ಇಂಥ ಜನಗಳಿಗೆ ಎಂಥಾದ್ದು ಹರಿಕಥೆ
ಕುಂತಿಮಕ್ಕಳಿಗಾಯ್ತು ಕಾಂತಾರವಾಸಪ.
ಸ್ವಂತ ಧರ್ಮವ ಬಿಟ್ಟು ಆಂತನ್ಯಧರ್ಮವ
ಸಂತಾಪಕ್ಕೊಳಗಾಗಿ ಭ್ರಾಂತಿಪಟ್ಟಿಹರು1
ಜೀವಿಸಿ ಮೃಗದಂತೆ ಸಾವನು ಬಗೆಯದೆ
ಕೇವಲ ತಾಮಸ ಯಾವಜ್ಜೀವನವು2
ಸರಕಾರದ ಭಯ ಸರ್ವರಿಗಿದ್ದರು
ಸರಿಯಾಗಿ ನಡೆಯದೆ ಬರಿದೆ ಬಳಲುವರು3
ಬಡವರ ಬಾಯನು ಹೊಡೆದು ತಂದು ತನ್ನ
ಮಡದಿಮಕ್ಕಳಿಗುಣಬಡಿಸಿ ಮೆರೆವರೈ4
ಲಕ್ಷ್ಮೀನಾರಾಯಣನ ಲಕ್ಷಣಾಂಕಿತರನ್ನು
ಲಕ್ಷ್ಯಕ್ಕೆ ತಾರದ ಕುಕ್ಷಿಂಭರರು5