ಒಟ್ಟು 8 ಕಡೆಗಳಲ್ಲಿ , 8 ದಾಸರು , 8 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(3) ತುಳಸಿರಾಮದಾಸರು ದಯಮಾಡಬಾರದೇಕೊ ದಾಸನೊಳೆ ನೀ ಪ ಭಯ ವೇನಿಹುದೊ ನಿನ್ನ ಭಜಕನಾದ ಮ್ಯಾಲೆ ದಯ ಸಾಕ್ಷಿಯೊಳು ಜಗತ್ರಯ ಪೂಜ್ಯವಂತ 1 ಸಾಧು ಶಿಖರನೆ ಬಾರೊ ಸಕಲಾಂತರವತೋರೊ ಪಾದ ಸೇವಕನು ನಾನಾದಮೇಲೆ ನಿಂತು ನೀ 2 ನಿತ್ಯೋತ್ಸವನೇ ದೇವಾ ನೀನೆ ಮಹಾನುಭಾವಾ ಪ್ರತ್ಯಕ್ಷಮಾದ ಮದ್ಗುರುವೇ ತುಲಸೀರಾಮಾ 3
--------------
ಚನ್ನಪಟ್ಟಣದ ಅಹೋಬಲದಾಸರು
ಪರಮಪದವಿಯನೀವ ಗುರುಮುಖ್ಯ ಪ್ರಾಣನಧರೆಯೊಳಗುಳ್ಳ ಮಾನವರೆಲ್ಲ ಭಜಿಸಿರೊ ಪ ಅಂದು ತ್ರೇತಾಯುಗದಿ ಹನುಮನಾಗವತರಿಸಿಬಂದು ದಾಶರಥಿಯ ಪಾದಕೆರಗಿಸಿಂಧುವನು ದಾಂಟಿ ಮುದ್ರಿಕೆಯಿತ್ತು ದಾನವರವೃಂದಪುರ ದಹಿಸಿ ಚೂಡಾಮಣಿಯ ತಂದವನ1 ದ್ವಾಪರಯುಗದಲಿ ಭೀಮಸೇನನೆನಿಸಿಶ್ರೀಪತಿಯಪಾದ ಕಡು ಭಜಕನಾಗಿಕೋಪಾವೇಶದಲಿ ದುಶ್ಶಾಸನನನು ಸೀಳಿಭೂಪನ ಜಲದೊಳಗೆ ಕರೆಕರೆದು ಜರೆದವನ 2 ಕಲಿಯುಗದಲಿ ತುರೀಯಾಶ್ರಮವನೆ ಧರಿಸಿಕಲುಷದ ಮಾಯಿಗಳನೆ ಸೋಲಿಸಿಖಿಲವಾದ ಮಧ್ವಮತವನು ಬಲಿದೆನಿಸಿ ಕಾಗಿನೆಲೆಯಾದಿಕೇಶವನೆ ಪರದೈವನೆಂದವನ 3
--------------
ಕನಕದಾಸ
ಯಾರೇನು ಮಾಡುವರೋ ಹರಿಯೇ ಯಾರಿಂದಲೇನಹುದು ಪ ವಾರಿಜಾಂಬಕ ಮಾರಜನಕ ಕೌಸ್ತುಭ ವಕ್ಷ ಶ್ರೀಶಾ ಅ.ಪ. ಅಜ ಈ ಜಗ ಸೃಜಿಸಿದನೆ ಶ್ರೀದೇವಿಯು ನಿಜಗುಣ ನೆಲೆಗಂಡಳೆ ಭುಜಗಭೂಷಣ ಆಯಕರ್ತನಾದರೆ ಭಜಕನಾ ಬಯಕೆ ಬಾಯಬಿಡುವದೆ 1 ಸುರಪ ಸುರರೊಡೆಯನೆ ಧರಣಿ ಈ ಉರಗೇಂದ್ರ ಪೊತ್ತಿದನೆ ದುರುಳನ ಭಯಕೆ ಪುರವ ಬಿಟ್ಟೋಡಿದ ಧರಣಿಯ ದುರುಳನೊಯ್ಯೆ ವರಾಹರೂಪದಿ ತಂದೆ ನೀ ತಂದೆ ಹರಿಯೇ 2 ಶ್ರೀಪತಿ ಸುರತತಿಯ ಸೃಜಿಸಿ ಈಪ್ಸಿತಾರ್ಥಗಳನೆಲ್ಲಾ ಅವರಿಗೆ ಸ್ವಾಪ್ನಜಾಗೃತಿಯಲಿ ಪರಿಪಾಲಿಸೆ ಮಹಾನಿಧಿವಿಠಲ ನೀನಲ್ಲದಿನ್ಯಾರೋ 3
--------------
ಮಹಾನಿಥಿವಿಠಲ
ವಂದಿಸುವೆನು ರಘುವರನಾ ಸುರವಂದಿತ ಚರಣಾಂಬುಜನ ಪ ತಂದೆ ಮಾತಿಗೆ ವನಕ್ಹೋಗಿ ಬಂದವನಾಸುಂದರ ಸಹ ಸೀತೆಯಿಂದ ಅನುಜನಾ ಅ.ಪ ಚಾಪ ಭಂಜಕನಾ 1 ವಾರಿಧಿ ಸೇತು ಬಂಧಕನಾ ಸೀತಾ -ಚೋರನ ಶಿರವಳಿದವನಾಚಾರು ಸಿಂಹಾಸನವೇರುತ ಸರಯು -ತೀರದ ಅಯೋಧ್ಯಾ ವಿಹಾರ ಸುಂದರನಾ2 ಕೇಸರಿ ಸುತಗೆ ತನುಧನಮಣಿಆಶ್ರಯವನು ಕೊಟ್ಟವನಾಕೋಸಲ ಜನರಿಗೆ ಮೋಕ್ಷವವಿತ್ತವನಾಇಂದಿರೇಶ ಸುಖಾತ್ಮ ನಿರ್ದೋಷ ಪುರುಷನಾ 3
--------------
ಇಂದಿರೇಶರು
ವರದವಿಠಲ ದೇವನ ಪೊರೆಯವುದಾನರನ ಪ ಬಂದ ವಿಭೀಷಣನ ಚಂದದಿ ಸಲಹಿದನು 1 ಅಜಮಿಳಗೊಲಿದನ ಕುಜನರ ತರಿದನ ಸುಜನರನಾಳಿದನ ವಿಜಯನ ರಥಸೂತನ 2 ಗಂಗೆಯ ಪಡೆದವನ ರಥಾಂಗವ ಪಿಡಿದವನ 3 ಖ್ಯಾತ ಪಾದಾಂಬುಜನ ಸೇತುವಿಧಾತನ 4 ರಾಮನ ಜಗದಭಿರಾಮನ ದೈತ್ಯ ವಿ ರಾಮನ ಭಜಕನಾ ರಾಮನ ದಶರಥ ರಾಮನ ಸೀತಾ ರಾಮನ ಗುಣಧಾಮನ 5 ಪಂಕಜನೇತ್ರನ ಪರಮ ಪವಿತ್ರನ ಶಂಕರ ನುತಿ ಪಾತ್ರನ ವೆಂಕಟರಮಣನ ಕಿಂಕರ ಶರಣನ ಸಂಕಟಹರ ನಾಮನ6
--------------
ವೆಂಕಟವರದಾರ್ಯರು
ವಾಯುವಂದಿತ ವಿಠಲ | ಪೊರೆಯ ಬೇಕಿವನಾ ಪ ಪಾದ | ಭಜಕನಾದವನಾಅ.ಪ. ಗುರುಹಿರಿಯರಾ ಸೇವೆ | ನಿರುತ ಗೈಯುವ ಮನವಕರುಣಿಸುವುದಿವ ನೀಗೆ | ಮರುತಾಂತರಾತ್ಮಗರುಡ ಗಮನನೆ ದೇವ | ಗರ್ವಗಳ ಪರಿಹರಿಸಿಸರ್ವಾಂತರಾತ್ಮಕನೆ | ಕಾಪಾಡೊ ಇವನಾ 1 ಹರಿಯೆ ಪರನೆಂಬಂಥ | ವರಸುಜ್ಞಾನವ ಕೊಟ್ಟುತರತಮಂಗಳು ಅಂತೆ | ಎರಡು ಮೂರುರ್ಭೇದಾಪರಮ ಸತ್ಯವು ಎಂಬ | ವರಜ್ಞಾನ ಪಾಲಿಸುತಪರಿಪರಿಯ ಭವಭಂದ | ಪರಿಹರಿಸೊ ಹರಿಯೇ 2 ಕಾಕು ಸಂಗಮಕೆಡಿಸೊಪ್ರಾಕ್ಕುಕರ್ಮವ ಕಳೆಯೊ | ಶ್ರೀ ಕರಾರ್ಚಿತನೆ 3 ದುರಿತವನ ಕುಠಾರ | ಶರಣಜನ ವತ್ಸಲನೆದುರಿತಾಳಿ ದೂರೈಸಿ | ಪೊರೆಯೊ ಹರಿಯೇಕರುಣ ನಿಧಿ ನೀನೆಂದು | ಮರೆಹೊಕ್ಕೆ ತವಪಾದಚರಣ ದಾಸನ ಪೊರೆಯೊ | ಹರಿಯೆ ಪರಮಾಪ್ತ 4 ಶ್ರೀವರನೆ ಸರ್ವೇಶ | ಭಾವದಲಿ ಮೈದೋರಿಭಾವುಕನ ಪೊರೆ ಎಂದು | ದೇವ ಪ್ರಾರ್ಥಿಸುವೇಈ ವಿಧದ ಬಿನ್ನಪವ | ನೀವೊಲಿದು ಸಲಿಸುವುದುದೇವ ದೇವೇಶ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ನಿನ್ನ ಮಹಿಮೆಗಳೆಲ್ಲ ನೀನೆ ಬಲ್ಲೈಯ್ಯ ವರದಚಿನ್ಮಯ ಗರುಡಗಿರಿಯ ಮಾನ್ಯ ತಿಮ್ಮ್ಮಯ್ಯ ಪ.ನಿಜರಾಣಿಗಂಘ್ರಿನಖನಿಜವು ತಿಳಿಯದ ಮಹಿಮೆವ್ರಜದಿ ವದನದಿ ತಾಯ್ಗೆತ್ರಿಜಗತೋರಿದ ಮಹಿಮೆಅಜಫಣಿಗಳುಗ್ಘಡಿಪ ಮಹಿಮೆಮಂದಅಜಮಿಳ ಬೆದರ್ಯೊದರೆ ಭಜಕನಾದ ಮಹಿಮೆ 1ನಿಲ್ಲದಾ ಮುನಿಮನದಿ ಚೆಲ್ವ ಚರಣದ ಮಹಿಮೆಬಲ್ವಿಂದ ಉಂಗುಟದಿ ತಳ್ವೆಂಗದ ಮಹಿಮೆದುರ್ಲಭ ಮಮರಿಗೆ ನೋಟ ಮಹಿಮೆ ಆಗೊಲ್ವೆಂಗಳೇರ ನೋಡಿ ಭುಲ್ಲೈಪ ಮಹಿಮೆ 2ವೈಕುಂಠ ಮಂದಿರದಿ ಮುಕುತರೊಂದಿತ ಮಹಿಮೆಗೋಕುಲದಿ ಗೊಲ್ಲರೊಳು ಆಕಳ ಕಾಯುವ ಮಹಿಮೆ ಅನೇಕಜಾಂಡದಿ ಪೂರ್ಣ ಮಹಿಮೆ ಪ್ರಸನ್ವೆಂಕಟಾದ್ರಿಯ ಮೇಲೆ ಏಕೈಕ ಮಹಿಮೆ 3
--------------
ಪ್ರಸನ್ನವೆಂಕಟದಾಸರು
ಪರಮಪದವಿಯ ನೀವ ಗುರುಮುಖ್ಯ ಪ್ರಾಣನಧರೆಯೊಳಗುಳ್ಳ ಮಾನವರೆಲ್ಲ ಭಜಿಸಿರೊ ಪಅಂದು ತ್ರೇತೆಯಲಿ ಹನುಮನಾಗಿ ಅವತರಿಸಿಬಂದು ದಾಶರಥಿಯ ಪಾದಕೆರಗಿ ||ಸಿಂಧುವನೆ ದಾಟಿ ಮುದ್ರಿಕೆಯಿಕ್ತು ದಾನವರವೃಂದಪುರ ದಹಿಸಿ ಚೂಡಾಮಣಿಯ ತಂದವನ 1ದ್ಪಾಪರಯುಗದಲಿ ಭೀಮಸೇನ ನೆನಿಸಿಶ್ರೀಪತಿಯಪಾದಕಡು ಭಜಕನಾಗಿಕೋಪಾವೇಶದಲಿ ದುಃಶಾಸನನನು ಸೀಳಿಭೂಪರ ಬಲದೊಳಗೆ ಜರೆಜರೆದು ಕರೆದವನ 2ಕಲಿಯುಗದಲಿ ತುರೀಯಾಶ್ರಮವನೆ ಧರಿಸಿಕಲುಷದ ಮಾಯಿಗಳನು ಸೋಲಿಸಿಖಿಲವಾದ ಮಧ್ವಮತವನೆ ನಿಲಿಸಿ ಕಾಗೆ-ನೆಲೆಯಾದಿ ಕೇಶವನ ಪರದೈವನೆಂದೆನಿಸುವನ * 3
--------------
ಪುರಂದರದಾಸರು