ಒಟ್ಟು 14 ಕಡೆಗಳಲ್ಲಿ , 12 ದಾಸರು , 14 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

----------ನೋಡಿದೆ ತಾಂಡವ ಕೃಷ್ಣನ ನೋಡಿದೆ ಕೃಷ್ಣನ ನೋಡಿದೆ ಸೃಷ್ಟಿಗೆ ಕರ್ತನಾದ ವಿಠ್ಠಲಮೂರುತಿ ಅಭೀಷ್ಟದಾ ನಾಯಕನಾ ಪ ಅಕ್ಷಯ ತೋರುವನಾ ಸಕಲಾ ರಕ್ಷಕ ರಘುರಾಮಾನಾ ಲಕ್ಷ್ಮಿ ಮನೋಹರನಾ ದೈವಾಧ್ಯಕ್ಷ ಮಹಾಮಹಿಮನಾ ಕಲ್ಪವೃಕ್ಷ ಕಾಮಧೇನು ವಿಶ್ವಕುಟುಂಬನಾ 1 ದಶರಥನಂದನನಾ ದೇವಾ ವಸುಧಿಯನಾಳುವನಾ ಪಶುಪತಿ ಪಾಲಕನಾ ಭಕ್ತರ ಕುಶಲದಿ ಸಲಹುವನಾ ಬಿಸರುಹಾಕ್ಷ ಶ್ರೀ ಪೂರ್ಣ ಪ್ರಕಾಶನ ದಶಶಿರನಳಿದ ಕೋದಂಡರಾಮನ 2 ಶಿರಮಣಿ ಮಕುಟಧರನಾದಾ ಕೊರಳ ಪದಕಹಾರ ಕರದೊಳು ಕಂಕಣವಾ ಕಿರಿಬೆರಳಲಿ ಉಂಗುರವಾ ಪರಮ ಪರುಷ ನರಹರಿ ` ಹೆನ್ನೆವಿಠ್ಠಲ ' ಪರಮಾತ್ಮನ ಸರ್ವ ಪೋಷಕ ನಾದನಾ 3
--------------
ಹೆನ್ನೆರಂಗದಾಸರು
(ಮೂಲ್ಕಿಯ ಮಹಾಲಿಂಗೇಶನನ್ನು ನೆನೆದು) ಪಿಡಿಯೆನ್ನ ಕೈಯ ಜಗನ್ಮಯ ಪಿಡಿಯೆನ್ನ ಕೈಯ ಪ. ಪಿಡಿಯೆನ್ನ ಕೈಯ ನಿನ್ನಡಿದಾವರೆಯಲ್ಲಿ ದೃಢವಾದ ಮನವ ಬೆಂಬಿಡದೆನಗೀಯಯ್ಯ ಅ.ಪ. ಪಾಮರಮತಿಯ ಪಾಪಾತ್ಮರ ಸೀಮಾಧಿಪತಿಯ ಕಾಮುಕಪರದಾರಭ್ರಾಮಕತಾಮಸ- ಧಾಮನ ಕಪಟವಿಶ್ರಾಮ ಕುಧೀಮನ ವ್ಯೋಮಕೇಶ ಭಗತ್ಪದಾಶ್ರಿತನ ಮಮಕಾರದಲಿ ಪಾಲಿಸು ಹೈಮವತಿಪತಿ ಕಾಮಹರ ಸುತ್ರಾಮವಂದಿತ ಸೋಮಶೇಖರ 1 ದುಷ್ಟದುರ್ಜನನ ದುರಾಚಾರ ಭ್ರಷ್ಟಜೀವನನ ಮೆಟ್ಟಿದ ನೆಲಮುನಿಯುವನ ಕೃತಘ್ನ ಕ- ನಿಷ್ಟಕಾಯುಷ್ಯದ ಘಟ್ಟಿಚೇತನನೆನ್ನ ತಟ್ಟನೆ ದಯವಿಟ್ಟು ಸರ್ವಾಭೀಷ್ಟದಾಯಕನಾಗಿ ಕರುಣಾ- ದೃಷ್ಟಿಯಿಂದಲಿ ನೋಡು ಸನ್ಮನವಿಷ್ಟರಸ್ಥ ಶಿವಾಷ್ಟಮೂರುತಿ2 ಸತ್ಯಬಾಹಿರನ ಪ್ರಪಂಚ ಪ್ರ-ವೃತ್ತಿಯೊಳಿಹನ ಅತ್ಯಂತ ಪಾಪಿ ಕುಚಿತ್ತ ಮದಾಂಧನು- ನ್ಮತ್ತ ಮಾತಂಗವಿರಕ್ತಿವಿಹೀನನ ಎತ್ತಿ ಎನ್ನತ್ತಿತ್ತ ನೋಡದೆ ಮತ್ತೆ ಕಾವ ಸಮರ್ಥರಾರೈ ಸತ್ತ್ವನಿಧಿಸುರಮೊತ್ತ ಪೂಜಿತ ಮೃತ್ಯುಹರ ಶ್ರೀಕೃತ್ತಿವಾಸನೆ 3 ಎಣಿಸಲು ಬೇಡ ಎನ್ನಪರಾಧ ಗಣಿತಕ್ಕೆ ಕೂಡ ಗುಣಗಣನಿಧಿ ಲಕ್ಷ್ಮೀನಾರಾಯಣಸಖ ದಣಿಯಲೊಲ್ಲೆ ದಯಮಾಡೆನಗೀಗಲೆ ಫಣಿಪಕುಂಡಲ ಪಾರ್ವತೀಪತಿ ಪ್ರಣತಜನಮಂದಾರ ನಿರ್ಮಲ ಪ್ರಣವರೂಪನೆ ಮೌಕ್ತಿಕಾಪುರ ಮಣಿಮಹಾಲಿಂಗೇಶ ಬೇಗನೆ 4
--------------
ತುಪಾಕಿ ವೆಂಕಟರಮಣಾಚಾರ್ಯ
ಎಂತು ಜೀವಿಪೆನಯ್ಯಾ ನಿನ್ನನಗಲಿ ನಾನು ಶಾಂತ ಮೂರುತಿ ಕೃಷ್ಣ ಕೃಷ್ಣಯ್ಯಾ ಪ ದಂತಿವರದ ಭಕ್ತ ಚಿಂತಾಮಣಿಯೆ ಲಕ್ಷ್ಮೀ ಕಾಂತ ಸಕಲ ಜಗದಂತರಾತ್ಮಕ ದೇವ ಅ.ಪ. ಅಂಗಜಪಿತ ನಿನ್ನ ಅನುಪಮ ರೂಪವ ನಿತ್ಯ ನೋಡಿ ನಲಿಯುತ ತುಂಗಮಹಿಮ ನಿನ್ನ ಘನ ಕೃಪೆಯಿಂದ ಅಂತ- ರಂಗದ ಭಕ್ತ ನಾನೆಂದೆನಿಸಿರಲಾಗಿ ಮಂಗಳಾಂಗ ಮನೋಹರ ನಿನ್ನ ಸಂಗ ಬಿಟ್ಟಿರಲಾರೆನೋ ಸ್ವಾಮಿ ರಂಗ ಎನ್ನಂತರಂಗವರಿಯಯಾ ಇಂಗಿತಜ್ಞ ನೀನಲ್ಲವೇ ಕೃಷ್ಣ 1 ಇಂದಿರೇಶನೆ ನಿನ್ನ ಚರಿತೆಯ ಕೇಳಿ ಆ- ನಂದದ ಸವಿ ಕಂಡೆ ಪುಣ್ಯಾತ್ಮರಿಗೆ ಬೇರೆ ಒಂದರಲಭಿರುಚಿ ತೋರ್ಪುದೆ ಗುಣಗಣ ಸಿಂಧು ನಿನ್ನನು ಬಿಟ್ಟೇನೊಂದ ನಾನೊಲ್ಲೆನು ಸಿಂಧು ಮಂದಿರ ಸುಂದರ ನಿನ್ನ ಪೊಂದಿಕೊಂಡಿಹನಲ್ಲವೇ ಕೃಷ್ಣ ತಂದೆ ಕೈ ಬಿಡಬೇಡವೊ ಎಳ- ಗಂದಿಯೆಂಬುದ ನೆನೆದು ಪಾಲಿಸೊ 2 ದೋಷ ರಹಿತ ಯಾದವೇಶ ಭಕ್ತರ ಪೋಷ ಶ್ರೀಶ ಕರಿಗಿರೀಶ ಸಕಲ ಲೋಕೇಶ ಪಾದ ಭೂಸುರ ಪ್ರಿಯ ಎನ್ನ ದೋಷಗಳೆಣಿಸದೆ ನೀ ಸಲಹಲಿ ಬೇಕೊ ವಾಸುದೇವ ಪರಾತ್ಪರ ಕೃಷ್ಣ ಕ್ಲೇಶ ಪರಿಹರನಲ್ಲವೆ ಸ್ವಾಮಿ ದಾಸ ಜನರಭೀಷ್ಟದಾಯಕ ನಾ ಶರಣು ಹೊಕ್ಕಿಹೆನು ರಕ್ಷಿಸು 3
--------------
ವರಾವಾಣಿರಾಮರಾಯದಾಸರು
ಗೋವಿಂದ ನಿನ್ನಾನಂದದಲ್ಲಿಡೋ ಗೋವಿಂದ ಪ ಗೋವಿಂದ ಹೃದಯಾರವಿಂದದಲ್ಲಿ ಇಂದೂ ಮುಂದೂ ಚರಣಾರವಿಂದ ತೋರೊ ಅ.ಪ ಬೆಟ್ಟದ ದರುಶನ ಲಾಭವು ಕಷ್ಟ ಪಟ್ಟರು ದೊರೆಯಲಸಾಧ್ಯವು ನೋಡೆ ಸುಟ್ಟು ಹೋಗುವುದಘರಾಶಿಯು ಪಟ್ಟ ಶ್ರಮವು ಇಷ್ಟಾರ್ಥವು ದಿಟ್ಟ ಮನವ ಕೊಟ್ಟು ಅಟ್ಟುರಿಯ ಕಳೆದು ಮೆಟ್ಟು ಮೆಟ್ಟಲನೇರಿ ದಿಟ್ಟಿಪರೋ ನಿನ್ನ1 ಪದುಮಜಾಂಡ ಕೋಟಿ ನಾಯಕ ದೇವ ಶ್ರೀದ ಸೃಷ್ಟಾದ್ಯಷ್ಟ ಕರ್ತೃ ನೀನೆ ಆದ್ಯಂತ ಜಗದಾಧಾರಕ ಅಂತರಾತ್ಮಕ ವಿಶ್ವವ್ಯಾಪಕ ಆದಿಮೂಲ ಚತುಷ್ಪಾದ ಎಂದೆನಿಸಿ ತ್ರಿ- ಪಾದ ಇಳೆಯೊಳಿಟ್ಟೆ 2 ಸದಮಲಾತ್ಮಕನೇ ದೇವ ಸರ್ವದಾ ಎಲ್ಲಾ ಹದಿನಾಲ್ಕು ಲೋಕವ ಧರಿಸಿದೆ ದಿವ್ಯ ನೆಲೆಸಿದೆ ಸರ್ವರ ಹೃದಯದ ಪದುಮದಲಿ ಪೊಳೆದು ತ್ರಿಜಗವಂದಿತನಾಗಿ ಮೇದಿನಿಯೊಳು ಮೆರೆಯುತಿಹೆ 3 ಧ್ವಜವಜ್ರಾಂಕುಶಯುಕ್ತಲಾಂಛನ ದೆÉೀವ ಅಬ್ಜಭವಾರಾಧ್ಯ ಚರಣದಿವ್ಯ- ಅಬ್ಜಸಖಕೋಟಿಕಿರಣ ಪಾದಾಭರಣದಿಂದ ಕಿರಣಾ ತಾ ಝಗಝಗಿಸುತ್ತ ನೂಪುರ ಕಾಲಂದಿಗೆ ಗೆಜ್ಜೆ ಸಜ್ಜುಗೊಂಡಿಹ ಮೂರ್ಜಗದೊಡೆಯನೆ ಹರಿ 4 ತಟಿತಕೋಟಿನಿಭಸಮಕಾಯ ಕಟಿಯ ದಿವ್ಯರತ್ನಖಚಿತದಟ್ಟಿಯಾ ತೊಟ್ಟ ಪಟ್ಟೆಪೀತಾಂಬರ ಬಟ್ಟೆಯಾ ಸೊಂಟಪಟ್ಟಿಯ ಇಟ್ಟ ಪರಿಯಾ ಅಟ್ಟಹಾಸದಿ ನಿಂದ ಸೃಷ್ಟಿಗೊಡೆಯ ಮನೋ- ಭೀಷ್ಟದಾಯಕ ಬೆಟ್ಟದೊಡೆಯನೆ 5 ಕರಚತುಷ್ಟಯದಲ್ಲಿ ಮೆರಯುವಾ ಶ್ರೀ ಸು- ದರ್ಶನ ಶಂಖದಿಂದಿರುವಾ ದೀನ ಶರಣಜನರಿಗಭಯ ಹಸ್ತವಾ ಕರೆದು ನೀಡುವ ಕಾಮಿತಾರ್ಥವ ಪರಿಪರಿ ಭಾಪುರಿ ಭುಜಗಾಭರಣಾದಿಗಳ ಧರಿಸಿರುತ ಭಕ್ತಜನರಘ ಹರಿಸುವಾ6 ವಕ್ಷಸ್ಥಳದಲ್ಲಿ ಶ್ರೀವತ್ಸವೂ ಕಂಠ ದಕ್ಷಿಣದಲ್ಲಿ ತೋರ ನಕ್ಷತ್ರದಂತಿಹ ಹಾರವೂ ಕುಕ್ಷಿ ಅಂದವೂ ಮೋಕ್ಷದಾತೃವು ಅಕ್ಷರ ವಾಚ್ಯತ್ರ್ಯಕ್ಷಾದಿ ಸುರವಂದ್ಯ ಈ ಕ್ಷಿತಿಗಿಳಿದು ಪ್ರತ್ಯಕ್ಷನಾಗಿ ನಿಂದೆ 7 ಮಂದಹಾಸಮುಖ ಅರವಿಂದ ದಂತ ಚಂದಕರ್ಣಕುಂಡಲದಿಂದ ಕೆಂದುಟಿಯಿಂದ ಒಪ್ಪುವ ಚೆಂದ ಪೊಂದಿ ಮಕುಟ ಸರ್ವಾಲಂಕಾರ ಪರಿಪೂರ್u ಬಂಧ ಮೋಚನ ಹರಿ ಶ್ರೀ ವೇಂಕಟೇಶನೆ 8 ಪರಿಪರಿ ಮುಕ್ತಜೀವರುಗಳು ಇಲ್ಲಿ ಪರಿವಾರ ತರುಲತೆ ಶಿಲೆಗಳು ಇನ್ನು ವಿರಜೆ ಮೊದಲಾದ ಸರ್ವತೀರ್ಥವು ಸ್ವಾಮಿ ತೀರ್ಥವೂ ಮೋಕ್ಷದಾತೃವೂ ಭವ ಶಕ್ರಾದಿನುತಉರಗಾದ್ರಿವಾಸವಿಠಲ ಜಗದೀಶನೆ 9
--------------
ಉರಗಾದ್ರಿವಾಸವಿಠಲದಾಸರು
ನೀರಜಾಕ್ಷನೆ ಚಾರುರೂಪನೆಸೇರಿ ಚಿತ್ತದೊಳು ಮೋರೆ ತೋರಿಸೀಗಾ ಪ ಎಷ್ಟು ಭಕ್ತರಾಭೀಷ್ಟ ನೀಡಿದಿವೃಷ್ಣಿವರ್ಯನೆ ಭೆಟ್ಟಿ ಪಾಲಿಸೀಗಾ 1 ಮುಷ್ಠಿ ಅವಲಿಯಾ ಕೊಟ್ಟ ವಿಪ್ರಗೆ ಕೊಟ್ಟೆ ಸಂಪದವಾಭೀಷ್ಟದಾಯಕನೆ 2 ಇಂದಿರೇಶನೆ ಬಂಧ ಮೋಚನೆ ಗೈದು ಬಂದು ಕಾಯೋ ನಂದ ಬಾಲಕನೇ 3
--------------
ಇಂದಿರೇಶರು
ನೋಡೊ ಮನ ಕೊಂಡಾಡೊ ಮರೆಯದಲೆ ಮನ ಚಿಂತÀ ಲ್ರೇವ ಲೇಶನ ? ಪಾಡುತಿರೆ ಕೃಷ್ಣಾತೀರದ್ವಾಸನ ಮಾಡೊ ಮಹಾತ್ಮರೆಂದೆನಿಸೊ ದಾಸರ ಜೋಡು ಪಾದಂಗಳಿಗೆ ವಂದನೆ ಪ ಅಂಜನೆಯಲ್ಲುದಿಸಿ ಕೌಸಲ್ಯಾ- ಕಂದನಂಘ್ರಿಕಮಲ ಸೇವೆಗೆ ಅಂಗದ ಮೊದಲಾದ ಕಪಿಗಳ ಸಂಗ ಬಿಟ್ವಾರಿಧಿಯನ್ಹಾರುತ ಭಂಗ ಬಡಿಸುತ ರಾವಣನ ಪುರ ಮಂಗಳಾರತಿ ಮಾಡಿ ಜಾನಕಿ ಗುಂಗುರವನಿಟ್ಟೆರಗಿ ರಾಮರಿ ಗಂಗನೆಯ ವಾರ್ತೆಗಳನರುಹಿದೆ1 ಕುಂತಿಸುತನಾಗ್ಯುದಿಸಿ ಬ್ಯಾಗನೆ ಪಂಥಮಾಡುತ ಕೌರವರ ಕುಲ- ಕಂತಕನು ನಾನೆಂದು ರಣದೊಳು ನಿಂತು ಗದೆ ಹಾಕವರ ಸವರುತ ಅಂತರಂಗದಿ ಹರಿಯ ದಿವ್ಯಾ- ನಂತ ಗುಣಗಳ ತಿಳಿದು ದ್ರೌಪದೀ- ಕಾಂತನೆನಿಸಿ ತಾ ಕರುಣನಿಧಿಗೇ- ಕಾಂತ ಭಕ್ತನೆಂದಿನಿಸಿದಾತನು 2 ಮಧ್ಯಗೇಹಭಟ್ಟರಲ್ಲಿ ಮಗನಾ- ಗಿದ್ದ ಸುಜನರಭೀಷ್ಟದಾಯಕ ಗೆದ್ದು ಮಾಯಾವಾದಿಗಳನೆ ಪ್ರ ಸಿದ್ಧಿನೆನಿಸಿದೆ ಸರ್ವಲೋಕದಿ ಶುದ್ಧ ಜ್ಞಾನಾನಂದತೀರ್ಥರು ಮಧ್ವಮತದ ಬಿರುದನೆತ್ತಿದ ಪದ್ಮಪತಿ ಭೀಮೇಶಕೃಷ್ಣಗೆ ಪರಮಭಕ್ತನೆಂದೆನಿಸಿದಾತನು 3
--------------
ಹರಪನಹಳ್ಳಿಭೀಮವ್ವ
ಪಾಲಿಸೋ ಪರಿಪಾಲಿಸೋ ಪ ಪಾಲಿಸೋ ನೀ ಕಾಲನಾಮಕ-ಶ್ರೀಲೋಲ ಕಾಲಕರ್ಮದಲೆನ್ನಕರುಣಿಸಿ ನೀನೀಗ ಅ.ಪ ದುಷ್ಟಜನರ ಸಂಹಾರಕ-ಸರ್ವ ಶಿಷ್ಟಜನರ ಪರಿಪಾಲಕ-ದೇವ ಸೃಷ್ಟ್ಯಾದ್ಯಷ್ಟಕರ್ತುಕ-ತ್ವದ್ಭಕ್ತರಾ- ಭೀಷ್ಟದಾಯಕಾ 1 ಜಗದ್ಭರಿತ ಜಗದಂತರ್ಯಾಮಿ-ಸರ್ವ ಜಗದಾದ್ಯಂತ ಭಿನ್ನನೇಮಿ-ನೀನೆ ಸ್ವಗತಭೇದಶೂನ್ಯಮಹಿಮಾ ಇನ್ನು ಜಗದ್ಭುಕು ಮಮಕುಲಸ್ವಾಮಿ 2 ಪರಮೇಷ್ಟಿಭವಇಂದ್ರವಂದಿತ-ಕ್ಷರಾ- ಕ್ಷರ ಪುರುಷ ಪೂಜಿತ-ಪಾದ ನಿರವಧಿಕಗುಣಗಣಾನ್ವಿತ ನೀನೆ ಜರಾಮರಣನಾಶ ವರ್ಜಿತ 3 ಮುಕ್ತಾಮುಕ್ತಾಶ್ರಯದೇವನೆ-ಸರ್ವ ಭಕ್ತಮುಕ್ತಿಪ್ರದಾತನೆ-ವ್ಯಕ್ತಾ ವ್ಯಕ್ತಪುರುಷದೇವನೆ ಪುರುಷ- ಸೂಕ್ತಸುಮೇಯ ಅಪ್ರಮೇಯನೆ 4 ಸ್ವರವರ್ಣ ಶಬ್ದವಾಚ್ಯನೆ-ದೇವ ಸುರಾಸುರಾರ್ಚಿತ ಪಾದನೆ ಓಂ- ಕಾರ ಪ್ರಣವ ಪ್ರತಿಪಾದ್ಯನೆ ನಿತ್ಯ ನಿಖಿಳಾಗಮದೊಳು ಸಂಚಾರನೆ5 ಅಚಿಂತ್ಯಾನಂತರೂಪಾತ್ಮಕ-ನಿನ್ನ ಭಜಕರ ಭವಬಂಧ ಮೋಚಕ-ಸರ್ವ ಅಬುಜಾಂಡ ಕೋಟಿನಾಯಕ ನೀನೆ ಜಗದಾದ್ಯಂತ ವ್ಯಾಪಕ6 ವೇದ ವೇದಾಂತ ವೇದ್ಯನೆ-ನೀನೆ ಆದಿಮಧ್ಯಾಂತದೊಳ್ ಖ್ಯಾತನೆ ಗುರು ಮೋದತೀರ್ಥರ ಹೃತ್ಕಾಂತನೆ ಶ್ರೀ ವೇಂಕಟೇಶ ಉರಗಾದ್ರಿವಾಸವಿಠಲನೆ 7
--------------
ಉರಗಾದ್ರಿವಾಸವಿಠಲದಾಸರು
ಭೀಷ್ಟದಾಯಕ ಕರುಣದಿ ಪಿಡಿ ಕೈಯಾ ಪ ರಾಮಕೃಷ್ಣ ಪವನಾತ್ಮಜನಂಘ್ರಿ ತಾಮರಸವ ಧೇನಿಸು ಪರಿವ್ರಾಜಾ ಭೀಮತೀರ ಪಿಪ್ಪಲ ಭೂಜ ಮೂಲ ಸೀಮೆಯೊಳಗೆ ರಾಜಿಸುವ ಯತಿರಾಜ 1 ಭೇದ ಮತಾಂಬುಧಿ ಚಂದಿರಾ ಗುರು ವೇದವ್ಯಾಸ ಮುನಿವರ ಸುಕುಮಾರಾ ಸಾಧು ಸದ್ಗುಣಗಣ ಗಂಭೀರನಾದ ಬಾದರಾಯಣನಾಮದಲಿಪ್ಪ ಧೀರಾ 2 ದೇವ ಜಗನ್ನಾಥ ವಿಠಲನ್ನ ಪಾದ ಸೇವಕ ಭೇಡುವೆ ಹರಿಮೂರ್ತಿ ಧ್ಯಾನ ಕೇವಲ ಭಕುತಿ ನಿರ್ಮಲ ಜ್ಞಾನ ವಿತ್ತು ಪಾವನ್ನ ಮಾಡಿ ಪಾಲಿಸೋ ಪ್ರತಿದಿನ 3
--------------
ಜಗನ್ನಾಥದಾಸರು
ಮಂಗಳಂ ಮಂಗಳಂ ತುಲಸಿದೇವಿಗೆ ಪ ಮಂಗಳಂ ರಂಗನ ಅರ್ಧಾಂಗಿಗೆ ಮಾಧವ ಮಂಗಳ ಭಕ್ತರ ಸಲಹುವ ತಾಯಿಗೆ ಮಂಗಳ ಮಹಿಷಾಸುರಮರ್ದಿನಿಗೆ 1 ಮಂಗಳ ಮಂದಾರ ವನವಾಸಿಗೆ ಶರಧಿ ಉದ್ಭವಳಿಗೆ ಮಂಗಳ ರಾಮದಾಸಗಭಯವಿತ್ತವಳಿಗೆ ಮಂಗಳ ಸಂಜೆಯೊಳ್ ಪೂಜೆಗೊಂಬುವಳಿಗೆ 2 ಮಂಗಳ ನಾರದನುತ ಅಂಬೆಗೆ ಮಂಗಳ ಸೇವಿತ ಸುರ ಸಮುದಾಯಗಳಿಗೆ ಮಂಗಳ ಮನೋಭೀಷ್ಟದಾಯಕಳಿಗೆ ಮಂಗಳ ಹರಿದ್ರಾ ಕುಂಕುಮನಿಡುವಳಿಗೆ 3 ಮಂಗಳ ಕೃಷ್ಣನ ಅಂತಸ್ಥಿತಳಿಗೆ ಮಂಗಳ ಜಗನ್ಮೋಹನ ದೇವಿಗೆ ಮಂಗಳ ಹಾಟಕ ಸಮಕಾಂತ್ಯಾವಳಿಗೆ ಮಂಗಳ ಬೃಂದಾವನ ದೇವಿಗೆ 4 ಕಮಲ ಲೋಚನದೇವಿಗೆ ಮಂಗಳ ಪೀತಾಂಬರಧಾರಿ ಸುಂದರಿಗೆ ಮಂಗಳ ಸರ್ವಾಭರಣ ಭೂಷಿತಳಿಗೆ ಮಂಗಳ ವಿಜಯ ರಾಮಚಂದ್ರವಿಠಲನ ರಾಣಿಗೆ 5
--------------
ವಿಜಯ ರಾಮಚಂದ್ರವಿಠಲ
ಮುರವೈರಿಯೇ ಮೊರೆ ಹೊಕ್ಕೆ ನಿನ್ನಕರಿಯ ಕಾಯ್ದಹಲೈಯ | ವರದನೆಂದರಿತು ಪ ಸರಸಿ ಜಾಂಡದೋಳು | ಅರಸಿ ಅನ್ಯ ಕಾಣೆಕರುಣಿ ಕಂಜನಯನ | ಪರಿಪೋಷಿಸೆನ್ನ ಅ.ಪ. ಭಕ್ತಾಭೀಷ್ಟದಾ | ಮುಕ್ತಿದಾಯಕಾಶಕ್ತನಾಗಿ ಇರಲು | ವ್ಯಕ್ತನಾಗದಿರೆ |ಸೂಕ್ತವೇನೊ ನಿನಗೆ | ಯುಕ್ತಿ ಪೂರ್ಣ ಪುರುಷಸೂಕ್ತ ಮೇಯ ನೀನು | ವ್ಯಕ್ತನಾಗೊ ಮನದಿ 1 ಕಣ್ಣು ಬಿಟ್ಟು ಗಿರಿಯ | ಬೆನ್ನಿಲ್ಹೊತ್ತರೇನುಮಣ್ಣ ಹಲ್ಲಿಲಗಿದು | ಚಿಣ್ಣನನ್ನೆ ಪೊರೆದುಸಣ್ಣ ವಟುವೆ ಪಿಡಿದೆ | ಚೆನ್ನ ಪರಶುವನ್ನಘನ್ನ ಧನುವ ಮುರಿದ | ಕನ್ಯೆ ಸೀತೆ ಪತಿಯ 2 ಗೊಲ್ಲರೋಳು ಪುಟ್ಟಿ | ಮಲ್ಲರನು ಕುಟ್ಟಿಚೆಲ್ವ ಕನ್ಯೆ ಕೂಡಿ | ಕೊಲ್ಲಿಸಿ ತ್ರಿಪುರರಚೆಲ್ವ ಹಯವನೇರಿ | ಕೈಲಿ ಖಡ್ಗ ಪಿಡಿದುಚೆಲ್ವ ಕಲ್ಕಿ ಗುರು ಗೋವಿಂದ ವಿಠಲ 3
--------------
ಗುರುಗೋವಿಂದವಿಠಲರು
ಶರಣು ಗಜಮುಖ ಆಖುವಾಹನ ಶರಣು ಸುರಗಣ ಸೇವಿತ ಶರಣು ಸಕಲಾಭೀಷ್ಟದಾಯಕ ಶರಣು ವಿಘ್ನ ವಿನಾಯಕ 1 ಕುಂಡಲ ಕಾಮಿತಾ ಫಲದಾಯಕ ಅಮಿತ ಸೌಲಭ್ಯ ಪ್ರಬಲ ಶಾಸ್ತ್ರೋದ್ಧಾಮ ವಿದ್ಯಾಶರನಿಧೇ 2 ಪಾಶ ಮೋದಕ ಪರಶುಧರ ಫಣಿಭೂಷ ಪಾರ್ವತಿನಂದನ ವಾಸವಾರ್ಚಿತ ವಿಜಯವಿಠ್ಠಲನ ದಾಸ ಭೋ ಗಣನಾಯಕ 3
--------------
ವಿಜಯದಾಸ
ಶ್ರೀ ವಿಷ್ಣ್ವಾಷ್ಟಕ (ಪಾಲಯಾಚ್ಯುತ ಎಂಬತೆ) ಕಾವುದೋ ಹರಿ | ಕಾವುದೋ ಹರಿಕಾವುದೊ ಕರುಣಾರ್ಣವ ಪ ಜೀವರಂತರ ಬಾಹ್ಯ ನೆಲಸಿಹಶ್ರೀವರಾ ಶ್ರೀ ಭೂಧರಾ ಅ.ಪ. ನಿತ್ಯ ನೂತನ | ನಿರ್ವಿಕಾರನೆ | ಸತ್ಯನೆ ನೀ ನಿತ್ಯನೇಭೃತ್ಯ ವತ್ಸಲ | ಭವವನಾನಲ | ಕೃತ್ಯನೆ ದಯ ಪೂರ್ಣನೇ ||ಮೃತ್ಯು ವರ್ಜಿತ | ಪ್ರತ್ಯಗಾತ್ಮನೆ | ಕರ್ತನೇ ನಿರ್ಲಿಪ್ತನೇಸತ್ಯ ಕಾಮ ಶರಣ ಶಾಶ್ವತ | ಸ್ತುತ್ಯನೇ ಜಗ ವ್ಯಾಪ್ತನೇ 1 ಅಮಿತ ತೇಜನೆ | ಸರ್ವರನ ಸಲಹೂವನೇ ||ಸರ್ವ ಶಬ್ದ ಪ್ರವೃತಿ ಕಾರಣ | ಸರ್ವಗುಣ ಪರಿಪೂರ್ಣನೆಸರ್ವತೊಮುಖ ಬಾಹು ಚರಣನೆ | ಶರ್ವ ವಂದ್ಯ ಸುಮಹಿಮನೆ2 ವೀತಭಯ ವಿಶ್ವೇಶ ವಿಧಿಪಿತ | ಮಾತುಳಾಂತಕ ಪಾಲಕಾಭೂತ ಭಾವನನಂತ ಭಾಸ್ಕರ | ದ್ಯೋತಕ ಮಹಕೌತುಕ ||ಗೌತಮ ಪ್ರಿಯ ಮಡದಿ ಕಾಯ್ದಾ | ನಾಥ ರಕ್ಷಕ ಶಿಕ್ಷಕಾಖ್ಯಾತ ರಾವಣ ಕುಂಭಕರ್ಣನ | ಹಂತಕ ವಿಶ್ವಾಸಕ 3 ಮಣಿ ಭವ ಮೋಚಕಅಣು ಮಹದ್ಗತ ವ್ಯಾಪ್ಯವ್ಯಾಪಕ | ಸಾಧಕ ಖಲ ಬಾಧಕ |ತೃಣ ಮೊದಲು ಬ್ರಹ್ಮಾಂತ ಜೀವರ | ಪಾಲಕ ಪರಿಪೋಷಕ 4 ಮೀನ ಕಮಠನೆ ಕೋಲ ನರಹರಿ | ವಾಮನಾ ಸುಭಾಮನಾರೇಣುಕಾತ್ಮಜ ರಾವಣಾಂತಕ | ದಾಶರಥಿ ನರ ಸಾರಥೀ ||ಧೇನುಕಾಸುರ ಮಥನ ತ್ರಿಪುರವ | ಹಾನಿಗೈದನೆ ಬುದ್ಧನೆಮಾನುಷಾಕೃತಿಲ್ಹಯವನೇರಿದ | ಕಲ್ಕಿಯೇ ಕಲಹ ಪ್ರಿಯೆ 5 ಉದಿತ ಭಾಸ್ಕರನಂತ ತೇಜನೆ | ಉದರ ನಾಮಕ ಪಾಚಕಸುದತಿಯರು ಹದಿನಾರು ಸಾವಿರ | ವಾಳ್ದನೇ ಬ್ರಹ್ಮಚರ್ಯನೇ||ಮಧು ವಿರೋಧಿಯೆ ಮಧ್ವಮಾನಸ | ಮಂದಿರ ಬಹುಸುಂದರಹೃದಯದಲಿ ನೀ ಬದಿಗನೆನಿಸುತ | ಪೂಜಿತ ಸುರ ಪೂಜಿತ 6 ಸೃಷ್ಟಿ ಸ್ಥಿತಿ ಮೊದಲಾದ ಅಷ್ಟಕ | ಕರ್ತೃಕ ಪ್ರಾವರ್ತಕಅಷ್ಟದಳ ಸತ್ಕಮಲಧಿಷ್ಠಿತ | ಪ್ರಾಜ್ಞಾನೇ ವಿಶ್ವಜ್ಞನೇಜಿಷ್ಣು ಸಖ ಶ್ರೀಕೃಷ್ಣ ಕೃಷ್ಣೆಯ | ಭೀಷ್ಟದಾ ಶಿಷ್ಟೇಷ್ಟದಾಪುಷ್ಟ ಮಹಿಮಾ ಪ್ರವಿಷ್ಟ ರೂಪನ | ವಿಷ್ಟನೇ ನಿವಿಷ್ಟನೇ 7 ಗೋವಿದಾಂಪತಿ ಗೋವಪಾಲಕ | ಮಾವ ಮಾರಕ ಕಾರಕ ||ಭೂವರಾಹ ಸುಭಾವಜಾರಿಜ | ಷಣ್ಮುಖ ಪರಿಪಾಲಕ ||ಗೋವಿಂದ ಗುರು ಗೋವಿಂದವಿಠಲ | ಗೋವ್ಗಳ್ವರ್ಧನ ಗಿರಿಧರಪಾವಮಾನಿಯ ಪ್ರೀಯ ಸಿರಿಧರ | ಕಾವ ಶರಣರ ಭವಹರಾ 8|
--------------
ಗುರುಗೋವಿಂದವಿಠಲರು
ಸ್ಮರಿಸುವೆನು ಸದ್ಭಕ್ತಿಯಲಿ ಶ್ರೀರಾಮನ ಗುಣಧಾಮನ ಸಿರಿವಿರಿಂಚಾದ್ಯಮರಗಣ ಸಂಸ್ತುತ್ಯನ ಸಂತೃಪ್ತನಾ ಪ ಆದಿಯಲಿ ಝಷನಾಗಿ ನಿಗಮವ ತಂದನ ಮುನಿವಂದ್ಯನ ಭೂಧರಾಧರ ದಿವಿಜರಿಗೆ ಸುಧೆಗರೆದನ ಸುರವರದನ ಕಾದು ಕಿಟರೂಪದಲಿ ಭೂಮಿಯ ತಂದನ ಗುಣವೃಂದನ ಬಾಧಿಸಿದ ರಕ್ಕಸನ ತರಿದು ಪ್ರಲ್ಹಾದನ ತಾ ಪೊರೆದನ 1 ತುಳಿದನ ಅವಗೊಲಿದನ ಕೊಡಲಿ ಪಿಡಿದಾ ಕ್ಷತ್ರಿಕುಲ ವಿರಾಮನ ಭೃಗು ರಾಮನ ಮೃಡನೊರದಿ ಯುನ್ಮತ್ತ ದೈತ್ಯರು ಬಾಧಿಸೆ ಧರಿ ಪ್ರಾರ್ಥಿಸೆ ಜಡಜ ಪೀಠಾದ್ಯಮರರಾ ಮೊರೆ ಕೇಳ್ದನ ಧರೆಗಿಳಿದನ 2 ದಶರಥನ ಸತಿಯುದರದಲಿಯವತರಿಸಿದ ಮುದಗರಿಸಿದ ಬಿಸರುಹಾಪ್ತನ ವಂಶವನು ಉದ್ಧರಿಸಿದ ಮೈಮರಸಿದ ದಶದಿಶೆದಿ ಸುರರೆಲ್ಲ ಪೂಮಳೆಗರೆದರು ಸುಖಸುರಿದರು ಅಸಮಲೀಲೆಯ ತೋರ್ದರಘುಕಲಚಂದ್ರನ ಸುಖಸಾಂದ್ರನ 3 ಗಾಧಿಸುತನಧ್ವರವ ಕಾಯ್ದ ಸಮರ್ಥನ ಜಗಕರ್ತನ ವೇದಧನು ಮೊದಲಾದ ಕಲೆಗಳ ತಿಳಿದನ ಮುನಿಗೊಲಿದನ ಹಾದಿಯಲಿ ಶಿಲೆಯಾದ ಅಹಲ್ಯಳ ಪೊರೆದನ ಸಿರಿವರದನ ಮೋದದಲಿ ಹರಧನು ಮುರಿದ ಗಂಭೀರನ ಬಹುಶೂರನ 4 ಜನಕಭೂಪತಿ ತನುಜಳೆನಿಸಿದಸೀತೆಯ ಭೂಜಾತೆಯಾ ಘನಹರುಷದಲಿ ವಲಿಸಿಕರವನು ಪಿಡಿದನ ಯಶಪಡೆದನ ದನುಜರುಪಟಳತೋರಲಾಕ್ಷಣ ಸೀಳ್ಪನ ಸುರರಾಳ್ದನ ತನಗೆ ತಾನೇ ಸೋಲಿಸಿದ ಜನಮೋಹನ ಖಗವಾಹನ 5 ಜನಕನಾಜ್ಞವ ಪಾಲಿಸಿದ ದಯವಂತನ ಅಘಶಾಂತನ ಅನುಜಸತಿಸಹ ಪುರದಿ ತಾಪೊರಮಟ್ಟನ ಅತಿಧಿಟ್ಟನ ವನದಿ ಬಹು ಮುನಿಗಳ ಕಾರಾರ್ಚಿತನಾದನ ಸುಪ್ರಸಾದನ ಅನುಜ ಭರತಗೆ ದಯದಿ ಪಾದುಕೆ ಕೊಟ್ಟನ ಸಂತುಷ್ಟನ 6 ಮನುಜರಂದದಿ ಸತಿವಿಯೋಗವತೋರ್ದನ ಕುಜನಾರ್ದನ ವನಿತೆಯಂಜಲ ಫಲಗಳನು ತಾಮೆದ್ದನ ಶ್ರುತಿಸಿದ್ಧನ ದನುಜರಿಪು ಹನುಮಂತನನು ಸಾರೆ ಗರೆದನ ಕರುಣಿಸಿದನ ವನಜ ಸಖಸುತನೊಡನೆ ಸಖ್ಯವ ಮಾಡ್ಡನ ವರನೀಡ್ಡನ 7 ಲೀಲೆಯಿಂದಲಿ ತಾಳ ಮರಗಳ ಸೀಳ್ದನ ನೆರೆಬಾಳ್ದನ ವಾಲಿಯನು ಸಂಹರಿಸಿದತಿಬಲವಂತನ ಶ್ರೀಕಾಂತನ ಮೇಲೆನಿಪ ರಕ್ಕಸರನೆಲ್ಲರ ತುಳಿದನ ಅಸುಸೆಳೆದನ ಶ್ರೀಲತಾಂಗಿಯ ಕ್ಷೇಮವಾರ್ತೆಯ ಕೇಳ್ದನ ಮುದತಾಳ್ದನ 8 ಗಿರಿಗಳಿಂದಲಿ ಶರಧಿಯನು ಬಂಧಿಸಿದನ ಸಂಧಿಸಿದನ ಹರಿಗಳೆಲ್ಲರ ಕೂಡಿಲಂಕೆಯ ಸಾರ್ಧನ ರಣದಿರ್ದನ ಉರುಪರಾಕ್ರಮಿ ರಾವಣನ ಶಿರಕಡಿದನ ಹುಡಿಗೆಡೆದನ ವರವಿಭೀಷಣ ಭಕ್ತಗಭಿಷೇಚಿಸಿದನ ಪೋಷಿಸಿದನ 9 ಸಿರಿಸಹಿತ ಪುಷ್ಪಕವನೇರಿದ ಚಲುವನ ಅತಿ ಪೊಳೆವನ ತ್ವರದಿಶೃಂಗರಿಸಿದ ಅಯೋಧ್ಯಕೆ ಬಂದನ ಅಲ್ಲಿ ನಿಂದನ ಭರತ ಪ್ರಾರ್ಥಿಸಲಾಕ್ಷಣದಿ ಮೊರೆ ಕೇಳ್ದನ ಧರಿಯಾಳ್ದನ ಸರಸಿಜಾಸನ ಪ್ರಮುಖರಾರ್ಚನೆ ಕೊಂಡನ ಕೋದಂಡನ 10 ಮರುತಸುತನಿಗೆ ಅಜನ ಪದವಿಯನಿತ್ತನ ಬಹುಶಕ್ತನ ಚರಣಸೇವಕ ಜನಕಭೀಷ್ಟದಾತನ ವಿಖ್ಯಾತನ ನಿರುತ ಸನ್ಮುನಿಹೃದಯ ಮಂದಿರ ವಾಸನ ಜಗದೀಶನ ಸ್ಮರಣೆ ಮಾತ್ರದಿ ದುರಿತರಾಶಿಯ ತರಿದನ ಸುಖಗರೆವನ 11 ದೇವಕೀ ವಸುದೇವ ಸುತನೆಂದೆನಿಪನ ಜಗಕಧಿಪನ ಮಾವನನು ಸಂಹರಿಸಿ ಶಕಟನ ಕೊಂದನ ಆನಂದನ ಗೋವು ಕಾಯುತ ಗಿರಿಯ ಬೆರಳಲಿ ಆಂತನ ಬಹುಶಾಂತನ ಗೋವ್ರಜದಿ ಗೋಪಿಯರ ವಸನವ ಕಳೆದನ ಅಹಿತುಳಿದನ 12 ಲೋಕನಾಥನು ಪಾರ್ಥಸಾರಥಿಯಾದನ ಸುಪ್ರಮೋದನ ನೇಕ ಪರಿಭಗವತ್ಸುಗೀತೆಯ ಪೇಳ್ದನ ತಮಸೀಳ್ದನ ಆ ಕುರು ಕುಲವ ತರಿದ ಪಾಂಡವ ಪ್ರಾಣನ ಸುಪ್ರವೀಣನ ಆಕುರುಪ ಭೀಷ್ಮನಿಗೆ ಮುಕ್ತಿಯ ಕೊಟ್ಟನ ಅತಿಶ್ರೇಷ್ಟನ 13 ಕಪಟನಾಟಕ ನಗ್ನರೂಪದಿ ನಿಂತನ ನಿಶ್ಚಿಂತನ ತ್ರಿಪುರದಲಿ ಜಲಜಾಕ್ಷಿಯರ ವ್ರತ ಭÀಂಗನ ನಿಸ್ಸಂಗನ ಕೃಪಣವತ್ಸಲ ತುರಗವೇರಿ ತಾನಡೆದನ ಅಸಿಪಿಡಿದನ ಅಪರಿಮಿತ ಬಹುಕ್ರೂರ ಯವನ ವಿಘಾತನ ಪ್ರಖ್ಯಾತನ 14 ಈ ವಿಧದಿ ಬಹುಲೀಲೆ ಗೈವ ಸುಚರಿತನ ಜಗಭರಿತನ ಭಾವಶುದ್ಧಿಲಿ ಭಜಿಸುವವರಘಕಡಿವನ ಗತಿಕೊಡುವನ ಪಾವಮಾನಿ ಮತಾನುಗರ ಕರಪಿಡಿವನ ಭವತಡೆವನ ದೇವತತಿ ಸದ್ವಿನುತ ವರದೇಶ ವಿಠಲನ ನಿಷ್ಕುಟಿಲನ 15
--------------
ವರದೇಶವಿಠಲ
(ಮೂಲ್ಕಿಯ ಮಹಾಲಿಂಗೇಶನನ್ನು ನೆನೆದು)ಪಿಡಿಯೆನ್ನ ಕೈಯ ಜಗನ್ಮಯಪಿಡಿಯೆನ್ನ ಕೈಯ ಪ .ಪಿಡಿಯೆನ್ನ ಕೈಯ ನಿನ್ನಡಿದಾವರೆಯಲ್ಲಿದೃಢವಾದ ಮನವ ಬೆಂಬಿಡದೆನಗೀಯಯ್ಯ ಅ.ಪ.ಪಾಮರಮತಿಯ ಪಾಪಾತ್ಮರ ಸೀಮಾಧಿಪತಿಯಕಾಮುಕಪರದಾರಭ್ರಾಮಕತಾಮಸ-ಧಾಮನ ಕಪಟವಿಶ್ರಾಮ ಕುಧೀಮನವ್ಯೋಮಕೇಶಭಗತ್ಪದಾಶ್ರಿತನ ಮಮಕಾರದಲಿ ಪಾಲಿಸುಹೈಮವತಿಪತಿ ಕಾಮಹರ ಸುತ್ರಾಮವಂದಿತ ಸೋಮಶೇಖರ 1ದುಷ್ಟದುರ್ಜನನ ದುರಾಚಾರ ಭ್ರಷ್ಟಜೀವನನಮೆಟ್ಟಿದ ನೆಲಮುನಿಯುವನ ಕೃತಘ್ನ ಕ-ನಿಷ್ಟಕಾಯುಷ್ಯದ ಘಟ್ಟಿಚೇತನನೆನ್ನತಟ್ಟನೆ ದಯವಿಟ್ಟು ಸರ್ವಾಭೀಷ್ಟದಾಯಕನಾಗಿ ಕರುಣಾ-ದೃಷ್ಟಿಯಿಂದಲಿನೋಡುಸನ್ಮನವಿಷ್ಟರಸ್ಥ ಶಿವಾಷ್ಟಮೂರುತಿ2ಸತ್ಯಬಾಹಿರನ ಪ್ರಪಂಚ ಪ್ರ-ವೃತ್ತಿಯೊಳಿಹನಅತ್ಯಂತ ಪಾಪಿ ಕುಚಿತ್ತ ಮದಾಂಧನು-ನ್ಮತ್ತ ಮಾತಂಗವಿರಕ್ತಿವಿಹೀನನಎತ್ತಿ ಎನ್ನತ್ತಿತ್ತ ನೋಡದೆ ಮತ್ತೆಕಾವಸಮರ್ಥರಾರೈಸತ್ತ್ವನಿಧಿಸುರಮೊತ್ತ ಪೂಜಿತ ಮೃತ್ಯುಹರ ಶ್ರೀಕೃತ್ತಿವಾಸನೆ 3ಎಣಿಸಲು ಬೇಡ ಎನ್ನಪರಾಧ ಗಣಿತಕ್ಕೆ ಕೂಡಗುಣಗಣನಿಧಿ ಲಕ್ಷ್ಮೀನಾರಾಯಣಸಖದಣಿಯಲೊಲ್ಲೆ ದಯಮಾಡೆನಗೀಗಲೆಫಣಿಪಕುಂಡಲ ಪಾರ್ವತೀಪತಿ ಪ್ರಣತಜನಮಂದಾರ ನಿರ್ಮಲಪ್ರಣವರೂಪನೆ ಮೌಕ್ತಿಕಾಪುರ ಮಣಿಮಹಾಲಿಂಗೇಶ ಬೇಗನೆ4
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ