ಒಟ್ಟು 3 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎನಿಕೆ ಒಂದಾಗಲಿ ಗುರುವೆ ಎನಿಕೆ ಒಂದಾಗಲಿಎನಿಕೆ ಒಂದಾಗಲಿ ಯೋಚನೆ ಇದಾಗಲಿಧ್ಯಾನ ಚಿದಾನಂದ ಗುರುವ ಧ್ಯಾನ ಮರೆಯದಂತೆ ಎನಗೆ ಪ ಕಂಡವರು ಉಗುಳಲಿ ಕಾಲಲೆನ್ನ ಒದೆಯಲಿಭಂಡ ಮನುಜನಿವನು ಎಂದು ಬಾಳುಗೇಡಿ ಎನಲಿ ಎನಗೆ 1 ಅನಾಯಾಸ ಬರಲಿ ಅಸಹ್ಯಿಸಿಕೊಳ್ಳುತಿರಲಿಹೀನಮನುಜನಿವನು ಎಂದು ಬಾಳುಗೇಡಿ ಎನಲಿ ಎನಗೆ2 ಮುಂದೆ ಕೆಡಹಿ ಬೀಳಲಿ ಮುಂಗೈ ಮೊಳಕಾಲ್ಮುರಿಯಲಿಹಿಂದಣಿಂದ ಕಳ್ಳರು ಕಟ್ಟಿಯೆಹಿಮ್ಮಡ ಕಡಿಯಲೆನಗೆ 3 ತನುವು ಎಲ್ಲ ನೋಯಲಿ ತಲೆ ಬೇನೆಯು ಬರಲಿಘನ ಕುರುವು ಕುತ್ತವು ಬಲಿದು ಘನವಾಗಿ ಇರಲಿ ಎನಗೆ4 ಇಂತು ಎನಗಾಗಲಿ ಇದೇ ಎನಗಿರಲಿ ಚಿಂತಾಯುತ ಚಿದಾನಂದನ ಚಿಂತೆ ಮರೆಯದಂತೆ ಎನಗೆ 5
--------------
ಚಿದಾನಂದ ಅವಧೂತರು
ಮೂರ್ಖ ತಿಳಿವನೆ ಗುರುವೆ ನಿನ್ನ ಬೋಧದ ಸವಿಯ ಅರ್ಕನಾ ತೇಜವನು ಗೊಗೆಯರಿದಪುದೇ ಪ ನೀನೆ ಪರಮಾತ್ಮನಿಹೆ ಎಂದು ನೀ ಬೋಧಿಸಲು ಮಾನವ ನಾನು ಪರಮಾತ್ಮನೆ ಏನಾದರೂ ಪೇಳಿ ಮೋಸಮಾಳ್ಪನು ಎಂದು ಸ್ವಾನುಭವ ಪಡೆಯದಲೆ ನಿನ್ನ ನಿಂದಿಸುವಾ 1 ಕರ್ಮದಾ ಸಂಕಲೆಯ ಕಟ್ಟಿಕೊಂಡಿಹ ಜೀವ ಕರ್ಮ ಕಳೆಯುವ ದಿವ್ಯ ಜ್ಞಾನವರಿಯುವನೇ ದುರ್ಮತಿಯು ದ್ವೇಷಿಸುತ ಬೋಧದಲಿ ಮನವಿಡದೆ ಧರ್ಮವಂತನು ಎಂಬ ಒಣ ಹೆಮ್ಮೆ ಪಡುತಿರುವ 2 ಈ ನಿಂದೆ ಸ್ತೋತ್ರಗಳಿಗೊಳಗಾಗುವವನೆ ನೀ ಸ್ವಾನುಭವಸಂವೇದ್ಯ ಕೇವಲಾನಂದಾ ನೀನೆ ಸರ್ವವ್ಯಾಪಿ ನಿನ್ನ ನಿಂದಿಸಿದೊಡೆ ತಾನು ತನ್ನನು ಬೈದು ದೂರಿಕೊಂಡಂತೆ 3 ಜಗದ ಸುಖಕಾಗಿ ಬಲು ಕಾತರಿಪ ಮನುಜನಿವ ಜಗದಾಚೆಗಿಹ ಪರಮಶಾಂತಿಯರಿಯುವನೇ ಸೊಗಸಾಗಿ ತಿಳಿಯುವೊಡೆ ಜಿಜ್ಞಾಸುವಲ್ಲದೆ ಅಘನಾಶಶಂಕರನೆ ಅನ್ಯರರಿಯುವರೇ 4
--------------
ಶಂಕರಭಟ್ಟ ಅಗ್ನಿಹೋತ್ರಿ