ಒಟ್ಟು 5 ಕಡೆಗಳಲ್ಲಿ , 5 ದಾಸರು , 5 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪುರಾಣವಿಷಯ ಶ್ರೀವೆಂಕಟೇಶ ಕಲ್ಯಾಣ ಇನ್ನೆಂದಿಗೋ ನಿನ್ನದರುಶನ ಶೇಷಾದ್ರಿವಾಸ ಪ ಪನ್ನಂಗಶಯನ ಪ್ರಸನ್ನರ ಪಾಲಿಪ ಘನ್ನಮಹಿಮ ನೀನೆನ್ನನುದ್ಧರಿಸೂಅ.ಪ ವರ ಸುರಮುನಿಗಳ ವೃಂದ ನೆರಹಿದ ಯಾಗಗಳಿಂದ ಪರಮಾದರದಿಂದಿರುವ ಸಮಯದಿ ನಾರದ ಮುನಿ ಬಂದೊದಗಿ ನಿಂದ ಇ- ಸುರಮುನಿವಚನದಿ ಭೃಗುಮುನಿವರ ಪೋಗಿ ಹರುಷದಿ ಶ್ರೀಹರಿ ಉರಗಶಯನನಾಗಿ ಹರುಷದಿ ಮುನಿಪಾದ ಕರದಲಿ ಒತ್ತುತ ಕರುಣದಿ ಸಲಹಿದೆ ದುರಿತವ ಹರಿಸಿ ಹರಿಭಕುತರ ಅಘಹರಿಸಿಕಾಯುವಂಥ ಕರುಣಿಗಳುಂಟೇ ಶ್ರೀಹರಿ ಸರ್ವೋತÀ್ತುಮಾ 1 ಸ್ವಾಮಿ ನೀನಿಜಧಾಮವನೇ ತೊರೆದೂ ಸ್ವಾಮಿಕಾಸಾರ ತೀರದಿ ನಿಂದೂ ಧಾಮವನರಸಿ ವಲ್ಮೀಕವನೆ ನೋಡಿ ಸನ್ಮುದವನ್ನೇ ತೋರುತ ಕಮಲ ಭವಶಿವ ತುರುಕರುರೂಪದಿ ಕಾಮಧೇನು ಪಾಲ್ಗರೆಯುತಾ ಈ ಮಹಿಮೆಯನ್ನೇ ಬೀರುತಾ ಭೂಮಿಗೊಡೆಯ ಚೋಳನೃಪಸೇವಕನು ಧೇನುವನ್ನು ತಾ ಹೊಡೆಯಲು ಕಾಮನಯ್ಯ ನೀನೇಳಲು ಭೀಮವಿಕ್ರಮವ ತೋರಲು ಕ್ಷಮಿಸಿದೆ ನೃಪನ ದಯಾಳು ಅಮಿತ ಸುಗುಣಪೂರ್ಣ ಅಜರಾಮರಣ ನೀ ಮಸ್ತಕಸ್ಪೋಟನ ವ್ಯಾಜವ ತೋರಿ ಪ್ರೇಮದಿ ಗುರುಪೇಳ್ದೌಷಧಕಾಗಿ ನೀ ಮೋಹವ ತೋರಿದೆ ವಿಡಂಬನಮೂರ್ತೇ 2 ಮಾಯಾರಮಣನೆ ಜೀಯಾ ಕಾಯುವೆ ಜೀವನಿಕಾಯಾ ತೋಯಜಾಂಬಕ ಹಯವನೇರಿ ಭರದಿ ತಿರುಗಿತಿರುಗೀ ವನವನೆÀಲ್ಲ ಮೃಗನೆವನದಿ ನಿಂದು ನೋಡಿದೇ ಪ್ರಿಯಸಖಿಯರ ಕೂಡಿ ಪದುಮಾವತಿಯು ತಾ ಹಯದಿ ಕುಳಿತ ನಿನ್ನ ನೋಡಲು ಪ್ರಿಯಳಿವಳೆನಗೆಂದು ಯೋಚಿಸಿ ಕಾಯಜಪಿತ ನಿನ್ನ ಹಯವನೆ ಕಳಕೊಂಡು ಮಾಯದಿಂದ ನೀ ಮಲಗಿದೆ ತೋಯಜಮುಖಿಯಳ ಬೇಡಿದೇ ಆ ಯುವತಿಯನ್ನೇ ಸ್ಮರಿಸುತಾ ಶ್ರೀಯರಸನೆ ನೀನು ಸ್ತ್ರೀರೂಪದಿ ಹೋಗಿ ಶ್ರೀಯಾಗಿಹಳಿನ್ನು ಶ್ರೀಹರಿಗೀಯಲು ಶ್ರೇಯವೆಂದು ಆಕಾಶನನೊಪ್ಪಿಸಿ ತಾಯಿಯಭೀಷ್ಟವನಿತ್ತೆ ಸ್ವರಮಣಾ 3 ಸಕಲಲೋಕೈಕನಾಥಾ ಭಕುತರಭೀಷ್ಟಪ್ರದಾತಾ ಭಕುತನಾದ ಆಕಾಶನೃಪತಿಯು ಬಕುಳೆ ಮಾ- ತ ಕೇಳಿ ಅಭಯವಿತ್ತು ಮನ್ನಿಸಿ ಪದುಮಾವತಿಯ ಪರಿಣಯ ಶುಕರ ಸನ್ಮುಖಹಲ್ಲಿ ಅಕಳಂಕ ಮಹಿಮ- ಗೆ ಕೊಟ್ಟನು ತಾ ಲಗ್ನಪತ್ರಿಕಾ ಸ್ವೀಕರಿಸುವದೀ ಕನ್ನಿಕಾ ಈ ಕಾರ್ಯಕೆ ನೀವೆ ಪ್ರೇ ಸಕಲಸಾಧನವಿಲ್ಲಿನ್ನು ಲೋಕೇಶಗರುಹಬೇಕಿನ್ನು ಲೋಕಪತಿಯೆ ಸುರಕೋಟಿಗಳಿಂದಲಿ ಈ ಕುವಲಯದಿ ನಿನ್ನಯ ಪರಿಣಯವೆಸಗಲು ಭಕುತಜನಪ್ರಿಯ ಶ್ರೀವತ್ಸಾಂಕಿತ 4 ಖಗವರವಾಹನ ದೇವಾ ಅಗಣಿತಮಹಿಮ ಗೋಮಯನೆನಿಸಿ ಸುರರ ಪೊರೆಯುತಾ ಅಗಣಿತ ಸುರಗಣ ಕಿನ್ನರರು ಸಾಧ್ಯರು ತರು ಫಲ ಖಗಮೃಗ ರೂಪವ ಬಗೆಬಗೆ ಇಹೆ ಪೊಗಳಲಳವೇ ಗಿರಿವರವು ಹಗಲು ಇರುಳು ಭಗವಂತನೆ ನಿನ್ನನ್ನು ಪೊಗಳುತಿಹರು ನಿನ್ನ ಭಕುತರು ಮೊಗದಲಿ ನಿನ್ನ ದಾಸರು ಗೋವಿಂದ ಮುಕುಂದ ಎನ್ನುತಾ ಯುಗ ಯುಗದೊಳು ನೀನಗದೊಳು ನೆಲಸಿಹೆ ಜಗದ ದೇವ ರಾಜಿಸುವವನಾಗಿಹೆ ಮಿಗಿಲೆನಿಸಿದ ಶ್ರೀ ವೆಂಕಟೇಶಾ ಸದ್ಗುಣ ಸಚ್ಚಿದಾನಂದ ಮುಕುಂದ ಗೋವಿಂದಾ 5
--------------
ಉರಗಾದ್ರಿವಾಸವಿಠಲದಾಸರು
ಆಸ್ಥಾನ ಮಾಡೋಣ ಆತ್ಮ ವಿಚಾರ ದಾಸ್ತಾನ ಮಾಡೋಣ ಪ ಸ್ವಸ್ತಿ ಆಯುಷ್ಕೀರ್ತಿ ಧರ್ಮಯಶೋಕಾಮ ಹಸ್ತಿವರದನಾಧೀನವೆಂದು ನಾವೆಲ್ಲಅ.ಪ ಶಮದಮಶ್ಯಾಂತಿ ವಿರಕ್ತ್ಯುಪರತಿಯಂಬೋ ಕ್ರಮಮಂತ್ರಿಗಳು ವಿಜ್ಞಾನಿ ಪ್ರಧಾನಿಯು ಸಮಾಧಿಕ ಶೂನ್ಯವೆಂಬುವ ರಾಜನು ವಿಷಯ ಭ್ರಮೆ ಎಂಬೊ ಕಟ್ಟು ವಿಚಾರಣೆಯಾಗುವ 1 ಸತ್ಕರ್ಮವೆಂಬೊ ಭೂಮಿಯನು ಸಾಧುಗಳೆಂಬ ವಕ್ಕಲುಗಳಿಗಿತ್ತು ಸಿದ್ಧಾಯವ ತೆಗೆದು ಭಕ್ತಿ ಜ್ಞಾನ ವೈರಾಗ್ಯ ಬಂಡಿಗಳಲಿ ತುಂಬಿ ಭಗವಂತನೆಂಬ ರಾಜಗೆ ಒಪ್ಪಿಸುವಂಥ 2 ಸ್ವಾಮಿ ಭೃತ್ಯನ್ಯಾಯ ಎಂಬೋ ಡಂಗುರವನು ಹೊಯಿಸಿ ತಾಮಸರಿಗೆ ನಿತ್ಯದಂಡನೆಯನು ವಿಧಿಸಿ ಕಾಮಕ್ರೋಧಗಳೆಂಬೋ ಖಳರ ಶಿಕ್ಷಿಸಿ ಗುರು- ರಾಮವಿಠಲನ ಕರುಣವೆಂಬೋ ಸಂಬಳ ಪಡೆದು 3
--------------
ಗುರುರಾಮವಿಠಲ
ಇದೇ ಭಕ್ತವರ್ಯನ ಲಕ್ಷಣ ಪಾವನವಿದು ಕಾಣಾ ಪರಮಾತ್ಮನ ರೂಪ ಚರಾಚರದ ಜಗದಲ್ಲಿ 1 ಇದೇ ಪರಿಯಲಿ ಸ್ವರೂಪದಲ್ಲಿ ಜಗವೆಲ್ಲಾ ಕಾಂಬಾ ಆತ್ಮರೂಪ ಭಗವಂತನೆ ಸತ್ಯ ಮಿಕ್ಕವೆಲ್ಲಾ ಮೀಥ್ಯ ಲಕ್ಷ್ಯವೆಲ್ಲಾ ತನ್ನೋಳ ತಿರುಗಿಸಿ ಆನಂದವ ಪಡೆವ ಕಾಣುವನಿವ ಪರಮಾತ್ಮ ಸರ್ವಾತ್ಮ 2 ಸಂಸಾರದಲಿ ವಿಷಯದ ಭೋಗ ಪ್ರಾರಬುಧದಲಿಪಡೆ ಮಾಯೆಮಾತ್ರವಿದು ಎನ್ನುತ ತಿಳಿವಾ 3 ನಿಜಾಸಕ್ತಿ ಪಡೆಯದಲೇ ನಿರುತ ತನ್ನಯ ಹೃದಯಾಂತ ಪರಮಾತ್ಮನ ನೆನೆವ ದೇಹಾದಿಗಳ ಈ ಪರಿಣಾಮಗಳಿಗೇ ಮೋಹಗೊಳಲಾರ ಕಾಮನೆಯಾ ಬೀಜಾಂಕುರವೆಂದೂ ನಾಟದು ಇವನಲ್ಲೀ ಕಾಣುವನಿವ ಪರಮಾತ್ಮ ಸರ್ವಾತ್ಮ ಪ್ರಭೂಶಂಕರನ ರೂಪಾ 4
--------------
ಶಂಕರಭಟ್ಟ ಅಗ್ನಿಹೋತ್ರಿ
ಜಗದಾಖ್ಯ ವೃಕ್ಷ ಚಿಂತಿಪುದು ಬುಧರು ಪ ಭಗವಂತನೆಂಬ ಆಗಸದಲಿ ಪಸರಿಸಿದಅ.ಪ. ಚತುರಾಸ್ಯ ವಾಣಿ ಈರ್ವರು ಬೀಜ ಚಿತ್ಪ್ರ ಕೃತಿ ಪೃಥವಿ ಕರ್ಮವು ಬೇರು ತ್ರಿಗುಣತ್ವ - ವು ಕ್ಷಿತಿ ಜಲಾನಲ ವಾಯು ಗಗನ ಶಾಖೆಗಳಿಂದಕೆ ಶತಕಿರಣ ಉಪಕೊಂಬೆಯೆನಿಸಿ ಕೊಂಬವು ಇದಕೆ 1 ಅಹಂಕಾರ ಬಲದಿಂದ ಅಭಿವೃದ್ಧಿ ಐದುವುದು ಕುಸುಮ ತನ್ಮಾತ್ರ ರಸದಿ ಸಹಿತವಾರ ಪ್ರವೃತ್ತಿ ನಿವೃತ್ತಿ ಕರ್ಮಫಲ ಅಹರಹರ್ ಭುಂಜಿಪವು ತನ್ನಾಮ ಜೀವಖಗ 2 ನಾನು ನನ್ನದು ಎಂಬ ನೀಡ ದ್ವಯಗಳಿದಕೆ ಹೀನ ವಿದ್ಯಾದಿ ಪಂಚಕವೆ ಸರ್ಪಗಳಲ್ಲಿ ಶ್ರೀನಿಧಿ ಜಗನ್ನಾಥವಿಠಲ ಸಂರಕ್ಷಕನು 3
--------------
ಜಗನ್ನಾಥದಾಸರು
ದೇವ ನೀ ದಯಮಾಡಿ ಕರುಣಿಪುದೂ ಪ ಮಮದುರಿತಹರಣ ಜೀಯ ಅ.ಪ ಕಾಲ ಪಾವಕಾಸನನೇ ದೇವ ಪ್ರತ್ಯಂಗನದ್ಯಾರೊ ತೋರೋ ಸಾವಧಾನ ಸರ್ವಾತ್ಮಕ ತ್ರಿಗುಣನೆಬಾರೊ ಬಾವ ಜಾರಿ ಸಖ ಭಜಕ ಜನ ವಿಹತ ಸರ್ವಜನರಿಗಾದರದಿ ಸಂಪದವು ನೀವ ಸುಂದರನೆ ನಿಜಪರ ಬ್ರಹ್ಮನೆ 1 ಪ್ರಣವನಾದ ಪಂಡಿತಜನ ಶಿಖರನೆ ಫಣಿಪಾಸನ ಹರಿಯೆ ಧೊರೆಯೆ ಅಣಿದು ಬರುವ ದುರ್ನಡೆಗಳ ಕಡಿಯದೆ ಯೆಣಿಪುದು ನಿನಗಿದು ಸರಿಯೇ ತ್ರಿಣೆಯೆಸಖನೆ ತ್ರಿಗುಣೇಶನೆ ಕೇಶವ ಅಣಿದು ಬಾರೊ ದಯಕೋರೆಲೊ ಮಹಾ 2 ದ್ವಿಜಗಣ ಮಣಿಯಹುದೋ ಅಜ ಮಹರಾಜನೆ ದು:ಖವ ನೀ ತ್ಯಜಿಸಬೇಕಹುದಹುದೋ ವಿಜಯಸಾರಥಿಯೆ ನಿಜ ಭಗವಂತನೆ ಸುಜನರೊಡನೆ ಸುಖಿಸುವದೆನಗದು ಕೊಡೊ 3 ನಿಗಮವಿನುತ ನಿಖಿಲಾಂಡಕೋಟಿ ಬ್ರಹ್ಮಾಂಡ ಜಗದಾದಿ ನಾಯಕ ಕನ್ಯಾರೊ ಬಾರೊ ಸುಗುಣರೂಪ ಸಾಕ್ಷಾತ್ ಪರಮಪದ ತೋರೋ ಅಗಣ ಸಹಜ ಮತ್ಕುಗುಣ ಕಾಲನೆ ಕಲಿ ನೆಗುರು ಮಂಗಳಪುರಿಧಾಮಾ 4
--------------
ಚನ್ನಪಟ್ಟಣದ ಅಹೋಬಲದಾಸರು