ಒಟ್ಟು 9 ಕಡೆಗಳಲ್ಲಿ , 9 ದಾಸರು , 9 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಕೇಶವಾಯ ನಮಃ ದಿಂದ ಆರಂಭವಾಗುವ ಆಚಮನ ಸ್ತುತಿ) ಶ್ರೀನಿವಾಸಾಯ ನಮೋ ಪ. ಶ್ರೀನಿವಾಸಾಯ ಶತಭಾನುಪ್ರಕಾಶಾಯ ಶ್ರೀನಿವಾಸಾಯ ನಿಜ ಭಕ್ತಜನಪೋಷಾಯ ಶ್ರೀನಿವಾಸಾಯ ಪರಮಾನಂದಘೋಷಾಯ ಅ.ಪ. ದೋಷಗಂಧವಿದೂರ ಕೇಶಿಮುಖದಾನವ ವಿ- ನಾಶವಿಧಿಭವಸುಖನಿವಾಸ ವಾಸುಕಿಶಯನ ವಾಸವಾದ್ಯಮರಗಣಪೋಷ ಪಾವನವೇಷ ಶ್ರೀಶ ನಿರ್ಗತವಿಶೇಷ ದಾಸಜನಹೃದಯಾಬ್ಧಿಭೇಶ ಕೌಸ್ತುಭಮಣಿವಿ- ಭೂಷ ಭೂತಾತ್ಮ ಭವಪಾಶಹರ ಪರತರ ದ- ಕೇಶವಾಯ ನಮೋನಮಃ 1 ಕ್ಷೀರಸಾಗರವಾಸ ಶ್ರೀರಮಾಪ್ರಾಣೇಶ ಸಾರಭೋಕ್ತøಸ್ವತಂತ್ರ ಚಾರುಷಡ್ಗುಣಭರಿತ ಸನ್ನುತ ಪಾದನೀರರುಹದ್ವಂದ್ವನೆ ಸುರರು ತಿಳಿಯರು ನಿನ್ನ ಭೂರಿಮಹಿಮೆಗಳ ಸಾಕಾರವನು ಬಣ್ಣಿಸುವ ನಾರಾಯಣಾಯ ನಮೋ 2 ವೇದವೇದ್ಯನೆ ದುರಿತಶೋಧನೆ ದೈತ್ಯಗಣ- ಛೇದಕನೆ ಸುರಸುಪ್ರಸಾದಕನೆ ಭಕ್ತಜನ- ಸಮಾನಾಧಿಕ್ಯರಹಿತ ಸತತ ಆದಿತ್ಯ ಶತಕೋಟಿತೇಜೋವಿರಾಜ ಮಹ- ದಾದಿಕಾರಣ ಮಧುವಿರೋಧಿ ಮಂಗಲಸುಖಾಂ- ಮಾಧವಾಯ ನಮೋನಮಃ 3 ಇಂದಿರಾಹೃದಯಾಬ್ಧಿ ಚಂದ್ರ ಚಾರ್ವಂಗ ಮುಚು- ಕುಂದಾಪ್ತ ಸರ್ವಶ್ರುತಿವೃಂದಪ್ರತಿಪಾದ್ಯ ಸಾ- ಸನ್ನುತ ಮಹೇಂದ್ರ ವಂದಾರುಜನತ್ರಿದಶಮಂದಾರ ಕೋಮಲಿತ ವೃಂದಾವನವಿಹಾರ ಕಂದರ್ಪಜನಕ ಬಾ- ತುಭ್ಯಂ ನಮಃ 4 ಜಿಷ್ಣುರಥಸಾರಥಿ ತ್ರಿವಿಷ್ಟಪಸಭಾಧ್ಯಕ್ಷ ಮುಷ್ಟಿಕಾಸುರವೈರಿ ಮುನಿಜನಮನೋಹಾರಿ ಮುಟ್ಟಿ ಭಜಿಪರ ಮನೋಭೀಷ್ಟವ ಸಲ್ಲಿಸುವ ಶ್ರೇಷ್ಠ ಪೂರ್ಣಬ್ರಹ್ಮನೇ ಭ್ರಷ್ಟಸಂಸಾರದೊಳು ನಷ್ಟ ಬುದ್ಧಿಗಳಿಂಗೆ ತುಷ್ಟಿಯನು ನೀನಿತ್ತು ಸಲಹೊ ಸಾಮಜವರದ ತುಭ್ಯಂ ನಮೋ 5 ವಿಧಿಭವಾದಿ ಸಮಸ್ತ ತ್ರಿದಶಜನಸುಖದಾತ ಬುಧಜನಪ್ರಿಯ ಭೂತಭಾವನ ಜಗನ್ನಾಥ ಮದನಕೋಟಿಸ್ವರೂಪ ವಿದುರನಾಲಯದಲ್ಲಿ ಪಾಲುಂಡ ಬ್ರಹ್ಮಾಂಡ- ಕಧಿಪತಿ ಕಲಿಮಲನಾಶ ಕವಿಜನಮನೋಲ್ಲಾಸ ಮಧುಸೂದನಾಯ ನಮೋ 6 ಅಕ್ರೂರವರದ ಸದತಿಕ್ರಮರ ಗೆಲಿದ ಹಯ- ವಕ್ತ್ರ ವೈಕುಂಠಾಖ್ಯ ಪುರವಾಸ ಜಗದೀಶ ಶುಕ್ರ ಶಿಷ್ಯರನೆಲ್ಲ ಪರಿಹರಿಸಿ ಪಾಲಿಸಿದೆ ಶಕ್ರಾದಿಸುರಗಣವನು ಚಕ್ರ ಶಂಖ ಗದಾಬ್ಜಧರ ಚತುರ್ಭುಜ ದೇವ- ಚಕ್ರವರ್ತಿಯನಂತಕೀರ್ತಿ ಪಾವನಮೂರ್ತಿ ತ್ರಿವಿಕ್ರಮಾಯ ನಮೋನಮಃ 7 ರಾಮಣೀಯಕ ವಪು ನಿರಾಮಯ ನಿರಾಶ್ರಯ ಸು- ದಾಮಸಖ ಪರಿಪೂರ್ಣಕಾಮ ಕೈರವದಳ- ಸುಜನಸ್ತೋಮಸುರಕಾಮಧೇನು ಗೋಮಿನೀಪತಿ ಗೋಗಣಾನ್ವಿತನೆ ಗೋಪೀಲ- ಲಾಮ ಗೋವರ್ಧನೋದ್ಧಾರ ಗೋವಿದಾಂಪತಿ ವಿ- ಪ್ರಾಜ್ಞ ವಾಮನಾಯ ನಮೋನಮಃ 8 ಆದಿಮಧ್ಯಾಂತವಿರಹಿತ ನಿಖಿಲಸಾರ್ಚಿತ ವಿ- ರಾಧಭಂಜನ ಭವಾಂಬೋಧಿಕುಂಭಜ ಭಜಕ- ಚತುಷ್ಟಾದ ಪಾವನಚರಿತನೆ ಗಾಧಿಜಾಧ್ವರಪಾಲ ಗರುಡಧ್ವಜ ದಯಾಳು ನಾದಬಿಂದು ಕಲಾತೀತ ರುಕ್ಮಿಣಿನಾಥ ಶ್ರೀಧರಾಯ ನಮೋನಮಃ 9 ಪಾಶಧರನುತ ವೆಂಕಟೇಶ ಸರ್ವೇಂದ್ರಿಯಪ್ರ- ಕಾಶ ಪಾಲಿತನಿಖಿಳಭೂಸುರವ್ರಜ ಮಂದ- ದೂಷಣಾದ್ಯ ಸುರಹರನೆ ಈಶಪತಿಸೇವ್ಯಾಂಬರೀಶನೃಪವರದ ಪರ- ಮೇಶ ಕೋವಳಪೀತವಾಸ ಕರ್ದಮಶುಕಪ- ಹೃಷೀಕೇಶಾಯ ತುಭ್ಯಂ ನಮೋ 10 ಶುದ್ಧ ತ್ರಿಗುಣಾತೀತ ತ್ರಿವ್ರತ ತ್ರಿಜಗತ್ಪಾಲ ಪ್ರದ್ಯುಮ್ನ ಪ್ರಥಮಾಂಗದೊಡೆಯ ಪರಮಾತ್ಮ ಸುರ- ಬುದ್ಧ ಬುಧಜನಸುಲಭ ಮಧ್ವವಲ್ಲಭ ಮಂತ್ರಮೂರ್ತಿ ಕ್ಷೀರಾಬ್ಧಿ ಶ್ವೇ ತದ್ವೀಪವೈಕುಂಠಮಂದಿರತ್ರಯ ಸಾಧು- ಹೃದ್ಯ ಭಕ್ತದ್ವೇಷಭಿದ್ಯ ನಿತ್ಯಾತ್ಮ ಶ್ರೀಪದ್ಮನಾಭಾಯ ನಮಃ11 ಸಾಮಗಾನವಿನೋದ ಸಾಧುಜನಸುಖಬೋಧ ಕಾಮಿತಾರ್ಥಪ್ರದಾತ ಕಪಿಲಋಷಿ ಪ್ರಖ್ಯಾತ ಸಮರಂಗ ಭೀಮ ನಾಮಧಾರಕರ ಪರಿಣಾಮರೂಪಕ ಸುಜನ- ಕ್ಷೇಮಪ್ರಾಪಕ ನೀಲಜೀಮೂತನಿಭವರ್ಣ ದಾಮೋದರಾಯ ನಮೋ 12 ಶಂಕರಾಂತರ್ಯಾಮಿ ಶಾಙ್ರ್ಗಪಾಣಿ ಶರಣ್ಯ ವೆಂಕಟಾಚಲಸದಾಲಂಕಾರ ಶೇಷಪರಿ- ಯಂಕ ಪ್ರವಿತತನಿಷ್ಕಳಂಕಚಾರಿತ್ರ ಸುಸಂಕುಲಾರ್ಚಿತ ಪದಯುಗ ಲಂಕಾಧಿಪತ್ಯವ ವಿಭೀಷಣನಿಗೊಲಿದಿತ್ತ ಓಂಕಾರನಿಧನ ಸಾಮಕಭಕ್ತರಾನೇಕ ಸಂಕಟವ ಪರಿಹರಿಪ ಸತ್ಯ ಸಂಕಲ್ಪ ಶ್ರೀಸಂಕರ್ಷಣಾಯ ನಮೋ 13 ಈ ಸಮಸ್ತ ಜಗತ್ತು ನಿನ್ನುದರದೊಳಗಿಹುದು ಈ ಸಕಲಜೀವರೊಳಗಿಹ ನಿತ್ಯನಿರ್ಮುಖ್ಯ ನೀ ಸಲಹೊ ದೇವದೇವ ಭೂ ಸಲಿಲ ಪಾವಕಾಕಾಶಾದಿ ಭೂತಾಧಿ- ವಾಸ ರಾಕ್ಷಸವನಹುತಾಶ ನಾನಾ ರೂಪ- ವಾಸುದೇವಾಯ ನಮೋ 14 ಅದ್ವಿತೀಯನೆಯಮಿತವಿಕ್ರಮನೆ ಗುಣಕಾಲ ವಿದ್ಯಾಪ್ರವರ್ತಕನೆ ವಿಶ್ವಾದಿ ಸಾಹಸ್ರ ಸಿದ್ಧನಾಮ ನರನಾರಾಯಣಪರಾಯಣನೆ ಬುದ್ಧಿಪ್ರೇರಕಪ್ರೇರ್ಯನ ರುದ್ರರೂಪಪ್ರತಾಪ ಋಗ್ಯಜುಸ್ಸಾಮಶ್ರುತಿ- ವೇದ್ಯ ಬ್ರಹ್ಮಾಂಡಕೋಟಿಗಳ ಸಲೆ- ಪ್ರದ್ಯುಮ್ನಾಯ ತುಭ್ಯಂ ನಮಃ 15 ಉದ್ಧವಾದಿ ಸಮಸ್ತ ಭಾಗವತಜನಕಮಲ- ಮಧ್ಯಚರರಾಜಹಂಸಾಯ ಮಾನಸದ ಶ್ರೀಹರಿಯೆ ವೈದ್ಯನಾಥವಿಧಾತನೆ ಬದ್ಧನಾದೆನು ಕರ್ಮಪಾಶದಿಂದ ದೊರೆ ಸಿಕ್ಕಿ- ಬಿದ್ದೆ ಕೈಪಿಡಿದೆಬ್ಬಿಸೆನ್ನನೆಲೆದೇವ ಮರೆ ಅನಿರುದ್ಧಾಯ ತುಭ್ಯಂ ನಮಃ 16 ಕ್ಷರ ಪುರುಷರೆಲ್ಲ ಬ್ರಹ್ಮಾದಿ ಜೀವರು ರಮಾ ಕ್ಷರಪುರುಷಳೆನಿಸುವಳು ನೀನೆ ಉತ್ತಮ ಪರುಷ ಮಂಗಲರಿತ ಗುರುತಮ ಗುಣಧ್ಯಕ್ಷನೆ ಶರಧಿಸೇತುನಿಬದ್ಧ ಶಬರಿ ಹಣ್ಣನು ಮೆದ್ದ ಶರಭಂಗ ಮುನಿಪಾಲ ಶಮಿತದಾನವಜಾಲ ಪುರುಷೋತ್ತಮಾಯನ್ನಮೋ 17 ಅಕ್ಷಯಾತ್ಮನೆ ವಿಶ್ವರಕ್ಷಕನೆ ವಿಶ್ವಭುಗ್- ವಿಶ್ವತೋಮುಖ ವಿಶ್ವತೋಬಾಹು ಕರುಣಾಕ- ದಯಮಾಡು ಶ್ರೀವಕ್ಷಸ್ಥಲನಿವಾಸನೆ ಲಕ್ಷ್ಮಣಾಗ್ರಜನೆ ಸುವಿಲಕ್ಷಣನೆ ಸುಜ್ಞಾನ- ಮೋಕ್ಷದಾಯಕ ಯಜ್ಞಮೂರ್ತಿ ರೂಪತ್ರಯ ಮ- ಅಧೋಕ್ಷಜಾಯ ನಮೋನಮಃ 18 ಕ್ರೂರಕರ್ಮಿ ಹಿರಣ್ಯಕಶಿಪುವಂ ಕೊಂದ ದು- ರ್ವಾರದುರಿತಾಬ್ಧಿಬಾಡಬ ಭಕ್ತವತ್ಸಲ ಮ- ಶಿರಪ್ರಕರಧೀರ ಪ್ರಹ್ಲಾದಾಭಿವರದ ಭೂರೀಕರರೂಪ ಭೂಮಕೀರ್ತಿಕಲಾಪ ಸಾರವಜ್ರಸ್ತಂಭದಿಂ ಬಂದ ನಂದ ಸುಕು- ನಾರಸಿಂಹಾಯ ನಮೋ 19 ನಿಶ್ಚಲಾತ್ಮ ನಿರೀಹ ನಿರ್ವಿಕಾರಾನಂತ ಪ್ರೋಚ್ಛ ಸರ್ವಗ ಸದಾನಂದ ಪರಿಪೂರ್ಣ ತ- ನಿರ್ಮಿಸುವ ಆಶ್ಚರ್ಯಕೃತ ಸಲೀಲ ಮುಚ್ಚುಮರೆ ಯಾಕಿನ್ನು ಮುಗಿದು ಬೇಡುವೆ ಕೈಯ ಸ್ವಚ್ಛತರ ಭಕ್ತಿಭಾಗ್ಯವನಿತ್ತು ಸಲಹೊ ಮಹ- ಶ್ರೀಮದಚ್ಯುತಾಯ ನಮೋನಮಃ 20 ಚೈದ್ಯಮಥನ ಮನೋಜ್ಞಶುದ್ಧಾತ್ಮ ಸರ್ವಜ್ಞ ಹೊದ್ದಿಸಿದ ಪಾರ್ಥನಿಂಗೆ ಇದ್ದು ನೀ ಹೃದಯದೊಳು ತಿದ್ದೆನ್ನ ಮತಿಯ ಸ್ಮರ- ವಿದ್ದ ಮಾನಸವ ಪಾದದ್ವಯದೊಳಿರಿಸೈ ದ- ಜನಾರ್ದನಾಯ ನಮೋನಮಃ 21 ಮಂದಾಕಿನಿಯ ಪಡೆದ ಮಾತೆಯ ಶಿರವ ಕಡಿದ ನಂದಗೋಪನ ಕಂದನೆನಿಸಿ ಬಾಲಕತನದ ಸುಂದರೀರಮಣ ಜಯತು ತಂದೆತಾಯಿಯು ಸರ್ವ ಜೀವರ್ಗೆ ನೀನೆ ನಿಜ- ವೆಂದು ತಿಳಿಯದೆ ಮಾಯೆಯಿಂದ ಮಮಕರಿಸಿ ಪರ- ಉಪೇಂದ್ರಾಯ ತುಭ್ಯಂ ನಮಃ 22 ಸ್ಥಿರಚರಾತ್ಮಕ ಧೇನುಚರ ದೇವಕೀಜಠರ- ಶರಧಿಗುರುರಾಜ ಭಾಸ್ಕರಮಂಡಲಾಂತಸ್ಥ ದುರಿತದೂರ ಗಭೀರನೆ ನಿರತಿಶಯ ನಿಜನಿರ್ವಿಕಲ್ಪ ಕಲ್ಪಾಂತಸಾ- ಗರದಿ ವಟಪತ್ರಪುಟಶಯನ ಪುಣ್ಯಶ್ರವಣ ಹರಯೇ ನಮೋನಮಸ್ತೇ 23 ವೃಷ್ಟಿಕುಲತಿಲಕ ಸರ್ವೇಷ್ಟದಾಯಕ ನಿಮಿತ- ಶಿಷ್ಟಜನಪರಿಪಾಲ ಶಿವಗೌರೀ ಗಣಪಗುಹ- ಸೃಷ್ಟಿಶಕ್ತಿಯನೀವ ಗೋವರ್ಧನಾಚಲವ ಬೆಟ್ಟಿನಿಂದೆತ್ತಿದ ಮಹಾ ದುಷ್ಟ ನರಕಾದಿದಾನವರ ಮರ್ದಿಸಿದ ಜಗ- ಜಟ್ಟಿ ಜನಿಮೃತಿಭಯವಿದೂರ ವಿಷಮಯಸರ್ಪ- ಹರೇ ಕೃಷ್ಣಾಯ ತುಭ್ಯಂ ನಮಃ 24 ಅಕ್ಷೀಣ ಬಲಶಾಲಿಯಾಂಜನೇಯನಿಗಿತ್ತೆ ಅಕ್ಷಯದ ಬ್ರಹ್ಮಪದವಿಯ ಲೋಕದೊಳಗ್ಯಾವ- ದಕ್ಷಮರ್ದನ ನಿನಗೆ ಸರ್ವತಂತ್ರಸ್ವತಂತ್ರ ಪಕ್ಷೀಂದ್ರಭುಜವಿರಾಜ ಸಾಕ್ಷಿಚೈತನ್ಯರೂಪನೆ ಕಮಲನಾಭನೆ ಮು- ಮುಕ್ಷುಜನಧ್ಯಾನಗಮ್ಯನೆ ಗದಾಧರ ದನುಜ- ಲಕ್ಷ್ಮೀನಾರಾಯಣಾಯ ನಮೋ 25
--------------
ತುಪಾಕಿ ವೆಂಕಟರಮಣಾಚಾರ್ಯ
ಗಜಚರ್ಮಾಂಬರ ಗಂಗಾಧರನೇಗಜಮುಖಜನಕ ಗೌರಿಯ ರಮಣ ಓ ತ್ರಿಜಗದೊಂದಿತನೆ ಸಾಂಬಶಿವ ಮಹಾದೇವ ಪಫಾಲನೇತ್ರನೆ ರುಂಡಮಾಲಾಧರನೆನೀಲಕಂಠನೇ ನಿತ್ಯಾನಂದ ಓಕಾಲಾಂತಕನೆ ಸಾಂಬಶಿವ ಮಹಾದೇವ 1ಮದನ ಹರನೆ ಶಿವ ಕಂಬುಕಂಧರನೆಪದ್ಮಾಕ್ಷನಯನ ಪಾರ್ವತಿ ರಮಣ ಓಬುಧಜನಪ್ರಿಯನೆ ಸಾಂಬಶಿವ ಮಹಾದೇವ 2ಭೂತಿಭೂಷಣನೆ ಸರ್ವ ಭೂತಾತ್ಮಕಪಾತಕಹರ ಪಾರ್ವತಿ ರಮಣ ಓಅನಾಥ ರಕ್ಷನೆ ಸಾಂಬಶಿವ ಮಹಾದೇವ 3ಇಂದ್ರವಂದಿತ ಭುಜಗೇಂದ್ರ ಭೂಷಣನೆತಂದೆ ಏಳುಗಿರಿ ವೆಂಕಟಸಖನೇ ಓಚಂದ್ರಶೇಖರ ಸಾಂಬಶಿವ ಮಹಾದೇವ 4
--------------
ತಿಮ್ಮಪ್ಪದಾಸರು
ಗುರುವಿನರಿಯದೆ ಮರುಳಲೋಕ ಒಂದೊಂದು ಪರಿ ಗುರುಮಾಡಿಕೊಂಡುದರ ಹೊರವುತಿದೆ ಧರೆಯೊಳು ಬರಿದೆ ಭ್ರಮೆಗೊಂಡಿಹ್ಯದು ಪರಗತಿಯ ಜರೆದು ಶ್ರೀ ಗುರುಪಾದವನ್ನರಿಯದೆ 1 ಸತ್ವಧಾತುದ ನೆಲೆಯು ತತ್ವ ಮೋಹಲಾದನು ಮತ್ತೈದು ಮುದ್ರೆಗಳ ವ್ಯಾಪಿಸಿಹ ಪ್ರಾಣವನು ಮುದ್ರಿಸಿದಾತ ಪರಮಗುರುವು 2 ಸತ್ವ ರಜ ತಮವು ಮೊದಲಾದ ಗು- ಣತ್ವಗಳು ಪಂಚಭೂತಾತ್ಮದ ವಸ್ತಿ ವಿವರಣಗಳು ವಿಸ್ತಾರಗತಿಗಳನು ವಿಸ್ತರಿಸಿ ತೋರಿಸಿದಾತ ಸಾಕ್ಷಾತ ಗುರುವು 3 ಸ್ವಪ್ನ ಸುಷುಪ್ತಿ ಜಾಗ್ರತಿ ತ್ರಯವಸ್ಥಿತಿಗಳು ಪ್ರಾಣಪ್ರಣಮ್ಯ ಪ್ರವೃತ್ತಿ ನಿವೃತ್ತಿಗಳು ಶಕ್ತಿ ಉನ್ಮನಿಯ ಉದ್ಬವ ಗತಿಯು ತೋರಿಸಿದಾತ ಸಾಕ್ಷಾತ ಗುರುವು 4 ಹತ್ತು ಮತ್ತೆರಡು ಧ್ವನಿ ವತ್ತಿಗ್ಹೇಳೆನಿಸುವದ ರತ್ನ ಮೂರರ ಪ್ರಭೆಯ ದಾಟಿ ಸಂಜೀವನಿಯ ಸತ್ರಾವಿ ಜೀವನ ಕಳಾ ಮೃತವದೋರಿಸಿದಾತ ಸಾಕ್ಷಾತ ಗುರುವು 5 ಒತ್ತಿ ಆಧಾರ ಬಲದೆತ್ತಿ ಕುಂಡಲಣಿಯ ಕೆತ್ತಿ ಸರ್ಪೆತ್ತಿ ಮುಖ ಮಾಡಿ ಊಧ್ರ್ವ ಗತಿಯು ಮತ್ತೆ ಷಡಚಕ್ರಗಳ ಗತಿಗಳನು ದೋರಿದಾತ ಸಾಕ್ಷಾತ ಗುರುವು6 ಪತಿತ ಮಹಿಪತಿಯ ಪಾವನ್ನಗೈಸುತ್ತಮದಿ ಉತ್ಪತ್ತಿ ಸ್ಥಿತಿ ಲಯವು ತಾರಿಸಿ ಸ- ದ್ಗತಿಯು ನಿತ್ತಿಹ್ಯಾನಂದ ಘನ ಸತ್ಯ ಸದ್ಗುರು ಮೂರ್ತಿ ಸಾಕ್ಷಾತ ಪರಮಗುರುವು | 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಿತ್ಯ ಶುಭಮಂಗಳಂ ಪ. ಹೃದಯವೆಂಬೀ ದಿವ್ಯ ಪದ್ಮಪೀಠದ ಮೇಲೆ ಪದ್ಮಾಕ್ಷಿ ಪದ್ಮೆಯನು ಕುಳ್ಳಿರಿಸಿ ಸದಮಲ ಭಾವದಿಂ ಮಧುಕೈಟಭಾಂತಕನ ಹೃದಯೇಶ್ವರಿಯ ಸೇವೆಗೈವೆ 1 ಜ್ಞಾನವೆಂಬುವ ದಿವ್ಯ ಜ್ಯೋತಿಯಂ ಮುಂದಿರಿಸಿ ಧ್ಯಾನವೆಂಬುವ ನಿಲುವುಗನ್ನಡಿಯ ನಿಲಿಸಿ ದಾನÀವಾಂತಕ ರಾಮಚಂದ್ರಮನ ಧ್ಯಾನಿಸುತ ಜಾನಕಿಯ ಬಲಗೊಂಬೆ ಭರದಿ 2 ನೇಮನಿಷ್ಠೆಯ ಶುದ್ಧ ಹೇಮಕಲಶದಿ ಮತ್ತೆ ಭಕ್ತಿರಸದ ಪನ್ನೀರ ತುಂಬಿ ನಾಮಸಂಕೀರ್ತನೆಯ ನಾರಿಕೇಳವ ಬೆರಸಿ ಶ್ರೀನಾರಿಗಭಿಷೇಕವ ಗೈವೆ 3 ಚಿತ್ತಶುದ್ಧಿಯ ಶುಭ್ರವಸ್ತ್ರದಿ ನೇವರಿಸಿ ಸತ್ವಗುಣದ ಪೀತಾಂಬರವನುಡಿಸಿ ಕಂಚುಕ ತೊಡಿಸಿ ಚಿತ್ತಜನ ಜನನಿಯರ ನೋಡಿ ನಲಿವೆ 4 ಅಂತಃಕರಣ ಶುದ್ಧಿಯ ಅರಿಸಿನವನು ಪೂಸಿ ಶಾಂತಗುಣದ ತಿಲಕ ತಿದ್ದಿ ನಂದಮಲ್ಲಿಗೆಯ ದಂಡೆಯನು ಮುಡಿಸುತ್ತ ಇಂದ್ರಿಯ ನಿಗ್ರಹದ ಗಂಧ ಹಚ್ಚುವೆನು 5 ಪಂಚಭೂತಾತ್ಮಕದ ಛತ್ರಿಯನು ಪಿಡಿದೆತ್ತಿ ಪಂಚನಾದಗಳೆಂಬ ವಾದ್ಯಗಳ ನುಡಿಸಿ ಪಂಚೇಂದ್ರಿಯಂಗಳೇ ಪಂಚಭಕ್ಷ್ಯಗಳಾಗಿನಿ ರ್ವಂಚನೆಯಿಂದಾರೋಗಿಸೆಂಬೆ 6 ರೇಚಕವೆಂಬ ವ್ಯಜನದಿಂ ಬೀಸಿ ತಾರಕ ಚಾಮರವ ಪಿಡಿದು ಕುಂಭಕವೆಂಬ ಪನ್ನೀರಿನಿಂ ತೋಯ್ಸಿ ತಾರಕ ಬ್ರಹ್ಮನರಸಿಯಂ ಸೇವಿಸುವೆ 7 ಭೋಗಭಾಗ್ಯವನೀವ ಭಾಗ್ಯಲಕ್ಷ್ಮಿಗೆ ವೈರಾಗ್ಯದ ತಟ್ಟೆಯನು ಪಿಡಿದು ಭಾವದೀವಿಗೆಯ ಕರ್ಪೂರದಾರಿತಯೆತ್ತಿ ಬಾಗಿವಂದಿಪೆ ತಾಯೆ ಕರುಣಿಸೆಂದು 8 ವರದಾತೆ ಭೂಜಾತೆ ಸುವಿನೀತೆ ಸುವ್ರತೆ ವರಶೇಷಗಿರಿವಾಸದಯಿತೆ ಮಹಿತೇ ಸೆರಗೊಡ್ಡಿ ಬೇಡುವೆನು ಕರಪಿಡಿದು ಸಲಹೆಂದು ನೆರೆನಂಬಿ ನೆನೆನೆನೆದು ನಲಿವೆನಿಂದು 9
--------------
ನಂಜನಗೂಡು ತಿರುಮಲಾಂಬಾ
ಪತಿ ವಿಠಲ ನೀನಿವಳ ಕಾಯಬೇಕೊ ಪ ಕರುಣಾದ್ರ್ರ ಹೃದಯ ನಿನ್ನಡಿಗೆ ಮೊರೆಯಿಡುವೇ ಅ.ಪ. ಮಾನವ ಸುಜನ್ಮದಲಿ ನೀನಿವಳ ತಂದಿರುವೆಜ್ಞಾನಸಾಧನವ ಮಾರ್ಗ ಕಾಣದಲೆ ಬರಿದೇ |ಮಾನಿನಿಯ ಆಯುಷ್ಯ ಬರಿದೆ ಪೋಯಿತು ಹರಿಯೆನೀನಾಗಿ ಸಲಹಿವಳ ದೀನಜನ ಬಂಧೋ 1 ಪಂಚಭೂತಾತ್ಮಕದ ಈ ದೇಹ ಸ್ಥಿರವಲ್ಲಕೊಂಚಮತಿಯನು ಕಳೆದು ಸರ್ವಾಂತರಾತ್ಮ |ಪಂಚಭೇದವನರುಹಿ ಮುಂಚೆ ತರತಮ ತಿಳಿಸಿಪಂಚ ಪಂಚಾತ್ಮಕನೆ ಸಲಹ ಬೇಕಿವಳಾ 2 ಹರಿಗುರೂ ಸದ್ಭಕ್ತಿ ಮರಳಿ ವೈರಾಗ್ಯವನೆ ಕರುಣಿಸೂವುದು ಹರಿಯೆ ದುರಿತಾಂಧ ರವಿಯೆ ಹರಿಗೋಲುಭವನಿಧಿಗೆ ಎಂದೆನಿಪ ತವನಾಮ ಸ್ಮರಣೆ ಸಂತತವಿತ್ತು ಪೊರೆಯ ಬೇಕಿವಳಾ 3 ಜೇನು ಸವಿಯಂತಿಪ್ಪ ಆನಂದಕರ ಶಾಸ್ತ್ರಮಾನನಿಧಿ ಮಧ್ವಾಖ್ಯ ಸಾನುರಾಗದಲೀ |ಕ್ಷೋಣಿಸುರರುದ್ಧಾರ ಕಿತ್ತಿಹುದ ನೀನರುಹಿಜ್ಞಾನಗಮ್ಯನೆ ಕಾಯೊ ಪ್ರಾಣಾಂತರಾತ್ಮ 4 ಇಂದೀವರಾಕ್ಷಹರಿ ದ್ವಂದ್ವಗಳ ಸಹನೆಯನುತಂದೆ ಕರುಣಿಸಿ ಕಾಯೊ ಕಂಜದಳ ನೇತ್ರಅಂದು ಇಂದಿಗು ಮುಂದೆ ಎಂದೆಂದು ಗತಿ ನೀನೆಎಂದು ನಂಬಿಹೆ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಬಾ ವೆಂಕಟಶೈಲಾಧಿಪ ಮನ್ಮನಕೆ ತಡಮಾಡುವುದ್ಯಾಕೆ ಶ್ರೀ ವಲ್ಲಭನಾ ನಿನ್ನಂಘ್ರಿ ಕಮಲಕೆ ನಮಿಸುವೆ ಪ್ರತಿ ಕ್ಷಣಕೆ ಪ ನೀ ಒಲಿದೆನ್ನ ದಯಾವಲೋಕನದಿ ಪಾವನಮಾಡಲು ದೇವವರೇಣ್ಯ ಅ.ಪ. ವೈಕುಂಠಾಧೀಶ ವಿಗತಕ್ಲೇಶ ಚಿತ್ಸುಖಮಯವಪುಷ ಭವ ಮದನ ದಿ ವಾಕರ ಪ್ರಮುಖ ದಿವೌಕಸ ವರದ 1 ಮಮಸಮಾಸ್ವಾಮಿ ಮದಂತರ್ಯಾಮಿ ಸರ್ವಾಂತರ್ಯಾಮಿ ಅಮಿತಾತ್ಮ ಅತಿರೋಹಿತ ನಿಷ್ಕಾಮಿ ಸೇವಿತ ಶ್ರೀಭೂಮಿ ಅಮಿತ ಸುಗುಣಪೂರ್ಣ ಅಮಲಮಹಿಮ ಖಳದಮನ ದಯಾಳೊ 2 ನಾಮಾಭಿಧೇಯ ಲೋಕಾಧ್ಯಕ್ಷಾ ಕಮಲಾಯತಾಕ್ಷ ಸೋಮ ಭೂಮ ನಿಸ್ಸೀಮ ಮಹಿಮ ತ್ರಿ ಧಾಮರಾಮ ಘನಶ್ಯಾಮ ಲಲಾಮ 3 ಪವನಂತರಾತ್ಮಾ ನಿರ್ಮಲಾತ್ಮಾ ಪರಮಾತ್ಮ ಜ್ಞಾನಾತ್ಮಾ ಅವಿಕಾರ ಅತಿರೋಹಿತ ಭೂತಾತ್ಮ ಪೂತಾತ್ಮ ಮಹಿತಾತ್ಮ ತ್ರಿವಿಧ ಜೀವರಿಗೆ ವಿವಿಧ ಫಲಂಗಳ ತವಕದಿ ಕೊಟ್ಟವರವರ ಪಾಲಿಸೋ 4 ಸೃಷ್ಟ್ಯಾದಿಕರ್ತ ತ್ರಿಜಗದ್ಭರ್ತ ಲೋಕೈಕ ಸಮರ್ಥ ವೃಷ್ಣೀಶಾ ವೃಂದಾರಕ ರಿಪುಹರ್ತಾ ಮುಕ್ತರ ಪುರುಷಾರ್ಥ ಪರಮೇಷ್ಟಿ ಜನಕ ಶಿ ಷ್ಟೇಷ್ಟ ಹೃಷ್ಟ ಅನಿವಿಷ್ಟ ನಿವಿಷ್ಟ 5 ವೇದಸ್ತೇಯಾರಿ ಮಂದರಧಾರಿ ಭೂವರ ನರಹರಿ ಭೂ ದಾನವ ಬೇಡಿದ ಚಾಪಕುಠಾರಿ ರಾವಣಕುಲವೈರಿ ಯಾದವ ವಂಶ ಮಹೋದಧಿ ಚಂದಿರ ಸಾದಿತ ತ್ರಿಪುರ ಖಳೋದರ ಪಾಹಿ 6 ದಯದಿಂದ ನೋಡೊ ದೀನೋದ್ಧಾರ ಸದ್ಗುಣ ಗಂಭೀರಾ ಪ್ರಿಯ ನೀನೇ ಎನಗೆ ಲೋಕೋದ್ಧಾರ ಸೌಂದರ್ಯಸಾರಾ ಹಯಮುಖ ಲೋಕತ್ರಯ ಪತ್ರಯಾಮಯ ವಯನಗಯ್ಯ ನಾ ಬಯಸುವೆ ನಿನ್ನ7 ಭವ ಭಯಹಾರಿ ಬಿನ್ನೈಸುವೆ ಶೌರಿ ವಿಹಿತಾಹಿತಗಳು ನಿನ್ನನು ಮೀರಿ ಮಾಳ್ಪೆಗೆ ಕಂಸಾರೀ ಮಹಿತ ಶಮಲ ಸದಹಿತ ಲಕುಮಿ ಭೂ ಸಹಿತ ಮನದಿ ಸನ್ನಿಹಿತನಾಗೆಲೋ 8 ದಾತಾ ನೀನಲ್ಲದನ್ಯರರಿಯೇ ಕಂಡವರನು ಕರಿಯೇ ಪ್ರೀತನಾಗೆನ್ನೊಳು ಶ್ರೀ ಹರಿಯೇ ಮೂರ್ಲೋಕದ ದೊರೆಯೇ ಶ್ರೀ ತರುಣಿಯೊಡಗೊಡೀ ತನು ಸದನಕೆ ನೀ ತ್ವ ರಿತದಿ ಜಗನ್ನಾಥ ವಿಠ್ಠಲ 9
--------------
ಜಗನ್ನಾಥದಾಸರು
ಸಂಗವಾಗಲಿ ಸಾಧು ಸಂಗವಾಗಲಿ ಪ ಸಂಗದಿಂದ ಲಿಂಗದೇಹ ಭಂಗವಾಗಲಿ ಅ.ಪ ಅಚ್ಚುತಾಂಘ್ರಿ ನಿಷ್ಠರ ಯದೃಚ್ಛ ಲಾಭ ತುಷ್ಟರನಿಶ್ಚಯಾತ್ಮ ಜ್ಞಾನವುಳ್ಳ ಅಚ್ಚ ಭಾಗವತರ1 ಸಾರ ಮೂರ್ತಿ ತಿಳಿದವರ2 ಪಂಚಭೇದ ಸಂಸ್ಕಾರ ಪಂಚ ಭೂತಾತ್ಮವಾದಪಂಚಭೇದ ಕೃಷúರಾಯನ ಪಂಚಮೂರ್ತಿ ತಿಳಿದವರ 3
--------------
ವ್ಯಾಸರಾಯರು
ಹರಿವಾಯುಗಳು ಮೂರಕ್ಕರದ ದೇವ ಮೂರು ವಸ್ತುವ ಬೆರಸಿ ಮೂರು ಮೂರಾಗಿಸೆಯೆ ಪಾಲಿಸುವ ನಮ್ಮ ಎರಡು ವಸ್ತುವು ಸೇರಿ ದೇಹಕ್ಕೆ ಚಲನೆಯದು ಹರಿವಾಯುಗಳ ಒಲುಮೆ ದೇಹ ರಕ್ಷಕವು4 ಅವ್ಯಾಕೃತಾಕಾಶ ರೂಪದಲಿ ತಾನಿಹನು ವಿಶ್ವಂಭರಾತ್ಮಕನು ದೇವ ನಿಜದಿಂದ ಸೃಷ್ಟಿಗವನೇ ಮೂಲ ವಾಸುದೇವಾತ್ಮಕನು ಮಧ್ವಹೃದಯನಿವಾಸಿ ಸರ್ವಮೂಲನವ 5 ಪೃಥಿವಿಯಪ್ ತೇಜಸ್ಸು ಮೂರು ಭೂತಾಣುಗಳು ತುಂಬಿಯಾಗಸದಲ್ಲಿ ವ್ಯಾಕೃತವದಹುದು ತುಂಬಿ ವಾಯುವಿನಣುಗಳ್ ಒಂದೆಡೆಯೆ ತಾನಹುದು ವ್ಯಾಕೃತಾಕಾಶ 6 ಆಗಸದಿ ವಾಯುವಿನ ಪರಮಾಣು ಒತ್ತಡವೆ ದೃಶ್ಯವಾಯುವು ತಾನೆ ಹರಿವುದಾಗಸದಿ ದೃಶ್ಯವಾಯುವಿನ ಪರಮಾಣುವೊತ್ತಡದಿ ನಿಜ ತೇಜವುದಯಿಸುವುದದರಲ್ಲಿ ಮೂರಿಹವು 7 ತೇಜದಿಂದಲೆ ನೀರು ಜಗಕೆಯಾಧಾರವದು ನೀರಿನಿಂದಲೆ ಭೂಮಿ ಉದಯಿಸುವದದರಿಂ ಪಂಚಭೂತಂಗಳಿವು ಭೂಮಿಯಲಿ ತೋರುವವು ಪಂಚಭೂತಾತ್ಮದ ಪ್ರಕೃತಿಯಿದು ಸತ್ಯ 8 ಇವುಗಳಿಗೆ ಒಡತಿಯಾ ಪ್ರಕೃತಿದೇವಿಯು ಸತ್ಯ ಪ್ರಕೃತಿಯೆದೆಯಲ್ಲಿರುವ ದೇವರೂ ಸತ್ಯ ಪ್ರಕೃತಿ ಪುರುಷರ ಲೀಲೆ ಮಧ್ವಮತದಾ ತಿರುಳು ಮಧ್ವ ಸದ್ಗ್ರಂಥಗಳು ಸರ್ವಮೂಲಗಳು 9 ಭೂತಕೃತ್ತೂ ಅವನೆ ಭೂತಪಾಲಕನವನೆ ಭೂತಭಾವದಲಿದ್ದು ಪ್ರೇರಕನು ಅವನೆ ಆತ್ಮಾಂತರಾತ್ಮವೆಂದೆರಡು ರೂಪಗಳವಗೆ ಹೃದಯದಾಕಾಶದಲಿ ವಾಸವಾಗಿಹನು 10 ಪಂಚಭೂತಗಳು ಪಂಚೇಂದ್ರಿಯಗಳು ಪಂಚ ಕರ್ಮೇಂದ್ರಿಯಗಳ ರಚಿಸಿ ಹರಿಯು ಪಂಚಾತ್ಮಕನು ದೇವ ಪಂಚವಾಯುಗಳಿಂದ ಪಂಚತನ್ಮಾತ್ರಗಳ ಜ್ಞಾನವೊದಗಿಪನು11 ಸುಖ ರತಿ ಪ್ರೇರಕನು ತಾನಾಗಿ ಸಿರಿವರನು ಶಾರೀರ ಪುರದಲ್ಲಿ ನೆಲೆಯಾಗಿ ಇಹನು ಬೆಳಗುತ್ತ ದೇಹವನು ಬೆಳಗಿಸುವ ದೇವತೆಗ ಳವನ ಬಳಿಯಿದ್ದು ಸೇವೆಯ ಗೈಯುತಿಹರು 12 ವಿಶ್ವ ದರ್ಶನಕಾಗಿ ವಿಶ್ವಜನರೊಳು ಕಣ್ಣಿನಲ್ಲಿ ನೆಲೆನಿಂತು ವಿಶ್ವಸಾಕ್ಷಿಯು ಸೂರ್ಯನಲ್ಲಿಯೂ ತಾನಿದ್ದು ವಿಶ್ವವನು ಬೆಳಗಿಸುತ ಜ್ಞಾನವೊದಗಿಪನು 13 ಸೂರ್ಯನೊಂದೆಡೆಯಿದ್ದು ತಾನ್ ಬೆಳಗಿ ಲೋಕವನು ತನ್ನ ಕಿರಣಂಗಳಿಂ ಬೆಳಗಿಸುವ ತೆರದಿ ಕಣ್ಣು ಮೊದಲಾದಿಂದ್ರಿಯಗಳಲಿ ತಾನಿದ್ದು ಅವುಗಳನು ಬೆಳಗಿಸುತ ರಕ್ಷಿಪನು ನಮ್ಮ14 ತೈಜಸದ ದೇವನವ ತೇಜದಾರೂಪದಲಿ ಕಂಠಗತನಾಗಿದ್ದು ದೇಹದಲಿ ಬೆಳಗಿ ಹುಲಿ ಕರಡಿ ಮೊದಲಾದ ಜಂತುಗಳ ಸೃಷ್ಟಿಸುತ ಸ್ವಪ್ನಲೋಕವನು ಮಾನಸಕೆ ತೋರಿಸುವ 15 ಪ್ರಾಜ್ಞರೂಪದ ದೇವನಪ್ಪಿ ಜೀವಾತ್ಮನನು ಮಾಯೆಯಾ ಮುಸುಕಿನಿಂದಜ್ಞಾನಬರಿಸಿ ಜೀವನಿಗೆ ತೋರದುದರಿಂದ ಪ್ರಾಜ್ಞನದಾಗಿ ಜಗಕೆ ತನ್ನಯ ಮಾಯೆಯನು ತೋರಿಸುವನು 16 ನಾಲ್ಕನೆಯ ರೂಪವದು ತುರ್ಯ ನಾಮದಲಿಹುದು ಮುಕ್ತರಿಗೆ ಮಾತ್ರವೇ ತೋರುವುದು ಪೇಳ್ವೆ ಜಾಗರಾದಿಯವಸ್ಥೆಗಳ ನಾಲ್ಕು ಪೇಳಿದನು ಮಾಯಾವಿ ಪರಮಾತ್ಮನದು ಲೀಲೆಗಳಿವು 17
--------------
ನಿಡಂಬೂರು ರಾಮದಾಸ
(ಕೇಶವಾಯ ನಮಃ ದಿಂದ ಆರಂಭವಾಗುವ ಆಚಮನ ಸ್ತುತಿ)ಶ್ರೀನಿವಾಸಾಯ ನಮೋ ಪ.ಶ್ರೀನಿವಾಸಾಯ ಶತಭಾನುಪ್ರಕಾಶಾಯಶ್ರೀನಿವಾಸಾಯ ನಿಜ ಭಕ್ತಜನಪೋಷಾಯಶ್ರೀನಿವಾಸಾಯ ಪರಮಾನಂದಘೋಷಾಯ ಅ.ಪ.ದೋಷಗಂಧವಿದೂರ ಕೇಶಿಮುಖದಾನವ ವಿ-ನಾಶವಿಧಿಭವಸುಖನಿವಾಸ ವಾಸುಕಿಶಯನವಾಸವಾದ್ಯಮರಗಣಪೋಷ ಪಾವನವೇಷ ಶ್ರೀಶ ನಿರ್ಗತವಿಶೇಷದಾಸಜನಹೃದಯಾಬ್ಧಿಭೇಶ ಕೌಸ್ತುಭಮಣಿವಿ-ಭೂಷ ಭೂತಾತ್ಮ ಭವಪಾಶಹರ ಪರತರ ದ-ಯಾ ಸಮುದ್ರ ವಿನಿದ್ರ ಭೂಶಯನ ಭೂರಿಪ್ರದಕೇಶವಾಯ ನಮೋನಮಃ 1ಕ್ಷೀರಸಾಗರವಾಸ ಶ್ರೀರಮಾಪ್ರಾಣೇಶಸಾರಭೋಕ್ತøಸ್ವತಂತ್ರ ಚಾರುಷಡ್ಗುಣಭರಿತನಾರದಾದಿಮುನೀಂದ್ರವಾರಸನ್ನುತಪಾದನೀರರುಹದ್ವಂದ್ವನೆವಾರಿಜಾಸನಮುಖ್ಯಸುರರುತಿಳಿಯರು ನಿನ್ನಭೂರಿಮಹಿಮೆಗಳ ಸಾಕಾರವನು ಬಣ್ಣಿಸುವಧೀರನಾವನು ಮಹಾ ವೀರ ವಿಶ್ವಾಧಾರನಾರಾಯಣಾಯ ನಮೋ 2ವೇದವೇದ್ಯನೆ ದುರಿತಶೋಧನೆ ದೈತ್ಯಗಣ-ಛೇದಕನೆ ಸುರಸುಪ್ರಸಾದಕನೆ ಭಕ್ತಜನ-ಮೋದದಾಯಕ ಸ್ವಗತ ಭೇದವರ್ಜಿತಸಮಾನಾಧಿಕ್ಯರಹಿತ ಸತತಆದಿತ್ಯ ಶತಕೋಟಿತೇಜೋವಿರಾಜ ಮಹ-ದಾದಿಕಾರಣ ಮಧುವಿರೋಧಿ ಮಂಗಲಸುಖಾಂ-ಬೋಧಿ ಪದ್ಮಾಲಯವಿನೋದಿ ರಾಧಾರಮಣಮಾಧವಾಯ ನಮೋನಮಃ 3ಇಂದಿರಾಹೃದಯಾಬ್ಧಿ ಚಂದ್ರ ಚಾರ್ವಂಗ ಮುಚು-ಕುಂದಾಪ್ತ ಸರ್ವಶ್ರುತಿವೃಂದಪ್ರತಿಪಾದ್ಯ ಸಾ-ನಂದ ಭರಿತ ಕಾಳಿಂದೀರಮಣ ರಾಮಚಂದ್ರಸನ್ನುತಮಹೇಂದ್ರವಂದಾರುಜನತ್ರಿದಶಮಂದಾರ ಕೋಮಲಿತವೃಂದಾವನವಿಹಾರ ಕಂದರ್ಪಜನಕ ಬಾ-ಳೇಂದುಶೇಖರಸಖ ಸನಂದನಾರ್ಚಿತ ಶ್ರೀಗೋವಿಂದಾಯತುಭ್ಯಂ ನಮಃ 4ಜಿಷ್ಣುರಥಸಾರಥಿ ತ್ರಿವಿಷ್ಟಪಸಭಾಧ್ಯಕ್ಷಮುಷ್ಟಿಕಾಸುರವೈರಿ ಮುನಿಜನಮನೋಹಾರಿಮುಟ್ಟಿ ಭಜಿಪರ ಮನೋಭೀಷ್ಟವ ಸಲ್ಲಿಸುವ ಶ್ರೇಷ್ಠ ಪೂರ್ಣಬ್ರಹ್ಮನೇಭ್ರಷ್ಟಸಂಸಾರದೊಳು ನಷ್ಟ ಬುದ್ಧಿಗಳಿಂಗೆತುಷ್ಟಿಯನು ನೀನಿತ್ತು ಸಲಹೊ ಸಾಮಜವರದಬೆಟ್ಟದೊಡೆಯನೆ ಕೃಪಾದೃಷ್ಟಿಯಿಂದಲಿನೋಡುವಿಷ್ಣವೇತುಭ್ಯಂ ನಮೋ 5ವಿಧಿಭವಾದಿ ಸಮಸ್ತ ತ್ರಿದಶಜನಸುಖದಾತಬುಧಜನಪ್ರಿಯ ಭೂತಭಾವನ ಜಗನ್ನಾಥಪದುಮಾಕ್ಷ ಪಾಂಡವಪ್ರತಿಷ್ಠಾಪನಾಚಾರ್ಯಮದನಕೋಟಿಸ್ವರೂಪವಿದುರನಾಲಯದಲ್ಲಿ ಪಾಲುಂಡ ಬ್ರಹ್ಮಾಂಡ-ಕಧಿಪತಿ ಕಲಿಮಲನಾಶ ಕವಿಜನಮನೋಲ್ಲಾಸವಿಧುಮಂಡಲಸ್ಥ ಸದ್‍ಹೃದಯಪಂಕಜವಾಸಮಧುಸೂದನಾಯ ನಮೋ 6ಅಕ್ರೂರವರದ ಸದತಿಕ್ರಮರ ಗೆಲಿದ ಹಯ-ವಕ್ತ್ರವೈಕುಂಠಾಖ್ಯ ಪುರವಾಸ ಜಗದೀಶಶುಕ್ರ ಶಿಷ್ಯರನೆಲ್ಲ ಪರಿಹರಿಸಿ ಪಾಲಿಸಿದೆ ಶಕ್ರಾದಿಸುರಗಣವನುಚಕ್ರ ಶಂಖ ಗದಾಬ್ಜಧರ ಚತುರ್ಭುಜ ದೇವ-ಚಕ್ರವರ್ತಿಯನಂತಕೀರ್ತಿ ಪಾವನಮೂರ್ತಿನಕ್ರಮದಹರನಾದ ಬ್ರಹ್ಮ ಗಂಗಾಪಿತತ್ರಿವಿಕ್ರಮಾಯ ನಮೋನಮಃ 7ರಾಮಣೀಯಕ ವಪು ನಿರಾಮಯ ನಿರಾಶ್ರಯ ಸು-ದಾಮಸಖ ಪರಿಪೂರ್ಣಕಾಮ ಕೈರವದಳ-ಶ್ಯಾಮ ಕಲ್ಯಾಣ ನಿಸ್ಸೀಮ ಮಹಿಮನೆಸುಜನಸ್ತೋಮಸುರಕಾಮಧೇನುಗೋಮಿನೀಪತಿ ಗೋಗಣಾನ್ವಿತನೆ ಗೋಪೀಲ-ಲಾಮ ಗೋವರ್ಧನೋದ್ಧಾರ ಗೋವಿದಾಂಪತಿ ವಿ-ರಾಮ ವಿಷ್ವಕ್ಸೇನ ವಿಶ್ವತೈಜಸಪ್ರಾಜÕವಾಮನಾಯ ನಮೋನಮಃ8ಆದಿಮಧ್ಯಾಂತವಿರಹಿತ ನಿಖಿಲಸಾರ್ಚಿತ ವಿ-ರಾಧಭಂಜನ ಭವಾಂಬೋಧಿಕುಂಭಜ ಭಜಕ-ರಾದವರನುದ್ಧರಿಪ ಬೋಧರೂಪನೆಚತುಷ್ಟಾದ ಪಾವನಚರಿತನೆಗಾಧಿಜಾಧ್ವರಪಾಲ ಗರುಡಧ್ವಜ ದಯಾಳುನಾದಬಿಂದು ಕಲಾತೀತ ರುಕ್ಮಿಣಿನಾಥಬಾದರಾಯಣನೆ ನಿರುಪಾಧಿ ಮಾಯಾತೀತಶ್ರೀಧರಾಯ ನಮೋನಮಃ 9ಪಾಶಧರನುತ ವೆಂಕಟೇಶ ಸರ್ವೇಂದ್ರಿಯಪ್ರ-ಕಾಶ ಪಾಲಿತನಿಖಿಳಭೂಸುರವ್ರಜ ಮಂದ-ಹಾಸಮುಖ ನವಕುಂದಭಾಸರದನವಿರಾಜದೂಷಣಾದ್ಯ ಸುರಹರನೆಈಶಪತಿಸೇವ್ಯಾಂಬರೀಶನೃಪವರದ ಪರ-ಮೇಶ ಕೋವಳಪೀತವಾಸ ಕರ್ದಮಶುಕಪ-ರಾಶರಾದ್ಯಮಿತಯೋಗೀಶರಕ್ಷಕಹೃಷೀಕೇಶಾಯ ತುಭ್ಯಂ ನಮೋ 10ಶುದ್ಧ ತ್ರಿಗುಣಾತೀತ ತ್ರಿವ್ರತ ತ್ರಿಜಗತ್ಪಾಲಪ್ರದ್ಯುಮ್ನ ಪ್ರಥಮಾಂಗದೊಡೆಯ ಪರಮಾತ್ಮ ಸುರ-ಸಿದ್ಧ ಪೂಜ್ಯ ಪುಂಡರೀಕದಳಾಕ್ಷಬುದ್ಧಬುಧಜನಸುಲಭಮಧ್ವವಲ್ಲಭ ಮಂತ್ರಮೂರ್ತಿ ಕ್ಷೀರಾಬ್ಧಿ ಶ್ವೇತದ್ವೀಪವೈಕುಂಠಮಂದಿರತ್ರಯ ಸಾಧು-ಹೃದ್ಯ ಭಕ್ತದ್ವೇಷಭಿದ್ಯ ನಿತ್ಯಾತ್ಮ ಶ್ರೀಪದ್ಮನಾಭಾಯ ನಮಃ11ಸಾಮಗಾನವಿನೋದ ಸಾಧುಜನಸುಖಬೋಧಕಾಮಿತಾರ್ಥಪ್ರದಾತ ಕಪಿಲಋಷಿ ಪ್ರಖ್ಯಾತವ್ಯೋಮಯಾನವರೂಥ ಓಂಕಾರಭರಿತ ರಘುರಾಮಸಮರಂಗ ಭೀಮನಾಮಧಾರಕರ ಪರಿಣಾಮರೂಪಕ ಸುಜನ-ಕ್ಷೇಮಪ್ರಾಪಕ ನೀಲಜೀಮೂತನಿಭವರ್ಣಭೌಮಪುರುಷೋತ್ತಮ ನಿಯಾಮಕನೆ ರಕ್ಷಿಸೈದಾಮೋದರಾಯ ನಮೋ 12ಶಂಕರಾಂತರ್ಯಾಮಿ ಶಾಙ್ರ್ಗಪಾಣಿ ಶರಣ್ಯವೆಂಕಟಾಚಲಸದಾಲಂಕಾರ ಶೇಷಪರಿ-ಯಂಕ ಪ್ರವಿತತನಿಷ್ಕಳಂಕಚಾರಿತ್ರ ಸುಸಂಕುಲಾರ್ಚಿತ ಪದಯುಗಲಂಕಾಧಿಪತ್ಯವ ವಿಭೀಷಣನಿಗೊಲಿದಿತ್ತಓಂಕಾರನಿಧನ ಸಾಮಕಭಕ್ತರಾನೇಕಸಂಕಟವ ಪರಿಹರಿಪ ಸತ್ಯ ಸಂಕಲ್ಪ ಶ್ರೀಸಂಕರ್ಷಣಾಯ ನಮೋ13ಈ ಸಮಸ್ತ ಜಗತ್ತು ನಿನ್ನುದರದೊಳಗಿಹುದುಈ ಸಕಲಜೀವರೊಳಗಿಹ ನಿತ್ಯನಿರ್ಮುಖ್ಯಸೂಸಿಬಹ ಸಂಸಾರಸಾಗರದಿ ಮುಳುಗಿದೆನುನೀ ಸಲಹೊ ದೇವದೇವಭೂಸಲಿಲಪಾವಕಾಕಾಶಾದಿ ಭೂತಾಧಿ-ವಾಸ ರಾಕ್ಷಸವನಹುತಾಶ ನಾನಾ ರೂಪ-ವೇಷಧಾರಕ ನರಾವೇಶ ಪಾಲಿಸು ಎನ್ನವಾಸುದೇವಾಯ ನಮೋ 14ಅದ್ವಿತೀಯನೆಯಮಿತವಿಕ್ರಮನೆ ಗುಣಕಾಲವಿದ್ಯಾಪ್ರವರ್ತಕನೆ ವಿಶ್ವಾದಿ ಸಾಹಸ್ರಸಿದ್ಧನಾಮ ನರನಾರಾಯಣಪರಾಯಣನೆ ಬುದ್ಧಿಪ್ರೇರಕಪ್ರೇರ್ಯನರುದ್ರರೂಪಪ್ರತಾಪ ಋಗ್ಯಜುಸ್ಸಾಮಶ್ರುತಿ-ವೇದ್ಯ ಬ್ರಹ್ಮಾಂಡಕೋಟಿಗಳ ಸಲೆ-ಬದ್ಧಕಮನೀಯರೂಪಸುತಪದುರಾಪಪ್ರದ್ಯುಮ್ನಾಯ ತುಭ್ಯಂ ನಮಃ 15ಉದ್ಧವಾದಿ ಸಮಸ್ತ ಭಾಗವತಜನಕಮಲ-ಮಧ್ಯಚರರಾಜಹಂಸಾಯ ಮಾನಸದಶ್ರದ್ಧೆಯಂ ಕೊಟ್ಟು ರಕ್ಷಿಸು ಧೊರೆಯೆಶ್ರೀಹರಿಯೆ ವೈದ್ಯನಾಥವಿಧಾತನೆಬದ್ಧನಾದೆನು ಕರ್ಮಪಾಶದಿಂದ ದೊರೆ ಸಿಕ್ಕಿ-ಬಿದ್ದೆ ಕೈಪಿಡಿದೆಬ್ಬಿಸೆನ್ನನೆಲೆದೇವ ಮರೆಹೊದ್ದಿದೆನು ಮೈದೋರು ಚಿನುಮಯಾತ್ಮಕನೆಅನಿರುದ್ಧಾಯ ತುಭ್ಯಂ ನಮಃ 16ಕ್ಷರ ಪುರುಷರೆಲ್ಲ ಬ್ರಹ್ಮಾದಿ ಜೀವರು ರಮಾಕ್ಷರಪುರುಷಳೆನಿಸುವಳು ನೀನೆ ಉತ್ತಮ ಪರುಷಪರತರಾವ್ಯಯಲೋಕಭರಿತಮಂಗಲರಿತ ಗುರುತಮ ಗುಣಧ್ಯಕ್ಷನೆಶರಧಿಸೇತುನಿಬದ್ಧ ಶಬರಿ ಹಣ್ಣನು ಮೆದ್ದಶರಭಂಗಮುನಿಪಾಲ ಶಮಿತದಾನವಜಾಲಧುರವಿಜಯ ವಿಜಯಮೈದುನ ಕೃಷ್ಣ ರಕ್ಷಿಸೈಪುರುಷೋತ್ತಮಾಯನ್ನಮೋ 17ಅಕ್ಷಯಾತ್ಮನೆ ವಿಶ್ವರಕ್ಷಕನೆ ವಿಶ್ವಭುಗ್-ವಿಶ್ವತೋಮುಖ ವಿಶ್ವತೋಬಾಹು ಕರುಣಾಕ-ಟಾಕ್ಷದಿಂ ನೋಡೆನ್ನಮ್ಯಾಲೆದಯಮಾಡು ಶ್ರೀವಕ್ಷಸ್ಥಲನಿವಾಸನೆಲಕ್ಷ್ಮಣಾಗ್ರಜನೆ ಸುವಿಲಕ್ಷಣನೆ ಸುಜ್ಞಾನ-ಮೋಕ್ಷದಾಯಕ ಯಜÕಮೂರ್ತಿ ರೂಪತ್ರಯ ಮ-ಹೋಕ್ಷಧ್ವಜನಂ ಮೋಹಿಸಿದ ಮೋಹಕಲ್ಪಅಧೋಕ್ಷಜಾಯ ನಮೋನಮಃ 18ಕ್ರೂರಕರ್ಮಿ ಹಿರಣ್ಯಕಶಿಪುವಂ ಕೊಂದ ದು-ರ್ವಾರದುರಿತಾಬ್ಧಿಬಾಡಬ ಭಕ್ತವತ್ಸಲ ಮ-ಹಾರವಕುಲಿಶ ಶತಕೋಟಿಸದೃಶನಶಿರಪ್ರಕರಧೀರ ಪ್ರಹ್ಲಾದಾಭಿವರದಭೂರೀಕರರೂಪ ಭೂಮಕೀರ್ತಿಕಲಾಪಸಾರವಜ್ರಸ್ತಂಭದಿಂ ಬಂದ ನಂದ ಸುಕು-ಮಾರಮಾರ್ಕಾಂಡೇಯವರದ ಲೋಕಶರಣ್ಯನಾರಸಿಂಹಾಯ ನಮೋ 19ನಿಶ್ಚಲಾತ್ಮ ನಿರೀಹ ನಿರ್ವಿಕಾರಾನಂತಪ್ರೋಚ್ಛ ಸರ್ವಗ ಸದಾನಂದ ಪರಿಪೂರ್ಣ ತ-ನ್ನಿಚ್ಛೆಯಿಂದಲಿ ಜಗವ ಪಾಲಿಸುವನಿರ್ಮಿಸುವ ಆಶ್ಚರ್ಯಕೃತಸಲೀಲಮುಚ್ಚುಮರೆ ಯಾಕಿನ್ನು ಮುಗಿದು ಬೇಡುವೆ ಕೈಯಸ್ವಚ್ಛತರ ಭಕ್ತಿಭಾಗ್ಯವನಿತ್ತು ಸಲಹೊ ಮಹ-ಕಚ್ಛಪನೆ ಕಾಳೀಯಮರ್ದನಮಹಿತಶ್ರೀಮದಚ್ಯುತಾಯ ನಮೋನಮಃ 20ಚೈದ್ಯಮಥನ ಮನೋಜÕಶುದ್ಧಾತ್ಮ ಸರ್ವಜÕಯುದ್ಧದಲಿ ಸೈಂಧವನ ಶಿರವ ಕೆಡಹಿಸಿ ಜಯವಹೊದ್ದಿಸಿದ ಪಾರ್ಥನಿಂಗೆಇದ್ದು ನೀ ಹೃದಯದೊಳು ತಿದ್ದೆನ್ನ ಮತಿಯ ಸ್ಮರ-ವಿದ್ದ ಮಾನಸವ ಪಾದದ್ವಯದೊಳಿರಿಸೈ ದ-ಯಾದ್ರ್ರಚಿತ್ತ ಸ್ವಭಕ್ತಸಂಸಾರಿ ಕಾಯೆಜನಾರ್ದನಾಯ ನಮೋನಮಃ 21ಮಂದಾಕಿನಿಯ ಪಡೆದ ಮಾತೆಯ ಶಿರವ ಕಡಿದನಂದಗೋಪನ ಕಂದನೆನಿಸಿ ಬಾಲಕತನದಚಂದಮಂ ತೋರಿಸಿದ ಕುಬುಜೆಗಂಧಕೆ ಒಲಿದಸುಂದರೀರಮಣ ಜಯತುತಂದೆತಾಯಿಯು ಸರ್ವ ಜೀವರ್ಗೆ ನೀನೆ ನಿಜ-ವೆಂದು ತಿಳಿಯದೆ ಮಾಯೆಯಿಂದ ಮಮಕರಿಸಿ ಪರ-ನಿಂದಾದಿ ದೋಷಗಳ ಮಾಡಿ ಬಳಲುತ್ತಿಹರ್ಉಪೇಂದ್ರಾಯ ತುಭ್ಯಂ ನಮಃ 22ಸ್ಥಿರಚರಾತ್ಮಕ ಧೇನುಚರ ದೇವಕೀಜಠರ-ಶರಧಿಗುರುರಾಜ ಭಾಸ್ಕರಮಂಡಲಾಂತಸ್ಥಪರಮತೇಜೋಮಯ ಪುರಾಣಪುರುಷೇಶ್ವರನೆದುರಿತದೂರ ಗಭೀರನೆನಿರತಿಶಯನಿಜನಿರ್ವಿಕಲ್ಪ ಕಲ್ಪಾಂತಸಾ-ಗರದಿ ವಟಪತ್ರಪುಟಶಯನ ಪುಣ್ಯಶ್ರವಣಪುರುಷನಾಮಕ ಪುಷ್ಕರಾಕ್ಷ ಶ್ರೀಕರನೆ ಜಯಹರಯೇ ನಮೋನಮಸ್ತೇ 23ವೃಷ್ಟಿಕುಲತಿಲಕ ಸರ್ವೇಷ್ಟದಾಯಕ ನಿಮಿತ-ಶಿಷ್ಟಜನಪರಿಪಾಲ ಶಿವಗೌರೀ ಗಣಪಗುಹ-ಸೃಷ್ಟಿಶಕ್ತಿಯನೀವ ಗೋವರ್ಧನಾಚಲವ ಬೆಟ್ಟಿನಿಂದೆತ್ತಿದ ಮಹಾದುಷ್ಟ ನರಕಾದಿದಾನವರ ಮರ್ದಿಸಿದ ಜಗ-ಜಟ್ಟಿ ಜನಿಮೃತಿಭಯವಿದೂರ ವಿಷಮಯಸರ್ಪ-ಶ್ರೇಷ್ಠನಂ ಘಾತಿಸಿದ ರಾಮಾನುಜನೆಹರೇ ಕೃಷ್ಣಾಯ ತುಭ್ಯಂ ನಮಃ 24ಅಕ್ಷೀಣ ಬಲಶಾಲಿಯಾಂಜನೇಯನಿಗಿತ್ತೆಅಕ್ಷಯದ ಬ್ರಹ್ಮಪದವಿಯ ಲೋಕದೊಳಗ್ಯಾವ-ದಕ್ಷಮರ್ದನ ನಿನಗೆ ಸರ್ವತಂತ್ರಸ್ವತಂತ್ರ ಪಕ್ಷೀಂದ್ರಭುಜವಿರಾಜಸಾಕ್ಷಿಚೈತನ್ಯರೂಪನೆ ಕಮಲನಾಭನೆ ಮು-ಮುಕ್ಷುಜನಧ್ಯಾನಗಮ್ಯನೆ ಗದಾಧರ ದನುಜ-ಶಿಕ್ಷಕ ಪರೀಕ್ಷಕನೆ ಪವನವಾಹನಲಕ್ಷ್ಮೀನಾರಾಯಣಾಯ ನಮೋ25
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ