ಒಟ್ಟು 8 ಕಡೆಗಳಲ್ಲಿ , 6 ದಾಸರು , 8 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಚೌತಿಯ ದಿವಸ ರಂಭೆ : ವಾರಿಜಗಂಧಿನಿ ನೋಡಿತ್ತ ಶ್ರುತಿ- ಮೌರಿ ರಭಸದಿ ಲಕ್ಷ್ಮೀಕಾಂತ ಭೂರಿ ವೈಭವದಿ ಪೊರಟನೆತ್ತ ಯಾವ ಕಾರಣವೆಂದು ಪೇಳೆಲೆ ಸತ್ಯ 1 ಊರ್ವಶಿ : ದೇವಿ ಕೇಳೆಲೆ ಸುಮ್ಮಾನದಿಂದ ಕುಲ- ದೇವರ ಪೂಜೆಗೋಸುಗ ಬಂದ ಪಾವನಮೂರ್ತಿಯಾದುದರಿಂದ ನಮ್ಮ ಕಾವನು ಕರುಣಾಕಟಾಕ್ಷದಿಂದ2 ರಂಭೆ : ನೂತನವಾಯ್ತೆ ಕೇಳಲೆ ಜಾಣೆ ಜಗ- ನ್ನಾಥನಿಗ್ಯಾವ ಕುಲವು ಕಾಣೆ ರೀತಿಯನರುಹಬೇಕೆಲೆ ಬಾಲೆ ಸರ್ವ ಚೇತನಾತ್ಮನ ನಾಟಕದ ಲೀಲೆ3 ಊರ್ವಶಿ : ಪಾಂಡವರಾಯುಧಗಳನ್ನೆಲ್ಲ ಪೊತ್ತು- ಕೊಂಡ ಕಾರಣದಿ ಪೂಜೆಗಳೆಲ್ಲ ಕಂಡು ಪೊಗಳಲು ಕವಿಗು ಸಲ್ಲ ಇನ್ನು ಪುಂಡರೀಕಾಕ್ಷನವನೆ ಬಲ್ಲ4 ರಂಭೆ : ರಾಜವದನೆ ಪೂಜೆಯಾದ ಮೇಲೆ ಅಂ- ಭೋಜನಾಭನು ತಾಕ್ಷ್ರ್ಯನ ಮೇಲೆ ರಾಜಬೀದಿಯೊಳ್ ಬರುವದೇನೆ ಇಂಥ ಸೋಜಿಗವೇನು ಪೇಳೆಲೆ ಜಾಣೆ5 ಊರ್ವಶಿ : ಪಟಹ ಡಿಂಡಿಮವಾದ್ಯರವದಿಂದ ತಂ- ಬಟೆನಿಸ್ಸಾಳರವದಿ ಬರುವ ಚಂದ ಸಟೆಯಲ್ಲ ಕೇಳು ಕರುಣದಿಂದ ನಮ್ಮ ಕಟಕ ರಕ್ಷಿಸಲು ಬರುವ ಗೋವಿಂದ6 ರಂಭೆ : ಬಳಿಕ ಪಲ್ಲಂಕಿಯೇರಿದ ಕಾಣೆ ಜನ- ಗಲಭೆಗಳಿಂದ ಪೋಗುವದೇನೆ ನಲವಿನಿಂದಲಿ ಪೊರಟೆಲ್ಲಿಗೆನೆ ಮಹಾ- ಜಲಜನಾಭನ ಮಹಿಮೆಯ ಜಾಣೆ7 ಊರ್ವಶಿ :ಚಾಪಲನೇತ್ರೆ ಚೌತಿದಿನದಿ ಕೆರೆ- ದೀಪವೆಂದೆನುತ ಭಕ್ತರು ಮುದದಿ ಶ್ರೀಪರಮಾತ್ಮ ವಿಲಾಸದಿ ಭಕ್ತ- ರಾಪೇಕ್ಷೆಗಳನು ಸಲ್ಲಿಸುವಂದದಿ8 ರಂಭೆ : ಸೋಮಾರ್ಕಜ್ಯೋತಿಹಿಲಾಲುಗಳು ಜನ- ಸ್ತೋಮ ಜೇನುಂಡೆ ಬಿರುಸು ಮಿಗಿಲು ವ್ಯೋಮಕೇಶಗಳ ಪೊಗಳತೀರದು ಸರಿ ಭೂಮಿಯೊಳ್ ಕಾಣೆನೆಂಬಂತಾದುದು9 ಅಮಮ ಇದೇನೆ ಇಂದಿನ ಲೀಲೆ ಜನ- ರಮರಿಕೊಂಡಿಹರೇನಿದು ಬಾಲೆ ಸಮವಿಲ್ಲ ಇಂತೀ ವೈಭೋಗಕ್ಕೆಲೆ ನ- ಮ್ಮಮರಾವತಿಗಿಂತಧಿಕ ಬಾಲೆ10 ಊರ್ವಶಿ : ಸಾರ್ಥಕಾಗುವದು ಜನ್ಮವು ಕಾಣೆ ಸಕ- ಲಾರ್ತಿ ಹರಣವಾಗ್ವದು ಜಾಣೆ ಕೀರ್ತಿತರಂಗಮಾಗಿಹುದೇನೆ ಶೇಷ- ತೀರ್ಥವೆಂದರೆ ಕೇಳಿದು ಪ್ರವೀಣೆ11 ರಂಭೆ : ಏಸು ದೊಡ್ಡಿತೆ ಕೇಳಲೆ ಬಾಲೆ ಅನಂ- ತಾಸನದಂತೆ ಮರೆವುದಲ್ಲೇ ನಾಸಿರ ದೀಪಸೋಪಾನದಲೆ ಮಹಾ- ಶೇಷನಿಹನು ಮಧ್ಯದೊಳಿಲ್ಲೇ12 ಊರ್ವಶಿ : ಕರುಣಾಕರನು ನಮ್ಮೆಲ್ಲರನು ನಿತ್ಯ ಪೊರೆಯಲೋಸುಗ ಬಂದನು ತಾನು ಸುರುಚಿರ ಮಂಟಪವೇರಿದನು ಭೂ- ಸುರರಿಂದ ವೇದಘೋಷವ ಕೇಳ್ವನು13 ದೃಷ್ಟಾಂತವಾಗಿ ಪೇಳುವದೇನೆ ಬ್ರಹ್ಮ ಸೃಷ್ಟಿಗೆ ಪೊಸತಾಗಿಹುದು ಕಾಣೆ ಕಟ್ಟಿಸಿದವನು ಪುಣ್ಯೋತ್ತಮನು ಪರ- ಮೇಷ್ಠಿ ಜನಕನ ಕೃಪೆಯಿನ್ನೇನು14 ಭಜಕರ ಮುಖದಿಂದೆಲ್ಲ ತಾನು ಭೂ- ಭುಜನಾಗಿ ನಡೆಸುವನಿದನೆಲ್ಲನು ನಿತ್ಯ ಸಾಕಾರವನು ತೋರಿ ತ್ರಿಜಗವನೆಲ್ಲ ರಕ್ಷಿಸುತಿಹನು15 ರಂಭೆ : ಬಿಡದೆ ಇನ್ನೊಂದು ಕೇಳುವೆ ನಾರಿ ಜಗ- ದೊಡೆಯ ಪೊರಡುವ ಕಾಲದಿ ಭಾರಿ ಬೆಡಿಖಂಬ ಧ್ವನಿಯು ಇದೇನೆ ಪೇಳೆ ಇಂಥ ಕಡು ಬೆಡಗನು ಉಸುರೆಲೆ ಬಾಲೆ16 ಊರ್ವಶಿ: ಜನರು ಎಲ್ಯಾದರಂಜಿದÀ ಭಯವ ತಮ್ಮ ತನುವಿಗೆ ಸೋಂಕಲದನೆಲ್ಲವ ಮನದಿ ಝುಮ್ಮೆನಿಸಿ ಬೆಚ್ಚೋಡಿಸುವ ಖಂಬ- ಧ್ವನಿಯೆಸಗಿದರು ಕೇಳಿದರಂದವ17 ತಿರುಗಿಯೇರಿದನು ಪಲ್ಲಂಕಿಯಲ್ಲಿ ಸುತ್ತು- ಬರುವನು ವೇದನಿನಾದದಲಿ ವರರತ್ನ ಖಚಿತ ಮಂಟಪದಲ್ಲಿ ನಿಂತ ನಿರವದಿ ಸುಖದಾಯಕನಲ್ಲಿ18 ಶರಣರ ಪಾಪ ಮನಕೆ ತಾರ ದುಡಿದ ವರ ಭೇರಿಗೆರೆವ ಬಿಸಿನೀರ ವರಲಕ್ಷ್ಮೀನಾರಾಯಣಧೀರ ಸುರು- ಚಿರ ಸಿಂಹಾಸನವೇರಿದ ವೀರ19
--------------
ತುಪಾಕಿ ವೆಂಕಟರಮಣಾಚಾರ್ಯ
ಮಾತೆ ಸರಸ್ವತಿ ಮಂಜುಳ ಮೂರುತಿ ಚೇತನಾತ್ಮಕಿ ಭಾರತಿ ಪ. ಪ್ರೀತಿಯಿಂದೀವುದು ಪೀತಾಂಬರಧರನ ಸಾತಿಶಯದ ಭಕುತಿ ಅ.ಪ. ಗುರುಹಿರಿಯರ ಕಂಡು ಬಿರುನುಡಿ ನುಡಿಸದೆ ಕರುಣಿಸೆನಗೆ ಸನ್ಮತಿ ಪರಮಪಾವನ ವೈಷ್ಣವರ ಪಾದಾಂಬುಜ ಮಧು- ಕರದಂತಿರಲಿ ಮದ್ರತಿ 1 ಮೂರ್ತಿ ತಾರೇಶನಂದದಿ ಹೃದಯಾ- ಕಾಶದೊಳು ಕಾಣುತಿ ದೂಷಣ ಕಾಮಾದಿ ಕ್ಲೇಶವ ಬಿಡಿಸುತ್ತ ಗೈಸಮ್ಮ ಹರಿಯ ಸ್ತುತಿ 2 ಮನುಜರ ರೂಪದಿ ದನುಜರು ಭೂಮಿಯೊಳ್ ಜನಿಸಿದರ್ಜಲಜನೇತ್ರಿ ಅನಘ ಲಕ್ಷುಮಿನಾರಾಯಣನ ದಾಸರಿಗೆಲ್ಲ ಜನನಿಯೆ ನೀನೆ ಗತಿ 3 ಭಾರತಿದೇವಿಯ ಸ್ತುತಿ
--------------
ತುಪಾಕಿ ವೆಂಕಟರಮಣಾಚಾರ್ಯ
ಮಾಧವ ಮಾಯ ಜಾಲಗಳ್ ಜಾಣÀ ನೀನೆಲೈ ಮಧುರ ನುಡಿಯೊಳು ಮಾನವಳಿದ ಮೇಲ್ ಪ್ರಾಣವೇತಕೆ ಕಾಣಬಂದಿತು ನಿನ್ನ ಕಪಟವು 1 ಶೋಕ ಕಾರಣವರಿಯದಂತೆ ನೀ ನೇಕೆ ಪೇಳುವೆ ಬರಿದೆ ಎನ್ನನು ಸಾಕು ಸಾಕು ಈ ಸರಸವಾಕ್ಕುಗಳ್ ಶೋಕವಹ್ನಿಗೆ ಆಜ್ಯ ಸುರಿವರೆ 2 ಭಾಮೆ ಕೃಷ್ಣನ ಪ್ರೇಮ ಪುತ್ಥಳಿ ಸಾಮ್ಯರಹಿತವೀ ಸ್ನೇಹವೆನ್ನುತ ಭೂಮಿಯೊಳ್ ಜನ ಪೊಗಳುತ್ತಿದ್ದರು ಈ ಮಹಾಭ್ರಮೆ ಪೋಯಿತೀಗಲೆ 3 ಚಾರುನುಡಿಗಳಾಪಾರವೆನ್ನೊಳು ಸಾರ ಪ್ರೇಮವು ರುಕ್ಮಿಣಿಯೊಳು ಪಾರಿಜಾತದ ಪುಷ್ಪವವಳಿಗೆ ನೀರಸೋಕ್ತಿಗಳೆನ್ನ ಪಾಲಿಗೆ 4 ಅಮರ ಮುನಿಪನು ನಿನ್ನ ಸಮುಖದೊಳ್ ಅಮಿತವಾಗಿ ತಾ ಸ್ತುತಿಸೆ ಭೈಷ್ಮಿಯ ಕುಮತಿಯಿಂದ ತಾನೆನ್ನ ತೆಗಳಲು ಅಮಮಯೆಂದೆಯಾ ಅಪ್ರಮೇಯನೆ 5 ಕುಸುಮ ಮಾಲೆಯು ಉರಗನಾದೊಡೆ ಮಾಳ್ಪುದೇನು ಶರದ ಚಂದ್ರನ ಕಿರಣ ತಪಿಪೊಡೆ ಹಿರಿದು ಕರ್ಮವ ಫಲವಿದೆಲ್ಲವೇ 6 ಕರಿಗಿರೀಶನ ಚಿತ್ತವೀಪರಿ ಇರಲು ಸುಮ್ಮನೆ ಕೊರಗಲೇತಕೆ ಸರುವ ಸಂಗವ ತೊರೆದು ತಪದೊಳು ನಿರತಳಾಗುವೆ ನೀರಜಾಕ್ಷ ಕೇಳ್ 7
--------------
ವರಾವಾಣಿರಾಮರಾಯದಾಸರು
ಶ್ರೀ ಸತ್ಯ ಬೋಧರು ನಿಂದಿಸೋರಿಗೆ ನಿಂದೆಯನು ಕೊಡುವಾ ಕೊನೆಕಾಮರಿಗೆ [?] ಕೊನೆಯನು ಕೊಡುವಾ ಘನ ಮಹಿಮಾ ನಮ್ಮ ಸತ್ಯಬೋಧಗುರು ಅನುದಿನ ನೆನೆಯಲಭೀಷ್ಟವ ಕೊಡುವಾ ಪ ರಾಮದೇವಾರ್ಚನೆ ನೇಮದಿಂದಲಿ ಗೈದು ಕಾಮಿತ ಫಲಪ್ರದ ಬಲವೈಯ್ದಿದಾ ಶೀಮಿಶೀಮಿಯೊಳು ಕಾಮನೈಯ್ಯನ ಜನ ಕಾಮಪ್ರದಾನೆಂಬುದೆ ಸಾರಿದಾ ಧೀಮಾನ್ ಶ್ರೀಮಾನ್ ಕಾಮಿತೇಷ್ಟದಾ ಕಾಮನೆಂದು ತಾ ಪೊಗಳಿಸಿದಾ ವಾಮದೆ ವಗುರು ರಾಮಭಕುತನೆಂದು ಭೂಮಿಯೊಳ್ಡಂಗುರ ಹೊಡಿಸಿದಾ 1 ತತ್ವ ತಿಳಿದು ನೋಡಿ ಸತ್ಯ ಸತ್ಯ ಹರಿ ಮತ್ತುವನಿಗೆ ಭೃತ್ಯವಾದ ಸೂನು ಉತ್ತಮರೆಲ್ಲರು ಸತ್ಸಮಯವಂತೆ ಸತ್ಯ ಪ್ರಮಾಣವ ಪೇಳಿದನು ¸ತ್ಯಬೋಧ ರವಿ ಮಿಥ್ಯಾಗತ್ತಲೆಗೆ ತಾ ಕತ್ತರಿಯೆಂದರುಹಿದನು ¸ತ್ಯ ಬೋಧನೆಯನು ಸತ್ವರಿಂಗೆ ಮಾಡಿ ಮತ್ತವರುದ್ಧಾರ ಮಾಡಿದನು 2 ವರಸದ್ಗುಣಗಣ ನಿಲಯನೆನಿಸಿ ತಾ ವರ ಶಿಷ್ಟಾನ್ವಿತ ಮೇಣ್ ವಂದ್ಯನಾದ ಶಿರಿವರ ಪಾದಾನುಗ್ರಹ ಪಡೆದು ತಾ ಹರಿಜನಾರ್ತಿತಯ ಛೇದಿಸಿದಾ ದುರಿತ ತಮರಾಶಿಗಗ್ನಿಯೆನಿಸಿದಾ ಶರಣರ ಸಂಘ ಬೂದಿಗೈದಾ ನರಸಿಂಹವಿಠಲನ ಕರಣವ ಪಡೆದು ತಾ ಗುರುವರ ವರಪ್ರದನೆನಿಸಿದಾ 3
--------------
ನರಸಿಂಹವಿಠಲರು
ಗಂಗಾಪಿತ ವೆಂಕಟ ಪರ್ವತನಿಲಯಕೌಸಲ್ಯತನಯಾ |ಮಂಗಳವಲ್ಲಭಭವಕರಕರೆಯ ಪರಿಹರಿಪುದು ತ್ವರಿಯಾ |ಅಂಗಜಜನಕನೆ ಸಂಗರಹಿತ ಸತ್ಸಂಗ ಕೃಪಾಬ್ಧಿ ವಿಹಂಗವಾಹನನೇ ಪಸ್ವಾಮಿಲಾಲಿಸುಯನ್ನಯ ಮನದುಸರ ನೀನಲ್ಲದಿತರರ |ಭೂಮಿಯೊಳ್ಕಾಣೆನೋ ಉದ್ಧರಿಸುವರನವನೀತಚೋರ |ಸಾಮಜದ್ರೌಪದಿ ಆ ಮುಚುಕುಂದ ಸುಧಾಮರ ಪೊರೆದ ತ್ರಿಧಾಮ ಮಹಾತ್ಮ 1ವಾಸುಕೀ ಶಯನ ದಯಾ ಸಂಪನ್ನ ನಾರಾಯಣ ನಿನ್ನ |ದಾಸರೊಳಗಾಡಿಸೊ ಸದ್ಗುಣ ಪೂರ್ಣ ಸಾರ್ವರಿಗೆ ಪ್ರಸನ್ನ |ಈಸಲಾರೆ ಈ ಸಂಸಾರಶರಧಿಕೈ ಸೋತಿತೆಲೋ ಪರಾಶರ ತನಯ 2ನಿತ್ಯಾನಂದ ನಿಗಮೋದ್ಧಾರ ಪೂತನೀ ಸಂಹಾರ |ಮೃತ್ಯುಂಜಯಸಖರವಿದರ ಗದಾಧರ ಸುಖಪಾರಾವಾರ|ಭೃತ್ಯವತ್ಸಲ ಸುರೋತ್ತಮ ಪಾರ್ಥನ ತೊತ್ತಿಗನಾದಿ ಸುಸತ್ಯ ಸಂಕಲ್ಪ ಗಂಗಾ3ಮಂದರಾಚಲ ಧರಿಸಿದ ಗೋವಿಂದ ಶ್ರೀ ಯಶೋದಾನಂದ |ನಂದನ ಶ್ರೀ ಕೇಶವ ಮುಕುಂದ ವಾಮನ ಸುಖಸಾಂದ್ರ |ತಂದೆ ಸಲಹೊ ನಿನ್ನ ಬಂಧಕ ಶಕುತಿಯಲಿಂದ ದಣಿಸದೆ ಅರಿಂದಮ ಪ್ರಭುವೇ 4ಅಂತರಂಗವ ಬಲ್ಲ ಮಧುದ್ವೇಷಿ ಯನ್ನಯ ಮನದಾಸೀ |ಅಂತು ಪೂರ್ತಿಸಿ ದುಷ್ಕರ್ಮದ ರಾಶಿ ಉಳಿಸದೆ ಪರಿಹರಿಸಿ |ಸಂತತ ಹೃದಯದಿ ನಿಂತು ಪೊಳೆವುದೋ ಅನಂತ ಮುರಾಂತಕ ಚಿಂತಾರಹಿತನೆ 5ಶಕ್ರವರಪೂಜಿತ ಬಲವಂತ ರುಕ್ಮಣೀಪತಿ ದಂತ |ವಕ್ತ್ರಾರಿ ಬಾಧಿಸದಂತೆಕೃತಾಂತಮಾಳ್ಪುದು ಕೆಡದಂಥ |ಸುಕೃತಪೀಡಿಸೋ ತ್ರಿವಿಕ್ರಮ ಮೂರುತಿ ಶುಕ್ರ ಯುಕ್ತಿ ಹರ ಅಕ್ರೂರ ವರದ 6ಕಂಕಾನುಜ ಮಂದಿರ ಪ್ರಾಣೇಶ ವಿಠಲ ಗೋಕುಲ ಗೋಪಾಲ |ಪಂಕಜಾಸನ ಜನಕ ಶಕಟಕಾಲಜಾಂಬವತೀಲೋಲ|ಶಂಕರಾದ್ಯಮರರ ಕಳಂಕೆಣಿಸದ ಗರುಡಾಂಕಉರಗಪರ್ಯಂಕ ಸುಖಾತ್ಮ 7
--------------
ಪ್ರಾಣೇಶದಾಸರು
ಚೌತಿಯ ದಿವಸರಂಭೆ : ವಾರಿಜಗಂಧಿನಿ ನೋಡಿತ್ತ ಶ್ರುತಿ-ಮೌರಿರಭಸದಿ ಲಕ್ಷ್ಮೀಕಾಂತಭೂರಿವೈಭವದಿ ಪೊರಟನೆತ್ತ ಯಾವಕಾರಣವೆಂದು ಪೇಳೆಲೆ ಸತ್ಯ 1ದೇವರ ಪೂಜೆಗೋಸುಗ ಬಂದಪಾವನಮೂರ್ತಿಯಾದುದರಿಂದ ನಮ್ಮಕಾವನು ಕರುಣಾಕಟಾಕ್ಷದಿಂದ 2ರಂಭೆ : ನೂತನವಾಯ್ತೆ ಕೇಳಲೆ ಜಾಣೆ ಜಗ-ನ್ನಾಥನಿಗ್ಯಾವ ಕುಲವು ಕಾಣೆರೀತಿಯನರುಹಬೇಕೆಲೆ ಬಾಲೆ ಸರ್ವಚೇತನಾತ್ಮನ ನಾಟಕದ ಲೀಲೆ 3ಕೊಂಡಕಾರಣದಿ ಪೂಜೆಗಳೆಲ್ಲಕಂಡು ಪೊಗಳಲು ಕವಿಗು ಸಲ್ಲ ಇನ್ನುಪುಂಡರೀಕಾಕ್ಷನವನೆ ಬಲ್ಲ 4ರಂಭೆ : ರಾಜವದನೆ ಪೂಜೆಯಾದ ಮೇಲೆ ಅಂ-ಭೋಜನಾಭನು ತಾಕ್ಷ್ರ್ಯನ ಮೇಲೆರಾಜಬೀದಿಯೊಳ್ ಬರುವದೇನೆ ಇಂಥಸೋಜಿಗವೇನು ಪೇಳೆಲೆ ಜಾಣೆ 5ಬಟೆನಿಸ್ಸಾಳರವದಿ ಬರುವ ಚಂದಸಟೆಯಲ್ಲ ಕೇಳು ಕರುಣದಿಂದ ನಮ್ಮಕಟಕರಕ್ಷಿಸಲು ಬರುವ ಗೋವಿಂದ6ರಂಭೆ : ಬಳಿಕ ಪಲ್ಲಂಕಿಯೇರಿದ ಕಾಣೆ ಜನ-ಗಲಭೆಗಳಿಂದ ಪೋಗುವದೇನೆನಲವಿನಿಂದಲಿ ಪೊರಟೆಲ್ಲಿಗೆನೆ ಮಹಾ-ಜಲಜನಾಭನ ಮಹಿಮೆಯ ಜಾಣೆ 7ದೀಪವೆಂದೆನುತ ಭಕ್ತರು ಮುದದಿಶ್ರೀಪರಮಾತ್ಮ ವಿಲಾಸದಿ ಭಕ್ತ-ರಾಪೇಕ್ಷೆಗಳನು ಸಲ್ಲಿಸುವಂದದಿ 8ರಂಭೆ : ಸೋಮಾರ್ಕಜ್ಯೋತಿಹಿಲಾಲುಗಳು ಜನ-ಸ್ತೋಮಜೇನುಂಡೆಬಿರುಸುಮಿಗಿಲುವ್ಯೋಮಕೇಶಗಳ ಪೊಗಳತೀರದು ಸರಿಭೂಮಿಯೊಳ್ ಕಾಣೆನೆಂಬಂತಾದುದು 9ಅಮಮ ಇದೇನೆ ಇಂದಿನ ಲೀಲೆ ಜನ-ರಮರಿಕೊಂಡಿಹರೇನಿದು ಬಾಲೆಸಮವಿಲ್ಲ ಇಂತೀ ವೈಭೋಗಕ್ಕೆಲೆ ನ-ಮ್ಮಮರಾವತಿಗಿಂತಧಿಕ ಬಾಲೆ 10ಲಾರ್ತಿ ಹರಣವಾಗ್ವದು ಜಾಣೆಕೀರ್ತಿತರಂಗಮಾಗಿಹುದೇನೆ ಶೇಷ-ತೀರ್ಥವೆಂದರೆ ಕೇಳಿದು ಪ್ರವೀಣೆ 11ರಂಭೆ :ಏಸುದೊಡ್ಡಿತೆ ಕೇಳಲೆ ಬಾಲೆ ಅನಂ-ತಾಸನದಂತೆ ಮರೆವುದಲ್ಲೇನಾಸಿರ ದೀಪಸೋಪಾನದಲೆ ಮಹಾ-ಶೇಷನಿಹನು ಮಧ್ಯದೊಳಿಲ್ಲೇ 12ಊರ್ವಶಿ :ಕರುಣಾಕರನು ನಮ್ಮೆಲ್ಲರನುನಿತ್ಯಪೊರೆಯಲೋಸುಗ ಬಂದನು ತಾನುಸುರುಚಿರ ಮಂಟಪವೇರಿದನು ಭೂ-ಸುರರಿಂದ ವೇದಘೋಷವ ಕೇಳ್ವನು 13ದೃಷ್ಟಾಂತವಾಗಿ ಪೇಳುವದೇನೆ ಬ್ರಹ್ಮಸೃಷ್ಟಿಗೆ ಪೊಸತಾಗಿಹುದು ಕಾಣೆಕಟ್ಟಿಸಿದವನು ಪುಣ್ಯೋತ್ತಮನು ಪರ-ಮೇಷ್ಠಿ ಜನಕನ ಕೃಪೆಯಿನ್ನೇನು 14ಭಜಕರ ಮುಖದಿಂದೆಲ್ಲ ತಾನು ಭೂ-ಭುಜನಾಗಿ ನಡೆಸುವನಿದನೆಲ್ಲನುನಿಜವಾಗಿನಿತ್ಯಸಾಕಾರವನು ತೋರಿತ್ರಿಜಗವನೆಲ್ಲ ರಕ್ಷಿಸುತಿಹನು 15ರಂಭೆ : ಬಿಡದೆ ಇನ್ನೊಂದು ಕೇಳುವೆ ನಾರಿ ಜಗ-ದೊಡೆಯ ಪೊರಡುವ ಕಾಲದಿ ಭಾರಿಬೆಡಿಖಂಬ ಧ್ವನಿಯು ಇದೇನೆ ಪೇಳೆ ಇಂಥಕಡು ಬೆಡಗನು ಉಸುರೆಲೆ ಬಾಲೆ 16ಊರ್ವಶಿ: ಜನರು ಎಲ್ಯಾದರಂಜಿದÀ ಭಯವ ತಮ್ಮತನುವಿಗೆ ಸೋಂಕಲದನೆಲ್ಲವಮನದಿ ಝುಮ್ಮೆನಿಸಿ ಬೆಚ್ಚೋಡಿಸುವ ಖಂಬ-ಧ್ವನಿಯೆಸಗಿದರು ಕೇಳಿದರಂದವ 17ತಿರುಗಿಯೇರಿದನು ಪಲ್ಲಂಕಿಯಲ್ಲಿ ಸುತ್ತು-ಬರುವನು ವೇದನಿನಾದದಲಿವರರತ್ನ ಖಚಿತ ಮಂಟಪದಲ್ಲಿ ನಿಂತನಿರವದಿ ಸುಖದಾಯಕನಲ್ಲಿ 18ಶರಣರ ಪಾಪ ಮನಕೆ ತಾರ ದುಡಿದವರಭೇರಿಗೆರೆವ ಬಿಸಿನೀರವರಲಕ್ಷ್ಮೀನಾರಾಯಣಧೀರ ಸುರು-ಚಿರ ಸಿಂಹಾಸನವೇರಿದ ವೀರ 19
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ನೋಡಿರೆ ಯಶೋದೆಯ ಪುಣ್ಯಪಡೆದಿಹ್ಯಳೆಂಥ ಮಾನ್ಯ ಪಪೊಡವಿ ಈರೇಳನ್ನು ಒಡಲೊಳಿಟ್ಟವನನ್ನುತೊಡೆಮೇಲಾಡಿಸುವಳು ಅ.ಪವಿಲಸಿತಮಹಿಮನ ಕಳೆಯ ತಿಳಿಯಲು ವೇದಬಲುವಿಧ ಪೊಗಳುತ ನೆಲೆಯುಗಾಣದಘನಕಳವಳಗೊಳುತಿಹ್ಯವಭವನ ದೆಸೆಯಿಂಸುಲಭದೆತ್ತಿ ತನ್ನ ಮೊಲೆಯನುಣಿಸುವಳೀಕೆ 1ಭುಜಗಭೂಷನು ತನ್ನ ನಿಜಪದವನುದಿನಭಜಿಸಿ ಬೇಡಲು ಕಾಣರಜಸುರಮುನಿಗಣಸುಜನಗುಣಾಂತರಂಗ ತ್ರಿಜಗವ್ಯಾಪಕನನಿಜವನು ಮನದಣಿ ಕಂಡು ಹಿಗ್ಗಿದಳೀಕೆ 2ಸೀಮರಹಿತಮಹಿಮ ನಾಮರೂಪಿಲ್ಲದ ನಿಸ್ಸೀಮ ಸುಗುಣಸುಖಧಾಮ ಭೂಮಿಜೆಪತಿಸ್ವಾಮಿ ಶ್ರೀರಾಮನ ವಿಮಲದಾಟದಲಿಭೂಮಿಯೊಳ್ಮಿಗಿಲಾದಾನಂದೊಳಿಹÀಳೀಕೆ 3
--------------
ರಾಮದಾಸರು
ಮಾತೆ ಸರಸ್ವತಿ ಮಂಜುಳ ಮೂರುತಿಚೇತನಾತ್ಮಕಿಭಾರತಿಪ.ಪ್ರೀತಿಯಿಂದೀವುದು ಪೀತಾಂಬರಧರನಸಾತಿಶಯದ ಭಕುತಿ ಅ.ಪ.ಗುರುಹಿರಿಯರ ಕಂಡು ಬಿರುನುಡಿ ನುಡಿಸದೆಕರುಣಿಸೆನಗೆಸನ್ಮತಿಪರಮಪಾವನ ವೈಷ್ಣವರ ಪಾದಾಂಬುಜ ಮಧು-ಕರದಂತಿರಲಿ ಮದ್ರತಿ 1ಶ್ರೀಶನಮೂರ್ತಿತಾರೇಶನಂದದಿ ಹೃದಯಾ-ಕಾಶದೊಳು ಕಾಣುತಿದೂಷಣ ಕಾಮಾದಿ ಕ್ಲೇಶವ ಬಿಡಿಸುತ್ತಗೈಸಮ್ಮ ಹರಿಯ ಸ್ತುತಿ 2ಮನುಜರ ರೂಪದಿ ದನುಜರು ಭೂಮಿಯೊಳ್ಜನಿಸಿದರ್ಜಲಜನೇತ್ರಿಅನಘಲಕ್ಷುಮಿನಾರಾಯಣನ ದಾಸರಿಗೆಲ್ಲಜನನಿಯೆ ನೀನೆಗತಿ3ಭಾರತಿದೇವಿಯ ಸ್ತುತಿ
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ