ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಂತೆಯ ಬಿದನೂರು ಹನುಮಂತ ಎನ್ನ ಅಂತರಂಗದಲಿ ಹರಿಯ ತೋರು ಹನುಮಂತ ಪ. ಎನ್ನ ಮೇಲೆ ಪಂಥ ಬೇಡ ನಿಂತು ಬೇಡುವೆ ಹನುಮಂತ ಅ.ಪ. ಅಂಜನಾದೇವಿಯ ಕುಮಾರ ಅಂಜಿಸುವ ಈ ಘೋರ ಸಂಸಾರ ಅಂಜಿಕೆಯ ಬಿಡಿಸೆನ್ನ ಕಾಯೊ ಬಲು ಧೀರ ಸುಗುಣ ಗಂಭೀರ ಸಂಜೀವನನ ಕಂಡ ಶೂರ ಅಂಜನಾದೇವಿಯ ಕುಮಾರ 1 ಕುಂತಿಯಾ ಸುತನಾಗಿ ನೀ ಜನಿಸಿ ಬಂದೇ ಪಂಥದಲಿ ಕೀಚಕನ ಸೋಲಿಸಿ ನಿಂತು ಕಂತುಪಿತನಿಗೆ ದುರ್ಯೋದನನ ಶಿರವ ಒಪ್ಪಿಸಿದೆ 2 ಮದ್ದಿಗೆ ಭಟ್ಟರಲಿ ನೀ ಜನಿಸೀ ಮಧ್ವಮತವನೆ ಉದ್ಧರಿಸಿ ನೀ ಬದರಿಯಲಿ ನಿಂದಿ ಮುದ್ದು ಕೃಷ್ಣನ ಪೂಜಿಸಿ ಉಡುಪಿಲಿ ಸ್ಥಾಪಿಸಿ 3 ಸಂತೆಬಿದನೂರಿನಲಿ ನಿಂತು ಬಂದ ಜನಕೆ ಆನಂದ ಪಡಿಸಿ ಸಂತೋಷದಿಂದ ವರಗಳ ಬೇಡಿದವರಿಗೆ ನೀಡುತ್ತ ಕಂತುಪಿತನ ಧ್ಯಾನದಲಿ ಅನವರತ ಸೇವಿಸುತ 4 ರಾಮ ಸೇವೆ ನೀ ಸಂಭ್ರಮದಲಿ ಮಾಡಿ ರಾಮರ ಧ್ಯಾನ ಮಾಡುತ ಪೂಜಿಸುತಿರುವಿ ರಮಾವಲ್ಲಭವಿಠಲನ ಧ್ಯಾನದಿ ಪಟ್ಟಕೆ ಬರಲಿರುವಿ 5
--------------
ಸರಸಾಬಾಯಿ