ಒಟ್ಟು 15 ಕಡೆಗಳಲ್ಲಿ , 9 ದಾಸರು , 13 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀ ಗಣಪತಿಗೆ ವಂದಿಸಿ ಕೆಳದಿಯ ಪುರದಭೋಗಮಂದಿರ ರಾಮೇಶ್ವರನ ರಂಭೋಗಮಂದಿರ ರಾಮೇಶ್ವರನ ಸನ್ನುತಿಸುತರಾಗದಿ ಪಾಡಿ ಪೊಗಳುವೆ ರಂ1 ವಾಣಿ ಪುಸ್ತಕ ವೀಣಾಪಾಣಿ ಪನ್ನಗನಿಭವೇಣಿ ಕಲ್ಯಾಣಿ ಶುಕ ರಂ-ವಾಣಿ ಶುಕವಾಣಿ ಬೊಮ್ಮನರಾಣಿ ಸನ್ಮತಿಯ ಕರುಣಿಸು ರಂ 2 ಧೃವ ಅಟ್ಠ ರೂಪಕ ಏಕತಾಳವು ಝಂಪೆತ್ರಿವಡೆ ತಾಳಗಳೊಡಂಬಡಲು ರಂ-ತ್ರಿವಡೆ ತಾಳಗಳೊಡಂಬಡೆ ಹೊಸ ಹರೆಯದಯುವತಿಯರೊಲಿದು ಹಾಡಿದರು ರಂ 3 ಗಂಗಾಧರ ಜಯ ಗೌರೀಪ್ರಿಯ ಜಯಅಂಗಜಹರ ಜಯವೆನುತ ರಂ-ಜಯವೆನುತಲಂಗನೆಯರುಪೊಂಗೋಲ ಪೊಯಿದು ಪಾಡಿದರು ರಂ 4 ಕಪ್ಪುಗೊರಳ ಜಯ ಸರ್ಪಭೂಷಣ ಜಯಮುಪ್ಪುರವನು ಜಯಿಸಿದವನೆ ರಂ-ಜಯಿಸಿದನೆ ಜಯವೆಂದುಒಪ್ಪದೆ ಪಾಡುತಾಡಿದರೆ ರಂ5 ದಿಮಿದಿಮಿ ದಿಮಿಕೀಟ ತಕಕಿಟನ ಕಕಿಟಕ್ರಮದಿ ನರ್ತಿಸುತಬಲೆಯರು ರಂ-ಅಬಲೆಯರು ಚಿನ್ನದ ಕೋಲಪ್ರಮುದದೊಳಾಡುತೊಪ್ಪಿದರು ರಂ6 ಅಚ್ಚ ಮುತ್ತಿನ ನಿಚ್ಚಳ ಸುಲಿಪಲ್ಲಒಚ್ಚೇರೆಗಣ್ಣು ಬಾಲೆಯರು ರಂ-ಬಾಲೆಯರು ಸಂಭ್ರಮದಿ ಮೈಮೆಚ್ಚುತ ಕೋಲನಾಡಿದರು ರಂ 7 ಭೃಂಗ ಕುಂತಳದ ಮತಂಗಜ ಗಮನದರಂಗುದುಟಿಯ ರಮಣೆಯರು ರಂರಮಣಿಯರು ಸೊಬಗನಾಂತುಹೆಂಗಳು ಪಾಡುತೊಪ್ಪಿದರು ರಂ8 ಜಲಜಗಂಧದ ನಳಿತೋಳ್ಗಳ ರಿಂಕಿದನೆಲೆಮೊಲೆಗಳ ತುಂಬಿಗುರುಳ ರಂಕರುಳ ಪದ್ಮಿನಿಯರುಚಳಕದಿ ಪಾಡುತಾಡಿದರು ರಂ9 ಪೊಂಬೊಗರಿಯ ತೆರದಿ ತುಂಬಿದ ಕುಚಗಳಬಿಂಬಾಧರದ ಕಂಬುಗಳದ ರಂಬಿಂಬಾಧರದ ಕಂಬುಗಳದ ಪದ್ಮಿನಿಯರುಸಂಭ್ರಮದಿಂದ ಪಾಡಿದರು10 ತೆಳುವಸುರಿನ ಕೊಬ್ಬಿದ ಕುಚಯುಗಳದಕಲಹಂಸಗತಿಯ ಮೋಹನದ ರಂಮೋಹನದ ಚಿತ್ತಿನಿಯರುಒಲಪಿನಂ ಪಾಡುತಾಡಿದರು ರಂ11 ಚಿನ್ನದ ಲತೆಯಂತೆ ಚೆನ್ನಾಗಿ ಬಳುಕುವಸನ್ನುತಾಂಗದ ಶಂಖರವದ ರಂರವದ ಶಂಖಿನಿಯರುಚೆನ್ನಾಗಿ ಪಾಡುತಾಡಿದರು ರಂ 12 ಅಪಳ್ಗಣ್ಣ ಮಂದಗತಿಯ ಮದಗಂಧದಶರೀರದ ಕೊಬ್ಬಿದ ಕೊರಳ ರಂಕೊರಳಿನ ಹಸ್ತಿನಿ(ಯರು)ತರುಣಿಯರೊಲಿದು ಪಾಡಿದರು ರಂ 13 ಸಿರಿಮೊಗದೊಳು ಬೆಮರೊಗೆಯೆ ಮೇಲುದುಜಾರೆ ಕರದ ಕಂಕಣ ಝಣರೆನಲು ರಂಕರದ ಕಂಕಣ ಝಣಝಣಝಣಝಣರೆನೆತರಳೆಯರ್ಪಾಡುತಾಡಿದರು ರಂ14 ದುಂಡುಮುತ್ತಿನ ಹಾರವಲುಗಲು ವಜ್ರದಕುಂಡಲಗಳು ನರ್ತಿಸಲು ರಂನರ್ತಿಸಲಂಗನೆಯರತಂಡ ಸಂಭ್ರಮದೊಳಾಡಿದರು ರಂ 15 ಕರುಣಸಾಗರ ಜಯ ಕರಿಚರ್ಮಾಂಬರ ಜಯವರದ ರಾಮೇಶ ಜಯವೆಂದು ರಂ-ವರದ ರಾಮೇಶ್ವರ ಪಾರ್ವತಿ ಜಯವೆಂದುಹರುಷದಿ ಕೋಲನಾಡಿದರು 16
--------------
ಕೆಳದಿ ವೆಂಕಣ್ಣ ಕವಿ
ಆರುತಿ ಮಾಡಿದೆವೆ ನಾರಿಯಮಣಿಯರು ಪ ಚಾರು ಪುಸ್ತಕದಿಭೂರಿ ಶೋಭಿಪ ಪರಾಶರ ತನುಜಗೆ ಅ.ಪ. ಚಿತ್ರ ಮಂಟಪದೊಳು ಮುತ್ತಿನಂದದಿ ಕೂತುಭಕ್ತ ಪೂಜಿತನಾಗಿ ಭಾಗ್ಯವ ತತ್ವ ಪೇಳಿದವಗೆ 1 ಅಖಿಳ ದುರ್ವಾದಿ ವಿಜಯಗೆ2 ಭಾರತ ಮುಖ ಬಹುಸಾರ ಶಾಸ್ತ್ರವ ಮಾಡಿಧಾರುಣಿಯೊಳು ಮುಕ್ತಿದಾರಿ ತೋರಿದವಗೆ 3 ನಾರದ ಶುಕಪೈ ಸೇರಿ ವೈಶಂಪಾಯನದ್ವಾರಪಾಲಕರಿಂದ ನಿರುತ ಪೂಜಿತಗೆ 4 ವಾಸವೀ ತನುಜಾ ವ್ಯಾಸನ ಸ್ತುತಿಸಿದಾಭಾಷಿ ಭಾಷಿಗೆ ಇಂದಿರೇಶ ಪಾಲಿಸುವನು 5
--------------
ಇಂದಿರೇಶರು
ಉಡಿಯ ತುಂಬಿರೆ ಕಡಲೊಡೆಯನ ಮಡದಿಗ್ಹರುಷದಿ ಪ ಬಿಡಿಯ ಮುತ್ತು ಬಿಗಿದ ತಟ್ಟೆಯ ಪಿಡಿದು ಬೇಗದಿಅ.ಪ ಅಚ್ಚ ಜರಿಪೀತಾಂಬ್ರನುಟ್ಟ ಅಚ್ಚುತನರಸಿಗೆ ಹೆಚ್ಚಿನ ಆಭರಣ ಧರಿಸಿ ಮೆರೆವ ದೇವಿಗೆ ಅಚ್ಚುತನ ವಕ್ಷಸ್ಥಳದಿ ವಾಸಿಪ ಲಕುಮಿಗೆ ಅಚ್ಚಮುತ್ತು ಅರಿಶಿನಡಿಕೆ ಉತ್ತತ್ತಿ ಫಲಗಳು 1 ಕದಳಿ ಫಲಗಳಿಂ ಅಂಬುಜಾಕ್ಷನರಸಿಗೆ ದಾಳಿಂಬೆ ತೆಂಗು ಸಹಿತದಿ ಅಂಬುಧಿಯೊಳು ಜನಿಸಿದ ಮುಕುಂದನರಸಿಗೆ ಅಂಬುಜಾಕ್ಷಿಯರೆಲ್ಲ ನೆರೆದು ಸಂಭ್ರಮಪಡುತಲಿ2 ಮಾದಳದ ಫಲವು ಮಾವು ಪನೆÀ್ನರಿಲ ಫಲಗಳ ಮಾಧವನ ಮಡದಿಗೀಗ ಮಾನಿನಿಮಣಿಯರು ಕ್ರೋಧಿನಾಮ ಸಂವತ್ಸರದಿ ಸಾಧು ಜನಗಳ ಆದರಿಸಿ ಕಾವ ಕಮಲನಾಭ ವಿಠ್ಠಲನರಸಿಗೆ 3
--------------
ನಿಡಗುರುಕಿ ಜೀವೂಬಾಯಿ
ಒಂದು ದಿನದಲಿ ಇಂದಿರೇಶನು ಚಂದದಿಂದಲಿ ವನಕೆ ಬಂದನು ಸುಂದರಾಂಗನು ಗೋಪ ವೃಂದದಿ ನಿಂದು ಕೊಳಲನು ಸ್ವರವಗೈದನು 1 ಕೊಳಲ ಧ್ವನಿಯನು ಕೇಳುತಾಕ್ಷಣ ಖಗಮೃಗಂಗಳು ಮಯ್ಯ ಮರತವು ತರುಣಿ ಮಣಿಯರು ಮನೆಯ ಕೆಲಸಕೆ ಮರತು ಮಯ್ಯನು ತೆರಳಿ ಬಂದರು 2 ಕೊಳಲ ಧ್ವನಿಯನು ಕೇಳಿ ಗೋಪೇರು ನಳಿನನಾಭನ ಬಳಿಗೆ ಬಂದರು ನಳಿನಮುಖಿಯರ ನೋಡಿ ಕೃಷ್ಣನು ಮುಗುಳುನಗೆಯಲಿ ಮಾತನಾಡಿದನು 3 ನಾರಿಮಣಿಯರೆ ರಾತ್ರಿ ವೇಳೆಯು ಈಗ ಇಲ್ಲಿಗೆ ಬಂದಿರೇತಕೆ ಮಾರನಯ್ಯನ ಮಾತುಕೇಳುತ ಮಡದಿ ಮಣಿಯರು ನುಡಿದರಾಗಲೆ4 ಬಾಲಕೃಷ್ಣನೆ ನಿನ್ನ ಕೊಳಲಿನ ಈಗಲೆಮ್ಮಯ ಮನವು ಹರುಷಿಸೆ ಬೇಗ ನಿನ್ನನು ಬೇಡಿಕೊಂಬೆವೊ 5 ಇಂತು ಕೃಷ್ಣನು ಸರಸವಾಡುತ ನಿಂತನವರಿಗೆ ಹರುಷ ತೋರುತ ಚಿಂತೆಯೆಲ್ಲವ ಬಿಟ್ಟು ಗೋಪೇರು ಅಂತರಾತ್ಮನ ಭಜಿಸುತಿದ್ದರು 6 ಏನು ಪುಣ್ಯವೊ ನಮ್ಮದೆನುತಲಿ ದಾನವಾರಿಯ ಸ್ಮರಿಸುತಿದ್ದರು ನಾರೇರೆಲ್ಲರ ನೋಡಿ ಕೃಷ್ಣನು ಬೇಗದಿಂದಲಿ ಅಂತರ್ಧಾನನಾದನು 7 ಸ್ಮರನ ಪಿತನನು ಸ್ಮರಿಸಿಪಾಡುವ ತರುಣಿಯರಿಗೆ ಮೈ ಸ್ಮರಣೆ ಮರೆತಿರೆ ಭರದಿ ಕಂಗಳ ತೆರೆದು ನೋಡಲು ಮುರಳೀಧರನ ಕಾಣದಲೆ ಚಿಂತಿಸಿ 8 ಜಾಜಿ ಸಂಪಿಗೆ ಸೂಜಿ ಮಲ್ಲಿಗೆ ರಾಜೀವಾಕ್ಷನ ಕಾಣಲಿಲ್ಲವೆ ಬಿಳಿಯ ಮಲ್ಲಿಗೆ ಎಳೆಯ ತುಳಸಿಯೆ ನಳಿನನಾಭನ ಸುಳಿವು ಕಾಣಿರಾ 9 ಸರಸದಿಂದಲಿ ಹರಿವ ಯಮುನೆಯೆ ಪಾದ ಕಾಣೆಯಾ ಚಿಗರಿ ಮರಿಗಳೆ ನಿಮ್ಮ ಕಂಗಳು ನಳಿನನಾಭನ ಸುಳವು ಕಾಣವೆ 10 ಯಾರ ಕೇಳಲು ಹರಿಯ ಕಾಣರು ನಾರಿಮಣಿಯರೆ ನಾವೆ ಕರೆಯುವ ಮುದ್ದು ಕೃಷ್ಣನೆ ಪದ್ಮನಾಭನೆ ಶ್ರದ್ಧೆಯಿಂದಲಿ ನಿಮ್ಮ ಭಜಿಪೆವೊ 11 ಜಯತು ಜಯತು ಶ್ರೀ ಲಕ್ಷ್ಮೀ ರಮಣನೆ ಜಯತು ಜಯತು ಶ್ರೀ ಗರುಡಗಮನನೆ ಜಯತು ಜಯತು ಶ್ರೀ ಉರಗಶಯನನೆ ಜಯತು ಜಯತು ಶ್ರೀ ಪರಮ ಪುರುಷನೆ 12 ಜಯತು ಜಾಹ್ನವಿಜನಕÀ ಶ್ರೀಶನೆ ಜಯತು ಭಕ್ತರ ಭಯವಿನಾಶನೆ ಜಯತು ಪಾವನ ಪುಣ್ಯ ಚರಿತನೆ ಜಯತು ಜಯತು ಲಾವಣ್ಯರೂಪನೆ 13 ಎಳೆಯ ಚಿಗುರಿನಂತಿರುವ ಪಾದವು ರುಳಿಯ ಗೆಜ್ಜೆಯು ಕಾಲಪೆಂಡೆಯು ಎಳೆಯ ಪಾದದಿ ಹೊಳೆವ ಪೈಜನಿ ಘಲಿರು ಘಲಿರು ಎಂದೆನುತ ಮೆರೆವುದು 14 ಪುಟ್ಟ ನಡುವಿಗೆ ಪಟ್ಟೆ ಮಡಿಗಳು ಇಟ್ಟ ಚಲ್ಲಣ ಪುಟ್ಟ ಕೃಷ್ಣಗೆ ಉಡುಗೆಜ್ಜೆಯು ಗಂಟೆ ಸರಪಳಿ ಒಪ್ಪಿ ಮೆರೆಯುವ ಕಾಂಚಿಧಾಮವು 15 ಚತುರ ಹಸ್ತದಿ ಶಂಖುಚಕ್ರವು ಗದೆಯು ಪದುಮವು ಹೊಳೆಯುತಿರುವುದು ಕಡಗ ಕಂಕಣ ತೋಳ ಬಾಪುರಿ ವಜ್ರದೊಂಕಿಯು ಮೆರೆಯುತಿರುವುದು 16 ಕೌಸ್ತುಭ ವೈಜಯಂತಿಯು ಸುರಗಿ ಸಂಪಿಗೆ ಸರಗಳೊಲಿಯುತ ಎಳೆಯ ತುಳಸಿಯ ಸರಗಳೊಪ್ಪುತ ಜರದವಲ್ಲಿಯು ಜಾರಿ ಬೀಳಲು 17 ವÀಕ್ಷ ಸ್ಥಳದಿ ಶ್ರೀಲಕ್ಷ್ಮಿ ಒಪ್ಪಿರೆ ರತ್ನ ಪದಕಗಳೆಲ್ಲ ಶೋಭಿಸೆ ಮಕರ ಕುಂಡಲ ರತ್ನದ್ಹಾರಗಳಿಂದ ಒಪ್ಪಿರೆ 18 ಗುರುಳು ಕೂದಲು ಹೊಳೆವೊ ಫಣೆಯಲಿ ತಿಲುಕ ಕಸ್ತೂರಿ ಶೋಭಿಸುತ್ತಿರೆ ಎಳೆಯ ಚಂದ್ರನ ಪೋಲ್ವ ಮುಖದಲಿ ಮುಗುಳು ನಗೆಯು ಬಾಯ್ದಂತ ಪಂಕ್ತಿಯು 19 ಪದ್ಮನೇತ್ರಗಳಿಂದ ಒಪ್ಪುತ ಪದ್ಮ ಕರದಲಿ ಪಿಡಿದು ತಿರುವುತ ಪದ್ಮಲೋಚನೆಯನ್ನು ನೋಡುತ ಪದ್ಮನಾಭನು ಕೊಳಲನೂದುತ 20 ರತ್ನ ಮುತ್ತಿನ ಕಿರೀಟ ಶಿರದಲಿ ಮತ್ತೆ ನವಿಲಿನ ಗರಿಗಳೊಪ್ಪಿರೆ ಹಸ್ತಿ ವರದನು ಎತ್ತಿ ಸ್ವರವನು ಮತ್ತೆ ಕೊಳಲನು ಊದೊ ದೇವನೆ 21 ಸುಂದರಾಂಗನೆ ಮಂದಹಾಸನೆ ಮಂದರೋದ್ಧರ ಬಾರೋ ಬೇಗನೆ ಇಂದಿರೇಶನೆ ಇಭರಾಜವರದನೆ ರಂಗನಾಥನೆ ಬಾರೊ ಬೇಗನೆ22 ಮದನ ಮೋಹನ ಪಾರಮಹಿಮನೆ ಬಾರೊ ಬೇಗನೆ ಶ್ರೀರಮಾಪತೆ ಶ್ರೀ ನಿಕೇತನ ವಾರಿಜಾಕ್ಷನೆ ಬಾರೊ ಬೇಗನೆ 23 ಹೀಗೆ ಗೋಪೇರು ಮೊರೆಯನಿಡುತಿರೆ ಮಂಗಳಾಂಗನು ಬಂದನೆದುರಿಗೆ ಧ್ವಜ ವಜ್ರಾಂಕುಶ ಪದ್ಮ ಪಾದವು ಅಡಿಯನಿಡುತಿರೆ ಧರಣಿ ನಲಿವಳು 24 ಹರಿಯ ನೋಡುತ ಪರಮ ಹರುಷದಿ ತರುಣಿಮಣಿಯರು ಹರುಷ ಪಡುತಲಿ ಪರಮ ಮಂಗಳ ಚರಿತ ದೇವಗೆ ಸ್ವರವನೆತ್ತಿ ಮಂಗಳವ ನುಡಿದರು 25 ಶುಭ ಕಂಬು ಕಂಠಗೆ ಮಂಗಳಂ ಮಹಾ ಮಾರನಯ್ಯಗೆ ಮಂಗಳಂ ಮಹಾ ಮುದ್ದುಕೃಷ್ಣಗೆ ಮಂಗಳಂ ಜಯ ಮಂಗಳಾಂಗಗೆ 26 ಕಮಲ ಮುಖಿಯರು ನಮಿಸಿ ಕೃಷ್ಣಗೆ ಸರಸವಾಡುತ ಹರುಷ ಪಡುತಲಿ ಕಮಲನಾಭ ವಿಠ್ಠಲನ ಕೂಡುತ ಮನದಿ ಸುಖವನು ಪಡುತಲಿದ್ದರು 27
--------------
ನಿಡಗುರುಕಿ ಜೀವೂಬಾಯಿ
ಕರೆವರು ನಿನ್ನ ಹಸೆಗೆ ಪರಮ ಪುರುಷ ನೀನೆಂದು ಪ ಸರಸದಿಂದ ಸಿರಿಸಹಿತ ಬರಬೇಕು ನೀಂ ತ್ವರಿತದಲಿ ಅ.ಪ ನಾದದಶವಾದ್ಯಗಳು ಮೋದದಿಂದ ಮೊರೆಯಲು ವೇದಾಂತರಹಸ್ಯವೆಂಬ ವಿವಿಧ ಗೀತೆಗಳ ಪಾಡಿ 1 ತತ್ವಭಿಮಾನಿಗಳೆಂಬ ಮುತ್ತೈದೆಯರೆಲ್ಲ ಕೂಡಿ ಸೂರಿ ಜನಪ್ರಿಯನೆಂದು 2 ಎಂಟುದಳ ಪದ್ಮದೊಳು ನೆಂಟರಿಷ್ಟರೆಲ್ಲುರು ನೂ- ರೆಂಟು ಚಿತ್ರಗಳ ಬರೆದು ರಚಿಸಿ ರತ್ನ ಪೀಠವನ್ನು 3 ಧೀರ ಸಭೆಯಲ್ಲಿ ಹದಿನಾರು ನಿನ್ನಾಧೀನಗೈದು 4 ಯಾಮ ಯಾಮದಿ ಬಿಡದೆ ಕಾಮಿನೀ ಮಣಿಯರು ನಿ- ಷ್ಕಾಮ ಸುಖವೀವ ಗುರುರಾಮವಿಠಲ ಬಾರೆಂದು 5
--------------
ಗುರುರಾಮವಿಠಲ
ತೇಜಿಯೇರಿ ಮೆರೆದು ಬಂದ ರಾಜಬೀದಿಯೊಳಗಿಂದ ಕಸ್ತೂರಿ ರಂಗ ಪ. ಸುತ್ತಮುತ್ತ ಸಾವಿರಾರು ಸಾಲುದೀವಟಿಗೆ ಹತ್ತುದಿಕ್ಕಿಲಿ ಬೆಳಗುತಿಹ ಹಗಲುಬತ್ತಿಗಳು ಇತ್ತೆರಪು ಭೂಸುರರು ಸಾಲುಗಟ್ಟಿ ನಿಂತಿರಲು ಮತ್ತೆ ಸಭಾದಿಂದ ತೇಜಿ ಮೆಲ್ಲನೆ ನಡೆಸುತ್ತ ಜಾಣ1 ತಾಳ ಶಂಖ ಭೇರಿ ತಮ್ಮಟೆ ತಂಬೂರಿ ಮೊದಲಾದ ಮೇಲು ಪಂಚಕಂಗಳೆಲ್ಲ[ಮಿಗೆ] ಪೊಗಳಲು ಗಾಳಿ ಗೋಪುರದ ಮುಂದೆ ರಾಯಬಿಡದಂತೆ ಸುತ್ತ ಧೂಳುಗಳೆಬ್ಬಿಸಿ [ವೈಹಾಳಿ] ನಿಕ್ಕುತ ಜಾಣ 2 ಮುತ್ತಿನ ತುರಾಯಿ ಅಂಗಿ ಮುಂಡಾಸು ತತ್ಥಳಿಪ ವಜ್ರಕೆಂಪಿನ ತಾಳಿ ಚೌಕಳಿ ಮುತ್ತಿನ ಕುಂಡಲವಿಟ್ಟು ಮೋಹಿಸುತ ಬೀದಿಯೊಳು ಕತ್ತಿಯ ಉಡಿಯಲ್ಲಿ ಕಟ್ಟಿ ಕೈಯಲಿ [ತೇಜಿಯ] ಪಿಡಿದು 3 ರಂಭೆ ಮೊದಲಾದ ದೇವರಮಣಿಯರು ಕುಂಭದ ಆರತಿಯೆತ್ತಿ ಕೂಡಿ ಪಾಡಲು ಶಂಭು ಮುಖ್ಯ ನಿರ್ಜರರೆಲ್ಲ ಸ್ವಾಮಿ ಪರಾಕೆಂದೆನುತ ಅಂಬುಜಭವಾದಿಗಳ ಆಳಿದ ಶ್ರೀರಂಗಧಾಮ 4 ವೇದಘೋಷದಿಂದ ವಿಪ್ರರು ಸ್ತುತಿಸಲು ಮೋದದಿಂದ ಗಾಯಕರು ಹಾಡಿ ಪಾಡಲು ಹಾದಿ ಬೀದಿಯಲಿ ನಿಂತು ಸಜ್ಜನರಿಗೆಲ್ಲ ದೇವ ಆದರದಿಂದಿಷ್ಟಾರ್ಥವಿತ್ತು ಮೋದದಿಂದ ಮನ್ನಿಸುವ 5 ಹಚ್ಚನೆ ಹೆಸರುಬೇಳೆ ಹಾಲುಕೆನೆಗಳು ಮುಚ್ಚಿತಂದ ಕೆನೆಮೊಸರು ಮೀಸಲು ಬೆಣ್ಣೆಯು ಅಚ್ಚ ತುಪ್ಪದಿ ಪಕ್ವವಾದ ಅತಿರಸ ಹುಗ್ಗಿಗಳು ಮೆಚ್ಚಿವುಂಡು ಪಾನಕ ನೀರುಮಜ್ಜಿಗೆಗಳನೆ ಕುಡಿದು 6 ಸಣ್ಣಮುತ್ತು [ತೆತ್ತಿಸಿದ] ಸಕಲಾತಿ ಗೊಂಡ್ಯ ಹೊನ್ನ [ತೆತ್ತಿಸಿದ ಹೊಸ] ಹೊಳೆವ ಸೊಬಗಿನ ಉನ್ನಂತ ಗುಣರಾಯ ಉತ್ತಮರಾಜಾಶ್ವವೇರಿ ಎನ್ನ ಹಯವದನ ರಂಗ ಎಲ್ಲರಿಗಿಷ್ಟಾರ್ಥಕೊಡುವ 7
--------------
ವಾದಿರಾಜ
ಮಂಗಳಾರತಿ ಮಾಡಿರೆ ಮಾರಮಣಗೆ ಪ ಮಂಗಳಾರತಿ ಮಾಡಿ ಗಂಗಾಜನಕನಿಗೆ ಶೃಂಗಾರ ಶೀಲಗೆ ಅಂಗನೆ ಮಣಿಯರುಅ.ಪ ನೀರೊಳಗಾಡಿದವಗೆ ಬೆನ್ನಿಲಿ ಗಿರಿ ಭಾರ ಪೊತ್ತಿಹ ದೇವಗೆ ಮಣ್ಣಿನಲಿದ್ದ ಬೇರುಗಳನೆ ಮೆದ್ದಗೆ ಶ್ರೀಹರಿಗೆ ಮೂರೆರಡರಿಯದ ಪೋರನÀ ಮಾತಿಗೆ ಕ್ರೂರ ದೈತ್ಯನ ಕರುಳ್ಹಾರ ಮಾಡಿದಗೆ 1 ಬಡವ ಬ್ರಾಹ್ಮಣನಾಗುತ ದಾನವ ಬೇಡಿ ಕೊಡಲಿ ಪಿಡಿದ ಭಾರ್ಗವಗೆ ಕೋಡಗಗಳ ಕೂಡಿ ಕಡಲ ಬಂಧಿಸಿ ಮಡದಿಯ ತಂದವಗೆ ಕಡಹಲ್ದ ಮರನೇರಿ ಮಡದೇರಿಗೊಲಿದಗೆ ಬಿಡದೆ ತೇಜಿಯನೇರಿ ಸಡಗರ ತೋರ್ದಗೆ 2 ಪರಮಪುರುಷದೇವನ ಪರಿಪರಿಯಿಂದ ಸ್ಮರಣೆ ಮಾಡುತ ಪಾಡುತ ಸಿರಿಯರಸಗೆ ಸರಸೀಜಾಕ್ಷಿಯರೆಲ್ಲರೂ ಸರಸದಿ ಬಂದು ಪರಾಭವ ನಾಮ ವತ್ಸರದಲಿ ಸುಜನರು ಸಿರಿವರ ಕಮಲನಾಭ ವಿಠ್ಠಲನಿಗೆ 3
--------------
ನಿಡಗುರುಕಿ ಜೀವೂಬಾಯಿ
ಮಲಗು ಮಲಗೆಲೊ ಸುಮ್ಮನೆ ಸುಕುಮಾರ ಚೆಲುವ ಜೋಗುಳವ ಪಾಡುವೆ ಗೋಪಾಲ ಪ ಲಲನಾಮಣಿಯರು ಸುಲಭದಿ ನಿನ್ನನು ಕಲಭಾಷಣದಿಂದ ಸೆಳೆಯ ಬಯಸುತಿಹರೋ ಅ.ಪ ಭೋಗಿಶಯನ ಹರಿ ಈ ಜಗದೊಳಗೆ ಈಗ ಬಂದಿರುವ ಜಾಗವನರಿಯದೆ ಯೋಗಿ ಜನರು ಅನುರಾಗದಿಂದ ನಿನ್ನ ಸಾಗಿಸಲಿರುವರೊ ಕೂಗದೆ ಸುಖದಲಿ 1 ದುರುಳ ಶಕಟನನು ಮುರಿದ ಕೋಮಲದ ಚರಣ ಕಮಲಗಳು ಉರಿಯುತಲಿದ್ದರು ಮರೆಯಲದನು ಸುವಿನೋದವೀಯುವ ಸರಸಪದಗಳನು ಪರಿಪರಿಯರುಹುವೆನೊ 2 ಎನ್ನಯ ಕರಗಳು ನೋಯುತಲಿರುವುವು ಚಿನ್ಮಯ ರೂಪನೆ ನಿದ್ರೆಯ ಮಾಡೊ ದಧಿ ಪಯ ಬೆಣ್ಣೆಯ ಕೊಡುವೆ ಪ್ರಸನ್ನ ಸುಹೃದಯದಲಿ 3
--------------
ವಿದ್ಯಾಪ್ರಸನ್ನತೀರ್ಥರು
ಸರಸಿಜನಾಭ ಶ್ರೀಹರಿಪಾದಕಾರತಿಯ ಬೆಳಗಿರೆ ಪ ವಸುದೇವ ಸುತನೆಂದೆನಿಸಿ ಅಸುರೆ ಪೂತನಿಯ ಸಂಹರಿಸಿ ಆನಂದ ಸುರಿಸಿ ಕಾಳಿಮಡುವ ಧುಮುಕಿ ಫಣಿಯ ಮೇಲೆ ನಾಟ್ಯವನಾಡಿದವಗೆ ಸನಕಾದಿ ನಾರದ ಮುನಿವಂದ್ಯಗೆ ಸುರ ರಮಣಿಯರು ಹರುಷದಿ 1 ಮಧುರೇಲಿ ಜನಿಸಿದವಗೆ ಮಾವಕಂಸನ ತರಿದವಗೆ ಮಧುವೈರಿಹರಿಗೆ ಮುರಳಿನಾದಗೈದು ಸ್ತ್ರೀಯರ ಮರುಳುಗೊಳಿಸಿ ಆಡಿದವಗೆ ಮುರವೈರಿ ಹರಿ ಮುಚುಕುಂದ ವರದನ ಪಾಡುತಲಿ ಮುದದಲಿ2 ಗೋಪಾಲರೊಡಗೂಡುತಲಿ ಗೋವರ್ಧನವೆತ್ತಿದವಗೆ ಗೋವಿಂದ ಹರಿಗೆ ಗೋಪಿಯರ ಮನೆಯ ಪೊಕ್ಕು ಬೇಕೆನ್ನುತ ಪಾಲ್ಬೆಣ್ಣೆ ಸವಿದ ಶ್ರೀಕಾಂತ ಕಮಲನಾಭ ವಿಠ್ಠಲನಿಗೆಸುದತಿಯರು ತ್ವರಿತದಿ 3
--------------
ನಿಡಗುರುಕಿ ಜೀವೂಬಾಯಿ
ಸಾರತರದ ಮುರಳಿದನಿಯ ಕೇಳಿದೆ ಏನೆ ಪ ನಾರಿಮಣಿಯರುಲಿವದನಿಯ ಕೇಳಿದೆ ಏನೆ ಅ.ಪ ನಲಿದು ಕುಣಿವ ಲಲನೆಯರನು ನೋಡಿದೆ ಏನೆ ಝಣ ಝಣ ಝಣ ಕಿಣಿ ಕಿಣಿ [ಭರ್ತಾ] ರವವು ಕೇಳ್ವುದೇನೆ1 ಬಡನಡುವಿನ ಮಡದಿಯವನ ಅಡಿಯ ಪಿಡಿವೆ ಏನೆ ಕಡುಬೆಡಗಿನ ಹುಡುಗಿಯವನ ಅಡಿಯ ಪಿಡಿವೆ ಏನೆ ಸಡಗರದಲಿ ನಡೆದು ಮನವ ರಂಗಗೀವೆ ಏನೆ 2 ಮನದ ಕಲುಷವಳಿದು ಮುದವ ತಳೆದಿಹೆಯೇನೆ ಇನಿದುವಚನ ಕನಸು ನೆನಸ ತಳೆದಿಹೆಯೇನೆ ತನುಮನಧನ ಮಾಂಗಿರೀಶಗೊಪ್ಪಿಪೆಯೇನೇ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಸುಮ್ಮನೆ ದೂರುವರೇ ಅಮ್ಮಯ್ಯ ಎನ್ನ ಸುಮ್ಮನೆ ದೂರುವರೇ ಪ ತಮ್ಮಯ ಸರಸಕೆ ಸಮ್ಮತಿ ಕೊಡದಿರೆ ಕಣ್ಮಣಿಯರುಗಳೆಲ್ಲಾ ಅ.ಪ ಕ್ಷೀರಚೋರನೆಂಬೋರೇ ಅಮ್ಮಯ್ಯ ಇವರ ಕೋರಿಕೆ ನಡೆಸದಿರೆ ಕ್ಷೀರ ಸಾಗರಶಾಯಿ ನಾರಾಯಣ ನಾನೆ ಕ್ಷೀರಕೆ ಬಡತನವೇ ಅಮ್ಮಯ್ಯ 1 ತುಂಟನೆಂಬೋರೆ ಎನ್ನ ಅಮ್ಮಯ್ಯ ಇವರ ತಂಟೆ ಏತಕೆ ಎನಗೆ ತುಂಟತನದಿ ಪಾಪ ಗಂಟು ಹೋಯಿತೆ ವೈ ಕುಂಠಪತಿಯೇ ಸಾಕ್ಷಿ ಅಮ್ಮಯ್ಯ 2 ಮಾಯಗಾರನೆಂಬೋರೆ ಅಮ್ಮಯ್ಯ ಎನ್ನ ತೋಯಜಾಕ್ಷಿಯರೆಲ್ಲ ಮಾಯಕೆ ಸಿಲುಕದೆ ಮಾಯೆಗೊಡೆಯನಾಗೆ ಜಾಯಮಾನವಲ್ಲವೇ ಅಮ್ಮಯ್ಯ 3 ಯಾರಿಂದೆನಗೇನೆ ಅಮ್ಮಯ್ಯ ಎನ್ನ ಜಾರನೆಂಬೋರೆ ಎಲ್ಲಾ ಯಾರು ಒಪ್ಪುವರೇ ಕುಮಾರನಲ್ಲವೆ ನಾನು ಮಾರಜನಕ ನಾನೆ ಅಮ್ಮಯ್ಯ 4 ಎನ್ನ ಮಾತನು ಕೇಳೆ ಅಮ್ಮಯ್ಯ ಈಗ ಕನ್ನೆಯರಿಗೆ ಪೇಳೆ ಇನ್ನಾದರು ಇವರು ಅನ್ಯಾಯವ ಬಿಟ್ಟು ಎನ್ನನು ಪೊಗಳಿದರೆ ಅಮ್ಮಯ್ಯ ಪ್ರಸನ್ನನಾಗುವೆನೆಂದು 5
--------------
ವಿದ್ಯಾಪ್ರಸನ್ನತೀರ್ಥರು
ಚಿತ್ತೈಸಿದ ವ್ಯಾಸರಾಯ |ಚಿತ್ತಜನಯ್ಯನ ಬಳಿಗೆ ಪ.ಮುತ್ತಿ ಮುತ್ತೈದೆಯರೆಲ್ಲಎತ್ತೆ ರತುನದಾರತಿಯ ಅಪಹೇಮಪಿಡಿಗಳುಳ್ಳಂತಹ |ಚಾಮರಂಗಳನು ಪಿಡಿದು ||ಕಾಮಿನಿ ಮಣಿಯರು ಕೆಲವರು |ಸ್ವಾಮಿಯೆಂದು ಬೀಸುತಿರೆ 1ಹಾಟಕದ ಬೆತ್ತನೂರು |ಸಾಟಿಯಿಲ್ಲದಲೆ ಪಿಡಿದು ||ನೀಟಾದ ಓಲಗದವರ |ಕೂಟಗಳ ಮಧ್ಯದಲಿ 2ಸಾಧುವಿಪ್ರಜನಂಗಳು |ವೇಧಘೋಷ ಮಾಡುತಿರೆ ||ಮೋದದಿಂದ ಗೋವಿಂದನ |ಸಾಧನ ಮಾರ್ಗವ ಪಿಡಿದು 3ಭೇರಿ ತುತ್ತೂರಿ ಮೃದಂಗ |ಮೌರಿ ಚಾರುವೇದ್ಯಂಗಳು ||ಬಾರಿಬಾರಿಗೆ ಹೊಡೆಯೆ |ನಾರದರು ತಾ ಕೂಡಿಯೆ | 4ಅರವಿಂದಾಸನನಯ್ಯ |ಪುರಂದರವಿಠಲನು||ಸಿರಿಸಹಿತದಿ ಬಂದು |ಕರಪಿಡಿದೆತ್ತಿದ್ದು ಕಂಡೆ 5
--------------
ಪುರಂದರದಾಸರು
ಶ್ರೀ ಮಂಗಳ ದೇವಿಗೆ ಜಯ ಜಯಶ್ರೀ ಮಂಗಳ ದೇವಿಗೆ ಜಯ ಜಯಸ್ವಾಮಿಗೆ ಜಯ ಸ್ವಾಮಿನಿಗೆ ಜಯ ಜಯವೆಂದು ಪಾಡಿ ಜಾನಕಿರಾಮಗಾರತಿಯ ಬೆಳಗಿರೆ ಪ.ಪದುಮಿಣಿಯರು ಪತಿವ್ರÀ್ರತಾಮಣಿಯರುವಿಧುಬಿಂಬದ ಮುಖಿಯರು ಸಖಿಯರುಪದುಮರಾಗದ ಹರಿವಾಣದಿ ಹರಿವಾಣದಿ ಹರಿಮಣಿದೀಪದಕದÀಡಿನಾರತಿಯ ಬೆಳಗಿರೆ 1ಉಲಿವಂದುಗೆಗಾಲಿನ ಮೇಲಿನಕಲಧೌತದ ಇತ್ತರದುತ್ತರಿಥಳಥಳಿಸುವ ಶಶಿರವಿ ಕೋಟಿಗಳ ಕೋಟಿಗಳಗೆಲುವ ರವಿಕುಲ ತಿಲಕಗಾರತಿಯ ಬೆಳಗಿರೆ 2ಅಂಗದವಲಯಾಂಗುಲಿಮುದ್ರಿಕೆರಂಗುಮಾಣಿಕ ಮುತ್ತಿನ ಸರಬಂಗಾರದ ಮೇಲೆವೈಜಯಂತಿವೈಜಯಂತಿ ಪದಕವು ತುಳಸಿಶೃಂಗಾರಗಾರತಿಯ ಬೆಳಗಿರೆ 3ಇಂದಿರೆಸೀತಾರ್ಪಿತಮಾಲಾಕಂಧರಭುವನಾವಳಿಗಪ್ರತಿಸುಂದರ ಸದ್ಗುಣಸಾಂದ್ರಉಪೇಂದ್ರ ಭೂಮಿಜೆÉೀಂದ್ರÀ ಲಕ್ಷ್ಮಣಾಗ್ರಜ ರಾಮ ಚಂದ್ರಗಾರತಿಯ ಬೆಳಗಿರೆ 4ಕುಂಡಲಮುಕುಟಾಂಕಿತ ಸನ್ಮುಖ ಸುಭ್ರೂಹಿತಮಂಡಲ ಗಂಡದಪುಂಡರೀಕಾಭಾನಯನದ ನಯನದ ಘನಶಾಮಲವರಕೋದಂಡಗಾರತಿಯ ಬೆಳಗಿರೆ 5ಋಷಿಮಖವನು ಈಕ್ಷಿಸಿ ರಕ್ಷಿಸಿವಿಷಕಂಠನ ಧನುವ ಮುರಿಹೊಯಿದು ಮುರಿಹೊಯಿದುತುಷಿಸಿದಗಾರತಿಯ ಬೆಳಗಿರೆ 6ಹನುಮನ ಕಂಠದ ಸನ್ಮಣಿಗೆಪಣೆಗಣ್ಣನ ಶ್ರೀ ಜಪಮಣಿಗೆನೆನೆವರ ಚಿಂತಾಮಣಿ ಸೀತಾಶಿರೋಮಣಿಗೆ ಶಿರೋಮಣಿಗೆಪ್ರಸನ್ನವೆಂಕಟ ವನಜೋದ್ಭವಪಿತಗಾರತಿಯ ಬೆಳಗಿರೆ 7
--------------
ಪ್ರಸನ್ನವೆಂಕಟದಾಸರು