲನೃಪಗೊಲ'ಂದ ಪೇಳ್ದ 'ವರಗಳಿರುವ 24ಪರಮಾತ್ಮನೊಡನಾಡಿ ಪರಮ ಪಾವನರಾಗಿಮೆರೆವ ಗೋಪೀ ರತ್ನ ಮಾಲೆಯೊಡನೆನೆರೆಶಿಖಾಮಣಿಯೆನಿಸಿ ತಿರುಪತಿಯ ವೆಂಕಟನುಧರಣಿಯೊಳು ಸಕಲರನು ನೆರೆ ಸಲಹುತಿಹನೂ25
--------------
ತಿಮ್ಮಪ್ಪದಾಸರು