ಒಟ್ಟು 4 ಕಡೆಗಳಲ್ಲಿ , 3 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದು ನೋಡಿದೆ ನಂದಕರ ಯೋ- ಗೀಂದ್ರ ವಂದಿತ ಚರಣನಾ ಪ ವಂದನೀಯ ಶುಭೋರು ಗುಣ ಗಣ ಸಾಂದ್ರಗುರುರಾಘವೇಂದ್ರನಾ ಅ.ಪ ವೇದತತಿ ಶತಮೋದಗಿತ್ತ(ನ) - ಆದಿ ಮತ್ಸ್ಯನ ತೆರದಲಿ ವೇದವಾದವ ಶೋಧಮಾಡಿ ಮೇದಿನೀಸುರಗಿತ್ತನಾ 1 ಕಮಠರೂಪದಲಮರ - ತತಿಗೆ ಅಮೃತ ನೀಡಿದ - ತೆರದಲಿ ಸ್ವಮತ ಸುಧೆಯನು ಪ್ರಮಿತಗಿತ್ತಿಹ ಅಮಿತ ಸುಮಹಾಮಹಿಮನ 2 ಧರಣಿಮಂಡಲ ಧುರುದಿ ದಾಡಿಲಿ ಧರಿಸಿ ತಂದನ ತೆರದಲಿ ಧರಣಿ - ಜನರಿಗೆ ಧರೆಯ ಮೊದಲಾದ ಪರಮಭೀಷ್ಟೆಯನಿತ್ತು ಪೊರೆವನ 3 ತರುಳಪಾಲನ ತೆರದಲಿ ದುರಿತರಾಶಿಯ ತರಿದು ತನ್ನಯ ಶರಣಜನಪರಿಪಾಲನ 4 ಬಲಿಯ ಯಙ್ಞದÀ ಸ್ಥಳದಿ ಭೂಮಿಯ ನಳೆದರೂಪನÀತೆರದಲಿ ಖಳರ ವಂಚಕÀ ತನ್ನ ತಿಳಿವಗೆ ಸುಲಭದಿಂದಲಿ ಒಲಿವನ 5 ಕೆಟ್ಟರೋಗವು ಶ್ರೇಷ್ಠಭೂತದ ಅಟ್ಟುಳಿಯನೆ ಕಳೆವನ 6 ಜನಕನಾಜ್ಞದಿ ವನವ ಚರಿಸಿದ ಇನಕುಲೇಶನ ತೆರದಲಿ ಜನರಿಗೀಪ್ಸಿತ ತನಯ ಮೊದಲಾದ ಮನದಪೇಕ್ಷೆಯ ನೀಡೊನ 7 ಕನಲಿ ದ್ರೌಪದಿ ನೆನೆಸಲಾಕೆಯ ಕ್ಷಣಕೆ ಬಂದನ ತೆರದಲಿ ಮನದಿ ತನ್ನನು ನೆನೆವ ಜನರನು ಜನುಮ ಜನುಮದಿ ಪೊರೆವನ 8 ಮುದ್ದು ಸತಿಯರ ಬುದ್ಧಿ ಕೆಡಿಸಿ(ದ) ಗೆದ್ದು - ಬಂದನ ತೆರದಲಿ ಮದ್ದು ಮತಿಯನು ತಿದ್ದಿ ಭಕುತಗೆ ಶುದ್ಧ ಙÁ್ಞನವ ನೀಡೊನ 9 ಕಂಟಕ ಕಲಿಯವೈರಿ ಕಲಿಕಿರೂಪನ ತೆರದಲಿ ಹುಳುಕು ಮನವನು ಕಳೆದು ತನ್ನಲಿ ಹೊಳೆವ ಮನವನು ಕೊಡುವನಾ 10 ನೀತ ಗುರುಜಗನ್ನಾಥ ವಿಠಲ ಭೂತಳಕ್ಕಧಿನಾಥನು ಆತನಂತ್ಯತಿನಾಥ ಜಗಕೆ ಪ್ರೀತಿಶುಭಫಲದಾತನ 11
--------------
ಗುರುಜಗನ್ನಾಥದಾಸರು
ದಾತ ನೀನೆ ಸ್ವಾಮಿ ಶ್ರೀಗುರುನಾಥ ವರ್ಮ ತೋರಿಕೊಡುವ ನಿಮ್ಮ ಧರ್ಮಗುಣ ಪ್ರಖ್ಯಾತ ಧ್ರುವ ಧರೆಯೊಳು ಸರಿಯಗಾಣೆ ಗುರುಧರ್ಮದಿಂದಧಿಕ ಕರುಣಿಸಿ ಆನಂದದಿಂದ ತೋರುತಿಹ್ಯ ಬ್ರಹ್ಮಸುಖ ವರಮುನಿಗಳ ಪ್ರಿಯ ಶರಣಜನಪಾಲಕ ಪರಮ ಸುಪಥದೋರಿ ಹೊರೆವ ಪೂರ್ಣತಾರಕ 1 ಬಡವನಾಧಾರಿ ನೀನು ಒಡಿಯನಹುದೊ ನಿಶ್ಚಯ ಕೊಡುವ ಭಕ್ತಿ ಮುಕ್ತಿದಾತ ದೃಢಭಕ್ತರಾಶ್ರಯ ಒಡಲ ಹೊಕ್ಕಿಹೆ ನಿಮ್ಮ ಕಡೆಯಗಾಣಿಸೊ ನಮ್ಮಯ್ಯ ಪಿಡಿದು ನೀ ಎನ್ನ ಕೈಯ ಕೊಡು ತೋರಿ ನಿಮ್ಮ ಸೊಹ್ಯ 2 ಪೊಡವಿಯೊಳು ಕ್ಷಮೆ ಎನಗೆ ಕೊಡು ಕರುಣಾಕಟಾಕ್ಷ ನೋಡಿ ನಿಮ್ಮ ದಯದಿಂದ ನೀಡೊ ನಿಜ ಸುಭಿಕ್ಷ ಬಿಡದೆ ಎಂದೆಂದು ನೀನು ಮಾಡೊ ಸಂರಕ್ಷ ಮೂಢ ಮಹಿಪತಿಗಿನ್ನು ಪೂರಿಸೊ ಮನದಪೇಕ್ಷ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಂಬಿದವರ ಕಾವ ದೈವ ಅಂಬುಜಾಕ್ಷನೀತನೆಂದು ಧ್ರುವ ನಂಬಿದ ಪ್ರಲ್ಹಾದಗ ತಾಂ ಸ್ತಂಭದೊಳು ಮೂಡಿ ಬಂದು ಹಂಬಲಿಸಿ ದಲ್ಲ್ಯೊದಗಿ ಇಂಬವಾದನೀತನೆಂದು 1 ನಾಮ ನಂಬಬಾರದೆ ನೀ ಕಾಮಧೇನುವೆಂದು ಪೂರ್ಣ ನೇಮದಿಂದ ಸಲಹುತಿಹ್ಯ ಸ್ವಾಮಿ ಸರ್ವೋತ್ತಮನೆಂದು 2 ದೀನ ಮಹಿಪತಿಸ್ವಾಮಿ ಭಾನುಕೋಟಿತೇಜಪೂರ್ಣ ಮನದಪೇಕ್ಷೆ ಪೂರೈಸುವ ಘನಸುಖದಾಯಕನೆಂದು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಶಿರಬಾಗಿ ಬೇಡ್ವೆ ಎನ್ನನು ಪೊರೆಯೋ ಹರಿಯೇ ಶರಣ ರಕ್ಷಕನೆಂಬೊ ಬಿರುದುಳ್ಳ ದೊರೆಯೇ ಪ ಘನಮಹಿಮನೇ ನಿನ್ನ ಪಾವನ ಚರಣಕಮಲ ಎಂಬೋ ಮನವ ಆಕರ್ಷಿಸುವ ಪಂಜರದಲಿ ವನಜನಾಭನೆ ಎನ್ನ ಮನವೆಂಬ ರಾಜಹಂಸ ನನ್ನ ಲೋಲ್ಯಾಡಿಸೋ ಅನುದಿನದಲಿ 1 ಇಂದಿನ ದಿನವೇ ಸ್ಮøತಿಯಿಂದ ಇರುವಾಗ ಮು- ಕುಂದ ತವ ಸ್ಮರಿಸುವೆÉ ಕೊಡು ಮೋಕ್ಷವಾ ಮುಂದೆ ಅಂತ್ಯದಲಿ ಕಫ ಪಿತ್ತ ಶೀತಾದಿ ಕಂಠ ಗುಂದಿ ವಿಸ್ಮøತಿಯಾಗಿ ಸ್ಮರಣವಹುದೈಯ್ಯಾ 2 ಶ್ರೀಶ ಹನುಮೇಶವಿಠಲನೇ ನಿನ್ನಾಧೀನ ದಾಸನ ಮನದಪೇಕ್ಷವ ಪೂರಿಸೋ ಕೇಶವನೆ ಶಾಸಕನೆಂದು ಆಶಿಸಿ ಬಂದೆ ಬೇಸರ ಮಾಡದಲೆ ಪೋಷಿಸೈ ಸ್ವಾಮಿ 3
--------------
ಹನುಮೇಶವಿಠಲ