ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆರೋಗಣೆ ಮಾಡೊ ಆನಂದಮೂರುತಿ ಪ. ರÀನ್ನದ ತಳಿಗೆಯನ್ನು ಶೋಭನವಾದ ಪೊನ್ನ ಬಟ್ಟಲುಗಳ ನೆರವಿ ಶ್ರೀಹರಿಗೆ ನಿನ್ನರಸಿ ಆ ಲಕ್ಷ್ಮಿ ಸೊಸೆಯರ ಕೂಡಿ ಶಾ- ಲ್ಯನ್ನ ಸವಿಶಾಕಗಳ ನೀಡಿದ ಕೈಯಿಂದ 1 ತುಪ್ಪ ಮಧು ಚಿತ್ರಾನ್ನ ಪಾಯಸ ಕರಿಗಳ ಸಾರಸ ಭಕ್ಷ್ಯಗಳ ದಧಿ ಪಕ್ವಫಲಂಗಳು ಆ ಪದ್ಮಮುಖಿ ಬಡಿಸಿದಳು ಲೇಹ್ಯಪೇಹ್ಯವ 2 ಎನ್ನ ಕುಂದುಗಳಾಮುನಿಗೆ ದಿವ್ಯ ಅನ್ನವೊ ಮನ್ನಿಸಿ ಕರೆದು ನಿನ್ನ ಕರಕಂಜದಿಂದ ಪೂರ್ಣವಮಾಡು ಭುಜಿಸೊ ಹಯವದನ ಕೃ- ಪಾಳು ಸಕಲಲೋಕಪಾಲ ಸುರರೊಡೆಯನೆ 3
--------------
ವಾದಿರಾಜ
ನಾರಾಯಣ ಕೃಷ್ಣ ಬೆಳಗಾಯಿತೇಳಯ್ಯ ಮೂರು ಲೋಕಂಗಳಿಗೆ ಮಂಗಳವ ಬೀರಯ್ಯ ಪ ಹರಿಹರಿ ಶ್ರೀನಿಲಯ ಪರವಾಸುದೇವ ಅ.ಪ ಬಂದಿರುವರೈ ಬ್ರಹ್ಮ ರುದ್ರೇಂದ್ರರು ತಂದೆ ತಂದಿರುವರೈ ಮಹನಿಧಿ ಕನಡಿ ಧೇನುಗಳ ನಿಂದು ಗಾನವಮಾಡುತಿರುವರಾನಂದದಿ ಗಂಧರ್ವರಪ್ಸರೆಯರಿಂದು ಕುಣಿದಾಡಿ ಕೂಡಿ 1 ದಾಸರೊಡೆ ತುಂಬುರರು ನಾರದರು ಜಯಜಯ ಶ್ರೀಶನೇ ಕೇಶವ ಗಜವರದ ಎಂದು ಆಶ್ರಯಿಸಿ ಚರಣಕ್ಕೆ ಶರಣೆಂದು ಮಣಿಯವರು ದೋಷನಾಶನ ಲೋಕಕಲ್ಯಾಣ ತ್ರಾಣ 2 ಪತಿವ್ರತಾ ಸ್ತ್ರೀಯರುಗಳತಿಶಯ ಮಡಿಯುಟ್ಟು ಹಿತವಾದ ಹುಗ್ಗಿ ಸಜ್ಜಿಗೆಯ ಗೈದು ಪತಿತಪಾವನ ನಿನಗೆ ದಧ್ಯನ್ನ ನೀಡುವರೊ ಕ್ಷಿತಿನಾಥ ನೀನವನು ತೋಷದಿಂ ಭುಜಿಸೊ 3 ರೋಗರುಜಿನಗಳಳಿದು ಆಯುವೃದ್ಧಿಯದಾಗಿ ಭಾಗವತ ಸಕುಟುಂಬ ಸಂತೋಷಗೂಡಿ ಭಾಗವತ ಭಾರತ ರಾಮಾಯಣಗಳ ಹಾಡಿ ಆಗಲೈ ಆಗಮಾರ್ಚನೆ ಆಲಯಗಳೊಳಗೆ 4 ಕಮಲಲೋಚನ ಕೆಟ್ಟ ಸ್ವಪ್ನ ಫಲವಳಿಸಿ ಯಮಕಂಟವಂ ಕಳೆದು ಭ್ರಮೆಗಳನು ನೀಗಿ ಸುಮನಸರ ಕೂಡಿ ಶ್ರೀಹರಿಯ ಗುಣಗಾನ ಮಾಡಿ ಅಮಿತ ಅಮೃತವುಣಿಸೈ 5 ಕ್ಷುಧ್ರಪಾಕೀ-ಚೀನ ಕೊಬ್ಬಿ ಛದ್ರಿಸುತು ಭದ್ರತೆಯನಾಡೊಳಗಸ್ಥಿರತೆಗೈಯುತ್ತ ಆದ್ರಿಅಂಬುಧಿ ಮಧ್ಯೆ ಭಾರತಿಯ ನಲಿಸುತ್ತ ಮುದ್ರೆಯುಂ ಧ್ವಜವನುಂ ನಿನ್ನವಾಗಿರಿಸೈ 6 ಕಾಲಕಾಲಗಳಲ್ಲಿ ಮಳೆಬಿಡದೆ ಸುರಿದು ಶಾಲಿಸಂತರ ಧಾನ್ಯ ಎಲ್ಲೆಲ್ಲು ಬೆಳೆದು ಮಹಿಷಿ ಶ್ರೀಲೋಲ ಕರುಣಿಸೈ ಕನಕವೃಷ್ಟಿಯನು 7 ಎದುರು ನೋಡುತ ನದಿಯು ಹರಿವುದು ಸಾಗರಕೆ ಮುದದಿಂದ ತಾವರೆಯು ಸೂರ್ಯನನ್ನು ವಿಧಿವಶದಿ ಪಾಪಿಗಳು ಯಮಲೋಕವನ್ನು ಸುಧೆಸವಿಯೆ ಭಕ್ತರು ಪರಮಪದವನ್ನು 8 ಮಕ್ಕಳಿಲ್ಲದ ಜನರು ಮಕ್ಕಳನು ಹಡೆದು ಲಕ್ಷ್ಮಿಯೊಲವನು ಹಾಡಿ ಜನರೆಲ್ಲ ದುಡಿದು ಭಕ್ತರಾಗುತ ಸರ್ವ ವಣಿಗೆಗಳು ನಡೆದು ಮುಕ್ತರಪ್ಪಂತೆಲ್ಲರ ಮಾಡು ಜಾಜೀಶ 9
--------------
ಶಾಮಶರ್ಮರು
ಶ್ರೀ ಲಕ್ಷ್ಮೀ ದೇವಿಯರು ಕಾಯೆ_ಕಾಯೆ _ ಶ್ರೀ ಹರಿಜಾಯೆ ಪ ಕಾಯೆ ಕಾಯೆ ಸಂತೋಷವೀಯೆ ಮೂರು ಜಗ ಕಾಯೆ ವಿಷ್ಣುಮನ ಛಾಯೆ ಭಕುತಿವರವೀಯೆ ನಿತ್ಯ ಎಳೆಕಾಯೆ ಸುಜನಗಣ ಧ್ಯೇಯೆ ನಿಗಮತತಿಗೇಯೆ ಮಾಯೆ ಅ.ಪ. ಶರಣು-ಶರಣು-ಶರಣು ಗುಣಭರಣಿ ಭವ ತರಣೀ ಶರಣು ತ್ರಿಗುಣ ಧಣಿ ಶರಣು ಸೊಬಗು ಖಣಿ ಶರಣು ನಿಗಮಧ್ವನಿ ಮಣಿ ಸಿರಿ 1 ಅಂಬೇ-ಅಂಬೇ-ಅಂಬೇ-ಅಂಬೇ ನಿರುತಹರಿ ಕಾಂಬೆ ಉರದಲಿಹೆ ಎಂಬೆ ಪಡೆದೆ ಜಗ- ವೆಂಬೆ ಭಕುತಿ ಜನಸ್ತಂಭೆ ಅಮಿತಶಶಿ ವಿಧಿ ಯಿಂಬೆ ತ್ರಿಗುಣ ಹರಿ ಕೃತಿ 2 ರಾಣೀ_ರಾಣೀ-ಶ್ರೀ ಅನಿರುದ್ಧನ ರಾಣಿ ಲಕ್ಷಣ ಶ್ರೇಣಿ ಪಂಕಜಪಾಣಿ ಭುಜಂಗ ಸು- ನಿತ್ಯ ಕಲ್ಯಾಣಿ ಮಂಗಳವಾಣಿ ದುಃಖವ ಕಾಣಿ ನೀ ಬಹು ಜಾಣಿ ವಲಿದಿಹ ಹರಿ 3 ಅಮ್ಮ-ಅಮ್ಮ-ನೀಜಗದಮ್ಮ ಅಮ್ಮ ಕಣ್ ತೆಗೆಯಮ್ಮ ಸಿರಿಸುರಿಸಮ್ಮ ಉರಿಹರಿಸಮ್ಮ ದಯಮಾಡಮ್ಮ ವಿಧಿಗುರುವಮ್ಮ ಭುಜಿಸೊಸೆಯಮ್ಮ ಹರಿಗ್ಹೇಳಮ್ಮ ದಕ್ಷಣೆ 4 ಶೀಲೆ-ಶೀಲೆ- ನಿರುತ ಹರಿಯ ಜಪ ಶೀಲೆ ಕುಂಕುಮ ವಾಲೆ ಇಟ್ಟಹೆ ಬಾಲೇ, ಚಂಚಲ ಲೀಲೆ ನತಜನ ಪಾಲೆ ಖಳರೆದೆಶೂಲೆ ಹರಿಗಿಹೆಮಾಲೆ 5 ಹೇತು-ಹೇತು-ಕಾರ್ಯ ಕಾರಣ ನೀ ಒಡವೆಗಳಾಗಿ ವಸ್ತ್ರಗಳಾಗಿ ಶಸ್ತ್ರಗಳಾಗಿ ಚರಣದಿ ಬಾಗಿ ಹರಿಗನುವಾಗಿ ಸಾಧಕಳಾಗಿ ಧೊರೆವಶಳಾಗಿ ಗಂಡನ ಭಜಿಪೆ 6 ಇಲ್ಲ-ಇಲ್ಲ-ಹರಿಯಗಲಿಕೆ ನಿನಗಿಲ್ಲ ಕ್ಲೇಶವು ಇಲ್ಲ ದೋಷಗಳಿಲ್ಲ ಪಾಶಗಳಿಲ್ಲ ಹರಿ ಬಿಡನಲ್ಲ ಸರಿಯಾರಿಲ್ಲ ಮುಕ್ತರಿಗೆಲ್ಲ ಒಡೆಯಳೆ ಚೆಲ್ವೆ ನೀ ಆಕಾಶೆ7 ನೀರೆ-ನೀರೆ-ಹರಿ ಸಮಾಸಮನೀರೆ ಘನ ಗಂಭೀರೆ-ಶ್ರುತಿಗಳ ಮೇರೆ ಮೀರುತ ಧೀರೆ ಹರಿಮನಸಾರೆ-ಪೊಗಳುವೆ ಬೇರೆ ಸಾಟಿಯು ಯಾರೆ-ಹರಿಪುರ ತೋರೆ ಕರುಣದಿ 8 ಕಂದ-ಕಂದ-ನಾನಿಹೆ ನಿನ್ನ ನಂದದ ಶ್ರೀ ಕೃಷ್ಣವಿಠಲನ ರಾಣಿ ಇಂದಿರೆಸಲಹೆ ಕುಂದುಗಳಳಿಸೆ ತಂದೆಯ ತೋರೆ ಚೆಂದದ ಭಕುತಿ ಮುಂದಕೆ ತಂದೂ 9
--------------
ಕೃಷ್ಣವಿಠಲದಾಸರು