ಒಟ್ಟು 5 ಕಡೆಗಳಲ್ಲಿ , 4 ದಾಸರು , 5 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಲ ವ್ಯರ್ಥ ಪ ಘನ್ನ ನಿರಯಕೆ ವೈವೋ ಸಾಧನವೋ ಗೋಪಾಲ ಅ.ಪ ಸುರರು ಬಲ್ಲರೈ ಚದುರ ತತ್ವೇಶಗಣ ಬಲ್ಲರಯ್ಯಾ ವಿಧಿಪಿತನೆ ನಿನ್ನ ಬಿಟ್ಟನ್ಯತ್ರ ಮನವಿರಲು ನಿಧನ ನೋವಿಗೆ ಮಿಗಿಲು ಪದುಮ ಮುಕ್ತರು ಸಾಕ್ಷಿ1 ಬಂಧಿಸಲು ನೀ ನಮ್ಮ ಬಿಡಿಸಿಕೊಂಬುವರುಂಟೆ ಅಂಧತಮಸಿನ ಭೋಗದಿಂದಾಹುದೊ ಸಿಂಧು ಚಿನ್ಮಯ ಕಾಯ ತಂದೆ ನಿನ್ನಯ ಕರುಣ ಉಂಬುವನೆ ಬಹುಧನ್ಯ 2 ಗೋ ಗೊಲ್ಲರಲಿ ಕರುಣ ಸುರಿದ ದೀನ ಬಂಧು ಭಾಗ್ಯಪಾಲಿಸು ಭಕ್ತಿಯೋಗವಿತ್ತು ರೋಗದಲಿ ಬಲು ನೊಂದೆ ಭಯವನ್ನು ಹೀರುವುದು ನಾಗತಲ್ಪ ಜಯೇಶವಿಠಲನೆ ಉದ್ಧರಿಸು 3
--------------
ಜಯೇಶವಿಠಲ
ತಿರುಪೆಗಾರರಯ್ಯಾ ನಾವು ತಿಳಿದುಕೊಳ್ಳಿರೀ ಜೀಯಾ ನೀವು ಪ ತಿರುಪೆಗಾರರನು ತಿರಸ್ಕರಿಸದಿರಿ ತಿರುಪಿಲ್ಲದಿದ್ದರೆ ತೀರಹುದು ಅ.ಪ ತಿರುಪಿಲ್ಲವೇ ಧಗಡಿ ತಿರುಪು ವಡವೆಗಳು | ತಿರುಪುಹೂಜಿಗಳು ತಿರುಪು ಭರಣಿಗಳು | ತಿರುಪು ರಕ್ಷಣಿಯು 1 ವಾಲೆ ಏನಾಯಿತು ಅರಿತು ನೋಡದೇ ಮೂರ್ಖರಾಗದಿರೀ 2 ಗೊಣಗಬೇಡಿರಿ ನೀವೂ ಹಣವು ನಿಮಗು ನಮಗುಂಟು ವಿಚಾರಿಸೆ ಹಣವಿಲ್ಲದ ನರ ಹೆಣಕಿಂತ ಕಡಿಮೆ 3 ರಾಶಿಯೊಳೊಂದು ಹಿಡಿ | ತೆಗೆಯಲು ಹ್ರಾಸವೇನೋ ನೋಡಿ ಮೋಸವೆ ಬರುವುದು ಓಸುಜನರೇ ಕೇಳಿ 4 ನಿಮ್ಮ ದೊರೆಗಾಳು ನಮ್ಮ ಗುರುವಲ್ಲವೇ ನಿಮಗೆ ನಾವಾಳಾದರೂ ದಯೆಯಿಲ್ಲವೇ 5 ಧೀರನು ಬಹುಬಲ್ಲ ಭೋಗದಿಂದಲೆ ರೋಗ ಬರುವುದು ತ್ಯಾಗದಿಂದಲೆ ಯೋಗ ಒದಗುವುದು6 ಸತಿಗೆ ಒಡವೆಯಿಟ್ಟು | ಕಳೆಯಲು ಹಿತವೇ ನಿಮಗಷ್ಟು ಅತಿಶಯ ಭೋಗಗಳಪೇಕ್ಷಿಸುವಿರೈ 7 ಮರವೆಯೆ ಅತಿ ಕಷ್ಟ ಮರವೆಯೆ ದುಃಖವು ಮರವೆಯೆ ನರಕವು ಹರಿ ಕೃಪೆಪಡೆದು ಅರಿವು ಸಂಪಾದಿಸಿ 8 ತಿರುಕನು ಈಶ್ವರನೂ | ಇಂದ್ರಗಾಗಿ ತಿರುಪುಹಾಕಿರುವ ತ್ರಿಲೋಕಗಳಿಗೂ9
--------------
ಗುರುರಾಮವಿಠಲ
ನೋಡಿ ನಾ ಧನ್ಯನಾದೆನೊ ತೋತಾದ್ರೀಶನ ನೋಡಿ ಧನ್ಯನಾದೆ ನಾಡೊಳು ತನಗೆಲ್ಲಿ ಈಡಿಲ್ಲೆನಿಸುವನ ನೋಡಿ ಧನ್ಯನಾದೆನೊ ಪ ಆರೊ ಮಹಾರೂಪ ಬಂದು ಏಕಾಂತದಲ್ಲಿ ಆರಾಧಿಸಿದಾತನಂದು ಭಕುತಿ ಬಿಡದೆ ವಾರವಾರಕ್ಕೆ ಗತಿಯೆಂದು ಈ ರೀತಿಯಲ್ಲಿ ಇರೆ ತೋರಿದ ಕರುಣ ನಿನ್ನಾ 1 ಭಕುತನ್ನ ತಪಸಿಗೊಲಿದು ವೇಗದಿಂದಲಿ ಲಕುಮಿ ರಮಣ ಸುಳಿದು ಬೇಡಿದಂಥಾ ಧಿಕವಿತ್ತು ರೋಷವಳಿದು ಸುಖದ ಭಾರತ ಪೇಳೊ ದಕ್ಕೆ ಮುನಿ ಮಾಡಿದ ದಾನಾ 2 ಧರಿಗೆ ದಕ್ಷಿಣ ದಿಕ್ಕಿಲಿ ಮಾಹೇಂದ್ರಿ ಮಹಿ ಧರನ ಸಮೀಪದಲ್ಲಿ ಪ್ರತಿದಿನ ಮೆರೆವ ವೈಭೋಗದಿಂದಲಿ ಕರುಣಿ ವಿಜಯವಿಠ್ಠಲ ವರಧೇನು ಎನಿಸುವನಾ3
--------------
ವಿಜಯದಾಸ
ಸಿಂಗನಾ ಏರಿದ ನರಸಿಂಗ ತೋಮರವ ಪಿಡಿದು | ರಂಗ ವೈಭೋಗದಿಂದ | ನಲಿದು ಚತು | ರಂಗ ಬೀದಿಯೊಳು ಮೆರೆದಾ ಪ ಮುತ್ತಿನ ಕಿರೀಟ ಮೇಲೆ ಎತ್ತಿದ ಸತ್ತಿಗೆ ಪೊಳೆಯ | ವಾಹನ ರಥ | ಹತ್ತಿ ಬರುವ ಪುರದ ಜನಗಳು 1 ಸನಕಸನಂದನ ಸನತ್ಸುಜಾತ ಸನತ್ಕುಮಾರ | ಮುನಿವರರು ವೇದ ಘೋಷಣೆ ಉಚ್ಚರಿಸುತ್ತ | ಅನಿಮಿಷರಾಗಿ ಇಚ್ಚೈಸುತಾ 2 ಗಂಧರ್ವಾದಿ ಗಾಯನಾ ನಾರಂದನು ಪಾಡುತ್ತ ಬರೆ | ಎಂದು ತುಂಬರನು ಹಾಡಿ ಪಾಡುತಾ 3 ವೇಶ್ಯ ಜನರು ರಂಭೆ ಊರ್ವಶಿ ಪಾತ್ರ ಮಾಡುತಿರೆ | ದಾಸಾನುದಾಸರು ಪಾಡುತಾ | ಸಲಹೊ ಶ್ರೀನಿ ವಾಸನೆಂದು ಬೇಡಿಕೊಳುತಾ 4 ಮಂಗಳಪಾಂಗ ಸಾಂಗೋಪಾಂಗದಿಂದ ಒಪ್ಪೆ ಅಲಮೇ ವೆಂಗಳೇಶ ಶ್ರೀ ವೆಂಕಟೇಶಾ 5
--------------
ವಿಜಯದಾಸ
ಮಲವು ತೊಳೆಯಬಲ್ಲುದೆಮನವ ತೊಳೆಯದನಕ ಪಹಲುವು ನೀರಿನೊಳಗೆ ಪೊಕ್ಕುಹಲುಬಿದರಿನ್ನೇನು ಫಲ? ಅಪಬೋಗಫಲವನುಂಡು ವಿಷಯ ಭೋಗದಿಂದ ಮತ್ತರಾಗಿಭೋಗಬೇಡಿ ಜನರು ಜೀವಕಾಗಿ ಮುನಿವರುಯೋಗಿಯಂತೆ ಜನರ ಮೆಚ್ಚುಗಾಗಿ ಹೋಗಿ ಉದಯದಲ್ಲಿಕಾಗೆಯಂತೆ ಮುಳುಗಿದರೆ ಅಮೋಘ ಫಲವು ಬಾಹೊದೆ? 1ಪರರ ಕೇಡಬಯಸಿಗುರು - ಹಿರಿಯರನ್ನು ನಿಂದಿಸುತಪರಮ ಸೌಖ್ಯದಿಂದ ಪರಸ್ತ್ರೀಯರನ್ನ ಆಳುತಪರಮಯೋಗನಿಷ್ಟೆಯೆಂದು ಧರೆಯ ಮೇಲೆ ಡಂಭತೋರಿಹರಿವ ನದಿಯ ತೀರದಲ್ಲಿ ಪರಿಯು ಬಕ ಧ್ಯಾನದಂಥ 2ತಂದೆ - ತಾಯಿ ತಿರುತಿನ್ನಲು ಒಂದು ದಿವಸ ಕೇಳಲಿಲ್ಲಮಂದಗಮನೆಯರೊಡನೆ ಆನಂದದಿಂದ ನಲಿಯುತತಂದೆಯ ಹೆಸರಿನಿಂದ ನೂರು ಮಂದಿಗುಣಿಸಿ ಹರುಷದಿಂದತಂದೆ ತೃಪ್ತನಾದನೆಂಬ ಮಂದಮತಿಯ ಜನರುಗಳ 3ಕಾಸವೀಸಕ್ಕಾಗಿ ಹರಿಯದಾಸನೆಂದು ತಿರುಗಿ ತಿರುಗಿದೇಶದಿಂದ ದೇಶಕಿಳಿದು ಕಾಶಿಯಾತ್ರೆ ಮಾಡಲುಆಶಾಪಾಶ ಬಿಡದ ಮನದ ಕೂಸಿನಂತೆ ಕಾಡುತಿಪ್ಪವೇಶಧಾರಿಗಳಿಗೆ ಆ ಕಾಶಿಯ ಫಲ ಬಾಹೊದೆ? 4ಏನು ಮಾಡಲೇನು ಫಲ - ಏನು ನೋಡಲೇನು ಫಲಜ್ಞಾನವಿಲ್ಲದಚ್ಯುತನ ಧ್ಯಾನವಿಲ್ಲದವರಿಗೆಮೌನ ನೇಮ ನಿಷ್ಠೆ ಪರಾಧೀನವೆಂಬುದ ತಿಳಿದುಕೊಂಡುದೀನನಾಥ ಪುರಂದರವಿಠಲನ ನಿಲುಕಲೊಲ್ಲದೆ 5
--------------
ಪುರಂದರದಾಸರು