ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸರಸಿಜನಾಭನೆ ಸೆರಗೊಡ್ಡಿ ಬೇಡುವೆ,ದುರಿತಗಳೆಲ್ಲ ತರಿದು ವರವಿತ್ತು ಕರುಣಿಸೊ ಪ ಕರುಣಾಸಾಗರ ನಿನ್ನ ಚರಣವ ನಂಬಿದೆಪರಮ ಪಾವನ ನಿನ್ನ ಶರಣನ ಪೊರೆಯೆಂದು 1 ಈಶವಿನುತ ನಿನ್ನ ವಾಸಿಯ ಪೊಗಳುವೆದಾಸ ಎಂದೆನ್ನನು ಗಾಸಿಮಾಡದೆ ಕಾಯೊ 2 ಬಾರಿಬಾರಿಗೆ ಬರುವ ದಾರಿದ್ರ್ಯ ದುಃಖದದೂರಗೈಸುವಂಥ ದಾರಿ ತೋರಿಸೆಂದು 3 ಕಂತುಪಿತನೆ ಎನ್ನ ಅಂತರಂಗದಿ ನಿನ್ನಸಂತತÀ ನೆನೆವಂತೆ ಚಿಂತನೆ ನಿಲಿಸೆಂದು 4 ಮಂಗಳಾತ್ಮಕನೆ ಶ್ರೀರಂಗವಿಠ್ಠಲ ಭು-ಜಂಗಶಯನ ನಿನ್ನ ಹಿಂಗದೆ ಭಜಿಪೆನು5
--------------
ಶ್ರೀಪಾದರಾಜರು