ಒಟ್ಟು 6 ಕಡೆಗಳಲ್ಲಿ , 1 ದಾಸರು , 6 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿತ್ಯ ಶುಭ ಪಾದ ಪಾದ ತೀರ್ಥಕ್ಕೆ || ಜಯ || 1 ಭವ ಹರಿಸುವ ತೀರ್ಥಕ್ಕೆ | ಇಪ್ಪತ್ತೈದು ತತ್ತ್ವ ಪಾವನಗೈದ ತೀರ್ಥಕ್ಕೆ |ಕೃಪನಿಧಿ ತಾರಿಸಿದ ಗುರುಪಾದ ತೀರ್ಥಕ್ಕೆ || ಜಯ || 2 ತಾಪ ನಾಶವಗೈವ ಗುರುಪಾದ ತೀರ್ಥಕ್ಕೆ || ಜಯ || 3 ಜಗದೊಳಗಿನ ತೀರ್ಥ ಸಾಗರದೊಳಿರುತಿಹವು | ಸಾಗರಾಂತ ಸಹ ಪರಿವಾರದಿ | ಅಘವ ಹರಿಸುವದೆಂದು ಜಗದೊಡೆಯನ ಪಾದದಿ |ಬೇಗನೆ ಬಂದು ಮಡಿಯಾಗುವ ತೀರ್ಥಕ್ಕೆ || ಜಯ || 4 ಕಮಲನಯನ ಕಮಲೋದ್ಭವರೆಲ್ಲರು | ವಿಮಲಮಹ ಪದಗಳನು ಹೃದಯದಲಿ ಧರಿಸಿ | ಬ್ರಹ್ಮಾಂಡಕೋಟಿಗಳನು ಉದ್ಧರಿಸುವ ತೀರ್ಥಕ್ಕೆ |ಭೀಮಾಶಂಕರನು ಸೇವಿಸಿದ ಗುರುಪಾದ ತೀರ್ಥಕ್ಕೆ || ಜಯ5
--------------
ಭೀಮಾಶಂಕರ
ಪರಮೇಷ್ಟಿ ರೂಪಿಣೀ ಸ್ಥಿತಿಸುವಗೆ || ಹರಿಹರರೂಪಿಣೀ ವರದ ಸಂಹಾರಗೆ | ವಿರಹಿತವಾದ ಮಹದೇವಗೆ ಮಂಗಳ ಮಂಗಳ ಜಯಮಂಗಳ ಮಹದಾತ್ಮ ಲಿಂಗಗೆ 1 ಉತ್ಪತ್ತಿ ಸ್ಥಿತಿ ಲಯ ಕಾರಣರೂಪಗೆ | ಗುಪ್ತಗೂಢ ಗುಣತ್ರಯ ಸಾಕ್ಷಿಗೆ | ವ್ಯಾಪ್ತನಾಗಿ ತನ್ನೊಳು ತಾನಾದಗೆ | ಪ್ರಾಪ್ತುಳ್ಳ ಪುರುಷರ ಪಾಲಿಪಗೆ ||ಮಂ||2 ಹಂಸ ಪರಮಹಂಸಾಶ್ರಮದೊಳಿಹಗೆ | ಸ್ವಸಾಕ್ಷಿ ಸರ್ವ ದಂಭ ರಹಿತ ಸದೋದಿತಗೆ | ವಾಸವಾಗಿಹನು ತುಂಗಭದ್ರ ನಿಲಯಗೆ | ದಾಸ ಭೀಮಾಶಂಕರನ ಹೃದಯಾಬ್ಜದಾತ್ಮಗೆ || ಮಂ|| 3
--------------
ಭೀಮಾಶಂಕರ
ಭೀಮಾ ಭವಭಯಕತಿದೂರಾ ಭೀಮಾಶಂಕರನವತಾರಾ |ಭೀಮಾತೀರದಲಿಹ ವಾಯುಕುಮಾರಾ ಸಮರಂಗಣಧೀರಾ 1 ಮಾಯಾ ಮಾಯಾ ಪಾಶದ ಸಂಗಮವನು ಬಿಟ್ಟಾ |ಲಂಕಾಪುರಿ ಸುಟ್ಟಾ 2 ಶರಣಾಗತ ಭಕ್ತರ ಕಾವಾ | ಶರಣ ಜನರಂತರ್ಭಾವಾ | ಶರಣಾ ಬ್ರಹ್ಮಾದಿಗಳಿಗೆ ಮಹದೇವಾ ಸಂಜೀವನ ತಾವಾ 3 ಕರ್ತಾ ನೆಲವಿಗಿ ಪುರದೊಳಗೆ | ಕರ್ತಾ ರಾಮರ ಸ್ಥಳದೊಳಗೆ | ಕರ್ತಾನುಷ್ಠಾನಿಕ ಸೇವಕರಿಗೆ | ಭಾವನ ಇದ್ಧಾಂಗೆ 4 ರಾಮಾ ಲಕ್ಷ್ಮಣನ ಬಂಧೂ | ರಾಮನ ಸೇವಕನೆಂದೂ |ರಾಮಾಶಂಕರ ಭೇದಿಲ್ಲೆಂದೂ | ತಿಳಿದವ ಸುಖಸಿಂಧೂ 5
--------------
ಭೀಮಾಶಂಕರ
ಭೂತ ಬಡೆದಿತೊ | ಬ್ರಹ್ಮಭೂತವ ಬಿಡಿಸುವರಾರಮ್ಮ ಪ ಪೃಥ್ವಿ ಆಪ ತೇಜಂಗಳನೆಲ್ಲ ನುಂಗಿತು |ಮತ್ತೆ ಸಮೀರ ಸಹ ಆಕಾಶವ |ಚಿತ್ತ ಹಂಮಿನ ಮೂಲಕ ಹವಣಿಸುತಿದೆ |ಕರ್ತು ತಾನಾಗಿ ಸುಮ್ಮನೆ ಕೂತಿತಮ್ಮಾ 1 ಕಳವಳ ಕಳೆದೀತು ಒಳ್ಳೆ ಬೆಳಗಾದೀತು |ಸುಳದ್ಹಾಂಗೆ ಸುಳದೀತು ಅಳಿವಿಲ್ಲದೆ |ಮೂಲ ಪ್ರಕೃತಿಯ ಮೇಲೇರಿ ನಿಂತಿತು |ಸೊಲ್ಲದಿಂ ಸೋಂಕಲು ಬಲು ಭಯವಮ್ಮಾ 2 ದಿಮ್ಮನೆ ಬಡದೀತು ಹಂಮನೆ ನುಂಗೀತು |ನಮ್ಮಗೆ ಎಲ್ಲಿಹುದು ಉಲಗಡೆಯಮ್ಮಾ |ಬ್ರಹ್ಮಾಂಡದಾಚೀಲಿ ಭೂತ ಕುಣಿಯುತಿದೆ |ಭೀಮಾಶಂಕರನ ಮನಿ ದೈವವಮ್ಮಾ 3
--------------
ಭೀಮಾಶಂಕರ
ಮೂರ್ತಿ ರಕ್ಷಿಸೋ ನೀನು |ನಿನ್ನ ಪಾದವ ನಂಬಿದೆ ನಾನು ಪ ಪೂರ್ವಾರ್ಜಿತ ಪ್ರಾರಬ್ಧದಿಂದೆ |ತಾಯಿ ಉದರದಲಿ ನಾ ಬಂದೆ ||ಮಲಮೂತ್ರ ಜಠರಾಗ್ನಿಯಲಿ ನೊಂದೆ |ಒಂಬತ್ತು ತಿಂಗಳೊಳಗೆ ಬೆಂದೆ 1 ಬಾಲತ್ವದಲಿ ದುರ್ಬಲನಾದೆ |ಯೌವನ ಕಾಲಕೆ ಅಹಂಮತನಾದೆ ||ಮುಪ್ಪು ಬರಲು ಚಿಂತೆಯೊಳಗಾದೆ |ಸ್ವಾಮಿ ಭಜನೆಗೆ ಅಂತರನಾದೆ 2 ಧರೆಯೊಳಗೆ ದೊಡ್ಡವನೆಂದು |ಭವಭಯಕಂಜಿ ಬೆನ್ನನೆ ಬಿದ್ದೆ ||ದೀನೋದ್ಧಾರಕನೆಂದು ಶರಣು ಬಂದೆ |ಭೀಮಾಶಂಕರನ ಧ್ಯಾನಕೆ ತಂದೆ 3
--------------
ಭೀಮಾಶಂಕರ
ಹಲವಂಗದವನಿಗೆ ಬಲುವಂಗ ಮಾಲಿಗೆ | ಗುಲ್ಲು ಗುಲ್ಲಿಸಿದ ಎಲ್ಲರಿಗೆ | ಬಲ್ಲ ಮಹಾತ್ಮಗೆ ಬಲಸೀದ ಅಯ್ಯಗೆ ಶುರದರ ಸದ್ಗುರುನಾಥಗೆ ಪ ಶುಭ ಮಂಗಳಾ ಮಹಾ ಮಂಗಳ ಭೃಂಗವಳ್ಳಿಯ ಸದ್ಗುರುನಾಥಗೆ 1 ಯೋಗಿ ಜನರ ಹೃತ್ಕಮಲವಾಸಿಪಗೆ | ಭೋಗ ಮೂರು ಸದ್ಗುರುನಾಥಗೆ 2 ಅಗಣಿತ ಗಣಿತಗೆ | ನಿಗಮಕೆನಿಲುಕದ ನಿರ್ಲೇಪಗೆ | ಭೃಂಗವಳ್ಳಿಯಲ್ಲಿ ನಿಂತಮಹಾತ್ಮಗೆ | ಮಗ ಭೀಮಾಶಂಕರನ ಪಾಲಿಪಗೆ 3
--------------
ಭೀಮಾಶಂಕರ