ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಚಿತ್ತ ಸಖಿ ಬಾಗ | ಗುರುವಿಗೇ ಬಾಗ | ಉತ್ತಮ ಪರುಷ ನಾರಿಯಲಿಕ್ಕೆ ವಿಷಯದಿಂ ಬಾಗ 1 ಸಧ್ಯರೂಪ ಯೌವ್ವನದ ಕುಲಮದಕ ಬಾಗ 2 ನಿಗಟದಿಂದ ಭಜಿಸಲಿಕ್ಕೆ ವಲುವದನು ಜಾರಿ3 ಪಡೆದು ಗುರು ಜ್ಞಾನದಿಂದ ನೋಡೇ ಮುಕ್ತಿ ಕಳಸಾ4 ಧನ್ಯಳಾಗ ತಂದೆ ಮಹಿಪತಿ ಪ್ರಭು ಸ್ಮರಿಸೀ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಭಜಿಸಬಾರದೆ ಮನವೆ ಭಜಿಸಬಾರದೆ ಭಜಿಸಲಿಕ್ಕೆ ಭಾವದಿಂದ ನಿಜವಾ ಗೊಲಿವ ಹರಿ ಮುಕುಂದ ಧ್ರುವ ನಿಜವಬಿಟ್ಟು ದಣವದ್ಯಾಕೆ ತ್ರಿಜಗಪತಿಗೊಂದಿಸದೆ ತಾನು ಭಜನ ಮುಖ್ಯವೆಂದು ಸುಜನರೆಲ್ಲ ಪೇಳುತಿರಲಿಕ್ಕಾಗಿ 1 ಪ್ರೀತಿಯಿಂದರ್ಜುನ ನೋಡಿ ಗೀತೆಯಲ್ಲಿ ಶ್ರೀಕೃಷ್ಣತಾನು ನೀತಿಹಿತವ ಭಕ್ತಿಯೋಗದಲ್ಲಿ ಸಾರತಿರಲಿಕ್ಕಾಗಿ 2 ಪ್ರಕಟಭಾವಕೊಲಿದ ನೋಡಿ ಅಖಿಲದೊಳು ಸುಲಭದಿಂದ ಭಕುತಿ ಸುಖವನಿತ್ತು ಸಲಹುತಿಹ್ಯ ಮಹಿಪತಿಸ್ವಾಮಿಗಿನ್ನು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಲಜ್ಜೆ ಲಜ್ಜೆ ನಿನ್ನ ನಂಬಿ ಕೆಟ್ಟೆನಾನು ಮಾಡೊದೇನು ಪ ಗೆಜ್ಜೆ ಕಟ್ಟಿದ್ದೊರೆ ಕೃಷ್ಣ ಭಜನೆಯಲ್ಲಿ ಮಾನದಲ್ಲಿ ಅ.ಪ. ಆರು ವಲಿದು ಮಾಡೊದೇನು ಆರುಮುನಿದು ಮಾಡೊದೇನು ಚಾರು ಚಾರು ಮೆಚ್ಚಲೇನು ಭಾರಿದೇವ ವಿಶ್ವಜನಕೆ ಹರಿಯದಾಸನೆಂದು ಇನ್ನು ಈರ ಮತವ ಸಾರಿಸಾರಿನಲಿದು ನಲಿದು ಸುಖಿಪುದಕ್ಕೆ 1 ದುಡ್ಡು ಕಾಸುಬೇಡ ನಮಗೆ ದೊಡ್ಡತನವು ಬೇಡ ಹಾಗೆ ಹೆಡ್ಡತನನ ಬಿಟ್ಟು ಪಿರಿಯಕೃಷ್ಣನನ್ನು ಭಜಿಸಲಿಕ್ಕೆ ಅಡ್ಡಿಏನು ಕುರುಡು ಮನವೆ ನೆನೆದುನೆನೆದು ನೋಡುನೀನೆ ದೊಡ್ಡತನವೆ ಸತ್ಯವೀದು ದಡ್ಡತನವೆ ದುರಭಿಮಾನ 2 ಹರಿಯದಾಸದೀಕ್ಷೆ ಪಡೆಯೆ ಸುಲಭವಲ್ಲ ಸುಲಭವಲ್ಲ ದುರಿತ ರಾಶಿಪೋಗಿ ಶುದ್ಧ ಚಿನ್ನದಂತೆ ಆಗದೇನೆ ಹಿರಿದು ಕಾಣೊ ಇಂಥಾ ಜನ್ಮ ಬರಿಯ ಮಾತಿಗೊಲಿಯದೇವ ಅರಿವಿನಂತೆ ನಡೆಯದಿರಲು ತೊರೆದು ಎಲ್ಲ ದುರಭಿಮಾನ 3 ಗೆಜ್ಜೆಕಟ್ಟಿ ಕುಣಿದು ಕುಣಿಯೆ ಲಜ್ಜೆನಾಶವಾಹುದೈಯ್ಯ ಲಜ್ಜೆನಾಶವಾಗಿ ಭಕ್ತಿಯುಕ್ತಿ ಉಕ್ಕಿಹರಿಯುತಿರಲು ಅಬ್ಜಪೀಠ ಪಿತನುತಾನೆ ಅಪ್ಪಿಕೊಂಡು ನಲಿದುನಲಿವ ಅಬ್ಜನಾಭ ನಲಿದು ವಲಿಯೆ ಹೆಚ್ಚುಉಂಟೆ ಅದರಕ್ಕಿಂತ 4 ಮೆರೆಯುತಿರಲು ದುಷ್ಟಕಲಿಯು ಅನ್ಯಮಾರ್ಗ ಸಾಧ್ಯವಿಲ್ಲ ಹರಿಯ ಭಜನೆ ಒಂದೇ ದಾರಿ ಹರಿಯ ವಲಿಸೆ ಸಿದ್ಧವೀದು ಜರಿದು ವಿಷಯ ಬೆರಸಿ ಭಕ್ತಿ ಸಿರಿಯ ರಮಣ “ಕೃಷ್ಣವಿಠಲ” ಚರಣ ಯುಗವ ಭಜಿಸಿ ನೀನು ಮಾನ್ಯನಾಗೋ ಧನ್ಯನಾಗೊ 5
--------------
ಕೃಷ್ಣವಿಠಲದಾಸರು