ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಾಸುದೇವ ನಿನ್ನ ಮರ್ಮಕರ್ಮಂಗಳದೇಶದೇಶದಲ್ಲಿ ಪ್ರಕಟಿಸಲೊ ಪ ಬೇಸರದೆ ಎನ್ನ ಹೃದಯಕಮಲದಲ್ಲಿ ವಾಸವಾಗಿ ಸುಮ್ಮನಿದ್ದೀಯೊ ಅ.ಪ. ತರಳತನದಲಿದ್ದು ದುರುಳನಾಗಿ ಬಂದುಒರಳಿಗೆ ಕಟ್ಟಿಸಿಕೊಂಡುದನುತುರುವ ಕಾಯಲಿ ಹೋಗಿ ಕಲ್ಲಿಯೋಗರವನುಗೊಲ್ಲರ ಕೂಡೆ ನೀ ಉಂಡುದನುನೆರೆಮನೆ ಹೊರಮನೆಗಳ ಪೊಕ್ಕು ಬೆಣ್ಣೆಯಅರಿಯದಂತೆ ಕದ್ದು ಮೆದ್ದುದನುಕೇಳಿಸಿದೆಯಾದರೆ ಒದರುವೆ ಎಲೊ ನರ -ಹರಿ ಎನ್ನ ಬಾಯಿಗೆ ಬಂದುದನು 1 ಕಟ್ಟಿ ಕರೆವ ಏಳುದಿನದ ಮಳೆಗೆ ಪೋಗಿಬೆಟ್ಟವ ಪೊತ್ತದ್ದು ಹೇಳಲೊಅಟ್ಟಿಸಿಕೊಳ್ಳುತ ಯಾಗಶಾಲೆಗೆ ಪೋಗಿಹೊಟ್ಟೆಯ ಹೊರೆದದ್ದು ಹೇಳಲೊದುಷ್ಟ ಹಾವಿನ ಹೆಡೆಯನು ತುಳಿದಾಡಿದದುಷ್ಟತನವನು ಹೇಳಲೊನೆಟ್ಟುನೆ ಅಂಬರಕೆತ್ತಿದನ ಹೊಯ್ದುಹಿಟ್ಟುಕಟ್ಟಿಟ್ಟುದ ಹೇಳಲೊ 2 ಪಿಡಿಯವಲಿಗೆ ಮೆಚ್ಚಿ ಸಂಪದವನು ಕೊಟ್ಟಬೆಡಗತನವನಿಲ್ಲಿ ಹೇಳಲೊಹಿಡಿಯ ಬಂದ ಕಾಲಯವನಿಗಂಜಿ ಕಲ್ಲಪಡೆಯ ಹೊದ್ದುದ ಹೇಳಲೊಮಡಿದ ಮಗನ ಗುರುವಿಗೆ ಕೊಡಬೇಕೆಂಬಸಡಗರತನವಿಲ್ಲಿ ಹೇಳೆಲೊಮಡದಿ ಮಾತಿಗೆ ಪೋಗಿ ನೀ ಪಾರಿಜಾತವತಡೆಯದೆ ತಂದದ್ದು ಹೇಳಲೊ 3 ಮೌನಗೌರಿಯ ನೋಡ ಬಂದ ಹೆಂಗಳನ್ನೆಲ್ಲಮಾನವ ಕೊಂಡದ್ದು ಹೇಳಲೊತಾನಾಗಿ ಮೊಲೆಯನೂಡಿಸ ಬಂದವಳನ್ನುಪ್ರಾಣವ ಕೊಂಡದ್ದು ಹೇಳಲೊಕಾನನದೊಳು ತುರುವಿಂಡುಗಳನು ಕಾಯ್ದಹೀನತನವನಿಲ್ಲಿ ಹೇಳಲೊಮಾನಿನಿಯರ ಮನೆಗಳ ಪೊಕ್ಕು ಬೆಣ್ಣೆಯಹಾನಿಯ ಮಾಡಿದ್ದು ಹೇಳಲೊ 4 ಧರಣಿಮಗನ ಕೊಂದು ತರುಣಿಯರನುದುರುಳತನವನಿಲ್ಲಿ ಹೇಳಲೊಜರೆಯ ಮಗನಿಗಂಜಿ ಪುರವ ಬಿಟ್ಟು ಹೋಗಿಶರಧಿಯ ಪೊಕ್ಕದ್ದು ಹೇಳಲೊಧರೆಯೊಳಧಿಕ ಶ್ರೀರಂಗಪಟ್ಟಣದಲ್ಲಿಸ್ಥಿರವಾಗಿ ನಿಂತದ್ದು ಹೇಳಲೊಶರಣಾಗತರ ಕಾವ ರಂಗವಿಠಲನ್ನಪರಮ ದಯಾಳೆಂದು ಹೇಳಲೊ 5
--------------
ಶ್ರೀಪಾದರಾಜರು