ಒಟ್ಟು 18 ಕಡೆಗಳಲ್ಲಿ , 12 ದಾಸರು , 17 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹಯವದನಾ ಪಾಲಿಸೋ | ಹಯ ದೈತ್ಯ ನಿಧನಾ ಪ ಭಯಕೃತು ಭಯಹರ | ದಯದೃಶ ತೋರಯ್ಯ ಅ.ಪ. ಅಜ ಜನಕನೆ ಹರಿ | ದ್ವಿಜವರ ವಂದ್ಯನೆನಿಜಪದ ಹೃದಯಾಂ | ಬುಜದಲಿ ತೋರುತ1 ಕರ ಆದರದಲಿ ಪಿಡಿ | ದಾದರಿಸಿದನೇ 2 ಅರಿದರ ವರ ಗ್ರಂಥ ಜಪಸರ ಧರವರ ಉರಗಾತಪ | ಧರಿಸಿಹೆ ಶಿರಿಯನು 3 ಕೌಸ್ತುಭ ಕರ ಪಾದ | ಶತ ಪತ್ರ ನೇತ್ರಾ 4 ಭಾವಕೆ ಒಲಿವನೆ | ಭಾವದೊಳಗೆ ನಿಲ್ಲುಗೋವಿದಾಂಪತಿ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಆನಂದ ಗಿರಿ ರಾಯನೆ ಪಿಡಿಕೈಯ್ಯಾ | ನಾ ನಿನ್ನ ಪಾದಕ್ಕಾನಮಿಸುವೆ ಶರಣರ ಪ್ರಿಯ | ಭಕುತರ ಭವಣೆಯನೀ ನೋಡುತಲಿಹುದೊಳಿತೇನಯ್ಯ | ಬಂಧನ ಬಿಡಿಸಯ್ಯ ಪ ಮಾನದ ಮಾನ್ಯ ಭೂದಾನವ ಬೇಡ್ವನೆಕಾಣಿಸೊ ಮನದೊಳು ದೀನನ ಮೊರೆಗೇಅ.ಪ. ಕಲ್ಯಾಣ ಪುರಿಯಿಂದಲಿ ಪೋಗೀ | ಸಜ್ಜನರವೆರಸೇ ಕಲ್ಯಾದಿಗಳೆಲ್ಲ ದೂರಿದೆ ಸಾಗೀ | ಪೋಗುತ್ತಲಿರಲೂ ಬಲ್ಯಾದಿಗಳೊಡೆಯನ ಪುರಕಾಗೀ | ಮೂಡಬಾಗಿಲಲಿರುವಾ ವೇಳ್ಯಾದರು ನರಹರಿತೀರ್ಥವ |ಓಲೈಸುತ ಸರಿ ನಿರ್ಮಾಲ್ಯ ಪಡೆದೆವು 1 ನಿಟಲಾಕ್ಷನ ಬಿಂಬನು ನೆಲೆಸಿರುವಲ್ಲಿ | ಮತ್ತೊಂದು ಬೆಟ್ಟದಿ ಪಟು ಭಟ ತಾ ಯೋಗಾಸನದಲ್ಲಿ | ಕುಳಿತಿಹನಲ್ಲಿ ಚಟುಲ ವಿಕ್ರಮನ ಧ್ಯಾನಿಸುತಲ್ಲಿ | ಹನುಮಂತನಲ್ಲಿ ಘಟಕಾಚಲದೊಳು ಸೇವಿಸಿ ಭಕುತರ |ತಟಕ ಪೊರಟಿತು ವೆಂಕಟಗಿರಿಗೆ 2 ಹದಿನಾಲ್ಕು ಲೋಕಾಧಿಪನರಸಿ | ಪುರದೊಳು ಪೋಗಿಪದುಮ ಸರಸೋದಕ ಪ್ರೋಕ್ಷಿಸಿ | ಅಲ್ಲಿಂದ ಬಂದುಪದುಮಾವತಿ ಪಾದಾಬ್ಜಕೆ ನಮಿಸಿ | ಕುಂಕುಮಾರ್ಚಿಸಿ ||ಪದುಮೆ ಮನೋಹರ ಗೋವಿಂದ ಪುರಿಯಲಿವದಗಿ ವಸಿಸಿ ನಾವ್ ನಿಶಿಯನೆ ಕಳೆದೆವು 3 ಉದಯವಾಗದ ಮುಂದೇಳುತಲಾಗ | ಮಜ್ಜನವ ಗೈದೂಪದಚಾರಿಗಳಾಗುತಲೀ ಬೇಗಾ | ಒಡಗೂಡಿ ಗಿರಿಯಮುದದಿಂದಲೇರುವ ಯೋಗಾ | ಕೈ ಸೇರಲು ಬೇಗಾ ||ಪದತಲದಲಿ ಪಾಪತ್ಮಕ ತನು ಕ-ಳೆದಾತನ ನೆನೆದು ಸೋಪಾನವ ಕ್ರಮಿಸಿದೆ 4 ಗೋವಿಂದ ಗೋವಿಂದನೆಂಬುವ ನಾಮ | ಅಂಬರವು ತುಂಬೆಅವುಗಳ ಕಾವವನ ಗುಣ ನಾಮಾ | ಕೀರ್ತಿಸಿ ಮುದದಿಭಾವದೊಳ್ ಮೈಮರೆದು ಬ್ರಹ್ಮಾ | ಭವಸುರ ಪಾದ್ಯಾರ ||ಅವಾಗಲು ಅವರವಗುಣವೆಣಿಸದೆಕಾವನು ಎನುತಲಿ ಪಾವಟಿಗೇರೋ 5 ಪರಿ ತಿಳಿದೂತುಳಿದೂ ತುಳಿಯಲಿಲ್ಲವು ನೋಡಾ | ಸಲ್ಲುವುದೀದುತಿಳಿ ವಾದಿರಾಜರಿಗೆ ಗೂಢಾ| ನಾ ಬಲು ಮೂಢಾ |ಮಲವನು ಕಳೆಯುತ ಹುಲು ಮನುಜನ ಭವವಳಿದು ಸಲಹೊ ಹೇ ತಿರುಪತಿ ನಿಲಯ 6 ಮೆಟ್ಟಲು ಮೆಟ್ಟಲುಗಳನೇರುತ್ತಾ | ತಾಳಂಗಳನುತಟ್ಟಿ ಹರಿ ಹರಿ ಎಂದೊದರುತ್ತಾ | ಪಾಪಂಗಳ ತಲೆಮೆಟ್ಟಿ ತಂಬೂರಿಯ ಮೀಟುತ್ತಾ | ಕಾಲೊಳು ಗೆಜ್ಜೆಗಳ ||ಕಟ್ಟುತ ಘಲು ಘಲು ಘಲಿರೆನ್ನುತ ಜಗಜಟ್ಟಿ ಹನುಮನ ನೆನೆಯಲೊ ಮನವೆ 7 ಮೃಗ ಪಕ್ಷಿಗಳ ದಿವ್ಯಾ | ರೂಪಂಗಳ ಧರಿಸಿನಿರುತ ಗೈವರು ತವ ಸೇವೆಯು ಭವ್ಯಾ | ಅವುಗಳ ವರ್ಣಿಸಲು || ಉರಗರಾಜ ತನ್ನ ಸಾಸಿರ ನಾಲಿಗೆಸರಿಯಾಗದು ಎನೆ ಶಿರವನೆ ತೂಗುವ 8 ಏರೋ ಪಾವಟಿಗೆಗಳನು ಏರೋ | ಮೊಳಕಾಲು ಮುರಿಯನೇರೋ ಕುಳಿತೊಮ್ಮೆ ತುತಿಸುತ ಸಾರೋ | ಹರಿಯ ಮಹಿಮೆಯಸಾರೋ ಬಾರಿ ಬಾರಿಗೆ ನೀ ಸಾರೋ | ಗಾಳಿ ಗೋಪುರವ ||ಮೀರಿ ಬರಲು ದಿವ್ಯ ಗೋಪುರ ಕಾಣುತ |ಚೀರೊ ಚೀರೊ ಹರಿ ಗೋವಿಂದನೆನ್ನುತ 9 ಸ್ವಾಮಿ ಪುಷ್ಕರಣಿಯಲೀ ಮಿಂದೂ | ಶ್ರೀ ಭೂವರಹಾಸ್ವಾಮೀಯನೆ ಪ್ರಾರ್ಥಿಸಿ ಬಂದೂ | ಪ್ರಾಕಾರದೊಳಗಿಹವಿಮಾನ ಶ್ರೀನಿವಾಸನ ಕಂಡಂದೂ | ನಮಿಸುತ ಬಂದೂ |ಭೂಮಿಜೆವಲ್ಲಭ ವೆಂಕಟನನು ಕಂಡುಕಾಮಿಸೊ ಜ್ಞಾನ ವೈರಾಗ್ಯ ಭಕುತಿಯ 10 ದೇವಾದಿದೇವಾ ಜಗದ್ಭರ್ತಾ | ವೆಂಕಟನೆ ನಾನಾನಾಜನುಮದ ಸುಕೃತಾ | ಪೊಂದುತಲಿ ನಿನ್ನಸೇವಾ ದೊರಕಿದುದೆ ಪುರುಷಾರ್ಥಾ | ಹರಿಪುದು ಸುಜನಾರ್ತಾ | ಭಾವನ ಕಾಯ್ದ ಸದ್ಭಾವಕೆ ವಲಿವನೆಕಾವುದೆನ್ನ ಗುರು ಗೋವಿಂದ ವಿಠ್ಠಲ 11
--------------
ಗುರುಗೋವಿಂದವಿಠಲರು
ಏಕಮೇವಾ | ಅದ್ವಿತೀಯನೆ ಪಾಹಿ | ಏಕಮೇವ ಪ ಏಕಮೇವ ತ್ರೈಲೋಕ ಜನಕ ಕರುಣಾಕರ ಹರಿಯೇ ಅ.ಪ. ಮಾನ್ಯ ಮಾನದ | ನಾನ್ಯಪ ಹರಿ ಸತ್‍ಶೂನ್ಯಾಭಿಧ ಸರಿ | ವಾಣ್ಯಾದಿಯ ಹರ 1 ಭವ ಸುರ | ಕರಣಶಕ್ತಿ ಹರ 2 ಉದರದೊಳಗೆ ಜಗ | ಹುದುಗಿಸಿ ಸರ್ವವಅದುಭುತ ತಮದಲಿ | ವಿಧಿಸಿದ ಹರಿಯೇ 3 ಪ್ರಲಯೋದಧಿ ಶಯ | ಚೆಲುವ ಬಾಲ ಬಲ್‍ಒಲವಿನಿಂದ ಪದ ಬೆ | ರಳನೆ ಸವಿದಾ 4 ಸೃಷ್ಟಿಗೊಡೆಯ ಲಯ | ಅಷ್ಟ ಭಾಗವಿರೆಚೇಷ್ಟಿಸಿ ದುರ್ಗೆಯ | ಹೃಷ್ಟಳ ಮಾಡಿದೆ 5 ಕರ್ಮ ತವಕೃತ್ಯವನಂತವು | ಭೃತ್ಯರ ಸುದತರು 6 ಕಮಲಾರಮಣನೆ | ಕಮಲಜಾದಿ ನುತನಿಮಿಷೋನ್ಮಿಕರ | ಸುಮನಸಕಪ್ಪುದೆ 7 ದುರ್ಗೆ ತುತಿಸೆ | ಕರ್ಗತ್ಲೆ ಕುಡಿದು ನಿಜಸರ್ಗಕೆಣಿಸಿದೇ | ದುರ್ಗಮ ಮಹಿಮ 8 ಮುಕ್ತರೊಡನೆ ಸೇ | ವ್ರ್ಯಕ್ತಿಗಳಲಿ ಅಭಿವ್ಯಕ್ತನು ಲೀಲಾ | ಸಕ್ತ ಸುಪುರುಷಾ 9 ಗೂಹಿಸಿ ಸರ್ವವ | ವ್ಯೂಹ ಚತುರಕೆಮೋಹಿಸಿ ಪುಮಜನ | ಬಾಹಿರ ತೆಗೆದ 10 ಪತಿ ತಾ ಸರ | ಸ್ವತಿ ಭಾರತಿ ಎಂಬಸುತೆಯರ ಪಡೆದು | ಸುತರೊಡನೈರಸಿದ12 ಪುಮಜಗೆ ಪ್ರಕೃತಿಯಿಂ | ಸುಮನಸ ಶೇಷನುಕ್ರಮದಿ ಸೂತ್ರನಿಂ ಜ | ನುಮವು ಕಾಲಿಗೆ 13 ಎರಡು ಒಂದು ತನು | ಹರನಿಗೆ ಬಂದವುಸರಸಿಜ ಸಂಭವ | ಮರುತೋರಗದಿಂ14 ಪತಿ ಸೇವೆಗೆ 15 ವಿಧ ವಿಧ ಜೀವರು | ಉದುಭವವಾದರುವಿಧಿ ಪಿತ ಮಹಿಮೆಯ | ಅದು ಭುತ ಕೇಳೀ 16 ಮುದದಿ ಇಟ್ಟ ತನ್ | ಉದರದೊಳೆಲ್ಲರಅದುಭುತ ಚರಿತ ಅನಿ | ರುದ್ಧ ಮೂರುತಿ 17 ಗುಣೋಪಾದಾನದಿ | ತನು ಸೂಕ್ಷ್ಮಗಳನುಅನಿರುದ್ಧನು ನಿ | ರ್ಮಾಣವ ಮಾಡಿದ 18 ಪರಿ ಬಹು ಲಿಂ | ಗೋಪ ಚಯಿವಗೈದಾಪರ ಬೊಮ್ಮನು | ಸ್ಥಾಪಿಸಿದನು ಜಗ 19 ಪದುಮ ಕಲ್ಪ ಮುನ್ | ಉದುಭವಿಸಿತು ಮತ್‍ತದನನು ಸಿತವರ | ಹದ ಕಲ್ಪೋದಯ 20 ಸರಸಿಜ ಭವನಿಂ | ವಿರಚಿಸಿದನು ಜಗವೈಡೇಳ್ಭುವನವು | ಭರಿತವು ಜೀವರಿಂ 21 ಈ ವಿಚಿತ್ರ ಸ | ರ್ಗಾವವ ತಿಳಿಯಲುಸೇವಿಸುವುದು ಸತ್ | ಕೋವಿದ ಜನಪದ 22 ಪಾವಮಾನಿ ನಿಜ | ಭಾವಕೆ ಸರಿಯಾಹಸೇವೆಗೊಲಿದ ಗುರು | ಗೋವಿಂದ ವಿಠ್ಠಲ 23
--------------
ಗುರುಗೋವಿಂದವಿಠಲರು
ಕೆಟ್ಟದು ಮೋಹ ಕೆಟ್ಟದು ಈ ನಷ್ಟ ವಿಷಯಕೆ ಬಿದ್ದು ನಾರಿ ಪಾಲಾಗೋದು ಪ ಕರುಳ ಭಾವಕೆ ಸೋತು ಕುಚದ ಭಾರಕೆ ಸೋತುಸಿರಿಮುಡಿ ವೇಣಿ ಶಿಸ್ತಿಗೆ ಸೋತುಕಿರುನಗೆಗೆ ತಾ ಸೋತುಉರಿಯ ಮೋಹಕೆ ಬಿದ್ದ ಚಿಟ್ಟೆಯಂತೊರಲುವುದು 1 ಕಣ್ಣ ಭಾವಕೆ ಸೋತು ಕದಪುಗಳಿಗೆ ಸೋತುನುಣ್ಣನೆಯ ಮೋರೆಯ ನುಣುಪಿಗೆ ಸೋತುಸಣ್ಣ ಹಲ್ಲಿಗೆ ಸೋತು ಸುಮನಾಸಿಕಕೆ ಸೋತುಸುಣ್ಣ ನೀರಲಿ ಕೂಡಿ ಕುದಿವಂತೆ ಕುದಿವುದು 2 ಬಳಲು ನಡೆಗೆ ಸೋತು ಬಡ ನಡುವಿಗೆ ಸೋತುಸುಳಿನಾಭಿಗೆ ಮೆರೆವ ಸುತ್ರಿವಳಿಗೆ ಸೋತುಸುಲಭ ಚಿದಾನಂದ ಸುಪಥವ ಕಾಣದೆತಲೆ ಕೆಳಕಾಗಿ ನರಕಕ್ಕೆ ತೆರಳುವುದು3
--------------
ಚಿದಾನಂದ ಅವಧೂತರು
ಕೇಳಿಸಲೊಲ್ಲದೇನೋ ಕೃಷ್ಣಾ ಕೇಳಿಕೇಳದಂತಿರುವಿಯೇನೋ ಪ ಬಾಳುವೆಯೊಲು ಕೀಳಾದೆನಾನಿಂತುಏಳಿಸೆನ್ನನು ಎಂದು ಕೇಳಿಕೊಳ್ಳುವದಿನ್ನು ಅ.ಪ ಯಾವತ್ತೂ ತಿಳಿದವನು ಎಂಬರು ಎನ್ನನೋವು ತಿಳಿಯದಾಯ್ತೇನುಸಾವಿರ ವಿಥಿಗಳಿದ್ದೆನ್ನಯ ಪಾಲಿಗೆದೇವಾ ಅವಲ್ಲವು ಕಿವುಡಾದವೇನೋ 1 ತುಂಬಿ ನಿಂತಿಹನೆಂಬೀಭಾವಕೆ ನೀನೆಂಬಿ ಆವಾವಜೀವರ ಭಾವವರಿತು ನೀಕಾವುದೆಂತೆಂಬೊ ಈ ವಚನವು ನಿನಗೆ 2 ಭೇದಭಾವವು ಇಲ್ಲೆಂದೂ ಸಾಧಿಸುವವುವೇದಗಳೆಲ್ಲ ಎಂದುಬಾಧೆಯ ಬಿಡಿಸೆಂದು ಬೇಡಿಕೊಳ್ಳುವೆಗದುಗಿನ ಆಧಾರಿ ದೇವನೆ ವೀರನಾರಾಯಣ 3
--------------
ವೀರನಾರಾಯಣ
ನಂಬು ದಯಾನಿಧಿ ರಾಮನಾ ಪ ಶಬರಿಯ ಭಾವಕೆ ಮೆಚ್ಚಿ ಉಂಡನು ಬದರಿ ಫಲಾ| ವಿಭು ನೀಡಿದನು ಪದಾಚಲಾ 1 ತೃಣ ಪಶು ಪಿಪ್ಪೀಲಿಕಾ ನಗಾದಿಗಳಾ| ಸುಗತಿಗೆ ವೈದನು ಘನ ನೀಲಾ 2 ಗುರು ಮಹಿಪತಿ ಪ್ರಭು ನೀರೊಳು ತಾರಿಸಿದ ಶಿಲಾ| ಚರಿತವ ದೋರಿದ ಸಿರಿಲೋಲಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಿಜ ಭಕ್ತಿ ತೋರಿದನು ಜಗಕೆ ಕೃಷ್ಣ್ಣಾ ವಿಜಯನಾ ಸತಿಯರಿಬ್ಬರ ನೆವದಿ ಮುದದೀ ಪ. ಹಸ್ತಿವರದನು ತಂಗಿಯರ ನೋಡಬೇಕೆಂದು ಹಸ್ತಿನಾಪುರಕೆ ಬಂದ್ಹರುಷದಿಂದ ಚಿತ್ತ ನಿರ್ಮಲದಿ ಪಾಂಡವರು ಪೂಜೆಸೆ ನಲಿದು ಭಕ್ತಿ ಭಾವಕೆ ಮೆಚ್ಚಿ ದ್ರೌಪತಿಗೆ ವಲಿದೂ 1 ಅಣ್ಣನೆಂಬುವ ಭಾವದಲಿ ಸುಭದ್ರೆಯು ಇರಲು ಘನ್ನ ಮಹಿಮನು ಎಂದು ದ್ರೌಪತಿಯು ತಿಳಿದೂ ಸ್ವರ್ಣಗರ್ಭನ ಪಿತನು ಈರೇಳು ಜಗದೊಡೆಯ ಎನ್ನ ಭಾಗದ ದೈವ ಸಲಹೆಂದು ನುತಿಸೇ 2 ಅಂತರಂಗದ ಭಕ್ತಿ ಆನಂದಮಯ ತಿಳಿದು ಕಂತುಪಿತ ಕರಗಿದಾ ಮಮತೆ ಪ್ರೇಮದಲಿ ಶಾಂತಚಿತ್ತಳೆ ತಂಗಿ ದ್ರೌಪತಿಯೆ ಬಾರೆನುತ ಇಂತು ನುಡಿನುಡಿಗೆ ಆಡಲು ಕರುಣೆಯಿಂದ 3 ಕೇಳಿ ಇದನು ಸುಭದ್ರೆ ತಾಳಲಾರದೆ ಅಜ್ಞ ಬಾಲೆ ನಿಜ ತಂಗಿ ನಾನಿರಲು ಐವರಿಗೆ ಲೋಲೆಯಾದವಳೆ ಬಲು ಮೇಲಾದವಳೆ ಎಂದು ಬಾಲಚಂದ್ರನ ಪೋಲ್ವ ಮುಖ ಬಾಡಿಸಿರಿಲೂ 4 ಕಂಡು ಕಮಲಾಕಾಂತ ವಡಹುಟ್ಟಿದಳ ಬೆಂಡಾದ ತೆರವ ಪೇಳೆನಲು ಖತಿಯಿಂದಾ ಪುಂಡರೀಕಾಕ್ಷ ಎನ್ನುಳಿದು ನಿಜ ಭಾವದಲಿ ಕಂಡವರ ಸುತೆ ನಿನಗೆ ಮಿಗಿಲಾದಳೆನಲೂ 5 ಸಚ್ಚಿದಾನಂದ ವಿಗ್ರಹ ನಗುತ ನೆನೆದನೊಂ ದಚ್ಚರಿಯ ಕೌತುಕವ ತೋರ್ವೆನೆಂದೂ ಅಚ್ಛಿದ್ರ ಅಕ್ಲೇಶ ಆನಂದಮಯ ತಾನು ಕ್ಲೇಶ ಪಡುತ ವರಲಿದನೂ 6 ಬಾರಮ್ಮಾ ತಂಗಿ ಸುಭದ್ರೆ ಬೆರಳಲಿ ರಕ್ತ ಸೋರುತಿದೆ ಬೇಗೊಂದು ಚಿಂದಿ ತಾರೆ ತಾರೆನಲು ಗಡಬಡಿಸಿ ಮನೆಯಲ್ಲ ಹುಡುಕತಲಿ ಬಟ್ಟೆ ಕಂಗೆಡುತಾ 7 ಎತ್ತ ನೋಡಿದರತ್ತ ಪಟ್ಟೆ ಪೀತಾಂಬರವು ಕಂಚುಕ ಮಕುಟ ಮೆರೆಯೇ ಚಿತ್ರದಾ ವಸನ ಅರಮನೆಯಲ್ಲಿ ತುಂಬಿರಲು ಮತ್ತದರ ಮಮತೆ ಅಣ್ಣನಿಗೆ ಅಧಿಕವಾಗೆ 8 ಬರಲಿಲ್ಲ ಸುಭದ್ರೆ ಬಾರಮ್ಮ ದೌಪದಿಯೆ ವರ ತಂಗಿ ಬೇಗ ಕೊಡೆ ಹರಕು ಬಟ್ಟೆ ಸುರಿಯುತಿದೆ ರಕ್ತ ಬೆರಳಿಂದ ನೋಡೆಂದನಲು ಕಿರುನಗೆಯ ನಗುತ ಶರಗ್ಹರಿದು ಕಟ್ಟಿದಳೂ 9 ಬಂದಳಾ ವೇಳೆಯಲಿ ಸುಂದರಾಂಗಿ ಸುಭದ್ರೆ ನಿಂದು ನೋಡಿದಳೂ ದ್ರೌಪತಿಯ ಕೃತಿಯಾ ಮಂದಗಮನೆಯು ನಾಚಿ ಮೊಗವ ತಗ್ಗಿಸಿ ನಿಲಲು ಇಂದಿರೇಶನು ಇದರ ವಿವರ ತೋರಿದನು 10 ಬೆರಗಾದ ಪರಿತೋರಿ ಸಿರಿಕೃಷ್ಣ ಕೇಳಿದನು ಜರತಾರಿ ಸೆರಗ್ಹರಿದು ಕಿರುನಗೆಯ ನಕ್ಕಾ ಪರಿ ಏನೆ ಎಲೆ ತಂಗಿ ನರಳುವೋ ಎನ ನೋಡಿ ಪರಿಹಾಸ್ಯವಾಯಿತೆ ನಿನಗೆ ಎಂತೆಂದಾ 11 ಅಣ್ಣಯ್ಯ ನಿನಗೆ ಮಿಗಿಲಾಯಿತೇ ಈ ಶೆರಗು ಎನ್ನ ಅಭಿಮಾನ ಕಾಯುವ ದೈವ ನೀನೂ ಘನ್ನ ಮಹಿಮಾಂಗ ನಿನಗಿನ್ನು ಕ್ಲೇಶಗಳುಂಟೆ ನಿನ್ನ ಲೀಲೆಗೆ ಹರುಷ ಉಕ್ಕಿತೆಂದನಲೂ 12 ಹೇ ನಾರಿ ನಾನನಾಥರಿಗೆ ನಾಥನು ಮುಂದೆ ನೀನಿತ್ತ ವಸನ ಅಕ್ಷಯವಾಗಲೆಂದು ಶ್ರೀನಾಥ ದ್ರೌಪದಿ ಸುಭದ್ರೆಯ ಮನ್ನಿಸಿ ಮೆರೆದಜ್ಞಾನಿ ಜನಪ್ರಿಯನು ಗೋಪಾಲಕೃಷ್ಣವಿಠಲಾ13
--------------
ಅಂಬಾಬಾಯಿ
ಪರಲೋಕವಿಲ್ಲೆಂಬೊ ಪರಮ ಪಾಪಿಗಳಿಗೆ ನರಲೋಕವೇ ನರಕವಣ್ಣ ಪ ಪರಲೋಕವಿಹುದೆಂದು ಗುರುಕರುಣವನು ಪಡೆದ ಕುರುಬನದ ಅರಿತನಣ್ಣ ಅ.ಪ ಈಶ ಜಡ ಜೀವರೆಂಬುವ ಭಿನ್ನ ತತ್ವಗಳು ಈಶನೊಬ್ಬನೆ ಕರ್ತನಣ್ಣ ಸಾಸಿರದಿ ಆಸೆ ಭಂಗಗಳ ಪೊಂದುತಲಿರಲು ಮೀಸೆಯನೇತಕೆ ತಿರುವಬೇಕಣ್ಣ 1 ಹರಿಯು ಪರನಲ್ಲದಿದ್ದರೆ ಸರ್ವಭುವನಗಳು ಹರಿಯಧೀನದಲಿರುವುದೇಕೆ ಹರಿಯಧೀನಲಿಲ್ಲದಿದ್ದರೀ ಜಗದೊಳಗೆ ಕೊರತೆಯೇತಕೆ ಮಂದಿಗಳಿಗೆ 2 ದೇವದತ್ತನು ಧನಿಕ ಪ್ರೇತದತ್ತನು ಬಡವ ಯಾವ ಕಾರಣ ವಿಷಮಗತಿಗೆ ಸಾವು ನೋವುಗಳ ಪ್ರತಿಕ್ಷಣಗಳಲಿ ನೋಡಿ ದೊರೆ ಭಾವವಿರುವುದು ನ್ಯಾಯವೇ 3 ಈಶನಿಲ್ಲೆಂಬುವರು ಹೇಸಲಾರರು ಪಾಪ ರಾಶಿ ರಾಶಿಯ ಗಳಿಸಲು ಆಶೆಬಡುಕರ ಜಗವ ನಾಶಮಾಡಲು ರಾಜ ಶಾಸನಕೆ ಬುಡವೆಲ್ಲಿಯಣ್ಣ 4 ಇಂದು ಇದನು ಪಡೆಯುವೆ ಮುಂದೆ ಅಧಿಕ ಧನವನು ಗಳಿಸುವೆ ಸದೆ ಬಡಿಯುವೆನು ಪರರನೆಂಬ ನುಡಿ ತಮಗುಣದ ಬೆದೆಯಲಿರುವನು ನುಡಿವನು 5 ಎಲ್ಲಿಂದ ಬಂದೆ ಹೋಗುವುದೆಲ್ಲಿಗೆಂಬುದನು ಬಲ್ಲವಗೆ ಮುಕುತಿ ಇಲ್ಲೇ ಒಳ್ಳೆ ಮನವನು ಪಡೆದು ಬಲ್ಲವರ ಸೇವೆಯಿಂ ದೆಲ್ಲವನು ತಿಳಿಯಲಳವಣ್ಣ 6 ಕಾಯವಾಚಾಮನಸದಿ ತಪವಗೈಯುತ ಶುದ್ಧ ಭಾವವನು ಗಳಿಸಿರಣ್ಣ ದೇವಗುರು ಪ್ರಾಜ್ಞ ಪೂಜನ ಲಾಭವಿದು ವಿನಯ ಭಾವಕೆ ಪ್ರಸನ್ನರಿವರು 7
--------------
ವಿದ್ಯಾಪ್ರಸನ್ನತೀರ್ಥರು
ಪಶುಪತಿ ಶಂಭೋ |ಅಸುಪತಿಯನೆ ತೋರೋ || ಕರುಣವ ನೀ ಬೀರೋ ಪ ಮನಸೀನ ಒಡೆಯನೆ | ಕನಸು ಮನಸಿನಲಿಅನಘ ಹರಿಯ ಪದ | ನೆನೆವ ಮತಿಯನಿತ್ತುಎಣಿಸು ಭಕ್ತನೆಂದು || ಬೇಡುವೆ ಇನಿತೆಂದು ಅ.ಪ. ಮಾಹಿತಾಂಘ್ರಿಯ | ವಾಹಕನ ಸಮಮೋಹಶಾಸ್ತ್ರ ಪ್ರ | ವಾಹ ರಚಿಸುತ ||ದ್ರೋಹಿಗಳ ಬಲು | ಮೋಹ ಪಡಿಸುತಶ್ರೀ ಹರಿಯ ಸಖ | ಪಾಹಿ ಸುಖಪ್ರದ1 ಕಟಿ ಸೂತ್ರ | ಒಪ್ಪೊತವ ಸುತ ||ಸರ್ಪಾರಿ ಸಮಪದ | ಕಪ್ಪೊಗೊರಳ ಹರತಪ್ಪೊಗಳನು ಎಲ್ಲ | ಒಪ್ಪಿಕೊಳ್ಳಯ್ಯ 2 ಕರ್ಪರ | ಮೈಲಿ ಭಸ್ಮವು |ಶೂಲ ಪಾಣಿಯೆ | ಶೈಲಜಾಪತೆ ||ಕಾಲಕಾಲಕೆ | ಕಾಲನಾಮನಶೀಲ ಸ್ಮøತಿಯನು | ಪಾಲಿಪುದು ಹರ 3 ವಾಸ ಮಶಣವು | ಕೇಶ ವ್ಯೋಮವುಹೇ ಸದಾಶಿವ | ನೀ ಸಲಹೊ ಎನ್ನ ||ಮೀಸಲದ ಮನ | ಕಾಶಿಸುವೆ ಹರಹೇ ಸದಾಗತಿ ಕೂಸು ನೀ ನಲ್ಲೆ 4 ದೇವ ವರ ಶಿವ | ಮಾವ ವೈರಿಯಹಾವ ಭಾವಕೆ | ಓದಿ ಮೋಹಿಸುತ ||ಧಾವಿಸಲು ಹರಿ | ತೀವ್ರ ಕಾಯ್ದನುಗೋವಳನು ಗುರು | ಗೋವಿಂದ ವಿಠಲ 5
--------------
ಗುರುಗೋವಿಂದವಿಠಲರು
ಪಾದ ನಿತ್ಯ ನಿತ್ಯ ಸುಖವೇ ಸುಖವು 1ಜ್ಞಾನ ಗಂಗಾ ನದಿಯು ವೈರಾಗ್ಯ ಯಮುನೆಯು ಸದ್ಭಕ್ತಿ ಸರಸ್ವತೀ ಈ ಬಗೆಯ ತ್ರಿವೇಣಿಸಂಗಮವು ಇವರಲ್ಲಿ ಎದ್ದು ಕಾಣುವದು ನಿತ್ಯ 'ಜಯರಾಯರ ನೆರಳಿನಿಂದಲಿ ಸರ್ವದಾ ಅವರಲ್ಲಿ ಇವರವಾಸಗುರುಭಕ್ತಿಯಲಿ ಇವರ ಸರಿ'ುಗಿಲು ಯಾರಿಲ್ಲಭಾಗಣ್ಣದಾಸರಿವರೇ ಅವರು 2ಪಂಢರಾಪುರದ ಶ್ರೀ ಪಾಂಡುರಂಗನು ಇವರ ಭಕ್ತಿಭಾವಕೆ ಮೆಚ್ಚಿದಾಬಹುದಿವಸ ತನ್ನದರುಷನಕೆ ಬರಲಿಲ್ಲೆಂದು ಕಳವಳದಿ ಪಾಂಡುರಂಗಾಕುದುರೆಯನು ಏರಿ ತಾನೆ ಅವರಬಳಿ ಪೋಗಿ 'ಆಲೆ ನಾ'' ಎಂದು ಕರೆದಾಮರುದಿನವೆ ಪಂಢರಿಗೆ ತ್ವರದಿ ಓಡುತ ಹೋಗಿಭೂಪತಿ'ಠ್ಠಲನ ಬಿಗಿದೊಪ್ಪಿಕೊಂಡಾ 3
--------------
ಭೂಪತಿ ವಿಠಲರು
ಮಗನಿಂದೆ ಗತಿಯುಂಟೆ ಜಗದೊಳಗೆನಿಗಮಾರ್ಥ ತತ್ತ್ವವಿಚಾರದಿಂದಲ್ಲದೆ ? ಪ ತ್ರಿಗುಣರಹಿತ ಪರಮಾತ್ಮನ ಧ್ಯಾನದಿಹಗಲಿರುಳು ನಿತ್ಯಾನಂದದಿಂದತೆಗೆದು ಪ್ರಪಂಚವಾಸನೆಯ ಬಿಟ್ಟವರಿಗೆಮಗನಿದ್ದರೇನು ಇಲ್ಲದಿದ್ದರೇನು ?1 ಶೋಣಿತ ಶುಕ್ಲದಿಮಿಳಿತವಾದ ಪಿಂಡ ತನ್ನ ಪೂರ್ವಕರ್ಮದಿಂದನೆಲಕೆ ಬೀಳಲು ಅದು ಸಲಹಿ ರಕ್ಷಿಪುದೆ ? 2 ಪರಮ ದುಷ್ಟನಾಗಿ ಮರೆತು ಸ್ವಧರ್ಮವಗುರು ಹಿರಿಯರ ಸಾಧುಗಳ ನಿಂದಿಸಿಬೆರೆದನ್ಯ ಜಾತಿಯ ಪರನಾರಿಯ ಕೂಡಿಸುರೆ ಕುಡಿದು ಜೂಜಾಡಿ ನರಕಕ್ಕೆ ಬೀಳುವ 3 ಸತ್ಯನೊಬ್ಬ ಮಗ ಶಾಂತನೊಬ್ಬ ಮಗ ದು-ರ್ವೃತ್ತಿ ನಿಗ್ರಹನೊಬ್ಬ ಸಮಚಿತ್ತನೊಬ್ಬನುಉತ್ತಮರೀ ನಾಲ್ಕು ಮಕ್ಕಳಿದ್ದ ಮೇಲೆಹೆತ್ತರೇನು ಇನ್ನು ಹೆರದಿದ್ದರೇನಯ್ಯ ? 4 ಸುತರಿಲ್ಲದವಗೆ ಸದ್ಗತಿ ಇಲ್ಲವೆಂತೆಂಬಕೃತಕ ಶಾಸ್ತ್ರವು ಲೌಕಿಕಭಾವಕೆಕ್ಷಿತಿಯೊಳು ಕಾಗಿನೆಲೆಯಾದಿಕೇಶವ ಜಗ-ತ್ಪತಿಯ ಭಜಿಪಗೆ ಸದ್ಗತಿಯಿರದೆ ಹೋಹುದೆ ? 5
--------------
ಕನಕದಾಸ
ರಕ್ಷಿಸೋ ಪವಮಾನ ಸದ್ಗುರುವರಾ ಪ ಜೀವರ ಬಂಧಗಳಿಂದ ಎಲ್ಲ ಪಾವನ ಮಾಳ್ಪದರಿಂದ ದೇವ ಪಾವನಮೂರ್ತಿಯು ನಿನ್ನ ಮುಖದಿ ಜಗ ತ್ಪಾವನ ಮಾಳ್ಪುದರಿಂದ ಪವನನೆಂಬೋರೆ ನಿನ್ನ ಅ.ಪ ಜ್ಞಾನೈಶ್ವರ್ಯ ವೈರಾಗ್ಯ ನಿನಗೆ ನಿನ್ನ ಸ್ವರೂಪ ಸ್ವಭಾವಕೆ ಯೋಗ್ಯ ನಿಜ ಘನ್ನ ಮಹಿಮ ನಿನ್ನ ಭಾಗ್ಯ | ಆಹಾ ತನು ಚತುಷ್ಟಯದೊಳಗನವರತ ವ್ಯಾಪ್ತನೋ ಇನ್ನೂ ಮುನ್ನೂ ಜಗತ್ಕಾರ್ಯ ನಿನ್ನದೋ ದೇವಾ1 ಬೃಹತಿನಾಮಕ ಕರುಣಾಳು ನಿನ್ನ ದೇಹದಿ ಭಗವದ್ರೂಪಗಳೂ ನಿತ್ಯನೋಡುತ ಅನೇಕಂಗಳು | ಆಹಾ ಬೃಹತಿ ಛಂದಸ್ಸು ಅನ್ನವು ಶ್ರೀಹರಿಗೆ ಛಂದಸ್ಸಿನಿಂದಾಚ್ಛಾದಿತ ತ್ವದ್ಗಾತ್ರನೊ2 ಪ್ರಾಣಾಪಾನ ವ್ಯಾನೋದಾನ ಸಮಾನಾದಿ ಪಂಚಪ್ರಾಣ ಜೀವ ಶ್ರೇಣಿಗಳೊಳಗೆ ನೀ ಪ್ರವೀಣ ಜಗತ್ರಾಣ ನೀನಹುದೋ ಸದ್ಗುಣ |ಆಹಾ ಪ್ರಾಣಾಪಾನದಿಂದ ದೇಹದ ಸ್ಥಿತಿ ಕಾರ್ಯಕ್ಷಣ ತಪ್ಪಲು ಕುಣಪನೆಂದಪರೋ ಈ ದೇಹಕೆ3 ಇಪ್ಪತ್ತೊಂದು ಸಾವಿರದಾರುನೂರು ಶ್ವಾಸ ತಪ್ಪದೆ ಜೀವರು ಮಾಡಿ ಅಹರ್ನಿಶಿ ದೇಹವ ಧರಿಪರೋ ನಿನ್ನ ಒಪ್ಪಿಗೆಯಂತೆ ಸಾಧಿಪರೋ | ಹಾ ಅಹೋರಾತ್ರಿ ಶ್ವಾಸನಿಯಾಮಕ ಜೀವರ್ಗೆ ಅಯುಮಾನವ ನೀವ ಮಾತರಿಶ್ವದೇವಾ 4 ನಿನ್ನಂತರದಿ ಇಟ್ಟು ಅವಸ್ಥಾಭೋಗ್ಯವನಿತ್ತು ತ್ವರದಿ | ಆಹಾ ಪಾವನ ಮೂರ್ತಿಗೆ ಅರ್ಪಿಸುತ್ತ ಶ್ರೀಪತಿ ಕರವ ಮುಗಿದು ನಿಂದಿಹೆ 5 ಪರಿಶುದ್ದ ಸತ್ವಾತ್ಮಕವಾಗಿ ಇನ್ನು ನಿರುತ ಪೂರ್ಣಪ್ರಜ್ಞನಾಗೀ ಜೀವ ಸ ರ್ವರೊಳು ಶುಚಿತಮನಾಗಿ ಇರ್ಪ ಮಾರುತ ನಿನ್ನೊಳು ಅನುವಾಗಿ |ಆಹಾ ಹರಿಯು ನಿನ್ನ ಶುಚಿ ತನುವಿನೊಳಿದ್ದು ಶುಚಿಹೃತ್ ಎಂದು ತಾ ನಿಂದು ನಲಿವನಯ್ಯ6 ಅಂಡಾವರಣದ ಗುಣತ್ರಯ ಕಂಡಿಹೆ ವ್ಯಾಪ್ತಸದ್ಗುಣ ಉ ದ್ದಂಡ ಮಹದ್ರೂಪನೆ ಮಹಘನ್ನ ಇನ್ನು ಮೃಡನಾಪೇಕ್ಷ ಶತಗುಣ | ಆಹಾ ತನುರೂಪದೊಳೆಲ್ಲ ಅಣುರೂಪವಾಗಿಹೆ ತೃಣಮೊದಲು ಸರ್ವಜೀವರೊಳು ವ್ಯಾಪ್ತನೊ7 ಅಂದು ತ್ರಿಕೋಟಿರೂಪದಲಿ ನಿಂತು ನಿಂದ ತ್ರಿವಿಕ್ರಮಾವತಾರದಲೀ ಸೇವೇ ಆ ನಂದದಿ ಸಲಿಸುತ್ತಲಲ್ಲಿ ಇನ್ನು ನಿಂದು ಅಂ ಡದ ಬಹಿರ್ಭಾಗದಲಿ |ಆಹಾ ಅಂಡ ಖರ್ಪರ ಉದ್ದಂಡ ಮೂರುತಿಯೊ 8 ವಾಯುಕೂರ್ಮನಾಗಿ ನಿಂದೇ ಜಗದಾದ್ಯಭಾರವು ಎಲ್ಲ ನಿನ್ನಿಂದೇ ಎಂದು ಕಾಯಜಪಿತ ತರುವ ಮುಂದೇ ನಿನ್ನ ಗಾಯತ್ರೀಪತಿಯ ಪಟ್ಟಕೆಂದೇ | ಆಹಾ ಶ್ರೀಯರಸಾ ಶ್ರೀ ವೇಂಕಟೇಶಾತ್ಮಕ ಉರಗಾದ್ರಿವಾಸವಿಠಲನ ನಿಜದಾಸ 9
--------------
ಉರಗಾದ್ರಿವಾಸವಿಠಲದಾಸರು
ರುದ್ರದೇವರು ದೇವತೆಗಳ ದೇವ ಮಹದೇವ ದೇವ ಆವ ನಿಮಗೆ ಸರಿಯು ಕಾವುದೆಮ್ಮನು ಸರ್ವ ಪ ಮೂರನೆ ತತ್ವದ ಒಡೆಯನು ನೀನಯ್ಯ ಕಾರುಣಿಕ ಜನರಿಗಾರ್ಹ ಭಾವಕೆ ಮಾರಮಣನಾ ನೆನೆದು ಮೈಮರೆದು ನೀ ತಾರಕಾ ಉಪದೇಶಿ ಕಾಸಿ ವಾಸಿ 1 ಗಂಗೆಯ ಧರಿಸಿ ನೀ ಭಂಗಬಡುವ ಜನರ ಪೂತನ ಮಾಡಿದ್ಯೊ ಅಂಗಜನಯ್ಯನ ಭಕುತ ಶಿಖಾಮಣಿಯೆ ನಿ ಸ್ಸಂಗ ಜನರ ಪ್ರಿಯ ಸನಕಾÀದಿ ವಂದ್ಯ 2 ಮೋಸಗೊಳಿಸುವಿಯೊ ದುರ್ಜನರ ನಾನೀಶನೆಂದು ವಾಸುದೇವವಿಠಲಗಲ್ಲದವರ ಲೇಸು ಬೋಧಿಸುವಿಯೊ ಯೋಗ್ಯರನು ನೋಡಿ ಎನ್ನಲಿ ವಾಸ ಮಾಡೊ ಎನ್ನ ಮನದೊಡೆಯ 3
--------------
ವ್ಯಾಸತತ್ವಜ್ಞದಾಸರು
ಸತ್ಯವರ ಯತಿಗಳ ಸ್ತೋತ್ರ ಮೂರ್ತಿ ಪ ಅಂದು ನರಹರಿ ಯತಿಯು ತಂದದ್ದು ನಾ ಕರ್ಣ-ದಿಂದ ಕೇಳಿ ಬಲ್ಲೆ ನಾ ಕಂಡದ್ದು ಇಲ್ಲ ||ಇಂದೆಮ್ಮ ಗುರು ಸತ್ಯಸಂಧ ಸುತರಿಗೊಲಿದುಬಂದ ರಾಮನ ಕಣ್ಣಿಂದ ಕಂಡೇ 1 ಅವರೊಯ್ದರಿವರೊಯ್ದರೆಂಬ ಮಾತುಗಳ್ ಪುಸಿಅವನ ಸತಿಯು ತನ್ನ ತವರು ಮನೆಗೆ ||ತವಕದಿಂದಲಿ ಕರದೊಯ್ಯೆ ಗುರುಗಳ ತಪಕೇಭುವನ ತಲ್ಲಣಿಸಲು ಭುವನೇಶ ಬಂದ 2 ಆಗ ಶ್ರೀ ರಘುನಾಥ ಯೋಗಿಗೊಲಿದುಸಾಗಿ ಬಂದುದು ನಾ ಕೇಳಿ ಬಲ್ಲೆ ಈ ನ- ||ಮ್ಮ ಗುರು ಸತ್ಯವರ ಯೋಗಿಗೊಲಿದು ರಾಮಬೇಗ ಬಂದುದು ಚೆನ್ನಾಗಿ ಕಣ್ಣಿಲಿ ಕಂಡೆ 3 ನಾಮಗೊಂಡಲು ಈ ಭೂಮಿದೇವಿ ಇಲ್ಲಿತಾ ಮಗಳ ಅಳಿಯನ್ನ ಕರೆದು ಒಯ್ದು ||ಪಾಮರರಿಗೆ ಪೋದರೆಂದೆಂಬ ಭ್ರಮೆಯ ತೋರಿಈ ಮುನಿಯ ಮಾನಸ ಹಂಸನಾಗಿದ್ದ 4 ಒಂದು ಮಾಸವುಪವಾಸ ಮಾಡಿದವರ್ಗೆಬಂದೊದಗುವ ಜಗದೊಳಗೆ ಖ್ಯಾತ ||ಸಂದೇಹವಿಲ್ಲದೆ ಅನಶನ ವ್ರತವನ್ನುಒಂದು ತಿಂಗಳು ಮಾಡಿ ಇಂದಿರೇಶನ ತಂದ 5 ನಳನಾಮ ಸಂವತ್ಸರ ಫಾಲ್ಗುಣ ಬಹುಳ ದ್ವಾದಶಿನಳಿನಾಕ್ಷ ರಾಮಸ್ವಾಮಿಯು ಹೊರಟು ||ಖಳರ ಖಂಡಿಸಿ ತಾನು ಇವರ ಭಾವಕೆ ಮೆಚ್ಚಿಲಲನೆ ಸಹಿತವಾಗಿ ಭುವನೇಶ ಬಂದ6 ಗಂಗಾದಿ ಸಕಲ ತೀರ್ಥಗಳಲ್ಲಿ ಮಿಂದು ಶ್ರೀರಂಗಾದಿಯಲ್ಲಿ ಮೋಹನ ವಿಠಲನ್ನ ||ಸಂಗೀತೆಗೆ ಸರ್ವದಾಧಿಕ ಫಲಸಂಘಟಿಸುವದು ಸಜ್ಜನರು ಕೇಳಿ 7
--------------
ಮೋಹನದಾಸರು
ಸಿರಿ ಪತಿಯ ಒಂದೊಂದು ವಚನಗಳು ಗುರುತರಾ ನಂದತೀರ್ಥರ ಭಾವಕೆ ಹೊಂದಿಸುವ ಯುಕತಿ ಬಾಣ | ತೆಗೆಯಲವು ಕುಂದಿಲ್ಲ ಧೀಷುಧಿಗಳು 1 ವಂದಿಸುವ ಜನ ಬೇಡಿದ ಫಲಗಳಿಗೆ ಮಂದಾರು ತರು ಸನ್ನಿಭ | ತಾವು ವಂದಿಸುವ ಶಿಷ್ಯರಿಗೆ | ಹೃದಯದಲ್ಲಿ ಕುಂದ ಕುಸುಮದ ಮಾಲಿಕೆ | ತಾವು 2 ಗೆಲಿದು ಪ್ರತಿವಾದಿ ಹೃದಯ | ಗಿರಿಗಳಿಗೆ ಕುಲಿಶಗಳಂತಿಹವೆ ಅವರ ವಚನ ವಾಸುದೇವ ಸಲೆ ಕೃಪೆಯೆಂದು ತಿಳಿಯೊ | ಪ್ರಾಣಿ 3
--------------
ವ್ಯಾಸತತ್ವಜ್ಞದಾಸರು