ಒಟ್ಟು 3 ಕಡೆಗಳಲ್ಲಿ , 2 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಂಬಿದೆನೊ ನಿನ್ನ ಅಂಬುಜನಯನ ಕೃ ಪಾಂಬುಧೆ ದೃಢದಲಿ ಪ ಸಂಭ್ರಮದಲಿ ಕಿವಿ ತುಂಬುತಿರುವ ಆ ಡಂಬರ ವಚನಕೆ ಮುಂಬರಗೊಳ್ಳುತ ಅ.ಪ ನವ ಘನ ನಿಭಕಾಯ ನಿನ್ನಯ ಕರುಣಮಯ ಸಹಾಯ ವಿಲ್ಲದೆ ಬಿಗಿಯುತಿರುವ ಮಾಯಾ ಪಾಶವ ತೊರೆಯಲಳವೆ ಜೀಯಾ ನಿನ್ನಯ ದಯವ ಪಡೆದ ಪರಿಯನರುಹುವ ಯತಿವರೇಣ್ಯ ಗುರುಮಧ್ವರಾಯರ ಪರಮ ಸಮಯ ಸಾರಗಳನು ಸಂತತ ಶ್ರವಣ ಮನನ ಧ್ಯಾನಗಳಿಂದ ಪರಿಚಯ ಪಡೆದು ದು ಷ್ಟ ವಿಷಯಗಳಲಿ ಮತಿಯನು ಮುರಿಯುವಂತೆ ಕರುಣಿಸೋ ಸುಗುಣಾಲಯ 1 ನೀರಜದಳ ನೇತ್ರ ವರ ಸುಖ ಚಿನ್ಮಯೈಕ ಗಾತ್ರ ಸುಜನ ಮಿತ್ರ ಸುರವರ ಸರಸಿಜಭವ ಪುತ್ರ ರುಚಿರರ ಮುಕುಟಾಕ್ಷಪಾತ್ರ ನಿನ್ನಯ ವಿವಿಧ ಲೀಲೆಗಳು ಚಿತ್ರವಿಚಿತ್ರವು ಅರಿತೆನೆಂದು ತಿಳಿದು ಮೆರೆಯುತಲಿರುವ ನರರ ಮದವ ಮುರಿದು ದೈನ್ಯದಿಂದಲಿ ಮರೆತೆನೆಂದು ದಿನದಿನದಲಿ ಭಜಿಪರ ಪೊರೆವ ಪರಮ ಕರುಣಾರಸಮಯನೆ 2 ದೀನಭಕುತರನ್ನು ಪೊರೆಯುವ ದಾಸಿಯೆಂದು ನಿನ್ನ ಪೊಗಳುವ ಮಾನತತಿಗಳನ್ನು ಸಂತತ ಧ್ಯಾನ ಮಾಡಿ ಎನ್ನ ಕ್ಲೇಶವ ಮೌನದಿಂದ ಇನ್ನೂ ಸಹಿಸುತ ಜಾನಕೀಶ ತವ ಪಾದಕಮಲದ ರೇಣುವನ್ನು ಶಿರದಿ ಧರಿಸುತಲಿ ಅನು ಮಾನವನ್ನು ತೊರೆದು ಮುದದಿ ಸುವಿಮಲ ಜ್ಞಾನಮೂರ್ತೆ ಜ್ಞಾನಿವರ ಪ್ರಸನ್ನನೆ ನೀನೆ ಎನ್ನ ರಕ್ಷಕನೆಂದರಿಯುತ 3
--------------
ವಿದ್ಯಾಪ್ರಸನ್ನತೀರ್ಥರು
ನಾಗಶಯನ ವರಯೋಗಿ ನಿಕರಪ್ರಿಯ ಬಾಗಿದೆ ಶಿರ ಅನುರಾಗದಿ ನೋಡೆಲೊ ಪ ಆಗ ನಿನ್ನ ಮರೆತೆನೆಂದು ಈಗ ಎನ್ನ ಮರೆಯದಿರೆಲೋ ಅ.ಪ ಶ್ರೀರಮಣ ನಿನ್ನ ಪ್ರೇರಣೆಯಿಲ್ಲದೆ ಯಾರು ನಡೆಯುವರು ಈ ಧರೆಯೊಳಗೆ ಕಾರಣ ಕಾರಣ ನಿನ್ನೊಳಗೆ ಮನ ಸೇರಿಸಿ ಪೊರೆಯೋ ಸಮೀರಸಖ 1 ಸುಂದರರೂಪ ಮುಕುಂದ ಪರಾತ್ಪರ ಸಿಂಧುಶಯನ ನಿನ್ನ ಶುಭಗುಣಗಳಲಿ ಸಂದೇಹ ಬಾರದೆ ಕರುಣಿಸೆಲೋ ಮುಚು ಕುಂದ ವರದ ಗೋವಿಂದ ಹರೇ 2 ನಿನ್ನ ಕರುಣದಿಂದ ಕಣ್ಣು ತೆರದಿಹೆನೊ ಪೂರ್ಣವಿಮಲ ಸುಖ ಜ್ಞಾನ ಸುಕಾಯ ಮಾನ್ಯ ಪ್ರಸನ್ನ ಸದಾ ಪೊರೆಯೋ ಸರ್ವ ಭಿನ್ನ ಸಮೀಚೀನ ಸುಖವೀಯೊ 3
--------------
ವಿದ್ಯಾಪ್ರಸನ್ನತೀರ್ಥರು
ಹರಿಯೇ ಎನ್ನ | ಮರೆತಿರುವರೆ ಇದು ಸರಿಯೇ ಪಾಲಿಸು ನೀ ದೊರೆಯೇ | ತರಳತನದಿ ನಾ ಮರೆತೆನೆಂದು ನೀ ಜರೆದು ಬಿಟ್ಟರೆ ಮುಂದೆ ಪೊರೆವರಾರೈ ಶ್ರೀ ಪ ಒಡೆಯ ನೀನಾಗಿ ಸಲಹುವುದೀಗ ನಿನ್ನಯ ಪದ ಜಡಜಕೆರಗುವೆ ನಾ ಬೇಗ ಕಡು ದಾರಿದ್ರ್ಯದ ಕಡಲೊಳು ಮುಳುಗಿದೆ ತಡಿಯ ಕಾಣಿಸೋ ಜಗದೊಡೆಯ ದಯದಿ ಶ್ರೀ 1 ದುರುಳ ಬಾಧಿಸುತಿರೆ ಭರದೊಳಕ್ಷಯವಿತ್ತುದ್ಧರಿಸಲಿಲ್ಲವೆ ಶ್ರೀ 2 ಪರಮೇಷ್ಠಿ ಜನಕ ಶ್ರೀ 3 ತಂದೆ ನೀನಲ್ಲವೆ ಜಗದೀಶ ಪಾಲಿಸು ನಿನ್ನ ಕಂದನಲ್ಲವೆ ಸರ್ವೇಶ ಹಿಂದ ಮುಂದನಾನೊಂದನರಿಯೆ ದಯ ದಿಂದ ಕಾಯೋ ಮುಚುಕುಂದವರದ ಶ್ರೀ 4 ಮಂಗಲ ಪುರವಾಸ ಶ್ರೀ ವೆಂಕಟೇಶ | ಅಂಗಜ ಜನಕ ರಮೇಶ | ಮಂಗಲಾಂಗ ನಿನ್ನಂಘ್ರಿ ಸೇವಕರ ಸು-ಸಂಗವ ಪಾಲಿಸು ಗಂಗಾಜನಕ ಶ್ರೀ 5
--------------
ಅನ್ಯದಾಸರು