ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಂಗಳಂ ಶ್ರೀ ಗುರುವರ್ಯರಿಗೆ | ಮಂಗಳಾಂಗರಿಗೆ ಮಂಗಳಂ ಶ್ರೀ ಗುರುವರ್ಯರಿಗೆ ಪ. ರಂಗನಾಥನ ಪದ ಸರೋಜಕೆ ಭೃಂಗರೆನಿಸಿ ಮೆರೆಯುವರಿಗೆ ಅ.ಪ. ತಂದೆ ಮುದ್ದುಮೋಹನರೆಂ ತೆಂದು ಮೆರೆಯುತ ಮಂದಮತಿಯ ಬಿಡಿಸಿ ಎನ್ನ ತಂದೆಯಂತೆ ಪೊರೆಯುವರಿಗೆ 1 ನಾಗಶಯನ ಹರಿಯ ಭಜಿಪ ಭೋಗಿವರರಿಗೆ ಭಾಗವತರ ಸಂಘದೊಳಗೆ ಯೋಗಿಯಾಗಿ ಚರಿಸುವರಿಗೆ 2 ಪರಮಪ್ರಿಯರಾಗಿ ಹರಿಗೆ ಪರಮಪ್ರಿಯರೆಂದು ಕರೆಸಿಕೊಳುತ ನರಹರಿಯ ಚರಣ ಮನದಿ ಸ್ಮರಿಸುವರಿಗೆ 3 ಕರ್ಮಗಳನೆ ಕಡಿದು ಜ್ಞಾನ ಧರ್ಮಮಾರ್ಗದಿ ಧರ್ಮತತ್ವ ಬೋಧಿಸಿ ಅ- ಧರ್ಮಗಳನೆ ಬಿಡಿಸುವರಿಗೆ4 ಗೋಪಾಲಕೃಷ್ಣವಿಠ್ಠಲನ ರೂಪ ತೋರುತ ಪಾಪಗಳನೆ ತರಿದು ಭವ ಕೂಪದಿಂದ ಪೊರೆಯುವರಿಗೆ 5
--------------
ಅಂಬಾಬಾಯಿ