ಒಟ್ಟು 8 ಕಡೆಗಳಲ್ಲಿ , 7 ದಾಸರು , 8 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂಥಾ ಬಾಲಕನಿವನು ಎಷ್ಟೆಂದ್ಹೇಳಲಿ ನಾನು ಪಂಥಗಾರಿಕೆಯಂಗ ಪರಮ ಪುರುಷರಂಗ ಅಂತವ ತಿಳಿಗುಡನು ಗೋಪೆಮ್ಮಾ ಪ ನೋಟಾವೇಟದಿ ನಲುವಾ ನಡೆಯಾಲೊಲ್ಲದೆ ನಿಲುವಾ ಸ್ಫೋಟ ಹೃದಯವಾಗುವ ಪರಿಯಂಜಿಸುವ ಮಗು ನೀಟ ಘಾತಪಾತಕನಮ್ಮಾಗೋಪೆಮ್ಮ ನಿತ್ಯ ಬೆಣ್ಣೆಯ ಸವಿದು ಕಾಟಕಾರವೆ ಭಂಡಾ ತುರುಗಾವರೋಳು ಪುಂಡಾ ಆಟಕೆ ಗುಣವೇನ ಗೋಪೆಮ್ಮಾ 1 ನಯ ಮಾತಿಲಿ ಬರುವಾ ನೋಡಲು ಕಠಿಣಿರುವಾ ತಾಯಡಬಲ ನೋಡಾ ತರುಣಿಯರನ ಬಿಡಾ ಬಾಯಾದೆರೆದು ಬೇಡವಾ ಗೋಪೆಮ್ಮಾ ತಾಯಿಂಗಂಜನು ನಿನಗೆ ತಡೆದುರೋಗವ ಹೊರಗೆ ಮಾಯಾಗಾರನೆ ಗೋವಾ ಮತಿಯ ಕಡುವನಿವ ಸಾಯಸ ಕಲಿಯಮ್ಮ ಗೋಪೆಮ್ಮಾ 2 ಇದರೇರಿ ಚಿನ್ನವರಾ ಇಕ್ಕಿ ಅಂಗವ ತೋರಾ ಕಾಲ ಕೆದರಿ ಪೊರೆವ ಬಾಲಾ ಅದ್ಭುತ ವಿಕ್ರಮನೆ ಗೋಪೆಮ್ಮಾ ಉದ ಧಿಗಂಜನು ಧುಮುಕಿ ಉಲುವಾ ಬುದ್ದಿಯ ಸೊಕಿ ಮುದದಿ ವಾಜಿರಿಸೇ ಮಹಿಪತಿಸುತ ಪ್ರಭು ಬುಧ ಜನರೊಲುವಂತೆ ಗೋಪೆಮ್ಮಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಂದಿಗೆ ಶ್ರೀಹರಿಯಾ ಮಾತಿಲಿ ಕಾಲವು ಕಳೆದಲ್ಲಿ ಘನವೇನಿಲ್ಲಯ್ಯ ಪ ಸ್ಥಳಕುಲ ಮೋದಿಸಿ ತಾಂಡವಮೂರ್ತಿಯ ಕುಲನೆನಿಸಿ ಮಾರ್ಗದಲಿ ಕುಲನೆಲೆ ತಿಳಿದು ಕಾಣುತಹೋಗುವ ನೆನೆಗಳ್ಳರ ಕೂಡೆ ಚಲೊ ಚಲೊ ಬೋಧಿಗೆ ಒಳಗಾಗಿ ಮಧುರಸ ಚಂಚಲ ನತಿ------ದು ಭಲ ಭಲ ಎನಿಸಿಕೊ ಬೇಗನೆ ಪರಮ ಭಕ್ತರ ಒಳಗೆಂದೂ 1 ಸರಸರ ಮಾರ್ಗದ ಸರಳಿಯ ತಿಳಿದಾ ಶರಣರ ನೆಲೆಗಾಣೊ ನೆರೆಹೊರೆಲಿರುವರ ಕರಕರಿಗಳುಯೆಂಬ ಕಲ್ಮಿಷ-----ಕಾಣೊ ಹರಿಗುರು ಕರುಣಾದಿ ಅಂತರಂಗದಿ ಅರಿತಿರುವರ ಕೂಡೋ ಪರಿ ಪರಿಯಲಿ ಆ ಭಂಡಾರದ ಗುರುಭಾರವು ನೀನೋಡೊ 2 ಮನಘನ ಕಾಂತಿಯ ಮಹಿಮೆಯ ತಿಳಿದಾ ಮರ್ಮಜ್ಞರ ಬೆರಿಯೊ ದಿನ ದಿನ ಸಂಭ್ರಮವನು ಅಘಸರಿಸಿ ದೃಢಭವವು ಪಿಡಿಯೊ ತನುವನು------ದ್ರಿಸಿ ತಾರಕ ಜಪಿಸಿ ಧನ್ಯನಾಗೊ ಇನ್ನೂ ದೀನಜನ ರಕ್ಷಕ ಧೀರ 'ಹೆನ್ನೆ ವಿಠ್ಠಲನ’ ಧಿಟ್ಟದಿ ಸ್ಮರಿಸಿನ್ನು 3
--------------
ಹೆನ್ನೆರಂಗದಾಸರು
ಎರಿ ಮುಂಡೆ ಇವನೆರಿ ಮುಂಡೆ ಏನುಅರಿಯದೆ ಒದರುವ ಎರಿಮುಂಡೆ ಪ ತನ್ನ ನಿಜವ ತಾನು ಅರಿಯದೆ ತತ್ವದಕುನ್ನಿಯಂತೆ ಒದರುವ ಎರಿಮುಂಡೆಭಿನ್ನ ಬುದ್ಧಿಯಲಿದ್ದು ನಾ ಬ್ರಹ್ಮವೆಂಬುದನುಚೆನ್ನಾಗಿ ಅರಿಯದ ಎರಿಮುಂಡೆ 1 ಯೋಗವ ತಿಳಿಯದೆ ಯೋಗವ ಹಳಿವನುಈಗ ಹೇಳಿವನೀಗ ಎರಿಮುಂಡೆಆನಿಹೆ ಬ್ರಹ್ಮವು ನಾನೆಂದು ಎತ್ತೆತ್ತೆನುಡಿವನು ಎರಿಮುಂಡೆ 2 ಕೋಟಿ ಸೂರ್ಯರ ತೇಜ ಪಾಟಿಸಿ ಕಾಣದೆಬೂಟಕ ನುಡಿವವ ಎರಿಮುಂಡೆದಾಟಿ ಸಹಸ್ರಾರ ಬ್ರಹ್ಮರಂಧ್ರದ ನಾಳ ಕೇಳದ ನರನಾಗ ಎರಿಮುಂಡೆ 3 ಮಾತರಿಯದೆ ಜ್ಞಾನ ನುಡಿಯಿದ್ದುದಕಳೆದು ಮಣ್ಣು ಹೋಯ್ಯೆಂಬುವ ಎರಿಮುಂಡೆಮಾತಿಲಿ ಬ್ರಹ್ಮವು ಆಗಬೇಕಾದರೆ ಮಹಾಸಾಧನವೇಕೆ ಎರಿಮುಂಡೆ 4 ಒಂದು ಹೋಗಲಿಲ್ಲ ಒಂದೇ ನಾನೆಂಚಿನುಇಂದು ಕೇಳುವನೀಗ ಎರಿಮುಂಡೆಸುಂದರ ಚಿದಾನಂದ ಸ್ವರೂಪ ತಿಳಿಯದೆ ಸುಲಭ ಎಂದೆಂಬುವ ಎರಿಮುಂಡೆ 5
--------------
ಚಿದಾನಂದ ಅವಧೂತರು
ಛೀ ಯಾತರ ಬುದ್ಧಿ | ಸೊಕ್ಕಿನ ಮಾತಿಲಿ ಬಲು ನÉೂಂದಿ ಪ ಗುರುಹಿರಯರ ಅನುಸರಿಸದೇ | ಹರಿಚರಣವ ಕೊಂಡಾಡದೇ | ಬರಡಾ ನಾಲಿಗೆ ಮಾಡಿದಿ ಬರಿದೇ 1 ವಳ್ಹವ ಹೊಲ್ಲವರಿಯದೇ | ಯಳ್ಳಿನಿತು ನೀ ವಿಚಾರಿಸದೇ | ನಿಲ್ಲದೇ ಮಾಡುವಿ ಬಗಳುವದೇ 2 ಕೆಂಡವ ಕಂಡು ನೆರೆ | ಮಂಡಿಯಾ ತುರಿಸುವರೆ | ತುಂಡತನ ಗುಣ ಬಿಡು ಇನ್ನಾರೆ 3 ಪೊಡವಿ ದೇವತೆಯ ಕೋಣಾ | ಯಡಬಲ ನೋಡದಿರಲೇನು | ಕಡೆಯಲಿ ಕೆಡುವರು ಒಂದಿನಾ 4 ಮಹಿಪತಿಸುತ ಪ್ರಭು ದಾಸರ ಕೈ | ಅಹುದೆನಿಸಿಕೊಂಬುದೆ ಸ್ವರ್ಗಯ್ಯ | ವಿಹಿತಲ್ಲೆಂಬುದೇ ನರ್ಕದಾಶ್ರಯಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಡನಡುವು ಬಾಲೆಯರ ಕೂಡಿ | ಪಾ | ಲ್ಗಡಲೋಡಿಯನೊಡನೊಡನೆ | ಬಿಡದೆ ಆಡಿದರೊ ವಸಂತ ಪ ಪಾಲ್ಗೆನೆಗಧಿಕ ಮೃದುವಸನಮಂ ಉಟ್ಟ್ಟು ನು | ಣ್ಗೂದಲು ತಿದ್ದಿ ಪಲಪು ಬೈತಲೆ ಸೊಗಸು | ತುಂಬಿ ಕುಂಕುಮ ಮಿಗೆ | ಬಲ್ಕಸ್ತುರಿಯ ತಿಲಕ | ಅರೆರೆ | ಕಾಳ್ಗತ್ತಲೆ ಮೀರಿ ತೋರುತಿರೆ ತಿರ್ತಿತಿರಗಿ | ವಾಲ್ಗಣ್ನು ನೋಟ ವೈಯಾರ ಸೋಲ್ದುರುಬು ವಿ | ಶಾಲ್ಗೊಂಚಲು ಮುತ್ತುಸುತ್ತು ಸೂಸುತಲಿರೆ ಪೇಳ್ಗಾಣೆ ಪೆಂಗಳು ಶೃಂಗರಿಸುವ ಮದವೊ 1 ಸಣ್ಮೊಗ್ಗೆ ಜಗದ ವಿಚಿತ್ರ ಕಂಚುಕವು ಮೋ | ಹನ್ಮಾಲೆ ಪದಕ ನ್ಯಾವಳ ಸರಿಗೆಸರ ಮುತ್ತು | ವಾಲೆ ಪೊಂಪುಷ್ಟ ಬುಗುಡಿ ಥೋ | ರನ್ಮುತ್ತು ನಾಸಾಮಣಿ | ಅರರೆ | ಮನ್ಮನೋಹರವಾದ ಕಡಕ ಕಂಕಣ ಮುದ್ರೆ | ಸನ್ಮೋಹನಾಂಗಿಯರು ಸರ್ವಾಭರಣವಿಟ್ಟು | ಮನ್ಮಥನ ಹಿಡಿದೇಜಿ ಕುಣಿವಂತೆ ಮುಂದೊರಿದು | ಕಣ್ಣಂಚಿನಿಂದ ಜಗವೆಲ್ಲ ಬೆಳಗುತಲಿ 2 ಕರ್ಪುರದ ವೀಳ್ಯೆಯವ ಮೆಲುತ ನಾನಾ ಬಗೆ | ಅಗರು ಶಿರಿಗಂಧ | ಸಾರ್ಪರಿಮಳ ಸಕಲ ದ್ರವ್ಯದಿಂದೋಕುಳಿಯ | ಮಾರ್ಪೆಸರು ಬಾರದಂತೆ | ಅರೆರೆ | ಕರ್ಪಾಣಿಯೊಳಗೆ ದ್ವೀಪಾಂತರದ ತರ ನಿಲುವ | ದರ್ಪಣವ ಪಿಡಿದು ಸರ್ವಾಂಗ ನೋಡಿಕೊಳುತ | ದರ್ಪ ತಗ್ಗಿಸದಲೆ | ಪೊನ್ನುಡೆಗಳ ತುಡುಕಿ ಕಂ | ದರ್ಪನಪ್ಪನ ಮೇಲೆ ಗುಪ್ಪಿರರು ಮುದದೀ 3 ಮೇಲ್ಮೇಲು ಸೊಗಸು ಚನ್ನಿಗರಾಯನಿಲ್ಲ ನಿಲೂ ನೀಲ್ಮೇಘ ವರ್ಣಾನೆ | ಕಾಲ್ದೆಗೆದು ನಮ್ಮಮ್ಮ | ತೋಳ್ಮದವ ತೀರಿಸದೆ ಪೋಗದಿರು ಭಡಭಡಾ | ಕರವ ತೆಕ್ಕೊ | ಅರೆರೆ | ತಾಳ್ಮದತಿಗತಿಯಂತೆ ಹೆಜ್ಜೆಯ ನಿಡುತ | ಸತಿ | ಜಾಲ್ಮೊಗದು ವಾರಿಧಿಯ ಥೆರೆಯಂತೆ ಮೂದಲಿಸಿ | ಆಳ್ಮಾತಿಲಿಂದ ಹೈ ಎನುತ ಚಲ್ಲಿದರೂ4 ಪೆಣ್ಗಳಿರಾ ನಿಮಗೇಕೆ ಪ್ರಬಲತನವೆಂದೆನುತ | ಅಣ್ಗದಾ ಗೋವಳರ ನಡುವೆ ವಪ್ರ್ಪಿರ್ದಸು | ವಣ್ಮಾತ್ರ ಪರಮಾತ್ಮನೀಕ್ಷಿಸಿದ ಅವರವರ | ಕಣ್ಗೊರಳ ಕುಚ ತೊಡೆಗಳ | ಅರೆರೆ | ಹೃತ್ತಾಪ ಹರಿಸುವ | ಸಿರಿ | ಸರ್ರನೆ ಓಕಳಿ ಚಲ್ಲೆ | ಸಣ್ಗೊಲ್ಲತಿಯರು ಬೆರಗಾಗಿ ಮರಳೆÀ ಹರಿಯ | ಬೆಣ್ಗಳ್ಳನೆಂದು ಮುತ್ತಿದರು ಹಾಸ್ಯದಲಿ 6 ತೋರ್ಕೈಯ ಬಚ್ಚಿಡದೆ ಪಳ್ಳಿಗನೆ ಠಕ್ಕಿಸದೆ | ಮಾರ್ಕರೆದುಕೋ ನಿನ್ನ ಗೆಳೆಯರನ ಒಂದಾಗಿ | ಸೂರ್ಕುದೇಗಂತೆ ಸರ್ವೋದ್ಧಾರಗರದ ವೈ | ಜೀರ್ಕೋಳಲಿ ತೆರವಿಲ್ಲದೆ | ಅರೆರೆ | ಅರ್ಕನರ್ಕಕೆ ವಾರಿ ಇಂಗಿ ಪೋಗುವಂತೆ | ನರ್ಕಾಂತಕನ ಕಾಯದೊಳಗೆ ಓಕುಳಿಯಡಗೆ | ಅರ್ಕಾದ್ರಿಯಂತೆ ಶಿರಿ ಕೃಷ್ಣರಾಜಿಸುತಿರೆ | ತರ್ಕೈಪ ಭರದಿಂದ ನಾರಿಯರು ಇರಲು 7 ಹಸ್ತ ಲಾಘವ ನೋಡಿ ತಲೆದೂಗಿ ನಕ್ಕು ಸ | ಮಸ್ತ ನಾರಿಯರಿಟ್ಟು ಉಟ್ಟ ಮಂಗಳವಸನ | ವಸ್ತುಗಳು ಜಿಗಳುವಂತೆ ಓಕುಳಿಯಿಂದ | ವಿಸ್ತಾರವಾಗಿ ಉಗ್ಗೆ | ಅರೆರೆ | ಕಸ್ತೂರಿಮೃಗದಂತೆ ಸುಳಿಸುಳಿಯ ನಿಂದಿರ್ದ| ಹಸ್ತಿಗಮನಿಯರೊಡನೆ ಕ್ರೀಡೆಯನು ಪರಾತ್ಪÀರ | ವಸ್ತು ಲಕುಮಿಯ ರಮಣ ಆಡುತಿರೆ ನಾಲ್ಕೈದು | ಮಸ್ತಕಾದ್ಯರು ವಿಸ್ತರಿಸಲರಿದೆನಲು 8 ಸುಕ್ಕದೆ ಕುಚಗುಳುಬ್ಬಿ ಕಕ್ಕಸವಾಗೆ ಹೆಜ್ಜೆ | ಇಕ್ಕಲಾರದೆ ವಿರಹತಾಪದಿಂದೀಕ್ಷಿಸುತ | ವಖ್ಖಣಿಸುವ ಮಾತು ಹಿಂದಾಗುತಿರೆ ಕಲೆಗ | ಳುಕ್ಕೇರಿ ಬೆವರುತಿರಲು | ಅರೆರೆ | ಅಕ್ಕಕ್ಕೊ ಎಂದು ಅಕ್ಕೋಜಗೆಗೊಳ್ಳುತ್ತ ತಾ | ರಕ್ಕಿಯಂತೆ ಕೃಷ್ಣ ಸುತ್ತ ವಲ್ದರು | ಸಕ್ಕರೆದುಟಿ ಚಲುವ ಉಡುಪನಂತೆ ವಪ್ಪೆ | ದಕ್ಕಿವನಂತೆ ಸಂತರಿಸುತಲಿ ಇಂದೂ 9 ಬೆರ್ದೋಕಳಿಯನಾಡಿ ಸರಿ ಮಿಗಿಲು ಎನಿಸಿ ಕೆಲ | ಸಾರ್ದಿರ್ದ ನಾರಿಯರ ಶಿರವ ತಡವರಿಸಿ ಶತ | ಸಾರ್ದವೆಲೆ ಉಳ್ಳ ಉಡುಗೊರೆನಿತ್ತು ಮನ್ನಿಸಿ | ಮೀರ್ದಾಭರಣವ ತೊಡಿಸಿ | ಅರೆರೆ | ಸಾರ್ದೆಗೆದು ತರ್ಕೈಸಿ ಪ್ರೀತಿಯಿಂ ಬಡಿಸಿ ಮುರ ಮರ್ದನ ವಿಜಯವಿಠ್ಠಲ ಮೆರೆದ ಗೋಕುಲ ದೊರೆ | ಸುಜನ ಜನಸಂಗಾ 10
--------------
ವಿಜಯದಾಸ
ಬ್ರಹ್ಮಜ್ಞಾನ | ಬಿಡು ಬಿಡು ಬಿಡು ನೀ ಸಂಸಾರ ಧ್ಯಾನ |ಕಡೆಯಲ್ಲಿ ನಿನ್ನ ಕಳಹುವರಲ್ಲಿಗೆ | ಬಿಡದಿರು ಸದ್ಗುರುವಿನ ಧ್ಯಾನ ಪ ಯಾತಕೆ ಕಲಿತ್ಯೋ ಬಹು ಯುಕ್ತಿಗಳ | ಬರಿ ಮಾತಿಲಿ ಆಗದು ನಿಜ ಮುಕ್ತಿ | ನೀತಿಯಿಂದ ನೀ ಅರಿತು ನೋಡಲು | ಸ್ವಾತ್ಮದ ಜ್ಞಾನವು ಆಗುವದಿದಕೆ1 ಸತಿ ಸುತರಾ ನೀ ನೋಡಿ ಹಿಗ್ಗುತಿ | ಮಿತಿಯಿಲ್ಲದೆ ಅವರಿಗೆ ತಗ್ಗುತಿ | ಗತಿಯ ಕೊಡುವ ಸಂತರು ಬಂದರೆ | ಮೋತಿಯ ತಿರುವಿ ವ್ಯಸನಕೆ ತಗ್ಗುತಿ 2 ಸಾಧು ಪುರುಷರ ಸಂಗವ ಹಿಡಿಯೊ | ಬೋಧಾಮೃತವನು ನೀ ಕುಡಿಯೊ | ಆದಿಯಲಿ ಭವತಾರಕ ಭಜಕರು | ಹೋದ ಹಾದಿಯ ನೀ ಹಿಡಿಯೊ 3
--------------
ಭಾವತರಕರು
ಮಾನನಿಧಿ ಶ್ರೀಕೃಷ್ಣ ಮಧುರೆಗೈದುವನಂತೆಏನು ಪಥವಮ್ಮ ನಮಗೆ ಪ ಮಾನವೇನಿನ್ನಿದಕೆ ಮಾನಿನಿಯರೆಲ್ಲರುಆಣೆಯನು ಕಟ್ಟಿವನಿಗಡ್ಡ ನಿಲ್ಲುವ ಬನ್ನಿ ಅ.ಪ. ಕಳ್ಳತನವೇ ನಮ್ಮ ವಲ್ಲಭರು ಈ ಸುಳುವುಎಲ್ಲವನು ಬಲ್ಲರಮ್ಮಒಲ್ಲದಲೆ ನಮ್ಮ ಬಿಟ್ಟರೆ ಒಳಿತು ವನಜಾಕ್ಷಎಲ್ಲಿಗೈದಿದರೆ ನಾವಲ್ಲಿಗೈದುವ ಬನ್ನಿ1 ಇಂದುದಯದಿ ಮೊದಲು ಇಂದೀವರಾಕ್ಷಿಯರುಗೋವಿಂದನ ಬಳಿಗೈದುವಒಂದು ಕಡೆಯಲಿ ಕುಳಿತು [ವನಜಾಕ್ಷಿಯೋರ್ವ ಕೈಯಂದಲಲ್ಲಿಗೆ ಕಳುಹಿ] ಕೇಳ್ವೆವೇನು ಪೇಳುವನೋ 2 ಹರಿಣಾಂಕವದನೆಯರು ನೆರೆದು ಬರುತಿರೆ ಕಂಡುಪರಮ ಹರುಷದಲಿ ಬಂದುಸರಿ ರಾತ್ರಿಯೊಳು ಹೀಗೆ ಬರುವುದೇನೆಂದೆನಲುಎರಗಿ ಬಿನ್ನೈಸಿದರು ಅಂಬುಜದಳಾಕ್ಷನಿಗೆ3 ಶ್ಲೋಕ ಹಲವು ಕಾಲವು ನಿನ್ನ ಸ್ನೇಹ ಸುಖವ ಹಾರೈಸಿಕೊಂಡಿರುತಿಹಲಲನಾವ್ಯೂಹವ ಬಿಟ್ಟು ಅಕ್ರೂರನೊಡನೆ ನೀ ಮಧುರೆಗೆ ಪೋದರೆಕಳೆಯಲಾಪವೇ ಕಾಂತ ಕೇಳು ದಿನವ ಈ ಕಂತುವಿನ ಬಾಧೆಗೆಘಳಿಗೊಂದು ಯುಗವಾಗಿ ತೋರುತಿÀಹುದೋ ಜಲಜಾಕ್ಷ ನೀನಿಲ್ಲದೆ ಪದ ಮಾಧವ ಕೃಪಾಕರನೆ4 ಶ್ಲೋಕ ಬಾಲಭಾವದಲಿಂದಲಂಗಸುಖವ ಬಹುಬಗೆಯಲಿಂದುಳುಹಿದೆಲೋಲಲೋಚನೆ ನಿಮ್ಮ ಬಿಟ್ಟು ಪುರದ ನಾರೇರಿಗಾನೊಲಿದರೆನೀಲಕಂಠನು ಮೆಚ್ಚ ನೋಡು ನಿಜವ ನಿಮಗ್ಯಾತಕೀ ಸಂಶಯಕಾಲಕ್ಷೇಪವನಲ್ಲಿ ಮಾಡೆ ಕಿಂಚಿತ್ಕಾಲದೊಳಾನೈದುವೆ ಪದ ಪಾಲಿಸಿರೆನಗಪ್ಪಣೆಯ ಪಾಟಲ ಸುಗಂಧಿಯರೆಕಾಲಹರಣವ ಮಾಡದೆನಾಳೆ ಉದಯಕೆ ಪೋಗಿ ನಾಲ್ಕೆಂಟು ದಿನದೊಳುವ್ಯಾಳೆಗಿಲ್ಲಿಗೆ ಬರುವೆ ಕಾಳಾಹಿವೇಣಿಯರೆ 5 ಶ್ಲೋಕ ಮಾರನಯ್ಯನೆ ಕೇಳು ಅಲ್ಲಿರುತಿಹ ನಾರೇರು ಬಲು ನಿಪುಣರೋನೀರಜಾಂಬಕ ನೋಡು ನಿನ್ನ ಮನವ ನಿಮಿಷಾರ್ಧದೊಳುಸೆಳೆವರೋಮಾರಕೇಳಿಯ ಶಾಸ್ತ್ರಮರ್ಮವರಿದ ಆ ನಾರೇರು ನೆರೆಯಲುಗಾರು ಪಳ್ಳಿಯಲಿಪ್ಪ ಗೋಪಿಯರ ವಿಚಾರಂಗಳ ಸ್ಮರಿಪೆಯಾ ಪದ ಬಿಲ್ಲ ಹಬ್ಬವೆ ಸುಳ್ಳು ಬಿಸುರುಹಾಕ್ಷಿಯರಿಕ್ಷುಬಿಲ್ಲಿನುತ್ಸವಕೆ ನಿನ್ನಖುಲ್ಲ ಅಕ್ರೂರನನು ಕಳುಹಿ ಕರೆಸಿದರಲ್ಲಿವಲ್ಲಭೆಯರನ್ನು ನೆರೆವೆ ನಮ್ಮೆಲ್ಲರನು ಮರೆವೆ 6 ಶ್ಲೋಕ ನಾರೀಹಾರ ಕಿರೀಟ ಕುಂಡಲಯುಗ ಕೇಯೂರವಲಯಾದಿಗಳುಚಾರು ವಸ್ತ್ರ ಸುಗಂಧ ಪುಷ್ಪನಿಚಯ ಹಾರಂಗಳಂ ಧರಿಸದೆಮಾರ ಕೇಳಿಯ ಮಾತಿಲಿಂದಲವರ ಮನಸೆಮ್ಮೊಳೊಂದಾಗದೆನಾರೇರೊಲುಮೆಯುಂಟೆ ಲೋಕದೊಳಗೆ ನನ್ನ್ಯಾತಕೆ ದೂರ್ವಿರೇ ಪದ ಮಲ್ಲಯುದ್ಧವ ನೋಡಬೇಕೆನುತ ನಮ್ಮಾವಅಲ್ಲಿಗೆ ಕರೆಸಲದಕೆಇಲ್ಲದಪವಾದ ಈ ಸುಳ್ಳು ಸುದ್ದಿಗಳ ನೀ -ವೆಲ್ಲ ಸೃಜಿಸಿದಿರಿ ಸರಿಯಲ್ಲ ನಿಮಗಿಳೆಯೊಳಗೆ 7 ಶ್ಲೋಕ ವಾರಿಜಾಂಬಕ ವಾರಿಜಾರಿವದನ ವಾರಾಶಿಜಾವಲ್ಲಭವಾರಿವಾಹನಿಭಾಂಗ ವಾಸವನುತ ವಾಕೆಮ್ಮದೊಂದಾಲಿಸೋವಾರಿಜೋದ್ಭವನಯ್ಯ ನಿನ್ನ ವಿರಹ ವಾರಾಶಿಯೊಳು ಮುಳುಗಿಹನಾರೀನಿಚಯವ ಪಾರುಗಾಣಿಸು ಕೃಪಾನಾವೆಯಲಿಂದೆಮ್ಮನು ಪದ ಮಾರನೆಂಬುವನು ಬಲು ಕ್ರೂರ ನಮ್ಮಗಲಿ ನೀ ಊರಿಗ್ಹೋದುದನು ಕೇಳಿವಾರಿಜಾಸ್ತ್ರವನು ಎದೆಗೇರಿಸೆಮ್ಮನು ಬಿಡದೆಹೋರುವನು ಅಹÉೂೀ ರಾತ್ರಿಯಲಿ ತಪಿಸುತ 8 ಶ್ಲೋಕ ನೀಲಕುಂತಳೆ ಕೇಳು ನಿಮ್ಮ ಮನೆಯೊಳಾ ನೆಲುವಿನ ಮ್ಯಾಲಿನಪಾಲು ಬೆಣ್ಣೆಯ ಕದ್ದು ಮೆದ್ದು ಬಹಳ ಕಾಲಂಗಳಂ ಕಳೆದೆನೆಬಾಲೆ ಮನ್ಮಥಬಾಣದೆಚ್ಚು ತಪಿಸೆ ಬಹು ಬಗೆಯಲಿಂದುಳುಹಿದಲೋಲಲೋಚನೆ ನಿಮ್ಮೊಳಾನು ಬಹಳ ಜಾರತ್ವಮಂ ಮಾಳ್ಪೆನೇ ಪದ ಬಟ್ಟಗಂಗಳೆ ನಿಮ್ಮ ಬಿಟ್ಟು ಘಳಿಗಿರಲಾರೆದುಷ್ಟ ಕಂಸನು ಕರೆಸಲುಅಟ್ಟಿದರೆ ಪೋಗದಿರೆ ಸಿಟ್ಟಿನಿಂದಲಿ ವ್ರಜಕೆಅಟ್ಟುಳಿಯ ಮಾಡುವನು ಅಂಬುಜಸುಗಂಧಿಯರೆ 9 ಶ್ಲೋಕ ಪತಿ ಸುತ ಪಿತೃ ಮುಖ್ಯ ಭ್ರಾತೃ ಬಾಂಧವರು ಎಂಬಅತಿಶಯ ನಮಗಿಲ್ಲ ಆಲಿಸೋ ಮಾತನೆಲ್ಲರತಿಪತಿಪಿತ ನೀನೇ ರಾತ್ರಿಯೊಳು ಕೊಳಲನೂದೆಕ್ಷಿತಿಪತಿ ನಿನ್ನೆಡೆಗೆ ಕ್ಷಿಪ್ರದಿಂ ಬಂದೆವಲ್ಲೊ ಪದ ಬಾಲತನದಲಿ ಯಮುನಾ ತೀರದಲಿ ನೀ ವತ್ಸ-ಪಾಲನೆಯ ಮಾಡುತಿರಲು ಆಕಾಲ ಮೊದಲಾಗಿ ಈ ವ್ಯಾಳೆ ಪರಿಯಂತರವುಕಾಲುಘಳಿಗಗಲದಿಹ ಕಾಂತೆಯರ ತ್ಯಜಿಸುವರೆ10 ಶ್ಲೋಕ ಪರಿಪರಿಯಲಿ ನಿಮ್ಮ ಪಾಲಿಸಿ ನೋಡೆ ಮುನ್ನಕರುಣಕೆ ಕೊರತಿಲ್ಲ ಕಾಂತೆ ಕೇಳೆನ್ನ ಸೊಲ್ಲತ್ವರಿತದಿ ಬಾರದಲೆ ತಡೆದು ನಾ ನಿಂತರಲ್ಲೆಸರಸಿಜಭವ ಮಾರರಾಣೆ ಕಾಣೆ ಪ್ರವೀಣೆ ಪದ ಕ್ಲುಪ್ತ ಕಾಲಕೆ ಬಂದುನೆರೆಯದಿದ್ದರೆ ನಾನು ಪರಮ ಪುರುಷೋತ್ತಮನೆ11 ಶ್ಲೋಕ ಮಾರನೆಂಬುವನಂದೆ ಮಡಿದನು ಶಿವನ ಮೂರನೆ ಕಣ್ಣಿಲಿನಾರೇರಿಲ್ಲದೆ ನಾಭಿಯಿಂದ ಪಡೆದ ಆ ಬ್ರಹ್ಮನೆಂಬಾತನ ನಾರಿ ಈರ್ವ ಕುಮಾರರಾಣೆ ಹರಿಯು ತಾನಿಟ್ಟನೇನೆಂಬೆವೆಮಾರಿ ಹೊರಗಿನ ಹೊರಗೆ ಹೊಯಿತೆಂಬೊ ತೀರಾಯಿತೆ ಭಾವುಕಿ ಪದ ಹಲವು ಮಾತುಗಳ್ಯಾಕೆ ಜಲಜಾಕ್ಷ ನಿನ್ನ ಪದನಳಿನಗಳ ನೆರೆ ನಂಬಿಹಒಲುಮೆಯಲ್ಲಿರುತಿಪ್ಪ ಲಲನೆಯರನೆಲ್ಲರನುಸಲಹೊ ಸಲಹದೆ ಮಾಣು ರಂಗವಿಠಲರೇಯ12
--------------
ಶ್ರೀಪಾದರಾಜರು
ಹ್ಯಾಗೆ ಮುಕ್ತಿಯಾಗುವುದು ಕೂಗಿದರೇನು ಫಲ ಪ ಯೋಗವರಿತು ತನ್ನಲಿರುವ ನಾಗಶಯ್ಯನನ ನೋಡದೆ ಅ.ಪ ಅರಿತೆವೆಂದು ಹಾರಾಡುವ ಅಹಂಕಾರಿಗಳಿಗೆ 1 ವೇದಶಾಸ್ತ್ರ ಓದಲಿಲ್ಲ ವಾದವಿಲ್ಲಿ ಸಲ್ಲ ಬೋಧೆ ಮನಸಿಗಂಟಲಿಲ್ಲ ಬುದ್ಧಿಶೂನ್ಯರಿಗೆಲ್ಲ 2 ನಾವು ನಮ್ಮದೆಂಬುದು ಬಿಡದೆ ಸಾವ ಕುನ್ನಿಗಳಿಗೆ 3 ಬಾಯಿಮಾತಿಲಿಂದಲೇನು ಮಾಯವಾದಗಳೇನು ನ್ಯಾಯಮಾರ್ಗವರಿತವನು ಕಾಯದಾಸೆಮಾಡನು 4 ಗುರುರಾಮವಿಠ್ಠಲನ ಸ್ಮರಣೆಯ ಮಾಡದೆ ದುರುಳ ನರರಿಗೆ 5
--------------
ಗುರುರಾಮವಿಠಲ