ಒಟ್ಟು 16 ಕಡೆಗಳಲ್ಲಿ , 11 ದಾಸರು , 14 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದೃಷ್ಟ ಅದೃಷ್ಟದ ಬಲವು ನೊಡಿ ವಿಸ್ತಾರ ಸೃಷ್ಟಿಯಲಿ ಮುಟ್ಟಿ ಮುದ್ರಿಸಿದ ವಾಕ್ಯಂಗಳು ಕೇಳಿ ಆತ್ಮನಿಷ್ಠ ಜನರು 1 ದೃಷ್ಟಿ ಪುರುಷನ ಸೈನ್ಯಗಳು ಕೇಳಿ ಚಿತ್ತದಲಿ ಮಾನವರು ಅಜ್ಞಾನವೆಂಬಾಶ ಗತಿಯು ಮಾಯಾಮೋಹಕವೆಂಬ ಸುತರು 2 ಬಂಟ ಜನರು ಪ್ರಪಂಚ ಸೈನ್ಯಾಧಿಪತಿ ಸುಖ ದು:ಖದಳ ಭಾರಗಳು3 ಚಂಚಲವಂಚಲಶ್ವಗಳು ಅಹಂ ಮಮತಾ ಗಜಗಳು ಅವಸ್ಥೆಗಳು ಕಾಲಾಳುಗಳು ಮನ್ನೆವಾರರು ಕರಣಗಳು4 ಮೆರೆಯುತಿಹರು ಪಂಚೇಂದ್ರಿಯಗಳು ಸೂಸುತಲಿಹ ಬೇಹಿನವರು ಮೊದಲಾದ ದಶವಾಯುಗಳು 5 ಸುತ್ತಲಿಹ ಪರಿವಾರಗಳು ಸಪ್ತವ್ಯಸನ ಭೂಷಣಂಗಳು ಪಂಚಾಗ್ನಿಗಳು ಪಂಜಿನವರು ಅಷ್ಟಮದವು ಕಾವಲಿಗಳು 6 ಮೂರು ಪರಿಯ ತ್ರಿಗುಣಗಳು ಸೈನ್ಯದ ಪಾರುಪತ್ಯದವರು ಜಾಗ್ರಸ್ವಪ್ನ ಸುಷುಪ್ತಿಗಳು ಛತ್ರ ಚಾಮರ ಭೂಷಣಗಳು 7 ಸಪ್ತಧಾತುದ ಸುಖಾಸನವು ಪಂಚಾತ್ಮಗಳು ನಿಶ್ಯಾನಿಗಳು ತಾಮಸವೆಂಬ ಭೇರಿಗಳು ಅಹಂಕಾರವು ಕಹಳೆಗಳು 8 ಪರಿ ಚಂದ ಚಂದದಲಿ ಇಳಿದಿಹ ಸೈನ್ಯ ಭಾರಗಳು 9 ಜನನ ಮರಣದ ಮಂಟಪವು ಕಟ್ಟಿಹರು ವಿಸ್ತಾರದಲಿ ಚಿಂತಿ ಮುಪ್ಪಳಿಯು ಭ್ರಾಂತಿಗಳಲಿ ಸ್ಥಿತಿ ಸ್ಥಳಲಿಹ ದ್ವಾರಗಳು 10 ದುರ್ಮೋಹ ಬಲದಲಿ ತನುವೆಂಬ ದುರ್ಗಬಲದಲಿ ಕದನ ಮಾಡುವರನುದಿನದಲಿ 11 ಇನ್ನು ಅದೃಷ್ಟದ ಬಲವು ಕೇಳಿ ಚೆನ್ನಾಗಿ ಮನದಲಿ ಸಮ್ಯಜ್ಞಾನೆಂಬಾಶಗತಿಯ ಜ್ಞಾನ ವೈರಾಗ್ಯಸುತರು 12 ಬಂಟ ಜನರು ಬೋಧ ಸೈನ್ಯಾಧಿಪತಿಯ ದೃಢ ನಿಶ್ಚಯ ದಳ ಭಾರಗಳು 13 ನಿರ್ಮಳ ನಿಶ್ಚಳಶ್ವಗಳು ವಿವೇಕವೆಂಬ ಗಜಗಳು ಮಗುಟ ವರ್ಧನರು 14 ಶೂರತನದ ಪ್ರರಾಕ್ರಮರು ಸ್ಮರಣೆ ಚಿಂತನೆ ಧ್ಯಾನಗಳು ಸೂಸುತಲಿಹ ಬೇಹಿನವರು ಯೋಚನೆ ಅವಲೋಕನೆಗಳು 15 ಸುತ್ತಲಿಹ ಪರಿವಾರಗಳು ರತಿಪ್ರೇಮ ಸದ್ಭಾವನೆಗಳು ಲಯ ಲಕ್ಷ್ಯಗಳು ಪಂಜಿನವರು ಮೌನ್ಯ ಮೋನವೆ ಕಾವಲಿಗಳು 16 ನಾದ ಬಿಂದು ಕಳೆಯಗಳು ಸೈನ್ಯದ ಪಾರುಪತ್ಯವರು ಅನಿಮಿಷ ಛತ್ರ ಚಾಮರವು ಏಕಾಕಾರವೆ ನಿಶ್ಯಾನಿಗಳು 17 ಅನುಭವ ಸುಖಾಸನಗಳು ತೂರ್ಯಾವಸ್ಥೆಯ ಭೂಷಣಗಳು ಆನಂದಮಯವೆ ಭೇರಿಗಳು ನಿಶ್ಚಿಂತವೆ ಕಹಳೆಗಳು 18 ಸುಜ್ಞಾನದ ಮೊದಲಾದ ಅಂಗಡಿಯು ಇಳಿದಿಹ ಸಾಲವರಿಯಲಿ ಚಂದ ಚಂದ ಶೃಂಗಾರದಲಿ ಇಳಿದಿಹ ಸೈನ್ಯ ಭಾರಗಳು 19 ಸದ್ಗತಿ ಮುಕ್ತಿ ಮಂಟಪವು ಹೊಳೆಯುತಿಹದು ಸ್ಯೆನ್ಯದೊಳಲಿ ಶೋಭಿಸುವದು ಶೃಂಗಾರದಲಿ 20 ನಿರಾಶವೆಂಬ ಪ್ಯಾಟಿಯಲಿ ಇಳಿದಿಹದು ಸಂತೋಷದಲಿ ದೃಷ್ಟಿ ಪುರುಷನ ಅಟ್ಟಲೆಯ ಕೇಳಿ ನಡೆಯಿತು ಮಾರ್ಬಲವು 21 ಧಿಮಿ ಧಿಮಿಗುಡುತ ನಾದ ಮಾಡಿದರಾನಂದಲ ಗ್ಹೇಳೆನಿಸುತ್ತ ಕಹಳೆಗಳು ಭೋರ್ಗರೆಯುತಲಿ ನಡೆದರು 22 ನಡೆವರು ಅತಿಶಯ ಶೀಘ್ರದಲಿ ಬಾಣ ಬಾಣಗಳು ಮಾಡುತಲಿ ದಣಿದಣಿಸುತಲಿ ನಡೆದರು 23 ತುಂಬಿದ ಸೈನ್ಯ ಭಾರಗಳು ಉಬ್ಬು ಕೊಬ್ಬಿ ನಡೆದವು ನಗುತ ಗೆಲವಿಂದಶ್ವಗಳು ಏರಿ ಹಾರಿಸುತ ನಡೆದರು 24 ಮಗುಟ ವರ್ಧನರು ನಡೆದರು ಅತಿ ಹರುಷದಲಿ ಕಾಲಾಳುಗಳು ಮುಂದೆ ಮಾಡಿ ನಡೆಯಿತು ದಳ ಭಾರಗಳು 25 ಶೂರತನದ ಪರಾಕ್ರಮರು ಮುಂದಾಗಿ ಬ್ಯಾಗೆ ನಡೆದರು ಅಬ್ಬರಿಸುತಲಿ ಮಾರ್ಬಲವು ನಡೆಯಿತವರ ಸೈನ್ಯ ಮ್ಯಾಲೆ 26 ವಿವೇಕವೆಂಬ ಗಜಗಳು ವಾಲ್ಯಾಡುತಲಿ ನಡೆದರು ರಗಡಿಸುತ ಡೋಲಿಸುತಲಿ ನಡೆದರು ಪರಚಕ್ರ ಮ್ಯಾಲೆ 27 ನಡೆವ ಮಾರ್ಬಲದ ಧೂಳಿಗಳು ಮುಸುಕಿತು ಸುವಾಸನೆಗಳು ಗರ್ಜಿಸುವ ಧ್ವನಿಗೇಳಿ ಹೆದರಿತು ಶತ್ರು ಮಾರ್ಬಲವು 28 ಕಂಡು ದೃಷ್ಟರ ಸೈನ್ಯದವರು ಸಿದ್ದವಾದರು ಸಮಸ್ತದಲಿ ತಮ್ಮ ತಮ್ಮೊಳು ಹಾಕ್ಯಾಡುತಲಿ ನಡೆದುಬಂದರು ಸನ್ಮುಖಕೆ 29 ಚಿಂತಿಸುತಲಿ ಪರಾಕ್ರಮರು ಬಂದರು ವೀರ ಕಾಳಗಕೆ ಕಾಳಿ ಭೇರಿಗಳು ಬಾರಿಸುತ ಬಂದರು ಮಹಾಜನರು 30 ಕೂಗಿ ಚೀರುತ ಒದರುತಲಿ ಬಂದು ನಿಂದರು ಪರಾಕ್ರಮರು ಅಹಂ ಮಮತಾ ಗಜಗಳು ನಡೆದು ಬಂದವು ಎದುರಾಗ 31 ಕಾಲಾಳು ಸಹ ಕೂಡಿಕೊಂಡು ರಚಿಸಿ ಬಂದರಶ್ವಗಳು ಕೂಡಿತು ಉಭಯ ದಳವು 32 ಸುವಾಸನೆ ಧೂಳಿಯೊಳಗೆ ಅಡಗಿತು ದುರ್ವಾಸನೆಯು ಅಹಂ ಮಮತಾ ಗಜಗಳು ಕಂಡು ಓಡಿದವು ಹಿಂದಾಗಿ33 ಬೆನ್ನಟ್ಟಿ ವಿವೇಕ ಗಜವು ಹೊಡೆದು ಕೆಡವಿದವು ಧರೆಗೆ ಅವಸ್ಥೆಗಳು ಕಾಲಾಳುಗಳು ಜಗಳ ಮಾಡಿದವು ನಿಮಿಷವು 34 ವಿಚಾರ ಕಾಲಾಳು ಮುಂದೆ ಓಡಿದರು ದೆಸೆದೆಸೆಗೆ ಚಂಚಳವೆಂಚಳಶ್ವಗಳು ಏರಿ ಬಂದರು ರಾವುತರು 35 ಯುದ್ದಮಾಡಿದರರಗಳಿಗೆಯು ಶುದ್ಧಿ ಇಲ್ಲದೆ ಓಡಿದರು ನಿರ್ಮಳ ನಿಶ್ಚಳಶ್ವಗಳು ಏರಿ ಬೆನ್ನಟ್ಟಿ ನಡೆದರು 36 ಚಂಚಳ ವೆಂಚಳಶ್ವಗಳ್ಹರಿಗಡೆದರು ಕಾಲು ಬಲ ರಾಹುತರ ಸಹವಾಗಿ ಕಡೆದೊಟ್ಟಿದರು ಶಿರಸವನು 37 ವೀರರು ಕಾಮಕ್ರೋಧಗಳು ಬಂದರು ಅತಿಶಯಉಗ್ರದಲಿ ಶಮೆ ದಮೆ ವೀರಗಳೊಡನೆ ಕಾದಿ ಮಡಿದರು ಆ ಕ್ಷಣದಲಿ 38 ಬಂಟ ಜನರು ಬಂದರು ಸಿಟ್ಟು ಕೋಪದಲಿ ಭಾವ ಭಕ್ತಿಯ ಬಂಟರೊಡನೆ ಕಾದಿ ಕಾಲಾಳು ಮಡಿದರು 39 ಪ್ರಪಂಚ ಸೈನ್ಯಾಧಿಪತಿಯ ಕೈಸೆರೆಯಲಿ ಹಿಡಿದರು ಬೋಧ ಸೈನ್ಯಾಧಿಪತಿಯು ನಾದಘೋಷವು ಮಾಡಿಸಿದನು 40 ಉಲ್ಹಾಸವೆಂಬ ಸರವರಿಯು ಹಚ್ಚಿಸಿದರು ಸೈನ್ಯದೊಳಲ್ಲಿ ದಯ ಕರುಣ ಭಾಂಡಾರಗಳು ಒಡೆದು ಧರ್ಮ ಮಾಡಿದರು 41 ಪಂಚೇಂದ್ರಿಯಗಳ ಪರಾಕ್ರಮರ ಹಿಡಿದು ಕಟ್ಟಿದರು ಪಾಶದಲಿ ಸ್ಮರಣಿ ಚಿಂತನೆ ಪರಾಕ್ರಮರು ಉಬ್ಬಿದರು ಹರುಷದಲಿ 42 ದಶವಾಯುಗಳ ಬೇಹಿನವರ ಹಿಡಿದು ಬಂಧನವ ಮಾಡಿದರು ಅವಲೋಕನೆ ಬೇಹಿನವರ ಸದ್ಬ್ರಹ್ಮದಲಿ ಸುಖಿಸಿದರು 43 ಸಪ್ತವ್ಯಸನ ಪರಿವಾರಗಳು ರತಿಪ್ರೇಮರೊಡನೆ ಕೂಡಿದರು ಪಂಚಾಗ್ನಿಗಳು ಪಂಜಿನವರು ಪಂಚ ಪಾಲದಿ ಅಡಗಿದರು 44 ಲಯ ಲಕ್ಷಗಳು ಪಂಜಿನವರು ಸಂಜೀವದಂತೆ ಹೊಳೆವರು ಅಷ್ಟಮದವು ಕಾವಲಿಗಳು ಅಡಗಿದವು ಸ್ಥಳ ಸ್ಥಳಲಿ 45 ಮೌನ್ಯ ಮೋನವೆ ಕಾವಲೆಗಳು ತಾವೆ ತಾವಾಗಿ ದೋರಿದರು ತ್ರಿಗುಣರ ಪಾರುಪತ್ಯದವರು ಒಂದು ಸ್ಥಳದಲಿರಿಸಿದರು 46 ನಾದ ಬಿಂದು ಕಳೆಯಗಳು ಮುಟ್ಟಿ ಪಾರುಪತ್ಯ ಮಾಡುವರು ಶತ್ರುರಾಘನ ಭೂಷಣಗಳು ಸೆಳೆದುಕೊಂಡರು ಗಳಿಗೆಯೊಳು 47 ಅವಿದ್ಯ ಮೊದಲಾದಾಗದರಿಂದ ಚೋಳಿಯು ಮಾಡಿದರು ಜನನ ಮರಣದ ಮಂಪಟವು ಸುಟ್ಟು ಸಂಹಾರ ಮಾಡಿದರು 48 ಚಿಂತೆ ಭ್ರಾಂತಿಯ ದ್ವಾರಗಳು ಕಿತ್ತಿ ಬೀಸಾಟಿದರು ಆಶಾಪ್ಯಾಟಿಗೆ ಧಾಳಿನಿಕ್ಕಿ ಲೂಟಿಸಿದರು ನಿಮಿಷದಲಿ 49 ತನು ದುರ್ಗ ವಶಮಾಡಿಕೊಂಡು ಇಳಿಯಿತು ಸೈನ್ಯ ಸುಖದಲಿ ಸದ್ಗತಿ ಮುಕ್ತಿ ಮಂಟಪವು ಕೊಟ್ಟರು ಅಚಲದಲಿ 50 ಯೋಗ ಭೋಗದ ದ್ವಾರದಿಂದ ನಡೆದರು ಮಹಾ ಭಕ್ತಜನರು ಮನ್ನೆವಾರರು ಕರಣಗಳು ಅಭಯವ ಕೊಂಡು ನಡೆದರು 51 ಅಜ್ಞಾನವೆಂಬಾಶಾಗತಿಯು ಮುಕ್ತವಾದಳು ಸುಜ್ಞಾನz ಮಾಯವಾದರು ವೈರಾಗ್ಯದಲಿ52 ದೃಷ್ಟ ಪುರುಷನ ತಂದಿನ್ನು ಇಟ್ಟುಕೊಂಡರು ತಮ್ಮೊಳಲಿ ತನು ದುರ್ಗ ವಶಮಾಡಿಕೊಂಡು ಮುಂದೆನಡೆದರಾನಂದದಲಿ 53 ಅಧಾರ ಪುರ ಬೆನ್ನಮಾಡಿ ನಡೆದರು ಬ್ರಹ್ಮಾಂಡಪುರಕೆ ವಿಘ್ನಹರನ ಬಲಗೊಂಡು ಮ್ಯಾಲೆ ಮಣಿಪುರಕೆ ನಡೆದರು 54 ಅನಾಹತಪುರ ದಾಟಿ ಮುಂದೆ ನಡೆದರು ವಿಶುದ್ಧ ಪುರಕೆ ಸ್ಥಳ ಸ್ಥಳ ಹರುಷ ನೋಡುತಲಿ ನಡೆದರಗ್ನಿ ಚಕ್ರಪುರಕೆ 55 ಮ್ಯಾಲಿಹ ಬ್ರಹ್ಮಾಂಡ ಪುರವು ಹೊಳೆಯುತಿಹದು ಪರಿಪರಿಲಿ ಸಹಸ್ರದಳ ಕಮಲಗಲು ಥಳಥಳಿಸುವದದರೊಳು 56 ಘನ ಬೆಳಗಿನ ಪ್ರಭೆಯುಗಳು ಹೊಳಯುತಿಹುದು ಕಿರಣಗಳು ಹರಿ ಬ್ರಹ್ಮಾದಿಗಳು ವಂದಿಸುವ ಸ್ಥಳ ನೋಡಿ ಗುರು ಕರುಣದಲಿ 57 ಪಿಂಡ ಬ್ರಹ್ಮಾಂಡೈಕ್ಯಪುರದಿ ಒಳಗಿಹ ಹಂಸಾತ್ಮಗತಿಯು ಸಹಸ್ರ ರವಿಕೋಟಿ ತೇಜ ಭಾಸುವಾ ವಸ್ತುಗತಿಯು 58 ವಿಶ್ವ ವ್ಯಾಪಕನೆಂಬ ಸ್ಥಿತಿಯು ಮಹಿಮಾನಂದ ಸ್ಫೂರ್ತಿಯು 59 ದೃಷ್ಟಾದೃಷ್ಟಗತಿಯು ದೋರಿದ ಗುರು ಸದೃಷ್ಟದಲಿ ಗುರು ಕರುಣದ ಕಟಾಕ್ಷದಲಿ ಬೆರೆಯಿತು ಮನ ಹರುಷದಲಿ 60 ಕಂಡು ಮಹಿಪತಿಯ ಜೀವನವು ಧನ್ಯವಾಯಿತು ದೃಷ್ಟದಲಿ ಪರಮಾನಂದ ಸುಪಥದಲಿ ಜೀವನ ಮುಕ್ತ್ಯದರಲ್ಲಿ 61
--------------
ಕಾಖಂಡಕಿ ಶ್ರೀ ಮಹಿಪತಿರಾಯರು
(ಮನೆಬಾಗಿಲ ಮೇಲೆ ಶ್ರೀನಿವಾಸ ಮೂರ್ತಿ) ಮಾಧವ ನಿಧಿಗಿರಿನಾಯಕ ಪದಕಮಲಾಶ್ರಿತ ಪರುಷಸುಖದಾಯಕ ಪ. ಬಲಿಯ ದೃಢಕೆ ಮೆಚ್ಚಿ ಬಾಗಿಲ ಕಾಯ್ದನಿ- ರ್ಮಲ ಕರುಣಾಮೃತ ವಾರಿಧೆ ಸುಲಭದಿ ಮುಂದಿನ ವಲಭಿತ್ಪದವನು ಸಲಿಸುತ ನೀನೀ ನಿಲಯದಿ ಸೇರಿದಿ 1 ಮಾಕಳತ್ರ ಮಮತಾನರಮೋಹ ನಿ- ರಾಕರಿಸಖಿಳ ಸುಖಾಕರನೆ ಸ್ವೀಕರಿಸೆನ್ನಯ ಸರ್ವ ಸಮರ್ಪಣ ಬೇಕು ಸರ್ವದಾ ತ್ವಜನ ತರ್ಪಣ 2 ಭೂರಮೇಶ ಗೃಹದ್ವಾರದಿ ನೀ ನೆಲೆ- ದೋರಲು ದುರಿತವು ಸೇರದಲೆ ದೂರೋಡುವದೆಂದರಿತು ನಂಬಿದೆನು ನೀರಜಾರಮಣ ಶೇಷ ಗಿರೀಶ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಶೇಣಿಯ ಗೋಪಾಲಕೃಷ್ಣನನ್ನು ನೆನೆದು) ತಾಪವ ಬಿಡಿಸು ದಯಾಪರ ಶ್ರೀ ಗೋಪಾಲ ಕೃಷ್ಣ ನೀ ಕಾಪಾಡು ಸಂಸಾರ ಪ. ಲೋಕನಾಯಕ ನಿನ್ನ ಕರುಣವಂದಿದ್ದರೆ ಸಾಕೆಂಬೆ ಜ್ಞಾನಾನಂದಕರ ಪಾಕಶಾಸನ ಸುತಗೊಲಿದಾತನ ಭಂಡಿ ನೂಕಿ ನಡೆಸಿದ ಕೃಪಾಕರ ಮೂರುತಿ 1 ನಡೆವುದು ನುಡಿವುದು ಕೊಡುವುದು ಕೊಂಬುದು ಮಡದಿ ಮಂದಿರ ಮಮತಾಸ್ಪದದ ಒಡವೆ ವಸ್ತುವು ಮೊದಲಾದುದೆಲ್ಲವನು ಶ್ರೀ- ಮುಡಿಯ ಸಂವರಿಸುವ ಕರದಿ ಸಂಗ್ರಹಿಸುತ2 ನಿನ್ನಡಿಗಳ ನಂಬಿ ನಿಂದಿಹೆನಿಲ್ಲಿ ಪ್ರ- ಸನ್ನ ಮುಖಾಂಬುಜ ಪಾಲಿಸೆಂದು ಅನ್ಯರಿಗೆಂದೆಂದು ದೈನ್ಯ ತೋರಿಸಲಾರೆ ಪನ್ನಗಾಚಲವಾಸ ಪರಮ ದಯಾಳೊ 3
--------------
ತುಪಾಕಿ ವೆಂಕಟರಮಣಾಚಾರ್ಯ
ಕರುಣಾದಿ ಪಿಡಿ ಕರವಾ ದೇವರ ದೇವ ಪ ಕರುಣಾದಿ ಪಿಡಿಕರ ಸರಸಿಜಾಂಬಕ ಎನ್ನ ಗುರು ರಘುಪತಿ ಪಾಲಾ ಮರುತಾಂತರಿಯಾಮಿ ಅ.ಪ ಗತಶೋಕ ಜಿತಮಾಯ ಪತಿತ ಪಾವನವೇದ್ಯ ಪ್ರತಿಪಾದ್ಯ ಕ್ಷಿತಿಪ ಭಾರತಿ ಕಾಂತ ವಂದ್ಯಾ ಆ ನತರ ಪಾಲಕ ದುಷ್ಟದಿತಿಜಾರಿ ತವಪಾದ ಶತಪತ್ರ ಬಿಡದೆ ಸಂತತ ಭಕುತಿಯಲಿಂದ ಸ್ತುತಿಪಾರ ಮಿತ ಅಘವಾ ಕಳೆದು ಮತ್ತೆ ಹಿತದಿ ಸದ್ಗತಿ ಕೊಡುವಾ ನಿನ್ನಯ ದಿವ್ಯಾಚ್ಯುತವಾದ ಘನದಯವಾ ಪೊಗಳು ವಂಥ ಮತಿವಂತರನು ಕಾಣೆ ಶತಮುಖಜಜ ಮಾವಾ 1 ಅನಿಮಿತ್ಯ ಬಂಧುವೆ ವನಚಾರಿ ಕೂರ್ಮನೆ ಕನಕ ನೇತ್ರಾರಿ ಪಾವನತರ ನರ ಪಂಚ ನಾನಾ ರೂಪದಿಂದ ಬಾಲನಾ ಕಾಯ್ದೊನರ ಹರಿಬಲಿ ನಿತ್ಯ ಅನಘಾತ್ಮ ಜನನೀಯ ಕೊಂದಾನೆ ಜನಕ ಜಾಪತಿಯ ರು ಕ್ಮಿಣಿ ಮನೋಹರನೆ ವಸನದೂರ ಹಯರೂಢ ಜನನ ರಹಿತ ವಿಖ್ಯಾತಾ ನಮಿಸುವೆ ಅನಿಮಿಷಪಜನ ಸುತಾ ಬೇಡಿಕೊಂಬೆ ಅನುದಿನದಲಿ ಮಮತಾ ಕನಕೋದರನ ತಾತಾ 2 ಸರಿವೀರ ಹಿತ ಬಲಿಸರಸಿ ಜಾಂಬಕ ಮುರ ಹರ ಹರ ವಂದಿತ ಹರಿಮುಖ ಹರಿನುತ ಪಾದ್ಯ ಹರಸು ಎನ್ನಯ ಅಘ ನಿರುತ ನಿನ್ನ ಡಿಂಗರರ ನೀಕರದಿತ್ತು ಗುರುವಿನ ಚರಣಾದಿ ಸ್ಥಿರ ಭಕುತಿಯ ಕೊಟ್ಟು ವರ ಶಿರಿಗೋವಿಂದ ವಿಠಲನೆ ನೀ ಯನ್ನ ಮರಿಯದೆ ಮಮತೆಯಿಂದಾ ನಿತ್ಯ ಗರಿಯುತಲಿರು ಆನಂದಾ ನಿನ್ನಯ ಪಾದಾದಿರಲಿ ಮನಸು ಮುಕುಂದಾ ದುರುಳ ಭವದ ಬಂಧ 3
--------------
ಅಸ್ಕಿಹಾಳ ಗೋವಿಂದ
ಗುರು ವಾದಿರಾಜ ರವಿಕೋಟಿ ತೇಜಾ ಶರಣೆಂಬೆನಯ್ಯಾ ಸತತಗೇಯಾ ಪ ನಂಬಿದೆನು ನಿನ್ನ ದಯ ಸಂಪನ್ನ ಸಂಭ್ರಮದಲ್ಲೆನ್ನ ಪೊರೆಯೊ ಪ್ರಸನ್ನ 1 ವೇದಶಾಸ್ತ್ರ ಬಲ್ಲ ಭಳಿರೆ ಮಲ್ಲ ಭೇದ ಜ್ಞಾನವೆ ಎಂಬೊ ನಿಜವೆಂಬ ಫಲ 2 ಮಾಯಿಗಳ ವದ್ದ ಮಮತಾ ಗೆದ್ದ ಗಾಯನ ಪ್ರಸಿದ್ಧ ಗುಣದಲಿ ಇದ್ದ 3 ನಾನಾ ಚಾರಿತ್ರ ತೋರಿದ ಮಿತ್ರ ಸಿರಿ ಹರಿಯ ಗಾತ್ರದೊಳಿಟ್ಟ ಪಾತ್ರ4 ಸಂತತ ವಿರಕ್ತ ಜೀವನ ಮುಕ್ತಾ ಸಂತಾರಿ ಸುಶಕ್ತಾ ಹರಿನಾಮ ಭೋಕ್ತಾ 5 ಸ್ವಾದಿಪುರವಾಸ ಸಾಧುಗುಣ ಭಾಸಾ ಸದ್ಭಕುತ ಪೋಪ ಮಧ್ವಮುನಿಯ ದಾಸಾ 6 ವಿಜಯವಿಠ್ಠಲನ್ನ ನೆನೆಸುವ ಘನ್ನ ಹರಿ ತ್ರಿಜಗ ಹಯವದನನ್ನ ಪರನೆಂಬೊ ಪೂರ್ಣಿ7
--------------
ವಿಜಯದಾಸ
ಗುರು ಸತ್ಯಜ್ಞಾನರ ಚರಣ ದರುಶನದಿ ನೂರಾರು ಜನ್ಮ ಪಾವನವಾಯಿತು ಮುದದಿ ಪ ಗುರುಗಳುಪದೇಶದಿಂ ಪರಮ ಪಾವನನಾದೆ ನರಹರಿಯ ಭಜಿಸುವ ಅಧಿಕಾರಿಯಾದೆ ಗುರುಮಧ್ವರಾಯರಾ ಗ್ರಂಥಶ್ರವಣಾದಿಗಳ ನಿರುತದಲಿ ಮಾಡುವುದಕರ್ಹನಾದೆ 1 ಗುರುಗಳುಪದೇಶವಿಲ್ಲದೆ ಮಾಡುವ ಮಂತ್ರ ಗುರುಗಳುಪದೇಶವಿಲ್ಲದ ಜ್ಞಾನವು ಗುರುಗಳುಪದೇಶವಿಲ್ಲದ ಕರ್ಮಕವನಗಳು ಉರಗವಾಸದಂತೆ ಕಾಣಯ್ಯ 2 ಅಂಕಿತವಿಲ್ಲದಾ ಪದ್ಯಗಳು ಶೋಭಿಸವು ಅಂಕಿತವು ಇಲ್ಲದಿರಬಾರದೆನುತಾ ಪಂಕಜನಾಭ ಹನುಮೇಶ ವಿಠಲನೆಂಬೊ ಅಂಕಿತವನಿತ್ತಾ ಗುರುವು ಮಾಡಿ ಮಮತಾ 3
--------------
ಹನುಮೇಶವಿಠಲ
ನೋಡು ಮನವೆ ನಿನ್ನೊಳಾತ್ಮನ ನೋಡು ಮನವೆ ಧ್ರುವ ಸಾಧುಸಂಗವ ನೀ ಮಾಡಿ ಭೇದ ಬುದ್ಧಿಯ ಹೋಗಾಡಿ ಆದಿತತ್ವವ ನೀ ನೋಡಿ ಸದಮಲಾನಂದ ಕೂಡಿ1 ಕಾಮಕ್ರೋಧವ ಕಳೆದು ಮಮತಾ ಮಾಯವನಳಿದು ತಾಪ ತೊಳೆದು ಶಮದಮಾದಿ ತಿಳಿದು 2 ನಾನು ನೀನೆಂಬುದು ನೀಗಿ ಜ್ಞಾನದಿಂದ ಗುಪ್ತನಾಗಿ ಭಾನುಕೋಟಿತೇಜನಂಘ್ರಿ ಬೆರೆದು ನಿಶ್ಚಿಂತನಾಗಿ 3 ಅವಿದ್ಯುಪಾಧಿಯ ಜರಿದು ಮೂವಿಧ ಮದ ಮುರಿದು ಪವಿತ್ರ ಪ್ರಣವರಿದು ಸುವಿದ್ಯ ಸುಖಬೆರೆದು 4 ಬಾಹ್ಯಾಂತ್ರದೊಳಿಹ ಪೂರ್ಣ ಮಹಾಗುರುನಿರಂಜನ ಇಹ ಪರತ್ರ ಸಾಧನ ಮಹಿಪತಿ ಅಂತರಾತ್ಮನ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮನವೆ ಸದಾ ಚಿಂತಿಸುವೆ ವನಜನಾಭನ ನಂಬದೆ ಪ ಕೊನೆಗಾಣುವದೇನೊ ಫಲವೇನೊ ಅ.ಪ ಮದಮತ್ಸರ ಕಾಮಕ್ರೋಧ ಲೋ- ಭದಿ ಮಮತಾಸ್ಪದವಾಗಿ ಮರತೋಗಿ 1 ಗುರುಹಿರಿಯರು ನೋಡಿ ವಂದಿಸದೆ ನೀ ಮರುಳಾಟಗಳಾಡಿ ಪರರನಪಹಾಸಿಸಿ ಪಾಪಿ ಇವನೆನಿಸಿ ನರಕಕ್ಕೆ ಗುರಿಯಾಗುವೆ ವೋ ಚಪಲ ಮನವೇ 2 ವೇದಮಾರ್ಗವ ಬಿಟ್ಟು ಯಾವಾಗಲು ದು- ರ್ವಾದಗಳನು ಕೊಟ್ಟು ಆದಿಯನುತಲಿ ಅನಾದಿಯನುತಲಿ ಮುದಗೂಡಿ ಅತಿಭಾಷೆಗಳಾಡಿ 3 ತತ್ವ ತಿಳಿಯಬೇಕು ಜ್ಞಾನವೆಂಬೋ ಸಂ- ಪತ್ತಿನೊಳಿರು ಸಾಕು ನಿತ್ಯಾನಿತ್ಯವಿವೇಕ ಶ್ಯೂನವಾಗಿ ನಿತ್ಯ ಕೆಡಬೇಡೆಲವೋ ಚಪಲಾ 4 ತ್ರಿವಿಧ ಜೀ- ವರೊಳಿರುವನು ಮುಕುಂದ ಗುರುರಾಮವಿಠಲ ನಿಜ ಶರಣರಿಗೆಲ್ಲ ಪರಮಪದವಿ ಈವಾ ದೇವದೇವ 5
--------------
ಗುರುರಾಮವಿಠಲ
ಮಹದೇವ ಮದ್ರೋಗ ಮೂಲವಳಿಯೊ ಪ ಮಹದಾದಿಗಳ ದೈವ ಹರಿಯಲ್ಲಿ ರತಿ ನಿಲಿಸಿ ಅ.ಪ. ಸರ್ವಸಿದ್ಧನೆ ವಿಷಯ ಪರ್ವತಕೆ ಮಹಕುಲಿಶ ಕಮಲ ಭೃಂಗ ಮರ್ವೆಂಬ ಮಾರಿಯನು ಅವಳ ನೇತ್ರದಿ ಸುಟ್ಟು ಸರ್ವಾತ್ಮ ಹರಿಧ್ಯಾನಮಗ್ನ ಮನ ನೀಡೆನಗೆ 1 ತಾಳಲಾರೆನೊ ಸ್ವಾಮಿ ಕಾಳ ವಿಷಯದ ದೋಷ ಫಾಲಾಕ್ಷ ಬಿಡಿಸೈಯ್ಯ ಭೋಗದಾಸೆ ಶೀಲ ಮನದಲಿ ಹರಿಯ ಲೀಲೆ ಲಾವಣ್ಯಗಳ ಮೇಲಾಗಿ ನೋಡುವ ಮಹಕರುಣ ಮಾಡೆನ್ನ 2 ಭಾರತೀಶನ ಪಾದಕಮಲ ಮಧುಪನೆ ನಿನ್ನ ಕಾರುಣ್ಯವಾದವನೆ ಶೌರಿವಶನೊ ಮಾರಾರಿ ಮದ್ಭಾರ ವಹಿಸಿ ಪಾಲಿಸು ಎನ್ನ ಧೀರ ತವ ಚರಣಾಬ್ಜ ವಾರಿಜಕೆ ಮೊರೆ ಹೊಕ್ಕೆ 3 ಎನ್ನ ಹೀನತೆ ನೋಡಿ ಘನ್ನ ಭಯಗೊಂಡಿಹೆನೊ ಧನ್ಯರ ಮಾಳ್ಪ ದಯ ನಿನ್ನದಯ್ಯಾ ಪುಣ್ಯತಮ ಮೂರುತಿಯ ಪ್ರತಿಬಿಂಬ ಹರಿಸಖನೆ ಧನ್ಯನಾ ಮಾಡೆನ್ನ ವಿಷಯ ಜಯ ದಯಮಾಡಿ 4 ಅಮಿತ ಮಂಗಳದಾಯಿ ವಿಭವ ವಾಮದೇವ ಮಮತಾದಿ ಅಭಿಮಾನ ದೋಷವರ್ಜಿತ ಮಹಾ ಸಾಮ್ರಾಜ್ಯ ಯೋಗಕ್ಕೆ ಅಧಿನಾಥ ಕರುಣಿಪÀುವುದು 5 ಶಂಭು ಶಂಕರ ತವ ಪದಾಂಬುಜದಿ ಶಿರವಿಟ್ಟು ಹಂಬಲಿಪೆನಿಷ್ಟಪದ ಪಾಲಿಸೆಂದು ತುಂಬಿತ್ವಕ್ಕರಸನ ಹೃದಂಬುಜದೊಳರಳಿಸಿ ಮೂರ್ತಿ ದರುಶನ ನೀಡೊ 6
--------------
ಜಯೇಶವಿಠಲ
ಮಾತು ಆಡುವೆ ಯಾತಕೆ ಮನವೆ ನೀ ಸೋತು ಸುಮ್ಮನಿರು ಜೋಕೆ ಪ ಮಾತು ಆಡುವೆ ಯಾಕೆ ಮಮತಾ ಅಹಂಕಾರದಿ ಶ್ರೀತರುಣಿವರನ ಸಿರಿನಾಮವಿಲ್ಲದೆ ಅ.ಪ ಕಾಯ ಅಸ್ಥಿರವೆನ್ನದೆ | ಇಹ ಪರಕೆ ಸ- ಮಾಯವಾದಗಳಾಡೆ ಬಾಯಿ ನೋವಲ್ಲದೆ 1 ವೇದ ಪುರಾಣವಿಲ್ಲ | ಶಾಸ್ತ್ರವೆ ಬ್ರಹ್ಮ- ವಾದವೇ ಮೊದಲೇಯಿಲ್ಲಾ ಸಾಧನೆಯೆಂಬುವದು ಲೇಶಯಿದರೊಳಿಲ್ಲಾ ಹಾದಿಹೋಕರ ಕೂಡಿ ಪ್ರೌಢನು ನಾನೆಂದು 2 ಹರಟೆ ಹರಟೆ ಮೋದಿಸಿ ಪರಗತಿ ಚಿಂತೆ ಬಿಂದು ಮಾತ್ರವು ಕಾಣೆ ಹರಿವ ನೀರೊಳು ಬೂದಿಹಾಕುವಂದದಿ ವ್ಯರ್ಥ 3 ಒಂದಕ್ಕೊಂದ್ಹೆಚ್ಚಿಸುತ | ಶುಷ್ಕವಾದ- ದಿಂದ ಕಾಲವ ಕಳೆಯುತ ನಿಂದಿಸಿ ಪರರ ಸ್ವಯೋಗ್ಯತೆ ತಿಳಿಯದೆ 4 ಬಲ್ಲೆನಾ ಬಿಡು ಎಂಬುವೆ | ಸದಾ ಒಬ್ಬ- ಪುಲ್ಲಲೋಚನ ಗುರುರಾಮವಿಠಲನ ಕಾಣ- ಲಿಲ್ಲ ಶೋಧಿಸಿ ತಿಳಿಯಲಿಲ್ಲ ಬರಿದೆ ಬಾಯಿ 5
--------------
ಗುರುರಾಮವಿಠಲ
ಮೂರ್ತಿ ಅಪನೇಕಾ ಶ್ರೀಹರಿ ಭಕುತಿದಾಯಕ ಪ ಮಾಯಾ ಮಮತಾಕೋ ಛುಡಾದೇ ಪ್ರೇಮಪಾಶಾಕೋ ಮಿಟಾದೇ ನಾಶ ಹಿರಸಕೋ ಕಟಾದೇ ವಿಷಯಲಂಪಟಕೋ 1 ಮೋಕಾ ದೋ ಅಪನೀ ಕೀರ್ತನ ಕೋ ಮಜಾದೋ ನಾಮಸ್ಮರಣ್ಕೇ ಕೃಪಾದೋ ಭಜನ ಆನಂದಕೇ ಬನಾದೋ ದೂತ ವೈಕುಂಠಕೇ 2 ಕರಾದೋ ಸಂಗ ದಾಸೋಂಕೇ ಭುಲಾದೋ ಪಾಪ ಕರ್ಮೌಂ ಕೋ ಪಿಲಾದೋ ಧ್ಯಾನ ಅಮೃತಕಾ ಶ್ರೀರಾಮ ನಾಮ ತಾರಕಾ 3
--------------
ರಾಮದಾಸರು
ಮೃಡನ ಜಟಾಂತರವಾಸಿ ನಾಮಕಳೆ ಪ ನಿರುತ ಹರಿ ಗುರು ಕರುಣಾ ಪಾತ್ರೆ ಪರಮ ಪುರುಷ ದೂಷಿ ನಿಚಯ ವೀತಿ ಹೋತ್ರೆ 1 ದುರಿತ ಮಾರ್ಗಚರಿತ ಜನ ಹೃತ್‍ಶೂಲೆ ಮದನ ಶರಜಾಲೆ 2 ನಿವಾರಿತ ಮಮತಾ ಪಾಶ ವಾರಂ ವಾರೆ ಹರಿಕಥಾಶ್ರವಣ ದಳಿತ ಅಶ್ರುಧಾರೆ 3 ವರಸತ್ಕಲಾಪ ಮಂದಾಯು ಹರಣೆ ಪರಿಪರಿ ಸುಕ್ಷೇತ್ರ ಚರಿತ ಚರಣೆ 4 ಗುರುದತ್ತಾಶ್ರೀತ ವರಸುಪಥೆ ಹರಿಸ್ಮರಣಾವಿನಾ ನ ಜೀವಿತ ಶಪಥೆ 5 ಪರಿಕರಾ ಪರಿತದಾಕಾರ ವೀಕ್ಷಿತ ನೇತ್ರೆ ಸರಿತಶ್ವಾಸ ಸಾವೃತ ಪರಿಮಳಗಾತ್ರೆ 6 ಲಜ್ಜೋದಧಿ ನಕ್ಷೇಪಿತ ಗಜಗಮನೆ ಅರ್ಜಿತಾಂಗಾರ ವಿಲಸಿತ ಶೃಂಗಾರ ವದನೆ 7 ರುಜು ಜ್ಞಾನಭಕ್ತಿ ವಿಧಾರಣ ಶಕ್ತೆ ವಿಜಯ ರಾಮಚಂದ್ರವಿಠಲ ಪದ ಸೇವಾಸಕ್ತೆ 8
--------------
ವಿಜಯ ರಾಮಚಂದ್ರವಿಠಲ
ಯಜನವಾಗಲಿ ನಾನು ಭುಜಿಸುವುದು ಎಲ್ಲ ಪ ಅಜಪಿತನೆ ಅದರ ಅನುಸಂಧಾನವನು ಅರಿಯೆ ಅ.ಪ ದೇಹವೆಂಬುದೆ ಯಜ್ಞಶಾಲೆಯಾಗಿ ಮಹಯಜ್ಞಕುಂಡವು ಎನ್ನ ವದನವಾಗಿ ಆವಹನೀಯಾಗ್ನಿಯು ಮುಖದಲ್ಲಿ ಹೃದಯದೊಳು ಗಾರ್ಹಸ್ಪತೀ ದಕ್ಷಿಣಾಗ್ನಿಯು ಸುನಾಭಿಯಲ್ಲಿ 1 ಅರಿ ಪಂಚಾಗ್ನಿಯೊಳು ಆಕ್ಷಣದಿ ಪ್ರಾಣಾದಿ ಪಂಚರೂಪಗಳು ಹೋತಾಉದ್ಗಾತಾದಿ ಋತ್ವಿಕ್ಕುಗಳಾಗಿ ನಿಂತಿಹರೆಂದು2 ಆಹುತಿಯ ಕೊಡತಕ್ಕ ಶೃಕಶೃಕ್‍ಶೃವಗಳು ಬಾಹುಗಳು ಇಹಭೋಜ್ಯವಸ್ತುವೆಲ್ಲ ಆಹುತಿಯು ದೇಹಗತ ತತ್ವರು ಪರಮಾತ್ಮ ಬ್ರಾಹ್ಮಣರು ಜೀವ ದೀಕ್ಷಿತನು ಬುದ್ಧಿತತ್ಪತ್ನಿ 3 ಅಹಂಮಮತಾದಿ ಅರಿಷಡ್ವರ್ಗಗಳು ವುಹಯಜ್ಞದ ಯೂಪಸ್ಥಂಭದ ಪಶುಗಳು ಅಹರಹ ಬಹ ನೀರಡಿಕೆಯು ಕುಡಿವನೀರೆಲ್ಲವು ಯಜನಕಾರ್ಯದ ಮಧ್ಯ ಪರಿಷಂಚಾಮಿ4 ಇಷ್ಟಾದರನುಸಂಧಾನವನೆ ಕೊಡುಕಂಡ್ಯ ಶ್ರೇಷ್ಠಮೂರುತಿ ಶ್ರೀ ವೇಂಕಟೇಶ ನಿಷ್ಠೆಯೆನ್ನೊಳಗಿಲ್ಲ ಉರಗಾದ್ರಿವಾಸವಿಠಲ ಹೊಟ್ಟೆಹೊರೆವುದು ನಿನಗೆ ತುಷ್ಟವಾಗಲಿ ದೇವ 5
--------------
ಉರಗಾದ್ರಿವಾಸವಿಠಲದಾಸರು
ರಾಮಾ ಕೃಷ್ಣಾ ಗೋವಿಂದಾ ಗೋಪಾಲ ಕೇಶವಾ | ಭವ ಪಾಶವಾ ಪ ಅಹಂಮಮತಾವೆಂಬಾ ಸಂಚಾರ ವಾಯಿತು | ಸೋಹಂವೆಂಬಾ ತಿಳಿವಾದೆಚ್ಚರ ಹೋಯಿತ್ತು | ನಾಹಂಕರ್ತಾನೆಂದು ಸುವಿಚಾರ ಸೇರಿದಾ | ಸೋಹಂ ಎಂದು ನುಡಿಯದಾ ಕುಮತಿ ಮೀರಿದಾ 1 ಅನಾತ್ಮದಲ್ಲಿ ಆತ್ಮ ಭಾವನೆ ಮೂಡಿದೇ | ಸನಾತನ ಚೈತನ್ಯ ತಾನೆಂದು ನೋಡದೆಲ | ಮನದಿಂದ ಈ ಕ್ಷಣ ತ್ರಯವಕೂಡಿದೇ | ಕನಸಿನಂದದಿ ಸಂಸಾರ ದೊಳಾಡಿದೇ2 ಮರಹು ಬಿಡಿಸಿ ನಿನ್ನೆಚ್ಚರ ದೋರಿಸೀ | ಚರಣದ ಭಜನೆಗೆ ಕಣ್ಣ ದೆರೆಸೀ | ಗುರುಮಹಿಪತಿ ಪ್ರಭು ದಯಬೀರಿಸೀ | ಹೊರೆವದೆನ್ನಯ ಅಪರಾಧ ಕ್ಷಮಿಸಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು