ಒಟ್ಟು 5 ಕಡೆಗಳಲ್ಲಿ , 5 ದಾಸರು , 5 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಂದನ ತೂಗಿದಳು ಯಶೋದೆ ಕಂದನ ತೂಗಿದಳು ಪ ಇಂದಿರಾರಮಣನ ಅಂದವದನದಲಿ ಮಂದಹಾಸವ ನೋಡಿ ನಂದದಿ ಹಿಗ್ಗುತ ಅ.ಪ ತಾಮರಸಾಕ್ಷನ ಕೋಮಲಾಂಗವ ನೋಡಿ ಆ ಮಹಿಳೆಯು ಬಲು ಪ್ರೇಮಭರಿತಳಾಗಿ 1 ಜಗಜಗಿಸುವ ನವಮಣಿಯ ತೊಟ್ಟಿಲಲಿ ಜಗದೀಶನು ತನ್ನ ಮಗನೆಂದು ತಿಳಿಯುತ 2 ಪದಮನಾಭನನು ಹೃದಯದಿ ನೆನೆಯುತ ಮದದಿಂದಲಿ ದಿವ್ಯ ಪದಗಳ ಪಾಡುತ 3 ಲಕ್ಷ್ಮೀಶನು ಇತ್ತ ಪುತ್ರಭಿಕ್ಷೆಯೆಂದು ಅಕ್ಷಿಗಳಲಿ ಸುಖಬಾಷ್ಪವ ಸುರಿಸುತ 4 ತನ್ನ ಸೌಭಾಗ್ಯವು ಅನ್ಯರಿಗಾವುದೆಂದು ಸತಿ 5
--------------
ವಿದ್ಯಾಪ್ರಸನ್ನತೀರ್ಥರು
ಪೂಜಾ ಮಾಡೋಣ ಬಾರೆ ಶ್ರೀ ಲಕುಮಿಯ ಪೂಜಾ ಮಾಡೋಣ ಬಾರೆ ಪ. ವನಜನ ನೇತ್ರೆಯ ತ್ರಿಜಗನ್ಮಾತೆ ಪ್ರಖ್ಯಾತೆ ಅ.ಪ. ಅರ್ಥಿಯಿಂದಲಿ ಇಟ್ಟು ಚಿತ್ತದೊಲ್ಲಭನ ಸ್ತುತಿಸಿ ಬೇಡಿಕೊಂಡು ಮತ್ತೆ ನಿಮಗೆ ಕರವೆತ್ತಿ ಪ್ರಾರ್ಥಿಸುತಲಿ 1 ಗಂಧಪುಷ್ಪ ವಸ್ತ್ರಾಭರಣ ಆನಂದ ದೀಪಗಳಿಂದ ಇಂದು ನಾ ಪೂಜಿಪೆ ಮಂದಿರದೊಳು ಆನಂದಭರಿತಳಾಗಿ ಬಾ 2 ರುಕ್ಮೀಶವಿಠಲನ ಪಟ್ಟದ ರಾಣಿ ವಕ್ಷಸ್ಥಳದಲಿನಿಂತು ನಲಿಯುತ ಬಾ ಭಕ್ತಜನರ ಮನೋಭೀಷ್ಟವ ಸಲಿಸುತ ಬಾ 3
--------------
ಗುಂಡಮ್ಮ
ಭಾಗೀರಥೀ ಜನಕಗೆ ಭಾಗವತಪ್ರಿಯಗೆ ಆಗ ನೀರೆರೆದರವಿಂದಲೋಚನನಿಗೆ ಗೋಪಿ 1 ಸಾಗರಶಯನನ ತೂಗಿ ತೊಟ್ಟಿಲೊಳಿಟ್ಟು ನಾಗಮುರಿಗೆ ವಂಕಿ ನಂದಗೋಪನ ಸುತಗೆ ಬೆರಳಿಗುಂಗುರ ಕೋಟಿಭಾಸ್ಕರತೇಜಗೆ ಹೊಳೆವೊ ಬಿಂದಲಿ ಗುಂಡು ಭುಜಕೀರ್ತಿ ಭೂಷಣ 2 ಮಲಕು ಮುತ್ತಿನ ಹಾರ ಪದಕ ಪಚ್ಚೆಯ ಕಾಂತಿ ಕೌಸ್ತುಭ ರತ್ನ ಥಳಥಳಿಸುವ ಕರ್ಣದಲ್ಲಿ ಬಾವುಲಿ ಚೌಕುಳಿ ಚಳತುಂಬು ಮುತ್ತಿನಬಟ್ಟು ಮುಂದಲೆಗೆ 3 ಹೊಸ ವಜ್ರದರಳೆಲೆ ಹುಲಿಯುಗುರು ತಾಯಿತ ಕುಸುಮನಾಭಗೆ ಕಿರುಗೆಜ್ಜೆ ಕಾಲಲಂದಿಗೆ ಮಿಸುಣಿ ಮಾಣಿಕ್ಯದುಡಿದಾರದಡ್ಡಿಕೆ ಕಟ್ಟಿ ಗೋಪಿ 4 ಕಂಜನಯ್ಯನ ನೋಡೆ ಕಂಗಳಿನ್ನೆರಡಿಲ್ಲ ಜಿಹ್ವೆ ಒಂದೆ ಸಾಲದೆನಗೆಂದು ಅಂಗಿಟೊಪ್ಪಿಗೆ ಹಾಕ್ಯಾಲಿಂಗನೆ ಮಾಡುತ ಸತಿ ತಾನಂದಾನಂದಭರಿತಳಾಗಿ5 ತನ್ನ ಮಗನ ಮುದ್ದು ತಾ ನೋಡಿ ಸಾಲದೆ ಹೊನ್ನ ಪುತ್ಥಳಿಯಂತೆ ಹೊಳೆವೊ ಕೂಸನು ಎತ್ತಿ ನಿನ್ನ ಮಗನ ಆಟ ನೀ ನೋಡೆಂದೆನುತಲಿ ತನ್ನ ಪತಿಯ ತೊಡೆಯಲ್ಲಿಟ್ಟು ನಲಿಯುತ 6 ಹೊನ್ನ ಪುತ್ಥಳಿಗೊಂಬೆ ಹೊಸ ಚಿನ್ನದರಗಿಳಿಯೆ ಹೊನ್ನು ತಾ ಗುಬ್ಬಿತಾರಮ್ಮಯ್ಯ ಎನುತಲಿ ಬಣ್ಣ ಬಣ್ಣದ ಆಟ ವರ್ಣಿಸುತಲಿ ನೀಲ- ವರ್ಣನ ತನ್ನ ತೋಳಿಂದಪ್ಪಿ ನಲಿಯುತ 7 ಸೃಷ್ಟಿಮಾಡುವರಿಲ್ಲೀ ಶಿವ ಬ್ರಹ್ಮರೊಡೆಯನ ಸೃಷ್ಟಿಕರ್ತನಾದನನ್ಹುಟ್ಟಿಸಿದ ನಾಭಿಯಿಂದಿವನು ಹೊಟ್ಟೆಲೀರೇಳು ಜಗವಿಟ್ಟು ಸಲಹುವ ಎಷ್ಟು ಸರ್ವೋತ್ತಮ ಈಗಿಲ್ಲ್ಯವತರಿಸಿದ 8 ಚತುರವದನಗೆ ವೇದ ತಂದಿಟ್ಟು ಸಾಗರ ಮಥಿಸಿ ಮಂದರವನು ಪೊತ್ತು ಅಮೃತವ ಹೀರಿ ಪೃಥಿವಿಯನು ತಂದ ಕೋರೆಯಲಂದ್ಹಿರಣ್ಯಾಕ್ಷನ ಹತವ ಮಾಡಿದ ತಾ ಭೂಪತಿ ಎಂದೆನಿಸಿದಿವನು 9 ಪರಮಭಕ್ತನು ಕರೆಯೆ ಬಿರುದು ಕಂಬದಿ ಬಂದು ಕರುಳ ಬಗೆದ ಪುಟ್ಟ ತÀರÀಳ ರೂಪವ ನೋಡಿ ಮರುಳಾಗಿ ಬಲಿ ಮೂರು ಚರಣ ದಾನ ನೀಡೆ ಬೆಳೆದು ಬ್ರಹ್ಮಾಂಡಕ್ಕೆ ಭುವನ ವ್ಯಾಪಿಸಿಕೊಂಡ10 ಕ್ಷತ್ರ ಸಂಹಾರಿ ತಾ ಎತ್ತಿ ಧನುವ ಸೀತಾ ಸೌ- ಮಿತ್ರಿಸಹಿತ್ವನದಲ್ಲಿ ಇರುತಿರಲಾಗ ಪತ್ನಿ ಒಯ್ಯಲು ಅಸುರನ್ಹತ್ತು ಶಿರಗಳ ತರಿದ ದುಷ್ಟ- ರಂತಕನೆ ನಿರ್ದುಷ್ಟ ಸಜ್ಜನಪ್ರಿಯ 11 ದೇವಾಧಿದೇವ ದೇವಕ್ಕಿ ಜಠರದಿ ಬಂದು ಮಾಯಾ- ಪೂತಣಿಯನ್ನು ಕೊಂದು ವಿಷಮೊಲೆನುಂಡು ಕಾಲಲಿ ಶಕಟನ ಕೆಡವಿದ ಯದುವೀರ ತಾ- ಗೋಪಾಲಕ ಗೋಪೀಸುತನೆಂದೆನಿಸಿಕೊಂಡ12 ವಿಪರೀತ ಮಾಯದಿ ತ್ರಿಪುರದ ಜನರಿಗೆ ದುರ್ಮತವ ಬೋಧಿಸಿ ಅಸುರಾರಿ ಮೋಹಕ ತೋರಿ ಚಪಲ ಚೆನ್ನಿಗ ಖಡ್ಗಪಿಡಿದು ತೇಜಿಯ- ನೇರಿ ಕಪಟನಾಟಕ ಕಲಿಮರ್ದನ ಕರಿಗ್ವರವಿತ್ತ13 ಜನ್ಮಕರ್ಮವು ಜರಾಮರಣಗಳಿವಗಿಲ್ಲ ಜಗದೋ- ಪರಬ್ರಹ್ಮನ ಪಾದಾಂಘ್ರಿಸ್ಮರಣಿ (ಣೆಯಿ?)ರೆ ಪರಮಾ- ದರದಿ ಕರೆದೊಯ್ವ ತನ್ನ (ಬಳಿಯ)ಲ್ಲೆ 14 ಏಸುಜನ್ಮದ ಫಲವಿನ್ನೆಷ್ಟು ಜನ್ಮದ ಸುಕೃತ ಈ ಸಮಯದಿ ಫಲಿಸಿತೀತ ಇಲ್ಲುದಿಸಿರಲು ದೋಷವರ್ಜಿತನೆ ಸಂತೋಷಭರಿತನಿವ ಭೀ- ಮೇಶಕೃಷ್ಣ ಯಶೋದೆ ಕೂಸೆಂದೆನಿಸಿಕೊಂಡ15
--------------
ಹರಪನಹಳ್ಳಿಭೀಮವ್ವ
ವಾಯಸ ಸಿದ್ಧಿ ಕೊಟ್ಟಾವಮ್ಮ ಒಲಿದಾಳೆ ದೂತೆ ಶ್ರೀಶನ ದಯ ಸೂಸಿತುಳುಕುತ ಶ್ರೇಯಸ್ಸು ಬರಲೆಂದು ಪ. ಶುದ್ಧ ಮುತ್ತು ರತ್ನದವಸ್ತ ತಿದ್ದಿಸೀರಿ ಕುಪ್ಪುಸ ತೊಟ್ಟುಬದ್ಧವಾದ ತಳಪಿಲಿಂದ ಮುದ್ದು ಸುರಿಯುತ1 ಪುಂಡರಿಕಾಕ್ಷನ ಪಾದಕೆ ದಂಡಪ್ರಣಾಮವ ಮಾಡಿ ಕೊಂಡಾಡಿ ಕೃಷ್ಣನ ನಡೆದಳು ಪಾಂಡವರರಮನೆಗೆ2 ಭಾವೆ ರುಕ್ಮಿಣಿ ದೇವಿಯರಿಗೆ ಭಾವ ಭಕ್ತಿಯಿಂದ ನಮಿಸಿ ಸ್ವಾಮಿ ಕಾರ್ಯ ಸಾಧಿಸಿ ನಿಸ್ಸೀಮಳು ನಡೆದಾಳೆÉ 3 ಅಂದಣ ಏರಿದಳು ದೂತೆ ಬಂದವು ನೀರಿನ ಕುಂಭಚಂದದ ಸೇವಕರು ಮಾರ್ಗ ಮುಂದೆ ನಡೆದರು 4 ಹಾಲು ಮೊಸರು ಹಲವು ಫಲ ಸಾಲುಸಾಲು ಮುತ್ತೈದೆಯರು ಮೇಲಾದ ವಿಪ್ರರು ಮೇಲೆ ಮೇಲೆ ಬಂದರು5 ಧೀರ ಧರ್ಮರಾಯನ ಸಭೆüಯ ದ್ವಾರಪಾಲಕಳಾಗಿ ದೂತೆ ವೀರ ಮುದ್ರಿಕೆಯ ಕೊಟ್ಟು ನೀರೆ ನಡೆದಳು6 ಶ್ರೀದೇವಿ ದೂತೆ ರಾಮೇಶನ ಪಾದಸ್ಮರಣೆಯ ಮಾಡಿಮೋದಭರಿತಳಾಗಿ ರಾಯನ ಪಾದಕ್ಕೆರಗಿದಳು 7
--------------
ಗಲಗಲಿಅವ್ವನವರು
ವಾರಿಧಿ ಸುತಿಗೆ ಸಾರ ಸಂಗೀತದಿಂದಲಿ ಪ ಸಕಲ ವಸ್ತುವೆನಿಸಿ ಮುಕುತಿದಾಯಕ ಹರಿಗೆ ಭಕುತಿಯಿಂದಲಿ ಬಿಡದೆ | ಸದಾಪೂಜಿಪ ಸಿರಿಗೆ ವಿಖನ ಸಾದ್ಯಮರ ಗಣಕೆ | ಸುಖ ಕೊಡುವಳಿಗೆ ಮಕರಧ್ವಜನ ಮಾಲೆಯಾದ ರುಕುಮನನುಜಗೆ 1 ಚಾರುಶ್ರಾವಣ ಭಾರ್ಗವ ಶುಭವಾರದ ದಿನದಿ ಭೂರಿ ಭಕ್ತಿ ಭರಿತಳಾಗಿ ನಮಿಸುತ ಮನದಿ ನೀ ಆರಾಧಿಸೆ ಘೋಡಶ ಉಪಚಾರದಿ ಮುದದಿ ಕೋರಿಕೆಯನು ಗರೆಯುವ ವರಲಕ್ಷ್ಮಿಗೆ ಜಯದಿ2 ತಾಮರಸ ಸುಧಾಮಳಾದ ಸೋಮವದನಿಗೆ ಗೋಮಿನಿ ಸೌದಾಮಿನಿ ಸಮ ಕೋಮಲಾಂಗಿಗೆ ಶಾಮಸುಂದರ ಸ್ವಾಮಿಯ ಸುಪ್ರೇಮದ ಸತಿಗೆ ಕಾಮಿತ ಫಲದಾಯಿನಿ ಶ್ರೀ ಭೂಮಿಜೆ ರಮಗೆ3
--------------
ಶಾಮಸುಂದರ ವಿಠಲ