ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇರಲೇ ಬಾರದು - ಇಂಥಲ್ಲಿಇರಬಾರದಿಂದ ......... ವರೆ ಭಯಂಕರದುರುಳ ಜನ ಸಹವಾಸದಲ್ಲಿ ದುಷ್ಟಮೃಗವಿದ್ದಡವಿಯಲ್ಲಿ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಉರಗಗಳು ಸೇರಿಕೊಂಡ ಸದನಗಳಲ್ಲಿಕರುಬರಿದ್ದ ಊರಗಳಲಿ ಕಲಹ ಹೆಚ್ಚಿದ ರಾಜ್ಯದಲ್ಲಿಪರಹಿಂಸೆಯ ಮಾಡಲಂಜದ ಪಾಪಿಗಳಿದ್ದಲ್ಲಿ 1ಅವಿವೇಕದ ಪ್ರಭುಸೇವೆಯಲ್ಲಿ ಆತ್ಮಸೌಖ್ಯವಿಲ್ಲದಲ್ಲಿಲವಶೇಶವು ಸದ್ವಿದ್ಯಾ ಮಾತ್ರ ಲಾಭವಿಲ್ಲದಲ್ಲಿನವಯೌವನಭರಿತ ನಾರಿ ತಾನೊಬ್ಬಳಿದ್ದಲ್ಲಿಅವನಿಯೊಳಗರ್ಥಪ್ರಾಪ್ತಿಇಲ್ಲದಂಥಲ್ಲಿ2ಮಾನವಲ್ಲದ ಸಭೆಯಲ್ಲಿ ಮಾತ ಕದಿವ ನ್ಯಾಯದಲ್ಲಿನೂನ್ಯಪೂರ್ಣ ಎನ್ನವವನ ಉಟ್ಟಕಾಲದಲ್ಲಿಶ್ರೀನಾಥ ಶ್ರೀ ಪುರಂದರವಿಠಲ ರೂಪಗಳುಅನಂತಾನಂತವೆಂದು ಅರಿಯದ ಅದ್ವೆಷ್ಣವರಲ್ಲಿ 3
--------------
ಪುರಂದರದಾಸರು
ಮಹತಿಗೆ ಮಹತು ಹರಿನಾಮಬಹುಜನ್ಮಜಲಧಿ ಶೋಷಿಸುವ ಹರಿನಾಮ ಪ.ಹಿಂದೊದಗಿದಘರಾಶಿ ಬೇಯಿಸಿ ಬಿಸುಟುವ ನಾಮಮುಂದೆ ಬಹ ದುರಿತಕಡ್ಡಹ ನಾಮಮಂದಮತಿ ಕತ್ತಲೆಗೆ ಬಾಲಾರ್ಕಸಮ ನಾಮದಂದುಗದ ಬಳ್ಳಿಯನು ಹರಿವ ನಾಮ 1ಮುಕುತಿ ನಗರವ ತುಂಬಿಸುವ ಅಭಯಕರ ನಾಮಶಕುತ ಯಮಾಲಯಕೆÉ ಭಯಂಕರದ ನಾಮಅಕಳಂಕ ದಾಸರಿಗೆ ಆದ್ಯಂತಗತಿ ನಾಮಭಕುತರೆಡರಿನ ಗಿರಿಗೆ ವಜ್ರನಾಮ 2ಸರ್ವ ಶ್ರುತಿಮುನಿಗಳುಗ್ಗಡಿಸುತಿಹ ನಾಮಉರ್ವಿಯೊಳು ನಂಬಿದರ ಪೊರೆವ ನಾಮಸರ್ವಜÕರಾಯಗುರು ನಿರ್ವಚನಿಸುವ ನಾಮಸರ್ವೇಶ ಪ್ರಸನವೆಂಕಟೇಶನ ಶ್ರೀನಾಮ 3
--------------
ಪ್ರಸನ್ನವೆಂಕಟದಾಸರು