ಒಟ್ಟು 3 ಕಡೆಗಳಲ್ಲಿ , 2 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪರಮೇಶ್ವರ ಪೂರ್ಣ ತುಂಬ್ಯಾನ ಪರಾಮರಿಸಿ ನಿಮ್ಮೊಳಗೆ ಪರದೆ ಇಲ್ಲದೆ ಪರವಸ್ತುದೋರುವ ಕರುಣಿಸಿ ನಿಮಿಷದೊಳಗೆ ಸದ್ಗುರು ಜಗದೊಳಗೆ ಎರಡಿಲ್ಲದೆ ಗುರುಚರಣಕ ಮನಬೆರೆದನುಭವಿಸುವದಾವಾಗೆ ತ್ರಾಹಿ ತ್ರಾಹಿ 1 ನಿಜಮಾಡುವದೆಲ್ಲ ಡಾಂಭಿಕ ಮಾಡದು ತಾ ನಿಜಸುಖ ಕೂಡಲು ಪುಣ್ಯೊದಗ್ಯಾಗಲು ಗುರುಕೃಪೆ ನೋಡುದು ಕೌತುಕ ಗೂಡಿನೊಳನೇದಾ ತ್ರಾಹಿ ತ್ರಾಹಿ 2 ರಾಜಿಸುತಿಹ್ಯ ಶ್ರೀಪಾದ ಅನುದಿನ ತಾ ಸೇವಿಸಬೇಕು ಸುಬೋಧ ಮಾಜದೆ ಗುರುಚರಣಕ್ಕೆ ತನುಮನಧನ ಭಜಿಸಬೇಕು ಸರ್ವದಾ ರಾಜಯೋಗಪ್ರಸಾದ ತ್ರಾಹಿ ತ್ರಾಹಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇರಬೇಕು - ಹರಿದಾಸರ ಸಂಗವರಜ್ಞಾನಿಗಳ ದಯ ಸಂಪಾದಿಸಬೇಕು ಪ.ಅತಿಜ್ಞಾನಿಯಾಗಿ ಹರಿಕಥೆಯ ಕೇಳಬೇಕುಯತಿಗಳ ಪಾದಕ್ಕೆ ಎರಗಬೇಕುಸತಿ ಸುತರಿದ್ದು ಮಮತೆಯನು ಬಿಡಬೇಕುಗತಿಯೆಂದು ಬಿಡದೆ ಹರಿಯ ಪೋಪರಸಂಗ 1ನಡೆ ಯಾತ್ರಿಯನಬೇಕು ನುಡಿ ನೇಮವಿರಬೇಕುಬಿಡದೆ ಹರಿಯ ಪೂಜೆಯ ಮಾಡಬೇಕುಅಡಿಗಡಿಗೆ ಬಂದು ಹರಿಗಡ್ಡ ಬೀಳಬೇಕುಬಿಡದೆ ಹರಿಭಜನೆಯ ಮಾಡುವರ ಸಂಗ 2ಹರಿ - ಹರ -ವಿರಂಚಿಯರ ಪರಿಯ ತಿಳಿಯಬೇಕುತರತಮದಿ ರುದ್ರ - ಇಂದ್ರಾದಿಗಳಅರಿಯದಿದ್ದರೆ ಗುರುಹಿರಿಯರ ಕೇಳಬೇಕುಪರಮಾನಂದದಲಿ ಓಲಾಡುವರ ಸಂಗ 3ಷಟ್ಕರ್ಮ ಮಾಡಬೇಕು ವೈಷ್ಣವನೊಲಿಸಬೇಕು ಉ -ತ್ಕಷ್ಟ ವೈರಾಗ್ಯಬೇಕು ದುಷ್ಟಸಂಗ ಬಿಡಬೇಕುವಿಷ್ಣುವಿನ ದಾಸರ ದಾಸನಾಗಲುಬೇಕುಎಷ್ಟು ಕಷ್ಟಬಂದರೂ ಹರಿಯ ಭಜಿಪರ ಸಂಗ 4ಏಕಾಂತ ಕುಳ್ಳಿರಬೇಕು ಲೋಕವಾರ್ತೆ ಬಿಡಬೇಕುಲೋಕೈಕನಾಥನ ಭಜಿಸಬೇಕುಸಾಕು ಸಂಸಾರವೆಂದುಕಕ್ಕುಲತೆ ಬೀಡಬೇಕುಶ್ರೀಕಾಂತಪುರಂದರವಿಠಲರಾಯನ ಸಂಗ5
--------------
ಪುರಂದರದಾಸರು
ಸಜ್ಜನರ ಸಂಗ ನಮಗೆಂದಿಗಾಗುವುದೊ |ದುರ್ಜನರ ಸಂಗದಿಂದಲಿ ನೊಂದೆ ಹರಿಯೆ ಪವಾಕು-ವಾಕಿಗೆ ಡೊಂಕನೆಣಿಸುವರು-ಮತ್ತೆ |ಪೋಕರಾಡಿದ ಮಾತು ನಿಜವೆಂಬರು ||ವಾಕ್‍ಶೂಲಗಳಿಂದ ನೆಡುವರು ಪರರ ನೀ |ಪೋಕುಮಾನವರಿಂದ ನೊಂದೆ ಹರಿಯೆ 1ತಾವೆ ತಮ್ಮನ್ನು ಕೊಂಡಾಡಿಕೊಳ್ಳುವರು |ನ್ಯಾಯವಿಲ್ಲದೆ ನುಡಿವರು ಪರರ ||ಭಾವಿಸಲರಿಯರು ಗುರುಹಿರಿಯರನಿಂಥ |ಹೇಯ ಮನುಜರಿಂದ ನೊಂದೆ ಹರಿಯೆ 2ಒಡಜನರನು ಕೊಂದು ಅಡಗಿಸಿಕೊಂಬರು |ಬಿಡಲೊಲ್ಲರು ಹಿಡಿದನ್ಯಾಯವ ||ನುಡಿದು ಕೇಡನು ಒಡನೆ ತಪ್ಪಿಸಿಕೊಂಬಂಥಕಡು ಮೂರ್ಖರಿಂದ ನಾ ನೊಂದೆನು ಹರಿಯೆ 3ತೊತ್ತಿನೊಡನೆ ತನ್ನ ಸ್ನೇಹ ಸರಸ ಮಾತು |ತೆತ್ತಿಗರೊಡನೆ ಪಂಥವ ನುಡಿವರು ||ಸತ್ತಬಳಿಕ ಸೃಷ್ಟಿ ಸಟೆಯೆಂಬರು ಇಂಥ |ಮತ್ತಮನುಜರಿಂದ ನೊಂದೆ ಶ್ರೀಹರಿಯೆ4ಇಷ್ಟುದಿನವು ನಿನ್ನ ನೆನೆಯದ ಕಾರಣ |ಕಷ್ಟಪಡುವ ಕೈಮೇಲಾಗಿ ||ಸೃಷ್ಟಿಗೊಡೆಯ ಶ್ರೀ ಪುರಂದರವಿಠಲನೆ |ಮುಟ್ಟಿ ಭಜಿಸಬೇಕು ಧೃಷ್ಟಮನವು ನಿನ್ನ 5
--------------
ಪುರಂದರದಾಸರು